Homeಮುಖಪುಟಹೊಸ ಗೌಪ್ಯತಾ ನೀತಿಗೆ ಕುತಂತ್ರದಿಂದ ಒಪ್ಪಿಗೆ ಪಡೆಯುತ್ತಿದೆ: ಕೇಂದ್ರದಿಂದ ವಾಟ್ಸಪ್‌‌ ವಿರುದ್ದ ಹೊಸ ಅಫಿಡವಿಟ್‌

ಹೊಸ ಗೌಪ್ಯತಾ ನೀತಿಗೆ ಕುತಂತ್ರದಿಂದ ಒಪ್ಪಿಗೆ ಪಡೆಯುತ್ತಿದೆ: ಕೇಂದ್ರದಿಂದ ವಾಟ್ಸಪ್‌‌ ವಿರುದ್ದ ಹೊಸ ಅಫಿಡವಿಟ್‌

- Advertisement -
- Advertisement -

ವಾಟ್ಸಾಪ್‌ ತನ್ನ ಹೊಸ ಗೌಪ್ಯತಾ ನೀತಿಗಾಗಿ ಕುತಂತ್ರದೊಂದಿಗೆ ಒಪ್ಪಿಗೆ ಪಡೆಯುವ ಮೂಲಕ ಬಳಕೆದಾರ ವಿರೋಧಿ ನಡೆಯಲ್ಲಿ ತೊಡಗಿದೆ ಎಂದು ಕೇಂದ್ರ ಸರ್ಕಾರವು ಗುರುವಾರ ಹೊಸ ಅಫಿಡವಿಟ್‌ ಅನ್ನು ದೆಹಲಿ ಹೈಕೋಟ್‌ಗೆ ಸಲ್ಲಿಸಿದೆ.

ವಾಟ್ಸಾಪ್ ತನ್ನ ಸಂದೇಹ ಪಡದ ಬಳಕೆದಾರ ಮುಂದೆ ‘ತನ್ನ ಡಿಜಿಟಲ್ ಪರಾಕ್ರಮವನ್ನು’ ಬಿಚ್ಚಿಟ್ಟಿದ್ದು, ಅದರ ನೋಟಿಫಿಕೇಷನ್‌ಗಳನ್ನು ನಿಯಮಿತವಾಗಿ ಕಳುಹಿಸುವ ಮೂಲಕ ಹೊಸ 2021 ಗೌಪ್ಯತಾ ನೀತಿಯನ್ನು ಒಪ್ಪಿಕೊಳ್ಳುವಂತೆ ಒತ್ತಾಯಿಸುತ್ತಿದೆ ಎಂದು ಹೈಕೋರ್ಟ್ ಮುಂದೆ ಸಲ್ಲಿಸಿದ ಅಫಿಡವಿಟ್‌‌ನಲ್ಲಿ ಕೇಂದ್ರ ಸರ್ಕಾರ ತಿಳಿಸಿದೆ.

ಇದನ್ನೂ ಓದಿ: ಲಸಿಕೆ ವಿತರಣೆಗೆ ಸರ್ಕಾರ ತನ್ನ ಸಲಹೆಗಾರನ ಮಾತು ಕೇಳಲಿ: ಡಿ.ಕೆ ಶಿವಕುಮಾರ್

ವಾಟ್ಸಪ್‌ನ ಗೇಮ್‌ ಪ್ಲಾನ್‌ ಸ್ಪಷ್ಟವಾಗಿದ್ದು, ವೈಯಕ್ತಿಕ ಯೋಜನೆ ಸಂರಕ್ಷಣೆ (ಪಿಡಿಪಿ) ಮಸೂದೆಯು ಕಾನೂನು ಆಗುವ ಮೊದಲು ಹೊಸ ಗೌಪ್ಯತಾ ನೀತಿಗೆ ಬದ್ಧವಾಗಿರುವ ತನ್ನ ಬಳಕೆದಾರರ ಸಂಪೂರ್ಣ ಮೂಲವನ್ನು ವರ್ಗಾಯಿಸಲು ಅದು ಉದ್ದೇಶಿಸಿದೆ ಎಂದು ಕೇಂದ್ರವು ಆರೋಪಿಸಿದೆ.

ಪ್ರಸ್ತುತ ವಾಟ್ಸಪ್‌ ತನ್ನ ಬಳಕೆದಾರರಿಗೆ ಕಳುಹಿಸುತ್ತಿರುವ ನೋಟಿಫಿಕೇಷನ್‌ ಅಸ್ತಿತ್ವದಲ್ಲಿರುವುದಾಗಿರಲಿ ಅಥವಾ ಹೊಸದಾಗಿರಲಿ ಅದು 24/03/2021 ರ ದಿನಾಂಕದಂದು ‘ಭಾರತದ ಸ್ಪರ್ಧಾ ಆಯೋಗ’ದ ಆದೇಶದ ಪ್ರಾಥಮಿಕ ಅಭಿಪ್ರಾಯಕ್ಕೆ ವಿರುದ್ಧವಾಗಿದೆ ಎಂದು ಕೇಂದ್ರವು ಕೋರ್ಟ್‌ಗೆ ತಿಳಿಸಿದೆ.

ಹೊಸ ಗೌಪ್ಯತಾ ನೀತಿಗೆ ಸಂಬಂಧಿಸಿದ ನೋಟಿಫಿಕೇಷನ್‌ಳನ್ನು ಅಸ್ತಿತ್ವದಲ್ಲಿರುವ ಬಳಕೆದಾರಿಗೆ ಕಳುಹಿಸಬಾರದು ಮತ್ತು ದೈನಂದಿನ ಆಧಾರದ ಮೇಲೆ ಎಷ್ಟು ನೋಟಿಫಿಕೇಷನ್‌ಗಳನ್ನು ಕಳುಹಿಸಲಾಗುತ್ತಿದೆ ಎಂದು ದಾಖಲಿಸಲು ಮಧ್ಯಂತರ ನಿರ್ದೇಶನವನ್ನು ನೀಡಬೇಕೆಂದು ಕೇಂದ್ರವು ದೆಹಲಿ ಹೈಕೋರ್ಟ್‌ಗೆ ಒತ್ತಾಯಿಸಿದೆ.

ಇದನ್ನೂ ಓದಿ: ‘ಕೆಎಸ್‌ಆರ್‌‌ಟಿಸಿ’ ಬ್ರಾಂಡ್‌ ನೇಮ್‌ ಕಳೆದುಕೊಂಡ ಕರ್ನಾಟಕ! ಸಾರಿಗೆ ಸಚಿವ ಹೇಳಿದ್ದೇನು?

ವಾಟ್ಸಾಪ್ ಹೊಸ ಗೌಪ್ಯತಾ ನೀತಿಯ ವಿರುದ್ಧ ಹಲವಾರು ಅರ್ಜಿಗಳನ್ನು ಸಲ್ಲಿಕೆಯಾದ ನಂತರ ಕೇಂದ್ರವು ಈ ಅಫಿಡವಿಟ್ ಸಲ್ಲಿಸಿದೆ. ಡಾ. ಸೀಮಾ ಸಿಂಗ್, ಮೇಘನ್ ಮತ್ತು ವಿಕ್ರಮ್ ಸಿಂಗ್ ಅವರು ವಾಟ್ಸಾಪ್ ತನ್ನ ನೀತಿಯನ್ನು ಹಿಂತೆಗೆದುಕೊಳ್ಳುವಂತೆ ಅಥವಾ ಜನವರಿ 4 ರ ಗೌಪ್ಯತಾ ನೀತಿಯಿಂದ ಹೊರಗುಳಿಯುವ ಆಯ್ಕೆಯನ್ನು ನೀಡುವಂತೆ ಆದೇಶಿಸುವಂತೆ ಭಾರತದ ಒಕ್ಕೂಟಕ್ಕೆ ನಿರ್ದೇಶನ ಕೋರಿ ಅರ್ಜಿ ಸಲ್ಲಿಸಿದ್ದರು.

ಆದರೆ ವಾಟ್ಸಪ್‌ ತನ್ನ ಹೊಸ ನೀತಿಯನ್ನು ಸ್ವೀಕರಿಸಲು ಯಾರನ್ನೂ ಒತ್ತಾಯಿಸುತ್ತಿಲ್ಲ ಮತ್ತು ಅದರ ಗೌಪ್ಯತಾ ನೀತಿ ಕಡ್ಡಾಯವಲ್ಲ ಎಂದು ವಾಟ್ಸಾಪ್ ತನ್ನ ಉತ್ತರದಲ್ಲಿ ತಿಳಿಸಿದೆ.

ವಾಟ್ಸಪ್‌ ಸಲ್ಲಿಸಿದ ಹೊಸ ಅಫಿಡವಿಟ್‌ನಲ್ಲಿ, “2021 ರ ಹೊಸ ಗೌಪ್ಯತಾ ನೀತಿಯು ಖಾಸಗಿ ವ್ಯಕ್ತಿಗಳ(private parties) ನಡುವಿನ ಒಪ್ಪಂದವಾಗಿದ್ದು, ಬಳಕೆದಾರರು ಸ್ವೀಕರಿಸಲು ಅಥವಾ ತಿರಸ್ಕರಿಸಲು ಮುಕ್ತರಾಗಿದ್ದಾರೆ ಎಂದು ತಿಳಿಸಿದೆ. ಹೊಸ ಗೌಪ್ಯತಾ ನೀತಿಯನ್ನು ಪ್ರಶ್ನಿಸಿದ ಅರ್ಜಿಯನ್ನು ವಜಾಗೊಳಿಸುವಂತೆ ವಾಟ್ಸಾಪ್ ದೆಹಲಿ ಹೈಕೋರ್ಟ್‌ಗೆ ಒತ್ತಾಯಿಸಿದೆ. ವಿಚಾರಣೆಯನ್ನು ಜುಲೈ 22 ಕ್ಕೆ ಮುಂದೂಡಲಾಗಿದೆ.

ಇದನ್ನೂ ಓದಿ: ಆದಿತ್ಯನಾಥ್‌ ಸರ್ಕಾರದ ಕೊರೊನಾ ನಿರ್ವಹಣೆಯನ್ನು ಶ್ಲಾಘಿಸಿದ ಬಿಜೆಪಿ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನಾಸಿಕ್‌| ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು ಬಿಟ್ಟ ಪ್ರತಿಭಟನಾಕಾರರು

ಮಹಾರಾಷ್ಟ್ರದ ನಾಸಿಕ್ ಜಿಲ್ಲೆಯ ನಿಫಾದ್ ನಗರ ಪಂಚಾಯತ್ ವ್ಯಾಪ್ತಿಯಲ್ಲಿ ಬೀದಿ ನಾಯಿಗಳ ಹಾವಳಿಯನ್ನು ಖಂಡಿಸಿ ಮತ್ತು ಅಧಿಕಾರಿಗಳ ನಿರ್ಲಕ್ಷ್ಯವನ್ನು ಖಂಡಿಸಿದ ಪ್ರತಿಭಟನಾಕಾರರ ಗುಂಪೊಂದು ನಗರ ಪಂಚಾಯತ್ ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು...

ವಿವಾಹಿತೆ ಮೇಲೆ ಅತ್ಯಾಚಾರ ಆರೋಪ : ಬಿಜೆಪಿ ಮಾಜಿ ಶಾಸಕನ ವಿರುದ್ಧ ಎಫ್‌ಐಆರ್

ಗನ್‌ ಪಾಯಿಂಟ್‌ ಇಟ್ಟು ಬೆದರಿಸಿ 22 ವರ್ಷದ ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ ಪ್ರಕರಣದಲ್ಲಿ ಮಹಾರಾಷ್ಟ್ರದ ಬಿಜೆಪಿ ಮಾಜಿ ಶಾಸಕ ಮತ್ತು ವಜಾಗೊಂಡಿರುವ ಪೊಲೀಸ್ ಸಿಬ್ಬಂದಿಯೊಬ್ಬರ ವಿರುದ್ಧ ಗುರುವಾರ (ಸೆ.17)...

ಬ್ರಿಕ್ಸ್ ಶೃಂಗಸಭೆಯಲ್ಲಿ ಸಂಪೂರ್ಣ ಸಸ್ಯಹಾರಿ ಮೆನು; ಶಿವಸೇನೆ ತೀವ್ರ ವಾಗ್ದಾಳಿ

ದೆಹಲಿಯಲ್ಲಿ ನಡೆದ 18ನೇ ಬ್ರಿಕ್ಸ್ ಶೃಂಗಸಭೆಯಲ್ಲಿ ವಿದೇಶಿ ಪ್ರತಿನಿಧಿಗಳಿಗೆ ಕೇವಲ ಸಸ್ಯಹಾರಿ ಆಹಾರವನ್ನು ಬಡಿಸಿರುವುದನ್ನು ಖಂಡಿಸಿರುವ ಶಿವಸೇನೆ (ಯುಬಿಟಿ) ಗುರುವಾರ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದೆ. ಇದು ಅಂತರರಾಷ್ಟ್ರೀಯ ಅತಿಥಿಗಳ ಮೇಲೆ...

ದೆಹಲಿ ಎಸ್‌ಐಆರ್: ಮತದಾರರ ಪಟ್ಟಿಯಿಂದ ಹೆಸರುಗಳ ಡಿಲೀಟ್ ಪ್ರಶ್ನಿಸಿ ಅರ್ಜಿ; ವಿಚಾರಣೆಗೆ ಸುಪ್ರೀಂ ಕೋರ್ಟ್ ಒಪ್ಪಿಗೆ

ದೆಹಲಿಯಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಅಭಿಯಾನದಡಿ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದನ್ನು ಪ್ರಶ್ನಿಸಿ ಸಲ್ಲಿಕೆಯಾಗಿರುವ ಅರ್ಜಿಯ ವಿಚಾರಣೆಯನ್ನು ಸೆಪ್ಟೆಂಬರ್ 21ರಂದು ನಡೆಸಲು ಸುಪ್ರೀಂ ಕೋರ್ಟ್ ಗುರುವಾರ ಒಪ್ಪಿಗೆ ಸೂಚಿಸಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್...

ಕೇರಳ | ಮಿತಿಗಿಂತ ಹೆಚ್ಚು ಮದ್ಯ ಸಂಗ್ರಹ ಆರೋಪ : ರಿಪೋರ್ಟರ್ ಟಿವಿ ಎಂಡಿ ಆಂಟೋ ಆಗಸ್ಟಿನ್ ಬಂಧನ

ಕೇರಳ ಅಬಕಾರಿ ಇಲಾಖೆಯು ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ವ್ಯವಸ್ಥಾಪಕ ನಿರ್ದೇಶಕ (ಎಂಡಿ) ಆಂಟೋ ಆಗಸ್ಟಿನ್ ಅವರನ್ನು ಗುರುವಾರ (ಸೆ.17) ಮುಂಜಾನೆ ಬಂಧಿಸಿದೆ. ಎರ್ನಾಕುಲಂನಲ್ಲಿರುವ ಸುದ್ದಿ ವಾಹಿನಿಯ ಕಚೇರಿಯಿಂದ ಮುಂಜಾನೆ ಸುಮಾರು...

ದೆಹಲಿ: ಜಾಮೀನು ಸಿಕ್ಕ ಬೆನ್ನಲ್ಲೇ ಸ್ವತಂತ್ರ ಭಾರದ್ವಾಜ್ ವಿಡಿಯೋ ವೈರಲ್; ಷರತ್ತು ಉಲ್ಲಂಘನೆ ಆರೋಪ!

ಜಂತರ್ ಮಂತರ್‌ನಲ್ಲಿ ದಲಿತ ವಿದ್ಯಾರ್ಥಿ ಹೋರಾಟಗಾರ್ತಿ ನಿಶು ಆಜಾದ್ ಅವರ ತಂದೆಯ ಮೇಲೆ ಹಲ್ಲೆ ನಡೆಸಿದ ಆರೋಪದಲ್ಲಿ ಬಂಧಿತರಾಗಿದ್ದ ಹಿಂದುತ್ವ ಪ್ರಭಾವಿ ಸ್ವತಂತ್ರ ಭಾರದ್ವಾಜ್ ಅವರಿಗೆ ದೆಹಲಿ ನ್ಯಾಯಾಲಯ ಮೂರು ವಾರಗಳ ಮಧ್ಯಂತರ...

ಸರ್ಕಾರದ ಹಸ್ತಕ್ಷೇಪದಿಂದ ಕ್ಯಾಂಪಸ್ ನಿರ್ಬಂಧದವರೆಗೆ: ಭಾರತದಲ್ಲಿ ಶೈಕ್ಷಣಿಕ ಸ್ವಾತಂತ್ರ್ಯದ ಕುಸಿತ ಬಯಲಿಗೆಳೆದ ಜಾಗತಿಕ ವರದಿ 

ಭಾರತದಲ್ಲಿ ಶೈಕ್ಷಣಿಕ ಸ್ವಾತಂತ್ರ್ಯವು ತೀವ್ರವಾಗಿ ನಿರ್ಬಂಧಿತವಾಗಿದ್ದು, ಉನ್ನತ ಶಿಕ್ಷಣ ಸಂಸ್ಥೆಗಳ ಮೇಲೆ ಸರ್ಕಾರದ ಹೆಚ್ಚುತ್ತಿರುವ ಹಸ್ತಕ್ಷೇಪ, ಕ್ಯಾಂಪಸ್‌ಗಳಲ್ಲಿ ಶೈಕ್ಷಣಿಕ ಮತ್ತು ರಾಜಕೀಯ ಅಭಿವ್ಯಕ್ತಿಯ ಮೇಲಿನ ನಿರ್ಬಂಧಗಳು, ವಿದ್ವಾಂಸರು ಹಾಗೂ ವಿದ್ಯಾರ್ಥಿಗಳ ವಿರುದ್ಧದ ಕ್ರಮಗಳು...

ಬಿಹಾರ| ದಲಿತ ಯುವಕನ ವಿವಾಹವಾದ ಯುವತಿ; ಮಗಳ ಸಾಂಕೇತಿಕ ಅಂತ್ಯಕ್ರಿಯೆ ನಡೆಸಿದ ಪೋಷಕರು

ತಮ್ಮ 18 ವರ್ಷದ ಮಗಳು ಅಂತರ್ಜಾತಿ ವಿವಾಹವಾಗಿದ್ದಕ್ಕೆ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ಪೋಷಕರು, ಆಕೆಗೆ ಸಾಂಕೇತಿಕವಾಗಿ ಅಂತ್ಯಕ್ರಿಯೆ ನಡೆಸಿದ ಘಟನೆ ಬಿಹಾರದ ಪೂರ್ಣಿಯಾದಲ್ಲಿ ಬೆಳಕಿಗೆ ಬಂದಿದೆ. ಯುವತಿಯ ಫೋಟೋವಿರುವ ಪ್ರತಿಕೃತಿಯನ್ನು ಸಿದ್ಧಪಡಿಸಿ ಊರಿನಲ್ಲಿ ಶವಯಾತ್ರೆ...

ಸ್ವಇಚ್ಛೆಯಿಂದ ಇಸ್ಲಾಂ ಸ್ವೀಕಾರ : ಆಯುಷ್ ಮಲಿಕ್‌ರನ್ನು ಗೃಹಬಂಧನದಿಂದ ಬಿಡುಗಡೆಗೊಳಿಸಿದ ಅಲಹಾಬಾದ್ ಹೈಕೋರ್ಟ್

ತಾನು ಸ್ವಇಚ್ಛೆಯಿಂದ ಇಸ್ಲಾಂ ಧರ್ಮವನ್ನು ಸ್ವೀಕರಿಸಿರುವುದಾಗಿ ಮತ್ತು ಆ ನಂತರ ತನ್ನ ತಂದೆಯೇ ತನಗೆ ಬೆದರಿಕೆ ಹಾಕಿ, ಕಾನೂನುಬಾಹಿರವಾಗಿ ಗೃಹಬಂಧನದಲ್ಲಿ ಇರಿಸಿದ್ದರು ಎಂದು ಆರೋಪಿಸಿದ್ದ ಆಯುಷ್ ಮಲಿಕ್ ಎಂಬ 31 ವರ್ಷದ ಯುವಕನನ್ನು...

ಬಿಜ್ನೋರ್‌ನಲ್ಲಿ ಮುಸ್ಲಿಂ ಶಿಕ್ಷಕನ ಗುಂಡಿಕ್ಕಿ ಹತ್ಯೆ: ‘ಲವ್ ಜಿಹಾದ್’ ಆರೋಪ; ವೈಯಕ್ತಿಕ ದ್ವೇಷದ ಬಗ್ಗೆಯೂ ಪೊಲೀಸರಿಂದ ತನಿಖೆ 

ಬಿಜ್ನೋರ್: ಉತ್ತರ ಪ್ರದೇಶದ ಬಿಜ್ನೋರ್ ಜಿಲ್ಲೆಯಲ್ಲಿ 43 ವರ್ಷದ ಮುಸ್ಲಿಂ ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕನೊಬ್ಬರನ್ನು ರೈತನೊಬ್ಬ ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆ ನಡೆದಿದೆ. ಶಿಕ್ಷಕ ನೌಶಾದ್ ಅಹ್ಮದ್ ಅವರು ‘ಲವ್ ಜಿಹಾದ್’...