Homeಕರೋನಾ ತಲ್ಲಣದೆಹಲಿ: ಕೋವಿಡ್‌ನಿಂದ ಗುಣಮುಖರಾದವರಲ್ಲಿ ಇತರ ಗಂಭೀರ ಸಮಸ್ಯೆಗಳು

ದೆಹಲಿ: ಕೋವಿಡ್‌ನಿಂದ ಗುಣಮುಖರಾದವರಲ್ಲಿ ಇತರ ಗಂಭೀರ ಸಮಸ್ಯೆಗಳು

- Advertisement -
- Advertisement -

ದೆಹಲಿಯಲ್ಲಿ ಕೋವಿಡ್ ನಿಯಂತ್ರಣ ಒಂದು ಹಂತಕ್ಕೆ ಬರುತ್ತಿದೆ. ಆದರೆ ಕೋವಿಡ್‌ನಿಂದ ಗುಣಮುಖರಾದ ಹಲವರಲ್ಲಿ ಬೇರೆ ಬಗೆಯ ಅನಾರೋಗ್ಯ ಕಾಣಿಸಿಕೊಳ್ಳುತ್ತಿದೆ ಎಂದು ವೈದ್ಯರನ್ನು ಉಲ್ಲೇಖಿಸಿ ಎನ್‌ಡಿಟಿವಿ ವರದಿ ಮಾಡಿದೆ.

ವೈದ್ಯರ ಪ್ರಕಾರ, ದೆಹಲಿ ಆಸ್ಪತ್ರೆಗಳ ಹೊರರೋಗಿ ವಿಭಾಗಗಳಲ್ಲಿ (ಒಪಿಡಿ) ಕೋವಿಡ್‌ನಿಂದ ಗುಣಮುಖರಾಗಿ ಈಗ ಹಲವು ತೊಡಕುಗಳನ್ನು ಅನುಭವಿಸುತ್ತಿರುವವರ ಸಂಖ್ಯೆ ಹೆಚ್ಚುತ್ತಿದೆ.
ಒಪಿಡಿಗಳಲ್ಲಿ ಕೋವಿಡ್ ನಂತರದ ತೊಡಕುಗಳನ್ನು ಹೊಂದಿರುವ 25-30 ರೋಗಿಗಳಿಗೆ ವೈದ್ಯರು ಪ್ರತಿದಿನ ಈಗ ಚಿಕಿತ್ಸೆ ನೀಡುತ್ತಿದ್ದಾರೆ. ಮೊದಲ ಅಲೆಯಲ್ಲಿ ವರದಿಯಾದ ರೋಗಲಕ್ಷಣಗಳಿಗಿಂತ ಈಗಿನ ರೋಗಲಕ್ಷಣಗಳು ಹೆಚ್ಚು ಗಂಭೀರವಾಗಿವೆ. ಸೋಂಕಿನಿಂದ ಚೇತರಿಸಿಕೊಂಡ ನಂತರ ಹಲವಾರು ವಾರಗಳವರೆಗೆ ರೋಗಿಗಳಿಗೆ ಆಮ್ಲಜನಕದ ಬೆಂಬಲ ಬೇಕಾಗುತ್ತಿದೆ. ಕಳೆದ ವರ್ಷ, ಕೋವಿಡ್‌ನಿಂದ ಚೇತರಿಸಿಕೊಂಡವರಲ್ಲಿ ಆಯಾಸ ಸಾಮಾನ್ಯ ಲಕ್ಷಣವಾಗಿತ್ತು.

ಮ್ಯಾಕ್ಸ್ ಆಸ್ಪತ್ರೆಯ ಉಸಿರಾಟ ವಿಭಾಗದ ಮುಖ್ಯಸ್ಥ ಡಾ.ವಿವೇಕ್ ನಂಗಿಯಾ, ‘ನಮ್ಮ ಒಪಿಡಿಗಳು 70-80% ರಷ್ಟು ಕೋವಿಡ್ ನಂತರದ ರೋಗಿಗಳಿಂದ ತುಂಬಿಹೋಗಿವೆ. ಸಾಮಾನ್ಯವಾಗಿ, 65 ವರ್ಷಕ್ಕಿಂತ ಮೇಲ್ಪಟ್ಟ ರೋಗಿಗಳಲ್ಲಿ ಶ್ವಾಸಕೋಶದ ಫೈಬ್ರೋಸಿಸ್ ಅನ್ನು ನಾವು ನೋಡುತ್ತೇವೆ. ಆದರೆ ಈ ಸಮಯದಲ್ಲಿ, ಮಧ್ಯ ವಯಸ್ಕ ಜನರು, ಕಿರಿಯ ರೋಗಿಗಳು ಮತ್ತು ಮಕ್ಕಳನ್ನು ಸಹ ಹೆಚ್ಚಿನ ಸಂಖ್ಯೆಯಲ್ಲಿ ದಾಖಲಿಸಲಾಗಿದೆ. ಕೋವಿಡ್‌ನಿಂದ ಗುಣಮುಖರಾದ ನಂತರವೂ ಆಮ್ಲಜನಕದ ಬೆಂಬಲದಲ್ಲಿರುವ ರೋಗಿಗಳಿದ್ದಾರೆ ಎಂದಿದ್ದಾರೆ.
ಕೋವಿಡ್‌ನಿಂದ ಚೇತರಿಸಿಕೊಂಡ ರೋಗಿಗಳು ನಂತರ ಹೆಚ್ಚಿನ ಪ್ರಮಾಣದ ಜ್ವರದಿಂದ ಬಳಲುತ್ತಿದ್ದಾರೆ ಎಂದು ವೈದ್ಯರು ಹೇಳಿದ್ದಾರೆ.

ಇಂದ್ರಪ್ರಸ್ಥ ಅಪೊಲೊ ಆಸ್ಪತ್ರೆಯ ಹಿರಿಯ ವೈದ್ಯ ಡಾ.ಸುರಂಜಿತ್ ಚಟರ್ಜಿ, “3 ಮತ್ತು 4 ನೇ ವಾರದ ಚೇತರಿಕೆಯ ನಂತರ ಸಹ ನಾವು ತೀವ್ರ ಜ್ವರದಿಂದ ಬಳಲುತ್ತಿರುವ ಬಹಳಷ್ಟು ರೋಗಿಗಳನ್ನು ನೋಡುತ್ತಿದ್ದೇವೆ. ಮೊದಲ ಅಲೆಯಲ್ಲಿಯೂ ಜ್ವರ ಇತ್ತು. ಆದರೆ ಈ ಸಮಯದಲ್ಲಿ ಸ್ಟೀರಾಯ್ಡ್‌ಗಳನ್ನು ಸಹ ಬಳಸಲಾಗಿದೆ, ಆದ್ದರಿಂದ ಇದು ಕೇವಲ ಉರಿಯೂತವೋ ಅಥವಾ ದ್ವಿತೀಯ ಸೋಂಕಿನ ಕಾರಣವೋ ಎಂದು ನಾವು ಗೊಂದಲಕ್ಕೊಳಗಾಗಿದ್ದೇವೆ. ಕಪ್ಪು ಶಿಲೀಂದ್ರ ಅಥವಾ ಶ್ವಾಸಕೋಶದ ಇತರ ಸೋಂಕುಗಳೂ ಕಾಣಿಸಿಕೊಳ್ಳುತ್ತಿವೆ” ಎಂದಿದ್ದಾರೆ.

ಕೆಲವು ರೋಗಿಗಳಿಗೆ, ಕೋವಿಡ್ ನಂತರದ ಲಕ್ಷಣಗಳು ತೀವ್ರವಾಗಿದ್ದರಿಂದ ಅವರನ್ನು ಮತ್ತೆ ತೀವ್ರ ನಿಗಾ ಚಿಕಿತ್ಸೆಗೆ ಸೇರಿಸಲಾಗುತ್ತಿದೆ.

ಫೋರ್ಟಿಸ್ ಎಸ್ಕೋರ್ಟ್ಸ್ ಹಾರ್ಟ್ ಇನ್ಸ್ಟಿಟ್ಯೂಟ್‌ನ ತೀವ್ರ ನಿಗಾ ಘಟಕದ ಹೆಚ್ಚುವರಿ ನಿರ್ದೇಶಕ ಡಾ.ರಜತ್ ಅಗರ್ವಾಲ್, ‘ಪ್ರತಿದಿನ 3-4 ರೋಗಿಗಳು ವಿವಿಧ ಸಮಸ್ಯೆಗಳೊಂದಿಗೆ ನಮ್ಮ ತೀವ್ರ ನಿಗಾ ಘಟಕಕ್ಕೆ ಸೇರ್ಪಡೆಯಾಗುತ್ತಿದ್ದಾರೆ. ಬಹುಪಾಲು ಜನರು ಶ್ವಾಸಕೋಶದ ಸಮಸ್ಯೆಯಿಂದ ಬಳಲುತ್ತಿದ್ದಾರೆ ಮತ್ತು ಅವರಿಗೆ ಹೆಚ್ಚಿನ ಆಮ್ಲಜನಕದ ಅಗತ್ಯವಿದೆ ಎಂದು ತಿಳಿಸಿದ್ದಾರೆ.

ದೆಹಲಿಯಲ್ಲಿ ಈಗ ದೈನಂದಿನ ಪ್ರಕರಣಗಳು ಸುಮಾರು 500ಕ್ಕೆ ಇಳಿದಿದೆ. ಆದರೆ ಕೋವಿಡ್‌ನಿಂದ ಗುಣಮುಖರಾದ ಹಲವರಲ್ಲಿ ಇತರ ಆರೋಗ್ಯ ಸಮಸ್ಯೆಗಳು ಕಾಣಿಸಿಕೊಳ್ಳುತ್ತಿವೆ.


ಇದನ್ನೂ ಓದಿ; ರೋಗನಿರೋಧಕತೆ ಮತ್ತು ಲಸಿಕೆ; ಸಂಶೋಧನೆಯ ಇತಿಹಾಸ ಮತ್ತು ವಿಜ್ಞಾನ: ಭಾಗ-1

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...