Homeಕರೋನಾ ತಲ್ಲಣಲಸಿಕೆ ಕುರಿತು ಕೇಂದ್ರಕ್ಕೆ ಸುಪ್ರೀಂಕೋರ್ಟ್ ಪ್ರಶ್ನೆಗಳು: ಕಟಕಟೆಯಲ್ಲಿ ಮೋದಿ ಸರ್ಕಾರ!

ಲಸಿಕೆ ಕುರಿತು ಕೇಂದ್ರಕ್ಕೆ ಸುಪ್ರೀಂಕೋರ್ಟ್ ಪ್ರಶ್ನೆಗಳು: ಕಟಕಟೆಯಲ್ಲಿ ಮೋದಿ ಸರ್ಕಾರ!

- Advertisement -
- Advertisement -

ಕೃಪೆ: ದಿ ವೈರ್ – ಎಂ.ಕೆ. ವೇಣು

18-44 ವಯಸ್ಸಿನವರಿಗೆ ಒಕ್ಕೂಟ ಸರ್ಕಾರ ರೂಪಿಸಿರುವ ಲಸಿಕಾ ನೀತಿಯ ಬಗ್ಗೆ  ಸುಪ್ರೀಂ ಕೋರ್ಟ್ ಕಠಿಣ ಪ್ರಶ್ನೆಗಳನ್ನು ಶುಕ್ರವಾರ ಕೇಳಿದೆ. ನಾಗರಿಕರು ತಿಂಗಳುಗಳಿಂದ ಕೇಳುತ್ತಿರುವ ಪ್ರಮುಖ ಪ್ರಶ್ನೆಗಳಿಗೆ ಒಕ್ಕೂಟ ಸರ್ಕಾರ ಉತ್ತರಿಸುವಂತೆ ಸುಪ್ರೀಂ ಕೋರ್ಟ್ ಸೂಚಿಸಿದೆ.

ಇಲ್ಲಿ ಒಂದು ಮುಖ್ಯ ಪ್ರಶ್ನೆಯನ್ನು ನ್ಯಾಯಮೂರ್ತಿ ಚಂದ್ರಚೂಡ್‍ ಕೇಳಿದ್ದಾರೆ. ಈ ಹಿಂದೆ ನಡೆದ ಎಲ್ಲಾ ಲಸಿಕೆ ಖರೀದಿ ಮಾತುಕತೆಗಳ ಎಲ್ಲ ವಿವರಗಳನ್ನು ಕೋರ್ಟ್ ಮುಂದೆ ಇಡುವಂತೆ ಚಂದ್ರಚೂಡ್ ಕೇಂದ್ರಕ್ಕೆ ನಿರ್ದೇಶನ ನೀಡಿದ್ದಾರೆ. ಜುಲೈ 2020 ರಿಂದ ಅಮೆರಿಕದ ಔಷಧಿ ಕಂಪನಿಗಳೊಂದಿಗೆ ಮಾತುಕತೆ ನಡೆಸುತ್ತಿದ್ದೇವೆ ಎಂದು ಕೇಂದ್ರ ಸರ್ಕಾರ ಇತ್ತೀಚೆಗೆ ಹೇಳಿಕೊಂಡಿದೆ. ಹಾಗಿದ್ದಲ್ಲಿ, ಒಂಬತ್ತು ತಿಂಗಳಲ್ಲಿ ಯಾವ ಪ್ರಗತಿಯನ್ನು ಸಾಧಿಸಲಾಗಿದೆ ಎಂಬುದು ಒಂದು ಪ್ರಮುಖ ಪ್ರಶ್ನೆಯಾಗಿದೆ.

ಆಮದಿಗಿಂತ ಹೆಚ್ಚು ನಿರ್ಣಾಯಕವಾದುದು, 2020 ರ ನವೆಂಬರ್‌ನಿಂದ ಪ್ರಧಾನ ಮಂತ್ರಿ ದೇಶೀಯ ಉತ್ಪಾದಕರಾದ ಸೀರಮ್ ಇನ್‌ಸ್ಟಿಟ್ಯೂಟ್ ಆಫ್ ಇಂಡಿಯಾ ಮತ್ತು ಭಾರತ್ ಬಯೋಟೆಕ್ ಜೊತೆ ನಡೆಸಿದ ಮಾತುಕತೆಗಳ ವಿವರಗಳು ಬಹಿರಂಗ ಆಗಬೇಕಿದೆ. ಕಳೆದ ವರುಷದಿಂದ ಇದು ನಡೆದೇ ಇದೆ. ದೇಶೀಯ ಉತ್ಪಾದಕರಿಂದ ಯಾವುದೇ ಪೂರ್ವ-ಆದೇಶವಿಲ್ಲದೆ ಪೂರೈಕೆಯ ಸ್ಪಷ್ಟ ಭರವಸೆ ಇಲ್ಲದೇ ಅಥವಾ ವಿಸ್ತರಣೆಗೆ ಅವರಿಗೆ ಬಂಡವಾಳದ ಬೆಂಬಲವಿಲ್ಲದೆ ಐದು ತಿಂಗಳುಗಳು  ನವೆಂಬರ್‌ನಿಂದ ಮಾರ್ಚಿವರೆಗೆ ಹೇಗೆ ಕಳೆದುಹೋಗಿವೆ ಎಂಬುದರ ಕುರಿತು ಸುಪ್ರೀಂ ಕೋರ್ಟ್ ವಿವರವಾದ ವಿಚಾರಣೆ ನಡೆಸಬೇಕು. ವಾಸ್ತವವಾಗಿ, ಸುಪ್ರೀಂಕೋರ್ಟ್ ಈ ಲೆಕ್ಕ ಪಡೆಯಲು ಎಸ್‍ಐಐ ಮತ್ತು ಭಾರತ್ ಬಯೋಟೆಕ್‌ನಿಂದ ನಿರ್ದಿಷ್ಟ ವಿವರಗಳನ್ನು ಪಡೆಯಬೇಕು, ಕಳೆದ ಡಿಸೆಂಬರ್‌ನಿಂದ ಅವುಗಳ ಮತ್ತು ಪಿಎಂಒ ನಡುವೆ ನಡೆದ ಸಂವಹನಗಳ ಎಲ್ಲ ವಿವರವನ್ನೂ ಪಡೆಯಬೇಕು.

ಲಸಿಕೆಯ ತೀವ್ರ ಕೊರತೆ ಸದ್ಯದಲ್ಲಿಯೇ ಎದುರಾಗುವ ಸಾಧ್ಯತೆ ಇರುವುದರಿಂದ ಸುಪ್ರೀಂಕೋರ್ಟ್ ಅಂತಹ ವಿವರಗಳನ್ನು ಕೇಳುವುದು ಉತ್ತಮವಾಗಿದೆ. ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿಯ ಮಹಾ ನಿರ್ದೇಶಕ ಬಲರಾಮ್‍ ಭಾರ್ಗವ ಅವರು ಅಧಿಕೃತವಾಗಿ, ದಿನಕ್ಕೆ 10 ಮಿಲಿಯನ್ ಡೋಸ್‍ಗಳ ಪೂರೈಕೆ ಜುಲೈ ಅಂತ್ಯದ ವೇಳೆಗೆ ಅಥವಾ ಆಗಸ್ಟ್ ಆರಂಭದಲ್ಲಿ ಮಾತ್ರ ಕಾರ್ಯಸಾಧ್ಯವಾಗಲಿದೆ ಎಂದು ಹೇಳಿದ್ದಾರೆ. ಈ ಗುರಿಯನ್ನು ಸಹ ತಲುಪಬಹುದೇ ಎಂದು ಅನೇಕ ತಜ್ಞರು ಪ್ರಶ್ನಿಸಿದ್ದಾರೆ. ಕಳೆದ ಡಿಸೆಂಬರ್‌ನಲ್ಲಿ ಎಸ್‌ಐಐ ಮತ್ತು ಭಾರತ್ ಬಯೋಟೆಕ್ ಒಟ್ಟಾಗಿ 300 ಮಿಲಿಯನ್ ಲಸಿಕೆಗಳಿಗೆ  ಅಡ್ವಾನ್ಸ್ ಆರ್ಡರ್‌ಗೆ ಒಪ್ಪಿಕೊಂಡಿದ್ದು, ಅದರಂತೆ ಉತ್ಪಾದನೆ ಮಾಡಿದ್ದರೆ, ಆಗಸ್ಟ್ ವೇಳೆಗೆ ಭಾರತವು ಸಂಪೂರ್ಣ ಲಸಿಕೆ ಹಾಕಬಹುದಿತ್ತು. ಆದರೆ ಈಗಿನ ಪರಿಸ್ಥಿತಿ ನಿರಾಶಾದಾಯಕವಾಗಿದೆ.

ಇದು ಪ್ರಧಾನಿ ನರೇಂದ್ರ ಮೋದಿಯವರ ದೊಡ್ಡ ವೈಫಲ್ಯ. ನವೆಂಬರ್‌ನಿಂದ ಮಾರ್ಚಿವರೆಗೆ ಕೇಂದ್ರ ಮತ್ತು ದೇಶೀಯ ಲಸಿಕೆ ಕಂಪನಿಗಳ ನಡುವೆ ರಾಜ್ಯಗಳಿಗೆ ಯಾವುದೇ ಸಂಬಂಧವಿಲ್ಲ ಎಂಬಂತೆ ನೀತಿ ಅಳವಡಿಸಲಾಗಿತ್ತು. 18-44 ವಯಸ್ಸಿನವರಿಗೆ ಲಸಿಕೆ ಒದಗಿಸಲು ಕೇಂದ್ರವು ಒಪ್ಪಿದ ನಂತರವಷ್ಟೇ ಮೇ 1 ರಂದು ರಾಜ್ಯ ಸರ್ಕಾರಗಳ ಮೇಲೆ ಜವಾಬ್ದಾರಿ ಹಾಕಿ ಕೇಂದ್ರ ನುಣುಚಿಕೊಳ್ಳುವ ಯತ್ನ ಮಾಡುತ್ತಿದೆ.

ಮುಂಚೂಣಿ ಆರೋಗ್ಯ ಕಾರ್ಯಕರ್ತರು ಮತ್ತು ಇತರ ದುರ್ಬಲ ಗುಂಪುಗಳು ಸೇರಿದಂತೆ 45ಕ್ಕಿಂತ ಹೆಚ್ಚು ವಯಸ್ಸಿನವರಿಗೆ ಸರ್ಕಾರವು ಉಚಿತ ಲಸಿಕೆಗಳನ್ನು ನೀಡಲು ಸಾಧ್ಯವಾದರೆ, ಅದೇ ನಿಯಮಗಳನ್ನು 18-44 ವಯಸ್ಸಿನವರಿಗೆ ಏಕೆ ವಿಸ್ತರಿಸಲಾಗಿಲ್ಲ? ಎಂದು ಸುಪ್ರೀಂಕೋರ್ಟ್ ಸರಿಯಾಗಿ ಮತ್ತು ಕಠಿಣವಾಗಿ ಪ್ರಶ್ನಿಸಿದೆ.

ದೇಶೀಯ ಲಸಿಕೆಗಳನ್ನು ಖರೀದಿಸಲು ರಾಜ್ಯಗಳೇಕೆ ಹೆಚ್ಚಿನ ದರ  ಪಾವತಿಸಬೇಕು? ಎಂದು ನ್ಯಾಯಾಲಯವು ಕೇಳಿದೆ. ಆದರೆ ಮೊದಲ ಸುತ್ತಿನಲ್ಲಿ ಅದೇ ಲಸಿಕೆಗಳನ್ನು ಹೆಚ್ಚು ಅಗ್ಗವಾಗಿ ಕೇಂದ್ರ ಖರೀದಿಸಿದೆ. ಇದು ಸರಿ. ಆದರೆ ರಾಜ್ಯಗಳು ಮತ್ತು ಖಾಸಗಿ ಆಸ್ಪತ್ರೆಗಳಿಗೆ ಕೋಟಾಗಳನ್ನು ಹಂಚುವ ಆಧಾರವೇನು? ಬೆಲೆಯಲ್ಲಿ ತಾರತಮ್ಯವೇಕೆ ಈ ಎಲ್ಲ ಪ್ರಶ್ನೆಗಳಿಗೂ  ನ್ಯಾಯಾಲಯ ಕೇಂದ್ರದಿಂದ ವಿವರ ಕೇಳಿದೆ.  ಮುಂದಿನ ವಾರಗಳು ಮತ್ತು ತಿಂಗಳುಗಳಲ್ಲಿ ಲಸಿಕಾ ಅಭಿಯಾನದ ನಿಖರವಾದ ಚಿತ್ರಣವನ್ನು ಪ್ರಸ್ತುತಪಡಿಸಲು ನ್ಯಾಯಾಲಯ ಕೇಂದ್ರವನ್ನು ಕೇಳಿದೆ ಮತ್ತು ಈ ಉದ್ದೇಶಕ್ಕಾಗಿ 35,000 ಕೋಟಿ ರೂ.ಗಳನ್ನು ಹೇಗೆ ವ್ಯಯ ಮಾಡಿದೆ ಮತ್ತು ಮಾಡಲಿದೆ ಎಂದು ಪ್ರಶ್ನೆ ಮಾಡಿರುವ ನ್ಯಾಯಾಲಯ ಈ ಪ್ರಕ್ರಿಯೆಯಲ್ಲಿ  ಯಾವುದೇ ಪಾರದರ್ಶಕತೆ ಇಲ್ಲ ಎಂಬುದನ್ನು ಗಮನಿಸಿದೆ.

ಸಂಕ್ಷಿಪ್ತವಾಗಿ, ಆತಂಕಕ್ಕೊಳಗಾದ ನಾಗರಿಕರು ಕೇಳುತ್ತಿರುವ ಎಲ್ಲಾ ಪ್ರಶ್ನೆಗಳನ್ನು ಸುಪ್ರೀಂ ಕೋರ್ಟ್ ಕೇಳಿದೆ. ನೀತಿ ನಿರೂಪಣೆಯನ್ನು ಸರಕಾರ ಮತ್ತು ಕಾರ್ಯಾಂಗಕ್ಕೆ  ಬಿಡಬೇಕೆಂದು ಕೇಂದ್ರದ ಕಾನೂನು ಅಧಿಕಾರಿ ನ್ಯಾಯಾಲಯಕ್ಕೆ ಸೂಚಿಸಿದಾಗ, “ನೀತಿ ನಿರೂಪಣೆಯು ಕಾರ್ಯನಿರ್ವಾಹಕನ ಏಕೈಕ ಡೊಮೇನ್ ಆಗಿ ಮುಂದುವರಿಯುತ್ತದೆ. ಆ ಪಾತ್ರವನ್ನು ವಹಿಸಿಕೊಳ್ಳುವ ಅಧಿಕಾರವನ್ನು ನ್ಯಾಯಾಂಗವು ಹೊಂದಿಲ್ಲ… ಈ ಅಧಿಕಾರಗಳ ವಿಭಜನೆಯು ಈ ನೀತಿಗಳ ನ್ಯಾಯಾಂಗ ವಿಮರ್ಶೆ ನಡೆಸಲು ನ್ಯಾಯಾಲಯಕ್ಕೆ ಅಡ್ಡಿ ಮಾಡಲಾರದು…..’ ಎಂದು ಸುಪ್ರೀಂಕೋರ್ಟ್ ದೃಢವಾಗಿ ಹೇಳಿದೆ.

ಇದರೊಂದಿಗೆ, ಭಾರತದ ಹಿಂದಿನ ಸಾರ್ವತ್ರಿಕ ಲಸಿಕಾ ಅಭಿಯಾನಗಳ ಹಿನ್ನೆಲೆಯಲ್ಲಿ ಲಸಿಕೆ ನೀತಿಯನ್ನು ಪರೀಕ್ಷಿಸುವುದನ್ನು ಮುಂದುವರಿಸುವುದಾಗಿ ನ್ಯಾಯಾಲಯ ಸ್ಪಷ್ಟಪಡಿಸಿದೆ.  ಜೀವಿಸುವ ಹಕ್ಕನ್ನು ರಕ್ಷಿಸುವ ಸಾಂವಿಧಾನಿಕ ಬಾಧ್ಯತೆಯನ್ನು ಕೇಂದ್ರವು ಪೂರೈಸುವ ಅಗತ್ಯವಿದೆ.


ಇದನ್ನೂ ಓದಿ: ಖಾಸಗಿ ವಲಯದ ಶೇ.50 ರಷ್ಟು ಲಸಿಕೆ  9 ಕಾರ್ಪೋರೇಟ್‍ ಆಸ್ಪತ್ರೆಗಳ ಪಾಲು: ಸಣ್ಣ ನಗರಗಳಲ್ಲಿ ಲಸಿಕೆ ಕೊರತೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲಂಚ ಪ್ರಕರಣ : ಎಸ್‌ಇಸಿ ಸಮನ್ಸ್ ಸ್ವೀಕರಿಸಲು ಅದಾನಿ ಒಪ್ಪಿಗೆ

ಲಂಚ ಪ್ರಕರಣದಲ್ಲಿ ಅಮೆರಿಕದ ಸೆಕ್ಯುರಿಟೀಸ್ ಆ್ಯಂಡ್ ಎಕ್ಸ್‌ಚೇಂಜ್ ಕಮಿಷನ್ (ಎಸ್‌ಇಸಿ) ನ ಸಮನ್ಸ್‌ಗಳನ್ನು ಸ್ವೀಕರಿಸಲು ಉದ್ಯಮಿ ಗೌತಮ್ ಅದಾನಿ ಮತ್ತು ಅವರ ಸೋದರಳಿಯ ಸಾಗರ್ ಅದಾನಿ ಒಪ್ಪಿಕೊಂಡಿದ್ದಾರೆ ಎಂದು ವರದಿಯಾಗಿದೆ. ನ್ಯೂಯಾರ್ಕ್‌ನ ಬ್ರೂಕ್ಲಿನ್‌ನಲ್ಲಿರುವ ಫೆಡರಲ್...

ಬೀದರ್‌ : ಮೊಳಕೇರಾ ಗ್ರಾಮದಲ್ಲಿ ಸ್ಫೋಟ ಪ್ರಕರಣ ; ಸಮಗ್ರ ತನಿಖೆಗೆ ಸಚಿವ ಈಶ್ವರ್ ಖಂಡ್ರೆ ಆದೇಶ

ಬೀದರ್ ಜಿಲ್ಲೆ ಹುಮನಾಬಾದ್ ತಾಲೂಕಿನ ಮೊಳಕೇರಾ ಗ್ರಾಮದ ಮೋಳಗಿ ಮಾರಯ್ಯ ದೇವಸ್ಥಾನ ರಸ್ತೆಯಲ್ಲಿ ಅನುಮಾನಾಸ್ಪದ ವಸ್ತು ಸ್ಫೋಟಗೊಂಡು, ಶಾಲೆಗೆ ತೆರಳುತ್ತಿದ್ದ ಮಕ್ಕಳೂ ಸೇರಿ 6 ಜನರು ಗಾಯಗೊಂಡಿರುವ ಘಟನೆ ಬಗ್ಗೆ ಆಘಾತ ವ್ಯಕ್ತಪಡಿಸಿರುವ...

ಜೈಲಿನಲ್ಲಿರುವ ಹೋರಾಟಗಾರ ಸೋನಮ್ ವಾಂಗ್‌ಚುಕ್‌ಗೆ ಅನಾರೋಗ್ಯ : ಜೋಧ್‌ಪುರದ ಏಮ್ಸ್‌ನಲ್ಲಿ ವೈದ್ಯಕೀಯ ಪರೀಕ್ಷೆ

ನ್ಯಾಯಾಂಗ ಬಂಧನದಲ್ಲಿರುವ ಲಡಾಖ್‌ನ ಹೋರಾಟಗಾರ ಹಾಗೂ ವಿಜ್ಞಾನಿ ಸೋನಮ್ ವಾಂಗ್‌ಚುಕ್ ಅವರ ಆರೋಗ್ಯ ಹದೆಗೆಟ್ಟಿದ್ದು, ಸುಪ್ರೀಂ ಕೋರ್ಟ್ ನಿರ್ದೇಶನ ಅನುಸಾರ ಜೋಧ್‌ಪುರದ ಏಮ್ಸ್‌ನಲ್ಲಿ ಅವರಿಗೆ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ. ಪೊಲೀಸರು ವಾಂಗ್‌ಚುಕ್ ಅವರನ್ನು ಜೋಧ್‌ಪುರ...

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ ತಿದ್ದುಪಡಿ : ಬಲವಂತದ ವಿವಾಹ, ಲಿವ್‌ಇನ್ ಸಂಬಂಧಕ್ಕೆ 7 ವರ್ಷ ಜೈಲು

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ (ತಿದ್ದುಪಡಿ) ಸುಗ್ರೀವಾಜ್ಞೆಗೆ ರಾಜ್ಯಪಾಲ ಹಾಗೂ ನಿವೃತ್ತ ಲೆಫ್ಟಿನೆಂಟ್ ಜನರಲ್ ಗುರ್ಮೀತ್ ಸಿಂಗ್ ಅವರು ಅಂಕಿತ ಹಾಕಿದ್ದಾರೆ. ಈ ತಿದ್ದುಪಡಿಯ ಪರಿಣಾಮ, ರಾಜ್ಯದಲ್ಲಿ ವಿವಾಹ ಹಾಗೂ ಲಿವ್‌ಇನ್ ಸಂಬಂಧಗಳಿಗೆ...

ಮಹಾರಾಷ್ಟ್ರದ ಡಿಸಿಎಂ ಆಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಆಯ್ಕೆ : ಇಂದು ಸಂಜೆ ಪ್ರಮಾಣ ವಚನ ಸ್ವೀಕಾರ; ವರದಿ

ಅಜಿತ್ ಪವಾರ್ ಅವರ ಅಕಾಲಿಕ ಸಾವಿನಿಂದ ತೆರವಾದ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಸ್ಥಾನಕ್ಕೆ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರನ್ನು ನೇಮಿಸಲು ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ) ನಿರ್ಧರಿಸಿದೆ ಎಂದು ವರದಿಯಾಗಿದೆ....

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...