Homeಮುಖಪುಟ‘ಪ್ರಜಾಪ್ರಭುತ್ವ ಸಂಸ್ಥೆಗಳನ್ನು ನಾಶ ಮಾಡುವ ನಡೆ’: NHRC ಅಧ್ಯಕ್ಷರಾಗಿ ಅರುಣ್ ಮಿಶ್ರಾ ಆಯ್ಕೆಗೆ PUCL ಖಂಡನೆ

‘ಪ್ರಜಾಪ್ರಭುತ್ವ ಸಂಸ್ಥೆಗಳನ್ನು ನಾಶ ಮಾಡುವ ನಡೆ’: NHRC ಅಧ್ಯಕ್ಷರಾಗಿ ಅರುಣ್ ಮಿಶ್ರಾ ಆಯ್ಕೆಗೆ PUCL ಖಂಡನೆ

ಅರುಣ್‌ ಮಿಶ್ರಾರವರು ರಾಜಕೀಯವಾಗಿ ಸೂಕ್ಷ್ಮವಾಗಿರುವ ಎಲ್ಲಾ ಪ್ರಕರಣಗಳಲ್ಲಿ ಯಾವಾಗಲೂ ಕೇಂದ್ರ ಸರ್ಕಾರದ ಪರವಾಗಿದ್ದರು - PUCL

- Advertisement -
- Advertisement -

ಪ್ರಧಾನ ಮಂತ್ರಿ ನೇತೃತ್ವದ ಆಯ್ಕೆ ಸಮಿತಿಯಿಂದ ಭಾರತದ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗದ (ಎನ್‌ಎಚ್‌ಆರ್‌ಸಿ) ಮುಂದಿನ ಅಧ್ಯಕ್ಷರಾಗಿ ಸುಪ್ರೀಂಕೋರ್ಟಿನ ನಿವೃತ್ತ ನ್ಯಾಯಾಧೀಶರಾದ ಅರುಣ್ ಮಿಶ್ರಾ ಅವರನ್ನು ನೇಮಕ ಮಾಡಿರುವುದನ್ನು ಪಿಯುಸಿಎಲ್ ಸೇರಿದಂತೆ ವಿವಿಧ ಮಾನವ ಹಕ್ಕುಗಳ ಸಂಘಟನೆಗಳ ಸದಸ್ಯರು ಖಂಡಿಸಿದ್ದಾರೆ.

ನಿನ್ನೆ ಚನ್ನೈನಲ್ಲಿ ಪಿಯುಸಿಎಲ್ ವತಿಯಿಂದ ಪತ್ರಿಕಾಗೋಷ್ಠಿ ನಡೆಸಿ ‘ಪ್ರಜಾಪ್ರಭುತ್ವ ಸಂಸ್ಥೆಗಳನ್ನು ನಾಶ ಮಾಡುವ ನಡೆ’ ಎಂದು ಆಕ್ರೋಶ ವ್ಯಕ್ತಪಡಿಸಿದೆ.

ರಾಜ್ಯಸಭೆಯಲ್ಲಿ ಪ್ರತಿಪಕ್ಷದ ನಾಯಕ ಮಲ್ಲಿಕಾರ್ಜುನ್ ಖರ್ಗೆ ಅವರು ದಲಿತರು, ಆದಿವಾಸಿಗಳು, ಅಲ್ಪಸಂಖ್ಯಾತರು ಅಥವಾ ಇತರ ಅಂಚಿನಲ್ಲಿರುವ ಸಮುದಾಯಗಳ ಪ್ರತಿನಿಧಿಗಳನ್ನು ಅಧ್ಯಕ್ಷ ಅಥವಾ ಸದಸ್ಯರಾಗಿ ನೇಮಿಸಬೇಕೆಂದು ಆಗ್ರಹಿಸಿದ್ದರು. ಪ್ರಭುತ್ವದ ದಬ್ಬಾಳಿಕೆಗೆ ಬಲಿಯಾದವರಲ್ಲಿ ಹೆಚ್ಚಿನವರು ಈ ಸಮುದಾಯಗಳಿಂದ ಬಂದವರು ಎಂದು ಪರಿಗಣಿಸಿ ಅಧ್ಯಕ್ಷ ಮತ್ತು ಸದಸಸ್ಯರ ನೇಮಕ ಆಗಬೇಕು ಎಂದು ಸಲಹೆಯನ್ನು ನೀಡಿದ್ದರೂ, ಅದನ್ನು ನಿರ್ಲಕ್ಷಿಸಲಾಗಿದೆ. ಇದಕ್ಕೆ ಯಾವುದೇ ಕಾರಣವನ್ನೂ ನೀಡಿಲ್ಲ ಎಂದು ಮಾನವ ಹಕ್ಕು ಸಂಘಟನೆಗಳು ಆರೋಪಿಸಿವೆ.

‘ಮೋದಿ ನೇತೃತ್ವದ ಸರ್ಕಾರವು ಮಾಡಿದ ಈ ನಿರ್ಧಾರವು ಲಜ್ಜೆಗೆಟ್ಟ ದುರಹಂಕಾರ ಮತ್ತು ಸಾರ್ವಜನಿಕ ಅಭಿಪ್ರಾಯದ ಬಗ್ಗೆ ಅಸಡ್ಡೆ ತೋರಿಸುತ್ತದೆ. ಪ್ರಜಾಪ್ರಭುತ್ವದ ಬೇರುಗಳು ಮತ್ತು ಸಾಂವಿಧಾನಿಕ ಸ್ವಾಮ್ಯಗಳಿಗೆ ಸರ್ಕಾರದ ಸಿನಿಕತನದ ತಿರಸ್ಕಾರವನ್ನು ಮತ್ತೊಮ್ಮೆ ತೋರಿಸುತ್ತದೆ. ಸುಪ್ರೀಂಕೋರ್ಟ್‌ನ ಮಾಜಿ ನ್ಯಾಯಾಧೀಶರಾಗಿ ಅಧಿಕಾರ ವಹಿಸಿಕೊಂಡ ನ್ಯಾಯಮೂರ್ತಿ ಅರುಣ್ ಮಿಶ್ರಾ ಅವರನ್ನು ನೇಮಕ ಮಾಡುವ ಮೂಲಕ, ಮೋದಿ ಸರ್ಕಾರವು ಮತ್ತೊಮ್ಮೆ ಪಕ್ಷಪಾತವನ್ನು ಪ್ರದರ್ಶಿಸಿದೆ. ಅವರ ಆಯ್ಕೆಗೆ ನಿಯಮಗಳ ಆಧಾರವೂ ಇಲ್ಲ. ಆಯ್ಕೆಯಾದ ವ್ಯಕ್ತಿಯು ಆಡಳಿತ ವಲಯಕ್ಕೆ ಹತ್ತಿರವಾಗಿದ್ದಾರೆ ಎಂಬುದೇ ಈ ಆಯ್ಕೆಗೆ ಕಾರಣವಾಗಿದೆ’ ಎಂದು ಸಂಘಟನೆಗಳು ದೂರಿವೆ.

‘ನಿರ್ಣಾಯಕ ಜೀವನ ಹಕ್ಕು ಮತ್ತು ಸಮಾಜದ ಅಂಚಿನಲ್ಲಿರುವ ಜನರ ಜೀವನೋಪಾಯದ ಸಮಸ್ಯೆಗಳನ್ನು ಒಳಗೊಂಡ ವಿಷಯಗಳಲ್ಲಿ, ನ್ಯಾಯಾಧೀಶರಾಗಿ ಮಿಶ್ರಾ ಅವರ ನಿಲುವುಗಳ ಬಗ್ಗೆ ನಾವು ಗೌರವವನ್ನು ಹೊಂದಿಲ್ಲ. ಅರಣ್ಯ ಹಕ್ಕುಗಳ ಕಾಯ್ದೆಯನ್ನು ಪ್ರಶ್ನಿಸಿ ಹಾಕಿದ್ದ ಪಿಐಎಲ್ ವಿಚಾರಣೆಯಲ್ಲಿ ಅವರು ಲಕ್ಷಾಂತರ ಬಡ ಅರಣ್ಯವಾಸಿಗಳನ್ನು ಹೊರಹಾಕಲು ಆದೇಶಿಸಿ ಟೀಕೆಗೆ ಗುರಿಯಾಗಿದ್ದರು. ಭೂಸ್ವಾಧೀನ ವಿಷಯಗಳಲ್ಲಿ, ಅವರ ಆದೇಶಗಳಲ್ಲಿ ಪ್ರಭುತ್ವಕ್ಕೆ ಒಲವು ತೋರುವ ಪ್ರವೃತ್ತಿಯನ್ನು ನೋಡಬಹುದು. ಸಂಕ್ಷಿಪ್ತವಾಗಿ ಹೇಳುವುದಾದರೆ, ರಾಜಕೀಯವಾಗಿ ಸೂಕ್ಷ್ಮವಾಗಿರುವ ಎಲ್ಲಾ ಪ್ರಕರಣಗಳಲ್ಲಿ ಅವರು ಯಾವಾಗಲೂ ಕೇಂದ್ರ ಸರ್ಕಾರದ ಪರವಾಗಿದ್ದರು ಅಥವಾ ಕೇಂದ್ರ ಸರ್ಕಾರದ ಕೆಲವು ಉನ್ನತ ನಾಯಕರಿಗೆ ಸಹಾಯ ಮಾಡುವ ರೀತಿಯಲ್ಲಿ ವರ್ತಿಸಿದರು. ಜಸ್ಟೀಸ್ ಲೋಯಾ ಕೇಸ್, ಸಹಾರಾ ಬಿರ್ಲಾ ಭ್ರಷ್ಟಾಚಾರ ಪ್ರಕರಣ, ಸಂಜೀವ್ ಭಟ್ ಕೇಸ್, ಹರೇನ್ ಪಾಂಡ್ಯ ಕೇಸ್, ಸಿಬಿಐ ಸಂಸ್ಥೆಯೊಳಗಿನ ಕಲಹ, ಆನಂದ್ ತೆಲ್ತುಂಬ್ದೆ ಮತ್ತು ಗೌತಮ್ ನವಲಖಾ ಅವರಿಗೆ ಜಾಮೀನು ನೀಡುವ ಕುರಿತಾದ ಪ್ರಕರಣಗಳಲ್ಲಿ ಇದು ಸ್ಪಷ್ಟವಾಗಿ ಗೋಚರಿಸಿದೆ’ ಎಂದು ಮಾನವ ಹಕ್ಕುಗಳ ಸಂಘಟನೆಗಳು ಆರೋಪಿಸಿವೆ.

ದಲಿತ, ಆದಿವಾಸಿ, ಅಲ್ಪಸಂಖ್ಯಾತ ಮತ್ತು ಇತರ ಅಂಚಿನಲ್ಲಿರುವ ಸಮುದಾಯಗಳ ತಜ್ಞರನ್ನು ಅಧ್ಯಕ್ಷ ಮತ್ತು ಸದಸ್ಯರನ್ನಾಗಿ ನೇಮಿಸಬೇಕು ಎಂದು ಈ ಸಂಘಟನೆಗಳು ಆಗ್ರಹಿಸಿವೆ.
ಈ ಆಗ್ರಹಕ್ಕೆ ವಿವಿಧ ಮಾನವ ಹಕ್ಕು ಸಂಘಟನೆಗಳ 67 ಮುಖ್ಯಸ್ಥರು ಸಹಿ ಮಾಡಿ ಬೆಂಬಲ ಸೂಚಿಸಿದ್ದಾರೆ.


ಇದನ್ನೂ ಓದಿ: ಮಾನವ ಹಕ್ಕು ಆಯೋಗದ ಅಧ್ಯಕ್ಷ, ಸದಸ್ಯರ ನೇಮಕ: ಎಸ್‌ಸಿ/ಎಸ್‌ಟಿಗಳಿಗೆ ಪ್ರಾಧಾನ್ಯವಿಲ್ಲವೇಕೆ ಎಂದ ಖರ್ಗೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶ್ರೀಲಂಕಾ | 2019ರ ಈಸ್ಟರ್ ಬಾಂಬ್ ಸ್ಫೋಟ ಪ್ರಕರಣ: ಇಬ್ಬರು ಮಾಜಿ ಅಧಿಕಾರಿಗಳಿಗೆ ಮರಣದಂಡನೆ ವಿಧಿಸಿದ ಕೋರ್ಟ್

ಬರೋಬ್ಬರಿ 260ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾಗಿದ್ದ 2019ರ ಶ್ರೀಲಂಕಾದ 'ಈಸ್ಟರ್ ಸಂಡೇ' ಬಾಂಬ್ ಸ್ಫೋಟ ಪ್ರಕರಣದಲ್ಲಿ ಕ್ರಿಮಿನಲ್ ನಿರ್ಲಕ್ಷ್ಯ ಆರೋಪ ಸಾಬೀತಾದ ಹಿನ್ನೆಲೆ, ಪೊಲೀಸ್ ಮಾಜಿ ಮುಖ್ಯಸ್ಥ ಮತ್ತು ರಕ್ಷಣಾ ಸಚಿವಾಲಯದ...

ಅಮೆರಿಕ ಓದಿಗೆ ಎಲ್ಲಿಂದ ಬಂತು ಹಣ? CJP ಸ್ಥಾಪಕ ಅಭಿಜೀತ್ ದೀಪ್ಕೆ ತಂದೆಯ ಆಸ್ತಿ ತನಿಖೆಗೆ RTI ಕಾರ್ಯಕರ್ತ ಆಗ್ರಹ

ಕಾಕ್ರೋಚ್ ಜನತಾ ಪಾರ್ಟಿ (CJP) ಸ್ಥಾಪಕ ಅಭಿಜೀತ್ ದೀಪ್ಕೆ ಅವರ ತಂದೆ, ಮಹಾರಾಷ್ಟ್ರ ಸರ್ಕಾರದ ನಿವೃತ್ತ ಉದ್ಯೋಗಿ ಭಗವಾನ್‌ರಾವ್ ದೀಪ್ಕೆ ಅವರ ಆದಾಯ ಮತ್ತು ಅಕ್ರಮ ಆಸ್ತಿ ಗಳಿಕೆ ಕುರಿತು ಸಮಗ್ರ ತನಿಖೆ...

ಕಾವೇರಿ ವಿಚಾರದಲ್ಲಿ ರಾಜಕೀಯ ಪಕ್ಕಕ್ಕಿಟ್ಟು ರಾಜ್ಯದ ಹಿತ ಕಾಯೋಣ: ಸರ್ವಪಕ್ಷ ಸಭೆಯಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ಕರೆ

ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಪರಿಸ್ಥಿತಿ ಸುಧಾರಿಸುವ ಲಕ್ಷಣಗಳು ಕಂಡುಬರುತ್ತಿದ್ದು, ನದಿ ನೀರಿನ ಹಂಚಿಕೆಯಲ್ಲಿ ಸೌಹಾರ್ದಯುತವಾಗಿ ಸಮಸ್ಯೆ ನಿವಾರಿಸುವುದೇ ಸರ್ಕಾರದ ಮೊದಲ ಆದ್ಯತೆಯಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಕಾವೇರಿ...

ಉತ್ತರ ಪ್ರದೇಶ : 33 ವರ್ಷಗಳ ಬಳಿಕ ದೇಶದ್ರೋಹ ಪ್ರಕರಣದಿಂದ ಮುಸ್ಲಿಂ ವ್ಯಕ್ತಿ ಖುಲಾಸೆ

ಪ್ರಾಸಿಕ್ಯೂಷನ್ ಆರೋಪಗಳನ್ನು ಸಾಂದರ್ಭಿಕ ಪುರಾವೆಗಳೊಂದಿಗೆ ಸಾಬೀತುಪಡಿಸಲು ವಿಫಲವಾಗಿದೆ ಮತ್ತು ಆರೋಪಿಯನ್ನು ಕೃತ್ಯಕ್ಕೆ ಲಿಂಕ್ ಮಾಡುವ ಪ್ರಮುಖ ಪುರಾವೆಗಳು ಕಾಣೆಯಾಗಿವೆ ಎಂದು ಅಭಿಪ್ರಾಯಪಟ್ಟ ಲಕ್ನೋದ ವಿಶೇಷ ರಾಷ್ಟ್ರೀಯ ತನಿಖಾ ದಳ (ಎನ್ಐಎ) ನ್ಯಾಯಾಲಯ, ದೇಶದ್ರೋಹ...

‘ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು’ ಎಂಬಂತೆ NTA ಯಿಂದ ₹7.5 ಕೋಟಿಯ ಬೃಹತ್ ಸೆಕ್ಯೂರಿಟಿ ಟೆಂಡರ್

ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಾಗಿ, ಅಮಾಯಕ ವಿದ್ಯಾರ್ಥಿಗಳ ಜೀವ-ಭವಿಷ್ಯ ಹಾಳಾದ ಮೇಲೆ, ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು ಎಂಬಂತೆ ಈಗ ಎನ್‌ಟಿಎ (NTA) ₹7.5 ಕೋಟಿ ವೆಚ್ಚದ ಭದ್ರತಾ ಟೆಂಡರ್...

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...