Homeಮುಖಪುಟ‘ಪ್ರಜಾಪ್ರಭುತ್ವ ಸಂಸ್ಥೆಗಳನ್ನು ನಾಶ ಮಾಡುವ ನಡೆ’: NHRC ಅಧ್ಯಕ್ಷರಾಗಿ ಅರುಣ್ ಮಿಶ್ರಾ ಆಯ್ಕೆಗೆ PUCL ಖಂಡನೆ

‘ಪ್ರಜಾಪ್ರಭುತ್ವ ಸಂಸ್ಥೆಗಳನ್ನು ನಾಶ ಮಾಡುವ ನಡೆ’: NHRC ಅಧ್ಯಕ್ಷರಾಗಿ ಅರುಣ್ ಮಿಶ್ರಾ ಆಯ್ಕೆಗೆ PUCL ಖಂಡನೆ

ಅರುಣ್‌ ಮಿಶ್ರಾರವರು ರಾಜಕೀಯವಾಗಿ ಸೂಕ್ಷ್ಮವಾಗಿರುವ ಎಲ್ಲಾ ಪ್ರಕರಣಗಳಲ್ಲಿ ಯಾವಾಗಲೂ ಕೇಂದ್ರ ಸರ್ಕಾರದ ಪರವಾಗಿದ್ದರು - PUCL

- Advertisement -
- Advertisement -

ಪ್ರಧಾನ ಮಂತ್ರಿ ನೇತೃತ್ವದ ಆಯ್ಕೆ ಸಮಿತಿಯಿಂದ ಭಾರತದ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗದ (ಎನ್‌ಎಚ್‌ಆರ್‌ಸಿ) ಮುಂದಿನ ಅಧ್ಯಕ್ಷರಾಗಿ ಸುಪ್ರೀಂಕೋರ್ಟಿನ ನಿವೃತ್ತ ನ್ಯಾಯಾಧೀಶರಾದ ಅರುಣ್ ಮಿಶ್ರಾ ಅವರನ್ನು ನೇಮಕ ಮಾಡಿರುವುದನ್ನು ಪಿಯುಸಿಎಲ್ ಸೇರಿದಂತೆ ವಿವಿಧ ಮಾನವ ಹಕ್ಕುಗಳ ಸಂಘಟನೆಗಳ ಸದಸ್ಯರು ಖಂಡಿಸಿದ್ದಾರೆ.

ನಿನ್ನೆ ಚನ್ನೈನಲ್ಲಿ ಪಿಯುಸಿಎಲ್ ವತಿಯಿಂದ ಪತ್ರಿಕಾಗೋಷ್ಠಿ ನಡೆಸಿ ‘ಪ್ರಜಾಪ್ರಭುತ್ವ ಸಂಸ್ಥೆಗಳನ್ನು ನಾಶ ಮಾಡುವ ನಡೆ’ ಎಂದು ಆಕ್ರೋಶ ವ್ಯಕ್ತಪಡಿಸಿದೆ.

ರಾಜ್ಯಸಭೆಯಲ್ಲಿ ಪ್ರತಿಪಕ್ಷದ ನಾಯಕ ಮಲ್ಲಿಕಾರ್ಜುನ್ ಖರ್ಗೆ ಅವರು ದಲಿತರು, ಆದಿವಾಸಿಗಳು, ಅಲ್ಪಸಂಖ್ಯಾತರು ಅಥವಾ ಇತರ ಅಂಚಿನಲ್ಲಿರುವ ಸಮುದಾಯಗಳ ಪ್ರತಿನಿಧಿಗಳನ್ನು ಅಧ್ಯಕ್ಷ ಅಥವಾ ಸದಸ್ಯರಾಗಿ ನೇಮಿಸಬೇಕೆಂದು ಆಗ್ರಹಿಸಿದ್ದರು. ಪ್ರಭುತ್ವದ ದಬ್ಬಾಳಿಕೆಗೆ ಬಲಿಯಾದವರಲ್ಲಿ ಹೆಚ್ಚಿನವರು ಈ ಸಮುದಾಯಗಳಿಂದ ಬಂದವರು ಎಂದು ಪರಿಗಣಿಸಿ ಅಧ್ಯಕ್ಷ ಮತ್ತು ಸದಸಸ್ಯರ ನೇಮಕ ಆಗಬೇಕು ಎಂದು ಸಲಹೆಯನ್ನು ನೀಡಿದ್ದರೂ, ಅದನ್ನು ನಿರ್ಲಕ್ಷಿಸಲಾಗಿದೆ. ಇದಕ್ಕೆ ಯಾವುದೇ ಕಾರಣವನ್ನೂ ನೀಡಿಲ್ಲ ಎಂದು ಮಾನವ ಹಕ್ಕು ಸಂಘಟನೆಗಳು ಆರೋಪಿಸಿವೆ.

‘ಮೋದಿ ನೇತೃತ್ವದ ಸರ್ಕಾರವು ಮಾಡಿದ ಈ ನಿರ್ಧಾರವು ಲಜ್ಜೆಗೆಟ್ಟ ದುರಹಂಕಾರ ಮತ್ತು ಸಾರ್ವಜನಿಕ ಅಭಿಪ್ರಾಯದ ಬಗ್ಗೆ ಅಸಡ್ಡೆ ತೋರಿಸುತ್ತದೆ. ಪ್ರಜಾಪ್ರಭುತ್ವದ ಬೇರುಗಳು ಮತ್ತು ಸಾಂವಿಧಾನಿಕ ಸ್ವಾಮ್ಯಗಳಿಗೆ ಸರ್ಕಾರದ ಸಿನಿಕತನದ ತಿರಸ್ಕಾರವನ್ನು ಮತ್ತೊಮ್ಮೆ ತೋರಿಸುತ್ತದೆ. ಸುಪ್ರೀಂಕೋರ್ಟ್‌ನ ಮಾಜಿ ನ್ಯಾಯಾಧೀಶರಾಗಿ ಅಧಿಕಾರ ವಹಿಸಿಕೊಂಡ ನ್ಯಾಯಮೂರ್ತಿ ಅರುಣ್ ಮಿಶ್ರಾ ಅವರನ್ನು ನೇಮಕ ಮಾಡುವ ಮೂಲಕ, ಮೋದಿ ಸರ್ಕಾರವು ಮತ್ತೊಮ್ಮೆ ಪಕ್ಷಪಾತವನ್ನು ಪ್ರದರ್ಶಿಸಿದೆ. ಅವರ ಆಯ್ಕೆಗೆ ನಿಯಮಗಳ ಆಧಾರವೂ ಇಲ್ಲ. ಆಯ್ಕೆಯಾದ ವ್ಯಕ್ತಿಯು ಆಡಳಿತ ವಲಯಕ್ಕೆ ಹತ್ತಿರವಾಗಿದ್ದಾರೆ ಎಂಬುದೇ ಈ ಆಯ್ಕೆಗೆ ಕಾರಣವಾಗಿದೆ’ ಎಂದು ಸಂಘಟನೆಗಳು ದೂರಿವೆ.

‘ನಿರ್ಣಾಯಕ ಜೀವನ ಹಕ್ಕು ಮತ್ತು ಸಮಾಜದ ಅಂಚಿನಲ್ಲಿರುವ ಜನರ ಜೀವನೋಪಾಯದ ಸಮಸ್ಯೆಗಳನ್ನು ಒಳಗೊಂಡ ವಿಷಯಗಳಲ್ಲಿ, ನ್ಯಾಯಾಧೀಶರಾಗಿ ಮಿಶ್ರಾ ಅವರ ನಿಲುವುಗಳ ಬಗ್ಗೆ ನಾವು ಗೌರವವನ್ನು ಹೊಂದಿಲ್ಲ. ಅರಣ್ಯ ಹಕ್ಕುಗಳ ಕಾಯ್ದೆಯನ್ನು ಪ್ರಶ್ನಿಸಿ ಹಾಕಿದ್ದ ಪಿಐಎಲ್ ವಿಚಾರಣೆಯಲ್ಲಿ ಅವರು ಲಕ್ಷಾಂತರ ಬಡ ಅರಣ್ಯವಾಸಿಗಳನ್ನು ಹೊರಹಾಕಲು ಆದೇಶಿಸಿ ಟೀಕೆಗೆ ಗುರಿಯಾಗಿದ್ದರು. ಭೂಸ್ವಾಧೀನ ವಿಷಯಗಳಲ್ಲಿ, ಅವರ ಆದೇಶಗಳಲ್ಲಿ ಪ್ರಭುತ್ವಕ್ಕೆ ಒಲವು ತೋರುವ ಪ್ರವೃತ್ತಿಯನ್ನು ನೋಡಬಹುದು. ಸಂಕ್ಷಿಪ್ತವಾಗಿ ಹೇಳುವುದಾದರೆ, ರಾಜಕೀಯವಾಗಿ ಸೂಕ್ಷ್ಮವಾಗಿರುವ ಎಲ್ಲಾ ಪ್ರಕರಣಗಳಲ್ಲಿ ಅವರು ಯಾವಾಗಲೂ ಕೇಂದ್ರ ಸರ್ಕಾರದ ಪರವಾಗಿದ್ದರು ಅಥವಾ ಕೇಂದ್ರ ಸರ್ಕಾರದ ಕೆಲವು ಉನ್ನತ ನಾಯಕರಿಗೆ ಸಹಾಯ ಮಾಡುವ ರೀತಿಯಲ್ಲಿ ವರ್ತಿಸಿದರು. ಜಸ್ಟೀಸ್ ಲೋಯಾ ಕೇಸ್, ಸಹಾರಾ ಬಿರ್ಲಾ ಭ್ರಷ್ಟಾಚಾರ ಪ್ರಕರಣ, ಸಂಜೀವ್ ಭಟ್ ಕೇಸ್, ಹರೇನ್ ಪಾಂಡ್ಯ ಕೇಸ್, ಸಿಬಿಐ ಸಂಸ್ಥೆಯೊಳಗಿನ ಕಲಹ, ಆನಂದ್ ತೆಲ್ತುಂಬ್ದೆ ಮತ್ತು ಗೌತಮ್ ನವಲಖಾ ಅವರಿಗೆ ಜಾಮೀನು ನೀಡುವ ಕುರಿತಾದ ಪ್ರಕರಣಗಳಲ್ಲಿ ಇದು ಸ್ಪಷ್ಟವಾಗಿ ಗೋಚರಿಸಿದೆ’ ಎಂದು ಮಾನವ ಹಕ್ಕುಗಳ ಸಂಘಟನೆಗಳು ಆರೋಪಿಸಿವೆ.

ದಲಿತ, ಆದಿವಾಸಿ, ಅಲ್ಪಸಂಖ್ಯಾತ ಮತ್ತು ಇತರ ಅಂಚಿನಲ್ಲಿರುವ ಸಮುದಾಯಗಳ ತಜ್ಞರನ್ನು ಅಧ್ಯಕ್ಷ ಮತ್ತು ಸದಸ್ಯರನ್ನಾಗಿ ನೇಮಿಸಬೇಕು ಎಂದು ಈ ಸಂಘಟನೆಗಳು ಆಗ್ರಹಿಸಿವೆ.
ಈ ಆಗ್ರಹಕ್ಕೆ ವಿವಿಧ ಮಾನವ ಹಕ್ಕು ಸಂಘಟನೆಗಳ 67 ಮುಖ್ಯಸ್ಥರು ಸಹಿ ಮಾಡಿ ಬೆಂಬಲ ಸೂಚಿಸಿದ್ದಾರೆ.


ಇದನ್ನೂ ಓದಿ: ಮಾನವ ಹಕ್ಕು ಆಯೋಗದ ಅಧ್ಯಕ್ಷ, ಸದಸ್ಯರ ನೇಮಕ: ಎಸ್‌ಸಿ/ಎಸ್‌ಟಿಗಳಿಗೆ ಪ್ರಾಧಾನ್ಯವಿಲ್ಲವೇಕೆ ಎಂದ ಖರ್ಗೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...