Homeಕರ್ನಾಟಕಕನ್ನಡವನ್ನು ಕೊಳಕು ಭಾಷೆ ಎಂದು ತೋರಿಸಿದ್ದ ವೆಬ್‌ಸೈಟ್, ಕನ್ನಡಿಗರ ಆಕ್ರೋಶಕ್ಕೆ ಮಣಿದ ಗೂಗಲ್

ಕನ್ನಡವನ್ನು ಕೊಳಕು ಭಾಷೆ ಎಂದು ತೋರಿಸಿದ್ದ ವೆಬ್‌ಸೈಟ್, ಕನ್ನಡಿಗರ ಆಕ್ರೋಶಕ್ಕೆ ಮಣಿದ ಗೂಗಲ್

- Advertisement -
- Advertisement -

ಗೂಗಲ್‌ನಲ್ಲಿ ಭಾರತದ ಕೊಳಕು ಭಾಷೆ ಎಂದು ಹುಡುಕಿದರೆ ಮೊದಲು ಸಿಗುತ್ತಿದ್ದದ್ದು ಕನ್ನಡ ಎಂದು. ಹೌದು, ಇಂದು ಸಾಮಾಜಿಕ ಜಾಲತಾಣಗಳಲ್ಲಿ ಕನ್ನಡಿಗರು ವ್ಯಕ್ತಪಡಿಸುತ್ತಿರುವ ಆಕ್ರೋಶಕ್ಕೆ ಕಾರಣ ಇದು. 2 ಸಾವಿರ ವರ್ಷಗಳ ಇತಿಹಾಸ ಇರುವ ಸುಂದರ, ಪ್ರಾಚೀನ ಕನ್ನಡ ಭಾಷೆಗೆ ವೆಬ್‌ಸೈಟ್‌ ಒಂದು ಅವಮಾನ ಮಾಡಿದೆ.

ಕನ್ನಡ ಭಾಷೆಗೆ ಮತ್ತು ಕನ್ನಡಿಗರ ಸ್ವಾಭಿಮಾನಕ್ಕೆ ಧಕ್ಕೆ ತರುವಂತಹ ಘಟನೆಗೆ ಕನ್ನಡಿಗರು ಆಕ್ರೋಶ ವ್ಯಕ್ತಪಡಿಸಿದ್ದು, ಕನ್ನಡವನ್ನು ಕೊಳಕು ಭಾಷೆ ಎಂದು ತೋರಿದ ವೆಬ್‌ಸೈಟ್‌ ಬಗ್ಗೆ ಗೂಗಲ್‌ಗೆ ರಿಪೋರ್ಟ್ ಮಾಡಿದ್ದರು. ಇದಕ್ಕೆ ಎಚ್ಚೆತ್ತಿರುವ ಗೂಗಲ್ ವೆಬ್‌ಸೈಟ್‌ ಅನ್ನು ನಿರ್ಬಂಧಿಸಿದೆ. ಭಾರತದಲ್ಲಿ ಕೊಳಕು ಭಾಷೆ ಎಂಬುದಿಲ್ಲ. ಎಲ್ಲಾ ಭಾಷೆಗಳಿಗೆ ಗೌರವಿದೆ. ಕನ್ನಡ ಭಾಷೆ ಕರ್ನಾಟಕದ ಹೆಮ್ಮೆ ಎಂದು ಸ್ಪಷ್ಟನೆ ನೀಡಿದೆ.

ಇದನ್ನೂ ಓದಿ: ‘ಕೆಎಸ್‌ಆರ್‌‌ಟಿಸಿ’ ಬ್ರಾಂಡ್‌ ನೇಮ್‌ ಕಳೆದುಕೊಂಡ ಕರ್ನಾಟಕ! ಸಾರಿಗೆ ಸಚಿವ ಹೇಳಿದ್ದೇನು?

Petition · This website says the Ugliest language in India is Kannada. Remove this by signing. · Change.org
ಗೂಗಲ್‌ನಲ್ಲಿ ಈ ಮೊದಲು ಕಾಣಿಸುತ್ತಿದ್ದ ಫಲಿತಾಂಶ

ಗೂಗಲ್‌ನಲ್ಲಿ ಬೆಳಗ್ಗೆವರೆಗೆ ಭಾರತದ ಅತ್ಯಂತ ಕೊಳಕು ಭಾಷೆ ಎಂದು ಟೈಪ್ ಮಾಡಿದರೆ,ಆರೂವರೆ ಕೋಟಿ ಕನ್ನಡಿಗರು ಮಾತನಾಡುವ ಭಾಷೆ ಕನ್ನಡ ಎಂದು ಬರುತ್ತಿತ್ತು. ಇದಕ್ಕೆ ಕಾರಣ ಸರ್ಚ್ ಮಾಡಿದಾಗ debtconsolidationsquad.com ಎಂಬ ಜಾಲತಾಣದಲ್ಲಿ ಕಂಡು ಬಂದಿದ್ದ ಲೇಖನ, ಸದ್ಯ ಈ ವೆಬ್‌ಸೈಟ್‌ನನ್ನೆ ಗೂಗಲ್ ತೆಗೆದುಹಾಕಿದೆ.

ಕನ್ನಡಕ್ಕೆ ಅವಮಾನ ಮಾಡಿದ ಹಿನ್ನೆಲೆ ಸಾಮಾಜಿಕ ಜಾಲತಾಣದಲ್ಲಿ ಭಾರಿ ಆಕ್ರೋಶ ವ್ಯಕ್ತ ಪಡಿಸಿದ್ದ ಜನ, ಈ ವೆಬ್‌ಸೈಟ್ ಬಗ್ಗೆ ರಿಪೋರ್ಟ್ ಮಾಡಿದ್ದರು. ಕನ್ನಡದ ಶ್ರೇಷ್ಠತೆ ಬಗ್ಗೆ ದನಿ ಎತ್ತಿದ್ದರು.

ನಂತರದ ಸರ್ಚ್ ರಿಸಲ್ಟ್

ಆದರೆ, ಗೂಗಲ್​ನಂತಹ ತಂತ್ರಜ್ಞಾನದ ದೈತ್ಯ ಸಂಸ್ಥೆ ಒಂದು ಭಾಷೆ ಬಗ್ಗೆ ತಿಳಿಸು ಇಂತಹ ವಿಚಾರಗಳತ್ತ ಸೂಕ್ಷ್ಮವಾಗಿ ಗಮನ ನೀಡಬೇಕು. ಯಾವುದೇ ಒಂದು ಭಾಷೆಯನ್ನು ಈ ರೀತಿ ಹೇಳಿದರೇ ಒಂದು ಸಮುದಾಯ, ಸಂಸ್ಕೃತಿ ಮತ್ತು ಸೌಹಾರ್ದತೆಗೆ ಭಂಗ ತರುವ ವಿಷಯಗಳು ಪ್ರಕಟಗೊಳ್ಳಲು ಆಸ್ಪದ ನೀಡಬಾರದು.

ಕನ್ನಡವನ್ನು ಕೆಟ್ಟ ಭಾಷೆಯೆಂದು ಬಿಂಬಿಸಿದ ಗೂಗಲ್ ಸಂಸ್ಥೆ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತದೆ ಎಂದು ಅರಣ್ಯ, ಕನ್ನಡ ಮತ್ತು ಸಂಸ್ಕೃತಿ ಸಚಿವ ಅರವಿಂದ ಲಿಂಬಾವಳಿ ಹೇಳಿದ್ದಾರೆ. ಸದ್ಯ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಕಾರ್ಯದರ್ಶಿ ಅವರಿಗೆ ಈ ಸಂಬಂಧ ಕಾನೂನು ಇಲಾಖೆಯ ಜೊತೆಗೂಡಿ ಚರ್ಚಿಸಿ ಕೂಡಲೇ ಗೂಗಲ್‌ಗೆ ನೋಟಿಸ್ ನೀಡಲು ಸೂಚಿಸಿದ್ದೇನೆ ಎಂದು ತಿಳಿಸಿದ್ದಾರೆ.

ಗೂಗಲ್‌ನಲ್ಲಿ ಈ ರೀತಿಯಾಗಲು ಕಾರಣವೇನು….?

ಗೂಗಲ್, ಕೀ ವರ್ಡ್‌ಗಳ ಆಧಾರದಲ್ಲಿ ಮೇಲೆ ಹುಡುಕಾಟ ನಡೆಸಿದಾಗ ಫಲಿತಾಂಶ ತೋರಿಸುತ್ತದೆ. ವೆಬ್ ಸೈಟ್‌ಗಳನ್ನು ರೂಪಿಸಿದಾಗ, ಪ್ರತಿ ಪುಟದಲ್ಲೂ ಹುಡುಕಲು ಸಹಕಾರಿಯಾಗುವಂತೆ ಒಂದಿಷ್ಟು ಕೀ ವರ್ಡ್‌ಗಳನ್ನು ಹಾಕಲಾಗುತ್ತೆ. ಈ ಪದಗಳ ಮೂಲಕ ಗೂಗಲ್ ಸರ್ಚ್ ಇಂಜಿನ್‌ನ ಕ್ರಮಗಳ ಆಧಾರದಲ್ಲಿ ಜನರು ಹುಡುಕುವ ಪದವನ್ನು ಹೊಂದಿಸಿ ಫಲಿತಾಂಶ ತೋರಿಸುತ್ತವೆ.

ಈ ಬಗ್ಗೆ ಅರುಣ್ ಜಾವಗಲ್ ಫೇಸ್‌ಬುಕ್‌ನಲ್ಲಿ ವಿವರವಾಗಿ ಬರೆದಿದ್ದಾರೆ.


ಇದನ್ನೂ ಓದಿ: ಮ್ಯಾಗಿ ಸೇರಿದಂತೆ ನೆಸ್ಲೆಯ 60% ಉತ್ಪನ್ನಗಳು ಆರೋಗ್ಯಕರವಲ್ಲ: ಸಂಸ್ಥೆಯ ಆಂತರಿಕ ವರದಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಯಾವ ಬಾಶೆಯೂ ಕೊಳಕಲ್ಲ. ಕನ್ನಡವನ್ನು ಕೊಳಕು ಬಾಶೆ ಎಂದು ಹೇಳಿದವರಿಗೆ ಸೂಕ್ತ ಶಿಕ್ಷೆ ಆಗಬೇಕು.

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...