Homeಕರೋನಾ ತಲ್ಲಣಲಸಿಕೆ ಕುರಿತು ಕೇಂದ್ರಕ್ಕೆ ಸುಪ್ರೀಂಕೋರ್ಟ್ ಪ್ರಶ್ನೆಗಳು: ಕಟಕಟೆಯಲ್ಲಿ ಮೋದಿ ಸರ್ಕಾರ!

ಲಸಿಕೆ ಕುರಿತು ಕೇಂದ್ರಕ್ಕೆ ಸುಪ್ರೀಂಕೋರ್ಟ್ ಪ್ರಶ್ನೆಗಳು: ಕಟಕಟೆಯಲ್ಲಿ ಮೋದಿ ಸರ್ಕಾರ!

- Advertisement -
- Advertisement -

ಕೃಪೆ: ದಿ ವೈರ್ – ಎಂ.ಕೆ. ವೇಣು

18-44 ವಯಸ್ಸಿನವರಿಗೆ ಒಕ್ಕೂಟ ಸರ್ಕಾರ ರೂಪಿಸಿರುವ ಲಸಿಕಾ ನೀತಿಯ ಬಗ್ಗೆ  ಸುಪ್ರೀಂ ಕೋರ್ಟ್ ಕಠಿಣ ಪ್ರಶ್ನೆಗಳನ್ನು ಶುಕ್ರವಾರ ಕೇಳಿದೆ. ನಾಗರಿಕರು ತಿಂಗಳುಗಳಿಂದ ಕೇಳುತ್ತಿರುವ ಪ್ರಮುಖ ಪ್ರಶ್ನೆಗಳಿಗೆ ಒಕ್ಕೂಟ ಸರ್ಕಾರ ಉತ್ತರಿಸುವಂತೆ ಸುಪ್ರೀಂ ಕೋರ್ಟ್ ಸೂಚಿಸಿದೆ.

ಇಲ್ಲಿ ಒಂದು ಮುಖ್ಯ ಪ್ರಶ್ನೆಯನ್ನು ನ್ಯಾಯಮೂರ್ತಿ ಚಂದ್ರಚೂಡ್‍ ಕೇಳಿದ್ದಾರೆ. ಈ ಹಿಂದೆ ನಡೆದ ಎಲ್ಲಾ ಲಸಿಕೆ ಖರೀದಿ ಮಾತುಕತೆಗಳ ಎಲ್ಲ ವಿವರಗಳನ್ನು ಕೋರ್ಟ್ ಮುಂದೆ ಇಡುವಂತೆ ಚಂದ್ರಚೂಡ್ ಕೇಂದ್ರಕ್ಕೆ ನಿರ್ದೇಶನ ನೀಡಿದ್ದಾರೆ. ಜುಲೈ 2020 ರಿಂದ ಅಮೆರಿಕದ ಔಷಧಿ ಕಂಪನಿಗಳೊಂದಿಗೆ ಮಾತುಕತೆ ನಡೆಸುತ್ತಿದ್ದೇವೆ ಎಂದು ಕೇಂದ್ರ ಸರ್ಕಾರ ಇತ್ತೀಚೆಗೆ ಹೇಳಿಕೊಂಡಿದೆ. ಹಾಗಿದ್ದಲ್ಲಿ, ಒಂಬತ್ತು ತಿಂಗಳಲ್ಲಿ ಯಾವ ಪ್ರಗತಿಯನ್ನು ಸಾಧಿಸಲಾಗಿದೆ ಎಂಬುದು ಒಂದು ಪ್ರಮುಖ ಪ್ರಶ್ನೆಯಾಗಿದೆ.

ಆಮದಿಗಿಂತ ಹೆಚ್ಚು ನಿರ್ಣಾಯಕವಾದುದು, 2020 ರ ನವೆಂಬರ್‌ನಿಂದ ಪ್ರಧಾನ ಮಂತ್ರಿ ದೇಶೀಯ ಉತ್ಪಾದಕರಾದ ಸೀರಮ್ ಇನ್‌ಸ್ಟಿಟ್ಯೂಟ್ ಆಫ್ ಇಂಡಿಯಾ ಮತ್ತು ಭಾರತ್ ಬಯೋಟೆಕ್ ಜೊತೆ ನಡೆಸಿದ ಮಾತುಕತೆಗಳ ವಿವರಗಳು ಬಹಿರಂಗ ಆಗಬೇಕಿದೆ. ಕಳೆದ ವರುಷದಿಂದ ಇದು ನಡೆದೇ ಇದೆ. ದೇಶೀಯ ಉತ್ಪಾದಕರಿಂದ ಯಾವುದೇ ಪೂರ್ವ-ಆದೇಶವಿಲ್ಲದೆ ಪೂರೈಕೆಯ ಸ್ಪಷ್ಟ ಭರವಸೆ ಇಲ್ಲದೇ ಅಥವಾ ವಿಸ್ತರಣೆಗೆ ಅವರಿಗೆ ಬಂಡವಾಳದ ಬೆಂಬಲವಿಲ್ಲದೆ ಐದು ತಿಂಗಳುಗಳು  ನವೆಂಬರ್‌ನಿಂದ ಮಾರ್ಚಿವರೆಗೆ ಹೇಗೆ ಕಳೆದುಹೋಗಿವೆ ಎಂಬುದರ ಕುರಿತು ಸುಪ್ರೀಂ ಕೋರ್ಟ್ ವಿವರವಾದ ವಿಚಾರಣೆ ನಡೆಸಬೇಕು. ವಾಸ್ತವವಾಗಿ, ಸುಪ್ರೀಂಕೋರ್ಟ್ ಈ ಲೆಕ್ಕ ಪಡೆಯಲು ಎಸ್‍ಐಐ ಮತ್ತು ಭಾರತ್ ಬಯೋಟೆಕ್‌ನಿಂದ ನಿರ್ದಿಷ್ಟ ವಿವರಗಳನ್ನು ಪಡೆಯಬೇಕು, ಕಳೆದ ಡಿಸೆಂಬರ್‌ನಿಂದ ಅವುಗಳ ಮತ್ತು ಪಿಎಂಒ ನಡುವೆ ನಡೆದ ಸಂವಹನಗಳ ಎಲ್ಲ ವಿವರವನ್ನೂ ಪಡೆಯಬೇಕು.

ಲಸಿಕೆಯ ತೀವ್ರ ಕೊರತೆ ಸದ್ಯದಲ್ಲಿಯೇ ಎದುರಾಗುವ ಸಾಧ್ಯತೆ ಇರುವುದರಿಂದ ಸುಪ್ರೀಂಕೋರ್ಟ್ ಅಂತಹ ವಿವರಗಳನ್ನು ಕೇಳುವುದು ಉತ್ತಮವಾಗಿದೆ. ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿಯ ಮಹಾ ನಿರ್ದೇಶಕ ಬಲರಾಮ್‍ ಭಾರ್ಗವ ಅವರು ಅಧಿಕೃತವಾಗಿ, ದಿನಕ್ಕೆ 10 ಮಿಲಿಯನ್ ಡೋಸ್‍ಗಳ ಪೂರೈಕೆ ಜುಲೈ ಅಂತ್ಯದ ವೇಳೆಗೆ ಅಥವಾ ಆಗಸ್ಟ್ ಆರಂಭದಲ್ಲಿ ಮಾತ್ರ ಕಾರ್ಯಸಾಧ್ಯವಾಗಲಿದೆ ಎಂದು ಹೇಳಿದ್ದಾರೆ. ಈ ಗುರಿಯನ್ನು ಸಹ ತಲುಪಬಹುದೇ ಎಂದು ಅನೇಕ ತಜ್ಞರು ಪ್ರಶ್ನಿಸಿದ್ದಾರೆ. ಕಳೆದ ಡಿಸೆಂಬರ್‌ನಲ್ಲಿ ಎಸ್‌ಐಐ ಮತ್ತು ಭಾರತ್ ಬಯೋಟೆಕ್ ಒಟ್ಟಾಗಿ 300 ಮಿಲಿಯನ್ ಲಸಿಕೆಗಳಿಗೆ  ಅಡ್ವಾನ್ಸ್ ಆರ್ಡರ್‌ಗೆ ಒಪ್ಪಿಕೊಂಡಿದ್ದು, ಅದರಂತೆ ಉತ್ಪಾದನೆ ಮಾಡಿದ್ದರೆ, ಆಗಸ್ಟ್ ವೇಳೆಗೆ ಭಾರತವು ಸಂಪೂರ್ಣ ಲಸಿಕೆ ಹಾಕಬಹುದಿತ್ತು. ಆದರೆ ಈಗಿನ ಪರಿಸ್ಥಿತಿ ನಿರಾಶಾದಾಯಕವಾಗಿದೆ.

ಇದು ಪ್ರಧಾನಿ ನರೇಂದ್ರ ಮೋದಿಯವರ ದೊಡ್ಡ ವೈಫಲ್ಯ. ನವೆಂಬರ್‌ನಿಂದ ಮಾರ್ಚಿವರೆಗೆ ಕೇಂದ್ರ ಮತ್ತು ದೇಶೀಯ ಲಸಿಕೆ ಕಂಪನಿಗಳ ನಡುವೆ ರಾಜ್ಯಗಳಿಗೆ ಯಾವುದೇ ಸಂಬಂಧವಿಲ್ಲ ಎಂಬಂತೆ ನೀತಿ ಅಳವಡಿಸಲಾಗಿತ್ತು. 18-44 ವಯಸ್ಸಿನವರಿಗೆ ಲಸಿಕೆ ಒದಗಿಸಲು ಕೇಂದ್ರವು ಒಪ್ಪಿದ ನಂತರವಷ್ಟೇ ಮೇ 1 ರಂದು ರಾಜ್ಯ ಸರ್ಕಾರಗಳ ಮೇಲೆ ಜವಾಬ್ದಾರಿ ಹಾಕಿ ಕೇಂದ್ರ ನುಣುಚಿಕೊಳ್ಳುವ ಯತ್ನ ಮಾಡುತ್ತಿದೆ.

ಮುಂಚೂಣಿ ಆರೋಗ್ಯ ಕಾರ್ಯಕರ್ತರು ಮತ್ತು ಇತರ ದುರ್ಬಲ ಗುಂಪುಗಳು ಸೇರಿದಂತೆ 45ಕ್ಕಿಂತ ಹೆಚ್ಚು ವಯಸ್ಸಿನವರಿಗೆ ಸರ್ಕಾರವು ಉಚಿತ ಲಸಿಕೆಗಳನ್ನು ನೀಡಲು ಸಾಧ್ಯವಾದರೆ, ಅದೇ ನಿಯಮಗಳನ್ನು 18-44 ವಯಸ್ಸಿನವರಿಗೆ ಏಕೆ ವಿಸ್ತರಿಸಲಾಗಿಲ್ಲ? ಎಂದು ಸುಪ್ರೀಂಕೋರ್ಟ್ ಸರಿಯಾಗಿ ಮತ್ತು ಕಠಿಣವಾಗಿ ಪ್ರಶ್ನಿಸಿದೆ.

ದೇಶೀಯ ಲಸಿಕೆಗಳನ್ನು ಖರೀದಿಸಲು ರಾಜ್ಯಗಳೇಕೆ ಹೆಚ್ಚಿನ ದರ  ಪಾವತಿಸಬೇಕು? ಎಂದು ನ್ಯಾಯಾಲಯವು ಕೇಳಿದೆ. ಆದರೆ ಮೊದಲ ಸುತ್ತಿನಲ್ಲಿ ಅದೇ ಲಸಿಕೆಗಳನ್ನು ಹೆಚ್ಚು ಅಗ್ಗವಾಗಿ ಕೇಂದ್ರ ಖರೀದಿಸಿದೆ. ಇದು ಸರಿ. ಆದರೆ ರಾಜ್ಯಗಳು ಮತ್ತು ಖಾಸಗಿ ಆಸ್ಪತ್ರೆಗಳಿಗೆ ಕೋಟಾಗಳನ್ನು ಹಂಚುವ ಆಧಾರವೇನು? ಬೆಲೆಯಲ್ಲಿ ತಾರತಮ್ಯವೇಕೆ ಈ ಎಲ್ಲ ಪ್ರಶ್ನೆಗಳಿಗೂ  ನ್ಯಾಯಾಲಯ ಕೇಂದ್ರದಿಂದ ವಿವರ ಕೇಳಿದೆ.  ಮುಂದಿನ ವಾರಗಳು ಮತ್ತು ತಿಂಗಳುಗಳಲ್ಲಿ ಲಸಿಕಾ ಅಭಿಯಾನದ ನಿಖರವಾದ ಚಿತ್ರಣವನ್ನು ಪ್ರಸ್ತುತಪಡಿಸಲು ನ್ಯಾಯಾಲಯ ಕೇಂದ್ರವನ್ನು ಕೇಳಿದೆ ಮತ್ತು ಈ ಉದ್ದೇಶಕ್ಕಾಗಿ 35,000 ಕೋಟಿ ರೂ.ಗಳನ್ನು ಹೇಗೆ ವ್ಯಯ ಮಾಡಿದೆ ಮತ್ತು ಮಾಡಲಿದೆ ಎಂದು ಪ್ರಶ್ನೆ ಮಾಡಿರುವ ನ್ಯಾಯಾಲಯ ಈ ಪ್ರಕ್ರಿಯೆಯಲ್ಲಿ  ಯಾವುದೇ ಪಾರದರ್ಶಕತೆ ಇಲ್ಲ ಎಂಬುದನ್ನು ಗಮನಿಸಿದೆ.

ಸಂಕ್ಷಿಪ್ತವಾಗಿ, ಆತಂಕಕ್ಕೊಳಗಾದ ನಾಗರಿಕರು ಕೇಳುತ್ತಿರುವ ಎಲ್ಲಾ ಪ್ರಶ್ನೆಗಳನ್ನು ಸುಪ್ರೀಂ ಕೋರ್ಟ್ ಕೇಳಿದೆ. ನೀತಿ ನಿರೂಪಣೆಯನ್ನು ಸರಕಾರ ಮತ್ತು ಕಾರ್ಯಾಂಗಕ್ಕೆ  ಬಿಡಬೇಕೆಂದು ಕೇಂದ್ರದ ಕಾನೂನು ಅಧಿಕಾರಿ ನ್ಯಾಯಾಲಯಕ್ಕೆ ಸೂಚಿಸಿದಾಗ, “ನೀತಿ ನಿರೂಪಣೆಯು ಕಾರ್ಯನಿರ್ವಾಹಕನ ಏಕೈಕ ಡೊಮೇನ್ ಆಗಿ ಮುಂದುವರಿಯುತ್ತದೆ. ಆ ಪಾತ್ರವನ್ನು ವಹಿಸಿಕೊಳ್ಳುವ ಅಧಿಕಾರವನ್ನು ನ್ಯಾಯಾಂಗವು ಹೊಂದಿಲ್ಲ… ಈ ಅಧಿಕಾರಗಳ ವಿಭಜನೆಯು ಈ ನೀತಿಗಳ ನ್ಯಾಯಾಂಗ ವಿಮರ್ಶೆ ನಡೆಸಲು ನ್ಯಾಯಾಲಯಕ್ಕೆ ಅಡ್ಡಿ ಮಾಡಲಾರದು…..’ ಎಂದು ಸುಪ್ರೀಂಕೋರ್ಟ್ ದೃಢವಾಗಿ ಹೇಳಿದೆ.

ಇದರೊಂದಿಗೆ, ಭಾರತದ ಹಿಂದಿನ ಸಾರ್ವತ್ರಿಕ ಲಸಿಕಾ ಅಭಿಯಾನಗಳ ಹಿನ್ನೆಲೆಯಲ್ಲಿ ಲಸಿಕೆ ನೀತಿಯನ್ನು ಪರೀಕ್ಷಿಸುವುದನ್ನು ಮುಂದುವರಿಸುವುದಾಗಿ ನ್ಯಾಯಾಲಯ ಸ್ಪಷ್ಟಪಡಿಸಿದೆ.  ಜೀವಿಸುವ ಹಕ್ಕನ್ನು ರಕ್ಷಿಸುವ ಸಾಂವಿಧಾನಿಕ ಬಾಧ್ಯತೆಯನ್ನು ಕೇಂದ್ರವು ಪೂರೈಸುವ ಅಗತ್ಯವಿದೆ.


ಇದನ್ನೂ ಓದಿ: ಖಾಸಗಿ ವಲಯದ ಶೇ.50 ರಷ್ಟು ಲಸಿಕೆ  9 ಕಾರ್ಪೋರೇಟ್‍ ಆಸ್ಪತ್ರೆಗಳ ಪಾಲು: ಸಣ್ಣ ನಗರಗಳಲ್ಲಿ ಲಸಿಕೆ ಕೊರತೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದಲಿತರು, ಅಲ್ಪಸಂಖ್ಯಾತರ ಮೇಲಿನ ಹಿಂಸಾಚಾರದ ಕುರಿತು ವಿಶ್ವಸಂಸ್ಥೆಯ ಕಠಿಣ ಪ್ರಶ್ನೆ: ಸಂಶೋಧನಾತ್ಮಕ ವರದಿಗಳನ್ನು ಆಧರಿಸಿ ಭಾರತಕ್ಕೆ CERD ಚಾಟಿ

ನವದೆಹಲಿ: ಭಾರತದಲ್ಲಿ ದಲಿತರು, ಆದಿವಾಸಿಗಳು, ಮುಸ್ಲಿಮರು ಹಾಗೂ ಇತರ ಅಲ್ಪಸಂಖ್ಯಾತ ಸಮುದಾಯಗಳು ಎದುರಿಸುತ್ತಿರುವ ತಾರತಮ್ಯ, ಹಿಂಸೆ ಮತ್ತು ಹಕ್ಕುಗಳ ಉಲ್ಲಂಘನೆ ಕುರಿತು ವಿಶ್ವಸಂಸ್ಥೆಯ ಜನಾಂಗೀಯ ತಾರತಮ್ಯ ನಿರ್ಮೂಲನೆ ಕುರಿತ ಸಮಿತಿ (CERD) ತೀವ್ರ...

ಪಶ್ಚಿಮ ಬಂಗಾಳ| ಕಳೆದ ಒಂದು ತಿಂಗಳಲ್ಲಿ ಕ್ರಿಶ್ಚಿಯನ್ನರ ಮೇಲೆ ಸತತ ದಾಳಿ

ಪಶ್ಚಿಮ ಬಂಗಾಳದ ಚರ್ಚ್ ಒಂದರ ಆವರಣದಲ್ಲಿರುವ ಸ್ಮಶಾನದಲ್ಲಿ ಮೃತರೊಬ್ಬರಿಗೆ ಕೊನೆಯ ವಿದಾಯ ಕೋರುತ್ತಿದ್ದ ಕ್ರಿಶ್ಚಿಯನ್ ಕುಟುಂಬದ ಮೇಲೆ ಹಿಂದುತ್ವ ಗುಂಪೊಂದು ದಾಳಿ ನಡೆಸಿದೆ ಎಂದು ಆರೋಪಿಸಲಾಗಿದೆ. ಈ ಘಟನೆಯು ಆಗಸ್ಟ್ 14 ರಂದು ಪೂರ್ಬ...

‘ನಮ್ಮ ರಕ್ತದಿಂದ ಅವರು ಬಾಯಾರಿಕೆಯನ್ನು ತಣಿಸಿಕೊಳ್ಳುತ್ತಾರೆಯೇ?’: ಕೇರಳ ವಿವಿಯಲ್ಲಿ ಜಾತಿ ತಾರತಮ್ಯದ ವಿರುದ್ಧ ದಲಿತ ಸಂಶೋಧನಾ ವಿದ್ಯಾರ್ಥಿನಿ ಅನಿರ್ದಿಷ್ಟಾವಧಿ ಉಪವಾಸ

ತಿರುವನಂತಪುರಂ: ಜಾತಿ ಮತ್ತು ಲಿಂಗ ಆಧಾರಿತ ತಾರತಮ್ಯ, ಕಿರುಕುಳ ಹಾಗೂ ಶೈಕ್ಷಣಿಕ ಅವಕಾಶಗಳ ನಿರಾಕರಣೆಯ ಆರೋಪಗಳನ್ನು ಮುಂದಿಟ್ಟುಕೊಂಡು ಕೇರಳದ ತುಂಚತ್ ಎಳುಥಾಚನ್ ಮಲಯಾಳಂ ವಿಶ್ವವಿದ್ಯಾಲಯದ ದಲಿತ ಪಿಎಚ್‌ಡಿ ಸಂಶೋಧನಾ ವಿದ್ಯಾರ್ಥಿನಿ ಅನಘಾ ಶಾಸಿ...

ಸ್ವತಂತ್ರ ಭಾರದ್ವಾಜ್ ಬಂಧನದ ಬೆನ್ನಲ್ಲೇ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ವಿದ್ಯಾರ್ಥಿನಿ ಮನೆ ಮೇಲೆ ಕಲ್ಲು ತೂರಾಟ, ಪೊಲೀಸರ ರಕ್ಷಣೆಗೆ ಮನವಿ

ನವದೆಹಲಿಯ ಜಂತರ್ ಮಂತರ್‌ನಲ್ಲಿ ನಡೆದ ಸಿಜೆಪಿ ಪ್ರತಿಭಟನೆಯ ವೇಳೆ ಸಂಜಯ್ ಆಝಾದ್ ಎಂಬುವವರ ಮೇಲೆ ಸ್ವಯಂಘೋಷಿತ ಗೋರಕ್ಷಕ ಸ್ವತಂತ್ರ ಭಾರದ್ವಾಜ್ ಭೀಕರವಾಗಿ ಹಲ್ಲೆ ನಡೆಸಿದ್ದನು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಆತನನ್ನು ಬಂಧಿಸಿದ...

ಜನ್ ಧನ್ ಯೋಜನೆಯಡಿ ತೆರೆಯಲಾದ ಪ್ರತಿ ನಾಲ್ಕನೇ ಬ್ಯಾಂಕ್‌ ಖಾತೆ ನಿಷ್ಕ್ರಿಯ: ಆರ್‌ಟಿಐ ಮಾಹಿತಿ

ಮಾಹಿತಿ ಹಕ್ಕು (ಆರ್‌ಟಿಐ) ಕಾಯ್ದೆಯಡಿ ಲಭ್ಯವಾಗಿರುವ ಉತ್ತರದ ಪ್ರಕಾರ, ಪ್ರಧಾನಮಂತ್ರಿ ಜನ್ ಧನ್ ಯೋಜನೆಯಡಿ ತೆರೆಯಲಾದ ಪ್ರತಿ ನಾಲ್ಕನೇ ಖಾತೆಯು ನಿಷ್ಕ್ರಿಯಗೊಂಡಿದೆ. ಸುಮಾರು 5.72 ಕೋಟಿ ಖಾತೆಗಳಲ್ಲಿ ಶೂನ್ಯ ಬ್ಯಾಲೆನ್ಸ್ ಇದೆ. ಆಗಸ್ಟ್ 12,...

ಬಡ ಪೌರ ಕಾರ್ಮಿಕರ ಮೇಲೆ ದರ್ಪ ಮೆರೆದ ಸಚಿವ ಕೃಷ್ಣ ಬೈರೇಗೌಡ : ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶ

ಸೇವೆಯನ್ನು ಖಾಯಂಗೊಳಿಸುವಂತೆ ಮನವಿ ಮಾಡಿದ ಬಡ ಪೌರ ಕಾರ್ಮಿಕರೊಂದಿಗೆ ಗ್ರೇಟರ್ ಬೆಂಗಳೂರು ನಗರಾಭಿವೃದ್ಧಿ ಸಚಿವ ಕೃಷ್ಣ ಬೈರೇಗೌಡ ಅವರು ದರ್ಪ ಮೆರೆದಿರುವುದು ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಶನಿವಾರ (ಸೆ.6) ಬೆಂಗಳೂರಿನ...

ಗ್ರಾಮೀಣ ಭಾಗದ ಶಾಲಾ ಮಕ್ಕಳಿಗೆ ಶಿಕ್ಷಣ ಮತ್ತು ಉದ್ಯೋಗದಲ್ಲಿ 7.5% ಮೀಸಲಾತಿ: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್

ಗ್ರಾಮೀಣ ಹಾಗೂ ಬಡ ವಿದ್ಯಾರ್ಥಿಗಳ ಉನ್ನತ ಶಿಕ್ಷಣದ ಕನಸಿಗೆ ಬಲ ತುಂಬುವ ನಿಟ್ಟಿನಲ್ಲಿ ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗೆ ಶಿಕ್ಷಣ ಹಾಗೂ ಉದ್ಯೋಗದಲ್ಲಿ ಶೇಕಡಾ 7.5 ರಷ್ಟು ಮೀಸಲಾತಿ ಕಲ್ಪಿಸುವುದಾಗಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ಪಶ್ಚಿಮ ಬಂಗಾಳದ ಪ್ರವಾಸೋದ್ಯಮ ಜಾಹೀರಾತಿನಲ್ಲಿ ಐಫೆಲ್ ಟವರ್, ಈಜಿಪ್ಟ್ ಪಿರಮಿಡ್: ಆದರೆ ಬಂಗಾಳವೇ ನಾಪತ್ತೆ!

ಪಶ್ಚಿಮ ಬಂಗಾಳವನ್ನು ಜಾಗತಿಕ ಪ್ರವಾಸೋದ್ಯಮ ಭೂಪಟದಲ್ಲಿ ಮುನ್ನೆಲೆಗೆ ತರುವ ಉದ್ದೇಶದಿಂದ ಬಿಡುಗಡೆ ಮಾಡಲಾದ ರಾಜ್ಯದ ಹೊಸ ಪ್ರವಾಸೋದ್ಯಮ ಜಾಹೀರಾತು ಈಗ ತೀವ್ರ ಟೀಕೆ ಹಾಗೂ ಅಪಹಾಸ್ಯಕ್ಕೆ ಈಡಾಗಿದೆ. ಈ ಜಾಹೀರಾತನ್ನು ಒಮ್ಮೆ ಗಮನಿಸಿದರೆ...

ಅಮೆರಿಕದಲ್ಲಿ ಮೋಹನ್‌ ಭಾಗವತ್ ಸೌಹಾರ್ದತೆ ಮಾತು; ಮಹಾರಾಷ್ಟ್ರದ ಗಾರ್ಬಾ-ದಾಂಡಿಯಾ ಕಾರ್ಯಕ್ರಮಗಳಲ್ಲಿ ಮುಸ್ಲಿಮರಿಗೆ ನಿಷೇಧ ಹೇರಿದ ವಿಎಚ್‌ಪಿ

ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಮುಖ್ಯಸ್ಥ ಮೋಹನ್ ಭಾಗವತ್ ಅವರು ನ್ಯೂಯಾರ್ಕ್‌ನಲ್ಲಿ ಮಾಡಿದ ಭಾಷಣದಲ್ಲಿ ಧಾರ್ಮಿಕ ಸೌಹಾರ್ದತೆ, ಪರಸ್ಪರ ಗೌರವ ಮತ್ತು ಪ್ರತಿಯೊಂದು ಸಮುದಾಯದ ಗುರುತಿನ ರಕ್ಷಣೆ ಕುರಿತು ಮಾತನಾಡಿದ ಕೆಲವೇ ದಿನಗಳ...

ಸೈಬರ್ ವಂಚನೆಗೊಳಗಾದ ಸಂತ್ರಸ್ತರಿಗೆ ನೆರವು: ಕರ್ನಾಟಕದಲ್ಲಿ ಶೀಘ್ರವೇ ‘ಇ-ಶೂನ್ಯ ಎಫ್‌ಐಆರ್’ ಜಾರಿ

ಸೈಬರ್ ವಂಚನೆಗೊಳಗಾದ ಸಂತ್ರಸ್ತರು ಇನ್ನು ಮುಂದೆ ದೂರು ದಾಖಲಿಸಲು ಪೊಲೀಸ್ ಠಾಣೆಗಳಿಗೆ ಅಲೆಯಬೇಕಿಲ್ಲ. ಸೈಬರ್ ಅಪರಾಧ ಪ್ರಕರಣಗಳ ಎಫ್‌ಐಆರ್ ದಾಖಲಾತಿಯನ್ನು ಚುರುಕುಗೊಳಿಸುವ ಹಾಗೂ ಜನಸ್ನೇಹಿಯಾಗಿಸುವ ಉದ್ದೇಶದಿಂದ ಭಾರತೀಯ ಸೈಬರ್ ಅಪರಾಧ ಸಮನ್ವಯ ಕೇಂದ್ರ...