Homeಮುಖಪುಟಖಾಸಗಿ ಆಸ್ಪತ್ರೆಗಳಿಗೆ ಲಸಿಕೆ ಪೂರೈಸುವುದಿಲ್ಲ: ಆದೇಶ ಹಿಂಪಡೆದ ಪಂಜಾಬ್ ಸರ್ಕಾರ

ಖಾಸಗಿ ಆಸ್ಪತ್ರೆಗಳಿಗೆ ಲಸಿಕೆ ಪೂರೈಸುವುದಿಲ್ಲ: ಆದೇಶ ಹಿಂಪಡೆದ ಪಂಜಾಬ್ ಸರ್ಕಾರ

- Advertisement -
- Advertisement -

ಪ್ರತಿಪಕ್ಷದ ಅಕಾಲಿ ದಳದ ಆರೋಪದ ನಂತರ ಪಂಜಾಬ್ ಸರ್ಕಾರವು ಶುಕ್ರವಾರ ಸಂಜೆ, “ಖಾಸಗಿ ಆಸ್ಪತ್ರೆಗಳ ಮೂಲಕ 18-44 ವಯೋಮಾನದವರಿಗೆ ಒಂದು ಬಾರಿ ಸೀಮಿತ ಲಸಿಕೆ ಪ್ರಮಾಣವನ್ನು” ನೀಡುವ ಆದೇಶವನ್ನು ಹಿಂತೆಗೆದುಕೊಂಡಿದೆ. ಕೊವಾಕ್ಸಿನ್ ಅನ್ನು ಖಾಸಗಿ ಆಸ್ಪತ್ರೆಗಳು ದುಬಾರಿ ದರಕ್ಕೆ ಮಾರಿಕೊಳ್ಳುವ ನಡೆ ಎಂದು ಅಕಾಲಿ ದಳ ಟೀಕಿಸಿತ್ತು.

ರಾಜ್ಯ ಲಸಿಕಾ ಅಭಿಯಾನದ ಉಸ್ತುವಾರಿ ವಿಕಾಸ್ ಗರ್ಗ್ ಅವರು ಸಹಿ ಮಾಡಿದ ಸಂಕ್ಷಿಪ್ತ ಪತ್ರದಲ್ಲಿ, ‘ಈ ಆದೇಶವನ್ನು ಸರಿಯಾದ ಮನೋಭಾವದಿಂದ ತೆಗೆದುಕೊಳ್ಳಲಾಗಿಲ್ಲ ಮತ್ತು ಇದನ್ನು ಹಿಂಪಡೆಯಲಾಗಿದೆ” ಎಂದು ಹೇಳಿದ್ದಾರೆ.

“ಇದಲ್ಲದೆ, ಖಾಸಗಿ ಆಸ್ಪತ್ರೆಗಳು ತಮ್ಮೊಂದಿಗೆ ಲಭ್ಯವಿರುವ ಎಲ್ಲಾ ಲಸಿಕೆಗಳನ್ನು ಕೂಡಲೇ ಮರಳಿಸಬೇಕು ಎಂದು ಸೂಚಿಸಲಾಗಿದೆ. ಈವರೆಗೆ ಬಳಸಿದ ಲಸಿಕಾ ಡೋಸ್‌ಗಳ ಪ್ರಮಾಣವನ್ನು ತಯಾರಕರಿಂದ ಖರೀದಿಸಿ ವಾಪಸ್ ಮಾಡಬೇಕು ಎಂದು ಆದೇಶದಲ್ಲಿ ಸೂಚಿಸಲಾಗಿದೆ.
ಲಸಿಕೆ ನಿಧಿಯಲ್ಲಿ ಆಸ್ಪತ್ರೆಗಳು ಠೇವಣಿ ಇಟ್ಟ ಹಣವನ್ನು ಹಿಂದಿರುಗಿಸಲಾಗುವುದು ಎಂದು ಆದೇಶದಲ್ಲಿ ತಿಳಿಸಲಾಗಿದೆ.

ಆದೇಶವನ್ನು ಹಿಂಪಡೆಯುವ ಸ್ವಲ್ಪ ಸಮಯದ ಮೊದಲು, ಕೇಂದ್ರವು ರಾಜ್ಯಕ್ಕೆ ಪತ್ರ ಬರೆದಿದ್ದು, “ಈ ವಿಷಯದಲ್ಲಿ ತಕ್ಷಣವೇ ಕೇಂದ್ರ ಆರೋಗ್ಯ ಇಲಾಖೆಗೆ ಸ್ಪಷ್ಟೀಕರಣ ನೀಡುವಂತೆ ಕೇಳಿತ್ತು.

ಲಸಿಕೆಗಳ ಮೇಲೆ ನನಗೆ ನಿಯಂತ್ರಣವಿಲ್ಲ ಎಂದು ಪಂಜಾಬ್ ಆರೋಗ್ಯ ಸಚಿವ ಬಿ.ಎಸ್.. ಸಿಧು ಶುಕ್ರವಾರ ಮುಂಜಾನೆ ತಿಳಿಸಿದ್ದರು. “ನಾನು ಚಿಕಿತ್ಸೆ, ಪರೀಕ್ಷೆ, ಕೋವಿಡ್ ಮಾದರಿ ಮತ್ತು ಲಸಿಕಾ ಶಿಬಿರಗಳನ್ನು ನೋಡಿಕೊಳ್ಳುತ್ತಿದ್ದೇನೆ. ನಾವು ಖಂಡಿತವಾಗಿಯೂ ವಿಚಾರಣೆಯನ್ನು ನಡೆಸುತ್ತೇವೆ. ನಾನೇ ವಿಚಾರಿಸಬಹುದು” ಎಂದು ಸಿಧು ಸುದ್ದಿ ಸಂಸ್ಥೆ ಎಎನ್‌ಐಗೆ ತಿಳಿಸಿದ್ದಾರೆ.

ಮುಂದಿನ ವರ್ಷದ ಚುನಾವಣೆಗೆ ಮುಂಚಿತವಾಗಿ ಸಂಭವನೀಯ ಭಿನ್ನಮತವನ್ನು ಅಮರಿಂದರ್ ಸಿಂಗ್ ಸರ್ಕಾರ ಎದುರಿಸುತ್ತಿದೆ. ಅಕಾಲಿ ದಳದ ಮುಖ್ಯಸ್ಥ ಸುಖ್ಬೀರ್ ಬಾದಲ್ ಅವರು, 40,000 ಡೋಸ್ ಕೋವಾಕ್ಸಿನ್ ಅನ್ನು ಹೆಚ್ಚಿನ ದರದಲ್ಲಿ ಮರು ಮಾರಾಟ ಮಾಡಲಾಗಿದೆ ಎಂದು ಗುರುವಾರ ಹೇಳಿದ ನಂತರ ಸರ್ಕಾರ ಇಕ್ಕಟ್ಟಿಗೆ ಸಿಲುಕಿತ್ತು.

ಡೋಸೇಜ್‌ಗೆ 400 ರೂ. ದರದಲ್ಲಿ ಖರೀದಿಸಲಾಗಿದೆ ಮತ್ತು ಖಾಸಗಿ ಆಸ್ಪತ್ರೆಗಳಿಗೆ ಪ್ರತಿ ಡೋಸ್‌ಗೆ 1,060 ರೂ,ಗೆ ಮಾರಾಟ ಮಾಡಲಾಗಿದೆ. ಆಸ್ಪತ್ರೆಗಳು ಅದನ್ನು ಅರ್ಹ ಫಲಾನುಭವಿಗಳಿಗೆ ಪ್ರತಿ ಡೋಸ್‌ಗೆ 1,560 ರೂ.ಗೆ ನೀಡಿವೆ ಎಂದು ಬಾದಲ್ ಹೇಳಿದ್ದಾರೆ.

ರಾಷ್ಟ್ರೀಯ ಲಸಿಕಾ ನೀತಿಯ ಬಗ್ಗೆ ತೀವ್ರವಾಗಿ ಟೀಕಿಸಿದ ಕಾಂಗ್ರೆಸ್ ವಿರುದ್ಧ ಕೇಂದ್ರ ಮಂತ್ರಿ ಪ್ರಕಾಶ್ ಜಾವಡೇಕರ್ ಅವರು ಇಂದು ಮಧ್ಯಾಹ್ನ ಪಂಜಾಬ್ ವಿಷಯ ಉಲ್ಲೇಖಿಸಿ ಟೀಕೆ ಮಾಡಿದ್ದಾರೆ.

ಗುರುವಾರ ಹಣಕಾಸು ರಾಜ್ಯ ಸಚಿವ ಅನುರಾಗ್ ಠಾಕೂರ್ ಕೂಡ ಪಂಜಾಬ್ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದರು. ಎಎನ್‌ಐ ಪ್ರಕಾರ ಅವರು, “ಜನರ ಬಗ್ಗೆ ಪಂಜಾಬ್ ಸರ್ಕಾರ ಕಠಿಣ ಮನೋಭಾವ” ತೋರಿಸುತ್ತಿದೆ’ ಎಂದು ಹೇಳಿದ್ದಾರೆ.

ಕಳೆದ ಕೆಲವು ವಾರಗಳಲ್ಲಿ ಲಸಿಕೆಯ ಕಡಿಮೆ ದಾಸ್ತಾನು ಹೊಂದಿರುವ ಹಲವಾರು ರಾಜ್ಯಗಳಲ್ಲಿ ಪಂಜಾಬ್ ಕೂಡ ಸೇರಿದೆ.

ಲಸಿಕೆ ಸರಬರಾಜು ವಿಷಯವು ಕೇಂದ್ರ ಮತ್ತು ಹಲವಾರು ರಾಜ್ಯಗಳ ನಡುವೆ ವಿವಾದದ ವಿಷಯವಾಗಿ ಮಾರ್ಪಟ್ಟಿದೆ.. ಕಳೆದ ಕೆಲವು ತಿಂಗಳುಗಳಲ್ಲಿ ವಿವಿಧ ರಾಜ್ಯ ಸರ್ಕಾರಗಳು ಲಸಿಕೆ ಕೊರತೆಯಿಂದ ಪದೇ ಪದೇ ಲಸಿಕಾ ಅಭಿಯಾನವನ್ನು ಸ್ಥಗಿತಗೊಳಿಸಿದ್ದವು. ಅದರಲ್ಲೂ ವಿಶೇಷವಾಗಿ 18-44 ವಯೋಮಾನದವರಿಗೆ, 45 ವರ್ಷಕ್ಕಿಂತ ಮೇಲ್ಪಟ್ಟವರಂತೆ ನೀಡಿದಂತೆ ಉಚಿತವಾಗಿ ನೀಡಲಾಗಿಲ್ಲ, ಕೇಂದ್ರವು ಅಗತ್ಯವಿರುವ ಶೇಕಡಾ 50 ರಷ್ಟು ಪ್ರಮಾಣವನ್ನು ಮಾತ್ರ ಒದಗಿಸುತ್ತದೆ. ಅದರ ಹೊಸ ನೀತಿಯಡಿಯಲ್ಲಿ ಉಳಿದವುಗಳನ್ನು ರಾಜ್ಯಗಳು ಮತ್ತು ಖಾಸಗಿ ಆಸ್ಪತ್ರೆಗಳು ನೇರವಾಗಿ ಉತ್ಪಾದಕರಿಂದ ಖರೀದಿಸಬೇಕು.

ಕೇಂದ್ರವು ಪ್ರತಿ ಡೋಸ್‌ಗೆ 150 ರೂ. ಪಾವತಿಸಿದರೆ, ಕೊವಾಕ್ಸಿನ್ ಅನ್ನು ಖಾಸಗಿ ಆಸ್ಪತ್ರೆಗಳಿಗೆ 1,200 ರೂ.ಗೆ ನೀಡಲಾಗುತ್ತಿದೆ. ಈ ದರ ವ್ಯತ್ಯಾಸವನ್ನು ಸುಪ್ರೀಂಕೋರ್ಟ್ ಕೂಡ ಪ್ರಶ್ನಿಸಿದೆ.
ಕಾಂಗ್ರೆಸ್, ಏಪ್ರಿಲ್‌ನಲ್ಲಿ ಇದನ್ನು ಕೇಂದ್ರದ “ಲಸಿಕೆ ವ್ಯಾಪಾರ” ಎಂದು ದೂಷಿಸಿತ್ತು.

ಡಿಸೆಂಬರ್ ಅಂತ್ಯದ ವೇಳೆಗೆ ಇಡೀ ದೇಶಕ್ಕೆ ಲಸಿಕೆ ನೀಡುವುದಾಗಿ ಕೇಂದ್ರ ಹೇಳಿತ್ತು. ಆದರೆ ಈ ವಾರ ಸುಪ್ರೀಂಕೋರ್ಟ್ ಆ ಗುರಿಯನ್ನು ಹೇಗೆ ಸಾಧಿಸಲು ಯೋಜಿಸಿದೆ ಎಂಬುದರ ಕುರಿತು ಹಲವಾರು ಕಠಿಣ ಪ್ರಶ್ನೆಗಳನ್ನು ಕೇಳಿದೆ.


ಇದನ್ನೂ ಓದಿ: ದೊಡ್ಡ ಅನಾಹುತ ಸಂಭವಿಸುವ ಮೊದಲು ಸರ್ಕಾರ ಎಚ್ಚೆತ್ತುಕೊಳ್ಳಬೇಕು – ಎಚ್.ಡಿ.ಕುಮಾರಸ್ವಾಮಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...