Homeನ್ಯಾಯ ಪಥಸರಳ, ಸಜ್ಜನಿಕೆಯ ದಿಟ್ಟ ಹೋರಾಟಗಾರ ದೊರೆಸ್ವಾಮಿಯವರು ನಮಗೆಲ್ಲಾ ಮಾದರಿ

ಸರಳ, ಸಜ್ಜನಿಕೆಯ ದಿಟ್ಟ ಹೋರಾಟಗಾರ ದೊರೆಸ್ವಾಮಿಯವರು ನಮಗೆಲ್ಲಾ ಮಾದರಿ

- Advertisement -
- Advertisement -

ದೊರೆಸ್ವಾಮಿಯವರ ಒಡನಾಡಿಗಳಾಗಿದ್ದ, ಹಿರಿಯ ವಕೀಲರಾಗಿರುವ ಶೇಷಾದ್ರಿಯವರು ಹೇಳುತ್ತಿದ್ದ ಒಂದು ಘಟನೆ ನನಗೆ ಇಂದಿಗೂ ಆಶ್ಚರ್ಯವನ್ನುಂಟುಮಾಡುತ್ತದೆ. ಸುಮಾರು 50-60 ವರ್ಷಗಳ ಹಿಂದೆ ದೊರೆಸ್ವಾಮಿಯವರು ಬೆಂಗಳೂರಿನ ಹನುಮಂತನಗರದಲ್ಲಿ ವಾಸಿಸುತ್ತಿದ್ದರು. ಅಲ್ಲಿಂದ ಅವರು ಮಾರುಕಟ್ಟೆ ಬಳಿ ಇರುವ ಗಾಳಿ ಆಂಜನೇಯ ಸ್ವಾಮಿ ದೇವಾಲಯದವರೆಗೆ ನಡೆದುಕೊಂಡು ಬಂದರು. ಅಂದು ಅಲ್ಲಿರುವ ಖಾದಿ ಗ್ರಾಮೋದ್ಯೋಗ ಮಳಿಗೆಯಲ್ಲಿ ಸಬ್ಸಿಡಿ ದರದಲ್ಲಿ ಖಾದಿ ಬಟ್ಟೆಗಳನ್ನು ಮಾರುತ್ತಿದ್ದರು. ದೊರೆಸ್ವಾಮಿಯವರು ಒಂದು ಜುಬ್ಬಾ, ಒಂದು ಪಂಚೆ ಮತ್ತು ಟವೆಲ್ ಒಂದನ್ನು ಆಯ್ಕೆ ಮಾಡಿ ಎಷ್ಟು ಹಣ ಎಂದು ಕೇಳುತ್ತಾರೆ. ಅಂಗಡಿಯಾತ ಬೆಲೆ ಹೇಳಿ, ’ಸರ್ ಹಿಂದಿನ ಸಾರಿ ನೀವು ಹಣ ಕೊಡುವುದು ಮರೆತಿದ್ದೀರಿ’ ಎಂದನಂತೆ. ಆಗ ದೊರೆಸ್ವಾಮಿಯವರು ತಮ್ಮಲ್ಲಿದ್ದ ಹಣ ನೀಡಿ, ಹಿಂದಿನ ಸಾಲ ಪೂರ್ತಿ ತೀರಿಸಿದ ನಂತರವೇ ಹೊಸದನ್ನು ಖರೀದಿಸುತ್ತೇನೆ ಎಂದು ಹೇಳಿ ಬರಿಗೈನಲ್ಲಿ ವಾಪಸ್ ಹೋದರಂತೆ. ಇದೊಂದು ಉದಾಹರಣೆ ಸಾಕು ಅವರ ಪ್ರಾಮಾಣಿಕತೆ ಮತ್ತು ಸರಳ ಜೀವನವನ್ನು ತಿಳಿಯಲು.

ದೊರೆಸ್ವಾಮಿಯವರು ಸ್ವಾತಂತ್ರ್ಯ ಹೋರಾಟಗಾರರು, ಸರಳ ಸಜ್ಜನಿಕೆಗೆ ಬಹಳ ಹೆಸರುವಾಸಿಯಾದವರು. ದೇಶಪ್ರೇಮ, ಜನರ ಬಗ್ಗೆ ಕಾಳಜಿ, ಜನಸಾಮಾನ್ಯರ ಕಷ್ಟನಷ್ಟಗಳಿಗೆ ಸ್ಪಂದಿಸುವ ಗುಣ ಅವರದ್ದು. ಜನರ ಸಮಸ್ಯೆಗಳನ್ನು ಈಡೇರಿಸಲು ಸರ್ಕಾರದ ಮೇಲೆ ಒತ್ತಡ ತರುವುದಕ್ಕಾಗಿ, ಕೃಷಿಕರು, ಕಾರ್ಮಿಕರು ಮತ್ತು ಹಿಂದುಳಿದವರ ಸಾಮಾಜಿಕ ನ್ಯಾಯಕ್ಕಾಗಿ ತಾವು ನಿಧನರಾಗುವವರೆಗೂ ದಣಿವರಿಯದೇ ಸಾಮಾಜಿಕ ಹೋರಾಟದಲ್ಲಿ ತೊಡಗಿಸಿಕೊಂಡ ಹಿರಿಯ ಜೀವ ಅದು.

ಸ್ವಾತಂತ್ರ್ಯ ಸಂಗ್ರಾಮದಲ್ಲಿ ಭಾಗವಹಿಸಿ 14 ತಿಂಗಳುಗಳ ಕಾಲ ಸೆರೆವಾಸ ಅನುಭವಿಸಿದ್ದರು. ನಂತರ ಇಂದಿರಾ ಗಾಂಧಿಯವರು ಹೇರಿದ್ದ ತುರ್ತುಪರಿಸ್ಥಿತಿ ವಿರೋಧಿಸಿ ಹೋರಾಟ ಮಾಡಿದ್ದಕ್ಕಾಗಿ 4 ತಿಂಗಳು ಜೈಲಿನಲ್ಲಿರಬೇಕಾಗಿತ್ತು. ಅವರು ತ್ಯಾಗಮಯಿ, ಸಮಾಜದ ಬಗ್ಗೆ ಬದ್ಧತೆ, ಕಾಳಜಿಯ ಮನೋಭಾವ ರೂಢಿಸಿಕೊಂಡಿದ್ದರು. ದೇಶದ ಬಗ್ಗೆ ಮತ್ತು ದೇಶದಲ್ಲಿನ ಜನರ ಬಗ್ಗೆ ಸದಾ ಚಿಂತಿಸುತ್ತಿದ್ದರು. ದೇಶದ ಆಗು ಹೋಗುಗಳ ಬಗ್ಗೆ ಬಹಳ ತೀಕ್ಷ್ಣವಾಗಿ ಪರಿವೀಕ್ಷಣೆ ಮಾಡುತ್ತಿದ್ದರು. ಜನರ ಸ್ವಾತಂತ್ರ್ಯ ಸಂರಕ್ಷಣೆಯ ಬಗ್ಗೆ ಚಿಂತನೆ ಮಾಡುತ್ತಿದ್ದರು. ದೇಶದ ರೈತರು, ಬಡವರು, ದಲಿತರು, ಮಹಿಳೆಯರು ಸೇರಿದಂತೆ ತುಳಿತಕ್ಕೊಳಗಾದವರ ಪರವಾಗಿ ಅವರು ನಿರಂತರವಾಗಿ ದನಿಯೆತ್ತುತ್ತಿದ್ದರು ಮತ್ತು ಅದಕ್ಕಾಗಿ ಸರ್ಕಾರದ ಗಮನ ಸೆಳೆಯುತ್ತಿದ್ದರು.

ಅವರ ವ್ಯಕ್ತಿತ್ವ, ನಿಸ್ವಾರ್ಥ ಜೀವನದ ಕುರಿತು ಯುವಜನರು, ಸಾಮಾಜಿಕ ಕಾರ್ಯಕರ್ತರು, ಬುದ್ಧಿಜೀವಿಗಳು ಮತ್ತು ರಾಜಕಾರಣಿಗಳು ಹೆಚ್ಚು ತಿಳಿದುಕೊಂಡು ಅವರಂತೆ ನಡೆದುಕೊಳ್ಳಬೇಕಿದೆ. ಆದರೆ ನಮ್ಮ ದೇಶದ ಜನ ಗಾಂಧಿಯವರನ್ನೇ ಮರೆತುಬಿಟ್ಟಿದ್ದು, ದೊರೆಸ್ವಾಮಿಯವರನ್ನು ಎಷ್ಟು ನೆನಪಿಟ್ಟುಕೊಳ್ಳುತ್ತಾರೆ ಎಂಬ ಪ್ರಶ್ನೆ ನನ್ನನ್ನು ಕಾಡುತ್ತದೆ. ಆದರೆ ದೊರೆಸ್ವಾಮಿಯವರಂತ ಪ್ರಾಮಾಣಿಕ ವ್ಯಕ್ತಿಗಳು ಇದ್ದಿದ್ದರಿಂದಲೇ ಈ ಸಮಾಜ ಇಷ್ಟಾದರೂ ಸಹ್ಯವಾಗಿದೆ ಎಂಬುದರಲ್ಲಿ ಎರಡು ಮಾತಿಲ್ಲ.

ಅವರು ಜೆ.ಪಿ ನಗರದ ಮನೆಯಲ್ಲಿರುವಾಗ ನಾನು ಅವರ ಆರೋಗ್ಯ ವಿಚಾರಿಸಲು ಎರಡು ಬಾರಿ ಹೋಗಿದ್ದೆ. ಅವರು ತಮ್ಮ ಜೀವಮಾನವಿಡಿ ಸ್ವಂತ ಮನೆ ಮಾಡಲಿಲ್ಲ. ಬಾಡಿಗೆ ಮನೆಯಲ್ಲಿಯೇ
ಅರ್ಥಪೂರ್ಣವಾಗಿ ಬದುಕಿದರು. ಅವರನ್ನು ಸಾಮಾಜಿಕ ಕಾರ್ಯಕರ್ತರು ಬಹಳ ಮುತುವರ್ಜಿಯಿಂದ ನೋಡಿಕೊಳ್ಳುತ್ತಿದ್ದರು. ನಮ್ಮಂಥವರು ಅವರನ್ನು ನೋಡಲು ಹೋದರೆ ಬಹಳ ಗೌರವದಿಂದ ಸತ್ಕರಿಸುತ್ತಿದ್ದರು. ಮನುಷ್ಯ ಮನುಷ್ಯನಾಗಿ ಹೇಗೆ ಬದುಕಬೇಕು ಎಂಬುದನ್ನು ಅವರು ನಮಗೆ ಕಲಿಸಿದರು. ನಾನು ಸುಪ್ರೀಂ ಕೋರ್ಟ್ ನಿವೃತ್ತ ನ್ಯಾಯಮೂರ್ತಿಯಾಗಿ ಅವರನ್ನು ನೋಡಿದಾಗ, ಅವರ ರೀತಿಯೇ ಬದುಕಬೇಕು, ಅವರ ಆದರ್ಶಗಳನ್ನು ಮೈಗೂಡಿಸಿಕೊಳ್ಳಬೇಕು, ಅವರ ಗುಣಗಳನ್ನು ಅಳವಡಿಸಿಕೊಳ್ಳಬೇಕು ಎಂದು ಎಷ್ಟೋ ಸಲ ನನಗೆ ಅನ್ನಿಸಿದೆ. ಅವರ ತುಂಬು ಜೀವನವನ್ನು ನೋಡಿ ಸಂತಸವಾಗಿದೆ. ಈ ವರ್ಷ ಏಪ್ರಿಲ್ 10ನೇ ತಾರೀಖು ಅವರ 104ನೇ ಜನ್ಮದಿನದ ಸಂದರ್ಭದಲ್ಲಿ ಅವರ ಹೋರಾಟದ ಕುರಿತ ವೆಬಿನಾರ್‌ನಲ್ಲಿ ನಾನು ಮಾತನಾಡಿದೆ. ಅದರಿಂದ ಧನ್ಯಭಾವ ಅನುಭವಿಸಿದೆ. ಅವರು ಇನ್ನೊಂದು ದಶಕ ಬದುಕಿರುತ್ತಾರೆ ಎಂದುಕೊಂಡಿದ್ದೆ. ಅವರ ಆಶಯಗಳಾದ ಸಾಮಾಜಿಕ ನ್ಯಾಯ, ಆರ್ಥಿಕ ನ್ಯಾಯ, ದೇಶದ ಸ್ವಾತಂತ್ರ್ಯ ಮತ್ತು ಸಾರ್ವಭೌಮತೆ ಉಳಿಯುತ್ತದೆ. ಪ್ರಜಾಪ್ರಭುತ್ವ ಬೆಳೆಯುತ್ತದೆ. ನಾಗರಿಕ ಸಮಾಜ ಇನ್ನೂ ಉತ್ಕೃಷ್ಟ ರೀತಿಯಲ್ಲಿ ನಡೆದುಕೊಳ್ಳುತ್ತದೆ ಎಂಬುದನ್ನು ನೋಡಿ ಅವರು ಸಂತಸ ಪಡುತ್ತಾರೆ ಎಂದು ಭಾವಿಸಿದ್ದೆ. ಆದರೆ ಅವರು ನಮ್ಮನ್ನೆಲ್ಲಾ ಅಗಲಿಹೋಗಿದ್ದಾರೆ.

ಬೆಂಗಳೂರಿನ ಜಯದೇವ ಆಸ್ಪತ್ರೆಯ ಡಾ.ಸಿಎನ್ ಮಂಜುನಾಥ್ ಅವರನ್ನು ಈ ಸಂದರ್ಭದಲ್ಲಿ ನಾವು ನೆನೆಯಬೇಕು. ಏಕೆಂದರೆ ದೊರೆಸ್ವಾಮಿಯವರಿಗೆ ಯಾವುದೇ ಆರೋಗ್ಯ ಸಮಸ್ಯೆ ಕಂಡುಬಂದರೂ ಸಹ ಮಂಜುನಾಥ್ ಅವರು ಬಹಳ ಮುತುವರ್ಜಿಯಿಂದ ನೋಡಿಕೊಂಡಿದ್ದಾರೆ. ಮಾರ್ಚ್ ತಿಂಗಳಲ್ಲಿ ನಾನು ದೊರೆಸ್ವಾಮಿಯವರನ್ನು ಭೇಟಿ ಮಾಡಿದಾಗ ಅವರು ಕೆಮ್ಮುತ್ತಿದ್ದರು. ಏಕೆಂದು ಕೇಳಿದಾಗಿ, ’ನನ್ನ ಶ್ವಾಸಕೋಶ ಚೆನ್ನಾಗಿದೆ. ಆದರೆ ಮೂಗಿನಲ್ಲಿ ಏನೋ ಸಮಸ್ಯೆಯಾಗಿ ಕೆಮ್ಮುತ್ತಿದ್ದೇನೆ’ ಅಂದರು. ಆಗ ನಾನು ವಿಕ್ರಮ್ ಆಸ್ಪತ್ರೆಯ ಇಎನ್‌ಟಿ ತಜ್ಞರಾದ ಡಾ.ಶ್ರೀನಿವಾಸ್ ಅವರಿಗೆ ಫೋನ್ ಮಾಡಿದೆ. ಸ್ವಾತಂತ್ರ್ಯ ಹೋರಾಟಗಾರರು, ಹಿರಿಯರು, ಮಾರ್ಗದರ್ಶಕರು, ನಮ್ಮ ಆಸ್ತಿ, ನಮ್ಮ ದೇಶದ ಸಂಪತ್ತು ಇವರು, ಇವರನ್ನು ನೀವು ಮುತುವರ್ಜಿಯಿಂದ ನೋಡಬೇಕು ಎಂದು ಕೇಳಿಕೊಂಡೆ. ಅವರು ಸಂತೋಷದಿಂದ ಒಪ್ಪಿ ಕರೆದುಕೊಂಡು ಬರಲು ಹೇಳಿದರು. ಆದರೆ ಅಂತಹ ದೊಡ್ಡ ಆಸ್ಪತ್ರೆಗೆ ನಾನು ಹೋಗಲಾರೆ ಎಂದು ದೊರೆಸ್ವಾಮಿಯವರು ಹೋಗಲೇ ಇಲ್ಲ. ತಮ್ಮ ಸರಳತೆಯನ್ನು ಬಿಟ್ಟುಕೊಡಲು ದೊರೆಸ್ವಾಮಿಯವರು ತಯಾರಿರಲಿಲ್ಲ.

ದೊರೆಸ್ವಾಮಿಯವರಿಗೆ ನಾವು ಪ್ರತಿ ಕ್ಷಣ ಶ್ರದ್ಧಾಂಜಲಿಯನ್ನು ಸಲ್ಲಿಸಬೇಕಾಗಿದೆ. ಸಂಸದೀಯ ಪ್ರಜಾಪ್ರಭುತ್ವ ಮಾತ್ರವಲ್ಲದೆ ಜನರ ಪ್ರಜಾಪ್ರಭುತ್ವವನ್ನು ಕಟ್ಟಲಿಕ್ಕೆ ಅವರ ಹಾದಿಯಲ್ಲಿ ನಾವು ಮುಂದೆ ಹೋಗಬೇಕಾಗಿದೆ. ಆಗ ಮಾತ್ರ ಅವರ ಆತ್ಮಕ್ಕೆ ಶಾಂತಿ ಸಿಗುತ್ತದೆ ಎನಿಸುತ್ತದೆ.

ಕಳೆದ ವರ್ಷ ಕೆಲ ಬೇಜವಾಬ್ದಾರಿ ರಾಜಕಾರಣಿಗಳು, ಜನಪ್ರತಿನಿಧಿಗಳು ದೊರೆಸ್ವಾಮಿಯವರ ಬಗ್ಗೆ ಕ್ಷುಲ್ಲಕ ಮಾತುಗಳನ್ನಾಡಿದ್ದು ನನಗೆ ತೀವ್ರ ಖೇದವೆನಿಸಿದೆ. ದೊರೆಸ್ವಾಮಿಯವರು ಕೇಂದ್ರ ಮತ್ತು ರಾಜ್ಯ ಸರ್ಕಾರದ ಆಡಳಿತ ವೈಖರಿಯ ಬಗ್ಗೆ ಟೀಕೆ ಟಿಪ್ಪಣಿ ಮಾಡಿದಾಗ ಅದನ್ನು ಸಹಿಸಲಾಗದೆ, ಸಹಿಷ್ಣುತೆ ಇಲ್ಲದವರು ಮಾತುಗಳನ್ನಾಡಿದರು. ಮೇರು ವ್ಯಕ್ತಿತ್ವಕ್ಕೆ ಈ ರೀತಿ ನಡೆದುಕೊಂಡಿದ್ದು ಇಡೀ ಕರ್ನಾಟಕ ರಾಜ್ಯದ ಜನತೆಗೆ ಮಾಡಿದ ಅವಮಾನ ಎಂದು ನಾನು ಭಾವಿಸುತ್ತೇನೆ. ಈಗಲಾದರೂ ಅವರು ಅದನ್ನು ಯೋಚಿಸಿ, ತಮ್ಮ ಹೇಳಿಕೆ ತಪ್ಪಾಯಿತು ಎಂದು ಹೇಳುತ್ತಾರೆ ಎಂದು ನಾನು ಭಾವಿಸಿದ್ದೇನೆ.

ಜಸ್ಟಿಸ್ ವಿ. ಗೋಪಾಲಗೌಡ
ಸುಪ್ರೀಂ ಕೋರ್ಟ್‌ನ ನಿವೃತ್ತ ನ್ಯಾಯಮೂರ್ತಿಗಳು. ಒರಿಸ್ಸಾ ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿಗಳಾಗಿಯೂ ಸೇವೆ ಸಲ್ಲಿಸಿದ್ದಾರೆ.

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...