Homeಮುಖಪುಟಹಣದುಬ್ಬರ ಹತೋಟಿಗೆ ಪೆಟ್ರೋಲ್, ಡೀಸೆಲ್ ತೆರಿಗೆ ಕಡಿತಗೊಳಿಸಿ: ಆರ್‌ಬಿಐ ಸಲಹೆ

ಹಣದುಬ್ಬರ ಹತೋಟಿಗೆ ಪೆಟ್ರೋಲ್, ಡೀಸೆಲ್ ತೆರಿಗೆ ಕಡಿತಗೊಳಿಸಿ: ಆರ್‌ಬಿಐ ಸಲಹೆ

- Advertisement -
- Advertisement -

ಹಣದುಬ್ಬರದ ಹತೋಟಿಗೆ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಪೆಟ್ರೋಲ್ ಮತ್ತು ಡೀಸೆಲ್‌ ಮೇಲೆ ವಿಧಿಸಿರುವ ತೆರಿಗೆ ಮತ್ತು ಸುಂಕವನ್ನು ಕಡಿತಗೊಳಿಸುವಂತೆ ಭಾರತೀಯ ರಿಸರ್ವ್ ಬ್ಯಾಂಕ್ (ಆರ್‌ಬಿಐ) ಹಣಕಾಸು ನೀತಿ ಸಮಿತಿ (ಎಂಪಿಸಿ) ಶುಕ್ರವಾರ ಕರೆ ನೀಡಿದೆ.

ಅಂತರರಾಷ್ಟ್ರೀಯ ಕಚ್ಚಾ ತೈಲ ಬೆಲೆಗಳ ಏರಿಕೆ ಮತ್ತು ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ವಿಧಿಸಿರುವ ಹೆಚ್ಚಿನ ತೆರಿಗೆಯಿಂದಾಗಿ ಕೆಲವು ರಾಜ್ಯಗಳಲ್ಲಿ ಪೆಟ್ರೋಲ್ ಬೆಲೆ ಲೀಟರ್‌ಗೆ 100 ರೂ.ಗಳನ್ನು ದಾಟಿರುವ ಸಮಯದಲ್ಲಿ ಈ ಹೇಳಿಕೆ ಬಂದಿದೆ. ತೆರಿಗೆಗಳು ಪ್ರಸ್ತುತ ಪೆಟ್ರೋಲ್‌ನ ಚಿಲ್ಲರೆ ಮಾರಾಟದ ಬೆಲೆಯಲ್ಲಿ ಶೇ. 58 ಮತ್ತು ಡಿಸೇಲ್‌ನ ಚಿಲ್ಲರೆ ಮಾರಾಟದ ಬೆಲೆಯ ಶೇ. 52 ರಷ್ಟಿವೆ.

ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯಿಂದ ಹೊರಹೊಮ್ಮುವ ಇನ್ಪುಟ್ ವೆಚ್ಚದ ಒತ್ತಡಗಳನ್ನು ನಿಯಂತ್ರಿಸಲು ಕೇಂದ್ರ ಮತ್ತು ರಾಜ್ಯಗಳು ವಿಧಿಸಿರುವ ಅಬಕಾರಿ ಸುಂಕ, ಸೆಸ್ ಮತ್ತು ತೆರಿಗೆಗಳನ್ನು ಸಂಘಟಿತ ರೀತಿಯಲ್ಲಿ ಹೊಂದಿಸಬೇಕಾಗಿದೆ ಎಂದು ಎಂಪಿಸಿ ಹೇಳಿದೆ.

ಮೋದಿ ಸರ್ಕಾರವು ಅಬಕಾರಿ ಸುಂಕ ಮತ್ತು ಇಂಧನದ ಮೇಲೆ ಸೆಸ್ ವಿಧಿಸಿದರೆ, ರಾಜ್ಯಗಳು ಮೌಲ್ಯವರ್ಧಿತ ತೆರಿಗೆಯನ್ನು (ವ್ಯಾಟ್) ವಿಧಿಸುತ್ತವೆ. ಈ ತೆರಿಗೆಗಳು ಆದಾಯದ ಪ್ರಮುಖ ಮೂಲವಾಗಿರುವುದರಿಂದ ಹೆಚ್ಚುತ್ತಿರುವ ಅಂತರರಾಷ್ಟ್ರೀಯ ಬೆಲೆಗಳ ನಡುವೆಯೂ ದರಗಳನ್ನು ಕಡಿತಗೊಳಿಸಲು ಎರಡೂ ಕಡೆಯವರು ಹಿಂದೇಟು ಹಾಕುತ್ತಿದ್ದಾರೆ.

ಪ್ರಮುಖ ನೀತಿ ದರಗಳನ್ನು ಬದಲಾಗದೆ ಇಟ್ಟುಕೊಂಡರೆ, ಪೂರ್ಣ ವರ್ಷದ ಹಣದುಬ್ಬರವು ಶೇಕಡಾ 5.1 ರಷ್ಟಾಗುತ್ತದೆ ಎಂದು ಎಂಪಿಸಿ ಮುನ್ಸೂಚನೆ ನೀಡಿದೆ.

ಇಂಧನ ಬೆಲೆಗಳು ಮತ್ತು ಅವುಗಳ ಹಣದುಬ್ಬರ ಪರಿಣಾಮದ ಕುರಿತ ಪ್ರಶ್ನೆಗೆ ಉತ್ತರಿಸಿದ ಆರ್‌ಬಿಐ ಗವರ್ನರ್ ಶಕ್ತಿಕಾಂತ ದಾಸ್, ಸಂಘಟಿತ ಕ್ರಮ ಕೈಗೊಳ್ಳುವ ಅವಶ್ಯಕತೆಯಿದೆ ಎಂದು ಹೇಳಿದರು. “ಕೇಂದ್ರ ಮತ್ತು ರಾಜ್ಯಗಳು ನಿರ್ಧಾರ ತೆಗೆದುಕೊಳ್ಳಬೇಕು. ತಮ್ಮ ಹಣಕಾಸಿನ ಕೊರತೆಯ ವಿಷಯದಲ್ಲಿ ಅವರು ತಮ್ಮದೇ ಆದ ನಿರ್ಬಂಧಗಳನ್ನು ಹೊಂದಿದ್ದಾರೆ. ಹಣದುಬ್ಬರ ಸನ್ನಿವೇಶದ ಬಗ್ಗೆ ಸರ್ಕಾರವು ನಿಗಾ ವಹಿಸುತ್ತಿದೆ ಮತ್ತು ಗಮನಿಸುತ್ತಿದೆ ಎಂದು ನನಗೆ ಖಾತ್ರಿಯಿದೆ” ಎಂದು ಅವರು ಹೇಳಿದರು.

ಗ್ರಾಮೀಣ ಕೋವಿಡ್ ಪ್ರಕರಣಗಳಲ್ಲಿನ ಏರಿಕೆ ಅಪಾಯಗಳನ್ನು ಹೆಚ್ಚಿಸುತ್ತದೆ, ಬೆಳವಣಿಗೆಯ ಮುನ್ಸೂಚನೆಯನ್ನು 9.5% ಕ್ಕೆ ಇಳಿಸಲಾಗಿದೆ ಎಂದರು.

ಗ್ರಾಮೀಣ ಪ್ರದೇಶಗಳಲ್ಲಿ ಕೋವಿಡ್ ವೇಗವಾಗಿ ಹರಡುವುದು ಬೆಳವಣಿಗೆಗೆ ಅಪಾಯವ ಉಂಟು ಮಾಡುತ್ತದೆ ಎಂದು ದಾಸ್ ವೀಡಿಯೊ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಕಳೆದ ಎರಡು ತಿಂಗಳುಗಳಲ್ಲಿ ನಗರ ಮತ್ತು ಗ್ರಾಮೀಣ ಬೇಡಿಕೆ ಕಡಿಮೆಯಾಗಿದ್ದರೂ, ಇದರ ಪರಿಣಾಮ ಸೀಮಿತವಾಗಿದೆ ಎಂದು ಅವರು ಹೇಳಿದರು.

ಆದರೂ, ಎಂಪಿಸಿ 2021-22ರ ಭಾರತದ ಬೆಳವಣಿಗೆಯ ಮುನ್ಸೂಚನೆಯನ್ನು ಒಂದು ಶೇಕಡಾವಾರು ಬಿಂದುವಿನಿಂದ ಶೇಕಡಾ 10.5 ರಿಂದ 9.5 ಕ್ಕೆ ಇಳಿಸಿತು.

ವಿಮಾನಯಾನ, ಪ್ರವಾಸೋದ್ಯಮ ಮತ್ತು ಇತರ ಕ್ಷೇತ್ರಗಳಿಗೆ ಹೊಸ ಸಾಲ ನೀಡುವ ಬೆಂಬಲವನ್ನು ಪ್ರಕಟಿಸಿದೆ.


ಇದನ್ನೂ ಓದಿ; 4 ದಶಕಗಳಲ್ಲಿ ಕರಾಳ ಆರ್ಥಿಕ ವರ್ಷ: ಜಿಡಿಪಿ ಕುಸಿತಕ್ಕೆ ಚಿದಂಬರಂ ಕಿಡಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನ ಬದಲಿಸಿ ಮನುಸ್ಮೃತಿ ತರಲು SIR ಷಡ್ಯಂತ್ರ: ನಟ ಕಿಶೋರ್

ದೇಶದ ಬಹುಕೋಟಿ ಉದ್ಯಮಿ ಗೌತಮ್ ಅದಾನಿಯದ್ದೇ ಇರಲಿ ಅಥವಾ ಒಬ್ಬ ಬಡ ರೈತನದ್ದೇ ಇರಲಿ, ಪ್ರಜಾಪ್ರಭುತ್ವದಲ್ಲಿ ಎಲ್ಲರ ಮತವೂ ಒಂದೇ ಸಮ. ಪ್ರಜೆಗಳನ್ನೆಲ್ಲ ಸಮಾನವಾಗಿ ಕಾಣುವ ಏಕೈಕ ಅಸ್ತ್ರ ಎಂದರೆ ಅದು ಮತದಾನದ...

Nepal: ಭೀಕರ ಪ್ರವಾಹಕ್ಕೆ ಸವಾಲೆಸೆದು ನಿಂತ ‘ಗ್ರೀನ್ ಹೌಸ್’ ಸ್ಟೋರಿ

'ನಮ್ಮ ಬದುಕು ಇಷ್ಟಕ್ಕೇ ಅಂತ್ಯವಾಯಿತು ಎನಿಸುವ ಕ್ಷಣಗಳು ಎದುರಾದಾಗ ಮನಸ್ಸಿನಲ್ಲಿ ಏನು ಓಡಬಹುದು? ಪ್ರವಾಹ ಬಂದಾಗ ನನಗೂ ಅದೇ ಅನಿಸಿತ್ತು' ಇದು ನೇಪಾಳದ ನುವಾಕೋಟ್ ಜಿಲ್ಲೆಯ ತ್ರಿಶೂಲಿ ನದಿಯಲ್ಲಿ ಹರಿದುಬಂದ ಭೀಕರ ಪ್ರವಾಹದಿಂದ...

NEET: ದೇಶಾದ್ಯಂತ ಪ್ರತಿಭಟನಾಕಾರರ ವಿರುದ್ದ ದಾಖಲಾಗಿದ್ದ ಎಲ್ಲಾ FIRಗಳನ್ನು ರದ್ದುಗೊಳಿಸಿದ ಸುಪ್ರೀಂ ಕೋರ್ಟ್

ಮರುಪರೀಕ್ಷೆ ಮತ್ತು ಪ್ರಶ್ನೆ ಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ಯ (CJP) ಪ್ರತಿಭಟನಾಕಾರರ ವಿರುದ್ಧ ದಾಖಲಾಗಿದ್ದ ಎಲ್ಲಾ FIR ಗಳನ್ನು ಸುಪ್ರೀಂ ಕೋರ್ಟ್ ಮಂಗಳವಾರ ರದ್ದುಗೊಳಿಸಿದೆ. ಕೇಂದ್ರ ಸರ್ಕಾರವು ಈ...

ಚುನಾವಣಾ ಆಯೋಗ ಚಲೋ: ನಟ ಪ್ರಕಾಶ್ ರಾಜ್ ಸೇರಿದಂತೆ ನೂರಾರು SIR ಸಂತ್ರಸ್ತರು, ಹೋರಾಟಗಾರರನ್ನು ವಶಕ್ಕೆ ಪಡೆದ ಪೊಲೀಸರು

ಕರ್ನಾಟಕ ರಾಜ್ಯದ ಅರ್ಹ ಮತದಾರರ ‘ಮತಹರಣ’ ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಮ್ಮಿಕೊಂಡಿದ್ದ ‘ಚುನಾವಣಾ ಆಯೋಗ ಚಲೋ’ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಬಹುಭಾಷಾ ನಟ ಪ್ರಕಾಶ್ ರಾಜ್, ಕಿಶೋರ್ ಹಾಗೂ ಪ್ರಮುಖ ನಾಯಕರು ಸೇರಿದಂತೆ...

‘ಚುನಾವಣಾ ಆಯೋಗ ಚಲೋ’: ‘ಮುಚ್ಚಿದ ಬಾಗಿಲಿನ ಮಾತುಕತೆ ಬೇಡ, ಎಲ್ಲವೂ ಸಾರ್ವಜನಿಕರ ಮುಂದೆಯೇ ಇತ್ಯರ್ಥವಾಗಬೇಕು’: ನೂರ್ ಶ್ರೀಧರ್ ಆಗ್ರಹ

ಬೆಂಗಳೂರು: ಕರ್ನಾಟಕದಲ್ಲಿ ನಡೆದ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ರಾಜ್ಯದ ಪ್ರಜಾಸತ್ತಾತ್ಮಕ ವ್ಯವಸ್ಥೆಯಲ್ಲಿ ಬೃಹತ್ ಕಳವಳವನ್ನು ಸೃಷ್ಟಿಸಿದೆ. ಕೇಂದ್ರ ಚುನಾವಣಾ ಆಯೋಗವು ಬಿಡುಗಡೆ ಮಾಡಿರುವ ನೂತನ ಕರಡು ಮತದಾರರ...

SIR ಎಂಬುದು ಪ್ರಜಾಪ್ರಭುತ್ವವನ್ನು ಹಾಳುಮಾಡುವ ದೊಡ್ಡ ಸಂಚು ಮತ್ತು ಮೋಸ: ಪ್ರಕಾಶ್ ರಾಜ್

"ನಾನು ಸಣ್ಣವನಿದ್ದಾಗ ಮುಕ್ಕೂಟಿ ಕನ್ನಡಿಗರು ಎನ್ನುತ್ತಿದ್ದರು. ದಶಕಗಳ ನಂತರ ಪಂಚಕೋಟಿ ಕನ್ನಡಿಗರಾಗಿ, ಈಗ ಶತಕೋಟಿ ಆಗಬೇಕಿತ್ತು. ಆದರೆ ಮತದಾರರ ಪಟ್ಟಿ ವಿಶೇಷ ಸಾಂದ್ರ ಪರಿಷ್ಕರಣೆ (SIR) ಹೆಸರಿನಲ್ಲಿ ಮತ್ತೆ ಮುಕ್ಕೂಟಿಗೆ ತಂದು ನಿಲ್ಲಿಸಲಾಗುತ್ತಿದೆ....

‘ಚುನಾವಣಾ ಆಯೋಗ ಚಲೋ’: ಎಸ್ಐಆರ್ ಅನ್ಯಾಯವನ್ನು ಪ್ರಶ್ನಿಸಲು ನಾವು ಚುನಾವಣಾ ಆಯೋಗಕ್ಕೆ ಮುತ್ತಿಗೆ ಹಾಕುತ್ತಿದ್ದೇವೆ: ಯೂಸುಫ್ ಕನ್ನಿ

ಬೆಂಗಳೂರು: ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಹೆಸರಿನಲ್ಲಿ ಅರ್ಹ ನಾಗರಿಕರ ಮತದಾನದ ಹಕ್ಕನ್ನು ಕಸಿದುಕೊಳ್ಳಲಾಗುತ್ತಿದೆ ಎಂದು ಆರೋಪಿಸಿ ‘ಎಸ್‌ಐಆರ್ ವಿರೋಧಿ ಕರ್ನಾಟಕ’ ವೇದಿಕೆಯು 2026 ಸೆಪ್ಟಂಬರ್ 01, ಮಂಗಳವಾರ ಹಮ್ಮಿಕೊಂಡಿದ್ದ...

SIR:‘ನಾವು ಕಳ್ಳರಲ್ಲ, ಈ ದೇಶದ ಮೂಲ ನಿವಾಸಿಗಳು’ SIR ಸಂತ್ರಸ್ತರ ಜೊತೆ ಪ್ರಕಾಶ್ ರಾಜ್ ಸಂವಾದ

"ನಾವು ಈ ದೇಶದ ನಾಗರಿಕರು, ಕಳ್ಳರಲ್ಲ. ಮತದಾರರ ಪಟ್ಟಿಯಿಂದ ಹೆಸರು ಡಿಲೀಟ್ ಮಾಡಿ ನಮ್ಮ ಸ್ವಾಭಿಮಾನಕ್ಕೆ ಧಕ್ಕೆ ತರಲಾಗುತ್ತಿದೆ. ನಮ್ಮ ಹಕ್ಕನ್ನು ಉಳಿಸಿಕೊಳ್ಳಲು ನಾವು ಹೋರಾಟ ನಡೆಸುತ್ತಿದ್ದೇವೆ," ಎಂದು ಬಹುಭಾಷಾ ನಟ ಹಾಗೂ...

‘ವಿದೇಶದಲ್ಲಿ ಚಿನ್ನ ಖರೀದಿಸಬೇಡಿ, ವಿವಾಹವಾಗಬೇಡಿ’: ಭಾರತೀಯರಿಗೆ ಮೋದಿ ಮನವಿ

ಭಾರತೀಯರು ಅನಗತ್ಯವಾಗಿ ವಿದೇಶಿ ಪ್ರವಾಸ ಕೈಗೊಳ್ಳುವುದನ್ನು, ವಿದೇಶಗಳಲ್ಲಿ ವಿವಾಹವಾಗುವುದನ್ನು ಹಾಗೂ ಅಗತ್ಯವಿಲ್ಲದಿದ್ದರೆ ವಿದೇಶದಿಂದ ಚಿನ್ನ ಖರೀದಿಸುವುದನ್ನು ಸಂಪೂರ್ಣವಾಗಿ ತಪ್ಪಿಸಬೇಕು ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಮನವಿ ಮಾಡಿದ್ದಾರೆ. ಸ್ವಾವಲಂಬನೆಗೆ ಉತ್ತೇಜನ ನೀಡುವುದರ...

ಧಾರವಾಡ | ಪ್ರಕಾಶ್ ರಾಜ್ ಭಾಗವಹಿಸಿದ್ದ ಸಮುದಾಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನ : ದೂರು ದಾಖಲು

ಭಾನುವಾರ (ಆ.30) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಸಭಾ ಭವನದಲ್ಲಿ ಆಯೋಜಿಸಿದ್ದ ಸಮುದಾಯ ಸಂಘಟನೆಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನಿಸಿ ಗಲಾಟೆ ಎಬ್ಬಿಸಿದ ಬಿಜೆಪಿ-ಸಂಘಪರಿವಾರದ ಬೆಂಬಲಿಗರ ವಿರುದ್ಧ ದೂರು ದಾಖಲಿಸಲಾಗಿದೆ. ಸಮುದಾಯ ಸಂಘಟನೆಯ ಧಾರವಾಡದ...