Homeಕರೋನಾ ತಲ್ಲಣಲಸಿಕೆ ಕುರಿತು ಕೇಂದ್ರಕ್ಕೆ ಸುಪ್ರೀಂಕೋರ್ಟ್ ಪ್ರಶ್ನೆಗಳು: ಕಟಕಟೆಯಲ್ಲಿ ಮೋದಿ ಸರ್ಕಾರ!

ಲಸಿಕೆ ಕುರಿತು ಕೇಂದ್ರಕ್ಕೆ ಸುಪ್ರೀಂಕೋರ್ಟ್ ಪ್ರಶ್ನೆಗಳು: ಕಟಕಟೆಯಲ್ಲಿ ಮೋದಿ ಸರ್ಕಾರ!

- Advertisement -
- Advertisement -

ಕೃಪೆ: ದಿ ವೈರ್ – ಎಂ.ಕೆ. ವೇಣು

18-44 ವಯಸ್ಸಿನವರಿಗೆ ಒಕ್ಕೂಟ ಸರ್ಕಾರ ರೂಪಿಸಿರುವ ಲಸಿಕಾ ನೀತಿಯ ಬಗ್ಗೆ  ಸುಪ್ರೀಂ ಕೋರ್ಟ್ ಕಠಿಣ ಪ್ರಶ್ನೆಗಳನ್ನು ಶುಕ್ರವಾರ ಕೇಳಿದೆ. ನಾಗರಿಕರು ತಿಂಗಳುಗಳಿಂದ ಕೇಳುತ್ತಿರುವ ಪ್ರಮುಖ ಪ್ರಶ್ನೆಗಳಿಗೆ ಒಕ್ಕೂಟ ಸರ್ಕಾರ ಉತ್ತರಿಸುವಂತೆ ಸುಪ್ರೀಂ ಕೋರ್ಟ್ ಸೂಚಿಸಿದೆ.

ಇಲ್ಲಿ ಒಂದು ಮುಖ್ಯ ಪ್ರಶ್ನೆಯನ್ನು ನ್ಯಾಯಮೂರ್ತಿ ಚಂದ್ರಚೂಡ್‍ ಕೇಳಿದ್ದಾರೆ. ಈ ಹಿಂದೆ ನಡೆದ ಎಲ್ಲಾ ಲಸಿಕೆ ಖರೀದಿ ಮಾತುಕತೆಗಳ ಎಲ್ಲ ವಿವರಗಳನ್ನು ಕೋರ್ಟ್ ಮುಂದೆ ಇಡುವಂತೆ ಚಂದ್ರಚೂಡ್ ಕೇಂದ್ರಕ್ಕೆ ನಿರ್ದೇಶನ ನೀಡಿದ್ದಾರೆ. ಜುಲೈ 2020 ರಿಂದ ಅಮೆರಿಕದ ಔಷಧಿ ಕಂಪನಿಗಳೊಂದಿಗೆ ಮಾತುಕತೆ ನಡೆಸುತ್ತಿದ್ದೇವೆ ಎಂದು ಕೇಂದ್ರ ಸರ್ಕಾರ ಇತ್ತೀಚೆಗೆ ಹೇಳಿಕೊಂಡಿದೆ. ಹಾಗಿದ್ದಲ್ಲಿ, ಒಂಬತ್ತು ತಿಂಗಳಲ್ಲಿ ಯಾವ ಪ್ರಗತಿಯನ್ನು ಸಾಧಿಸಲಾಗಿದೆ ಎಂಬುದು ಒಂದು ಪ್ರಮುಖ ಪ್ರಶ್ನೆಯಾಗಿದೆ.

ಆಮದಿಗಿಂತ ಹೆಚ್ಚು ನಿರ್ಣಾಯಕವಾದುದು, 2020 ರ ನವೆಂಬರ್‌ನಿಂದ ಪ್ರಧಾನ ಮಂತ್ರಿ ದೇಶೀಯ ಉತ್ಪಾದಕರಾದ ಸೀರಮ್ ಇನ್‌ಸ್ಟಿಟ್ಯೂಟ್ ಆಫ್ ಇಂಡಿಯಾ ಮತ್ತು ಭಾರತ್ ಬಯೋಟೆಕ್ ಜೊತೆ ನಡೆಸಿದ ಮಾತುಕತೆಗಳ ವಿವರಗಳು ಬಹಿರಂಗ ಆಗಬೇಕಿದೆ. ಕಳೆದ ವರುಷದಿಂದ ಇದು ನಡೆದೇ ಇದೆ. ದೇಶೀಯ ಉತ್ಪಾದಕರಿಂದ ಯಾವುದೇ ಪೂರ್ವ-ಆದೇಶವಿಲ್ಲದೆ ಪೂರೈಕೆಯ ಸ್ಪಷ್ಟ ಭರವಸೆ ಇಲ್ಲದೇ ಅಥವಾ ವಿಸ್ತರಣೆಗೆ ಅವರಿಗೆ ಬಂಡವಾಳದ ಬೆಂಬಲವಿಲ್ಲದೆ ಐದು ತಿಂಗಳುಗಳು  ನವೆಂಬರ್‌ನಿಂದ ಮಾರ್ಚಿವರೆಗೆ ಹೇಗೆ ಕಳೆದುಹೋಗಿವೆ ಎಂಬುದರ ಕುರಿತು ಸುಪ್ರೀಂ ಕೋರ್ಟ್ ವಿವರವಾದ ವಿಚಾರಣೆ ನಡೆಸಬೇಕು. ವಾಸ್ತವವಾಗಿ, ಸುಪ್ರೀಂಕೋರ್ಟ್ ಈ ಲೆಕ್ಕ ಪಡೆಯಲು ಎಸ್‍ಐಐ ಮತ್ತು ಭಾರತ್ ಬಯೋಟೆಕ್‌ನಿಂದ ನಿರ್ದಿಷ್ಟ ವಿವರಗಳನ್ನು ಪಡೆಯಬೇಕು, ಕಳೆದ ಡಿಸೆಂಬರ್‌ನಿಂದ ಅವುಗಳ ಮತ್ತು ಪಿಎಂಒ ನಡುವೆ ನಡೆದ ಸಂವಹನಗಳ ಎಲ್ಲ ವಿವರವನ್ನೂ ಪಡೆಯಬೇಕು.

ಲಸಿಕೆಯ ತೀವ್ರ ಕೊರತೆ ಸದ್ಯದಲ್ಲಿಯೇ ಎದುರಾಗುವ ಸಾಧ್ಯತೆ ಇರುವುದರಿಂದ ಸುಪ್ರೀಂಕೋರ್ಟ್ ಅಂತಹ ವಿವರಗಳನ್ನು ಕೇಳುವುದು ಉತ್ತಮವಾಗಿದೆ. ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿಯ ಮಹಾ ನಿರ್ದೇಶಕ ಬಲರಾಮ್‍ ಭಾರ್ಗವ ಅವರು ಅಧಿಕೃತವಾಗಿ, ದಿನಕ್ಕೆ 10 ಮಿಲಿಯನ್ ಡೋಸ್‍ಗಳ ಪೂರೈಕೆ ಜುಲೈ ಅಂತ್ಯದ ವೇಳೆಗೆ ಅಥವಾ ಆಗಸ್ಟ್ ಆರಂಭದಲ್ಲಿ ಮಾತ್ರ ಕಾರ್ಯಸಾಧ್ಯವಾಗಲಿದೆ ಎಂದು ಹೇಳಿದ್ದಾರೆ. ಈ ಗುರಿಯನ್ನು ಸಹ ತಲುಪಬಹುದೇ ಎಂದು ಅನೇಕ ತಜ್ಞರು ಪ್ರಶ್ನಿಸಿದ್ದಾರೆ. ಕಳೆದ ಡಿಸೆಂಬರ್‌ನಲ್ಲಿ ಎಸ್‌ಐಐ ಮತ್ತು ಭಾರತ್ ಬಯೋಟೆಕ್ ಒಟ್ಟಾಗಿ 300 ಮಿಲಿಯನ್ ಲಸಿಕೆಗಳಿಗೆ  ಅಡ್ವಾನ್ಸ್ ಆರ್ಡರ್‌ಗೆ ಒಪ್ಪಿಕೊಂಡಿದ್ದು, ಅದರಂತೆ ಉತ್ಪಾದನೆ ಮಾಡಿದ್ದರೆ, ಆಗಸ್ಟ್ ವೇಳೆಗೆ ಭಾರತವು ಸಂಪೂರ್ಣ ಲಸಿಕೆ ಹಾಕಬಹುದಿತ್ತು. ಆದರೆ ಈಗಿನ ಪರಿಸ್ಥಿತಿ ನಿರಾಶಾದಾಯಕವಾಗಿದೆ.

ಇದು ಪ್ರಧಾನಿ ನರೇಂದ್ರ ಮೋದಿಯವರ ದೊಡ್ಡ ವೈಫಲ್ಯ. ನವೆಂಬರ್‌ನಿಂದ ಮಾರ್ಚಿವರೆಗೆ ಕೇಂದ್ರ ಮತ್ತು ದೇಶೀಯ ಲಸಿಕೆ ಕಂಪನಿಗಳ ನಡುವೆ ರಾಜ್ಯಗಳಿಗೆ ಯಾವುದೇ ಸಂಬಂಧವಿಲ್ಲ ಎಂಬಂತೆ ನೀತಿ ಅಳವಡಿಸಲಾಗಿತ್ತು. 18-44 ವಯಸ್ಸಿನವರಿಗೆ ಲಸಿಕೆ ಒದಗಿಸಲು ಕೇಂದ್ರವು ಒಪ್ಪಿದ ನಂತರವಷ್ಟೇ ಮೇ 1 ರಂದು ರಾಜ್ಯ ಸರ್ಕಾರಗಳ ಮೇಲೆ ಜವಾಬ್ದಾರಿ ಹಾಕಿ ಕೇಂದ್ರ ನುಣುಚಿಕೊಳ್ಳುವ ಯತ್ನ ಮಾಡುತ್ತಿದೆ.

ಮುಂಚೂಣಿ ಆರೋಗ್ಯ ಕಾರ್ಯಕರ್ತರು ಮತ್ತು ಇತರ ದುರ್ಬಲ ಗುಂಪುಗಳು ಸೇರಿದಂತೆ 45ಕ್ಕಿಂತ ಹೆಚ್ಚು ವಯಸ್ಸಿನವರಿಗೆ ಸರ್ಕಾರವು ಉಚಿತ ಲಸಿಕೆಗಳನ್ನು ನೀಡಲು ಸಾಧ್ಯವಾದರೆ, ಅದೇ ನಿಯಮಗಳನ್ನು 18-44 ವಯಸ್ಸಿನವರಿಗೆ ಏಕೆ ವಿಸ್ತರಿಸಲಾಗಿಲ್ಲ? ಎಂದು ಸುಪ್ರೀಂಕೋರ್ಟ್ ಸರಿಯಾಗಿ ಮತ್ತು ಕಠಿಣವಾಗಿ ಪ್ರಶ್ನಿಸಿದೆ.

ದೇಶೀಯ ಲಸಿಕೆಗಳನ್ನು ಖರೀದಿಸಲು ರಾಜ್ಯಗಳೇಕೆ ಹೆಚ್ಚಿನ ದರ  ಪಾವತಿಸಬೇಕು? ಎಂದು ನ್ಯಾಯಾಲಯವು ಕೇಳಿದೆ. ಆದರೆ ಮೊದಲ ಸುತ್ತಿನಲ್ಲಿ ಅದೇ ಲಸಿಕೆಗಳನ್ನು ಹೆಚ್ಚು ಅಗ್ಗವಾಗಿ ಕೇಂದ್ರ ಖರೀದಿಸಿದೆ. ಇದು ಸರಿ. ಆದರೆ ರಾಜ್ಯಗಳು ಮತ್ತು ಖಾಸಗಿ ಆಸ್ಪತ್ರೆಗಳಿಗೆ ಕೋಟಾಗಳನ್ನು ಹಂಚುವ ಆಧಾರವೇನು? ಬೆಲೆಯಲ್ಲಿ ತಾರತಮ್ಯವೇಕೆ ಈ ಎಲ್ಲ ಪ್ರಶ್ನೆಗಳಿಗೂ  ನ್ಯಾಯಾಲಯ ಕೇಂದ್ರದಿಂದ ವಿವರ ಕೇಳಿದೆ.  ಮುಂದಿನ ವಾರಗಳು ಮತ್ತು ತಿಂಗಳುಗಳಲ್ಲಿ ಲಸಿಕಾ ಅಭಿಯಾನದ ನಿಖರವಾದ ಚಿತ್ರಣವನ್ನು ಪ್ರಸ್ತುತಪಡಿಸಲು ನ್ಯಾಯಾಲಯ ಕೇಂದ್ರವನ್ನು ಕೇಳಿದೆ ಮತ್ತು ಈ ಉದ್ದೇಶಕ್ಕಾಗಿ 35,000 ಕೋಟಿ ರೂ.ಗಳನ್ನು ಹೇಗೆ ವ್ಯಯ ಮಾಡಿದೆ ಮತ್ತು ಮಾಡಲಿದೆ ಎಂದು ಪ್ರಶ್ನೆ ಮಾಡಿರುವ ನ್ಯಾಯಾಲಯ ಈ ಪ್ರಕ್ರಿಯೆಯಲ್ಲಿ  ಯಾವುದೇ ಪಾರದರ್ಶಕತೆ ಇಲ್ಲ ಎಂಬುದನ್ನು ಗಮನಿಸಿದೆ.

ಸಂಕ್ಷಿಪ್ತವಾಗಿ, ಆತಂಕಕ್ಕೊಳಗಾದ ನಾಗರಿಕರು ಕೇಳುತ್ತಿರುವ ಎಲ್ಲಾ ಪ್ರಶ್ನೆಗಳನ್ನು ಸುಪ್ರೀಂ ಕೋರ್ಟ್ ಕೇಳಿದೆ. ನೀತಿ ನಿರೂಪಣೆಯನ್ನು ಸರಕಾರ ಮತ್ತು ಕಾರ್ಯಾಂಗಕ್ಕೆ  ಬಿಡಬೇಕೆಂದು ಕೇಂದ್ರದ ಕಾನೂನು ಅಧಿಕಾರಿ ನ್ಯಾಯಾಲಯಕ್ಕೆ ಸೂಚಿಸಿದಾಗ, “ನೀತಿ ನಿರೂಪಣೆಯು ಕಾರ್ಯನಿರ್ವಾಹಕನ ಏಕೈಕ ಡೊಮೇನ್ ಆಗಿ ಮುಂದುವರಿಯುತ್ತದೆ. ಆ ಪಾತ್ರವನ್ನು ವಹಿಸಿಕೊಳ್ಳುವ ಅಧಿಕಾರವನ್ನು ನ್ಯಾಯಾಂಗವು ಹೊಂದಿಲ್ಲ… ಈ ಅಧಿಕಾರಗಳ ವಿಭಜನೆಯು ಈ ನೀತಿಗಳ ನ್ಯಾಯಾಂಗ ವಿಮರ್ಶೆ ನಡೆಸಲು ನ್ಯಾಯಾಲಯಕ್ಕೆ ಅಡ್ಡಿ ಮಾಡಲಾರದು…..’ ಎಂದು ಸುಪ್ರೀಂಕೋರ್ಟ್ ದೃಢವಾಗಿ ಹೇಳಿದೆ.

ಇದರೊಂದಿಗೆ, ಭಾರತದ ಹಿಂದಿನ ಸಾರ್ವತ್ರಿಕ ಲಸಿಕಾ ಅಭಿಯಾನಗಳ ಹಿನ್ನೆಲೆಯಲ್ಲಿ ಲಸಿಕೆ ನೀತಿಯನ್ನು ಪರೀಕ್ಷಿಸುವುದನ್ನು ಮುಂದುವರಿಸುವುದಾಗಿ ನ್ಯಾಯಾಲಯ ಸ್ಪಷ್ಟಪಡಿಸಿದೆ.  ಜೀವಿಸುವ ಹಕ್ಕನ್ನು ರಕ್ಷಿಸುವ ಸಾಂವಿಧಾನಿಕ ಬಾಧ್ಯತೆಯನ್ನು ಕೇಂದ್ರವು ಪೂರೈಸುವ ಅಗತ್ಯವಿದೆ.


ಇದನ್ನೂ ಓದಿ: ಖಾಸಗಿ ವಲಯದ ಶೇ.50 ರಷ್ಟು ಲಸಿಕೆ  9 ಕಾರ್ಪೋರೇಟ್‍ ಆಸ್ಪತ್ರೆಗಳ ಪಾಲು: ಸಣ್ಣ ನಗರಗಳಲ್ಲಿ ಲಸಿಕೆ ಕೊರತೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...