Homeಮುಖಪುಟ4 ದಶಕಗಳಲ್ಲಿ ಕರಾಳ ಆರ್ಥಿಕ ವರ್ಷ: ಜಿಡಿಪಿ ಕುಸಿತಕ್ಕೆ ಚಿದಂಬರಂ ಕಿಡಿ

4 ದಶಕಗಳಲ್ಲಿ ಕರಾಳ ಆರ್ಥಿಕ ವರ್ಷ: ಜಿಡಿಪಿ ಕುಸಿತಕ್ಕೆ ಚಿದಂಬರಂ ಕಿಡಿ

- Advertisement -
- Advertisement -

ಸೋಮವಾರ ಸರ್ಕಾರ ಬಿಡುಗಡೆ ಮಾಡಿದ ಜಿಡಿಪಿ ಅಂಕಿಅಂಶಗಳು ಆರ್ಥಿಕತೆಯು ಈ ವರ್ಷ ಶೇಕಡಾ 7.3 ರಷ್ಟು ಕುಗ್ಗಿದೆ ಎಂದು ತೋರಿಸಿವೆ. ನಾಲ್ಕು ದಶಕಗಳಲ್ಲಿ ಇದು ಕೆಟ್ಟ ಸಾಧನೆ ಎಂದು ಮಾಜಿ ಹಣಕಾಸು ಸಚಿವ ಪಿ. ಚಿದಂಬರಂ ಹೇಳಿದ್ದಾರೆ.

‘2020-21ರ ಆರ್ಥಿಕ ವರ್ಷವು, ನಾಲ್ಕು ದಶಕಗಳಲ್ಲಿ ಆರ್ಥಿಕತೆಯ ಕರಾಳ ವರ್ಷ. ಇದು ದಾಖಲೆಯ ಋಣಾತ್ಮಕ ಬೆಳವಣಿಗೆಗೆ ಕಾರಣವಾಗಿದೆ ಮತ್ತು ಎರಡು ವರ್ಷಗಳ ಹಿಂದೆ ಇದ್ದ ಬಡ ಭಾರತೀಯರಿಗಿಂತ ಹೆಚ್ಚಿನ ಭಾರತೀಯರನ್ನು ಬಡವರನ್ನಾಗಿ ಮಾಡಿದೆ” ಎಂದು ಕಾಂಗ್ರೆಸ್ ಸಂಸದ ಪಿ.ಚಿದಂಬರಂ ಹೇಳಿದ್ದಾರೆ ಎಂದು ಎನ್‌ಡಿಟಿವಿ ವರದಿ ಮಾಡಿದೆ..

ಚಿದಂಬರಂ ಅವರು ಜನರನ್ನು ದಾರಿತಪ್ಪಿಸಿದ್ದಕ್ಕಾಗಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. “2020-21 ನಾಲ್ಕು ದಶಕಗಳಲ್ಲಿ ಆರ್ಥಿಕತೆಯ ಕರಾಳ ವರ್ಷವಾಗಿದೆ. ನಾಲ್ಕು ತ್ರೈಮಾಸಿಕಗಳಲ್ಲಿನ ಸಾಧನೆ ಈ ಕಥೆಯನ್ನು ಹೇಳುತ್ತದೆ. ಮೊದಲ ಎರಡು ತ್ರೈಮಾಸಿಕಗಳು ಆರ್ಥಿಕ ಹಿಂಜರಿತಕ್ಕೆ ಸಾಕ್ಷಿಯಾಗಿವೆ (ಶೇಕಡಾ -24.4 ಮತ್ತು -7.4). ಮೂರನೆಯ ಮತ್ತು ನಾಲ್ಕನೇ ತ್ರೈಮಾಸಿಕಗಳು ಚೇತರಿಕೆಗೆ ಕಾರಣವಾಗಲಿಲ್ಲ” ಎಂದು ಚಿದಂಬರಂ ಹೇಳಿದ್ದಾರೆ.

“ಅಲ್ಪ ಪ್ರಮಾಣದ” ಸಕಾರಾತ್ಮಕ 3ನೇ ತ್ರೈಮಾಸಿಕ ಮತ್ತು 4ನೇ ತ್ರೈಮಾಸಿಕ ದರಗಳನ್ನು (ಶೇ.-0.5 ಮತ್ತು 1.6) ಹಿಂದಿನ ವರ್ಷದ ತ್ರೈಮಾಸಿಕಗಳ ದರಗಳ (ಶೇ.3.3 ಮತ್ತು 3.0) ಹಿನ್ನೆಲೆಯಲ್ಲಿ ನೋಡಬೇಕು’ ಎಂದು ಅವರು ಹೇಳಿದ್ದಾರೆ.

ಸೋಮವಾರ ರಾಷ್ಟ್ರೀಯ ಸಂಖ್ಯಾಶಾಸ್ತ್ರ ಕಚೇರಿ (ಎನ್‌ಎಸ್‌ಎಸ್‌ಒ) ಬಿಡುಗಡೆ ಮಾಡಿದ ಜಿಡಿಪಿ ಸಂಖ್ಯೆಗಳು ಆರ್ಥಿಕತೆ ಕಳೆದ ವರ್ಷಕ್ಕೆ ಹೋಲಿಸಿದರೆ ಶೇಕಡಾ 7.3 ರಷ್ಟು ಕುಗ್ಗಿದೆ ಎಂದು ತೋರಿಸಿದೆ. ಇದು 40 ವರ್ಷಗಳ ಅವಧಿಯಲ್ಲಿ ಮಾಡಿದ ಅತಿ ಕೆಟ್ಟ ಸಾಧನೆಯಾಗಿದೆ.

“ಕಳೆದ ವರ್ಷ ಸಾಂಕ್ರಾಮಿಕ ರೋಗದ ಮೊದಲ ಅಲೆ ಕಡಿಮೆಯಾದಾಗ, ಸರ್ಕಾರದ ಹಣಕಾಸು ಸಚಿವರು ಮತ್ತು ಅವರ ಮುಖ್ಯ ಆರ್ಥಿಕ ಸಲಹೆಗಾರ (ಕೆ ಸುಬ್ರಮಣಿಯನ್) ಚೇತರಿಕೆಯ ಕಥೆಯನ್ನು ಮಾರಾಟ ಮಾಡಲು ಪ್ರಾರಂಭಿಸಿದರು. ಇದು ಸುಳ್ಳು ಕಥೆ ಮತ್ತು ನಾವು ಇದಕ್ಕೆ ನಮ್ಮ ಬಲವಾದ ಪ್ರತಿರೋಧವನ್ನು ವ್ಯಕ್ತಪಡಿಸಿದ್ದೇವೆ, ಚೇತರಿಕೆಯ ಯಾವುದೇ ಲಕ್ಷಣಗಳಿಲ್ಲ ಎಂದು ಆಗಲೇ ಎಚ್ಚರಿಸಿದ್ದೇವೆ. ಬಡವರಿಗೆ ನೇರ ಹಣ ವರ್ಗಾವಣೆ ಸೇರಿದಂತೆ ಆರ್ಥಿಕತೆಗೆ ಬಲವಾದ ಪ್ರಚೋದನೆಯ ಅಗತ್ಯವಿದೆ ಎಂದು ನಾವು ಗಮನ ಸೆಳೆದಿದ್ದೇವೆ. ಉಚಿತ ಪಡಿತರ ವಿತರಣೆ ಮಾಡಬೇಕೆಂದು ಆಗ್ರಹಿಸಿದ್ದೇವೆ. ಆದರೆ ನಮ್ಮ ಮನವಿ ಕಿವುಡ ಸರ್ಕಾರಕ್ಕೆ ಕೇಳಲಿಲ್ಲ ಮತ್ತು ಇದರ ಫಲಿತಾಂಶವು ನಕಾರಾತ್ಮಕ ಬೆಳವಣಿಗೆಯಾಗಿದೆ” ಎಂದು ಅವರು ಹೇಳಿದ್ದಾರೆ.

‘ತಲಾ ಜಿಡಿಪಿ ಕಳೆದ ವರ್ಷಕ್ಕಿಂತ ಶೇಕಡಾ 8.2 ರಷ್ಟು ಕುಸಿತ ಕಂಡಿದೆ. ಇದರಿಂದ ಎರಡು ವರ್ಷಗಳ ಹಿಂದೆ ಇದ್ದುದಕ್ಕಿಂತ ಹೆಚ್ಚಿನ ಭಾರತೀಯರು ಈಗ ಬಡವರಾಗಿದ್ದಾರೆ’ ಎಂದು ಅವರು ಹೇಳಿದ್ದಾರೆ.

ಚಿದಂಬರಂ ಅವರು ನಿರುದ್ಯೋಗದ ಬಗ್ಗೆ CMIE ವರದಿಯನ್ನು ಎತ್ತಿ ತೋರಿಸಿದ್ದಾರೆ. ಎರಡನೇ ಕೋವಿಡ್ ಅಲೆಯಿಂದಾಗಿ ಒಂದು ಕೋಟಿಗೂ ಹೆಚ್ಚು ಜನರು ಉದ್ಯೋಗ ಕಳೆದುಕೊಂಡಿದ್ದಾರೆ ಎಂದು ವರದಿ ಹೇಳುತ್ತದೆ. ಕಳೆದ ವರ್ಷ ಜನವರಿಯಲ್ಲಿ ಸಾಂಕ್ರಾಮಿಕ ರೋಗವು ಭಾರತವನ್ನು ಅಪ್ಪಳಿಸಿದ ನಂತರ 97 ಪ್ರತಿಶತದಷ್ಟು ಕುಟುಂಬಗಳ ಆದಾಯ ಕಡಿಮೆಯಾಗಿದೆ ಎಂದು ವರದಿ ಹೇಳಿದೆ.

“ಸಾಂಕ್ರಾಮಿಕ ರೋಗದಿಂದಾಗಿ ಆರ್ಥಿಕತೆಯ ದುಸ್ಥಿತಿ ಸಹಜ. ಆದರೆ ಇದು ಬಿಜೆಪಿ ನೇತೃತ್ವದ ಎನ್‌ಡಿಎಯ ಕೆಟ್ಟ ಆರ್ಥಿಕ ನಿರ್ವಹಣೆಯಿಂದ ಇನ್ನಷ್ಟು ಹೆಚ್ಚಾಗಿದೆ” ಎಂದು ಚಿದಂಬರಂ ಅಭಿಪ್ರಾಯ ಪಟ್ಟಿದ್ದಾರೆ.

‘ಸರ್ಕಾರವು ಎಚ್ಚರಗೊಳ್ಳಬೇಕು, ಅದರ ದೋಷಗಳನ್ನು ಒಪ್ಪಿಕೊಳ್ಳಬೇಕು, ಅದರ ನೀತಿಗಳನ್ನು ಹಿಂಪಡೆಯಬೇಕು ಮತ್ತು ಅರ್ಥಶಾಸ್ತ್ರಜ್ಞರು ಮತ್ತು ಪ್ರತಿಪಕ್ಷಗಳ ಸಲಹೆಯನ್ನು ಗಮನಿಸಬೇಕು” ಎಂದು ಅವರು ಎಚ್ಚರಿಸಿದ್ದಾರೆ.


ಇದನ್ನೂ ಓದಿ: 2,250 ಕೋಟಿ ರೂ ಖರ್ಚು ಮಾಡಿ ಮೋದಿ ಸರ್ಕಾರ ಖರೀದಿಸಿದ ವೆಂಟಿಲೇಟರ್‌ಗಳು ಕೆಲಸ ಮಾಡುತ್ತಿಲ್ಲವೇಕೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸುಪ್ರೀಂ ಕೋರ್ಟ್ ನಿರ್ದೇಶನದ ಹೊರತಾಗಿಯೂ ಮುಂದುವರೆದ ಬುಲ್ಡೋಝರ್ ಅ’ನ್ಯಾಯ’ : ಯುಪಿ ಸರ್ಕಾರಕ್ಕೆ ಅಲಾಹಾಬಾದ್‌ ಹೈಕೋರ್ಟ್‌ ಛೀಮಾರಿ

ಉತ್ತರ ಪ್ರದೇಶದ ಸರ್ಕಾರದ "ಬುಲ್ಡೋಝರ್ ಅನ್ಯಾಯ" ವಿರುದ್ಧ ಸುಪ್ರೀಂ ಕೋರ್ಟ್ 2024ರ ನವೆಂಬರ್‌ನಲ್ಲಿ ಕಟ್ಟುನಿಟ್ಟಾದ ತೀರ್ಪು ನೀಡಿದ್ದರೂ, ದಂಡನಾತ್ಮಕ ಕ್ರಮವಾಗಿ ಕಟ್ಟಡಗಳನ್ನು ಉರುಳಿಸುವ ಪ್ರಕ್ರಿಯೆ ಇನ್ನೂ ಮುಂದುವರಿಯುತ್ತಿರುವುದರ ಬಗ್ಗೆ ಅಲಹಾಬಾದ್ ಹೈಕೋರ್ಟ್ ತೀವ್ರ...

‘ಕಾಶ್ಮೀರಿಗಳ ವಿರುದ್ಧ ಗುಂಪು ಹಿಂಸಾಚಾರಕ್ಕೆ ರಾಜ್ಯ ಸರ್ಕಾರ ಪ್ರೋತ್ಸಾಹಿಸುತ್ತಿದೆ’: ಮೆಹಬೂಬಾ ಮುಫ್ತಿ ಆರೋಪ

ಶ್ರೀನಗರ: ಕೇಂದ್ರಾಡಳಿತ ಪ್ರದೇಶದ ಹೊರಗೆ ಕಾಶ್ಮೀರಿಗಳ ವಿರುದ್ಧ ಗುಂಪು ಹಿಂಸಾಚಾರಕ್ಕೆ ರಾಜ್ಯ ಸರ್ಕಾರಗಳು ಪ್ರೋತ್ಸಾಹ ನೀಡುತ್ತಿರುವಂತೆ ಕಾಣುತ್ತಿದೆ, ಕಾನೂನಿನ ಆಡಳಿತವನ್ನು ದ್ವೇಷವು ಬದಲಾಯಿಸಲು ಅವಕಾಶ ನೀಡುತ್ತದೆ ಎಂದು ಪಿಡಿಪಿ ಅಧ್ಯಕ್ಷೆ ಮೆಹಬೂಬಾ ಮುಫ್ತಿ...

ಭಾರತ-ಅಮೆರಿಕ ವ್ಯಾಪಾರ ಒಪ್ಪಂದ | ಒತ್ತಡಕ್ಕೆ ಮಣಿದು ಪ್ರಧಾನಿ ರಾಜಿ ಮಾಡಿಕೊಂಡಿದ್ದಾರೆ, ದೇಶವನ್ನು ಮಾರಿದ್ದಾರೆ : ರಾಹುಲ್ ಗಾಂಧಿ

ಭಾರತ-ಅಮೆರಿಕ ವ್ಯಾಪಾರ ಒಪ್ಪಂದ ಸಂಬಂಧ ಪ್ರಧಾನಿ ನರೇಂದ್ರ ಮೋದಿ ವಿರುದ್ದ ವಿಪಕ್ಷ ನಾಯಕ ರಾಹುಲ್ ಗಾಂಧಿ ಮಂಗಳವಾರ (ಫೆ.3) ತೀವ್ರ ವಾಗ್ದಾಳಿ ನಡೆಸಿದ್ದು, "ಪ್ರಧಾನಿ ರಾಜಿ ಮಾಡಿಕೊಂಡಿದ್ದಾರೆ, ದೇಶವನ್ನು ಮಾರಿದ್ದಾರೆ" ಎಂದು ಆರೋಪಿಸಿದರು. ಸಂಸತ್ತಿನ...

ಧರ್ಮಸ್ಥಳ ಪ್ರಕರಣದ ಚರ್ಚೆ ವೇಳೆ ಹಲ್ಲೆಗೆ ಯತ್ನ; ವಸಂತ್ ಗಿಳಿಯಾರ್, ಪುನೀತ್ ಕೆರೆಹಳ್ಳಿ, ಕಿರಿಕ್ ಕೀರ್ತಿ ವಿರುದ್ಧ ಎಫ್‌ಐಆರ್

2025ರ ಅಕ್ಟೋಬರ್‌ನಲ್ಲಿ ‘R.ಕನ್ನಡ’ ಸುದ್ದಿ ವಾಹಿನಿಯಲ್ಲಿ ಧರ್ಮಸ್ಥಳ ಪ್ರಕರಣ ಸಂಬಂಧ ನಡೆದಿದ್ದ ಚರ್ಚಾ ಕಾರ್ಯಕ್ರಮದ ವೇಳೆ ದಾಂಧಲೆ ನಡೆಸಿ, ಹಲ್ಲೆಗೆ ಯತ್ನಿಸಿದ್ದ ಹಿಂದುತ್ವ ಕೋಮುವಾದಿ ಕಾರ್ಯಕರ್ತ ವಸಂತ್ ಗಿಳಿಯಾರ್, ಪುನೀತ್ ಕೆರೆಹಳ್ಳಿ ಹಾಗೂ...

ಲೋಕಸಭೆಯಲ್ಲಿ ನರವಾಣೆ ಆತ್ಮಕಥೆ ಗದ್ದಲ : ವಿಪಕ್ಷಗಳ 8 ಮಂದಿ ಸಂಸದರು ಅಮಾನತು

ಮಾಜಿ ಸೇನಾ ಮುಖ್ಯಸ್ಥ ಮನೋಜ್ ಮುಕುಂದ್ ನರವಾಣೆ ಅವರ ಅಪ್ರಕಟಿತ ಆತ್ಮಕತೆಯ ವಿಚಾರ ಮಂಗಳವಾರ (ಫೆ.3) ಕೂಡ ಲೋಕಸಭೆಯಲ್ಲಿ ತೀವ್ರ ಗದ್ದಲಕ್ಕೆ ಕಾರಣವಾಯಿತು. ಪುಸ್ತಕದ ವಿಷಯಗಳನ್ನು ಪ್ರಸ್ತಾಪಿಸಲು ವಿರೋಧ ಪಕ್ಷದ ನಾಯಕ ರಾಹುಲ್...

ಮನ್ರೇಗಾ ಕಾರ್ಮಿಕರ ಮಹಾ ಪಂಚಾಯತ್ ರಾಷ್ಟ್ರಪತಿಗಳಿಗೆ ಬರೆದ ಮನ ಮುಟ್ಟುವ ಪತ್ರ

ಕೇಂದ್ರ ಸರ್ಕಾರ ವಿಬಿಜಿ- ರಾಮ್ ಜಿ 2025 ಕಾನೂನನ್ನು ವಾಪಸ್ ಪಡೆಯಬೇಕು ಹಾಗೂ ನರೇಗಾ ಯೋಜನೆಯನ್ನು ಮರು ಸ್ಥಾಪಿಸಬೇಕು ಎಂದು ಮನ್ರೇಗಾ ಕಾರ್ಮಿಕರ ಮಹಾ ಪಂಚಾಯತ್‌ ರಾಷ್ಟ್ರಪತಿಗಳಿಗೆ ಮನವಿ ಪತ್ರ ಸಲ್ಲಿಸಿದೆ.  2026 ಫೆಬ್ರವರಿ...

ಗುಜರಾತ್‌| ಕುದುರೆ ಸವಾರಿ ಮಾಡಿದ ದಲಿತ ವರನ ಮೇಲೆ ಕತ್ತಿಯಿಂದ ಹಲ್ಲೆ

ಗುಜರಾತ್‌ನ ಪಠಾನ್ ಜಿಲ್ಲೆಯ ಗ್ರಾಮವೊಂದರಲ್ಲಿ, ಕುದುರೆ ಸವಾರಿ ಮಾಡಿದ ದಲಿತ ವರನ ಮೇಲೆ ಕತ್ತಿಯಿಂದ ಹಲ್ಲೆ ನಡೆಸಿರುವ ಘಟನೆ ನಡೆದಿದೆ. ದಲಿತ ಸಮುದಾಯದ ಯುವಕ ವಿಶಾಲ್ ಚಾವ್ಡಾಗೆ ಮದುವೆಯ ಸಂತೋಷದ ದಿನವು ಜೀವನದ ದುಃಸ್ವಪ್ನವಾಗಿ...

ಗೃಹಲಕ್ಷ್ಮಿ ಯೋಜನೆಯಿಂದ 52 ಸಾವಿರಕ್ಕೂ ಹೆಚ್ಚಿನ ಮಹಿಳೆಯರು ಹೊರಕ್ಕೆ: ಆದಾಯ ತೆರಿಗೆ ಇಲಾಖೆ ದಾಖಲೆಗಳು ಕಾರಣ ಎಂದ ಲಕ್ಷ್ಮಿ ಹೆಬ್ಬಾಳ್ಕರ್

ಬೆಂಗಳೂರು: ರಾಜ್ಯಾದ್ಯಂತ 1.26 ಕೋಟಿ ಫಲಾನುಭವಿಗಳಲ್ಲಿ 52,000 ಕ್ಕೂ ಹೆಚ್ಚು ಮಹಿಳೆಯರನ್ನು ಗೃಹಲಕ್ಷ್ಮಿ ಯೋಜನೆಯಿಂದ ತೆಗೆದುಹಾಕಲಾಗಿದೆ, ಏಕೆಂದರೆ ಅವರು ಜಿಎಸ್ಟಿ ಅಥವಾ ಆದಾಯ ತೆರಿಗೆ ಇಲಾಖೆಗಳ ದಾಖಲೆಗಳಲ್ಲಿ ತೆರಿಗೆದಾರರಾಗಿದ್ದಾರೆ ಎಂದು ಮಹಿಳಾ ಮತ್ತು...

ವಿಬಿ-ಜಿ ರಾಮ್ ಜಿ ಕಾಯ್ದೆ ವಿರುದ್ಧ ವಿಧಾನಸಭೆಯಲ್ಲಿ ನಿರ್ಣಯ ಮಂಡನೆ

ಮನರೇಗಾ ಬದಲಾಗಿ ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಬಿ-ಜಿ ರಾಮ್ ಜಿ ಕಾಯ್ದೆ ವಿರುದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಮಂಗಳವಾರ (ಫೆ.3) ವಿಧಾನಸಭೆಯಲ್ಲಿ ನಿರ್ಣಯ ಮಂಡಿಸಿದರು. ರಾಜ್ಯದ ಗ್ರಾಮೀಣ ಜನರ ಬದುಕಿನ ಹಕ್ಕನ್ನು ಕಾಪಾಡುವ ದೃಷ್ಟಿಯಿಂದ,...

‘ಖಾಸಗಿ ಮಾಹಿತಿಯ ಕಳ್ಳತನ’ : ವಿವಾದಾತ್ಮಕ ಗೌಪ್ಯತೆ ನೀತಿ ಸಂಬಂಧ ವಾಟ್ಸಾಪ್, ಮೆಟಾ ವಿರುದ್ಧ ಸುಪ್ರೀಂ ಕೋರ್ಟ್ ಕಿಡಿ

ನಾಗರಿಕರ ಗೌಪ್ಯತೆಯ ಹಕ್ಕನ್ನು ಉಲ್ಲಂಘಿಸಲಾಗಿದೆ ಎಂದು ಮಂಗಳವಾರ ಸುಪ್ರೀಂ ಕೋರ್ಟ್ ವಾಟ್ಸಾಪ್ ಮತ್ತು ಅದರ ಪೋಷಕ ಕಂಪನಿ ಮೆಟಾವನ್ನು ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದೆ. ಡೇಟಾ ಹಂಚಿಕೆಯ ಹೆಸರಿನಲ್ಲಿ ಬಳಕೆದಾರರ ಖಾಸಗಿ ಡೇಟಾವನ್ನು ಬಳಸಿಕೊಳ್ಳಲು...