Homeಕರೋನಾ ತಲ್ಲಣKarnataka Lockdown | ಜೂನ್‌ 14 ರ ವರೆಗೆ ಲಾಕ್‌ಡೌನ್‌ ವಿಸ್ತರಿಸಿದ ರಾಜ್ಯ ಸರ್ಕಾರ

Karnataka Lockdown | ಜೂನ್‌ 14 ರ ವರೆಗೆ ಲಾಕ್‌ಡೌನ್‌ ವಿಸ್ತರಿಸಿದ ರಾಜ್ಯ ಸರ್ಕಾರ

- Advertisement -
- Advertisement -

ರಾಜ್ಯದಲ್ಲಿ ಜೂನ್ 7 ರ ವರೆಗೆ ಜಾರಿಯಲ್ಲಿರುವ ಲಾಕ್‌ಡೌನ್‌ ಅನ್ನು ಜೂನ್‌ 14 ರ ವರೆಗೆ ವಿಸ್ತರಿಸುವುದಾಗಿ ರಾಜ್ಯ ಸರ್ಕಾರ ಘೋಷಿಸಿದೆ. ಮುಖ್ಯಮಂತ್ರಿ ಬಿಎಸ್​ ಯಡಿಯೂಪ್ಪ ಈ ಬಗ್ಗೆ ಗುರುವಾರ ಸಂಜೆ 5 ಗಂಟೆಗೆ ನಡೆದ ಪತ್ರಿಕಾಗೋಷ್ಠಿಯಲ್ಲಿ ಹೇಳಿದ್ದಾರೆ.

ನಿನ್ನೆ ನಡೆದ ಸಚಿವರ ಸಭೆಯಲ್ಲಿ ಲಾಕ್​ಡೌನ್​ ವಿಸ್ತರಣೆ ಕುರಿತಾಗಿ ಚರ್ಚೆ ನಡೆಸಿ ತೀರ್ಮಾನ ತೆಗೆದುಕೊಳ್ಳಲಾಗಿತ್ತು. ಇಂದು ಸಂಜೆ ಸಿಎಂ ಬಿಎಸ್​ವೈ ಈ ಬಗ್ಗೆ ಅಧಿಕೃತವಾಗಿ ಆದೇಶ ಹೊರಡಿಸಿದ್ದು, ಕೊರೊನಾ ಲಾಕ್‌ಡೌನ್‌ ಪರಿಹಾರವಾಗಿ 500 ಕೋಟಿ ರೂ. ಗಳನ್ನು ಬಿಡುಗಡೆ ಮಾಡುವುದಾಗಿ ಅವರು ಹೇಳಿದ್ದಾರೆ. ರಾಜ್ಯದಲ್ಲಿ ಕೊರೋನಾ ಸೋಂಕು ಇನ್ನೂ ಸಂಪೂರ್ಣ ನಿಯಂತ್ರಣಕ್ಕೆ ಬಾರದ ಕಾರಣ, ಮುಖ್ಯಮಂತ್ರಿ ಲಾಕ್‌ಡೌನ್​ ಮುಂದುವರಿಸಿದ್ದಾರೆ.

ಚಲನಚಿತ್ರ ಕಲಾವಿದರಿಗೆ 3000 ರೂಪಾಯಿ, ಮೀನುಗಾರರಿಗೆ 3000, ಮುಜುರಾಯಿ ದೇವಸ್ಥಾನ ಅರ್ಚಕರು, ಅಡುಗೆಯವರು ಸಿ ಗ್ರೂಪ್ ನೌಕರರಿಗೆ 3000 ರೂಪಾಯಿ, ಮಗ್ಗಗಳ ಕಾರ್ಮಿಕರಿಗೆ 3000, ಮಸೀದಿ ಮುಹದ್ಝಿನ್‌ಗಳಿಗೆ 3000, ಆಶಾ ಕಾರ್ಯಕರ್ತರು 3000, ಅಂಗನವಾಡಿ ಕಾರ್ಯಕರ್ತರು ಮತ್ತು ಸಹಾಯಕರಿಗೆ 2000, ಅನುದಾನರಹಿತ ಶಾಲಾ ಶಿಕ್ಷಕರಿಗೆ 5000 ಪರಿಹಾರ ನೀಡುವುದಾಗಿ ಅವರು ಹೇಳಿದ್ದಾರೆ.

ಅತಿಸಣ್ಣ-ಸಣ್ಣ-ಮಧ್ಯಮ ಕೈಗಾರಿಕೆಗಳ ವಿದ್ಯುತ್ ಶುಲ್ಕದಲ್ಲಿ ವಿನಾಯ್ತಿ, ಇತರ ಕೈಗಾರಿಕೆಗಳಿಗೆ ಮೇ,ಜೂನ್ ಶುಲ್ಕ ವಿನಾಯ್ತಿ ಹಾಗೂ ರಫ್ತು ಓರಿಯಂಟ್ ಕೈಗಾರಿಕೆ ಅನುಮತಿ ನೀಡಲಾಗಿದೆ. ಹೊಟೇಲ್‌ಗಳಲ್ಲಿ ಸಂಜೆ 6 ಗಂಟೆಯವರೆ ತೆರೆಯಲು ಅವಕಾಶ ಆದರೆ ಪಾರ್ಸೆಗ್‌ ಮಾತ್ರ ಅವಕಾಶ ನೀಡಲಾಗಿದೆ. ಜೂನ್​ 14ರ ವರೆಗೆ ವಿಸ್ತರಿಸಲಾಗುವ ಲಾಕ್​ಡೌನ್​ ಕೂಡ ಇದೇ ರೀತಿಯಾಗಿಯೆ ಇರಲಿದ್ದು, ಯಾವುದೇ ಸಡಿಲಿಕೆ ಇರುವುದಿಲ್ಲ.

ಮೇ ತಿಂಗಳ 10 ರಿಂದ 24 ರವರೆಗೆ ಮೊಲದ ಹಂತದಲ್ಲಿ ಸಂಪೂರ್ಣ ಲಾಕ್‌ಡೌನ್‌ ಅನ್ನು ರಾಜ್ಯ ಸರ್ಕಾರವು ಹೇರಿತ್ತು. ಆದರೆ ಕೊರೊನಾ ನಿಯಂತ್ರಣಕ್ಕೆ ಬಾರದ ಹಿನ್ನಲೆಯಲ್ಲಿ ಈ ಲಾಕ್‌ಡೌನ್‌ ಅನ್ನು ಮತ್ತೇ ಜೂನ್ 7 ರವರೆಗೆ ವಿಸ್ತರಿಸಲಾಗಿತ್ತು. ಇದೀಗ ಈ ಲಾಕ್‌ಡೌನ್‌ ಅನ್ನು ಮತ್ತೆ ವಿಸ್ತರಿಸಲಾಗಿದೆ.

ಮೇ 10 ರಂದು ಲಾಕ್‌ಡೌ‌ನ್ ಪ್ರಾರಂಭವಾಗುವುದಕ್ಕಿಂತ ಮೊದಲೆ ರಾಜ್ಯ ಸರ್ಕಾರವು ಕಠಿಣ ನಿರ್ಬಂಧ ಹೇರಿ ಅಘೋಷಿತ ಲಾಕ್‌ಡೌನ್‌ ಹೇರಿತ್ತು.

ರಾಜ್ಯದಲ್ಲಿ ಜಾರಿಯಲ್ಲಿರುವ ನಿರ್ಬಂಧವನ್ನು ಜೂನ್‌‌ 7 ನಂತರವೂ ವಿಸ್ತರಿಸುವ ಬಗ್ಗೆ ಜೂನ್‌‌ 5 ರಂದು ತಜ್ಞರ ಜೊತೆಗೆ ಚರ್ಚಿಸಿ ತೀರ್ಮಾನಿಸಲಾವುದು ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಕಳೆದ ಭಾನುವಾರ ಹೇಳಿದ್ದರು. ಆದರೆ ಇದೀಗ ಎರಡು ದಿನದ ಮೊದಲೆ ನಿರ್ಬಂಧ ಘೋಷಿಸಲಾಗಿದೆ.

ಭಾನುವಾರ ಮಾತನಾಡಿದ್ದ ಯಡಿಯೂರಪ್ಪ, “ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಹೆಚ್ಚಿನ ಸೋಂಕು ಪ್ರಕರಣಗಳು ವರದಿಯಾಗುತ್ತಿದೆ. ಆದರೆ, ತಜ್ಞರು ಲಾಕ್‌ಡೌನ್‌ ವಿಸ್ತರಿಸುವಂತೆ ವರದಿ ನೀಡಿಲ್ಲ. ಜೂನ್ 5 ರ ವೇಳೆಗೆ ಕೊರೊನಾ ಪರಿಸ್ಥಿತಿ ನೋಡಿಕೊಂಡು ಅಂತಿಮ ನಿರ್ಧಾರ ಕೈಗೊಳ್ಳಲಾಗುವುದು. ಕೇಂದ್ರ ಸರ್ಕಾರವು ಈಗಾಗಲೆ ರಾಜ್ಯಗಳ ಸ್ಥಿತಿಗತಿಗೆ ಅನುಗುಣವಾಗಿ ನಿರ್ಧಾರ ತೆಗೆದುಕೊಳ್ಳುವಂತೆ ಸೂಚಿಸಿದೆ” ಎಂದು ಹೇಳಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...