Homeಮುಖಪುಟಖಾಸಗಿ ವಲಯದ ಶೇ.50 ರಷ್ಟು ಲಸಿಕೆ  9 ಕಾರ್ಪೋರೇಟ್‍ ಆಸ್ಪತ್ರೆಗಳ ಪಾಲು: ಸಣ್ಣ ನಗರಗಳಲ್ಲಿ ಲಸಿಕೆ...

ಖಾಸಗಿ ವಲಯದ ಶೇ.50 ರಷ್ಟು ಲಸಿಕೆ  9 ಕಾರ್ಪೋರೇಟ್‍ ಆಸ್ಪತ್ರೆಗಳ ಪಾಲು: ಸಣ್ಣ ನಗರಗಳಲ್ಲಿ ಲಸಿಕೆ ಕೊರತೆ

- Advertisement -
- Advertisement -

ದೇಶದ 9 ಕಾರ್ಪೋರೇಟ್‍ ಅಂದರೆ ಬೃಹತ್‍ ಆಸ್ಪತ್ರೆ ಸಮೂಹಗಳು ಖಾಸಗಿ ಆಸ್ಪತ್ರೆಗಳು ಖರೀದಿಸಿದ ಒಟ್ಟು ಲಸಿಕೆಗಳಲ್ಲಿ ಅರ್ಧದಷ್ಟನ್ನು ಖರೀದಿಸಿ ಸ್ಟಾಕ್ ಮಾಡಿಕೊಂಡಿವೆ ಎಂದು ಇಂಡಿಯನ್‍ ಎಕ್ಸ್‌ಪ್ರೆಸ್‍ ವರದಿ ಮಾಡಿದೆ.

ಕೇಂದ್ರ ಸರ್ಕಾರವು ತನ್ನ ಲಸಿಕಾ ನೀತಿಯನ್ನು ಪರಿಷ್ಕರಿಸಿ ಮುಕ್ತ ಮಾರುಕಟ್ಟೆಗೆ ಬಿಟ್ಟಿದ್ದರ ಪರಿಣಾಮ ಇದಾಗಿದೆ. ಮೊದಲ ತಿಂಗಳೊಂದರಲ್ಲೇ ಖಾಸಗಿ ಆಸ್ಪತ್ರೆಗಳು ಖರೀದಿಸಿದ 1.20 ಕೋಟಿ ಡೋಸ್‍ ಲಸಿಕೆಗಳಲ್ಲಿ 9 ಕಾರ್ಪೋರೇಟ್‍ ಆಸ್ಪತ್ರೆಗಳು 60.57 ಲಕ್ಷ ಡೋಸ್‍ಗಳನ್ನು ಖರೀದಿಸಿವೆ. ಈ ಪಂಚತಾರಾ ಆಸ್ಪತ್ರೆಗಳು ಹೆಚ್ಚಾಗಿ ಮಹಾನಗರಗಳಲ್ಲೇ ಇದ್ದು, ದೇಶದ ಎರಡನೇ ಹಂತದ ನಗರ-ಪಟ್ಟಣಗಳ ಖಾಸಗಿ ಆಸ್ಪತ್ರೆಗಳಲ್ಲಿ ಲಸಿಕೆಯ ಕೊರತೆಯಾಗಿದೆ. ಬೆಂಗಳೂರಿನ ಮಧ್ಯಮ ಗಾತ್ರದ ಆಸ್ಪತ್ರೆಗಳಲ್ಲೂ ಲಸಿಕೆ ಪ್ರಮಾಣ ಕಡಿಮೆಯಿದೆ.

ಇದು ಲಸಿಕಾ ನೀತಿ ಸೃಷ್ಟಿಸಿರುವ ಅಸಮಾನ ಹಂಚಿಕೆ ಮತ್ತು ಅಸಮಾನ ಲಭ್ಯತೆಗೆ ದಾರಿ ಮಾಡಿಕೊಟ್ಟಿದೆ. ಮೇ ತಿಂಗಳಲ್ಲಿ ಖಾಸಗಿ ವಲಯಕ್ಕೆ ಮೀಸಲಾದ ಕೋವಿಡ್‍ ಲಸಿಕೆಗಳಲ್ಲಿ ಶೇ, 50ರಷ್ಟು ಈ 9 ಕಾರ್ಪೋರೇಟ್‍ ಆಸ್ಪತ್ರೆ ಸಮೂಹಗಳ ಕೈಸೇರಿದೆ.

ಉಳಿದ ಶೇ.50ರಷ್ಟು ಲಸಿಕೆಗಳು ಸುಮಾರು 300 ಆಸ್ಪತ್ರೆಗಳಿಗೆ ವಿತರಣೆಯಾಗಿದೆ. ಈ ಯಾವ ಆಸ್ಪತ್ರೆಗಳೂ  ಎರಡನೇ ಶ್ರೇಣಿಯ ನಗರಗಳಲ್ಲಿ ಕೆಲಸ ನಿರ್ವಹಿಸುತ್ತಿಲ್ಲ.

ಖಾಸಗಿ ಆಸ್ಪತ್ರೆಗಳು ಮೇ ತಿಂಗಳಿನಲ್ಲಿ 1.20 ಕೋಟಿ ಡೋಸ್‍ ಖರೀದಿಸಿದ್ದು, ಈ ತಿಂಗಳಲ್ಲಿ ಖರೀದಿಯಾದ ಲಸಿಕೆಗಳ ಶೇ.15.6ರಷ್ಟಾಗಿದೆ. ರಾಜ್ಯ ಸರ್ಕಾರಗಳು ಶೇ 33.5 (2.66 ಕೋಟಿ ಡೋಸ್‍) ಮತ್ತು ಕೇಂದ್ರ ಸರ್ಕಾರವು ಶೇ. 50.9 (4.03 ಕೋಟಿ ಡೋಸ್‍) ಲಸಿಕೆ ದಾಸ್ತಾನು ಮಾಡಿವೆ.

ಅಪೊಲೋ ಆಸ್ಪತ್ರೆ ಸಮೂಹದ 9 ಆಸ್ಪತ್ರೆಗಳು 16.1 ಲಕ್ಷ ಡೋಸ್‍, ಮ್ಯಾಕ್ಸ್‌ ಕೇರ್‌ನ 6 ಆಸ್ಪತ್ರೆಗಳು 12.97 ಲಕ್ಷ ಡೋಸ್‍, ರಿಲಾಯನ್ಸ್‌ ಫೌಂಡೇಶನ್‍ ನಡೆಸುವ ಎಚ್‍ಎನ್‍ ಟ್ರಸ್ಟ್ ಸಮೂಹ 9.89 ಲಕ್ಷ ಡೋಸ್‍, ಮೆಡಿಕಾ ಸಮೂಹವು 6.26 ಲಕ್ಷ ಡೋಸ್‍, ಪೋರ್ಟಿಸ್‍ ಹೆಲ್ತ್‍ಕೇರ್‌ನ ಎಂಟು ಆಸ್ಪತ್ರೆಗಳು 4.48 ಲಕ್ಷ ಡೋಸ್‍, ಗೋದ್ರೇಜ್‍ ಸಮೂಹ ಆಸ್ಪತ್ರೆಗಳು 3.35 ಲಕ್ಷ, ಮಣಿಪಾಲ್‍ ಹೆಲ್ತ್ ಕೇರ್ ಸಮೂಹ 3.24 ಲಕ್ಷ ಡೋಸ್‍, ನಾರಾಯಣ ಹೃದಯಾಲಯ 2.02 ಲಕ್ಷ ಡೋಸ್‍ ಮತ್ತು ಟೆಕ್ನೋ ಇಂಡಿಯಾ ಸಮೂಹ 2 ಲಕ್ಷ ಡೋಸ್‍ ಖರೀದಿ ಮಾಡಿವೆ.

ಈ ಆಸ್ಪತ್ರೆಗಳು ಮೆಟ್ರೋ, ರಾಜ್ಯ ರಾಜಧಾನಿ ಮತ್ತು ಒಂದನೇ ಶ್ರೇಣಿಯ ನಗರಗಳಲ್ಲಿ ತಮ್ಮ ಘಟಕಗಳನ್ನು ಹೊಂದಿವೆ. ಸೀರಂ ಕಂಪನಿಯ ಕೋವಿಶೀಲ್ಡ್ ಅನ್ನು 600 ರೂ.ಗಳಿಗೆ ಮತ್ತು ಭಾರತ್‍ ಬಯೋಟೆಕ್‍ನ ಕೊವ್ಯಾಕ್ಸಿನ್‍ ಅನ್ನು 1,200 ರೂ,ಗಳಿಗೆ ಈ ಆಸ್ಪತ್ರೆಗಳು ಖರೀದಿಸಿವೆ.

ಬೆಂಗಳೂರಿನ ನ್ಯಾಷನಲ್‍ ಇನ್ಸಿಟ್ಯೂಟ್‍ ಆಫ್‍ ಅಡ್ವಾನ್ಸ್ ಸ್ಟಡೀಸ್‍ನ  ಪ್ರಾಧ್ಯಾಪಕ ತೇಜಲ್‍ ಕಾಂಟಿಕರ್, “ಲಸಿಕಾ ತಯಾರಕ ಕಂಪನಿಗಳು ಹೆಚ್ಚಿನ ದರ ಸಿಗುವ ಕಾರ್ಪೋರೇಟ್‍ ಆಸ್ಪತ್ರೆಗಳಿಗೆ ಲಸಿಕೆ ಮಾರಲು ಆಸಕ್ತಿ ತೋರಿವೆ’’ ಎನ್ನುತ್ತಾರೆ. ಅಂದರೆ ನಿಗದಿತ ದರಕ್ಕಿಂತಲೂ ಹೆಚ್ಚಿನ ದರಕ್ಕೂ ಲಸಿಕೆ ಖರೀದಿಸಿರಬಹುದು ಮತ್ತು ಶ್ರೀಮಂತರಿಗೆ ಅವನ್ನು ಇನ್ನೂ ಹೆಚ್ಚಿನ ದರದಲ್ಲಿ ನೀಡಿರಬಹುದು.

ಈ ಆಸ್ಪತ್ರೆಗಳು ಗ್ರಾಹಕರಿಗೆ ಕೋವಿಶೀಲ್ಡ್ ಅನ್ನು 850-1000 ರೂಗೆ ಮತ್ತು ಕೋವ್ಯಾಕ್ಸಿನ್‍ ಅನ್ನು 1,250 ರೂಗೆ ಒದಗಿಸುತ್ತಿವೆ. ಇದು ನಗರ ನಿವಾಸಿಗಳ ಒಂದು ವರ್ಗಕ್ಕೆ ಮಾತ್ರ ಅನುಕೂಲಕರವಾಗಿದ್ದು, ಕೆಳ ಮಧ್ಯಮ ವರ್ಗದವರ ಕೈಗೆ ಎಟುಕದ ದರವಾಗಿದೆ.

ನಿಮ್ಮಲ್ಲಿರುವ ಲಸಿಕೆಗಳನ್ನು ಸಣ್ಣ ನಗರಗಳಿಗೆ ವಿತರಿಸುತ್ತೀದ್ದೀರಾ ಎಂದು ಇಂಡಿಯನ್  ಎಕ್ಸ್ ಪ್ರೆಸ್‍ ಕೇಳಿದ ಪ್ರಶ್ನೆಗಳಿಗೆ ಈ ಆಸ್ಪತ್ರೆಗಳು ಇನ್ನೂ ಉತ್ತರಿಸಿಲ್ಲ.

ಕೇಂದ್ರದ ಲಸಿಕಾ ನೀತಿಯನ್ನು ಈಗಾಗಲೇ ಸುಪ್ರೀಂಕೋರ್ಟ್ ಪ್ರಶ್ನಿಸಿದೆ. ರಾಜ್ಯ ಸರ್ಕಾರಗಳು ಲಸಿಕೆಯ ಅಸಮಾನ ಹಂಚಿಕೆಯ ಬಗ್ಗೆ ದೂರುತ್ತಿವೆ. ಇದೇ ಹೊತ್ತಲ್ಲಿ ಖಾಸಗಿ ವಲಯಕ್ಕೆ ನಿಗದಿಯಾದ ಲಸಿಕೆಗಳಲ್ಲಿ ಶೇ. 50 ರಷ್ಟು ಕೇವಲ 9 ಸಮೂಹ ಆಸ್ಪತ್ರೆಗಳ ಪಾಲಾಗಿವೆ.

ಉಚಿತ ಲಸಿಕೆ ನೀಡಬೇಕಾದ ಹೊಣೆಯಿಂದ ತಪ್ಪಿಸಿಕೊಂಡ ಕೇಂದ್ರ ಸರ್ಕಾರ ತಯಾರಕ ಕಂಪನಿಗಳು, ದೊಡ್ಡ ಆಸ್ಪತ್ರೆ ಸಮೂಹಗಳ ಪರ ನಿಂತಿದೆಯೇ ಎಂಬ ಪ್ರಶ್ನೆ ಕಾಡುತ್ತಿದೆ.


ಇದನ್ನೂ ಓದಿ: ಕೋವಿಡ್-19; ಆದ ಎಡವಟ್ಟುಗಳು ಮತ್ತು ಬೇಕಿರುವ ಎಚ್ಚರ: ಡಾ. ಜಿ ಎನ್ ಮಲ್ಲಿಕಾರ್ಜುನಪ್ಪ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...