Homeಕರ್ನಾಟಕಕೊರೊನಾ ಪರಿಹಾರ ಪ್ಯಾಕೇಜ್‌ಗೆ ಆಗ್ರಹಿಸಿ ಅತಿಥಿ ಉಪನ್ಯಾಸಕರ ಆನ್‌ಲೈನ್ ಪ್ರತಿಭಟನೆ

ಕೊರೊನಾ ಪರಿಹಾರ ಪ್ಯಾಕೇಜ್‌ಗೆ ಆಗ್ರಹಿಸಿ ಅತಿಥಿ ಉಪನ್ಯಾಸಕರ ಆನ್‌ಲೈನ್ ಪ್ರತಿಭಟನೆ

ಕೊರೊನಾ ಹಿನ್ನೆಲೆ ಎಷ್ಟೋ ಅತಿಥಿ ಉಪನ್ಯಾಸಕರು ಹಣ್ಣು-ಹಂಪಲು, ತರಕಾರಿ ಮಾರುತ್ತ ಜೀವನ ಸಾಗಿಸುತ್ತಿದ್ದಾರೆ. ಉದ್ಯೋಗ ಖಾತ್ರಿ ಯೋಜನೆಯಡಿ ಕೆಲಸ ಮಾಡುತ್ತಿದ್ದಾರೆ.

- Advertisement -
- Advertisement -

ಕೊರೊನಾ ಲಾಕ್‌ಡೌನ್ ಹಿನ್ನೆಲೆ ಪರಿಹಾರ ಪ್ಯಾಕೇಜ್ ಸೇರಿದಂತೆ ವಿವಿಧ ಬೇಡಿಕೆಯನ್ನು ಈಡೇರಿಸಲು ಆಗ್ರಹಿಸಿ ಕರ್ನಾಟಕ ರಾಜ್ಯ ಅತಿಥಿ ಉಪನ್ಯಾಸಕರ ಹೋರಾಟ ಸಮಿತಿಯ ಕರೆಯ ಮೇರೆಗೆ ಅತಿಥಿ ಉಪನ್ಯಾಸಕರು ರಾಜ್ಯ ವ್ಯಾಪಿ ಆನ್‌ಲೈನ್ ಪ್ರತಿಭಟನೆ ನಡೆಸಿದ್ದಾರೆ.

ಕೊರೊನಾ ಹಿನ್ನಲೆಯಲ್ಲಿ ಉದ್ಯೋಗವಿಲ್ಲದೇ ಇರುವ ಅತಿಥಿ ಉಪನ್ಯಾಸಕರಿಗೆ ‘ಪರಿಹಾರ ಪ್ಯಾಕೇಜ್’ ಘೋಷಣೆ ಮಾಡಬೇಕು. ಕೊರೊನಾದಿಂದ ಮೃತಪಟ್ಟ ಅತಿಥಿ ಉಪನ್ಯಾಸಕರಿಗೆ ಸೂಕ್ತ ಪರಿಹಾರ ಒದಗಿಸಬೇಕು. ಈಗ ನಡೆಯುತ್ತಿರುವ ಆನ್‌ಲೈನ್ ತರಗತಿಗಳಿಗೆ ಈ ಹಿಂದೆ ಕಾರ್ಯನಿರ್ವಹಿಸಿದ ಎಲ್ಲಾ ಅತಿಥಿ ಉಪನ್ಯಾಸಕರನ್ನು ನಿಯೋಜಿಸಿ, ಸೇವಾಭದ್ರತೆ ಖಾತ್ರಿಪಡಿಸಬೇಕು ಎಂದು ಅತಿಥಿ ಉಪನ್ಯಾಸಕರು ಆಗ್ರಹಿಸಿದ್ದಾರೆ.

ರಾಜ್ಯದಾದ್ಯಂತ ಅತಿಥಿ ಉಪನ್ಯಾಸಕರು ತಾವಿರುವ ಊರು, ಪಟ್ಟಣ ಹಾಗೂ ನಗರಗಳಲ್ಲಿ ಬೇಡಿಕೆಯ ಭಿತ್ತಿಪತ್ರ ಹಿಡಿದು ಪ್ರತಿಭಟನೆ ನಡೆಸಿದರು. ಸರ್ಕಾರ ತಮ್ಮ ಸಮಸ್ಯೆಯನ್ನು ಪರಿಗಣಿಸಿ ಪರಿಹರಿಸುವಂತೆ ಮನವಿ ಮಾಡಿದರು. ಸಾಮಾಜಿಕ ಜಾಲತಾಣಗಳಲ್ಲಿ ತಮ್ಮ ಸಮಸ್ಯೆ ಕುರಿತು ಪ್ರಚಾರ ನಡೆಸಿದರು. ಕೆಲವು ಕಡೆಗಳಲ್ಲಿ  ನಿಯೋಗದ ಮೂಲಕ ಜಿಲ್ಲಾ ಮತ್ತು ತಾಲೂಕಿನ ಅಧಿಕಾರಿಗಳ ಮೂಲಕ ಮಾನ್ಯ ಮುಖ್ಯಮಂತ್ರಿಗಳಿಗೆ ಮನವಿ ಪತ್ರವನ್ನು ಸಲ್ಲಿಸಿದರು.

ಇದನ್ನೂ ಓದಿ: ಕನ್ನಡವನ್ನು ಕೊಳಕು ಭಾಷೆ ಎಂದು ತೋರಿಸಿದ್ದ ವೆಬ್‌ಸೈಟ್, ಕನ್ನಡಿಗರ ಆಕ್ರೋಶಕ್ಕೆ ಮಣಿದ ಗೂಗಲ್

ರಾಜ್ಯವ್ಯಾಪಿ ಸುಮಾರು 14,500ಕ್ಕೂ ಹೆಚ್ಚು ಅತಿಥಿ ಉಪನ್ಯಾಸಕರು 413 ಸರ್ಕಾರಿ ಪದವಿ ಕಾಲೇಜುಗಳಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ. ಕೋವಿಡ್ ಲಾಕ್‌ಡೌನ್ ಹಾಗೂ ಹಿಂದಿನ ಸೆಮಿಸ್ಟರ್‌ನಲ್ಲಿ ಕಡಿಮೆ ಅವಧಿಗೆ ಅತಿಥಿ ಉಪನ್ಯಾಸಕರನ್ನು ಸೇವೆಗೆ ನಿಯೋಜಿಸಿದ್ದರಿಂದ, ಸರಿಯಾದ ವೇತನ ಸಿಗದೇ ಸಮಸ್ಯೆಗಳು ಉಲ್ಬಣಗೊಂಡಿವೆ. ಈ ಅವಧಿಯಲ್ಲಿ ಆರ್ಥಿಕ ಮುಗ್ಗಟ್ಟಿಗೆ ಸಿಲುಕಿ, ಹಲವಾರು ಅತಿಥಿ ಉಪನ್ಯಾಸಕರು ಕೊರೊನಾದಿಂದ ಮೃತಪಟ್ಟಿದ್ದಾರೆ. ಆತ್ಮಹತ್ಯೆಗೆ ಒಳಗಾಗಿದ್ದಾರೆ ಎಂದು ಆರೋಪಿಸಿದ್ದಾರೆ.

ಕೊರೊನಾ ಹಿನ್ನೆಲೆ ಎಷ್ಟೋ ಅತಿಥಿ ಉಪನ್ಯಾಸಕರು ಹಣ್ಣು-ಹಂಪಲು, ತರಕಾರಿ ಮಾರುತ್ತ ಜೀವನ ಸಾಗಿಸುತ್ತಿದ್ದಾರೆ. ಉದ್ಯೋಗ ಖಾತ್ರಿ ಯೋಜನೆಯಡಿ ಕೆಲಸ ಮಾಡುತ್ತಿದ್ದಾರೆ. ಆರ್ಥಿಕ ಹೊರೆಯ ಜೊತೆಯಲ್ಲಿ ಮಾನಸಿಕ ಒತ್ತಡವೂ ಅವರನ್ನು ತೀವ್ರವಾಗಿ ಕುಗ್ಗಿಸಿದೆ ಎಂದು ತಮ್ಮ ನೋವು ತೋಡಿಕೊಂಡಿದ್ದಾರೆ.

2020-21ನೇ ಸಾಲಿನ ಪದವಿ ತರಗತಿಗಳು ಪ್ರಾರಂಭವಾದಾಗ ಇಲಾಖೆ ಕೇವಲ ಶೇ.50ರಷ್ಟು ಅತಿಥಿ ಉಪನ್ಯಾಸಕರನ್ನು ಸೇವೆಗೆ ನಿಯೋಜನೆಗೊಳಿಸಿತ್ತು. ನಂತರ ಆಗ್ರಹದ ಮೇರೆಗೆ ಎಲ್ಲರನ್ನೂ ಸೇವೆಗೆ ಸೇರಿಸಿಕೊಂಡಿದೆ. ಪ್ರತಿ ಬಾರಿಯು ನಾವು ನಮ್ಮ ಬೇಡಿಕೆಗಳ ಈಡೇರಿಕೆಗಳಿಗಾಗಿ ಪ್ರತಿಭಟನೆ ನಡೆಸುತ್ತಿದ್ದೇವೆ. ಈ ಕೊರೊನಾ ಸಾಂಕ್ರಾಮಿಕ ನಮ್ಮನ್ನು ಮತ್ತಷ್ಟು ಸಂಕಷ್ಟಕ್ಕೆ ನೂಕಿದೆ ಎಂದು ನೋವು ತೋಡಿಕೊಂಡಿದ್ದಾರೆ.

ಪ್ರಸ್ತುತ ಸೆಮಿಸ್ಟರ್‌ಗಳಿಗೆ ಈ ಹಿಂದೆ ಕಾರ‍್ಯನಿರ್ವಹಿಸಿದ ಎಲ್ಲಾ ಅತಿಥಿ ಉಪನ್ಯಾಸಕರನ್ನು ಸೇವೆಗೆ ಸೇರಿಸಿಕೊಳ್ಳಲು ಹಾಗೂ ಆನ್‌ಲೈನ್ ತರಗತಿಗಳನ್ನು ನಡೆಸಲು ಅವರ ಸೇವೆ ಪಡೆಯಲು ಕಾಲೇಜು ಶಿಕ್ಷಣ ಇಲಾಖೆ ಸುತ್ತೋಲೆ ಹೊರಡಿಸಿದೆ. ಆದರೆ ಹಲವಾರು ಅತಿಥಿ ಉಪನ್ಯಾಸಕರನ್ನು ಈವರೆಗೂ ಸೇವೆಗೆ ಸೇರಿಸಿಕೊಂಡಿಲ್ಲ. ಕೊರೊನಾದಿಂದ ಮೃತಪಟ್ಟ ಅತಿಥಿ ಉಪನ್ಯಾಸಕರ ಕುಟುಂಬಗಳು ತೀವ್ರ ಸಂಕಷ್ಟದಲ್ಲಿವೆ. ಆದ್ದರಿಂದ ಈ ಕೂಡಲೇ ನಮ್ಮ ಈ  ಬೇಡಿಕೆಗಳನ್ನು ಈಡೇರಿಸಬೇಕು ಎಂದು ಅತಿಥಿ ಉಪನ್ಯಾಸಕರು ಮನವಿ ಪತ್ರದಲ್ಲಿ ಆಗ್ರಹಿಸಿದ್ದಾರೆ.

ರಾಯಚೂರು, ವಿಜಯಪುರ. ಕಲಬುರ್ಗಿ, ಬಳ್ಳಾರಿ, ದಾವಣಗೆರೆ, ಮೈಸೂರು, ಚಿಕ್ಕಬಳ್ಳಾಪುರ, ಕೋಲಾರ, ಧಾರವಾಡ, ಬೆಳಗಾವಿ, ರಾಮನಗರ, ಕೊಪ್ಪಳ, ಬೀದರ್ ಮುಂತಾದ ಜಿಲ್ಲೆಗಳಲ್ಲಿ ಅತಿಥಿ ಉಪನ್ಯಾಸಕರು ತಾವಿರುವ ಸ್ಥಳದಿಂದಲೇ ಪ್ರತಿಭಟನೆ ನಡೆಸಿದ್ದಾರೆ.


ಇದನ್ನೂ ಓದಿ: ವೇತನ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಆಶಾ ಕಾರ್ಯಕರ್ತೆಯರ ಆನ್‌ಲೈನ್ ಪ್ರತಿಭಟನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...