Homeಮುಖಪುಟರೈಲ್ವೆ ಹಳಿಗಳ ಮೇಲೆ 2020ರಲ್ಲಿ ಮೃತಪಟ್ಟವರು 8,700 ಮಂದಿ, ಹೆಚ್ಚಿನವರು ವಲಸೆ ಕಾರ್ಮಿಕರು

ರೈಲ್ವೆ ಹಳಿಗಳ ಮೇಲೆ 2020ರಲ್ಲಿ ಮೃತಪಟ್ಟವರು 8,700 ಮಂದಿ, ಹೆಚ್ಚಿನವರು ವಲಸೆ ಕಾರ್ಮಿಕರು

- Advertisement -
- Advertisement -

ದೇಶದಲ್ಲಿ ಹಬ್ಬುತ್ತಿರುವ ಕೊರೊನಾ ವೈರಸ್ ಕಾರಣದಿಂದ ಲಾಕ್‌ಡೌನ್ ಹೇರಿ ಪ್ರಯಾಣಿಕರ ರೈಲು ಸೇವೆಗಳನ್ನು ಮೊಟಕುಗೊಳಿಸಲಾಗಿದ್ದರೂ 2020 ರಲ್ಲಿ 8,700 ಕ್ಕೂ ಹೆಚ್ಚು ಜನರು ರೈಲ್ವೆ ಹಳಿಗಳ ಮೇಲೆ ಮೃತಪಟ್ಟಿದ್ದಾರೆ. ಹೀಗೆ ಬಲಿಯಾದವರಲ್ಲಿ ಅನೇಕರು ವಲಸೆ ಕಾರ್ಮಿಕರಾಗಿದ್ದಾರೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಮಾಹಿತಿ ಹಕ್ಕು ಕಾಯ್ದೆಯಡಿ ಮಧ್ಯಪ್ರದೇಶ ಮೂಲದ ಕಾರ್ಯಕರ್ತ ಚಂದ್ರಶೇಖರ್ ಗೌರ್ ಅವರ ಪ್ರಶ್ನೆಗೆ ರೈಲ್ವೆ ಮಂಡಳಿ 2020 ಜನವರಿ ಮತ್ತು ಡಿಸೆಂಬರ್ ನಡುವಿನ ಅವಧಿಯಲ್ಲಿ ರೈಲ್ವೆ ಹಳಿಗಳ ಮೇಲೆ ಸಂಭವಿಸಿದ ಸಾವುಗಳ ಡೇಟಾವನ್ನು ಹಂಚಿಕೊಂಡಿದೆ.

“ರಾಜ್ಯ ಪೊಲೀಸರಿಂದ ಪಡೆದ ಮಾಹಿತಿಯ ಆಧಾರದ ಮೇಲೆ, ಜನವರಿ 2020 ಮತ್ತು ಡಿಸೆಂಬರ್ 2020 ರ ನಡುವೆ ರೈಲ್ವೆ ಹಳಿಗಳಲ್ಲಿ 805 ಜನರು ಗಾಯಗೊಂಡಿದ್ದಾರೆ. 8,733 ಮಂದಿ ಸಾವನ್ನಪ್ಪಿದ್ದಾರೆ” ಎಂದು ರೈಲ್ವೆ ಮಂಡಳಿ ತಿಳಿಸಿದೆ.

ರೈಲು ಮಾರ್ಗಗಳು. ರಸ್ತೆಗಳು ಅಥವಾ ಹೆದ್ದಾರಿಗಳಿಗಿಂತ ಚಿಕ್ಕವು, ಈ ಮೂಲಕ ಪ್ರಯಾಣಿಸಿದರೆ ಬೇಗ ಊರುಗಳನ್ನು ಸೇರಿಕೊಳ್ಳಬಹುದು ಎಂದು ಭಾವಿಸಲಾಗಿರುವುದರಿಂದ ಸತ್ತವರಲ್ಲಿ ಅನೇಕರು ವಲಸೆ ಕಾರ್ಮಿಕರಾಗಿದ್ದಾರೆ ಎಂದು ಅಧಿಕಾರಿಗಳು ಹೇಳಿದ್ದಾರೆ.

ಇದನ್ನೂ ಓದಿ: ಮ್ಯಾಗಿ ಸೇರಿದಂತೆ ನೆಸ್ಲೆಯ 60% ಉತ್ಪನ್ನಗಳು ಆರೋಗ್ಯಕರವಲ್ಲ: ಸಂಸ್ಥೆಯ ಆಂತರಿಕ ವರದಿ

ಜೊತೆಗೆ ಲಾಕ್‌ಡೌನ್ ಮಾರ್ಗಸೂಚಿಗಳನ್ನು ಉಲ್ಲಂಘಿಸುತ್ತಿರುವುದಕ್ಕಾಗಿ ಪೊಲೀಸರಿಂದ ತಪ್ಪಿಸಿಕೊಳ್ಳಲು ಸಹ ವಲಸೆ ಕಾರ್ಮಿಕರು ರೈಲ್ವೆ ಟ್ರ್ಯಾಕ್‌ಗಳಲ್ಲಿ ಪ್ರಯಾಣಿಸುತ್ತಾರೆ. ಹಾಗೇಯೆ ದಾರಿಯ ಮಧ್ಯದಲ್ಲಿ ಕಳೆದುಹೋಗುವುದಿಲ್ಲ ಎಂಬ ನಂಬಿಕೆಯನ್ನು ಸಹ ಅವರು ಹೊಂದಿದ್ದಾರೆ. ಲಾಕ್‌ಡೌನ್ ಆಗಿರುವುದರಿಂದ ಯಾವುದೇ ರೈಲುಗಳು ಓಡುವುದಿಲ್ಲ ಎಂದು ಊಹಿಸಿದ್ದಾರೆ” ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಇದಕ್ಕೂ ಮುಂಚಿನ ನಾಲ್ಕು ವರ್ಷಗಳಿಗೆ ಹೋಲಿಸಿದರೆ 2020 ರ ಸಾವುನೋವುಗಳು ಕಡಿಮೆ ಇದೆ. ಆದರೆ, ಮಾರ್ಚ್ 25 ರಂದು ಲಾಕ್‌ಡೌನ್ ಘೋಷಣೆಯಾದ ನಂತರ ಪ್ರಯಾಣಿಕರ ಸೇವೆಗಳನ್ನು ನಿರ್ಬಂಧಿಸಲಾಗಿದೆ ಎಂಬ ಅಂಶದಿಂದಾಗಿ ಈ ಸಾವುಗಳ ಸಂಖ್ಯೆ ಗಮನಾರ್ಹವಾಗಿವೆ.

ರೈಲ್ವೆ ಅಂಕಿಅಂಶಗಳ ಪ್ರಕಾರ, ರಾಜ್ಯ ಸರ್ಕಾರಗಳಿಂದ ಸಂಗ್ರಹಿಸಲ್ಪಟ್ಟ, 2016 ಮತ್ತು 2019 ರ ನಡುವೆ ಇಂತಹ ಘಟನೆಗಳಲ್ಲಿ 56,271 ಜನರು ಸಾವನ್ನಪ್ಪಿದ್ದಾರೆ ಮತ್ತು 5,938 ಜನರು ಗಾಯಗೊಂಡಿದ್ದಾರೆ.

2016 ರಲ್ಲಿ 14,032 ಜನರು, 2017 ರಲ್ಲಿ 12,838, 2018 ರಲ್ಲಿ 14,197 ಮತ್ತು 2019 ರಲ್ಲಿ 15,204 ಜನರು ಸಾವನ್ನಪ್ಪಿದ್ದಾರೆ ಎಂದು ಅಂಕಿ ಅಂಶಗಳು ತೋರಿಸುತ್ತವೆ. ಆದರೂ, ರೈಲ್ವೆ ಇಲಾಖೆ ಈ ಸಾವುಗಳನ್ನು “ರೈಲ್ವೆ ಅಪಘಾತಗಳು” ಎಂದು ಪರಿಗಣಿಸುವುದಿಲ್ಲ.

ಈ ಸಾವುಗಳು “ಅಹಿತಕರ ಘಟನೆಗಳು” ಅಥವಾ “ಅತಿಕ್ರಮಣ” ದ ವರ್ಗಕ್ಕೆ ಸೇರಿಸಲಾಗುತ್ತದೆ. ಇವುಗಳ ವಿಚಾರಣೆಯನ್ನು ರಾಜ್ಯ ಪೊಲೀಸರು  ನಡೆಸಿ, ಸಂತ್ರಸ್ತರಿಗೆ ಸಂಬಂಧಪಟ್ಟ ರಾಜ್ಯ ಸರ್ಕಾರಗಳಿಂದ ಪರಿಹಾರವನ್ನು ನೀಡಲಾಗುತ್ತದೆ. ಇಂತಹ ಘಟನೆಗಳನ್ನು ಕಡಿಮೆ ಮಾಡಲು ರೈಲ್ವೆ ಬೃಹತ್ ಅಭಿಯಾನಗಳನ್ನು ನಡೆಸಿದ್ದು, ಕೆಲವು ಸಂದರ್ಭಗಳಲ್ಲಿ ಸಹಾನುಭೂತಿಯ ಆಧಾರದ ಮೇಲೆ ಸಂತ್ರಸ್ತರ ಕುಟುಂಬ ಸದಸ್ಯರಿಗೆ ಪರಿಹಾರವನ್ನು ನೀಡಿದೆ.


ಇದನ್ನೂ ಓದಿ: ಚಿಕ್ಕಮಗಳೂರಿನ ತರೀಕೆರೆಯಲ್ಲಿ ವೈದ್ಯರ ಮೇಲೆ ಹಲ್ಲೆ, ನಾಲ್ವರ ಬಂಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನಾಸಿಕ್‌| ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು ಬಿಟ್ಟ ಪ್ರತಿಭಟನಾಕಾರರು

ಮಹಾರಾಷ್ಟ್ರದ ನಾಸಿಕ್ ಜಿಲ್ಲೆಯ ನಿಫಾದ್ ನಗರ ಪಂಚಾಯತ್ ವ್ಯಾಪ್ತಿಯಲ್ಲಿ ಬೀದಿ ನಾಯಿಗಳ ಹಾವಳಿಯನ್ನು ಖಂಡಿಸಿ ಮತ್ತು ಅಧಿಕಾರಿಗಳ ನಿರ್ಲಕ್ಷ್ಯವನ್ನು ಖಂಡಿಸಿದ ಪ್ರತಿಭಟನಾಕಾರರ ಗುಂಪೊಂದು ನಗರ ಪಂಚಾಯತ್ ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು...

ವಿವಾಹಿತೆ ಮೇಲೆ ಅತ್ಯಾಚಾರ ಆರೋಪ : ಬಿಜೆಪಿ ಮಾಜಿ ಶಾಸಕನ ವಿರುದ್ಧ ಎಫ್‌ಐಆರ್

ಗನ್‌ ಪಾಯಿಂಟ್‌ ಇಟ್ಟು ಬೆದರಿಸಿ 22 ವರ್ಷದ ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ ಪ್ರಕರಣದಲ್ಲಿ ಮಹಾರಾಷ್ಟ್ರದ ಬಿಜೆಪಿ ಮಾಜಿ ಶಾಸಕ ಮತ್ತು ವಜಾಗೊಂಡಿರುವ ಪೊಲೀಸ್ ಸಿಬ್ಬಂದಿಯೊಬ್ಬರ ವಿರುದ್ಧ ಗುರುವಾರ (ಸೆ.17)...

ಬ್ರಿಕ್ಸ್ ಶೃಂಗಸಭೆಯಲ್ಲಿ ಸಂಪೂರ್ಣ ಸಸ್ಯಹಾರಿ ಮೆನು; ಶಿವಸೇನೆ ತೀವ್ರ ವಾಗ್ದಾಳಿ

ದೆಹಲಿಯಲ್ಲಿ ನಡೆದ 18ನೇ ಬ್ರಿಕ್ಸ್ ಶೃಂಗಸಭೆಯಲ್ಲಿ ವಿದೇಶಿ ಪ್ರತಿನಿಧಿಗಳಿಗೆ ಕೇವಲ ಸಸ್ಯಹಾರಿ ಆಹಾರವನ್ನು ಬಡಿಸಿರುವುದನ್ನು ಖಂಡಿಸಿರುವ ಶಿವಸೇನೆ (ಯುಬಿಟಿ) ಗುರುವಾರ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದೆ. ಇದು ಅಂತರರಾಷ್ಟ್ರೀಯ ಅತಿಥಿಗಳ ಮೇಲೆ...

ದೆಹಲಿ ಎಸ್‌ಐಆರ್: ಮತದಾರರ ಪಟ್ಟಿಯಿಂದ ಹೆಸರುಗಳ ಡಿಲೀಟ್ ಪ್ರಶ್ನಿಸಿ ಅರ್ಜಿ; ವಿಚಾರಣೆಗೆ ಸುಪ್ರೀಂ ಕೋರ್ಟ್ ಒಪ್ಪಿಗೆ

ದೆಹಲಿಯಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಅಭಿಯಾನದಡಿ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದನ್ನು ಪ್ರಶ್ನಿಸಿ ಸಲ್ಲಿಕೆಯಾಗಿರುವ ಅರ್ಜಿಯ ವಿಚಾರಣೆಯನ್ನು ಸೆಪ್ಟೆಂಬರ್ 21ರಂದು ನಡೆಸಲು ಸುಪ್ರೀಂ ಕೋರ್ಟ್ ಗುರುವಾರ ಒಪ್ಪಿಗೆ ಸೂಚಿಸಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್...

ಕೇರಳ | ಮಿತಿಗಿಂತ ಹೆಚ್ಚು ಮದ್ಯ ಸಂಗ್ರಹ ಆರೋಪ : ರಿಪೋರ್ಟರ್ ಟಿವಿ ಎಂಡಿ ಆಂಟೋ ಆಗಸ್ಟಿನ್ ಬಂಧನ

ಕೇರಳ ಅಬಕಾರಿ ಇಲಾಖೆಯು ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ವ್ಯವಸ್ಥಾಪಕ ನಿರ್ದೇಶಕ (ಎಂಡಿ) ಆಂಟೋ ಆಗಸ್ಟಿನ್ ಅವರನ್ನು ಗುರುವಾರ (ಸೆ.17) ಮುಂಜಾನೆ ಬಂಧಿಸಿದೆ. ಎರ್ನಾಕುಲಂನಲ್ಲಿರುವ ಸುದ್ದಿ ವಾಹಿನಿಯ ಕಚೇರಿಯಿಂದ ಮುಂಜಾನೆ ಸುಮಾರು...

ದೆಹಲಿ: ಜಾಮೀನು ಸಿಕ್ಕ ಬೆನ್ನಲ್ಲೇ ಸ್ವತಂತ್ರ ಭಾರದ್ವಾಜ್ ವಿಡಿಯೋ ವೈರಲ್; ಷರತ್ತು ಉಲ್ಲಂಘನೆ ಆರೋಪ!

ಜಂತರ್ ಮಂತರ್‌ನಲ್ಲಿ ದಲಿತ ವಿದ್ಯಾರ್ಥಿ ಹೋರಾಟಗಾರ್ತಿ ನಿಶು ಆಜಾದ್ ಅವರ ತಂದೆಯ ಮೇಲೆ ಹಲ್ಲೆ ನಡೆಸಿದ ಆರೋಪದಲ್ಲಿ ಬಂಧಿತರಾಗಿದ್ದ ಹಿಂದುತ್ವ ಪ್ರಭಾವಿ ಸ್ವತಂತ್ರ ಭಾರದ್ವಾಜ್ ಅವರಿಗೆ ದೆಹಲಿ ನ್ಯಾಯಾಲಯ ಮೂರು ವಾರಗಳ ಮಧ್ಯಂತರ...

ಸರ್ಕಾರದ ಹಸ್ತಕ್ಷೇಪದಿಂದ ಕ್ಯಾಂಪಸ್ ನಿರ್ಬಂಧದವರೆಗೆ: ಭಾರತದಲ್ಲಿ ಶೈಕ್ಷಣಿಕ ಸ್ವಾತಂತ್ರ್ಯದ ಕುಸಿತ ಬಯಲಿಗೆಳೆದ ಜಾಗತಿಕ ವರದಿ 

ಭಾರತದಲ್ಲಿ ಶೈಕ್ಷಣಿಕ ಸ್ವಾತಂತ್ರ್ಯವು ತೀವ್ರವಾಗಿ ನಿರ್ಬಂಧಿತವಾಗಿದ್ದು, ಉನ್ನತ ಶಿಕ್ಷಣ ಸಂಸ್ಥೆಗಳ ಮೇಲೆ ಸರ್ಕಾರದ ಹೆಚ್ಚುತ್ತಿರುವ ಹಸ್ತಕ್ಷೇಪ, ಕ್ಯಾಂಪಸ್‌ಗಳಲ್ಲಿ ಶೈಕ್ಷಣಿಕ ಮತ್ತು ರಾಜಕೀಯ ಅಭಿವ್ಯಕ್ತಿಯ ಮೇಲಿನ ನಿರ್ಬಂಧಗಳು, ವಿದ್ವಾಂಸರು ಹಾಗೂ ವಿದ್ಯಾರ್ಥಿಗಳ ವಿರುದ್ಧದ ಕ್ರಮಗಳು...

ಬಿಹಾರ| ದಲಿತ ಯುವಕನ ವಿವಾಹವಾದ ಯುವತಿ; ಮಗಳ ಸಾಂಕೇತಿಕ ಅಂತ್ಯಕ್ರಿಯೆ ನಡೆಸಿದ ಪೋಷಕರು

ತಮ್ಮ 18 ವರ್ಷದ ಮಗಳು ಅಂತರ್ಜಾತಿ ವಿವಾಹವಾಗಿದ್ದಕ್ಕೆ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ಪೋಷಕರು, ಆಕೆಗೆ ಸಾಂಕೇತಿಕವಾಗಿ ಅಂತ್ಯಕ್ರಿಯೆ ನಡೆಸಿದ ಘಟನೆ ಬಿಹಾರದ ಪೂರ್ಣಿಯಾದಲ್ಲಿ ಬೆಳಕಿಗೆ ಬಂದಿದೆ. ಯುವತಿಯ ಫೋಟೋವಿರುವ ಪ್ರತಿಕೃತಿಯನ್ನು ಸಿದ್ಧಪಡಿಸಿ ಊರಿನಲ್ಲಿ ಶವಯಾತ್ರೆ...

ಸ್ವಇಚ್ಛೆಯಿಂದ ಇಸ್ಲಾಂ ಸ್ವೀಕಾರ : ಆಯುಷ್ ಮಲಿಕ್‌ರನ್ನು ಗೃಹಬಂಧನದಿಂದ ಬಿಡುಗಡೆಗೊಳಿಸಿದ ಅಲಹಾಬಾದ್ ಹೈಕೋರ್ಟ್

ತಾನು ಸ್ವಇಚ್ಛೆಯಿಂದ ಇಸ್ಲಾಂ ಧರ್ಮವನ್ನು ಸ್ವೀಕರಿಸಿರುವುದಾಗಿ ಮತ್ತು ಆ ನಂತರ ತನ್ನ ತಂದೆಯೇ ತನಗೆ ಬೆದರಿಕೆ ಹಾಕಿ, ಕಾನೂನುಬಾಹಿರವಾಗಿ ಗೃಹಬಂಧನದಲ್ಲಿ ಇರಿಸಿದ್ದರು ಎಂದು ಆರೋಪಿಸಿದ್ದ ಆಯುಷ್ ಮಲಿಕ್ ಎಂಬ 31 ವರ್ಷದ ಯುವಕನನ್ನು...

ಬಿಜ್ನೋರ್‌ನಲ್ಲಿ ಮುಸ್ಲಿಂ ಶಿಕ್ಷಕನ ಗುಂಡಿಕ್ಕಿ ಹತ್ಯೆ: ‘ಲವ್ ಜಿಹಾದ್’ ಆರೋಪ; ವೈಯಕ್ತಿಕ ದ್ವೇಷದ ಬಗ್ಗೆಯೂ ಪೊಲೀಸರಿಂದ ತನಿಖೆ 

ಬಿಜ್ನೋರ್: ಉತ್ತರ ಪ್ರದೇಶದ ಬಿಜ್ನೋರ್ ಜಿಲ್ಲೆಯಲ್ಲಿ 43 ವರ್ಷದ ಮುಸ್ಲಿಂ ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕನೊಬ್ಬರನ್ನು ರೈತನೊಬ್ಬ ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆ ನಡೆದಿದೆ. ಶಿಕ್ಷಕ ನೌಶಾದ್ ಅಹ್ಮದ್ ಅವರು ‘ಲವ್ ಜಿಹಾದ್’...