Homeಕರೋನಾ ತಲ್ಲಣದೆಹಲಿ: ಕೋವಿಡ್‌ನಿಂದ ಗುಣಮುಖರಾದವರಲ್ಲಿ ಇತರ ಗಂಭೀರ ಸಮಸ್ಯೆಗಳು

ದೆಹಲಿ: ಕೋವಿಡ್‌ನಿಂದ ಗುಣಮುಖರಾದವರಲ್ಲಿ ಇತರ ಗಂಭೀರ ಸಮಸ್ಯೆಗಳು

- Advertisement -
- Advertisement -

ದೆಹಲಿಯಲ್ಲಿ ಕೋವಿಡ್ ನಿಯಂತ್ರಣ ಒಂದು ಹಂತಕ್ಕೆ ಬರುತ್ತಿದೆ. ಆದರೆ ಕೋವಿಡ್‌ನಿಂದ ಗುಣಮುಖರಾದ ಹಲವರಲ್ಲಿ ಬೇರೆ ಬಗೆಯ ಅನಾರೋಗ್ಯ ಕಾಣಿಸಿಕೊಳ್ಳುತ್ತಿದೆ ಎಂದು ವೈದ್ಯರನ್ನು ಉಲ್ಲೇಖಿಸಿ ಎನ್‌ಡಿಟಿವಿ ವರದಿ ಮಾಡಿದೆ.

ವೈದ್ಯರ ಪ್ರಕಾರ, ದೆಹಲಿ ಆಸ್ಪತ್ರೆಗಳ ಹೊರರೋಗಿ ವಿಭಾಗಗಳಲ್ಲಿ (ಒಪಿಡಿ) ಕೋವಿಡ್‌ನಿಂದ ಗುಣಮುಖರಾಗಿ ಈಗ ಹಲವು ತೊಡಕುಗಳನ್ನು ಅನುಭವಿಸುತ್ತಿರುವವರ ಸಂಖ್ಯೆ ಹೆಚ್ಚುತ್ತಿದೆ.
ಒಪಿಡಿಗಳಲ್ಲಿ ಕೋವಿಡ್ ನಂತರದ ತೊಡಕುಗಳನ್ನು ಹೊಂದಿರುವ 25-30 ರೋಗಿಗಳಿಗೆ ವೈದ್ಯರು ಪ್ರತಿದಿನ ಈಗ ಚಿಕಿತ್ಸೆ ನೀಡುತ್ತಿದ್ದಾರೆ. ಮೊದಲ ಅಲೆಯಲ್ಲಿ ವರದಿಯಾದ ರೋಗಲಕ್ಷಣಗಳಿಗಿಂತ ಈಗಿನ ರೋಗಲಕ್ಷಣಗಳು ಹೆಚ್ಚು ಗಂಭೀರವಾಗಿವೆ. ಸೋಂಕಿನಿಂದ ಚೇತರಿಸಿಕೊಂಡ ನಂತರ ಹಲವಾರು ವಾರಗಳವರೆಗೆ ರೋಗಿಗಳಿಗೆ ಆಮ್ಲಜನಕದ ಬೆಂಬಲ ಬೇಕಾಗುತ್ತಿದೆ. ಕಳೆದ ವರ್ಷ, ಕೋವಿಡ್‌ನಿಂದ ಚೇತರಿಸಿಕೊಂಡವರಲ್ಲಿ ಆಯಾಸ ಸಾಮಾನ್ಯ ಲಕ್ಷಣವಾಗಿತ್ತು.

ಮ್ಯಾಕ್ಸ್ ಆಸ್ಪತ್ರೆಯ ಉಸಿರಾಟ ವಿಭಾಗದ ಮುಖ್ಯಸ್ಥ ಡಾ.ವಿವೇಕ್ ನಂಗಿಯಾ, ‘ನಮ್ಮ ಒಪಿಡಿಗಳು 70-80% ರಷ್ಟು ಕೋವಿಡ್ ನಂತರದ ರೋಗಿಗಳಿಂದ ತುಂಬಿಹೋಗಿವೆ. ಸಾಮಾನ್ಯವಾಗಿ, 65 ವರ್ಷಕ್ಕಿಂತ ಮೇಲ್ಪಟ್ಟ ರೋಗಿಗಳಲ್ಲಿ ಶ್ವಾಸಕೋಶದ ಫೈಬ್ರೋಸಿಸ್ ಅನ್ನು ನಾವು ನೋಡುತ್ತೇವೆ. ಆದರೆ ಈ ಸಮಯದಲ್ಲಿ, ಮಧ್ಯ ವಯಸ್ಕ ಜನರು, ಕಿರಿಯ ರೋಗಿಗಳು ಮತ್ತು ಮಕ್ಕಳನ್ನು ಸಹ ಹೆಚ್ಚಿನ ಸಂಖ್ಯೆಯಲ್ಲಿ ದಾಖಲಿಸಲಾಗಿದೆ. ಕೋವಿಡ್‌ನಿಂದ ಗುಣಮುಖರಾದ ನಂತರವೂ ಆಮ್ಲಜನಕದ ಬೆಂಬಲದಲ್ಲಿರುವ ರೋಗಿಗಳಿದ್ದಾರೆ ಎಂದಿದ್ದಾರೆ.
ಕೋವಿಡ್‌ನಿಂದ ಚೇತರಿಸಿಕೊಂಡ ರೋಗಿಗಳು ನಂತರ ಹೆಚ್ಚಿನ ಪ್ರಮಾಣದ ಜ್ವರದಿಂದ ಬಳಲುತ್ತಿದ್ದಾರೆ ಎಂದು ವೈದ್ಯರು ಹೇಳಿದ್ದಾರೆ.

ಇಂದ್ರಪ್ರಸ್ಥ ಅಪೊಲೊ ಆಸ್ಪತ್ರೆಯ ಹಿರಿಯ ವೈದ್ಯ ಡಾ.ಸುರಂಜಿತ್ ಚಟರ್ಜಿ, “3 ಮತ್ತು 4 ನೇ ವಾರದ ಚೇತರಿಕೆಯ ನಂತರ ಸಹ ನಾವು ತೀವ್ರ ಜ್ವರದಿಂದ ಬಳಲುತ್ತಿರುವ ಬಹಳಷ್ಟು ರೋಗಿಗಳನ್ನು ನೋಡುತ್ತಿದ್ದೇವೆ. ಮೊದಲ ಅಲೆಯಲ್ಲಿಯೂ ಜ್ವರ ಇತ್ತು. ಆದರೆ ಈ ಸಮಯದಲ್ಲಿ ಸ್ಟೀರಾಯ್ಡ್‌ಗಳನ್ನು ಸಹ ಬಳಸಲಾಗಿದೆ, ಆದ್ದರಿಂದ ಇದು ಕೇವಲ ಉರಿಯೂತವೋ ಅಥವಾ ದ್ವಿತೀಯ ಸೋಂಕಿನ ಕಾರಣವೋ ಎಂದು ನಾವು ಗೊಂದಲಕ್ಕೊಳಗಾಗಿದ್ದೇವೆ. ಕಪ್ಪು ಶಿಲೀಂದ್ರ ಅಥವಾ ಶ್ವಾಸಕೋಶದ ಇತರ ಸೋಂಕುಗಳೂ ಕಾಣಿಸಿಕೊಳ್ಳುತ್ತಿವೆ” ಎಂದಿದ್ದಾರೆ.

ಕೆಲವು ರೋಗಿಗಳಿಗೆ, ಕೋವಿಡ್ ನಂತರದ ಲಕ್ಷಣಗಳು ತೀವ್ರವಾಗಿದ್ದರಿಂದ ಅವರನ್ನು ಮತ್ತೆ ತೀವ್ರ ನಿಗಾ ಚಿಕಿತ್ಸೆಗೆ ಸೇರಿಸಲಾಗುತ್ತಿದೆ.

ಫೋರ್ಟಿಸ್ ಎಸ್ಕೋರ್ಟ್ಸ್ ಹಾರ್ಟ್ ಇನ್ಸ್ಟಿಟ್ಯೂಟ್‌ನ ತೀವ್ರ ನಿಗಾ ಘಟಕದ ಹೆಚ್ಚುವರಿ ನಿರ್ದೇಶಕ ಡಾ.ರಜತ್ ಅಗರ್ವಾಲ್, ‘ಪ್ರತಿದಿನ 3-4 ರೋಗಿಗಳು ವಿವಿಧ ಸಮಸ್ಯೆಗಳೊಂದಿಗೆ ನಮ್ಮ ತೀವ್ರ ನಿಗಾ ಘಟಕಕ್ಕೆ ಸೇರ್ಪಡೆಯಾಗುತ್ತಿದ್ದಾರೆ. ಬಹುಪಾಲು ಜನರು ಶ್ವಾಸಕೋಶದ ಸಮಸ್ಯೆಯಿಂದ ಬಳಲುತ್ತಿದ್ದಾರೆ ಮತ್ತು ಅವರಿಗೆ ಹೆಚ್ಚಿನ ಆಮ್ಲಜನಕದ ಅಗತ್ಯವಿದೆ ಎಂದು ತಿಳಿಸಿದ್ದಾರೆ.

ದೆಹಲಿಯಲ್ಲಿ ಈಗ ದೈನಂದಿನ ಪ್ರಕರಣಗಳು ಸುಮಾರು 500ಕ್ಕೆ ಇಳಿದಿದೆ. ಆದರೆ ಕೋವಿಡ್‌ನಿಂದ ಗುಣಮುಖರಾದ ಹಲವರಲ್ಲಿ ಇತರ ಆರೋಗ್ಯ ಸಮಸ್ಯೆಗಳು ಕಾಣಿಸಿಕೊಳ್ಳುತ್ತಿವೆ.


ಇದನ್ನೂ ಓದಿ; ರೋಗನಿರೋಧಕತೆ ಮತ್ತು ಲಸಿಕೆ; ಸಂಶೋಧನೆಯ ಇತಿಹಾಸ ಮತ್ತು ವಿಜ್ಞಾನ: ಭಾಗ-1

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನಾಸಿಕ್‌| ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು ಬಿಟ್ಟ ಪ್ರತಿಭಟನಾಕಾರರು

ಮಹಾರಾಷ್ಟ್ರದ ನಾಸಿಕ್ ಜಿಲ್ಲೆಯ ನಿಫಾದ್ ನಗರ ಪಂಚಾಯತ್ ವ್ಯಾಪ್ತಿಯಲ್ಲಿ ಬೀದಿ ನಾಯಿಗಳ ಹಾವಳಿಯನ್ನು ಖಂಡಿಸಿ ಮತ್ತು ಅಧಿಕಾರಿಗಳ ನಿರ್ಲಕ್ಷ್ಯವನ್ನು ಖಂಡಿಸಿದ ಪ್ರತಿಭಟನಾಕಾರರ ಗುಂಪೊಂದು ನಗರ ಪಂಚಾಯತ್ ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು...

ವಿವಾಹಿತೆ ಮೇಲೆ ಅತ್ಯಾಚಾರ ಆರೋಪ : ಬಿಜೆಪಿ ಮಾಜಿ ಶಾಸಕನ ವಿರುದ್ಧ ಎಫ್‌ಐಆರ್

ಗನ್‌ ಪಾಯಿಂಟ್‌ ಇಟ್ಟು ಬೆದರಿಸಿ 22 ವರ್ಷದ ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ ಪ್ರಕರಣದಲ್ಲಿ ಮಹಾರಾಷ್ಟ್ರದ ಬಿಜೆಪಿ ಮಾಜಿ ಶಾಸಕ ಮತ್ತು ವಜಾಗೊಂಡಿರುವ ಪೊಲೀಸ್ ಸಿಬ್ಬಂದಿಯೊಬ್ಬರ ವಿರುದ್ಧ ಗುರುವಾರ (ಸೆ.17)...

ಬ್ರಿಕ್ಸ್ ಶೃಂಗಸಭೆಯಲ್ಲಿ ಸಂಪೂರ್ಣ ಸಸ್ಯಹಾರಿ ಮೆನು; ಶಿವಸೇನೆ ತೀವ್ರ ವಾಗ್ದಾಳಿ

ದೆಹಲಿಯಲ್ಲಿ ನಡೆದ 18ನೇ ಬ್ರಿಕ್ಸ್ ಶೃಂಗಸಭೆಯಲ್ಲಿ ವಿದೇಶಿ ಪ್ರತಿನಿಧಿಗಳಿಗೆ ಕೇವಲ ಸಸ್ಯಹಾರಿ ಆಹಾರವನ್ನು ಬಡಿಸಿರುವುದನ್ನು ಖಂಡಿಸಿರುವ ಶಿವಸೇನೆ (ಯುಬಿಟಿ) ಗುರುವಾರ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದೆ. ಇದು ಅಂತರರಾಷ್ಟ್ರೀಯ ಅತಿಥಿಗಳ ಮೇಲೆ...

ದೆಹಲಿ ಎಸ್‌ಐಆರ್: ಮತದಾರರ ಪಟ್ಟಿಯಿಂದ ಹೆಸರುಗಳ ಡಿಲೀಟ್ ಪ್ರಶ್ನಿಸಿ ಅರ್ಜಿ; ವಿಚಾರಣೆಗೆ ಸುಪ್ರೀಂ ಕೋರ್ಟ್ ಒಪ್ಪಿಗೆ

ದೆಹಲಿಯಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಅಭಿಯಾನದಡಿ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದನ್ನು ಪ್ರಶ್ನಿಸಿ ಸಲ್ಲಿಕೆಯಾಗಿರುವ ಅರ್ಜಿಯ ವಿಚಾರಣೆಯನ್ನು ಸೆಪ್ಟೆಂಬರ್ 21ರಂದು ನಡೆಸಲು ಸುಪ್ರೀಂ ಕೋರ್ಟ್ ಗುರುವಾರ ಒಪ್ಪಿಗೆ ಸೂಚಿಸಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್...

ಕೇರಳ | ಮಿತಿಗಿಂತ ಹೆಚ್ಚು ಮದ್ಯ ಸಂಗ್ರಹ ಆರೋಪ : ರಿಪೋರ್ಟರ್ ಟಿವಿ ಎಂಡಿ ಆಂಟೋ ಆಗಸ್ಟಿನ್ ಬಂಧನ

ಕೇರಳ ಅಬಕಾರಿ ಇಲಾಖೆಯು ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ವ್ಯವಸ್ಥಾಪಕ ನಿರ್ದೇಶಕ (ಎಂಡಿ) ಆಂಟೋ ಆಗಸ್ಟಿನ್ ಅವರನ್ನು ಗುರುವಾರ (ಸೆ.17) ಮುಂಜಾನೆ ಬಂಧಿಸಿದೆ. ಎರ್ನಾಕುಲಂನಲ್ಲಿರುವ ಸುದ್ದಿ ವಾಹಿನಿಯ ಕಚೇರಿಯಿಂದ ಮುಂಜಾನೆ ಸುಮಾರು...

ದೆಹಲಿ: ಜಾಮೀನು ಸಿಕ್ಕ ಬೆನ್ನಲ್ಲೇ ಸ್ವತಂತ್ರ ಭಾರದ್ವಾಜ್ ವಿಡಿಯೋ ವೈರಲ್; ಷರತ್ತು ಉಲ್ಲಂಘನೆ ಆರೋಪ!

ಜಂತರ್ ಮಂತರ್‌ನಲ್ಲಿ ದಲಿತ ವಿದ್ಯಾರ್ಥಿ ಹೋರಾಟಗಾರ್ತಿ ನಿಶು ಆಜಾದ್ ಅವರ ತಂದೆಯ ಮೇಲೆ ಹಲ್ಲೆ ನಡೆಸಿದ ಆರೋಪದಲ್ಲಿ ಬಂಧಿತರಾಗಿದ್ದ ಹಿಂದುತ್ವ ಪ್ರಭಾವಿ ಸ್ವತಂತ್ರ ಭಾರದ್ವಾಜ್ ಅವರಿಗೆ ದೆಹಲಿ ನ್ಯಾಯಾಲಯ ಮೂರು ವಾರಗಳ ಮಧ್ಯಂತರ...

ಸರ್ಕಾರದ ಹಸ್ತಕ್ಷೇಪದಿಂದ ಕ್ಯಾಂಪಸ್ ನಿರ್ಬಂಧದವರೆಗೆ: ಭಾರತದಲ್ಲಿ ಶೈಕ್ಷಣಿಕ ಸ್ವಾತಂತ್ರ್ಯದ ಕುಸಿತ ಬಯಲಿಗೆಳೆದ ಜಾಗತಿಕ ವರದಿ 

ಭಾರತದಲ್ಲಿ ಶೈಕ್ಷಣಿಕ ಸ್ವಾತಂತ್ರ್ಯವು ತೀವ್ರವಾಗಿ ನಿರ್ಬಂಧಿತವಾಗಿದ್ದು, ಉನ್ನತ ಶಿಕ್ಷಣ ಸಂಸ್ಥೆಗಳ ಮೇಲೆ ಸರ್ಕಾರದ ಹೆಚ್ಚುತ್ತಿರುವ ಹಸ್ತಕ್ಷೇಪ, ಕ್ಯಾಂಪಸ್‌ಗಳಲ್ಲಿ ಶೈಕ್ಷಣಿಕ ಮತ್ತು ರಾಜಕೀಯ ಅಭಿವ್ಯಕ್ತಿಯ ಮೇಲಿನ ನಿರ್ಬಂಧಗಳು, ವಿದ್ವಾಂಸರು ಹಾಗೂ ವಿದ್ಯಾರ್ಥಿಗಳ ವಿರುದ್ಧದ ಕ್ರಮಗಳು...

ಬಿಹಾರ| ದಲಿತ ಯುವಕನ ವಿವಾಹವಾದ ಯುವತಿ; ಮಗಳ ಸಾಂಕೇತಿಕ ಅಂತ್ಯಕ್ರಿಯೆ ನಡೆಸಿದ ಪೋಷಕರು

ತಮ್ಮ 18 ವರ್ಷದ ಮಗಳು ಅಂತರ್ಜಾತಿ ವಿವಾಹವಾಗಿದ್ದಕ್ಕೆ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ಪೋಷಕರು, ಆಕೆಗೆ ಸಾಂಕೇತಿಕವಾಗಿ ಅಂತ್ಯಕ್ರಿಯೆ ನಡೆಸಿದ ಘಟನೆ ಬಿಹಾರದ ಪೂರ್ಣಿಯಾದಲ್ಲಿ ಬೆಳಕಿಗೆ ಬಂದಿದೆ. ಯುವತಿಯ ಫೋಟೋವಿರುವ ಪ್ರತಿಕೃತಿಯನ್ನು ಸಿದ್ಧಪಡಿಸಿ ಊರಿನಲ್ಲಿ ಶವಯಾತ್ರೆ...

ಸ್ವಇಚ್ಛೆಯಿಂದ ಇಸ್ಲಾಂ ಸ್ವೀಕಾರ : ಆಯುಷ್ ಮಲಿಕ್‌ರನ್ನು ಗೃಹಬಂಧನದಿಂದ ಬಿಡುಗಡೆಗೊಳಿಸಿದ ಅಲಹಾಬಾದ್ ಹೈಕೋರ್ಟ್

ತಾನು ಸ್ವಇಚ್ಛೆಯಿಂದ ಇಸ್ಲಾಂ ಧರ್ಮವನ್ನು ಸ್ವೀಕರಿಸಿರುವುದಾಗಿ ಮತ್ತು ಆ ನಂತರ ತನ್ನ ತಂದೆಯೇ ತನಗೆ ಬೆದರಿಕೆ ಹಾಕಿ, ಕಾನೂನುಬಾಹಿರವಾಗಿ ಗೃಹಬಂಧನದಲ್ಲಿ ಇರಿಸಿದ್ದರು ಎಂದು ಆರೋಪಿಸಿದ್ದ ಆಯುಷ್ ಮಲಿಕ್ ಎಂಬ 31 ವರ್ಷದ ಯುವಕನನ್ನು...

ಬಿಜ್ನೋರ್‌ನಲ್ಲಿ ಮುಸ್ಲಿಂ ಶಿಕ್ಷಕನ ಗುಂಡಿಕ್ಕಿ ಹತ್ಯೆ: ‘ಲವ್ ಜಿಹಾದ್’ ಆರೋಪ; ವೈಯಕ್ತಿಕ ದ್ವೇಷದ ಬಗ್ಗೆಯೂ ಪೊಲೀಸರಿಂದ ತನಿಖೆ 

ಬಿಜ್ನೋರ್: ಉತ್ತರ ಪ್ರದೇಶದ ಬಿಜ್ನೋರ್ ಜಿಲ್ಲೆಯಲ್ಲಿ 43 ವರ್ಷದ ಮುಸ್ಲಿಂ ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕನೊಬ್ಬರನ್ನು ರೈತನೊಬ್ಬ ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆ ನಡೆದಿದೆ. ಶಿಕ್ಷಕ ನೌಶಾದ್ ಅಹ್ಮದ್ ಅವರು ‘ಲವ್ ಜಿಹಾದ್’...