Homeಕರ್ನಾಟಕಹೊಟ್ಟೆಗೆ ಅನ್ನ, ಬದುಕಿಗೆ ಭರವಸೆ ನೀಡುವ ಸಮಗ್ರ ಪ್ಯಾಕೇಜ್ ನೀಡಿ: ಜನಾಗ್ರಹ ಆಂದೋಲನ

ಹೊಟ್ಟೆಗೆ ಅನ್ನ, ಬದುಕಿಗೆ ಭರವಸೆ ನೀಡುವ ಸಮಗ್ರ ಪ್ಯಾಕೇಜ್ ನೀಡಿ: ಜನಾಗ್ರಹ ಆಂದೋಲನ

ಕರ್ನಾಟಕದಲ್ಲಿ 70 ಲಕ್ಷ ಬಡ ಕುಟುಂಬಗಳಿವೆ. ಸರ್ಕಾರದ ಪ್ಯಾಕೇಜ್ 5 ಲಕ್ಷ ಜನರನ್ನೂ ಒಳಗೊಂಡಿಲ್ಲ ಎಂದು ಸಂಘಟನೆ ತಿಳಿಸಿದೆ.

- Advertisement -
- Advertisement -

ರಾಜ್ಯದಲ್ಲಿ ಆಕ್ಸಿಜನ್‌, ಬೆಡ್, ಔಷಧಿ, ವ್ಯಾಕ್ಸಿನ್ ಕೊರತೆಗಳಿಂದ ಜನರ ಬದುಕು ಅತಂತ್ರವಾಗಿದ್ದ ಸಂದರ್ಭದಲ್ಲಿ ಲಾಕ್‌ಡೌನ್‌ ಘೋಷಣೆಯಾಯಿತು. ಕಳೆದ ಏಪ್ರಿಲ್ ತಿಂಗಳಿನಿಂದಲೇ ದುಡಿಮೆಯ ಅವಕಾಶಗಳು ಸಂಪೂರ್ಣ ನಿಂತು ಹೋಗಿ ಕಂಗಾಲಾಗಿದ್ದ ಜನರಿಗೆ ಲಾಕ್‌ಡೌನ್‌ ಮುಂದುವರಿಕೆ ಮತ್ತಷ್ಟು ಅತಂತ್ರರನ್ನಾಗಿಸಿದೆ. ಇಂತಹ ಸ್ಥಿತಿಯಲ್ಲಿ ಸರ್ಕಾರ ಘೋಷಿಸಿರುವ ಪ್ಯಾಕೇಜ್ ನಿರಾಶದಾಯಕವಾಗಿದ್ದು, ಹೊಟ್ಟೆಗೆ ಅನ್ನ, ಬದುಕಿಗೆ ಭರವಸೆ ನೀಡುವ ಸಮಗ್ರ ಪ್ಯಾಕೇಜ್ ಬೇಕು ಎಂದು ಜನಾಗ್ರಹ ಆಂದೋಲನ ಆಗ್ರಹಿಸಿದೆ.

ರಾಜ್ಯದಲ್ಲಿ ಲಾಕ್‌ಡೌನನ್ನು ಜೂನ್ 14ರ ವರೆಗೆ ವಿಸ್ತರಿಸಲಾಗಿದೆ. ದಿನಬಳಕೆ ವಸ್ತುಗಳು, ಬಾಡಿಗೆ, ಸಾಲ, ಮನೆ ವೆಚ್ಚಗಳ ಜೊತೆಗೆ ಆಸ್ಪತ್ರೆ ವೆಚ್ಚದ ಚಿಂತೆ ಜನರನ್ನು ಕಂಗೆಡಿಸಿದೆ. ಜನರ ಸಂಕಟವನ್ನು ಹೋಲಿಸಿದಾಗ ರಾಜ್ಯ ಸರ್ಕಾರ ಘೋಷಿಸಿರುವ ಪ್ಯಾಕೇಜ್‌ ಯಾವ ರೀತಿಯಲ್ಲೂ ಸಾಲುವುದಿಲ್ಲ. ರಾಜ್ಯದ ಜನತೆ ಎದುರಿಸುತ್ತಿರುವ ಬಿಕ್ಕಟ್ಟಿನ ಆಳ, ಗಾಢತೆ ಮತ್ತು ತೀವ್ರತೆ  ಸರ್ಕಾರಕ್ಕೆ ಅರ್ಥವೇ  ಆಗಿಲ್ಲ. 3.6 ಕೋಟಿ ಜನರಿರುವ ಕೇರಳಕ್ಕೆ ಅಲ್ಲಿನ ಸರ್ಕಾರ 20 ಸಾವಿರ ಕೋಟಿ ಪ್ಯಾಕೇಜ್‌ ನೀಡಿದೆ. ಆದರೆ, 6.8 ಕೋಟಿ ಜನರಿರುವ ಕರ್ನಾಟಕಕ್ಕೆ ನಮ್ಮ ಸರ್ಕಾರ ಘೋಷಿಸಿರುವ ಪ್ಯಾಕೇಜ್ 2 ಸಾವಿರ ಕೋಟಿಯನ್ನೂ ಹೊಂದಿಲ್ಲ ಎಂದು ಸಂಘಟನೆ ಆಕ್ರೋಶ ಹೊರಹಾಕಿದೆ.

ಕರ್ನಾಟಕದಲ್ಲಿ 70 ಲಕ್ಷ ಬಡ ಕುಟುಂಬಗಳಿವೆ. ಸರ್ಕಾರದ ಪ್ಯಾಕೇಜ್ 5 ಲಕ್ಷ ಜನರನ್ನೂ ಒಳಗೊಂಡಿಲ್ಲ. ರಾಜ್ಯದಲ್ಲಿ ಬಹುತೇಕ ಶ್ರಮಿಕರಿಗೆ ಯಾವ ನೊಂದಾವಣಿಯೂ ಇಲ್ಲ. ಅತಿ ದೊಡ್ಡ ಶ್ರಮಿಕ ವರ್ಗವಾದ ಗ್ರಾಮೀಣ ಕೂಲಿ ಕಾರ್ಮಿಕರನ್ನು, ಅತಿಸಣ್ಣ ಮತ್ತು ಸಣ್ಣ ರೈತರನ್ನು ಸರ್ಕಾರ ಪರಿಗಣನೆಗೆ ತೆಗೆದುಕೊಂಡಿಲ್ಲ. ಅಂತಹದರಲ್ಲಿ ವಲಸೆ ಕಾರ್ಮಿಕರ, ಅಲೆಮಾರಿಗಳ, ಆದಿವಾಸಿಗಳ ಕತೆ ಏನು..? ಎಂದು ಪ್ರಶ್ನಿಸಿದೆ.

ಇದನ್ನೂ ಓದಿ: ಜನಾಕ್ರೋಶದ ಸ್ಫೋಟ: ರಾಜ್ಯಾದ್ಯಂತ ಮನೆಗಳಲ್ಲಿಯೇ ಭುಗಿಲೆದ್ದ ಪ್ರತಿಭಟನೆಗಳು

ಹೀಗಾಗಿ ಜನರ ಜೀವಕ್ಕೆ ಭರವಸೆ ದೊರಕಬೇಕಾದರೆ, ಜನರ ಜೀವನೋಪಾಯಕ್ಕೆ ಆಸರೆ ಸಿಗಬೇಕಾದರೆ, ಬರಲಿರುವ ಕೋವಿಡ್ ಮೂರನೇ ಅಲೆಗೆ ರಾಜ್ಯವನ್ನು ಸಜ್ಜುಗೊಳಿಸಬೇಕಾದರೆ ಸರ್ಕಾರ ಸಮಗ್ರವಾದ ಮತ್ತು ಪರಿಣಾಮಕಾರಿಯಾದ ಮೂರನೇ ಪ್ಯಾಕೇಜನ್ನು ಘೋಷಿಸಲೇಬೇಕು. ಅದು ಈ ಕ್ರಮಗಳನ್ನು ಒಳಗೊಂಡಿರಲೇಬೇಕು ಎಂದು ಜನಾಗ್ರಹ ಆಂದೋಲನ ತನ್ನ ಬೇಡಿಕೆಗಳನ್ನು ಮುಂದಿಟ್ಟಿದೆ.

೧. ಸುಮಾರು 70 ಲಕ್ಷದಷ್ಟಿರುವ ಎಲ್ಲಾ ಬಿಪಿಎಲ್ ಕುಟುಂಬಗಳಿಗೂ ಸಮಗ್ರ ಆಹಾರದ ಕಿಟ್ ಮತ್ತು ಮಾಸಿಕ 5000 ಆರ್ಥಿಕ ನೆರವನ್ನು ನೀಡಬೇಕು.

೨. ಕೋವಿಡ್‌ನಿಂದಾಗಿ ಅನಾಥಗೊಂಡಿರುವ ಕುಟುಂಬಗಳಿಗೆ ಬದುಕು ಕಟ್ಟಿಕೊಳ್ಳಲು 5 ಲಕ್ಷ ರೂ ಪರಿಹಾರ ಧನ ನೀಡಬೇಕು.

೩. ರೈತರ ಮುಂಗಾರು ಬಿತ್ತನೆಯ ಗೊಬ್ಬರ ಮತ್ತು ಬೀಜಕ್ಕೆ ವಿಶೇಷ ಸಬ್ಸಿಡಿ ಘೋಷಿಸಬೇಕು.

೪. ಇಡೀ ರಾಜ್ಯದ ವೈದ್ಯಕೀಯ ವ್ಯವಸ್ಥೆಯನ್ನು ಬಲಪಡಿಸಬೇಕು, ಕೋವಿಡ್‌ ಚಿಕಿತ್ಸೆಯನ್ನು ಸಂಪೂರ್ಣ ಉಚಿತಗೊಳಿಸಬೇಕು ಮತ್ತು ಪ್ರಾಥಮಿಕ ಆರೋಗ್ಯ ಕೇಂದ್ರಗಳಿರುವ ಸ್ಥಳಗಳಲ್ಲೆಲ್ಲಾ ಕೋವಿಡ್‌ ಆರೈಕೆ ಕೇಂದ್ರಗಳನ್ನು ಪ್ರಾರಂಭಿಸಬೇಕು.

೫. ಎಲ್ಲಾ ವಯಸ್ಸಿನವರಿಗೂ ಕೂಡಲೇ ಉಚಿತ ವ್ಯಾಕ್ಸಿನ್ ವ್ಯವಸ್ಥೆ ಮಾಡಬೇಕು. ಯಾವುದೇ ಗೊಂದಲ, ಬೇಧಭಾವಕ್ಕೆ ಅವಕಾಶ ಕೊಡದೆ, ಎಷ್ಟು ದಿನದೊಳಗೆ ಹಾಗೂ ಯಾವ ರೀತಿಯ ಪ್ರಕ್ರಿಯೆ ಅಳವಡಿಸಿ ಇದನ್ನು ಪೂರ್ಣಗೊಳಿಸಲಾಗುವುದು ಎಂಬುದನ್ನು ಸರ್ಕಾರ ಜನತೆಗೆ ಸ್ಪಷ್ಟಪಡಿಸಬೇಕು ಎಂದಿದೆ.

ಜನಪರ ಆರ್ಥಿಕ ತಜ್ಞರು ಈ ಕ್ರಮಗಳಿಗಾಗಿ ತಗಲುವ ಒಟ್ಟು ವೆಚ್ಚವಷ್ಟು..? ಮತ್ತುಇದಕ್ಕಾಗಿ ಸಂಪನ್ಮೂಲ ಕ್ರೂಢೀಕರಣದ ಮಾರ್ಗಗಳು ಯಾವುವು..?ಎಂಬ ಪ್ರಸ್ತಾಪವನ್ನು ಸಿದ್ಧಪಡಿಸುತ್ತಿದ್ದಾರೆ. ಒಂದೆರಡು ದಿನದಲ್ಲಿ ಈ ಖಚಿತ ಪ್ರಸ್ತಾಪ ಹೊಂದಿರುವ ಪತ್ರವನ್ನು ಮುಖ್ಯಮಂತ್ರಿಗಳಿಗೆ ಸಲ್ಲಿಸಲಾಗುವುದು. ಅದಕ್ಕೂ ಸರ್ಕಾರ ಸ್ಪಂದಿಸದೇ ಹೋದಲ್ಲಿ ಎಲ್ಲಾ ಮಂತ್ರಿಗಳು ಹಾಗೂ ಶಾಸಕರ ಮನೆಗಳ ಮುಂದೆ ಅನಿರ್ಧಿಷ್ಟ ಸತ್ಯಾಗ್ರಹ ಪ್ರಾರಂಭಿಸಲಾಗುವುದು ಎಂದು ಎಚ್ಚರಿಕೆ ನೀಡಿದೆ.

ಸಸಿಕಾಂತ್ ಸೆಂದಿಲ್, ಹೆಚ್.ಆರ್ ಬಸವರಾಜಪ್ಪ, ಚಾಮರಸ ಮಾಲೀ ಪಾಟೀಲ್, ಮಾವಳ್ಳಿ ಶಂಕರ್, ಕೆ.ಎಲ್. ಅಶೋಕ್, ಸ್ವರ್ಣ ಭಟ್, ಯಾಸಿನ್ ಮಲ್ಪೆ, ಯೂಸೂಫ್‌ಕನ್ನಿ, ಸಿದ್ದನಗೌಡ ಪಾಟೀಲ್ ಮತ್ತು ನೂರ್ ಶ್ರೀಧರ್ ಜನಾಗ್ರಹ ಆಂದೋಲನದ ಪರವಾಗಿ ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿದ್ದಾರೆ.

ಕೊರೊನಾ ಲಾಕ್‌ಡೌನ್‌ ಮೊದಲ ಹಂತದಲ್ಲಿ ಸರ್ಕಾರ 1,200 ಕೋಟಿ ಮೌಲ್ಯದ ಮೊದಲ ಪ್ಯಾಕೇಜ್ ಘೋಷಿಸಿತು. ಈ ಪ್ಯಾಕೇಜಿನ ವಿರುದ್ಧ ಜನಾಕ್ರೋಶ ವ್ಯಕ್ತವಾಗಿತ್ತು. ಜನಾಗ್ರಹ ಆಂದೋಲನವು ಮೇ 26 ರಂದು “ನಾವೂ ಬದುಕಬೇಕು” ಎಂಬ ಘೋಷದಡಿ ಪ್ರತಿಭಟನೆಗೆ ಕರೆ ನೀಡಿತ್ತು. ಸಾವಿರಕ್ಕೂ ಹೆಚ್ಚು ಸ್ಥಳಗಳಲ್ಲಿ ಜನ ಬೀದಿಗೆ ಬಂದು ತಮ್ಮ ಆಕ್ರೋಶವನ್ನು ವ್ಯಕ್ತಪಡಿಸಿದರು. ಈ ಆಂದೋಲನಕ್ಕೆ ವಿಪಕ್ಷಗಳು ಬೆಂಬಲ ನೀಡಿದ್ದವು.


ಇದನ್ನೂ ಓದಿ: “ನಾವೂ ಬದುಕಬೇಕು”: ಜನಾಗ್ರಹ ಆಂದೋಲನಕ್ಕೆ ಕಾಂಗ್ರೆಸ್‌ ಮತ್ತು ಜೆಡಿಎಸ್‌ ಬೆಂಬಲ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...

ಬಿಹಾರ: ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಯತ್ನ; ಹಲ್ಲೆ ಮಾಡಿ ವಿಡಿಯೋ ಹರಿಬಿಟ್ಟ ದುಷ್ಟರು: ಇಬ್ಬರ ಬಂಧನ 

ಬಿಹಾರದ ನಳಂದ ಜಿಲ್ಲೆಯಲ್ಲಿ ನಾಚಿಕೆಗೇಡಿನ ಮತ್ತು ಆತಂಕಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ನೂರ್ಸರಾಯ್ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ಮೂವರು ಪುರುಷರು ವಿವಾಹಿತ ಮಹಿಳೆಯ ಮೇಲೆ ಸಾರ್ವಜನಿಕವಾಗಿ ಸಾಮೂಹಿಕ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ದೌರ್ಜನ್ಯ ವಿರೋಧಿಸಿ...