Homeಮುಖಪುಟಟ್ವಿಟ್ಟರ್‍ ವಾರ್ ನಲ್ಲಿ ಬಿಜೆಪಿಯ ರಾಜೀವ್ ಚಂದ್ರಶೇಖರ್‍ಗೆ ಸರಿಯಾಗಿ ತಿರುಗೇಟು ಕೊಟ್ಟ ಸಿದ್ದರಾಮಯ್ಯ

ಟ್ವಿಟ್ಟರ್‍ ವಾರ್ ನಲ್ಲಿ ಬಿಜೆಪಿಯ ರಾಜೀವ್ ಚಂದ್ರಶೇಖರ್‍ಗೆ ಸರಿಯಾಗಿ ತಿರುಗೇಟು ಕೊಟ್ಟ ಸಿದ್ದರಾಮಯ್ಯ

- Advertisement -
- Advertisement -

ಟ್ವಿಟ್ಟರ್‍ನಲ್ಲಿ ಪ್ರಖರವಾಗಿ ಬರೆಯುವ ಮೂಲಕ ಖ್ಯಾತಿಯಾಗಿದ್ದ ಮಾಜಿ ಸಿಎಂ ಸಿದ್ದರಾಮಯ್ಯನವರು ಈಗ ಮತ್ತೆ ಸುದ್ದಿಯಲ್ಲಿದ್ದಾರೆ. ಟಿಪ್ಪು ಸುಲ್ತಾನ್ ಕುರಿತಂತೆ ಇಮ್ರಾನ್ ಖಾನ್ ಟ್ವೀಟ್ ಒಂದನ್ನು ಆಧಾರವಾಗಿಟ್ಟುಕೊಂಡು ಸಿದ್ದರಾಮಯ್ಯನವರ ಕಾಲೆಳೆಯಲು ಬಂದ ಬಿಜೆಪಿಯ ರಾಜ್ಯಸಭಾ ಸದಸ್ಯ ರಾಜೀವ್ ಚಂದ್ರಶೇಖರ್‍ಗೆ ಸರಿಯಾಗಿ ತಿರುಗೇಟು ನೀಡಿ ಬಾಯಿ ಮುಚ್ಚಿಸಿದ್ದಾರೆ.

ನಿನ್ನೆ ಮೇ 04ರಂದು ಟಿಪ್ಪು ಹುತಾತ್ಮದಿನದ ನೆನಪಿನಲ್ಲಿ ಪಾಕ್ ಪ್ರಧಾನಿ ಇಮ್ರಾನ್ ಖಾನ್‍ರವರು ‘ಇಂದು ಮೇ ನಾಲ್ಕು ಟಿಪ್ಪು ವೀರ ಮರಣ ಹೊಂದಿದ ದಿನ. ನಾನು ಅತಿ ಹೆಚ್ಚು ಮೆಚ್ಚುವ ಮನುಷ್ಯ ಟಿಪ್ಪು ಆಗಿದ್ದು, ಗುಲಾಮಗಿರಿ ವಿರೋಧಿಸಿ ಸ್ವಾತಂತ್ರ್ಯಕ್ಕೆ ಆದ್ಯತೆ ನೀಡಿದ್ದರಿಂದಲೇ ಅವರು ಮರಣ ಹೊಂದಬೇಕಾಯಿತು” ಎಂದು ಟ್ವೀಟ್ ಮಾಡಿದ್ದರು.

ಇದಕ್ಕೆ ಪ್ರತಿಕ್ರಿಯಿಸಿದ್ದ ಬಿಜೆಪಿ ಎಂಪಿ ರಾಜೀವ್ ಚಂದ್ರಶೇಖರ್ “ಪ್ರೀತಿಯ ಸಿದ್ದರಾಮಯ್ಯನವರೆ, ಶೆರ್ರಿ @ಆನ್ ಟಾಪ್ (ನವಜೋತ್‍ಸಿಂಗ್ ಸಿಧು) ರವರಂತೆ ಇಮ್ರಾನ್‍ಜಿ ಮತ್ತು ಬಾಜ್‍ವಾಜ್‍ಜಿ ಯನ್ನು ಅಪ್ಪಿಕೊಳ್ಳುವ ಸುಸಂದರ್ಭ ನಿಮಗೆ ಬಂದಿದೆ. ಇದು ಮಾತ್ರವೆ ನೀವು ರಾಹುಲ್ ಗಾಂಧಿ ಮತ್ತು ಪ್ರಿಯಾಂಕ ಗಾಂಧಿಯವರ ಮೆಚ್ಚುಗೆ ಪಡೆಯಲು ಅತಿ ಸುಲಭದ ದಾರಿ. ಜಸ್ಟ್ ಡು ಇಟ್” ಎಂದು ಟ್ವೀಟ್ ಮಾಡುವ ಮೂಲಕ ಛೇಡಿಸಿದ್ದರು.

ಇದಕ್ಕೆ ಖಾರವಾಗಿಯೇ ಪ್ರತಿಕ್ರಿಯೆ ನೀಡಿರುವ ಸಿದ್ದರಾಮಯ್ಯನವರು “ಶ್ರೀ ರಾಜೀವ್ ಚಂದ್ರಶೇಖರ್‍ರವರೆ ನೀವು ಟ್ವೀಟ್ ಮಾಡುವ ಮುಂಚೆ ಯೋಚಿಸಿ. ನಾನು ನಮ್ಮ ಶತ್ರು ರಾಷ್ಟ್ರದ ಪ್ರಧಾನಿಯೊಂದಿಗೆ ಬಿರಿಯಾನಿ ತಿಂದು ಬಂದ ನಿಮ್ಮ ಚೋರ್ ಪ್ರಧಾನಮಂತ್ರಿಯಂತಲ್ಲ. ಜೊತೆಗೆ ನಾನು ನಿಮ್ಮಂತೆ ನಿಮ್ಮ ಬಾಸ್ ಅನ್ನು ಸಂತುಷ್ಟಗೊಳಿಸಲು ರಾಜಿ ಸಹ ಆಗುವುದಿಲ್ಲ. ನಿಮ್ಮ ಬಾಸ್‍ಗಾಗಿ ಗುಲಾಮರಂತೆ ಬದುಕುತ್ತಿರುವ ನಿಮಗಿಂತ ಟಿಪ್ಪು ಸುಲ್ತಾನ್ ತರಹ ಬದುಕುವುದು ಲೇಸು” ಎಂದು ತಿರುಗೇಟು ನೀಡಿದ್ದಾರೆ.

ರಾಜೀವ್‍ರವರ ಟ್ವೀಟ್‍ಗೆ ಸಿದ್ದರಾಮಯ್ಯನವರ ಕೊಟ್ಟ ಮರುಉತ್ತರದ ಟ್ವೀಟ್ ಈಗಾಗಲೇ ಸೊಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ರಾಜೀವ್‍ರವರು ಬೇಕಂತಲೇ ಸಿದ್ದರಾಮಯ್ಯನವರಿಂದ ಏಟು ತಿನ್ನಲು ಹೀಗೆಲ್ಲಾ ಮಾಡುತ್ತಿದ್ದಾರೆ ಎಂದು ನೆಟ್ಟಿಗರು ಲೇವಡಿ ಮಾಡಿದ್ದಾರೆ. ಇನ್ನು ಕೆಲವರು ಸಿದ್ದರಾಮಯ್ಯ ಸರಿಯಾಗಿಯೇ ಮಾತಾಡಿದ್ದಾರೆ. ಆದರೆ ಎಲ್ಲಿಯ ಟಿಪ್ಪು ಸುಲ್ತಾನ್, ಎಲ್ಲಿಯ ರಾಜೀವ್ ಚಂದ್ರಶೇಖರ್ ಹೋಲಿಕೆ? ಈ ಬಿಜೆಪಿಯವರನ್ನು ಟಿಪ್ಪು ಸುಲ್ತಾನ್ ರೊಂದಿಗೆ ಹೋಲಿಸಬೇಡಿ ಎಂದು ಅಭಿಪ್ರಾಯ ತಿಳಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭೆ ಚುನಾವಣೆ : ಬಿಹಾರದ ಎಲ್ಲಾ ಐದು ಸ್ಥಾನಗಳು ಎನ್‌ಡಿಎ ಪಾಲು; ಒಡಿಶಾದ ಮೂರು ಸ್ಥಾನಗಳಲ್ಲಿ ಗೆಲುವು

ರಾಜ್ಯಸಭೆಯ 37 ಸ್ಥಾನಗಳಿಗೆ ಸೋಮವಾರ (ಮಾ.16) ನಡೆದ ಚುನಾವಣೆಯಲ್ಲಿ ಎನ್‌ಡಿಎ ಮೈತ್ರಿಕೂಟ 21 ಸ್ಥಾನಗಳನ್ನು ಗೆದ್ದುಕೊಂಡಿದೆ. ಈ ಪೈಕಿ ಬಿಜೆಪಿ ಮಾತ್ರ 11 ಸ್ಥಾನಗಳನ್ನು ಪಡೆದಿದೆ. ವಿಪಕ್ಷಗಳ ಇಂಡಿಯಾ ಮೈತ್ರಿಕೂಟ ಒಟ್ಟು 11 ಸ್ಥಾನಗಳನ್ನು...

ಅಫ್ಘಾನಿಸ್ತಾನದ ಆಸ್ಪತ್ರೆ ಮೇಲೆ ಪಾಕಿಸ್ತಾನದಿಂದ ವಾಯುದಾಳಿ ; ಕನಿಷ್ಠ 400 ಸಾವು : ವರದಿ

ರಾಜಧಾನಿ ಕಾಬೂಲ್‌ನಲ್ಲಿ ಮಾದಕ ವ್ಯಸನಿಗಳಿಗೆ ಚಿಕಿತ್ಸೆ ನೀಡುತ್ತಿದ್ದ ಆಸ್ಪತ್ರೆಯ ಮೇಲೆ ಪಾಕಿಸ್ತಾನದ ಮಿಲಿಟರಿ ವಾಯು ದಾಳಿ ನಡೆಸಿದ್ದು, ಕನಿಷ್ಠ 400 ಜನರು ಸಾವನ್ನಪ್ಪಿದ್ದಾರೆ ಎಂದು ಅಫ್ಘಾನಿಸ್ತಾನ ಆರೋಪಿಸಿದೆ. ಅಲ್‌-ಜಝೀರಾ ವರದಿಯ ಪ್ರಕಾರ, ಅಫ್ಘಾನಿಸ್ತಾನದ ಆರೋಪವನ್ನು...

‘ನನ್ನ ಮನೆ ಮೇಲೆ ದಾಳಿ ಮಾಡಿ… ಹೇಗೆ ಎದುರಿಸಬೇಕೆಂದು ಗೊತ್ತಿದೆ..’; ಬಿಜೆಪಿಗೆ ಮಮತಾ ಬ್ಯಾನರ್ಜಿ ಸವಾಲು

"ತಮ್ಮ ನಿವಾಸ ಮತ್ತು ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ನಾಯಕರ ನಿವಾಸವನ್ನು ಗುರಿಯಾಗಿಸಿಕೊಳ್ಳುವಂತೆ" ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸೋಮವಾರ ಬಿಜೆಪಿಗೆ ಸವಾಲು ಹಾಕಿದರು. ರಾಜ್ಯದಲ್ಲಿ, ಟಿಎಂಸಿ ನಾಯಕರ ಮೇಲಿನ ದಾಳಿಗೆ...

ಬೆಂಗಳೂರು: ವಿಶೇಷ ಪೂಜೆ ಹೆಸರಿನಲ್ಲಿ ಐಟಿ ಅಧಿಕಾರಿಗೆ 35 ಲಕ್ಷ ವಂಚನೆ: 59 ವರ್ಷದ ‘ಗಿಳಿ ಶಾಸ್ತ್ರ’ ಹೇಳುವ ವ್ಯಕ್ತಿ ಬಂಧನ

ಬೆಂಗಳೂರು: ವಿಶೇಷ ಪೂಜೆ ಮಾಡುವುದಾಗಿ ಹೇಳಿಕೊಂಡು ಆದಾಯ ತೆರಿಗೆ ಅಧಿಕಾರಿಗೆ 35 ಲಕ್ಷ ರೂಪಾಯಿ ವಂಚಿಸಿದ ಆರೋಪದ ಮೇಲೆ ತಮಿಳುನಾಡು ಮೂಲದ 59 ವರ್ಷದ ವ್ಯಕ್ತಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಥೇಣಿಯ ಶೇಖರ್...

ಬಿಹಾರ| ರಾಜ್ಯಸಭಾ ಚುನಾವಣೆ ಮತದಾನದಿಂದ ಹೊರಗುಳಿದ ನಾಲ್ವರು ಶಾಸಕರು; ಮಹಾಘಟಬಂಧನ್‌ಗೆ ಹಿನ್ನಡೆ

ಸೋಮವಾರ ಸಂಜೆ 4 ಗಂಟೆಗೆ ಮುಕ್ತಾಯಗೊಂಡ ರಾಜ್ಯಸಭಾ ಚುನಾವಣೆಯಲ್ಲಿ ನಾಲ್ವರು ಶಾಸಕರು ಮತದಾನದಿಂದ ಹೊರಗುಳಿಯುವ ಮೂಲಕ ಬಿಹಾರದ ಮಹಾಘಟಬಂಧನ್‌ಗೆ ಭಾರಿ ಹಿನ್ನಡೆಯಾಗಿದೆ. ಐದನೇ ಸ್ಥಾನಕ್ಕಾಗಿ ನಡೆಯುವ ಸ್ಪರ್ಧೆಯಲ್ಲಿ ವಿರೋಧ ಮೈತ್ರಿಕೂಟದ ನಿರೀಕ್ಷೆಗೆ ಭಾರಿ...

ರಾಜ್ಯಸಭೆಯಲ್ಲಿ LPG ಕೊರತೆ ಪ್ರಸ್ತಾಪಿಸಿದ ಮಲ್ಲಿಕಾರ್ಜುನ ಖರ್ಗೆ; ಪ್ರತಿಪಕ್ಷ ಅರಾಜಕತೆ ಸೃಷ್ಟಿಸಲು ಯತ್ನಿಸುತ್ತಿದೆ ಎಂದ ಸರ್ಕಾರ !

ನವದೆಹಲಿ: ರಾಜ್ಯಸಭೆಯಲ್ಲಿ ಸೋಮವಾರ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಎಲ್‌ಪಿಜಿ ಕೊರತೆಯ ವಿಷಯವನ್ನು ಪ್ರಸ್ತಾಪಿಸಿದರು ಮತ್ತು ಅಡುಗೆ ಅನಿಲದ ಬಿಕ್ಕಟ್ಟು ಮತ್ತು ಕಾಳಸಂತೆಕೋರತನವನ್ನು ತಡೆಯಲು ಸರ್ಕಾರ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಂಡಿಲ್ಲ ಎಂದು...

ಬೆಂಗಳೂರು| ಹಣ ನೀಡಲು ನಿರಾಕರಿಸಿದ ವ್ಯಕ್ತಿಯನ್ನು ಮಕ್ಕಳ ಮುಂದೆಯೇ ಥಳಿಸಿ ಕೊಂದ ಗುಂಪು

ಹಣ ನೀಡಲು ನಿರಾಕರಿಸಿದ ತಂದೆಯನ್ನು ಮಕ್ಕಳ ಮುಂದೆಯೇ ಗುಂಪೊಂದು ಥಳಿಸಿ ಕೊಂದಿರುವ ಘಟನೆ ಬೆಂಗಳೂರಿನ ವಿಲ್ಸನ್ ಗಾರ್ಡನ್‌ನಲ್ಲಿ ಭಾನುವಾರ ರಾತ್ರಿ ನಡೆದಿದೆ. ವಿಲ್ಸನ್ ಗಾರ್ಡನ್‌ನ ಬಡಾ ಮಕನ್ ರಸ್ತೆ ಬಳಿ ರಶೀದ್ ಪಾಷಾ ಎಂದು...

ಅಬಕಾರಿ ನೀತಿ ಪ್ರಕರಣದಲ್ಲಿ ಖುಲಾಸೆ ಪ್ರಶ್ನಿಸಿ ಸಿಬಿಐ ಅರ್ಜಿ; ಪ್ರತಿಕ್ರಿಯಿಸಲು ಕೇಜ್ರಿವಾಲ್-ಸಿಸೋಡಿಯಾಗೆ ಸಮಯ ನೀಡಿದ ದೆಹಲಿ ಹೈಕೋರ್ಟ್

ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್, ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಮತ್ತು ಇತರ 21 ಜನರ ತಮ್ಮ ಬಿಡುಗಡೆಯನ್ನು ಪ್ರಶ್ನಿಸಿ ಸಿಬಿಐ ಅರ್ಜಿಗೆ ಪ್ರತಿಕ್ರಿಯೆಗಳನ್ನು ಸಲ್ಲಿಸಲು ದೆಹಲಿ...

ಪ್ರಶ್ನೆಗಳಿಗೆ ಉತ್ತರಿಸದ ಸಚಿವರು: ಸದನ ಮುಂದೂಡಿದ ಸ್ಪೀಕರ್ ಯು.ಟಿ ಖಾದರ್

ಶಾಸಕರು ಕೇಳುವ ಪ್ರಶ್ನೆಗಳಿಗೆ ಉತ್ತರ ಒದಗಿಸದ ಸಚಿವರು ಮತ್ತು ಅಧಿಕಾರಿಗಳ ವಿರುದ್ದ ಸೋಮವಾರ (ಮಾ.16) ತೀವ್ರ ಅಸಮಾಧಾನ ವ್ಯಕ್ತಪಡಿಸಿದ ವಿಧಾನಸಭೆಯ ಸ್ಪೀಕರ್ ಯು.ಟಿ ಖಾದರ್, ಸದನವನ್ನು ಮುಂದೂಡಿಕೆ ಮಾಡಿ ಸರ್ಕಾರಕ್ಕೆ ಬಿಸಿ ಮುಟ್ಟಿಸಿದರು. ವಿಧಾನಸಭೆಯಲ್ಲಿ...

‘ಆಪರೇಷನ್ ಸಿಂಧೂರ್’ ಕುರಿತ ಪೋಸ್ಟ್: ಪ್ರೊಫೆಸರ್ ಅಲಿ ಖಾನ್ ಮಹ್ಮದಾಬಾದ್ ವಿರುದ್ಧದ ಪ್ರಕರಣಗಳನ್ನು ಕೈಬಿಟ್ಟ ಹರಿಯಾಣ ಸರ್ಕಾರ

'ಆಪರೇಷನ್ ಸಿಂಧೂರ್' ಕುರಿತು ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿದ್ದಕ್ಕಾಗಿ ಅಶೋಕ ವಿಶ್ವವಿದ್ಯಾಲಯದ ಪ್ರಾಧ್ಯಾಪಕ ಅಲಿ ಖಾನ್ ಮಹ್ಮದಾಬಾದ್ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಪ್ರಕರಣ ದಾಖಲಾಗಿತ್ತು. ಅವರ ವಿರುದ್ಧದ ಈ ಪ್ರಕರಣಗಳನ್ನು ಕೈಬಿಟ್ಟಿರುವುದಾಗಿ ಹರಿಯಾಣ...