Homeಕರ್ನಾಟಕಹೊಟ್ಟೆಗೆ ಅನ್ನ, ಬದುಕಿಗೆ ಭರವಸೆ ನೀಡುವ ಸಮಗ್ರ ಪ್ಯಾಕೇಜ್ ನೀಡಿ: ಜನಾಗ್ರಹ ಆಂದೋಲನ

ಹೊಟ್ಟೆಗೆ ಅನ್ನ, ಬದುಕಿಗೆ ಭರವಸೆ ನೀಡುವ ಸಮಗ್ರ ಪ್ಯಾಕೇಜ್ ನೀಡಿ: ಜನಾಗ್ರಹ ಆಂದೋಲನ

ಕರ್ನಾಟಕದಲ್ಲಿ 70 ಲಕ್ಷ ಬಡ ಕುಟುಂಬಗಳಿವೆ. ಸರ್ಕಾರದ ಪ್ಯಾಕೇಜ್ 5 ಲಕ್ಷ ಜನರನ್ನೂ ಒಳಗೊಂಡಿಲ್ಲ ಎಂದು ಸಂಘಟನೆ ತಿಳಿಸಿದೆ.

- Advertisement -
- Advertisement -

ರಾಜ್ಯದಲ್ಲಿ ಆಕ್ಸಿಜನ್‌, ಬೆಡ್, ಔಷಧಿ, ವ್ಯಾಕ್ಸಿನ್ ಕೊರತೆಗಳಿಂದ ಜನರ ಬದುಕು ಅತಂತ್ರವಾಗಿದ್ದ ಸಂದರ್ಭದಲ್ಲಿ ಲಾಕ್‌ಡೌನ್‌ ಘೋಷಣೆಯಾಯಿತು. ಕಳೆದ ಏಪ್ರಿಲ್ ತಿಂಗಳಿನಿಂದಲೇ ದುಡಿಮೆಯ ಅವಕಾಶಗಳು ಸಂಪೂರ್ಣ ನಿಂತು ಹೋಗಿ ಕಂಗಾಲಾಗಿದ್ದ ಜನರಿಗೆ ಲಾಕ್‌ಡೌನ್‌ ಮುಂದುವರಿಕೆ ಮತ್ತಷ್ಟು ಅತಂತ್ರರನ್ನಾಗಿಸಿದೆ. ಇಂತಹ ಸ್ಥಿತಿಯಲ್ಲಿ ಸರ್ಕಾರ ಘೋಷಿಸಿರುವ ಪ್ಯಾಕೇಜ್ ನಿರಾಶದಾಯಕವಾಗಿದ್ದು, ಹೊಟ್ಟೆಗೆ ಅನ್ನ, ಬದುಕಿಗೆ ಭರವಸೆ ನೀಡುವ ಸಮಗ್ರ ಪ್ಯಾಕೇಜ್ ಬೇಕು ಎಂದು ಜನಾಗ್ರಹ ಆಂದೋಲನ ಆಗ್ರಹಿಸಿದೆ.

ರಾಜ್ಯದಲ್ಲಿ ಲಾಕ್‌ಡೌನನ್ನು ಜೂನ್ 14ರ ವರೆಗೆ ವಿಸ್ತರಿಸಲಾಗಿದೆ. ದಿನಬಳಕೆ ವಸ್ತುಗಳು, ಬಾಡಿಗೆ, ಸಾಲ, ಮನೆ ವೆಚ್ಚಗಳ ಜೊತೆಗೆ ಆಸ್ಪತ್ರೆ ವೆಚ್ಚದ ಚಿಂತೆ ಜನರನ್ನು ಕಂಗೆಡಿಸಿದೆ. ಜನರ ಸಂಕಟವನ್ನು ಹೋಲಿಸಿದಾಗ ರಾಜ್ಯ ಸರ್ಕಾರ ಘೋಷಿಸಿರುವ ಪ್ಯಾಕೇಜ್‌ ಯಾವ ರೀತಿಯಲ್ಲೂ ಸಾಲುವುದಿಲ್ಲ. ರಾಜ್ಯದ ಜನತೆ ಎದುರಿಸುತ್ತಿರುವ ಬಿಕ್ಕಟ್ಟಿನ ಆಳ, ಗಾಢತೆ ಮತ್ತು ತೀವ್ರತೆ  ಸರ್ಕಾರಕ್ಕೆ ಅರ್ಥವೇ  ಆಗಿಲ್ಲ. 3.6 ಕೋಟಿ ಜನರಿರುವ ಕೇರಳಕ್ಕೆ ಅಲ್ಲಿನ ಸರ್ಕಾರ 20 ಸಾವಿರ ಕೋಟಿ ಪ್ಯಾಕೇಜ್‌ ನೀಡಿದೆ. ಆದರೆ, 6.8 ಕೋಟಿ ಜನರಿರುವ ಕರ್ನಾಟಕಕ್ಕೆ ನಮ್ಮ ಸರ್ಕಾರ ಘೋಷಿಸಿರುವ ಪ್ಯಾಕೇಜ್ 2 ಸಾವಿರ ಕೋಟಿಯನ್ನೂ ಹೊಂದಿಲ್ಲ ಎಂದು ಸಂಘಟನೆ ಆಕ್ರೋಶ ಹೊರಹಾಕಿದೆ.

ಕರ್ನಾಟಕದಲ್ಲಿ 70 ಲಕ್ಷ ಬಡ ಕುಟುಂಬಗಳಿವೆ. ಸರ್ಕಾರದ ಪ್ಯಾಕೇಜ್ 5 ಲಕ್ಷ ಜನರನ್ನೂ ಒಳಗೊಂಡಿಲ್ಲ. ರಾಜ್ಯದಲ್ಲಿ ಬಹುತೇಕ ಶ್ರಮಿಕರಿಗೆ ಯಾವ ನೊಂದಾವಣಿಯೂ ಇಲ್ಲ. ಅತಿ ದೊಡ್ಡ ಶ್ರಮಿಕ ವರ್ಗವಾದ ಗ್ರಾಮೀಣ ಕೂಲಿ ಕಾರ್ಮಿಕರನ್ನು, ಅತಿಸಣ್ಣ ಮತ್ತು ಸಣ್ಣ ರೈತರನ್ನು ಸರ್ಕಾರ ಪರಿಗಣನೆಗೆ ತೆಗೆದುಕೊಂಡಿಲ್ಲ. ಅಂತಹದರಲ್ಲಿ ವಲಸೆ ಕಾರ್ಮಿಕರ, ಅಲೆಮಾರಿಗಳ, ಆದಿವಾಸಿಗಳ ಕತೆ ಏನು..? ಎಂದು ಪ್ರಶ್ನಿಸಿದೆ.

ಇದನ್ನೂ ಓದಿ: ಜನಾಕ್ರೋಶದ ಸ್ಫೋಟ: ರಾಜ್ಯಾದ್ಯಂತ ಮನೆಗಳಲ್ಲಿಯೇ ಭುಗಿಲೆದ್ದ ಪ್ರತಿಭಟನೆಗಳು

ಹೀಗಾಗಿ ಜನರ ಜೀವಕ್ಕೆ ಭರವಸೆ ದೊರಕಬೇಕಾದರೆ, ಜನರ ಜೀವನೋಪಾಯಕ್ಕೆ ಆಸರೆ ಸಿಗಬೇಕಾದರೆ, ಬರಲಿರುವ ಕೋವಿಡ್ ಮೂರನೇ ಅಲೆಗೆ ರಾಜ್ಯವನ್ನು ಸಜ್ಜುಗೊಳಿಸಬೇಕಾದರೆ ಸರ್ಕಾರ ಸಮಗ್ರವಾದ ಮತ್ತು ಪರಿಣಾಮಕಾರಿಯಾದ ಮೂರನೇ ಪ್ಯಾಕೇಜನ್ನು ಘೋಷಿಸಲೇಬೇಕು. ಅದು ಈ ಕ್ರಮಗಳನ್ನು ಒಳಗೊಂಡಿರಲೇಬೇಕು ಎಂದು ಜನಾಗ್ರಹ ಆಂದೋಲನ ತನ್ನ ಬೇಡಿಕೆಗಳನ್ನು ಮುಂದಿಟ್ಟಿದೆ.

೧. ಸುಮಾರು 70 ಲಕ್ಷದಷ್ಟಿರುವ ಎಲ್ಲಾ ಬಿಪಿಎಲ್ ಕುಟುಂಬಗಳಿಗೂ ಸಮಗ್ರ ಆಹಾರದ ಕಿಟ್ ಮತ್ತು ಮಾಸಿಕ 5000 ಆರ್ಥಿಕ ನೆರವನ್ನು ನೀಡಬೇಕು.

೨. ಕೋವಿಡ್‌ನಿಂದಾಗಿ ಅನಾಥಗೊಂಡಿರುವ ಕುಟುಂಬಗಳಿಗೆ ಬದುಕು ಕಟ್ಟಿಕೊಳ್ಳಲು 5 ಲಕ್ಷ ರೂ ಪರಿಹಾರ ಧನ ನೀಡಬೇಕು.

೩. ರೈತರ ಮುಂಗಾರು ಬಿತ್ತನೆಯ ಗೊಬ್ಬರ ಮತ್ತು ಬೀಜಕ್ಕೆ ವಿಶೇಷ ಸಬ್ಸಿಡಿ ಘೋಷಿಸಬೇಕು.

೪. ಇಡೀ ರಾಜ್ಯದ ವೈದ್ಯಕೀಯ ವ್ಯವಸ್ಥೆಯನ್ನು ಬಲಪಡಿಸಬೇಕು, ಕೋವಿಡ್‌ ಚಿಕಿತ್ಸೆಯನ್ನು ಸಂಪೂರ್ಣ ಉಚಿತಗೊಳಿಸಬೇಕು ಮತ್ತು ಪ್ರಾಥಮಿಕ ಆರೋಗ್ಯ ಕೇಂದ್ರಗಳಿರುವ ಸ್ಥಳಗಳಲ್ಲೆಲ್ಲಾ ಕೋವಿಡ್‌ ಆರೈಕೆ ಕೇಂದ್ರಗಳನ್ನು ಪ್ರಾರಂಭಿಸಬೇಕು.

೫. ಎಲ್ಲಾ ವಯಸ್ಸಿನವರಿಗೂ ಕೂಡಲೇ ಉಚಿತ ವ್ಯಾಕ್ಸಿನ್ ವ್ಯವಸ್ಥೆ ಮಾಡಬೇಕು. ಯಾವುದೇ ಗೊಂದಲ, ಬೇಧಭಾವಕ್ಕೆ ಅವಕಾಶ ಕೊಡದೆ, ಎಷ್ಟು ದಿನದೊಳಗೆ ಹಾಗೂ ಯಾವ ರೀತಿಯ ಪ್ರಕ್ರಿಯೆ ಅಳವಡಿಸಿ ಇದನ್ನು ಪೂರ್ಣಗೊಳಿಸಲಾಗುವುದು ಎಂಬುದನ್ನು ಸರ್ಕಾರ ಜನತೆಗೆ ಸ್ಪಷ್ಟಪಡಿಸಬೇಕು ಎಂದಿದೆ.

ಜನಪರ ಆರ್ಥಿಕ ತಜ್ಞರು ಈ ಕ್ರಮಗಳಿಗಾಗಿ ತಗಲುವ ಒಟ್ಟು ವೆಚ್ಚವಷ್ಟು..? ಮತ್ತುಇದಕ್ಕಾಗಿ ಸಂಪನ್ಮೂಲ ಕ್ರೂಢೀಕರಣದ ಮಾರ್ಗಗಳು ಯಾವುವು..?ಎಂಬ ಪ್ರಸ್ತಾಪವನ್ನು ಸಿದ್ಧಪಡಿಸುತ್ತಿದ್ದಾರೆ. ಒಂದೆರಡು ದಿನದಲ್ಲಿ ಈ ಖಚಿತ ಪ್ರಸ್ತಾಪ ಹೊಂದಿರುವ ಪತ್ರವನ್ನು ಮುಖ್ಯಮಂತ್ರಿಗಳಿಗೆ ಸಲ್ಲಿಸಲಾಗುವುದು. ಅದಕ್ಕೂ ಸರ್ಕಾರ ಸ್ಪಂದಿಸದೇ ಹೋದಲ್ಲಿ ಎಲ್ಲಾ ಮಂತ್ರಿಗಳು ಹಾಗೂ ಶಾಸಕರ ಮನೆಗಳ ಮುಂದೆ ಅನಿರ್ಧಿಷ್ಟ ಸತ್ಯಾಗ್ರಹ ಪ್ರಾರಂಭಿಸಲಾಗುವುದು ಎಂದು ಎಚ್ಚರಿಕೆ ನೀಡಿದೆ.

ಸಸಿಕಾಂತ್ ಸೆಂದಿಲ್, ಹೆಚ್.ಆರ್ ಬಸವರಾಜಪ್ಪ, ಚಾಮರಸ ಮಾಲೀ ಪಾಟೀಲ್, ಮಾವಳ್ಳಿ ಶಂಕರ್, ಕೆ.ಎಲ್. ಅಶೋಕ್, ಸ್ವರ್ಣ ಭಟ್, ಯಾಸಿನ್ ಮಲ್ಪೆ, ಯೂಸೂಫ್‌ಕನ್ನಿ, ಸಿದ್ದನಗೌಡ ಪಾಟೀಲ್ ಮತ್ತು ನೂರ್ ಶ್ರೀಧರ್ ಜನಾಗ್ರಹ ಆಂದೋಲನದ ಪರವಾಗಿ ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿದ್ದಾರೆ.

ಕೊರೊನಾ ಲಾಕ್‌ಡೌನ್‌ ಮೊದಲ ಹಂತದಲ್ಲಿ ಸರ್ಕಾರ 1,200 ಕೋಟಿ ಮೌಲ್ಯದ ಮೊದಲ ಪ್ಯಾಕೇಜ್ ಘೋಷಿಸಿತು. ಈ ಪ್ಯಾಕೇಜಿನ ವಿರುದ್ಧ ಜನಾಕ್ರೋಶ ವ್ಯಕ್ತವಾಗಿತ್ತು. ಜನಾಗ್ರಹ ಆಂದೋಲನವು ಮೇ 26 ರಂದು “ನಾವೂ ಬದುಕಬೇಕು” ಎಂಬ ಘೋಷದಡಿ ಪ್ರತಿಭಟನೆಗೆ ಕರೆ ನೀಡಿತ್ತು. ಸಾವಿರಕ್ಕೂ ಹೆಚ್ಚು ಸ್ಥಳಗಳಲ್ಲಿ ಜನ ಬೀದಿಗೆ ಬಂದು ತಮ್ಮ ಆಕ್ರೋಶವನ್ನು ವ್ಯಕ್ತಪಡಿಸಿದರು. ಈ ಆಂದೋಲನಕ್ಕೆ ವಿಪಕ್ಷಗಳು ಬೆಂಬಲ ನೀಡಿದ್ದವು.


ಇದನ್ನೂ ಓದಿ: “ನಾವೂ ಬದುಕಬೇಕು”: ಜನಾಗ್ರಹ ಆಂದೋಲನಕ್ಕೆ ಕಾಂಗ್ರೆಸ್‌ ಮತ್ತು ಜೆಡಿಎಸ್‌ ಬೆಂಬಲ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...