Homeಕರ್ನಾಟಕಹೊಟ್ಟೆಗೆ ಅನ್ನ, ಬದುಕಿಗೆ ಭರವಸೆ ನೀಡುವ ಸಮಗ್ರ ಪ್ಯಾಕೇಜ್ ನೀಡಿ: ಜನಾಗ್ರಹ ಆಂದೋಲನ

ಹೊಟ್ಟೆಗೆ ಅನ್ನ, ಬದುಕಿಗೆ ಭರವಸೆ ನೀಡುವ ಸಮಗ್ರ ಪ್ಯಾಕೇಜ್ ನೀಡಿ: ಜನಾಗ್ರಹ ಆಂದೋಲನ

ಕರ್ನಾಟಕದಲ್ಲಿ 70 ಲಕ್ಷ ಬಡ ಕುಟುಂಬಗಳಿವೆ. ಸರ್ಕಾರದ ಪ್ಯಾಕೇಜ್ 5 ಲಕ್ಷ ಜನರನ್ನೂ ಒಳಗೊಂಡಿಲ್ಲ ಎಂದು ಸಂಘಟನೆ ತಿಳಿಸಿದೆ.

- Advertisement -
- Advertisement -

ರಾಜ್ಯದಲ್ಲಿ ಆಕ್ಸಿಜನ್‌, ಬೆಡ್, ಔಷಧಿ, ವ್ಯಾಕ್ಸಿನ್ ಕೊರತೆಗಳಿಂದ ಜನರ ಬದುಕು ಅತಂತ್ರವಾಗಿದ್ದ ಸಂದರ್ಭದಲ್ಲಿ ಲಾಕ್‌ಡೌನ್‌ ಘೋಷಣೆಯಾಯಿತು. ಕಳೆದ ಏಪ್ರಿಲ್ ತಿಂಗಳಿನಿಂದಲೇ ದುಡಿಮೆಯ ಅವಕಾಶಗಳು ಸಂಪೂರ್ಣ ನಿಂತು ಹೋಗಿ ಕಂಗಾಲಾಗಿದ್ದ ಜನರಿಗೆ ಲಾಕ್‌ಡೌನ್‌ ಮುಂದುವರಿಕೆ ಮತ್ತಷ್ಟು ಅತಂತ್ರರನ್ನಾಗಿಸಿದೆ. ಇಂತಹ ಸ್ಥಿತಿಯಲ್ಲಿ ಸರ್ಕಾರ ಘೋಷಿಸಿರುವ ಪ್ಯಾಕೇಜ್ ನಿರಾಶದಾಯಕವಾಗಿದ್ದು, ಹೊಟ್ಟೆಗೆ ಅನ್ನ, ಬದುಕಿಗೆ ಭರವಸೆ ನೀಡುವ ಸಮಗ್ರ ಪ್ಯಾಕೇಜ್ ಬೇಕು ಎಂದು ಜನಾಗ್ರಹ ಆಂದೋಲನ ಆಗ್ರಹಿಸಿದೆ.

ರಾಜ್ಯದಲ್ಲಿ ಲಾಕ್‌ಡೌನನ್ನು ಜೂನ್ 14ರ ವರೆಗೆ ವಿಸ್ತರಿಸಲಾಗಿದೆ. ದಿನಬಳಕೆ ವಸ್ತುಗಳು, ಬಾಡಿಗೆ, ಸಾಲ, ಮನೆ ವೆಚ್ಚಗಳ ಜೊತೆಗೆ ಆಸ್ಪತ್ರೆ ವೆಚ್ಚದ ಚಿಂತೆ ಜನರನ್ನು ಕಂಗೆಡಿಸಿದೆ. ಜನರ ಸಂಕಟವನ್ನು ಹೋಲಿಸಿದಾಗ ರಾಜ್ಯ ಸರ್ಕಾರ ಘೋಷಿಸಿರುವ ಪ್ಯಾಕೇಜ್‌ ಯಾವ ರೀತಿಯಲ್ಲೂ ಸಾಲುವುದಿಲ್ಲ. ರಾಜ್ಯದ ಜನತೆ ಎದುರಿಸುತ್ತಿರುವ ಬಿಕ್ಕಟ್ಟಿನ ಆಳ, ಗಾಢತೆ ಮತ್ತು ತೀವ್ರತೆ  ಸರ್ಕಾರಕ್ಕೆ ಅರ್ಥವೇ  ಆಗಿಲ್ಲ. 3.6 ಕೋಟಿ ಜನರಿರುವ ಕೇರಳಕ್ಕೆ ಅಲ್ಲಿನ ಸರ್ಕಾರ 20 ಸಾವಿರ ಕೋಟಿ ಪ್ಯಾಕೇಜ್‌ ನೀಡಿದೆ. ಆದರೆ, 6.8 ಕೋಟಿ ಜನರಿರುವ ಕರ್ನಾಟಕಕ್ಕೆ ನಮ್ಮ ಸರ್ಕಾರ ಘೋಷಿಸಿರುವ ಪ್ಯಾಕೇಜ್ 2 ಸಾವಿರ ಕೋಟಿಯನ್ನೂ ಹೊಂದಿಲ್ಲ ಎಂದು ಸಂಘಟನೆ ಆಕ್ರೋಶ ಹೊರಹಾಕಿದೆ.

ಕರ್ನಾಟಕದಲ್ಲಿ 70 ಲಕ್ಷ ಬಡ ಕುಟುಂಬಗಳಿವೆ. ಸರ್ಕಾರದ ಪ್ಯಾಕೇಜ್ 5 ಲಕ್ಷ ಜನರನ್ನೂ ಒಳಗೊಂಡಿಲ್ಲ. ರಾಜ್ಯದಲ್ಲಿ ಬಹುತೇಕ ಶ್ರಮಿಕರಿಗೆ ಯಾವ ನೊಂದಾವಣಿಯೂ ಇಲ್ಲ. ಅತಿ ದೊಡ್ಡ ಶ್ರಮಿಕ ವರ್ಗವಾದ ಗ್ರಾಮೀಣ ಕೂಲಿ ಕಾರ್ಮಿಕರನ್ನು, ಅತಿಸಣ್ಣ ಮತ್ತು ಸಣ್ಣ ರೈತರನ್ನು ಸರ್ಕಾರ ಪರಿಗಣನೆಗೆ ತೆಗೆದುಕೊಂಡಿಲ್ಲ. ಅಂತಹದರಲ್ಲಿ ವಲಸೆ ಕಾರ್ಮಿಕರ, ಅಲೆಮಾರಿಗಳ, ಆದಿವಾಸಿಗಳ ಕತೆ ಏನು..? ಎಂದು ಪ್ರಶ್ನಿಸಿದೆ.

ಇದನ್ನೂ ಓದಿ: ಜನಾಕ್ರೋಶದ ಸ್ಫೋಟ: ರಾಜ್ಯಾದ್ಯಂತ ಮನೆಗಳಲ್ಲಿಯೇ ಭುಗಿಲೆದ್ದ ಪ್ರತಿಭಟನೆಗಳು

ಹೀಗಾಗಿ ಜನರ ಜೀವಕ್ಕೆ ಭರವಸೆ ದೊರಕಬೇಕಾದರೆ, ಜನರ ಜೀವನೋಪಾಯಕ್ಕೆ ಆಸರೆ ಸಿಗಬೇಕಾದರೆ, ಬರಲಿರುವ ಕೋವಿಡ್ ಮೂರನೇ ಅಲೆಗೆ ರಾಜ್ಯವನ್ನು ಸಜ್ಜುಗೊಳಿಸಬೇಕಾದರೆ ಸರ್ಕಾರ ಸಮಗ್ರವಾದ ಮತ್ತು ಪರಿಣಾಮಕಾರಿಯಾದ ಮೂರನೇ ಪ್ಯಾಕೇಜನ್ನು ಘೋಷಿಸಲೇಬೇಕು. ಅದು ಈ ಕ್ರಮಗಳನ್ನು ಒಳಗೊಂಡಿರಲೇಬೇಕು ಎಂದು ಜನಾಗ್ರಹ ಆಂದೋಲನ ತನ್ನ ಬೇಡಿಕೆಗಳನ್ನು ಮುಂದಿಟ್ಟಿದೆ.

೧. ಸುಮಾರು 70 ಲಕ್ಷದಷ್ಟಿರುವ ಎಲ್ಲಾ ಬಿಪಿಎಲ್ ಕುಟುಂಬಗಳಿಗೂ ಸಮಗ್ರ ಆಹಾರದ ಕಿಟ್ ಮತ್ತು ಮಾಸಿಕ 5000 ಆರ್ಥಿಕ ನೆರವನ್ನು ನೀಡಬೇಕು.

೨. ಕೋವಿಡ್‌ನಿಂದಾಗಿ ಅನಾಥಗೊಂಡಿರುವ ಕುಟುಂಬಗಳಿಗೆ ಬದುಕು ಕಟ್ಟಿಕೊಳ್ಳಲು 5 ಲಕ್ಷ ರೂ ಪರಿಹಾರ ಧನ ನೀಡಬೇಕು.

೩. ರೈತರ ಮುಂಗಾರು ಬಿತ್ತನೆಯ ಗೊಬ್ಬರ ಮತ್ತು ಬೀಜಕ್ಕೆ ವಿಶೇಷ ಸಬ್ಸಿಡಿ ಘೋಷಿಸಬೇಕು.

೪. ಇಡೀ ರಾಜ್ಯದ ವೈದ್ಯಕೀಯ ವ್ಯವಸ್ಥೆಯನ್ನು ಬಲಪಡಿಸಬೇಕು, ಕೋವಿಡ್‌ ಚಿಕಿತ್ಸೆಯನ್ನು ಸಂಪೂರ್ಣ ಉಚಿತಗೊಳಿಸಬೇಕು ಮತ್ತು ಪ್ರಾಥಮಿಕ ಆರೋಗ್ಯ ಕೇಂದ್ರಗಳಿರುವ ಸ್ಥಳಗಳಲ್ಲೆಲ್ಲಾ ಕೋವಿಡ್‌ ಆರೈಕೆ ಕೇಂದ್ರಗಳನ್ನು ಪ್ರಾರಂಭಿಸಬೇಕು.

೫. ಎಲ್ಲಾ ವಯಸ್ಸಿನವರಿಗೂ ಕೂಡಲೇ ಉಚಿತ ವ್ಯಾಕ್ಸಿನ್ ವ್ಯವಸ್ಥೆ ಮಾಡಬೇಕು. ಯಾವುದೇ ಗೊಂದಲ, ಬೇಧಭಾವಕ್ಕೆ ಅವಕಾಶ ಕೊಡದೆ, ಎಷ್ಟು ದಿನದೊಳಗೆ ಹಾಗೂ ಯಾವ ರೀತಿಯ ಪ್ರಕ್ರಿಯೆ ಅಳವಡಿಸಿ ಇದನ್ನು ಪೂರ್ಣಗೊಳಿಸಲಾಗುವುದು ಎಂಬುದನ್ನು ಸರ್ಕಾರ ಜನತೆಗೆ ಸ್ಪಷ್ಟಪಡಿಸಬೇಕು ಎಂದಿದೆ.

ಜನಪರ ಆರ್ಥಿಕ ತಜ್ಞರು ಈ ಕ್ರಮಗಳಿಗಾಗಿ ತಗಲುವ ಒಟ್ಟು ವೆಚ್ಚವಷ್ಟು..? ಮತ್ತುಇದಕ್ಕಾಗಿ ಸಂಪನ್ಮೂಲ ಕ್ರೂಢೀಕರಣದ ಮಾರ್ಗಗಳು ಯಾವುವು..?ಎಂಬ ಪ್ರಸ್ತಾಪವನ್ನು ಸಿದ್ಧಪಡಿಸುತ್ತಿದ್ದಾರೆ. ಒಂದೆರಡು ದಿನದಲ್ಲಿ ಈ ಖಚಿತ ಪ್ರಸ್ತಾಪ ಹೊಂದಿರುವ ಪತ್ರವನ್ನು ಮುಖ್ಯಮಂತ್ರಿಗಳಿಗೆ ಸಲ್ಲಿಸಲಾಗುವುದು. ಅದಕ್ಕೂ ಸರ್ಕಾರ ಸ್ಪಂದಿಸದೇ ಹೋದಲ್ಲಿ ಎಲ್ಲಾ ಮಂತ್ರಿಗಳು ಹಾಗೂ ಶಾಸಕರ ಮನೆಗಳ ಮುಂದೆ ಅನಿರ್ಧಿಷ್ಟ ಸತ್ಯಾಗ್ರಹ ಪ್ರಾರಂಭಿಸಲಾಗುವುದು ಎಂದು ಎಚ್ಚರಿಕೆ ನೀಡಿದೆ.

ಸಸಿಕಾಂತ್ ಸೆಂದಿಲ್, ಹೆಚ್.ಆರ್ ಬಸವರಾಜಪ್ಪ, ಚಾಮರಸ ಮಾಲೀ ಪಾಟೀಲ್, ಮಾವಳ್ಳಿ ಶಂಕರ್, ಕೆ.ಎಲ್. ಅಶೋಕ್, ಸ್ವರ್ಣ ಭಟ್, ಯಾಸಿನ್ ಮಲ್ಪೆ, ಯೂಸೂಫ್‌ಕನ್ನಿ, ಸಿದ್ದನಗೌಡ ಪಾಟೀಲ್ ಮತ್ತು ನೂರ್ ಶ್ರೀಧರ್ ಜನಾಗ್ರಹ ಆಂದೋಲನದ ಪರವಾಗಿ ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿದ್ದಾರೆ.

ಕೊರೊನಾ ಲಾಕ್‌ಡೌನ್‌ ಮೊದಲ ಹಂತದಲ್ಲಿ ಸರ್ಕಾರ 1,200 ಕೋಟಿ ಮೌಲ್ಯದ ಮೊದಲ ಪ್ಯಾಕೇಜ್ ಘೋಷಿಸಿತು. ಈ ಪ್ಯಾಕೇಜಿನ ವಿರುದ್ಧ ಜನಾಕ್ರೋಶ ವ್ಯಕ್ತವಾಗಿತ್ತು. ಜನಾಗ್ರಹ ಆಂದೋಲನವು ಮೇ 26 ರಂದು “ನಾವೂ ಬದುಕಬೇಕು” ಎಂಬ ಘೋಷದಡಿ ಪ್ರತಿಭಟನೆಗೆ ಕರೆ ನೀಡಿತ್ತು. ಸಾವಿರಕ್ಕೂ ಹೆಚ್ಚು ಸ್ಥಳಗಳಲ್ಲಿ ಜನ ಬೀದಿಗೆ ಬಂದು ತಮ್ಮ ಆಕ್ರೋಶವನ್ನು ವ್ಯಕ್ತಪಡಿಸಿದರು. ಈ ಆಂದೋಲನಕ್ಕೆ ವಿಪಕ್ಷಗಳು ಬೆಂಬಲ ನೀಡಿದ್ದವು.


ಇದನ್ನೂ ಓದಿ: “ನಾವೂ ಬದುಕಬೇಕು”: ಜನಾಗ್ರಹ ಆಂದೋಲನಕ್ಕೆ ಕಾಂಗ್ರೆಸ್‌ ಮತ್ತು ಜೆಡಿಎಸ್‌ ಬೆಂಬಲ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...