Homeನ್ಯಾಯ ಪಥಸರಳ, ಸಜ್ಜನಿಕೆಯ ದಿಟ್ಟ ಹೋರಾಟಗಾರ ದೊರೆಸ್ವಾಮಿಯವರು ನಮಗೆಲ್ಲಾ ಮಾದರಿ

ಸರಳ, ಸಜ್ಜನಿಕೆಯ ದಿಟ್ಟ ಹೋರಾಟಗಾರ ದೊರೆಸ್ವಾಮಿಯವರು ನಮಗೆಲ್ಲಾ ಮಾದರಿ

- Advertisement -
- Advertisement -

ದೊರೆಸ್ವಾಮಿಯವರ ಒಡನಾಡಿಗಳಾಗಿದ್ದ, ಹಿರಿಯ ವಕೀಲರಾಗಿರುವ ಶೇಷಾದ್ರಿಯವರು ಹೇಳುತ್ತಿದ್ದ ಒಂದು ಘಟನೆ ನನಗೆ ಇಂದಿಗೂ ಆಶ್ಚರ್ಯವನ್ನುಂಟುಮಾಡುತ್ತದೆ. ಸುಮಾರು 50-60 ವರ್ಷಗಳ ಹಿಂದೆ ದೊರೆಸ್ವಾಮಿಯವರು ಬೆಂಗಳೂರಿನ ಹನುಮಂತನಗರದಲ್ಲಿ ವಾಸಿಸುತ್ತಿದ್ದರು. ಅಲ್ಲಿಂದ ಅವರು ಮಾರುಕಟ್ಟೆ ಬಳಿ ಇರುವ ಗಾಳಿ ಆಂಜನೇಯ ಸ್ವಾಮಿ ದೇವಾಲಯದವರೆಗೆ ನಡೆದುಕೊಂಡು ಬಂದರು. ಅಂದು ಅಲ್ಲಿರುವ ಖಾದಿ ಗ್ರಾಮೋದ್ಯೋಗ ಮಳಿಗೆಯಲ್ಲಿ ಸಬ್ಸಿಡಿ ದರದಲ್ಲಿ ಖಾದಿ ಬಟ್ಟೆಗಳನ್ನು ಮಾರುತ್ತಿದ್ದರು. ದೊರೆಸ್ವಾಮಿಯವರು ಒಂದು ಜುಬ್ಬಾ, ಒಂದು ಪಂಚೆ ಮತ್ತು ಟವೆಲ್ ಒಂದನ್ನು ಆಯ್ಕೆ ಮಾಡಿ ಎಷ್ಟು ಹಣ ಎಂದು ಕೇಳುತ್ತಾರೆ. ಅಂಗಡಿಯಾತ ಬೆಲೆ ಹೇಳಿ, ’ಸರ್ ಹಿಂದಿನ ಸಾರಿ ನೀವು ಹಣ ಕೊಡುವುದು ಮರೆತಿದ್ದೀರಿ’ ಎಂದನಂತೆ. ಆಗ ದೊರೆಸ್ವಾಮಿಯವರು ತಮ್ಮಲ್ಲಿದ್ದ ಹಣ ನೀಡಿ, ಹಿಂದಿನ ಸಾಲ ಪೂರ್ತಿ ತೀರಿಸಿದ ನಂತರವೇ ಹೊಸದನ್ನು ಖರೀದಿಸುತ್ತೇನೆ ಎಂದು ಹೇಳಿ ಬರಿಗೈನಲ್ಲಿ ವಾಪಸ್ ಹೋದರಂತೆ. ಇದೊಂದು ಉದಾಹರಣೆ ಸಾಕು ಅವರ ಪ್ರಾಮಾಣಿಕತೆ ಮತ್ತು ಸರಳ ಜೀವನವನ್ನು ತಿಳಿಯಲು.

ದೊರೆಸ್ವಾಮಿಯವರು ಸ್ವಾತಂತ್ರ್ಯ ಹೋರಾಟಗಾರರು, ಸರಳ ಸಜ್ಜನಿಕೆಗೆ ಬಹಳ ಹೆಸರುವಾಸಿಯಾದವರು. ದೇಶಪ್ರೇಮ, ಜನರ ಬಗ್ಗೆ ಕಾಳಜಿ, ಜನಸಾಮಾನ್ಯರ ಕಷ್ಟನಷ್ಟಗಳಿಗೆ ಸ್ಪಂದಿಸುವ ಗುಣ ಅವರದ್ದು. ಜನರ ಸಮಸ್ಯೆಗಳನ್ನು ಈಡೇರಿಸಲು ಸರ್ಕಾರದ ಮೇಲೆ ಒತ್ತಡ ತರುವುದಕ್ಕಾಗಿ, ಕೃಷಿಕರು, ಕಾರ್ಮಿಕರು ಮತ್ತು ಹಿಂದುಳಿದವರ ಸಾಮಾಜಿಕ ನ್ಯಾಯಕ್ಕಾಗಿ ತಾವು ನಿಧನರಾಗುವವರೆಗೂ ದಣಿವರಿಯದೇ ಸಾಮಾಜಿಕ ಹೋರಾಟದಲ್ಲಿ ತೊಡಗಿಸಿಕೊಂಡ ಹಿರಿಯ ಜೀವ ಅದು.

ಸ್ವಾತಂತ್ರ್ಯ ಸಂಗ್ರಾಮದಲ್ಲಿ ಭಾಗವಹಿಸಿ 14 ತಿಂಗಳುಗಳ ಕಾಲ ಸೆರೆವಾಸ ಅನುಭವಿಸಿದ್ದರು. ನಂತರ ಇಂದಿರಾ ಗಾಂಧಿಯವರು ಹೇರಿದ್ದ ತುರ್ತುಪರಿಸ್ಥಿತಿ ವಿರೋಧಿಸಿ ಹೋರಾಟ ಮಾಡಿದ್ದಕ್ಕಾಗಿ 4 ತಿಂಗಳು ಜೈಲಿನಲ್ಲಿರಬೇಕಾಗಿತ್ತು. ಅವರು ತ್ಯಾಗಮಯಿ, ಸಮಾಜದ ಬಗ್ಗೆ ಬದ್ಧತೆ, ಕಾಳಜಿಯ ಮನೋಭಾವ ರೂಢಿಸಿಕೊಂಡಿದ್ದರು. ದೇಶದ ಬಗ್ಗೆ ಮತ್ತು ದೇಶದಲ್ಲಿನ ಜನರ ಬಗ್ಗೆ ಸದಾ ಚಿಂತಿಸುತ್ತಿದ್ದರು. ದೇಶದ ಆಗು ಹೋಗುಗಳ ಬಗ್ಗೆ ಬಹಳ ತೀಕ್ಷ್ಣವಾಗಿ ಪರಿವೀಕ್ಷಣೆ ಮಾಡುತ್ತಿದ್ದರು. ಜನರ ಸ್ವಾತಂತ್ರ್ಯ ಸಂರಕ್ಷಣೆಯ ಬಗ್ಗೆ ಚಿಂತನೆ ಮಾಡುತ್ತಿದ್ದರು. ದೇಶದ ರೈತರು, ಬಡವರು, ದಲಿತರು, ಮಹಿಳೆಯರು ಸೇರಿದಂತೆ ತುಳಿತಕ್ಕೊಳಗಾದವರ ಪರವಾಗಿ ಅವರು ನಿರಂತರವಾಗಿ ದನಿಯೆತ್ತುತ್ತಿದ್ದರು ಮತ್ತು ಅದಕ್ಕಾಗಿ ಸರ್ಕಾರದ ಗಮನ ಸೆಳೆಯುತ್ತಿದ್ದರು.

ಅವರ ವ್ಯಕ್ತಿತ್ವ, ನಿಸ್ವಾರ್ಥ ಜೀವನದ ಕುರಿತು ಯುವಜನರು, ಸಾಮಾಜಿಕ ಕಾರ್ಯಕರ್ತರು, ಬುದ್ಧಿಜೀವಿಗಳು ಮತ್ತು ರಾಜಕಾರಣಿಗಳು ಹೆಚ್ಚು ತಿಳಿದುಕೊಂಡು ಅವರಂತೆ ನಡೆದುಕೊಳ್ಳಬೇಕಿದೆ. ಆದರೆ ನಮ್ಮ ದೇಶದ ಜನ ಗಾಂಧಿಯವರನ್ನೇ ಮರೆತುಬಿಟ್ಟಿದ್ದು, ದೊರೆಸ್ವಾಮಿಯವರನ್ನು ಎಷ್ಟು ನೆನಪಿಟ್ಟುಕೊಳ್ಳುತ್ತಾರೆ ಎಂಬ ಪ್ರಶ್ನೆ ನನ್ನನ್ನು ಕಾಡುತ್ತದೆ. ಆದರೆ ದೊರೆಸ್ವಾಮಿಯವರಂತ ಪ್ರಾಮಾಣಿಕ ವ್ಯಕ್ತಿಗಳು ಇದ್ದಿದ್ದರಿಂದಲೇ ಈ ಸಮಾಜ ಇಷ್ಟಾದರೂ ಸಹ್ಯವಾಗಿದೆ ಎಂಬುದರಲ್ಲಿ ಎರಡು ಮಾತಿಲ್ಲ.

ಅವರು ಜೆ.ಪಿ ನಗರದ ಮನೆಯಲ್ಲಿರುವಾಗ ನಾನು ಅವರ ಆರೋಗ್ಯ ವಿಚಾರಿಸಲು ಎರಡು ಬಾರಿ ಹೋಗಿದ್ದೆ. ಅವರು ತಮ್ಮ ಜೀವಮಾನವಿಡಿ ಸ್ವಂತ ಮನೆ ಮಾಡಲಿಲ್ಲ. ಬಾಡಿಗೆ ಮನೆಯಲ್ಲಿಯೇ
ಅರ್ಥಪೂರ್ಣವಾಗಿ ಬದುಕಿದರು. ಅವರನ್ನು ಸಾಮಾಜಿಕ ಕಾರ್ಯಕರ್ತರು ಬಹಳ ಮುತುವರ್ಜಿಯಿಂದ ನೋಡಿಕೊಳ್ಳುತ್ತಿದ್ದರು. ನಮ್ಮಂಥವರು ಅವರನ್ನು ನೋಡಲು ಹೋದರೆ ಬಹಳ ಗೌರವದಿಂದ ಸತ್ಕರಿಸುತ್ತಿದ್ದರು. ಮನುಷ್ಯ ಮನುಷ್ಯನಾಗಿ ಹೇಗೆ ಬದುಕಬೇಕು ಎಂಬುದನ್ನು ಅವರು ನಮಗೆ ಕಲಿಸಿದರು. ನಾನು ಸುಪ್ರೀಂ ಕೋರ್ಟ್ ನಿವೃತ್ತ ನ್ಯಾಯಮೂರ್ತಿಯಾಗಿ ಅವರನ್ನು ನೋಡಿದಾಗ, ಅವರ ರೀತಿಯೇ ಬದುಕಬೇಕು, ಅವರ ಆದರ್ಶಗಳನ್ನು ಮೈಗೂಡಿಸಿಕೊಳ್ಳಬೇಕು, ಅವರ ಗುಣಗಳನ್ನು ಅಳವಡಿಸಿಕೊಳ್ಳಬೇಕು ಎಂದು ಎಷ್ಟೋ ಸಲ ನನಗೆ ಅನ್ನಿಸಿದೆ. ಅವರ ತುಂಬು ಜೀವನವನ್ನು ನೋಡಿ ಸಂತಸವಾಗಿದೆ. ಈ ವರ್ಷ ಏಪ್ರಿಲ್ 10ನೇ ತಾರೀಖು ಅವರ 104ನೇ ಜನ್ಮದಿನದ ಸಂದರ್ಭದಲ್ಲಿ ಅವರ ಹೋರಾಟದ ಕುರಿತ ವೆಬಿನಾರ್‌ನಲ್ಲಿ ನಾನು ಮಾತನಾಡಿದೆ. ಅದರಿಂದ ಧನ್ಯಭಾವ ಅನುಭವಿಸಿದೆ. ಅವರು ಇನ್ನೊಂದು ದಶಕ ಬದುಕಿರುತ್ತಾರೆ ಎಂದುಕೊಂಡಿದ್ದೆ. ಅವರ ಆಶಯಗಳಾದ ಸಾಮಾಜಿಕ ನ್ಯಾಯ, ಆರ್ಥಿಕ ನ್ಯಾಯ, ದೇಶದ ಸ್ವಾತಂತ್ರ್ಯ ಮತ್ತು ಸಾರ್ವಭೌಮತೆ ಉಳಿಯುತ್ತದೆ. ಪ್ರಜಾಪ್ರಭುತ್ವ ಬೆಳೆಯುತ್ತದೆ. ನಾಗರಿಕ ಸಮಾಜ ಇನ್ನೂ ಉತ್ಕೃಷ್ಟ ರೀತಿಯಲ್ಲಿ ನಡೆದುಕೊಳ್ಳುತ್ತದೆ ಎಂಬುದನ್ನು ನೋಡಿ ಅವರು ಸಂತಸ ಪಡುತ್ತಾರೆ ಎಂದು ಭಾವಿಸಿದ್ದೆ. ಆದರೆ ಅವರು ನಮ್ಮನ್ನೆಲ್ಲಾ ಅಗಲಿಹೋಗಿದ್ದಾರೆ.

ಬೆಂಗಳೂರಿನ ಜಯದೇವ ಆಸ್ಪತ್ರೆಯ ಡಾ.ಸಿಎನ್ ಮಂಜುನಾಥ್ ಅವರನ್ನು ಈ ಸಂದರ್ಭದಲ್ಲಿ ನಾವು ನೆನೆಯಬೇಕು. ಏಕೆಂದರೆ ದೊರೆಸ್ವಾಮಿಯವರಿಗೆ ಯಾವುದೇ ಆರೋಗ್ಯ ಸಮಸ್ಯೆ ಕಂಡುಬಂದರೂ ಸಹ ಮಂಜುನಾಥ್ ಅವರು ಬಹಳ ಮುತುವರ್ಜಿಯಿಂದ ನೋಡಿಕೊಂಡಿದ್ದಾರೆ. ಮಾರ್ಚ್ ತಿಂಗಳಲ್ಲಿ ನಾನು ದೊರೆಸ್ವಾಮಿಯವರನ್ನು ಭೇಟಿ ಮಾಡಿದಾಗ ಅವರು ಕೆಮ್ಮುತ್ತಿದ್ದರು. ಏಕೆಂದು ಕೇಳಿದಾಗಿ, ’ನನ್ನ ಶ್ವಾಸಕೋಶ ಚೆನ್ನಾಗಿದೆ. ಆದರೆ ಮೂಗಿನಲ್ಲಿ ಏನೋ ಸಮಸ್ಯೆಯಾಗಿ ಕೆಮ್ಮುತ್ತಿದ್ದೇನೆ’ ಅಂದರು. ಆಗ ನಾನು ವಿಕ್ರಮ್ ಆಸ್ಪತ್ರೆಯ ಇಎನ್‌ಟಿ ತಜ್ಞರಾದ ಡಾ.ಶ್ರೀನಿವಾಸ್ ಅವರಿಗೆ ಫೋನ್ ಮಾಡಿದೆ. ಸ್ವಾತಂತ್ರ್ಯ ಹೋರಾಟಗಾರರು, ಹಿರಿಯರು, ಮಾರ್ಗದರ್ಶಕರು, ನಮ್ಮ ಆಸ್ತಿ, ನಮ್ಮ ದೇಶದ ಸಂಪತ್ತು ಇವರು, ಇವರನ್ನು ನೀವು ಮುತುವರ್ಜಿಯಿಂದ ನೋಡಬೇಕು ಎಂದು ಕೇಳಿಕೊಂಡೆ. ಅವರು ಸಂತೋಷದಿಂದ ಒಪ್ಪಿ ಕರೆದುಕೊಂಡು ಬರಲು ಹೇಳಿದರು. ಆದರೆ ಅಂತಹ ದೊಡ್ಡ ಆಸ್ಪತ್ರೆಗೆ ನಾನು ಹೋಗಲಾರೆ ಎಂದು ದೊರೆಸ್ವಾಮಿಯವರು ಹೋಗಲೇ ಇಲ್ಲ. ತಮ್ಮ ಸರಳತೆಯನ್ನು ಬಿಟ್ಟುಕೊಡಲು ದೊರೆಸ್ವಾಮಿಯವರು ತಯಾರಿರಲಿಲ್ಲ.

ದೊರೆಸ್ವಾಮಿಯವರಿಗೆ ನಾವು ಪ್ರತಿ ಕ್ಷಣ ಶ್ರದ್ಧಾಂಜಲಿಯನ್ನು ಸಲ್ಲಿಸಬೇಕಾಗಿದೆ. ಸಂಸದೀಯ ಪ್ರಜಾಪ್ರಭುತ್ವ ಮಾತ್ರವಲ್ಲದೆ ಜನರ ಪ್ರಜಾಪ್ರಭುತ್ವವನ್ನು ಕಟ್ಟಲಿಕ್ಕೆ ಅವರ ಹಾದಿಯಲ್ಲಿ ನಾವು ಮುಂದೆ ಹೋಗಬೇಕಾಗಿದೆ. ಆಗ ಮಾತ್ರ ಅವರ ಆತ್ಮಕ್ಕೆ ಶಾಂತಿ ಸಿಗುತ್ತದೆ ಎನಿಸುತ್ತದೆ.

ಕಳೆದ ವರ್ಷ ಕೆಲ ಬೇಜವಾಬ್ದಾರಿ ರಾಜಕಾರಣಿಗಳು, ಜನಪ್ರತಿನಿಧಿಗಳು ದೊರೆಸ್ವಾಮಿಯವರ ಬಗ್ಗೆ ಕ್ಷುಲ್ಲಕ ಮಾತುಗಳನ್ನಾಡಿದ್ದು ನನಗೆ ತೀವ್ರ ಖೇದವೆನಿಸಿದೆ. ದೊರೆಸ್ವಾಮಿಯವರು ಕೇಂದ್ರ ಮತ್ತು ರಾಜ್ಯ ಸರ್ಕಾರದ ಆಡಳಿತ ವೈಖರಿಯ ಬಗ್ಗೆ ಟೀಕೆ ಟಿಪ್ಪಣಿ ಮಾಡಿದಾಗ ಅದನ್ನು ಸಹಿಸಲಾಗದೆ, ಸಹಿಷ್ಣುತೆ ಇಲ್ಲದವರು ಮಾತುಗಳನ್ನಾಡಿದರು. ಮೇರು ವ್ಯಕ್ತಿತ್ವಕ್ಕೆ ಈ ರೀತಿ ನಡೆದುಕೊಂಡಿದ್ದು ಇಡೀ ಕರ್ನಾಟಕ ರಾಜ್ಯದ ಜನತೆಗೆ ಮಾಡಿದ ಅವಮಾನ ಎಂದು ನಾನು ಭಾವಿಸುತ್ತೇನೆ. ಈಗಲಾದರೂ ಅವರು ಅದನ್ನು ಯೋಚಿಸಿ, ತಮ್ಮ ಹೇಳಿಕೆ ತಪ್ಪಾಯಿತು ಎಂದು ಹೇಳುತ್ತಾರೆ ಎಂದು ನಾನು ಭಾವಿಸಿದ್ದೇನೆ.

ಜಸ್ಟಿಸ್ ವಿ. ಗೋಪಾಲಗೌಡ
ಸುಪ್ರೀಂ ಕೋರ್ಟ್‌ನ ನಿವೃತ್ತ ನ್ಯಾಯಮೂರ್ತಿಗಳು. ಒರಿಸ್ಸಾ ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿಗಳಾಗಿಯೂ ಸೇವೆ ಸಲ್ಲಿಸಿದ್ದಾರೆ.

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹೊಸ ಹಿಂದೂ ದೇವಾಲಯಕ್ಕೆ ಭೂಮಿ ಮಂಜೂರು ಮಾಡಿದ ಸಿಂಗಾಪುರ ಆಡಳಿತ

ಸಿಂಗಪುರದಲ್ಲಿ ಹೆಚ್ಚುತ್ತಿರುವ ಹಿಂದೂ ಸಮುದಾಯದ ಅಗತ್ಯಗಳನ್ನು ಪೂರೈಸಲು ಸಿಂಗಾಪುರ ಸರ್ಕಾರವು ನಗರ-ರಾಜ್ಯದ ಯಿಶುನ್ ಅವೆನ್ಯೂ 3 ರಲ್ಲಿ ಹೊಸ ಹಿಂದೂ ದೇವಾಲಯವನ್ನು ನಿರ್ಮಿಸಲು ಭೂಮಿ ಮಂಜೂರು ಮಾಡಿದೆ. ಏಪ್ರಿಲ್ 1 ರ ಬುಧವಾರದ ಮಾಧ್ಯಮ...

ಕೇರಳ ಚುನಾವಣೆಗೆ ಮುನ್ನ ಕಾಂಗ್ರೆಸ್ ನೇತೃತ್ವದ ಯುಡಿಎಫ್ ಗೆ ಬೆಂಬಲ ಘೋಷಿಸಿದ ‘ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ’

ಎಡ ಸರ್ಕಾರ ಕೈಗೊಂಡ ಅಭಿವೃದ್ಧಿ ಉಪಕ್ರಮಗಳು ಆದಿವಾಸಿ, ದಲಿತ ಮತ್ತು ಇತರ ಅಂಚಿನಲ್ಲಿರುವ ಸಮುದಾಯಗಳನ್ನು ಬದಿಗಿಟ್ಟಿವೆ ಎಂದು ಆರೋಪಿಸಿ, ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ (ಎಡಿಎಫ್) ಬುಧವಾರ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಪ್ರಜಾಸತ್ತಾತ್ಮಕ ರಂಗ...

ಐಎಎಸ್‌ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ತನಿಖೆಗೆ ಪೂರ್ವಾನುಮತಿ ನೀಡಲು ಹೈಕೋರ್ಟ್ ನಿರ್ದೇಶನ

ಪರಿಸರ ಸ್ನೇಹಿ ಬಟ್ಟೆ ಚೀಲಗಳ ಖರೀದಿಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳಿಗೆ ಸಂಬಂಧಿಸಿದಂತೆ, ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಎಫ್‌ಐಆರ್ ದಾಖಲಿಸಲು ಅನುಮತಿಸುವಂತೆ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ ಎಂದು ವರದಿಯಾಗಿದೆ....

ನ್ಯಾಯಾಂಗ ಅಧಿಕಾರಿಗಳನ್ನು ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ: ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಲ್ಡಾ ಜಿಲ್ಲೆಯಲ್ಲಿ ಎಸ್‌ಐಆರ್ ಕಾರ್ಯದಲ್ಲಿ ತೊಡಗಿರುವ ನ್ಯಾಯಾಂಗ ಅಧಿಕಾರಿಗಳನ್ನು 'ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ' ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ದೂಷಿಸಿದ್ದಾರೆ. ಮತದಾರರ ಪಟ್ಟಿಯಿಂದ ಹೆಸರುಗಳನ್ನು ಅಳಿಸಿಹಾಕಿದ್ದಕ್ಕಾಗಿ ಬುಧವಾರ ಪ್ರತಿಭಟನಾಕಾರರು ಹಲವಾರು...

ಎಎಪಿಯ ರಾಜ್ಯಸಭಾ ಉಪನಾಯಕ ಸ್ಥಾನದಿಂದ ರಾಘವ್ ಚಡ್ಡಾಗೆ ಕೋಕ್, ಅಶೋಕ್ ಮಿತ್ತಲ್ ಗೆ ಅಧಿಕಾರ: ವರದಿ

ಮಹತ್ವದ ಬೆಳವಣಿಗೆಯೊಂದರಲ್ಲಿ, ಆಮ್ ಆದ್ಮಿ ಪಕ್ಷ (ಎಎಪಿ) ರಾಜ್ಯಸಭೆಯಲ್ಲಿ ರಾಘವ್ ಚಡ್ಡಾ ಅವರನ್ನು ಉಪನಾಯಕ ಹುದ್ದೆಯಿಂದ ಬದಲಾಯಿಸಲು ಮುಂದಾಗಿದ್ದು, ಇದು ಪಕ್ಷದೊಳಗಿನ ಆಂತರಿಕ ಬಿರುಕು ಉಂಟಾಗಿರುವ ಲಕ್ಷಣಗಳನ್ನು ಸೂಚಿಸುತ್ತದೆ. ಮೇಲ್ಮನೆಯಲ್ಲಿ ಪಕ್ಷದ ಹೊಸ...

ಜಾರ್ಖಂಡ್| ವಾಮಾಚಾರ ಆಚರಣೆಗೆ ಅಪ್ರಾಪ್ತ ಬಾಲಕಿ ಬಲಿ; ತಾಯಿ ಸೇರಿದಂತೆ ಮೂವರ ಬಂಧನ

ಜಾರ್ಖಂಡ್‌ನ ಹಜಾರಿಬಾಗ್ ಬಳಿಕ ಕುಸುಂಭ ಗ್ರಾಮದಲ್ಲಿ ಬಲಿದಾನದ ಆಚರಣೆಯಲ್ಲಿ ಕತ್ತು ಹಿಸುಕಿ ಕೊಂದ ಹದಿಹರೆಯದ ಹುಡುಗಿಯ 35 ವರ್ಷದ ತಾಯಿಯನ್ನು ಪೊಲೀಸರು ಬುಧವಾರ ಬಂಧಿಸಿದ್ದಾರೆ. ಜೊತೆಗೆ, ಮಾಂತ್ರಿಕ ಮತ್ತು ಓರ್ವ ವ್ಯಕ್ತಿಯನ್ನು ಬಂಧಿಸಿರುವುದಾಗಿ...

ಪ. ಬಂಗಾಳ | ಎಸ್‌ಐಆರ್ ಕರ್ತವ್ಯದಲ್ಲಿದ್ದ ನ್ಯಾಯಾಧೀಶರನ್ನು ಒತ್ತೆಯಾಳಾಗಿಟ್ಟುಕೊಂಡ ಆರೋಪ : ತೀವ್ರ ಕಳವಳ ವ್ಯಕ್ತಪಡಿಸಿದ ಸುಪ್ರೀಂ ಕೋರ್ಟ್, ಕೇಂದ್ರ ಪಡೆಗಳ ನಿಯೋಜನೆಗೆ ನಿರ್ದೇಶನ

ನಿನ್ನೆ (ಏ.1) ಮಧ್ಯಾಹ್ನದಿಂದ ಮಧ್ಯರಾತ್ರಿಯವರೆಗೆ ಪಶ್ಚಿಮ ಬಂಗಾಳದಲ್ಲಿ ನಡೆದ ಪ್ರತಿಭಟನೆಯ ವೇಳೆ, ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಕಾರ್ಯದಲ್ಲಿ ತೊಡಗಿದ್ದ ನ್ಯಾಯಾಂಗ ಅಧಿಕಾರಿಗಳನ್ನು ಪ್ರತಿಭಟನಾಕಾರರು ಒತ್ತೆಯಾಳಾಗಿ ಇರಿಸಿಕೊಂಡಿದ್ದರು ಎಂದು ಆರೋಪಿಸಲಾಗಿದೆ....

ಉತ್ತರ ಪ್ರದೇಶ| ಮುಸ್ಲಿಂ ಯುವಕನನ್ನು ಥಳಿಸಿ ದರೋಡೆ ಮಾಡಿದ ಗುಂಪು; ಹಿಂದೂ ಶ್ಲೋಕ ಪಠಿಸುವಂತೆ ಒತ್ತಾಯ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯಲ್ಲಿ ಹಿಂದುತ್ವವಾದಿ ಗುಂಪೊಂದು ಮುಸ್ಲಿಂ ಯುವಕನನ್ನು ನಿರ್ದಯವಾಗಿ ಥಳಿಸಿ, ಅವಮಾನಿಸಿ, ಹಿಂದುತ್ವ ಶ್ಲೋಕಗಳನ್ನು ಪಠಿಸುವಂತೆ ಒತ್ತಾಯಿಸಿದೆ ಎಂದು ಪೊಲೀಸರನ್ನು ಉಲ್ಲೇಖಿಸಿ 'ಕ್ಲಾರಿಯನ್ ಇಂಡಿಯಾ' ವರದಿ ಮಾಡಿದೆ. ಮಾರ್ಚ್ 28...

‘ಇರಾನ್‌ಗೆ ಅಮೆರಿಕನ್ನರ ವಿರುದ್ಧ ಯಾವುದೇ ದ್ವೇಷವಿಲ್ಲ’: ಅಮೆರಿಕದ ಸಾರ್ವಜನಿಕರಿಗೆ ‘ಮುಕ್ತ ಪತ್ರ’ ಬರೆದ ಇರಾನ್ ಅಧ್ಯಕ್ಷ ಪೆಜೆಶ್ಕಿಯಾನ್

ಪಶ್ಚಿಮ ಏಷ್ಯಾ ಸಂಘರ್ಷ ತೀವ್ರವಾಗುತ್ತಿರುವಾಗಲೇ ಅಮೆರಿಕ ಸಾರ್ವಜನಿಕರನ್ನು ಉದ್ದೇಶಿಸಿ ದೀರ್ಘ ಪತ್ರ ಬರೆದಿರುವ ಇರಾನ್ ಅಧ್ಯಕ್ಷ ಮಸೌದ್ ಪಜೆಶ್ಕಿಯಾನ್, ಅಮೆರಿಕನ್ನರ ವಿರುದ್ಧ ಇರಾನ್ ಯಾವುದೇ ದ್ವೇಷವನ್ನು ಹೊಂದಿಲ್ಲ ಎಂದು ಹೇಳಿದ್ದಾರೆ. ಆದರೆ  ಜಾಗತಿಕ ನಿರೂಪಣೆಗಳಲ್ಲಿ...

ಬಿಜು ಪಟ್ನಾಯಕ್ ವಿರುದ್ಧ ಹೇಳಿಕೆ : ಬೇಷರತ್ ಕ್ಷಮೆಯಾಚಿಸಿದ ಬಿಜೆಪಿ ಸಂಸದ ನಿಶಿಕಾಂತ್ ದುಬೆ

ಒಡಿಶಾದ ಮಾಜಿ ಮುಖ್ಯಮಂತ್ರಿ ಬಿಜು ಪಟ್ನಾಯಕ್ ಅವರ ಕುರಿತು ನೀಡಿದ ಹೇಳಿಕೆ ವಿರುದ್ದ ದೇಶದಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾದ ಹಿನ್ನೆಲೆ, ಬಿಜೆಪಿ ಸಂಸದ ನಿಶಿಕಾಂತ್ ದುಬೆ ಬುಧವಾರ (ಏ.1) ಬೇಷರತ್ ಕ್ಷಮೆಯಾಚಿಸಿದ್ದಾರೆ. "ಬಿಜು ಬಾಬು...