HomeUncategorizedದಣಿವರಿಯದ ಹೋರಾಟಗಾರನಿಗೆ ಒಂದು ಸಲಾಮ್: ನ್ಯಾ. ಹೆಚ್.ಎನ್ ನಾಗಮೋಹನ್‌ದಾಸ್

ದಣಿವರಿಯದ ಹೋರಾಟಗಾರನಿಗೆ ಒಂದು ಸಲಾಮ್: ನ್ಯಾ. ಹೆಚ್.ಎನ್ ನಾಗಮೋಹನ್‌ದಾಸ್

- Advertisement -
- Advertisement -

ಶ್ರೀಯುತ ಹಾರೋಹಳ್ಳಿ ಶ್ರೀನಿವಾಸಯ್ಯ ದೊರೆಸ್ವಾಮಿಯವರು 1940ರಲ್ಲಿ ಬೆಂಗಳೂರಿನ ಪ್ರತಿಷ್ಠಿತ ಸೆಂಟ್ರಲ್ ಕಾಲೇಜಿನಿಂದ ಬಿಎಸ್‌ಸಿ ಪದವಿಯನ್ನು ಪಡೆದು ಶಿಕ್ಷಕರಾಗಿ ಕೆಲಸ ಮಾಡತೊಡಗಿದರು. ಗಾಂಧೀಜಿಯವರ My Early Life’ ಕೃತಿಯನ್ನು ಓದಿ ಪ್ರಭಾವಿತರಾಗಿ ಕೈಯಲ್ಲಿದ್ದ ಕೆಲಸವನ್ನು ಮತ್ತು ಕೈತುಂಬ ಬರುತ್ತಿದ್ದ ಸಂಬಳವನ್ನು ತೊರೆದು ಚಲೇಜಾವ್ ಚಳವಳಿಯಲ್ಲಿ ಧುಮುಕಿದರು. ನಂತರ ಸ್ವಾತಂತ್ರ್ಯ ಹೋರಾಟದ ಪೂರ್ಣಾವಧಿ ಕಾರ್ಯಕರ್ತರಾಗಿ ತೊಡಗಿಸಿಕೊಂಡರು.

ಶ್ರೀ ದೊರೆಸ್ವಾಮಿಯವರು ಮತ್ತು ನನ್ನ ತಂದೆ ಹೆಬ್ಬಣಿ ನಾಗಪ್ಪನವರು ಸ್ವಾತಂತ್ರ್ಯ ಚಳವಳಿಯಲ್ಲಿ ಭುಜಕ್ಕೆ ಭುಜ ಕೊಟ್ಟು ಹೋರಾಡಿದ ಸಂಗಾತಿಗಳು. ಅನೇಕ ಕಷ್ಟ ಕಾರ್ಪಣ್ಯಗಳನ್ನು ಮತ್ತು ಬೆಂಗಳೂರು ಸೆಂಟ್ರಲ್ ಜೈಲಿನಲ್ಲಿ ಒಟ್ಟಿಗೆ ಒಂದು ವರ್ಷಕಾಲ ಜೈಲುವಾಸ ಅನುಭವಿಸಿದವರು. ಇಂತಹ ಲಕ್ಷಾಂತರ ಸ್ವಾತಂತ್ರ್ಯ ಹೋರಾಟದ ಸೇನಾನಿಗಳ ತ್ಯಾಗ ಬಲಿದಾನಗಳಿಂದಲೇ ನಮಗೆ 1947 ಆಗಸ್ಟ್ 15ರಂದು ಸ್ವಾತಂತ್ರ್ಯ ಲಭಿಸಿತು ಎಂಬುದನ್ನು ಮತ್ತೆ ಮತ್ತೆ ನೆನೆಯಬೇಕಿದೆ.

ಅಂದು ಇಡೀ ದೇಶದ ಜನ ಸ್ವಾತಂತ್ರ್ಯ ಬಂದದ್ದನ್ನು ಸಂಭ್ರಮಿಸಿದರು. ಆದರೆ ಮಹಾತ್ಮಗಾಂಧಿಯವರು ಈ ಸಂಭ್ರಮದಲ್ಲಿ ಭಾಗವಹಿಸಲಿಲ್ಲ. ಯಾಕೆ ಭಾಗವಹಿಸಲಿಲ್ಲ ಎಂದು ಕೇಳಿದಾಗ ಗಾಂಧಿಯವರ ಉತ್ತರ ಹೀಗಿತ್ತು: “ನನ್ನ ಜೀವನದಲ್ಲಿ ನಾನು ಎರಡು ಕನಸುಗಳನ್ನು ಕಟ್ಟಿಕೊಂಡಿರುವೆ. ಒಂದು ಭಾರತ ದೇಶ ಬ್ರಿಟಿಷರ ಸಂಕೋಲೆಗಳಿಂದ ವಿಮೋಚನೆಯಾಗಬೇಕು. ಎರಡನೆಯದು ಭಾರತ ದೇಶದ ಜನರು ಹಸಿವಿನಿಂದ, ಬಡತನದಿಂದ ಮತ್ತು ಎಲ್ಲ ರೀತಿಯ ಅಸಮಾನತೆಯಿಂದ ಮತ್ತು ಅಸ್ಪೃಶ್ಯತೆಯಿಂದ ವಿಮೋಚನೆಯಾಗಬೇಕು. ಇಂದು ಭಾರತ ದೇಶ ಬ್ರಿಟಿಷರ ದಾಸ್ಯದಿಂದ ವಿಮೋಚನೆಯಾಗಿ ನನ್ನ ಮೊದಲೇ ಕನಸು ನನಸಾಗಿದೆ. ಆದರೆ ನನ್ನ ಎರಡನೆ ಕನಸು ನನಸಾಗದೆ ನಾನು ಹೇಗೆ ಸಂಭ್ರಮಿಸಲಿ”.

ಸ್ವಾತಂತ್ರ್ಯ ಬಂದನಂತರ ದೊರೆಸ್ವಾಮಿಯವರ ಸಂಗಾತಿಗಳು ಶಾಸಕರಾಗಿ, ಸಂಸದರಾಗಿ, ಮಂತ್ರಿಗಳಾಗಿ ಅಧಿಕಾರವನ್ನು ಪಡೆದರು. ಆದರೆ ದೊರೆಸ್ವಾಮಿಯವರು ಅಧಿಕಾರಕ್ಕೆ ಆಸೆ ಪಡಲಿಲ್ಲ, ಯಾವುದೇ ಪದವಿಗೆ ನೇಮಕಾತಿಯನ್ನು ಬಯಸಲಿಲ್ಲ, ಚುನಾವಣಾ ರಾಜಕಾರಣದಿಂದ ದೂರ ಉಳಿದರು. ಮಹಾತ್ಮ ಗಾಂಧೀಜಿಯವರ ಎರಡನೇ ಕನಸನ್ನು ನನಸು ಮಾಡುವ ಕಾಯಕದಲ್ಲಿ ತೊಡಗಿಸಿಕೊಂಡರು.
ಪತ್ರಕರ್ತರಾಗಿ ಜನಸಾಮಾನ್ಯರ ಜಾಗೃತಿಯನ್ನು ಹೆಚ್ಚಿಸುವ ಕೆಲಸ ಮಾಡಿದರು. ಪುಸ್ತಕ ಮಾರಾಟದಿಂದ ಬರುವ ಸ್ಪಲ್ಪ ಸಂಪಾದನೆಯಿಂದ ಸರಳ ಸಾಂಸಾರಿಕ ಬದುಕನ್ನು ನಡೆಸಿ ಸಮಾಜಕ್ಕೆ ಮಾದರಿಯಾದರು. ಸರ್ವೋದಯ ಚಳವಳಿಯ ಕಾರ್ಯಕರ್ತರಾಗಿ ಹಳ್ಳಿ ಸುತ್ತಿ ಬಡವರ ಸಮಸ್ಯೆಗಳಿಗೆ ಸ್ಪಂದಿಸಿದರು.

ನನ್ನ ಬಾಲ್ಯದಲ್ಲಿ ದೊರೆಸ್ವಾಮಿಯವರು ನಮ್ಮ ಹಳ್ಳಿ ಹೆಬ್ಬಣಿಗೆ ಬಂದು ಸರ್ವೋದಯ ದಿನಾಚರಣೆಯಲ್ಲಿ ಭಾಗವಹಿಸಿದ್ದು ನನಗೆ ನೆನಪಿದೆ. ಬಂದಾಗೆಲ್ಲ ಒಂದೆರಡು ದಿವಸ ನಮ್ಮ ಮನೆಯಲ್ಲಿ ಉಳಿದುಕೊಳ್ಳುತ್ತಿದ್ದರು. ದೊರೆಸ್ವಾಮಿ, ನನ್ನ ತಂದೆ ಮತ್ತು ಇತರರು ಗಂಟೆಗಟ್ಟಲೆ ಹಲವಾರು ವಿಚಾರಗಳ ಬಗ್ಗೆ ಮಾತನಾಡಿಕೊಳ್ಳುತ್ತಿದ್ದರು. ಕಡೆಯವರೆಗೂ ದೊರೆಸ್ವಾಮಿಯವರು ನಮ್ಮ ಕುಟುಂಬದ ಎಲ್ಲರಿಗೂ ಅತ್ಮೀಯರಾಗಿದ್ದರು.

ನಾನು ಬೆಂಗಳೂರಿನಲ್ಲಿ 1977ರಲ್ಲಿ ವಕೀಲ ವೃತ್ತಿಯನ್ನು ಪ್ರಾರಂಭಿಸಿದೆ. ಕಳೆದ ನಾಲ್ಕು ದಶಕಗಳ ಕಾಲ ದೊರೆಸ್ವಾಮಿಯವರ ಜೊತೆ ಅನೇಕ ಸಭೆ, ಸಮಾರಂಭ, ವಿಚಾರಸಂಕೀರ್ಣ, ಚರ್ಚೆ, ಸಂವಾದದ ಕಾರ್ಯಕ್ರಮಗಳಲ್ಲಿ ಭಾಗವಹಿಸುವ ಅವಕಾಶ ನನಗೆ ಲಭ್ಯವಾಗಿತ್ತು. ಅನೇಕ ಹೋರಾಟ, ಪ್ರತಿಭಟನೆ ಮತ್ತು ಧರಣಿಗಳಲ್ಲಿ ದೊರೆಸ್ವಾಮಿಯವರ ಜೊತೆ ಭಾಗವಹಿಸುವ ಭಾಗ್ಯ ನನಗೆ ದಕ್ಕಿತ್ತು. ಪ್ರತಿ ಸಂದರ್ಭದಲ್ಲೂ ಸಿಂಹದಂತೆ ಘರ್ಜಿಸುತ್ತಿದ್ದರು. ಭ್ರಷ್ಟರ, ಭೂಗಳ್ಳರ, ಕೋಮುವಾದಿಗಳ ವಿರುದ್ಧ ಸಿಡಿದೆದ್ದರು. ಯಾವುದೇ ಜನಸಮುದಾಯಕ್ಕೆ ಅನ್ಯಾಯವಾಗಿದೆಯಂದರೆ ಅಲ್ಲಿ ದೊರೆಸ್ವಾಮಿಯವರು ಪ್ರತ್ಯಕ್ಷವಾಗುತ್ತಿದ್ದರು. ತಮ್ಮ 104 ಪ್ರಾಯದಲ್ಲಿಯೂ ದಿನನಿತ್ಯ ನಡೆಯುತ್ತಿರುವ ಜನಪರ ಹೋರಾಟಗಳಲ್ಲಿ ಭಾಗವಹಿಸುತ್ತಿದ್ದರು. ಸೆಪ್ಟೆಂಬರ್ 2020ರಂದು ನಡೆದ ರೈತ, ದಲಿತ, ಕಾರ್ಮಿಕರ ಪ್ರತಿಭಟನಾ ಸಭೆಯಲ್ಲಿ ನಾನು ಮತ್ತು ದೊರೆಸ್ವಾಮಿಯವರು ಒಟ್ಟಿಗೆ ಭಾಗವಹಿಸಿದ್ದೆವು. ಅದು ನಾವಿಬ್ಬರೂ ಒಟ್ಟಿಗೆ ಭಾಗವಹಿಸಿದ್ದ ಕೊನೆಯ ಸಭೆ. ಅಂದು ಸಹ ದೊರೆಸ್ವಾಮಿಯವರು ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ತಂದ ಕೃಷಿ ಕಾಯ್ದೆಗಳನ್ನು ಕ್ರಮವಾಗಿ ಟೀಕಿಸಿ, ಕಾಯ್ದೆಗಳನ್ನು ಹಿಂದಕ್ಕೆ ಪಡೆಯಬೇಕೆಂದು ಅಗ್ರಹಿಸಿದರು.

2011ರಲ್ಲಿ ನನ್ನ ಮಗಳ ಮದುವೆ ನಿಶ್ಚಯವಾಯಿತು. ನನ್ನ ತಂದೆ ಬಹಳ ವರ್ಷಗಳ ಹಿಂದೆ ತೀರಿಕೊಂಡಿದ್ದರು. ತಂದೆಗೆ ಸಮಾನರಾದಂತಹ ದೊರೆಸ್ವಾಮಿಯವರ ಮನೆಗೆ ಹೋಗಿ ಒಂದು ಜೊತೆ ಖಾದಿ ಬಟ್ಟೆ ಕೊಟ್ಟು ಮದುವೆಗೆ ಬರಬೇಕೆಂದು ವಿನಂತಿಸಿಕೊಂಡೆವು. ನಮ್ಮ ಆಹ್ವಾನವನ್ನು ಮನ್ನಿಸಿ ಸಂತೋಷದಿಂದ ಮದುವೆಗೆ ಬಂದು ನೂತನ ದಂಪತಿಗಳನ್ನು ಆಶೀರ್ವದಿಸಿ ನನ್ನ ಇಡೀ ಕುಟುಂಬವನ್ನು ಸಂತೋಷಪಡಿಸಿದ್ದನ್ನು ಹೇಗೆ ಮರೆಯಲಿ.

ಕೇಂದ್ರ ಸರ್ಕಾರ ಮಹಾತ್ಮ ಗಾಂಧೀಜಿಯವರ ನೆನಪಿನಲ್ಲಿ ಒಂದು ಅಂತಾರಾಷ್ಟ್ರೀಯ ಪ್ರಶಸ್ತಿಯನ್ನು ಸ್ಥಾಪಿಸಿದೆ. ಅದೇ ರೀತಿಯಲ್ಲಿ ಕರ್ನಾಟಕ ರಾಜ್ಯ ಸರ್ಕಾರ ’ಮಹಾತ್ಮಗಾಂಧಿ ಶಾಂತಿ ಪ್ರಶಸ್ತಿ’ಯನ್ನು ಸ್ಥಾಪಿಸಿದೆ. ದೇಶದ ಬೇರೆ ಯಾವ ರಾಜ್ಯದಲ್ಲೂ ಇಂತಹ ಪ್ರಶಸ್ತಿ ಸ್ಥಾಪನೆಯಾಗಿಲ್ಲ. 2017ನೇ ಸಾಲಿನ ಪ್ರಶಸ್ತಿ ಆಯ್ಕೆ ಸಮಿತಿಯ ಅಧ್ಯಕ್ಷನಾಗಿ ಕಾರ್ಯನಿರ್ವಹಿಸುವ ಅವಕಾಶ ನನಗೆ ಲಭಿಸಿತು. ಆಯ್ಕೆ ಸಮಿತಿ ಸರ್ವಾನುಮತದಿಂದ ದೊರೆಸ್ವಾಮಿಯವರನ್ನು ಪ್ರಶಸ್ತಿಗೆ ಆಯ್ಕೆ ಮಾಡಿತು. ಪ್ರಶಸ್ತಿ ಪ್ರಧಾನ ಸಮಾರಂಭದಲ್ಲಿ ಅಂದಿನ ಮುಖ್ಯಮಂತ್ರಿಗಳಾದ ಸನ್ಮಾನ್ಯ ಸಿದ್ದರಾಮಯ್ಯನವರು ಮಾತನಾಡುತ್ತ ಈ ರೀತಿ ಹೇಳಿದರು: ’ಶ್ರೀ ದೊರೆಸ್ವಾಮಿಯವರು ನನ್ನನ್ನು ಮತ್ತು ನಮ್ಮ ಸರ್ಕಾರವನ್ನು ಅನೇಕ ಬಾರಿ ಟೀಕಿಸಿ ಸಂದಿಗ್ಧ ಪರಿಸ್ಥಿತಿಗೆ ತಳ್ಳಿದರು. ಅದರೂ ಹಿರಿಯರಾದ ದೊರೆಸ್ವಾಮಿಯವರ ಟೀಕೆಗಳನ್ನು ಬದ್ಧವಾದವುವೆಂದೇ ಸ್ವೀಕಾರ ಮಾಡಿದೆವು. ಪ್ರಶಸ್ತಿಗೆ ದೊರೆಸ್ವಾಮಿಯವರ ಆಯ್ಕೆ ಸರ್ವಸಮ್ಮತವಾಗಿದೆ”. ಈ ರೀತಿ ದೊರೆಸ್ವಾಮಿಯವರು ಅಜಾತಶತ್ರುವಾಗಿ ಜೀವಿಸಿದವರು.

ತುಂಬು ಜೀವನವನ್ನು ಆರ್ಥಪೂರ್ಣವಾಗಿ ಕಳೆದ ದೊರೆಸ್ವಾಮಿಯವರು ಒಬ್ಬ ವ್ಯಕ್ತಿಯಾಗಿ ಉಳಿಯದೆ ಒಂದು ಶಕ್ತಿಯಾಗಿ, ಒಂದು ಸಂಸ್ಥೆಯಾಗಿ ಮತ್ತು ಒಂದು ಚಳವಳಿಯಾಗಿ ರೂಪುಗೊಂಡರು. ನುಡಿದಂತೆ ನಡೆದರು, ನಡೆದಂತೆ ಬಾಳಿದರು, ಬಾಳಿದಂತೆ ಬರೆದರು. ಇಂದಿನ-ಮುಂದಿನ ಯುವ ಪೀಳಿಗೆಗೆ ದೊರೆಸ್ವಾಮಿಯವರು ಸ್ಪೂರ್ತಿಯ ಚಿಲುಮೆಯಾಗಲೆಂದು ಆಶಿಸೋಣ.

ದೊರೆಸ್ವಾಮಿಯವರ ನಿಧನದಿಂದ ಭಾರತ ದೇಶ ಪ್ರಜಾಪ್ರಭುತ್ವ, ಜಾತ್ಯತೀತ ಮತ್ತು ಸಾಮಾಜಿಕ
ನ್ಯಾಯ ಚಳವಳಿಯ ವೀರ ಯೋಧನನ್ನು ಕಳೆದುಕೊಂಡಿದೆ. ಅವರು ನಡೆದುಹೋದ
ದಾರಿಯಲ್ಲಿ ನಾವೂ ಒಂದಷ್ಟು ದೂರ ನಡೆದು ನಮ್ಮ ಜೀವನವನ್ನು ಸಾರ್ಥಕಗೊಳಿಸಿಕೊಳ್ಳೋಣ.

“ನೀವು ಬಿದ್ದ ಮರವಲ್ಲ; ಬಿತ್ತಿದ ಬೀಜಗಳು. ನಿಮ್ಮಿಂದ ಸಾವಿರ ಹೂಗಳು ಅರಳಲಿ”

ನ್ಯಾಯಮೂರ್ತಿ ಹೆಚ್.ಎನ್ ನಾಗಮೋಹನ್‌ದಾಸ್
ಕರ್ನಾಟಕ ಉಚ್ಚ ನ್ಯಾಯಾಲಯದ ನಿವೃತ್ತ ನ್ಯಾಯಮೂರ್ತಿಗಳು, ಕರ್ನಾಟಕದಾದ್ಯಂತ ‘ಸಂವಿಧಾನ ಓದು’ ಕಾರ್ಯಕ್ರಮಗಳನ್ನು ಮುನ್ನಡೆಸಿದವರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಾರ್ವತ್ರಿಕ ಮುಷ್ಕರ | ಕೆಲ ರಾಜ್ಯಗಳಲ್ಲಿ ಸಾಮಾನ್ಯ ಜನಜೀವನ ಅಸ್ತವ್ಯಸ್ತ; ಬ್ಯಾಂಕಿಂಗ್, ಸಾರಿಗೆ ವ್ಯವಸ್ಥೆಯಲ್ಲಿ ವ್ಯತ್ಯಯ

ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ 'ಕಾರ್ಮಿಕ, ರೈತ ವಿರೋಧಿ ಹಾಗೂ ಕಾರ್ಪೊರೇಟ್ ಪರ ನೀತಿಗಳ' ವಿರುದ್ಧ ಕಾರ್ಮಿಕ ಸಂಘಟನೆಗಳು ಗುರುವಾರ (ಫೆ.12) ಕರೆ ನೀಡಿದ್ದ ರಾಷ್ಟ್ರವ್ಯಾಪಿ ಮುಷ್ಕರದಿಂದ ವಿವಿಧ ರಾಜ್ಯಗಳಲ್ಲಿ ಜನ ಜೀವನ...

ಅದಾನಿ ಮಾನನಷ್ಟ ಪ್ರಕರಣದಲ್ಲಿ ಪತ್ರಕರ್ತ ರವಿ ನಾಯರ್‌ಗೆ ಶಿಕ್ಷೆ: ‘ಇದು ಪತ್ರಿಕಾ ಸ್ವಾತಂತ್ರ್ಯಕ್ಕೆ ಹೊಡೆತ’ ಎಂದ ಪತ್ರಕರ್ತರ ಸಂಘಟನೆಗಳು

ಅದಾನಿ ಎಂಟರ್‌ಪ್ರೈಸಸ್ ದಾಖಲಿಸಿದ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯಲ್ಲಿ ತನಿಖಾ ಪತ್ರಕರ್ತ ರವಿ ನಾಯರ್ ಅವರಿಗೆ ಒಂದು ವರ್ಷ ಜೈಲು ಶಿಕ್ಷೆ ವಿಧಿಸಿರುವುದನ್ನು ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಮತ್ತು ಹಲವಾರು ಪತ್ರಿಕಾ ಸಂಸ್ಥೆಗಳು...

‘ನಾವು ಯಾರನ್ನೂ ನಿಂದಿಸಿಲ್ಲ’: ಚೇಂಬರ್ ‘ದುರ್ವರ್ತನೆ’ ಆರೋಪಕ್ಕೆ ಪ್ರಿಯಾಂಕಾ ಗಾಂಧಿ ಸ್ಪಷ್ಟನೆ 

ನವದೆಹಲಿ: ಸ್ಪೀಕರ್ ಓಂ ಬಿರ್ಲಾ ಅವರ ಕೊಠಡಿಯಲ್ಲಿ ತಮ್ಮ ಪಕ್ಷದ ಸಂಸದರು "ಅನುಚಿತವಾಗಿ ವರ್ತಿಸಿದ್ದಾರೆ" ಎಂದು ಆರೋಪಿಸಿದಾಗ, ಅವರನ್ನು ಬೆಂಬಲಿಸಿದ್ದೇನೆ ಎಂದು ಹೇಳಿದ ಸಂಸದೆ ಪ್ರಿಯಾಂಕಾ ಗಾಂಧಿ ವಾದ್ರಾ ಅವರು ಸಂಸದೀಯ ವ್ಯವಹಾರಗಳ...

‘ಭಾರತಕ್ಕೆ ಮರಳಲು ಇದು ಕೊನೆಯ ಅವಕಾಶ’: ವಿಜಯ್ ಮಲ್ಯಗೆ ಬಾಂಬೆ ಹೈಕೋರ್ಟ್‌ ಎಚ್ಚರಿಕೆ

ಭಾರತದ ಹೊರಗೆ ಇರುವ ಉದ್ಯಮಿ ವಿಜಯ್ ಮಲ್ಯ ನ್ಯಾಯಾಲಯದ ಪ್ರಕ್ರಿಯೆಗಳಿಂದ ಉದ್ದೇಶಪೂರ್ವಕವಾಗಿ ತಪ್ಪಿಸಿಕೊಳ್ಳುತ್ತಿದ್ದಾರೆ ಎಂದು ಗಂಭೀರವಾಗಿ ಪರಿಗಣಿಸಿರುವ ಬಾಂಬೆ ಹೈಕೋರ್ಟ್, ಅವರಿಗೆ ಭಾರತಕ್ಕೆ ಮರಳಲು “ಒಂದು ಕೊನೆಯ ಅವಕಾಶ” ನೀಡಿದೆ. ಒಂದು ವೇಳೆ...

ಕೆಲಸದ ಸ್ಥಳದಲ್ಲಿ ಜಾತಿ ತಾರತಮ್ಯದ ಬಗ್ಗೆ ರಾಜ್ಯಸಭೆಯಲ್ಲಿ ಖರ್ಗೆ ಕಳವಳ; ಒಡಿಶಾ ಅಂಗನವಾಡಿ ಘಟನೆ ಉಲ್ಲೇಖ

ಕೆಲಸದ ಸ್ಥಳಗಳಲ್ಲಿ ಆಗುತ್ತಿರುವ ಜಾತಿ ತಾರತಮ್ಯದ ಕುರಿತು ರಾಜ್ಯಸಭೆಯಲ್ಲಿ ಗುರುವಾರ (ಫೆ.12) ವಿಪಕ್ಷ ನಾಯಕ ಹಾಗೂ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕಳವಳ ವ್ಯಕ್ತಪಡಿಸಿದರು. ಒಡಿಶಾದ ಅಂಗನವಾಡಿಯೊಂದರಲ್ಲಿ ದಲಿತ ಮಹಿಳೆ ತಯಾರಿಸಿದ ಆಹಾರವನ್ನು...

ಕರ್ನಾಟಕ ಬಿಜೆಪಿ ಶಾಸಕ ಬೈರತಿ ಬಸವರಾಜ್‌ಗೆ ನಿರೀಕ್ಷಣಾ ಜಾಮೀನು ನಿರಾಕರಿಸಿದ ಸುಪ್ರೀಂ ಕೋರ್ಟ್

ಬಿಕ್ಲು ಶಿವ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ನಾಟಕ ಬಿಜೆಪಿ ಶಾಸಕ ಬೈರತಿ ಬಸವರಾಜ್ ಅವರ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಸುಪ್ರೀಂ ಕೋರ್ಟ್ ಗುರುವಾರ ತಿರಸ್ಕರಿಸಿದೆ. ಭಾರತದ ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್ ಮತ್ತು ನ್ಯಾಯಮೂರ್ತಿ...

‘ಆಕೆಯ ಜೀವ ಮುಖ್ಯ’: ಅಮೆರಿಕದ ಪೊಲೀಸ್ ಅಧಿಕಾರಿ ವೇಗದ ಚಾಲನೆಯಿಂದ ಸಾವನ್ನಪ್ಪಿದ ಭಾರತೀಯ ವಿದ್ಯಾರ್ಥಿನಿಯ ಕುಟುಂಬಕ್ಕೆ 260 ಕೋಟಿ ಪರಿಹಾರ

2023 ರಲ್ಲಿ ರಸ್ತೆ ದಾಟುತ್ತಿದ್ದಾಗ ವೇಗವಾಗಿ ಚಾಲನೆ ಮಾಡುತ್ತಿದ್ದ ಪೊಲೀಸ್ ಅಧಿಕಾರಿಯೊಬ್ಬರು ಡಿಕ್ಕಿ ಹೊಡೆದ ಕಾರಣ ಸಾವನ್ನಪ್ಪಿದ ಭಾರತದ 23 ವರ್ಷದ ಪದವೀಧರ ವಿದ್ಯಾರ್ಥಿನಿ ಜಾಹ್ನವಿ ಕಂದುಲಾ ಅವರ ಕುಟುಂಬಕ್ಕೆ ಸಿಯಾಟಲ್ ನಗರವು...

ರಾಹುಲ್ ಗಾಂಧಿ ವಿರುದ್ಧ ಬಿಜೆಪಿಯಿಂದ ನಿಲುವಳಿ ಸೂಚನೆ ಸಲ್ಲಿಕೆ; ಸಂಸತ್ ಸದಸ್ಯತ್ವ ರದ್ದುಗೊಳಿಸುವಂತೆ ಆಗ್ರಹ

ಲೋಕಸಭೆ ಅಧಿವೇಶನದಲ್ಲಿ ಗುರುವಾರ (ಫೆ.12) ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ಬಿಜೆಪಿ ನಿಲುವಳಿ ಸೂಚನೆ ಸಲ್ಲಿಸಿದ್ದು, ಅವರ ಸಂಸತ್ತಿನ ಸದಸ್ಯತ್ವ ರದ್ದುಗೊಳಿಸುವಂತೆ ಕೋರಿದೆ. ಈ ಕುರಿತು ಪ್ರತಿಕ್ರಿಯಿಸಿದ ಬಿಜೆಪಿ ಸಂಸದ ನಿಶಿಕಾಂತ್...

ಕಾನ್ಪುರ ಲ್ಯಾಂಬೋರ್ಗಿನಿ ಅಪಘಾತ: ತಂಬಾಕು ಉದ್ಯಮಿ ಕೆ.ಕೆ. ಮಿಶ್ರಾ ಪುತ್ರ ಶಿವಂ ಮಿಶ್ರಾ ಬಂಧನ

2026 ಫೆಬ್ರವರಿ 8, ಭಾನುವಾರದಂದು ವಿಐಪಿ ರಸ್ತೆಯಲ್ಲಿ ಹಲವಾರು ಜನರು ಗಾಯಗೊಂಡಿದ್ದ ಹೈ ಪ್ರೊಫೈಲ್ ಲ್ಯಾಂಬೋರ್ಗಿನಿ ಅಪಘಾತಕ್ಕೆ ಸಂಬಂಧಿಸಿದಂತೆ ಸ್ಥಳೀಯ ತಂಬಾಕು ಉದ್ಯಮಿ ಕೆ.ಕೆ. ಮಿಶ್ರಾ ಅವರ ಪುತ್ರ ಶಿವಂ ಮಿಶ್ರಾ ಅವರನ್ನು...

ಫೆಬ್ರವರಿ 12 ರಂದು ಭಾರತ್ ಬಂದ್| ಹಲವು ರಾಜ್ಯಗಳಲ್ಲಿ ಬಂದ್ ಗೆ ಪೂರ್ಣ ಬೆಂಬಲ: ಕರ್ನಾಟಕದಲ್ಲಿ ಮಿಶ್ರ ಪ್ರತಿಕ್ರಿಯೆ

ಕೇಂದ್ರ ಸರ್ಕಾರದ ನೀತಿಗಳನ್ನು ವಿರೋಧಿಸಿ ಫೆಬ್ರವರಿ 12, ಗುರುವಾರ ಸಾರ್ವತ್ರಿಕ ಮುಷ್ಕರಕ್ಕೆ ಕೇಂದ್ರ ಕಾರ್ಮಿಕ ಸಂಘಗಳ ಜಂಟಿ ವೇದಿಕೆ ಕರೆ ನೀಡಿದೆ. ಕರ್ನಾಟಕದಲ್ಲಿಯೂ ಕಾರ್ಮಿಕ ಸಂಘಟನೆಗಳು ಮುಷ್ಕರವನ್ನು ನಡೆಸುತ್ತಿವೆ. ಕೇಂದ್ರ ಸರ್ಕಾರದ 4...