Homeಮುಖಪುಟ‘ಪ್ರಜಾಪ್ರಭುತ್ವ ಸಂಸ್ಥೆಗಳನ್ನು ನಾಶ ಮಾಡುವ ನಡೆ’: NHRC ಅಧ್ಯಕ್ಷರಾಗಿ ಅರುಣ್ ಮಿಶ್ರಾ ಆಯ್ಕೆಗೆ PUCL ಖಂಡನೆ

‘ಪ್ರಜಾಪ್ರಭುತ್ವ ಸಂಸ್ಥೆಗಳನ್ನು ನಾಶ ಮಾಡುವ ನಡೆ’: NHRC ಅಧ್ಯಕ್ಷರಾಗಿ ಅರುಣ್ ಮಿಶ್ರಾ ಆಯ್ಕೆಗೆ PUCL ಖಂಡನೆ

ಅರುಣ್‌ ಮಿಶ್ರಾರವರು ರಾಜಕೀಯವಾಗಿ ಸೂಕ್ಷ್ಮವಾಗಿರುವ ಎಲ್ಲಾ ಪ್ರಕರಣಗಳಲ್ಲಿ ಯಾವಾಗಲೂ ಕೇಂದ್ರ ಸರ್ಕಾರದ ಪರವಾಗಿದ್ದರು - PUCL

- Advertisement -
- Advertisement -

ಪ್ರಧಾನ ಮಂತ್ರಿ ನೇತೃತ್ವದ ಆಯ್ಕೆ ಸಮಿತಿಯಿಂದ ಭಾರತದ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗದ (ಎನ್‌ಎಚ್‌ಆರ್‌ಸಿ) ಮುಂದಿನ ಅಧ್ಯಕ್ಷರಾಗಿ ಸುಪ್ರೀಂಕೋರ್ಟಿನ ನಿವೃತ್ತ ನ್ಯಾಯಾಧೀಶರಾದ ಅರುಣ್ ಮಿಶ್ರಾ ಅವರನ್ನು ನೇಮಕ ಮಾಡಿರುವುದನ್ನು ಪಿಯುಸಿಎಲ್ ಸೇರಿದಂತೆ ವಿವಿಧ ಮಾನವ ಹಕ್ಕುಗಳ ಸಂಘಟನೆಗಳ ಸದಸ್ಯರು ಖಂಡಿಸಿದ್ದಾರೆ.

ನಿನ್ನೆ ಚನ್ನೈನಲ್ಲಿ ಪಿಯುಸಿಎಲ್ ವತಿಯಿಂದ ಪತ್ರಿಕಾಗೋಷ್ಠಿ ನಡೆಸಿ ‘ಪ್ರಜಾಪ್ರಭುತ್ವ ಸಂಸ್ಥೆಗಳನ್ನು ನಾಶ ಮಾಡುವ ನಡೆ’ ಎಂದು ಆಕ್ರೋಶ ವ್ಯಕ್ತಪಡಿಸಿದೆ.

ರಾಜ್ಯಸಭೆಯಲ್ಲಿ ಪ್ರತಿಪಕ್ಷದ ನಾಯಕ ಮಲ್ಲಿಕಾರ್ಜುನ್ ಖರ್ಗೆ ಅವರು ದಲಿತರು, ಆದಿವಾಸಿಗಳು, ಅಲ್ಪಸಂಖ್ಯಾತರು ಅಥವಾ ಇತರ ಅಂಚಿನಲ್ಲಿರುವ ಸಮುದಾಯಗಳ ಪ್ರತಿನಿಧಿಗಳನ್ನು ಅಧ್ಯಕ್ಷ ಅಥವಾ ಸದಸ್ಯರಾಗಿ ನೇಮಿಸಬೇಕೆಂದು ಆಗ್ರಹಿಸಿದ್ದರು. ಪ್ರಭುತ್ವದ ದಬ್ಬಾಳಿಕೆಗೆ ಬಲಿಯಾದವರಲ್ಲಿ ಹೆಚ್ಚಿನವರು ಈ ಸಮುದಾಯಗಳಿಂದ ಬಂದವರು ಎಂದು ಪರಿಗಣಿಸಿ ಅಧ್ಯಕ್ಷ ಮತ್ತು ಸದಸಸ್ಯರ ನೇಮಕ ಆಗಬೇಕು ಎಂದು ಸಲಹೆಯನ್ನು ನೀಡಿದ್ದರೂ, ಅದನ್ನು ನಿರ್ಲಕ್ಷಿಸಲಾಗಿದೆ. ಇದಕ್ಕೆ ಯಾವುದೇ ಕಾರಣವನ್ನೂ ನೀಡಿಲ್ಲ ಎಂದು ಮಾನವ ಹಕ್ಕು ಸಂಘಟನೆಗಳು ಆರೋಪಿಸಿವೆ.

‘ಮೋದಿ ನೇತೃತ್ವದ ಸರ್ಕಾರವು ಮಾಡಿದ ಈ ನಿರ್ಧಾರವು ಲಜ್ಜೆಗೆಟ್ಟ ದುರಹಂಕಾರ ಮತ್ತು ಸಾರ್ವಜನಿಕ ಅಭಿಪ್ರಾಯದ ಬಗ್ಗೆ ಅಸಡ್ಡೆ ತೋರಿಸುತ್ತದೆ. ಪ್ರಜಾಪ್ರಭುತ್ವದ ಬೇರುಗಳು ಮತ್ತು ಸಾಂವಿಧಾನಿಕ ಸ್ವಾಮ್ಯಗಳಿಗೆ ಸರ್ಕಾರದ ಸಿನಿಕತನದ ತಿರಸ್ಕಾರವನ್ನು ಮತ್ತೊಮ್ಮೆ ತೋರಿಸುತ್ತದೆ. ಸುಪ್ರೀಂಕೋರ್ಟ್‌ನ ಮಾಜಿ ನ್ಯಾಯಾಧೀಶರಾಗಿ ಅಧಿಕಾರ ವಹಿಸಿಕೊಂಡ ನ್ಯಾಯಮೂರ್ತಿ ಅರುಣ್ ಮಿಶ್ರಾ ಅವರನ್ನು ನೇಮಕ ಮಾಡುವ ಮೂಲಕ, ಮೋದಿ ಸರ್ಕಾರವು ಮತ್ತೊಮ್ಮೆ ಪಕ್ಷಪಾತವನ್ನು ಪ್ರದರ್ಶಿಸಿದೆ. ಅವರ ಆಯ್ಕೆಗೆ ನಿಯಮಗಳ ಆಧಾರವೂ ಇಲ್ಲ. ಆಯ್ಕೆಯಾದ ವ್ಯಕ್ತಿಯು ಆಡಳಿತ ವಲಯಕ್ಕೆ ಹತ್ತಿರವಾಗಿದ್ದಾರೆ ಎಂಬುದೇ ಈ ಆಯ್ಕೆಗೆ ಕಾರಣವಾಗಿದೆ’ ಎಂದು ಸಂಘಟನೆಗಳು ದೂರಿವೆ.

‘ನಿರ್ಣಾಯಕ ಜೀವನ ಹಕ್ಕು ಮತ್ತು ಸಮಾಜದ ಅಂಚಿನಲ್ಲಿರುವ ಜನರ ಜೀವನೋಪಾಯದ ಸಮಸ್ಯೆಗಳನ್ನು ಒಳಗೊಂಡ ವಿಷಯಗಳಲ್ಲಿ, ನ್ಯಾಯಾಧೀಶರಾಗಿ ಮಿಶ್ರಾ ಅವರ ನಿಲುವುಗಳ ಬಗ್ಗೆ ನಾವು ಗೌರವವನ್ನು ಹೊಂದಿಲ್ಲ. ಅರಣ್ಯ ಹಕ್ಕುಗಳ ಕಾಯ್ದೆಯನ್ನು ಪ್ರಶ್ನಿಸಿ ಹಾಕಿದ್ದ ಪಿಐಎಲ್ ವಿಚಾರಣೆಯಲ್ಲಿ ಅವರು ಲಕ್ಷಾಂತರ ಬಡ ಅರಣ್ಯವಾಸಿಗಳನ್ನು ಹೊರಹಾಕಲು ಆದೇಶಿಸಿ ಟೀಕೆಗೆ ಗುರಿಯಾಗಿದ್ದರು. ಭೂಸ್ವಾಧೀನ ವಿಷಯಗಳಲ್ಲಿ, ಅವರ ಆದೇಶಗಳಲ್ಲಿ ಪ್ರಭುತ್ವಕ್ಕೆ ಒಲವು ತೋರುವ ಪ್ರವೃತ್ತಿಯನ್ನು ನೋಡಬಹುದು. ಸಂಕ್ಷಿಪ್ತವಾಗಿ ಹೇಳುವುದಾದರೆ, ರಾಜಕೀಯವಾಗಿ ಸೂಕ್ಷ್ಮವಾಗಿರುವ ಎಲ್ಲಾ ಪ್ರಕರಣಗಳಲ್ಲಿ ಅವರು ಯಾವಾಗಲೂ ಕೇಂದ್ರ ಸರ್ಕಾರದ ಪರವಾಗಿದ್ದರು ಅಥವಾ ಕೇಂದ್ರ ಸರ್ಕಾರದ ಕೆಲವು ಉನ್ನತ ನಾಯಕರಿಗೆ ಸಹಾಯ ಮಾಡುವ ರೀತಿಯಲ್ಲಿ ವರ್ತಿಸಿದರು. ಜಸ್ಟೀಸ್ ಲೋಯಾ ಕೇಸ್, ಸಹಾರಾ ಬಿರ್ಲಾ ಭ್ರಷ್ಟಾಚಾರ ಪ್ರಕರಣ, ಸಂಜೀವ್ ಭಟ್ ಕೇಸ್, ಹರೇನ್ ಪಾಂಡ್ಯ ಕೇಸ್, ಸಿಬಿಐ ಸಂಸ್ಥೆಯೊಳಗಿನ ಕಲಹ, ಆನಂದ್ ತೆಲ್ತುಂಬ್ದೆ ಮತ್ತು ಗೌತಮ್ ನವಲಖಾ ಅವರಿಗೆ ಜಾಮೀನು ನೀಡುವ ಕುರಿತಾದ ಪ್ರಕರಣಗಳಲ್ಲಿ ಇದು ಸ್ಪಷ್ಟವಾಗಿ ಗೋಚರಿಸಿದೆ’ ಎಂದು ಮಾನವ ಹಕ್ಕುಗಳ ಸಂಘಟನೆಗಳು ಆರೋಪಿಸಿವೆ.

ದಲಿತ, ಆದಿವಾಸಿ, ಅಲ್ಪಸಂಖ್ಯಾತ ಮತ್ತು ಇತರ ಅಂಚಿನಲ್ಲಿರುವ ಸಮುದಾಯಗಳ ತಜ್ಞರನ್ನು ಅಧ್ಯಕ್ಷ ಮತ್ತು ಸದಸ್ಯರನ್ನಾಗಿ ನೇಮಿಸಬೇಕು ಎಂದು ಈ ಸಂಘಟನೆಗಳು ಆಗ್ರಹಿಸಿವೆ.
ಈ ಆಗ್ರಹಕ್ಕೆ ವಿವಿಧ ಮಾನವ ಹಕ್ಕು ಸಂಘಟನೆಗಳ 67 ಮುಖ್ಯಸ್ಥರು ಸಹಿ ಮಾಡಿ ಬೆಂಬಲ ಸೂಚಿಸಿದ್ದಾರೆ.


ಇದನ್ನೂ ಓದಿ: ಮಾನವ ಹಕ್ಕು ಆಯೋಗದ ಅಧ್ಯಕ್ಷ, ಸದಸ್ಯರ ನೇಮಕ: ಎಸ್‌ಸಿ/ಎಸ್‌ಟಿಗಳಿಗೆ ಪ್ರಾಧಾನ್ಯವಿಲ್ಲವೇಕೆ ಎಂದ ಖರ್ಗೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಿವಾಹಿತೆ ಮೇಲೆ ಅತ್ಯಾಚಾರ ಆರೋಪ : ಬಿಜೆಪಿ ಮಾಜಿ ಶಾಸಕನ ವಿರುದ್ಧ ಎಫ್‌ಐಆರ್

ಗನ್‌ ಪಾಯಿಂಟ್‌ ಇಟ್ಟು ಬೆದರಿಸಿ 22 ವರ್ಷದ ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ ಪ್ರಕರಣದಲ್ಲಿ ಮಹಾರಾಷ್ಟ್ರದ ಬಿಜೆಪಿ ಮಾಜಿ ಶಾಸಕ ಮತ್ತು ವಜಾಗೊಂಡಿರುವ ಪೊಲೀಸ್ ಸಿಬ್ಬಂದಿಯೊಬ್ಬರ ವಿರುದ್ಧ ಗುರುವಾರ (ಸೆ.17)...

ಬ್ರಿಕ್ಸ್ ಶೃಂಗಸಭೆಯಲ್ಲಿ ಸಂಪೂರ್ಣ ಸಸ್ಯಹಾರಿ ಮೆನು; ಶಿವಸೇನೆ ತೀವ್ರ ವಾಗ್ದಾಳಿ

ದೆಹಲಿಯಲ್ಲಿ ನಡೆದ 18ನೇ ಬ್ರಿಕ್ಸ್ ಶೃಂಗಸಭೆಯಲ್ಲಿ ವಿದೇಶಿ ಪ್ರತಿನಿಧಿಗಳಿಗೆ ಕೇವಲ ಸಸ್ಯಹಾರಿ ಆಹಾರವನ್ನು ಬಡಿಸಿರುವುದನ್ನು ಖಂಡಿಸಿರುವ ಶಿವಸೇನೆ (ಯುಬಿಟಿ) ಗುರುವಾರ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದೆ. ಇದು ಅಂತರರಾಷ್ಟ್ರೀಯ ಅತಿಥಿಗಳ ಮೇಲೆ...

ದೆಹಲಿ ಎಸ್‌ಐಆರ್: ಮತದಾರರ ಪಟ್ಟಿಯಿಂದ ಹೆಸರುಗಳ ಡಿಲೀಟ್ ಪ್ರಶ್ನಿಸಿ ಅರ್ಜಿ; ವಿಚಾರಣೆಗೆ ಸುಪ್ರೀಂ ಕೋರ್ಟ್ ಒಪ್ಪಿಗೆ

ದೆಹಲಿಯಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಅಭಿಯಾನದಡಿ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದನ್ನು ಪ್ರಶ್ನಿಸಿ ಸಲ್ಲಿಕೆಯಾಗಿರುವ ಅರ್ಜಿಯ ವಿಚಾರಣೆಯನ್ನು ಸೆಪ್ಟೆಂಬರ್ 21ರಂದು ನಡೆಸಲು ಸುಪ್ರೀಂ ಕೋರ್ಟ್ ಗುರುವಾರ ಒಪ್ಪಿಗೆ ಸೂಚಿಸಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್...

ಕೇರಳ | ಮಿತಿಗಿಂತ ಹೆಚ್ಚು ಮದ್ಯ ಸಂಗ್ರಹ ಆರೋಪ : ರಿಪೋರ್ಟರ್ ಟಿವಿ ಎಂಡಿ ಆಂಟೋ ಆಗಸ್ಟಿನ್ ಬಂಧನ

ಕೇರಳ ಅಬಕಾರಿ ಇಲಾಖೆಯು ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ವ್ಯವಸ್ಥಾಪಕ ನಿರ್ದೇಶಕ (ಎಂಡಿ) ಆಂಟೋ ಆಗಸ್ಟಿನ್ ಅವರನ್ನು ಗುರುವಾರ (ಸೆ.17) ಮುಂಜಾನೆ ಬಂಧಿಸಿದೆ. ಎರ್ನಾಕುಲಂನಲ್ಲಿರುವ ಸುದ್ದಿ ವಾಹಿನಿಯ ಕಚೇರಿಯಿಂದ ಮುಂಜಾನೆ ಸುಮಾರು...

ದೆಹಲಿ: ಜಾಮೀನು ಸಿಕ್ಕ ಬೆನ್ನಲ್ಲೇ ಸ್ವತಂತ್ರ ಭಾರದ್ವಾಜ್ ವಿಡಿಯೋ ವೈರಲ್; ಷರತ್ತು ಉಲ್ಲಂಘನೆ ಆರೋಪ!

ಜಂತರ್ ಮಂತರ್‌ನಲ್ಲಿ ದಲಿತ ವಿದ್ಯಾರ್ಥಿ ಹೋರಾಟಗಾರ್ತಿ ನಿಶು ಆಜಾದ್ ಅವರ ತಂದೆಯ ಮೇಲೆ ಹಲ್ಲೆ ನಡೆಸಿದ ಆರೋಪದಲ್ಲಿ ಬಂಧಿತರಾಗಿದ್ದ ಹಿಂದುತ್ವ ಪ್ರಭಾವಿ ಸ್ವತಂತ್ರ ಭಾರದ್ವಾಜ್ ಅವರಿಗೆ ದೆಹಲಿ ನ್ಯಾಯಾಲಯ ಮೂರು ವಾರಗಳ ಮಧ್ಯಂತರ...

ಸರ್ಕಾರದ ಹಸ್ತಕ್ಷೇಪದಿಂದ ಕ್ಯಾಂಪಸ್ ನಿರ್ಬಂಧದವರೆಗೆ: ಭಾರತದಲ್ಲಿ ಶೈಕ್ಷಣಿಕ ಸ್ವಾತಂತ್ರ್ಯದ ಕುಸಿತ ಬಯಲಿಗೆಳೆದ ಜಾಗತಿಕ ವರದಿ 

ಭಾರತದಲ್ಲಿ ಶೈಕ್ಷಣಿಕ ಸ್ವಾತಂತ್ರ್ಯವು ತೀವ್ರವಾಗಿ ನಿರ್ಬಂಧಿತವಾಗಿದ್ದು, ಉನ್ನತ ಶಿಕ್ಷಣ ಸಂಸ್ಥೆಗಳ ಮೇಲೆ ಸರ್ಕಾರದ ಹೆಚ್ಚುತ್ತಿರುವ ಹಸ್ತಕ್ಷೇಪ, ಕ್ಯಾಂಪಸ್‌ಗಳಲ್ಲಿ ಶೈಕ್ಷಣಿಕ ಮತ್ತು ರಾಜಕೀಯ ಅಭಿವ್ಯಕ್ತಿಯ ಮೇಲಿನ ನಿರ್ಬಂಧಗಳು, ವಿದ್ವಾಂಸರು ಹಾಗೂ ವಿದ್ಯಾರ್ಥಿಗಳ ವಿರುದ್ಧದ ಕ್ರಮಗಳು...

ಬಿಹಾರ| ದಲಿತ ಯುವಕನ ವಿವಾಹವಾದ ಯುವತಿ; ಮಗಳ ಸಾಂಕೇತಿಕ ಅಂತ್ಯಕ್ರಿಯೆ ನಡೆಸಿದ ಪೋಷಕರು

ತಮ್ಮ 18 ವರ್ಷದ ಮಗಳು ಅಂತರ್ಜಾತಿ ವಿವಾಹವಾಗಿದ್ದಕ್ಕೆ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ಪೋಷಕರು, ಆಕೆಗೆ ಸಾಂಕೇತಿಕವಾಗಿ ಅಂತ್ಯಕ್ರಿಯೆ ನಡೆಸಿದ ಘಟನೆ ಬಿಹಾರದ ಪೂರ್ಣಿಯಾದಲ್ಲಿ ಬೆಳಕಿಗೆ ಬಂದಿದೆ. ಯುವತಿಯ ಫೋಟೋವಿರುವ ಪ್ರತಿಕೃತಿಯನ್ನು ಸಿದ್ಧಪಡಿಸಿ ಊರಿನಲ್ಲಿ ಶವಯಾತ್ರೆ...

ಸ್ವಇಚ್ಛೆಯಿಂದ ಇಸ್ಲಾಂ ಸ್ವೀಕಾರ : ಆಯುಷ್ ಮಲಿಕ್‌ರನ್ನು ಗೃಹಬಂಧನದಿಂದ ಬಿಡುಗಡೆಗೊಳಿಸಿದ ಅಲಹಾಬಾದ್ ಹೈಕೋರ್ಟ್

ತಾನು ಸ್ವಇಚ್ಛೆಯಿಂದ ಇಸ್ಲಾಂ ಧರ್ಮವನ್ನು ಸ್ವೀಕರಿಸಿರುವುದಾಗಿ ಮತ್ತು ಆ ನಂತರ ತನ್ನ ತಂದೆಯೇ ತನಗೆ ಬೆದರಿಕೆ ಹಾಕಿ, ಕಾನೂನುಬಾಹಿರವಾಗಿ ಗೃಹಬಂಧನದಲ್ಲಿ ಇರಿಸಿದ್ದರು ಎಂದು ಆರೋಪಿಸಿದ್ದ ಆಯುಷ್ ಮಲಿಕ್ ಎಂಬ 31 ವರ್ಷದ ಯುವಕನನ್ನು...

ಬಿಜ್ನೋರ್‌ನಲ್ಲಿ ಮುಸ್ಲಿಂ ಶಿಕ್ಷಕನ ಗುಂಡಿಕ್ಕಿ ಹತ್ಯೆ: ‘ಲವ್ ಜಿಹಾದ್’ ಆರೋಪ; ವೈಯಕ್ತಿಕ ದ್ವೇಷದ ಬಗ್ಗೆಯೂ ಪೊಲೀಸರಿಂದ ತನಿಖೆ 

ಬಿಜ್ನೋರ್: ಉತ್ತರ ಪ್ರದೇಶದ ಬಿಜ್ನೋರ್ ಜಿಲ್ಲೆಯಲ್ಲಿ 43 ವರ್ಷದ ಮುಸ್ಲಿಂ ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕನೊಬ್ಬರನ್ನು ರೈತನೊಬ್ಬ ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆ ನಡೆದಿದೆ. ಶಿಕ್ಷಕ ನೌಶಾದ್ ಅಹ್ಮದ್ ಅವರು ‘ಲವ್ ಜಿಹಾದ್’...

ತುಳು ನುಡಿಗೆ ಹೆಚ್ಚುವರಿ ಅಧಿಕೃತ ಭಾಷೆಯ ಮಾನ್ಯತೆ ನೀಡಿ: ಕರವೇ ರಾಜ್ಯಾಧ್ಯಕ್ಷ ಟಿ.ಎ.ನಾರಾಯಣಗೌಡ

"ಮಂಗಳೂರಿನಲ್ಲಿ ಶುಕ್ರವಾರ ಕರ್ನಾಟಕ ಸರ್ಕಾರದ ಸಚಿವ ಸಂಪುಟ ಸಭೆ ನಡೆಯಲಿದೆ; ಇದೊಂದು ಐತಿಹಾಸಿಕ ಸಂದರ್ಭ. ರಾಜ್ಯ ಸರ್ಕಾರ ತುಳು ನುಡಿಯನ್ನು ತುಳು ಮಾತನಾಡುವ ಪ್ರದೇಶಗಳಲ್ಲಿ ಹೆಚ್ಚುವರಿ ಅಧಿಕೃತ ಭಾಷೆಯಾಗಿ ಮಾನ್ಯತೆ ನೀಡುವ ನಿರ್ಧಾರವನ್ನು...