Homeನ್ಯಾಯ ಪಥಸರಳ, ಸಜ್ಜನಿಕೆಯ ದಿಟ್ಟ ಹೋರಾಟಗಾರ ದೊರೆಸ್ವಾಮಿಯವರು ನಮಗೆಲ್ಲಾ ಮಾದರಿ

ಸರಳ, ಸಜ್ಜನಿಕೆಯ ದಿಟ್ಟ ಹೋರಾಟಗಾರ ದೊರೆಸ್ವಾಮಿಯವರು ನಮಗೆಲ್ಲಾ ಮಾದರಿ

- Advertisement -
- Advertisement -

ದೊರೆಸ್ವಾಮಿಯವರ ಒಡನಾಡಿಗಳಾಗಿದ್ದ, ಹಿರಿಯ ವಕೀಲರಾಗಿರುವ ಶೇಷಾದ್ರಿಯವರು ಹೇಳುತ್ತಿದ್ದ ಒಂದು ಘಟನೆ ನನಗೆ ಇಂದಿಗೂ ಆಶ್ಚರ್ಯವನ್ನುಂಟುಮಾಡುತ್ತದೆ. ಸುಮಾರು 50-60 ವರ್ಷಗಳ ಹಿಂದೆ ದೊರೆಸ್ವಾಮಿಯವರು ಬೆಂಗಳೂರಿನ ಹನುಮಂತನಗರದಲ್ಲಿ ವಾಸಿಸುತ್ತಿದ್ದರು. ಅಲ್ಲಿಂದ ಅವರು ಮಾರುಕಟ್ಟೆ ಬಳಿ ಇರುವ ಗಾಳಿ ಆಂಜನೇಯ ಸ್ವಾಮಿ ದೇವಾಲಯದವರೆಗೆ ನಡೆದುಕೊಂಡು ಬಂದರು. ಅಂದು ಅಲ್ಲಿರುವ ಖಾದಿ ಗ್ರಾಮೋದ್ಯೋಗ ಮಳಿಗೆಯಲ್ಲಿ ಸಬ್ಸಿಡಿ ದರದಲ್ಲಿ ಖಾದಿ ಬಟ್ಟೆಗಳನ್ನು ಮಾರುತ್ತಿದ್ದರು. ದೊರೆಸ್ವಾಮಿಯವರು ಒಂದು ಜುಬ್ಬಾ, ಒಂದು ಪಂಚೆ ಮತ್ತು ಟವೆಲ್ ಒಂದನ್ನು ಆಯ್ಕೆ ಮಾಡಿ ಎಷ್ಟು ಹಣ ಎಂದು ಕೇಳುತ್ತಾರೆ. ಅಂಗಡಿಯಾತ ಬೆಲೆ ಹೇಳಿ, ’ಸರ್ ಹಿಂದಿನ ಸಾರಿ ನೀವು ಹಣ ಕೊಡುವುದು ಮರೆತಿದ್ದೀರಿ’ ಎಂದನಂತೆ. ಆಗ ದೊರೆಸ್ವಾಮಿಯವರು ತಮ್ಮಲ್ಲಿದ್ದ ಹಣ ನೀಡಿ, ಹಿಂದಿನ ಸಾಲ ಪೂರ್ತಿ ತೀರಿಸಿದ ನಂತರವೇ ಹೊಸದನ್ನು ಖರೀದಿಸುತ್ತೇನೆ ಎಂದು ಹೇಳಿ ಬರಿಗೈನಲ್ಲಿ ವಾಪಸ್ ಹೋದರಂತೆ. ಇದೊಂದು ಉದಾಹರಣೆ ಸಾಕು ಅವರ ಪ್ರಾಮಾಣಿಕತೆ ಮತ್ತು ಸರಳ ಜೀವನವನ್ನು ತಿಳಿಯಲು.

ದೊರೆಸ್ವಾಮಿಯವರು ಸ್ವಾತಂತ್ರ್ಯ ಹೋರಾಟಗಾರರು, ಸರಳ ಸಜ್ಜನಿಕೆಗೆ ಬಹಳ ಹೆಸರುವಾಸಿಯಾದವರು. ದೇಶಪ್ರೇಮ, ಜನರ ಬಗ್ಗೆ ಕಾಳಜಿ, ಜನಸಾಮಾನ್ಯರ ಕಷ್ಟನಷ್ಟಗಳಿಗೆ ಸ್ಪಂದಿಸುವ ಗುಣ ಅವರದ್ದು. ಜನರ ಸಮಸ್ಯೆಗಳನ್ನು ಈಡೇರಿಸಲು ಸರ್ಕಾರದ ಮೇಲೆ ಒತ್ತಡ ತರುವುದಕ್ಕಾಗಿ, ಕೃಷಿಕರು, ಕಾರ್ಮಿಕರು ಮತ್ತು ಹಿಂದುಳಿದವರ ಸಾಮಾಜಿಕ ನ್ಯಾಯಕ್ಕಾಗಿ ತಾವು ನಿಧನರಾಗುವವರೆಗೂ ದಣಿವರಿಯದೇ ಸಾಮಾಜಿಕ ಹೋರಾಟದಲ್ಲಿ ತೊಡಗಿಸಿಕೊಂಡ ಹಿರಿಯ ಜೀವ ಅದು.

ಸ್ವಾತಂತ್ರ್ಯ ಸಂಗ್ರಾಮದಲ್ಲಿ ಭಾಗವಹಿಸಿ 14 ತಿಂಗಳುಗಳ ಕಾಲ ಸೆರೆವಾಸ ಅನುಭವಿಸಿದ್ದರು. ನಂತರ ಇಂದಿರಾ ಗಾಂಧಿಯವರು ಹೇರಿದ್ದ ತುರ್ತುಪರಿಸ್ಥಿತಿ ವಿರೋಧಿಸಿ ಹೋರಾಟ ಮಾಡಿದ್ದಕ್ಕಾಗಿ 4 ತಿಂಗಳು ಜೈಲಿನಲ್ಲಿರಬೇಕಾಗಿತ್ತು. ಅವರು ತ್ಯಾಗಮಯಿ, ಸಮಾಜದ ಬಗ್ಗೆ ಬದ್ಧತೆ, ಕಾಳಜಿಯ ಮನೋಭಾವ ರೂಢಿಸಿಕೊಂಡಿದ್ದರು. ದೇಶದ ಬಗ್ಗೆ ಮತ್ತು ದೇಶದಲ್ಲಿನ ಜನರ ಬಗ್ಗೆ ಸದಾ ಚಿಂತಿಸುತ್ತಿದ್ದರು. ದೇಶದ ಆಗು ಹೋಗುಗಳ ಬಗ್ಗೆ ಬಹಳ ತೀಕ್ಷ್ಣವಾಗಿ ಪರಿವೀಕ್ಷಣೆ ಮಾಡುತ್ತಿದ್ದರು. ಜನರ ಸ್ವಾತಂತ್ರ್ಯ ಸಂರಕ್ಷಣೆಯ ಬಗ್ಗೆ ಚಿಂತನೆ ಮಾಡುತ್ತಿದ್ದರು. ದೇಶದ ರೈತರು, ಬಡವರು, ದಲಿತರು, ಮಹಿಳೆಯರು ಸೇರಿದಂತೆ ತುಳಿತಕ್ಕೊಳಗಾದವರ ಪರವಾಗಿ ಅವರು ನಿರಂತರವಾಗಿ ದನಿಯೆತ್ತುತ್ತಿದ್ದರು ಮತ್ತು ಅದಕ್ಕಾಗಿ ಸರ್ಕಾರದ ಗಮನ ಸೆಳೆಯುತ್ತಿದ್ದರು.

ಅವರ ವ್ಯಕ್ತಿತ್ವ, ನಿಸ್ವಾರ್ಥ ಜೀವನದ ಕುರಿತು ಯುವಜನರು, ಸಾಮಾಜಿಕ ಕಾರ್ಯಕರ್ತರು, ಬುದ್ಧಿಜೀವಿಗಳು ಮತ್ತು ರಾಜಕಾರಣಿಗಳು ಹೆಚ್ಚು ತಿಳಿದುಕೊಂಡು ಅವರಂತೆ ನಡೆದುಕೊಳ್ಳಬೇಕಿದೆ. ಆದರೆ ನಮ್ಮ ದೇಶದ ಜನ ಗಾಂಧಿಯವರನ್ನೇ ಮರೆತುಬಿಟ್ಟಿದ್ದು, ದೊರೆಸ್ವಾಮಿಯವರನ್ನು ಎಷ್ಟು ನೆನಪಿಟ್ಟುಕೊಳ್ಳುತ್ತಾರೆ ಎಂಬ ಪ್ರಶ್ನೆ ನನ್ನನ್ನು ಕಾಡುತ್ತದೆ. ಆದರೆ ದೊರೆಸ್ವಾಮಿಯವರಂತ ಪ್ರಾಮಾಣಿಕ ವ್ಯಕ್ತಿಗಳು ಇದ್ದಿದ್ದರಿಂದಲೇ ಈ ಸಮಾಜ ಇಷ್ಟಾದರೂ ಸಹ್ಯವಾಗಿದೆ ಎಂಬುದರಲ್ಲಿ ಎರಡು ಮಾತಿಲ್ಲ.

ಅವರು ಜೆ.ಪಿ ನಗರದ ಮನೆಯಲ್ಲಿರುವಾಗ ನಾನು ಅವರ ಆರೋಗ್ಯ ವಿಚಾರಿಸಲು ಎರಡು ಬಾರಿ ಹೋಗಿದ್ದೆ. ಅವರು ತಮ್ಮ ಜೀವಮಾನವಿಡಿ ಸ್ವಂತ ಮನೆ ಮಾಡಲಿಲ್ಲ. ಬಾಡಿಗೆ ಮನೆಯಲ್ಲಿಯೇ
ಅರ್ಥಪೂರ್ಣವಾಗಿ ಬದುಕಿದರು. ಅವರನ್ನು ಸಾಮಾಜಿಕ ಕಾರ್ಯಕರ್ತರು ಬಹಳ ಮುತುವರ್ಜಿಯಿಂದ ನೋಡಿಕೊಳ್ಳುತ್ತಿದ್ದರು. ನಮ್ಮಂಥವರು ಅವರನ್ನು ನೋಡಲು ಹೋದರೆ ಬಹಳ ಗೌರವದಿಂದ ಸತ್ಕರಿಸುತ್ತಿದ್ದರು. ಮನುಷ್ಯ ಮನುಷ್ಯನಾಗಿ ಹೇಗೆ ಬದುಕಬೇಕು ಎಂಬುದನ್ನು ಅವರು ನಮಗೆ ಕಲಿಸಿದರು. ನಾನು ಸುಪ್ರೀಂ ಕೋರ್ಟ್ ನಿವೃತ್ತ ನ್ಯಾಯಮೂರ್ತಿಯಾಗಿ ಅವರನ್ನು ನೋಡಿದಾಗ, ಅವರ ರೀತಿಯೇ ಬದುಕಬೇಕು, ಅವರ ಆದರ್ಶಗಳನ್ನು ಮೈಗೂಡಿಸಿಕೊಳ್ಳಬೇಕು, ಅವರ ಗುಣಗಳನ್ನು ಅಳವಡಿಸಿಕೊಳ್ಳಬೇಕು ಎಂದು ಎಷ್ಟೋ ಸಲ ನನಗೆ ಅನ್ನಿಸಿದೆ. ಅವರ ತುಂಬು ಜೀವನವನ್ನು ನೋಡಿ ಸಂತಸವಾಗಿದೆ. ಈ ವರ್ಷ ಏಪ್ರಿಲ್ 10ನೇ ತಾರೀಖು ಅವರ 104ನೇ ಜನ್ಮದಿನದ ಸಂದರ್ಭದಲ್ಲಿ ಅವರ ಹೋರಾಟದ ಕುರಿತ ವೆಬಿನಾರ್‌ನಲ್ಲಿ ನಾನು ಮಾತನಾಡಿದೆ. ಅದರಿಂದ ಧನ್ಯಭಾವ ಅನುಭವಿಸಿದೆ. ಅವರು ಇನ್ನೊಂದು ದಶಕ ಬದುಕಿರುತ್ತಾರೆ ಎಂದುಕೊಂಡಿದ್ದೆ. ಅವರ ಆಶಯಗಳಾದ ಸಾಮಾಜಿಕ ನ್ಯಾಯ, ಆರ್ಥಿಕ ನ್ಯಾಯ, ದೇಶದ ಸ್ವಾತಂತ್ರ್ಯ ಮತ್ತು ಸಾರ್ವಭೌಮತೆ ಉಳಿಯುತ್ತದೆ. ಪ್ರಜಾಪ್ರಭುತ್ವ ಬೆಳೆಯುತ್ತದೆ. ನಾಗರಿಕ ಸಮಾಜ ಇನ್ನೂ ಉತ್ಕೃಷ್ಟ ರೀತಿಯಲ್ಲಿ ನಡೆದುಕೊಳ್ಳುತ್ತದೆ ಎಂಬುದನ್ನು ನೋಡಿ ಅವರು ಸಂತಸ ಪಡುತ್ತಾರೆ ಎಂದು ಭಾವಿಸಿದ್ದೆ. ಆದರೆ ಅವರು ನಮ್ಮನ್ನೆಲ್ಲಾ ಅಗಲಿಹೋಗಿದ್ದಾರೆ.

ಬೆಂಗಳೂರಿನ ಜಯದೇವ ಆಸ್ಪತ್ರೆಯ ಡಾ.ಸಿಎನ್ ಮಂಜುನಾಥ್ ಅವರನ್ನು ಈ ಸಂದರ್ಭದಲ್ಲಿ ನಾವು ನೆನೆಯಬೇಕು. ಏಕೆಂದರೆ ದೊರೆಸ್ವಾಮಿಯವರಿಗೆ ಯಾವುದೇ ಆರೋಗ್ಯ ಸಮಸ್ಯೆ ಕಂಡುಬಂದರೂ ಸಹ ಮಂಜುನಾಥ್ ಅವರು ಬಹಳ ಮುತುವರ್ಜಿಯಿಂದ ನೋಡಿಕೊಂಡಿದ್ದಾರೆ. ಮಾರ್ಚ್ ತಿಂಗಳಲ್ಲಿ ನಾನು ದೊರೆಸ್ವಾಮಿಯವರನ್ನು ಭೇಟಿ ಮಾಡಿದಾಗ ಅವರು ಕೆಮ್ಮುತ್ತಿದ್ದರು. ಏಕೆಂದು ಕೇಳಿದಾಗಿ, ’ನನ್ನ ಶ್ವಾಸಕೋಶ ಚೆನ್ನಾಗಿದೆ. ಆದರೆ ಮೂಗಿನಲ್ಲಿ ಏನೋ ಸಮಸ್ಯೆಯಾಗಿ ಕೆಮ್ಮುತ್ತಿದ್ದೇನೆ’ ಅಂದರು. ಆಗ ನಾನು ವಿಕ್ರಮ್ ಆಸ್ಪತ್ರೆಯ ಇಎನ್‌ಟಿ ತಜ್ಞರಾದ ಡಾ.ಶ್ರೀನಿವಾಸ್ ಅವರಿಗೆ ಫೋನ್ ಮಾಡಿದೆ. ಸ್ವಾತಂತ್ರ್ಯ ಹೋರಾಟಗಾರರು, ಹಿರಿಯರು, ಮಾರ್ಗದರ್ಶಕರು, ನಮ್ಮ ಆಸ್ತಿ, ನಮ್ಮ ದೇಶದ ಸಂಪತ್ತು ಇವರು, ಇವರನ್ನು ನೀವು ಮುತುವರ್ಜಿಯಿಂದ ನೋಡಬೇಕು ಎಂದು ಕೇಳಿಕೊಂಡೆ. ಅವರು ಸಂತೋಷದಿಂದ ಒಪ್ಪಿ ಕರೆದುಕೊಂಡು ಬರಲು ಹೇಳಿದರು. ಆದರೆ ಅಂತಹ ದೊಡ್ಡ ಆಸ್ಪತ್ರೆಗೆ ನಾನು ಹೋಗಲಾರೆ ಎಂದು ದೊರೆಸ್ವಾಮಿಯವರು ಹೋಗಲೇ ಇಲ್ಲ. ತಮ್ಮ ಸರಳತೆಯನ್ನು ಬಿಟ್ಟುಕೊಡಲು ದೊರೆಸ್ವಾಮಿಯವರು ತಯಾರಿರಲಿಲ್ಲ.

ದೊರೆಸ್ವಾಮಿಯವರಿಗೆ ನಾವು ಪ್ರತಿ ಕ್ಷಣ ಶ್ರದ್ಧಾಂಜಲಿಯನ್ನು ಸಲ್ಲಿಸಬೇಕಾಗಿದೆ. ಸಂಸದೀಯ ಪ್ರಜಾಪ್ರಭುತ್ವ ಮಾತ್ರವಲ್ಲದೆ ಜನರ ಪ್ರಜಾಪ್ರಭುತ್ವವನ್ನು ಕಟ್ಟಲಿಕ್ಕೆ ಅವರ ಹಾದಿಯಲ್ಲಿ ನಾವು ಮುಂದೆ ಹೋಗಬೇಕಾಗಿದೆ. ಆಗ ಮಾತ್ರ ಅವರ ಆತ್ಮಕ್ಕೆ ಶಾಂತಿ ಸಿಗುತ್ತದೆ ಎನಿಸುತ್ತದೆ.

ಕಳೆದ ವರ್ಷ ಕೆಲ ಬೇಜವಾಬ್ದಾರಿ ರಾಜಕಾರಣಿಗಳು, ಜನಪ್ರತಿನಿಧಿಗಳು ದೊರೆಸ್ವಾಮಿಯವರ ಬಗ್ಗೆ ಕ್ಷುಲ್ಲಕ ಮಾತುಗಳನ್ನಾಡಿದ್ದು ನನಗೆ ತೀವ್ರ ಖೇದವೆನಿಸಿದೆ. ದೊರೆಸ್ವಾಮಿಯವರು ಕೇಂದ್ರ ಮತ್ತು ರಾಜ್ಯ ಸರ್ಕಾರದ ಆಡಳಿತ ವೈಖರಿಯ ಬಗ್ಗೆ ಟೀಕೆ ಟಿಪ್ಪಣಿ ಮಾಡಿದಾಗ ಅದನ್ನು ಸಹಿಸಲಾಗದೆ, ಸಹಿಷ್ಣುತೆ ಇಲ್ಲದವರು ಮಾತುಗಳನ್ನಾಡಿದರು. ಮೇರು ವ್ಯಕ್ತಿತ್ವಕ್ಕೆ ಈ ರೀತಿ ನಡೆದುಕೊಂಡಿದ್ದು ಇಡೀ ಕರ್ನಾಟಕ ರಾಜ್ಯದ ಜನತೆಗೆ ಮಾಡಿದ ಅವಮಾನ ಎಂದು ನಾನು ಭಾವಿಸುತ್ತೇನೆ. ಈಗಲಾದರೂ ಅವರು ಅದನ್ನು ಯೋಚಿಸಿ, ತಮ್ಮ ಹೇಳಿಕೆ ತಪ್ಪಾಯಿತು ಎಂದು ಹೇಳುತ್ತಾರೆ ಎಂದು ನಾನು ಭಾವಿಸಿದ್ದೇನೆ.

ಜಸ್ಟಿಸ್ ವಿ. ಗೋಪಾಲಗೌಡ
ಸುಪ್ರೀಂ ಕೋರ್ಟ್‌ನ ನಿವೃತ್ತ ನ್ಯಾಯಮೂರ್ತಿಗಳು. ಒರಿಸ್ಸಾ ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿಗಳಾಗಿಯೂ ಸೇವೆ ಸಲ್ಲಿಸಿದ್ದಾರೆ.

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಜೆಪಿ ತೊರೆದು ಪ್ರಾದೇಶಿಕ ಪಕ್ಷದತ್ತ ಅಣ್ಣಾಮಲೈ : ದ್ರಾವಿಡ ಮಣ್ಣಿನಲ್ಲಿ ವಿಫಲವಾದ ಹಿಂದುತ್ವ ರಾಜಕೀಯ

ಮಾಜಿ ಐಪಿಎಸ್‌ ಅಧಿಕಾರಿ ಹಾಗೂ ಬಿಜೆಪಿ ತಮಿಳುನಾಡು ರಾಜ್ಯ ಘಟಕದ ಮಾಜಿ ಅಧ್ಯಕ್ಷ ಕೆ. ಅಣ್ಣಾಮಲೈ ಬಿಜೆಪಿ ತೊರೆದಿದ್ದು, ಹೊಸ ಪ್ರಾದೇಶಿಕ ಪಕ್ಷ ಕಟ್ಟಲು ಮುಂದಾಗಿದ್ದಾರೆ ಎಂದು ವರದಿಯಾಗಿದೆ. ಮಂಗಳವಾರ...

45 ಲೀಟರ್ ಟ್ಯಾಂಕಿಗೆ 52 ಲೀಟರ್ ಬಿಲ್ ಕೊಟ್ಟ ಚತುರ ಕಳ್ಳರು: ಕಾನ್ಪುರದಲ್ಲಿ ಪೆಟ್ರೋಲ್ ಬಂಕ್ ವಂಚನೆ ಪತ್ತೆ

ಉತ್ತರ ಪ್ರದೇಶದ ಕಾನ್ಪುರದಲ್ಲಿ ಹೊಸ ಕಾರು ಖರೀದಿಸಿದ ಮಾಲೀಕರೊಬ್ಬರು ಸ್ಥಳೀಯ ಪೆಟ್ರೋಲ್ ಬಂಕ್‌ಗೆ ಹೋದಾಗ ಅವರಿಗೆ ಒಂದು ಶಾಕಿಂಗ್ ಅನುಭವವಾಗಿದೆ. ಅವರ ಕಾರಿನ ಗರಿಷ್ಠ ಇಂಧನ ಟ್ಯಾಂಕ್ ಸಾಮರ್ಥ್ಯ ಕೇವಲ 45 ಲೀಟರ್...

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...