Homeಮುಖಪುಟಭತ್ತ ನಾಟಿಗೂ ಮುನ್ನವೇ ದೆಹಲಿ ಸೇರುತ್ತಿರುವ ರೈತರು: ಹೋರಾಟಕ್ಕೆ ಮತ್ತಷ್ಟು ಬಲ

ಭತ್ತ ನಾಟಿಗೂ ಮುನ್ನವೇ ದೆಹಲಿ ಸೇರುತ್ತಿರುವ ರೈತರು: ಹೋರಾಟಕ್ಕೆ ಮತ್ತಷ್ಟು ಬಲ

ಬುಧವಾರ ಮುಂಜಾನೆ ನೂರಾರು ರೈತರನ್ನು ಹೊತ್ತ ಸುಮಾರು 125ಕ್ಕೂ ಹೆಚ್ಚು ಟ್ರಕ್‌ಗಳು ಸಿಂಘು, ಟಿಕ್ರಿ ಗಡಿಗಳತ್ತ ಹೊರಟಿವೆ..

- Advertisement -
- Advertisement -

ಕೃಷಿ ಕಾಯ್ದೆಗಳನ್ನು ವಿರೋಧಿಸಿ ಪಂಜಾಬ್‌ನ ಲೂಧಿಯಾನದ ಗ್ರಾಮಗಳಲ್ಲಿ ತಾವಿರುವಲ್ಲಿಯೇ ಮೇ 26 ರಂದು `ಕರಾಳ ದಿನ’ವನ್ನು ಆಚರಿಸಿದ್ದ ರೈತರು ಇದೀಗ ಗಡಿಗಳತ್ತ ಪಯಣ ಬೆಳೆಸಿದ್ದಾರೆ. ನಾಟಿ ಆರಂಭವಾಗುವ ಮೊದಲೇ ರೈತ ಹೋರಾಟವನ್ನು ಬಲಗೊಳಿಸಲು ಪಂಜಾಬ್‌ನ ವಿವಿಧ ಭಾಗಗಳಿಂದ ರೈತರು ದೆಹಲಿ ಗಡಿಗಳತ್ತ ಹೊರಟಿದ್ದಾರೆ ಎಂದು ರೈತ ಸಂಘಟನೆಗಳ ಮುಖಂಡರು ತಿಳಿಸಿದ್ದಾರೆ.

ಬುಧವಾರ ಮುಂಜಾನೆ ನೂರಾರು ರೈತರನ್ನು ಹೊತ್ತ ಸುಮಾರು 125ಕ್ಕೂ ಹೆಚ್ಚು ವಾಹನಗಳು ಮುಖ್ಯವಾಗಿ ಲೂಧಿಯಾನ ಜಿಲ್ಲಯ ಜಾಗ್ರಾನ್‌, ಸುಧಾಅರ್‌, ಸಿಧ್ವಾನ್‌ ಬೆಟ್, ರಾಯ್‌ಕೋಟ್‌ ಮತ್ತು ಹಂಬ್ರನ್‌ಗಳಿಂದ ಸಿಂಘು ಮತ್ತು ಟಿಕ್ರಿ ಹೋರಾಟದ ಗಡಿಗಳತ್ತ ಹೊರಟಿದ್ದಾರೆ

`ಭಾರತೀಯ ಕಿಸಾನ್‌ ಯೂನಿಯನ್‌ (ಡಕೊಂಡಾ) ಸಂಘಟನೆಯ ಬ್ಯಾನರ್‌ನೊಂದಿಗೆ ಸುಮಾರು 700 ರೈತರು ವಾಹನಗಳ ಮೂಲಕ ದೆಹಲಿ ಗಡಿಗಳಿಗೆ ತೆರಳಿದ್ದಾರೆ. ಮುಂದಿನ ದಿನಗಳಲ್ಲಿ ಇನ್ನು ಹೆಚ್ಚಿನ ಸಂಖ್ಯೆಯಲ್ಲಿ ಜನರು ಹೋರಾಟವನ್ನು ಸೇರಿಕೊಳ್ಳಲಿದ್ದಾರೆ. ಗ್ರಾಮಗಳಲ್ಲಿ ನಡೆಯುತ್ತಿರುವ ಹೋರಾಟವು ಜೂನ್‌ 10ರವರೆಗೆ ಮುಂದುವರೆಯಲಿದೆ. ನಂತರ ರೈತರು ಭತ್ತದ ನಾಟಿ ಮಾಡುವತ್ತ ಗಮನಹರಿಸಬೇಕಾಗಬಹುದು ಎಂದು ರೈತ ಹೋರಾಟವನ್ನು ಬೆಂಬಲಿಸುವ ಇಕ್ವಿಂಲಾಬಿ ಕೇಂದ್ರ ಪಂಜಾಬ್‌ನ ಪ್ರಧಾನ ಕಾರ್ಯದರ್ಶಿ ಕಮಲ್‌ಜಿತ್ ಖನ್ನಾ ತಿಳಿಸಿದರು.

ಬಿಕೆಯು ಡಕೊಂಡಾ ಜೊತೆಯಲ್ಲಿ ಕೀರ್ತಿ ಕಿಸಾನ್‌ ಯೂನಿಯನ್‌ ಹಾಗೂ ಬಿಕೆಯು (ಉಗ್ರಹಾನ್‌) ಸಂಘಟನೆಯ ಸದಸ್ಯರು ಹೋರಾಟದ ಗಡಿಗಳಿಗೆ ಹೋಗುತ್ತಿದ್ದಾರೆ ಎಂದು ಅವರು ತಿಳಿಸಿದರು.

ರೈತರೊಂದಿಗೆ ಬಿಕೆಯು ಡಕೊಂಡ ಸಂಘಟನೆಯ ಜಿಲ್ಲಾಧ್ಯಕ್ಷರಾದ ಮೊಹಿಂದರ್‌ ಸಿಂಗ್‌, ಜಿಲ್ಲಾ ಕಾರ್ಯದರ್ಶಿ ಇಂದರ್‌ಜಿತ್‌ ಸಿಂಗ್‌ ಹಾಗೂ ಮಾಧ್ಯಮ ಕಾರ್ಯದರ್ಶಸಿ ಗುರ್ಪ್ರೀತ್‌ ಸಿಂಗ್‌ ಅವರು ಹೋರಾಟದಲ್ಲಿ ಭಾಗವಹಿಸಲಿದ್ದು, ರೈತರು ಹತ್ತು ದಿನಗಳ ಕಾಲ ಗಡಿಗಳಲ್ಲಿ ನಡೆಯುತ್ತಿರುವ ಹೋರಾಟದಲ್ಲಿ ಭಾಗವಹಿಸಲಿದ್ದಾರೆ. ಇದರಲ್ಲಿ ರೈತ ಮಹಿಳೆಯರು ಸಹ ಹೆಚ್ಚಿನ ಸಂಖ್ಯೆಯಲ್ಲಿದ್ದಾರೆ ಎಂದಿದ್ದಾರೆ.

ಬಿಕೆಯು ಲಖೋವಾಲ್‌ ಪ್ರದೇಶದ ಪ್ರಧಾನ ಕಾರ್ಯದರ್ಶಿ ಹರೀಂದರ್‌ ಸಿಂಗ್‌ ಲಖೋವಾಲ್‌ ಅವರ ಪ್ರಕಾರ, `ರಾಜ್ಯದ ವಿವಿಧ ಜೆಲ್ಲಿಗಳ ಸುಮಾರು 80-100 ರೈತರು ಮತ್ತು ಕೃಷಿ ಕಾರ್ಮಿಕರು ಬುಧವಾರ ದೆಹಲಿ ಗಡಿಗಳಿಗೆ ಹೋಗುತ್ತಿದ್ದಾರೆ. ಮುಂದಿನ ಕೆಲವು ದಿನಗಳಲ್ಲಿ ನಮ್ಮ ಹೆಚ್ಚಿನ ಸದಸ್ಯರು ಗಡಿಗಳಲ್ಲಿರುವ ಪ್ರತಿಭಟನಾಕಾರರನ್ನು ಸೇರುವ ನಿರೀಕ್ಷೆಯಿದೆ’ ಎಂದರು.

ಲೂಧಿಯಾನದ ಕೋಕ್ರಾನ್‌ ತಕ್ರಾನ್‌ ಗ್ರಾಮದ ರೈತ ರವೀಂದರ್‌ ಸಿಂಗ್‌ ಪ್ರತಿಭಟನಾ ಸ್ಥಳಕ್ಕೆ ಹೋಗುತ್ತಿರುವುದರ ಬಗ್ಗೆ ಮಾತನಾಡಿ, ಕಡು ಬಿಸಿಲಿನ ನಡುವೆಯೂ ನಾವು ಹೋರಾಟದ ಗಡಿಗಳಲ್ಲಿ ಉಳಿದುಕೊಳ್ಳಲು ಅಗತ್ಯವಿರುವ ಸಿದ್ಧತೆಗಳನ್ನು ಮಾಡುತ್ತಿದ್ದೇವೆ ಎಂದು ಅವರು ತಿಳಿಸಿದರು.

ಭತ್ತದ ನಾಟಿ ನಂತರ ಇನ್ನು ಹೆಚ್ಚು ಸಂಖ್ಯೆಯಲ್ಲಿ ರೈತರು ಹೋರಾಟದಲ್ಲಿ ಭಾಗವಹಿಸುವುದಾಗಿ ಗ್ರಾಮಸ್ಥರು ತಿಳಿಸಿದ್ದಾರೆ. ಒಟ್ಟಿನಲ್ಲಿ 6 ತಿಂಗಳು ಪೂರೈಸಿರುವ ರೈತ ಹೋರಾಟ ತನ್ನ ಕಾವು ಕಳೆದುಕೊಂಡಿಲ್ಲ. ಬದಲಿಗೆ ಮತ್ತಷ್ಟು ಬಲಶಾಲಿಯಾಗುತ್ತಿದೆ. ಜೂನ್ 05 ರಂದು ಗಡಿಗಳಲ್ಲಿ ಸುಗ್ರಿವಾಜ್ಞೆಗಳಿಗೆ ಒಂದು ವರ್ಷ ತುಂಬುತ್ತಿರುವ ಸಂದರ್ಭದಲ್ಲಿ ಸಂಪೂರ್ಣ ಕ್ರಾಂತಿ ದಿವಸ್ ಆಚರಿಸಲು ಕರೆ ನೀಡಿದ್ದಾರೆ.

ಕೃಪೆ: ಅನ್ನದ ಋಣ


ಇದನ್ನೂ ಓದಿ: ಲಾಕ್‌ಡೌನ್‌ನಿಂದ ಆರ್ಥಿಕ ನಷ್ಟ ತಾಳಲಾರದೇ ಒಂದೇ ಕುಟುಂಬದ ನಾಲ್ವರ ಆತ್ಮಹತ್ಯೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನಾಸಿಕ್‌| ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು ಬಿಟ್ಟ ಪ್ರತಿಭಟನಾಕಾರರು

ಮಹಾರಾಷ್ಟ್ರದ ನಾಸಿಕ್ ಜಿಲ್ಲೆಯ ನಿಫಾದ್ ನಗರ ಪಂಚಾಯತ್ ವ್ಯಾಪ್ತಿಯಲ್ಲಿ ಬೀದಿ ನಾಯಿಗಳ ಹಾವಳಿಯನ್ನು ಖಂಡಿಸಿ ಮತ್ತು ಅಧಿಕಾರಿಗಳ ನಿರ್ಲಕ್ಷ್ಯವನ್ನು ಖಂಡಿಸಿದ ಪ್ರತಿಭಟನಾಕಾರರ ಗುಂಪೊಂದು ನಗರ ಪಂಚಾಯತ್ ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು...

ವಿವಾಹಿತೆ ಮೇಲೆ ಅತ್ಯಾಚಾರ ಆರೋಪ : ಬಿಜೆಪಿ ಮಾಜಿ ಶಾಸಕನ ವಿರುದ್ಧ ಎಫ್‌ಐಆರ್

ಗನ್‌ ಪಾಯಿಂಟ್‌ ಇಟ್ಟು ಬೆದರಿಸಿ 22 ವರ್ಷದ ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ ಪ್ರಕರಣದಲ್ಲಿ ಮಹಾರಾಷ್ಟ್ರದ ಬಿಜೆಪಿ ಮಾಜಿ ಶಾಸಕ ಮತ್ತು ವಜಾಗೊಂಡಿರುವ ಪೊಲೀಸ್ ಸಿಬ್ಬಂದಿಯೊಬ್ಬರ ವಿರುದ್ಧ ಗುರುವಾರ (ಸೆ.17)...

ಬ್ರಿಕ್ಸ್ ಶೃಂಗಸಭೆಯಲ್ಲಿ ಸಂಪೂರ್ಣ ಸಸ್ಯಹಾರಿ ಮೆನು; ಶಿವಸೇನೆ ತೀವ್ರ ವಾಗ್ದಾಳಿ

ದೆಹಲಿಯಲ್ಲಿ ನಡೆದ 18ನೇ ಬ್ರಿಕ್ಸ್ ಶೃಂಗಸಭೆಯಲ್ಲಿ ವಿದೇಶಿ ಪ್ರತಿನಿಧಿಗಳಿಗೆ ಕೇವಲ ಸಸ್ಯಹಾರಿ ಆಹಾರವನ್ನು ಬಡಿಸಿರುವುದನ್ನು ಖಂಡಿಸಿರುವ ಶಿವಸೇನೆ (ಯುಬಿಟಿ) ಗುರುವಾರ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದೆ. ಇದು ಅಂತರರಾಷ್ಟ್ರೀಯ ಅತಿಥಿಗಳ ಮೇಲೆ...

ದೆಹಲಿ ಎಸ್‌ಐಆರ್: ಮತದಾರರ ಪಟ್ಟಿಯಿಂದ ಹೆಸರುಗಳ ಡಿಲೀಟ್ ಪ್ರಶ್ನಿಸಿ ಅರ್ಜಿ; ವಿಚಾರಣೆಗೆ ಸುಪ್ರೀಂ ಕೋರ್ಟ್ ಒಪ್ಪಿಗೆ

ದೆಹಲಿಯಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಅಭಿಯಾನದಡಿ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದನ್ನು ಪ್ರಶ್ನಿಸಿ ಸಲ್ಲಿಕೆಯಾಗಿರುವ ಅರ್ಜಿಯ ವಿಚಾರಣೆಯನ್ನು ಸೆಪ್ಟೆಂಬರ್ 21ರಂದು ನಡೆಸಲು ಸುಪ್ರೀಂ ಕೋರ್ಟ್ ಗುರುವಾರ ಒಪ್ಪಿಗೆ ಸೂಚಿಸಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್...

ಕೇರಳ | ಮಿತಿಗಿಂತ ಹೆಚ್ಚು ಮದ್ಯ ಸಂಗ್ರಹ ಆರೋಪ : ರಿಪೋರ್ಟರ್ ಟಿವಿ ಎಂಡಿ ಆಂಟೋ ಆಗಸ್ಟಿನ್ ಬಂಧನ

ಕೇರಳ ಅಬಕಾರಿ ಇಲಾಖೆಯು ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ವ್ಯವಸ್ಥಾಪಕ ನಿರ್ದೇಶಕ (ಎಂಡಿ) ಆಂಟೋ ಆಗಸ್ಟಿನ್ ಅವರನ್ನು ಗುರುವಾರ (ಸೆ.17) ಮುಂಜಾನೆ ಬಂಧಿಸಿದೆ. ಎರ್ನಾಕುಲಂನಲ್ಲಿರುವ ಸುದ್ದಿ ವಾಹಿನಿಯ ಕಚೇರಿಯಿಂದ ಮುಂಜಾನೆ ಸುಮಾರು...

ದೆಹಲಿ: ಜಾಮೀನು ಸಿಕ್ಕ ಬೆನ್ನಲ್ಲೇ ಸ್ವತಂತ್ರ ಭಾರದ್ವಾಜ್ ವಿಡಿಯೋ ವೈರಲ್; ಷರತ್ತು ಉಲ್ಲಂಘನೆ ಆರೋಪ!

ಜಂತರ್ ಮಂತರ್‌ನಲ್ಲಿ ದಲಿತ ವಿದ್ಯಾರ್ಥಿ ಹೋರಾಟಗಾರ್ತಿ ನಿಶು ಆಜಾದ್ ಅವರ ತಂದೆಯ ಮೇಲೆ ಹಲ್ಲೆ ನಡೆಸಿದ ಆರೋಪದಲ್ಲಿ ಬಂಧಿತರಾಗಿದ್ದ ಹಿಂದುತ್ವ ಪ್ರಭಾವಿ ಸ್ವತಂತ್ರ ಭಾರದ್ವಾಜ್ ಅವರಿಗೆ ದೆಹಲಿ ನ್ಯಾಯಾಲಯ ಮೂರು ವಾರಗಳ ಮಧ್ಯಂತರ...

ಸರ್ಕಾರದ ಹಸ್ತಕ್ಷೇಪದಿಂದ ಕ್ಯಾಂಪಸ್ ನಿರ್ಬಂಧದವರೆಗೆ: ಭಾರತದಲ್ಲಿ ಶೈಕ್ಷಣಿಕ ಸ್ವಾತಂತ್ರ್ಯದ ಕುಸಿತ ಬಯಲಿಗೆಳೆದ ಜಾಗತಿಕ ವರದಿ 

ಭಾರತದಲ್ಲಿ ಶೈಕ್ಷಣಿಕ ಸ್ವಾತಂತ್ರ್ಯವು ತೀವ್ರವಾಗಿ ನಿರ್ಬಂಧಿತವಾಗಿದ್ದು, ಉನ್ನತ ಶಿಕ್ಷಣ ಸಂಸ್ಥೆಗಳ ಮೇಲೆ ಸರ್ಕಾರದ ಹೆಚ್ಚುತ್ತಿರುವ ಹಸ್ತಕ್ಷೇಪ, ಕ್ಯಾಂಪಸ್‌ಗಳಲ್ಲಿ ಶೈಕ್ಷಣಿಕ ಮತ್ತು ರಾಜಕೀಯ ಅಭಿವ್ಯಕ್ತಿಯ ಮೇಲಿನ ನಿರ್ಬಂಧಗಳು, ವಿದ್ವಾಂಸರು ಹಾಗೂ ವಿದ್ಯಾರ್ಥಿಗಳ ವಿರುದ್ಧದ ಕ್ರಮಗಳು...

ಬಿಹಾರ| ದಲಿತ ಯುವಕನ ವಿವಾಹವಾದ ಯುವತಿ; ಮಗಳ ಸಾಂಕೇತಿಕ ಅಂತ್ಯಕ್ರಿಯೆ ನಡೆಸಿದ ಪೋಷಕರು

ತಮ್ಮ 18 ವರ್ಷದ ಮಗಳು ಅಂತರ್ಜಾತಿ ವಿವಾಹವಾಗಿದ್ದಕ್ಕೆ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ಪೋಷಕರು, ಆಕೆಗೆ ಸಾಂಕೇತಿಕವಾಗಿ ಅಂತ್ಯಕ್ರಿಯೆ ನಡೆಸಿದ ಘಟನೆ ಬಿಹಾರದ ಪೂರ್ಣಿಯಾದಲ್ಲಿ ಬೆಳಕಿಗೆ ಬಂದಿದೆ. ಯುವತಿಯ ಫೋಟೋವಿರುವ ಪ್ರತಿಕೃತಿಯನ್ನು ಸಿದ್ಧಪಡಿಸಿ ಊರಿನಲ್ಲಿ ಶವಯಾತ್ರೆ...

ಸ್ವಇಚ್ಛೆಯಿಂದ ಇಸ್ಲಾಂ ಸ್ವೀಕಾರ : ಆಯುಷ್ ಮಲಿಕ್‌ರನ್ನು ಗೃಹಬಂಧನದಿಂದ ಬಿಡುಗಡೆಗೊಳಿಸಿದ ಅಲಹಾಬಾದ್ ಹೈಕೋರ್ಟ್

ತಾನು ಸ್ವಇಚ್ಛೆಯಿಂದ ಇಸ್ಲಾಂ ಧರ್ಮವನ್ನು ಸ್ವೀಕರಿಸಿರುವುದಾಗಿ ಮತ್ತು ಆ ನಂತರ ತನ್ನ ತಂದೆಯೇ ತನಗೆ ಬೆದರಿಕೆ ಹಾಕಿ, ಕಾನೂನುಬಾಹಿರವಾಗಿ ಗೃಹಬಂಧನದಲ್ಲಿ ಇರಿಸಿದ್ದರು ಎಂದು ಆರೋಪಿಸಿದ್ದ ಆಯುಷ್ ಮಲಿಕ್ ಎಂಬ 31 ವರ್ಷದ ಯುವಕನನ್ನು...

ಬಿಜ್ನೋರ್‌ನಲ್ಲಿ ಮುಸ್ಲಿಂ ಶಿಕ್ಷಕನ ಗುಂಡಿಕ್ಕಿ ಹತ್ಯೆ: ‘ಲವ್ ಜಿಹಾದ್’ ಆರೋಪ; ವೈಯಕ್ತಿಕ ದ್ವೇಷದ ಬಗ್ಗೆಯೂ ಪೊಲೀಸರಿಂದ ತನಿಖೆ 

ಬಿಜ್ನೋರ್: ಉತ್ತರ ಪ್ರದೇಶದ ಬಿಜ್ನೋರ್ ಜಿಲ್ಲೆಯಲ್ಲಿ 43 ವರ್ಷದ ಮುಸ್ಲಿಂ ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕನೊಬ್ಬರನ್ನು ರೈತನೊಬ್ಬ ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆ ನಡೆದಿದೆ. ಶಿಕ್ಷಕ ನೌಶಾದ್ ಅಹ್ಮದ್ ಅವರು ‘ಲವ್ ಜಿಹಾದ್’...