Homeಕರ್ನಾಟಕರಾಜ್ಯ ಸಾರಿಗೆಗೆ ಬಾಬಾಸಾಹೇಬ್ ಸಾರಿಗೆ ಸಂಸ್ಥೆ ಎಂದು ಮರುನಾಮಕರಣ ಮಾಡಲು ಸಂಸದೆ ಸುಮಲತಾ ಮನವಿ

ರಾಜ್ಯ ಸಾರಿಗೆಗೆ ಬಾಬಾಸಾಹೇಬ್ ಸಾರಿಗೆ ಸಂಸ್ಥೆ ಎಂದು ಮರುನಾಮಕರಣ ಮಾಡಲು ಸಂಸದೆ ಸುಮಲತಾ ಮನವಿ

- Advertisement -
- Advertisement -

ರಾಜ್ಯ ಸಾರಿಗೆಯ ‘ಕೆಎಸ್‌ಆರ್‌‌ಟಿಸಿ’ ಎಂಬ ಹೆಸರನ್ನು ಕರ್ನಾಟಕ ರಾಜ್ಯ ಸಾರಿಗೆ ನಿಗಮವು ಕಳೆದುಕೊಂಡಿದೆ. ಹಲವು ಮಂದಿ ಹೊಸ ಹೆಸರುಗಳನ್ನು ಸೂಚಿಸುತ್ತಿದ್ದು, ಸಂಸದೆ ಸುಮಲತಾ ಅಂಬರೀಶ್ ಸಂವಿಧಾನ ಶಿಲ್ಪಿಯ ನೆನಪಿನಲ್ಲಿ ’ಬಾಬಾಸಾಹೇಬ್ ಸಾರಿಗೆ ಸಂಸ್ಥೆ’ ಎಂದು ಮರುನಾಮಕರಣ ಮಾಡಲು ಮನವಿ ಮಾಡಿದ್ದಾರೆ.

ಕೇಂದ್ರ ಟ್ರೇಡ್ ಮಾರ್ಕ್ಸ್ ರಿಜಿಸ್ಟ್ರಿಯು ‘ಕೆಎಸ್‌ಆರ್‌ಟಿಸಿ’ ಹೆಸರು ಕೇರಳ ರಾಜ್ಯ ರಸ್ತೆ ಸಾರಿಗೆ ನಿಗಮಕ್ಕೆ ಸೇರಿದೆ ಎಂದು ತೀರ್ಪು ನೀಡಿರುವ ಹಿನ್ನೆಲೆ ಇನ್ನು ಮುಂದಕ್ಕೆ ಕರ್ನಾಟಕವು ‘ಕೆಎಸ್‌ಆರ್‌ಟಿಸಿ’ ಎಂಬ ಹೆಸರನ್ನು ಬಳಸುವಂತಿಲ್ಲ.

ಕರ್ನಾಟಕ ರಾಜ್ಯ ಸಾರಿಗೆಗೆ ಮುಂದೆ ಯಾವ ಹೆಸರಿಡಬೇಕೆಂದು ಸಾಮಾಜಿಕ ಜಾಲತಾಣದಲ್ಲಿ ಭಾರಿ ಚರ್ಚೆ ನಡೆಯುತ್ತಿದೆ. ಈ ವೇಳೆ ಹಲವು ಮಂದಿ ಕಡೆಗಣಿಸಲ್ಪಟ್ಟಿರುವ ಹಲವು ನಾಯಕರ ಹೆಸರನ್ನು ಸೂಚಿಸಿದ್ದಾರೆ. ಸಂಸದೆ ಸುಮಲತಾ ಅಂಬರೀಶ್, ಅಂಬೇಡ್ಕರ್​ ಅವರ ಸ್ಮರಣೆಯಲ್ಲಿ ಬಾಬಾ ಸಾಹೇಬ್​ ಸಾರಿಗೆ ಸಂಸ್ಥೆ ಎಂದು ಹೆಸರಿಡಬೇಕೆಂದು ಸಾರಿಗೆ ಸಚಿವರಿಗೆ ಪತ್ರ ಬರೆದಿದ್ದಾರೆ.

ಇದನ್ನೂ ಓದಿ: ಕನ್ನಡವನ್ನು ಕೊಳಕು ಭಾಷೆ ಎಂದು ತೋರಿಸಿದ್ದ ವೆಬ್‌ಸೈಟ್, ಕನ್ನಡಿಗರ ಆಕ್ರೋಶಕ್ಕೆ ಮಣಿದ ಗೂಗಲ್

 

ರಾಜ್ಯದ ಉಪ ಮುಖ್ಯಮಂತ್ರಿ ಮತ್ತು ಸಾರಿಗೆ ಸಚಿವ ಲಕ್ಷ್ಮಣ್ ಸವದಿಗೆ ಪತ್ರ ಬರೆದಿರುವ ಸುಮಲತಾ, ರಾಜ್ಯದ ಮೂಲೆ ಮೂಲೆಗಳಿಗೆ ತಲುಪಿ ಪ್ರಯಾಣಿಕರನ್ನು ಒಂದೆಡೆಯಿಂದ ಮತ್ತೊಂದೆಡೆಗೆ ತಲುಪಿಸುವ ಕೆಎಸ್‌ಆರ್‌ಟಿಸಿ ಬಸ್‌ಗಳ ಸೇವೆಯ ಟ್ರೆಡ್ ಮಾರ್ಕ್ 27 ವರ್ಷಗಳ ಕಾನೂಣು ಹೋರಾಟದ ನಂತರ ಕೇರಳದ ಪಾಲಾಗಿದೆ. ಈ ಹಿನ್ನೆಲೆ ಕರ್ನಾಟಕ ಸಾರಿಗೆಗೆ ಸಂವಿಧಾನ ಶಿಲ್ಪಿ ಡಾ.ಅಂಬೇಡ್ಕರ್‌ ಅವರ ನೆನಪಿನಾರ್ಥವಾಗಿ ’ಬಾಬಾಸಾಹೇಬ್ ಸಾರಿಗೆ ಸಂಸ್ಥೆ’ ಎಂದು ಮರುನಾಮಕರಣ ಮಾಡಲು ರಾಜ್ಯ ಸರ್ಕಾರವನ್ನು ಮನವಿ ಮಾಡಿಕೊಳ್ಳುತ್ತೇನೆ’ ಎಂದಿದ್ದಾರೆ.

ಕೇರಳ ಮತ್ತು ಕರ್ನಾಟಕದ ಸಾರಿಗೆ ಇಲಾಖೆಗಳ ನಡುವಿನ ಏಳು ವರ್ಷಗಳ ಕಾನೂನು ಹೋರಾಟದ ಅಂತಿಮ ತೀರ್ಪು ಬುಧವಾರ ಪ್ರಕಟವಾಗಿದ್ದು, ‘ಕೇಂದ್ರ ವ್ಯಾಪಾರ ಗುರುತು ನೋಂದಾವಣೆ’ಯು ‘ಕೆಎಸ್‌ಆರ್‌ಟಿಸಿ’ ಎಂಬ ಸಂಕ್ಷಿಪ್ತ ಹೆಸರು ಕೇರಳ ರಸ್ತೆ ಸಾರಿಗೆಗೆ ಸೇರಿದೆ ಎಂದು ಹೇಳಿದೆ.  ಇದರ ಜೊತೆಗೆ ಕೇರಳವು ‘ಆನವಂಡಿ’ ಎಂಬ ಬಸ್ ಸೇವೆಯ ಜನಪ್ರಿಯ ಅಡ್ಡಹೆಸರಿನ ಮಾಲೀಕತ್ವವನ್ನು ಪಡೆದುಕೊಂಡಿದೆ.


ಇದನ್ನೂ ಓದಿ: ‘ಕೆಎಸ್‌ಆರ್‌‌ಟಿಸಿ’ ಬ್ರಾಂಡ್‌ ನೇಮ್‌ ಕಳೆದುಕೊಂಡ ಕರ್ನಾಟಕ! ಸಾರಿಗೆ ಸಚಿವ ಹೇಳಿದ್ದೇನು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

3 COMMENTS

  1. ಈ ದೇಶಕ್ಕೆ ಬೃಹತ್ ಸಂವಿಧಾನ ನೀಡಿರುವ ಎಲ್ಲರ ಸಮಾನತೆ ಬಯಸಿದ ಬಾಬಾ ಸಾಹೇಬ್ ಅಂಬೇಡ್ಕರ್ ರವರ ಸಾರಿಗೆ ಸಂಸ್ಥೆಗೆ ನಾಮಕರಣ ಮಾಡೋದು ಒಳ್ಳೆಯ ನಿರ್ಧಾರ. ಪ್ರತಿಯೊಬ್ಬರಿಗೂ ಸಂವಿಧಾನದ ಹಾಗೂ ಅಂಬೇಡ್ಕರ್ ರವರ ಮಹತ್ವ ಗೊತ್ತಾಗಲೀ …. ಬಿಕೆಕುಮಾರ್ ಬೆಳಕವಾಡಿ

  2. ಮಂಡ್ಯ ಸಂಸದೆ ಶ್ರೀಮತಿ ಸುಮಲತಾ ಅಂಬರೀಷ್ ರವರಿಗೆ ಕೋಟಿ ಧನ್ಯವಾದಗಳು

  3. ಹೌದು, ಇದೊಂದು ಅತ್ಯುತ್ತಮ ಸಲಹೆ ಮತ್ತು ಎರಡನೆಯ ಯೋಚನೆಯ ಅವಶ್ಯಕತೆ ಇಲ್ಲ.

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...