Homeಕರೋನಾ ತಲ್ಲಣಒಬ್ಬ ಅಧಿಕಾರಿಯ 15 ದಿನ ಕೆಲಸ: 7 ಸಾವಿರದಿಂದ 2,600ಕ್ಕೆ ಇಳಿದ ದೈನಂದಿನ ಪಾಸಿಟಿವ್ ಕೇಸ್‌

ಒಬ್ಬ ಅಧಿಕಾರಿಯ 15 ದಿನ ಕೆಲಸ: 7 ಸಾವಿರದಿಂದ 2,600ಕ್ಕೆ ಇಳಿದ ದೈನಂದಿನ ಪಾಸಿಟಿವ್ ಕೇಸ್‌

- Advertisement -
- Advertisement -

ಐಎಎಸ್ ಅಧಿಕಾರಿ ಗಗನ್‌ದೀಪ್ ಸಿಂಗ್ ಬೇಡಿ ಅವರನ್ನು ಗ್ರೇಟರ್ ಚೆನ್ನೈ ಕಾರ್ಪೊರೇಶನ್‌ನ (ಜಿಸಿಸಿ) ಆಯುಕ್ತರಾಗಿ ನೇಮಕವಾಗಿ ಇನ್ನೂ ಒಂದು ತಿಂಗಳೂ ಆಗಿಲ್ಲ. ಆದರೆ ಕೋವಿಡ್ ನಿರ್ವಹಣೆ-ನಿಯಂತ್ರಣದಲ್ಲಿ ಅವರು ಸಾಕಷ್ಟು ಯಶಸ್ಸು ಪಡೆದಿದ್ದಾರೆ ಎಂದು ದಿ ಪ್ರಿಂಟ್ ವರದಿ ಮಾಡಿದೆ.

ಕಳೆದ ತಿಂಗಳು ಪ್ರಧಾನಿ ಮೋದಿಯವರೊಂದಿಗೆ ಕೇಂದ್ರ ಆರೋಗ್ಯ ಸಚಿವಾಲಯವು ಹಂಚಿಕೊಂಡ ಅತ್ಯುತ್ತಮ  ಕೋವಿಡ್ ಉಪಕ್ರಮಗಳಲ್ಲಿ ಈ ಐಎಎಸ್ ಅಧಿಕಾರಿ ತೆಗೆದುಕೊಂಡ ಕ್ರಮಗಳು ಉಲ್ಲೇಖಿತವಾಗಿವೆ. ಟ್ಯಾಕ್ಸಿ ಆಂಬ್ಯುಲೆನ್ಸ್ ಸೇವೆಯನ್ನು ಗಗನದೀಪ್ ಆರಂಭಿಸಿದರು. ವಿಕಲಚೇತನರಿಗೆ ಮನೆಯಲ್ಲಿಯೇ ಲಸಿಕೆ ನೀಡುವ ವ್ಯವಸ್ಥೆ ಮಾಡಿದರು. 2004ರ ಸುನಾಮಿ ಮತ್ತು 2018ರ ರ ಗಾಜಾ ಚಂಡಮಾರುತದ ಸಮಯದಲ್ಲಿ ಅವರು ಮಾಡಿದ ಕೆಲಸದ ಕಾರಣದಿಂದಾಗಿ ಅವರಿಗೆ  ‘ವಿಪತ್ತು ನಿರ್ವಹಣೆಯಲ್ಲಿ ನಿಪುಣ’ ಎಂಬ ಹೆಗ್ಗಳಿಕೆ ಸಲ್ಲಿದೆ.

ಹೊಸದಾಗಿ ಚುನಾಯಿತಗೊಂಡ ತಮಿಳುನಾಡಿನ ಸ್ಟಾಲಿನ್  ಸರ್ಕಾರ, ಮೇ 9 ರಂದು ಗಗನದೀಪ್‍ ಸಿಂಗ್‍ ಅವರನ್ನು ಗ್ರೇಟರ್ ಚೆನ್ನೈ ಕಾರ್ಪೊರೇಶನ್‌ನ ಆಯುಕ್ತರನ್ನಾಗಿ ನೇಮಿಸಿತು.

ನಂತರದ ದಿನಗಳಲ್ಲಿ, ಚೆನ್ನೈನ ಕೋವಿಡ್ ಪರಿಸ್ಥಿತಿಯಲ್ಲಿ ಒಂದು ತಿರುವು ಕಂಡುಬಂದಿದೆ. ಮೇ ಮಧ್ಯದಲ್ಲಿ ಪ್ರತಿದಿನ ಸುಮಾರು 7 ಸಾವಿರ ಪ್ರಕರಣಗಳನ್ನು ದಾಖಲಿಸುತ್ತಿದ್ದ ನಗರವು ತಿಂಗಳ ಅಂತ್ಯದ ವೇಳೆಗೆ 2,600ಕ್ಕಿಂತ ಕ್ಕಿಂತ ಕಡಿಮೆ ಪ್ರಕರಣಗಳನ್ನು ದಾಖಲಿಸಿದೆ.

ದಿ ಪ್ರಿಂಟ್‌ನೊಂದಿಗೆ ಮಾತನಾಡಿದ  ಗಗನದೀಪ್  ಬೇಡಿ, ‘ಕೋವಿಡ್ ನಿರ್ವಹಣೆಗಾಗಿ ತಳಮಟ್ಟದಲ್ಲಿ ಕೆಲಸ ಮಾಡುವ  ಪರಿಷ್ಕೃತ ಮೈಕ್ರೋ-ಪ್ಲ್ಯಾನ್’  ರೂಪಿಸಿದ್ದು ಇದಕ್ಕೆ ಕಾರಣವೆಂದು ಹೇಳಿದ್ದಾರೆ. ಆರೋಗ್ಯ ಕಾರ್ಯಕರ್ತರ ಕಣ್ಗಾವಲು ಮೂಲಕ ಸೋಂಕನ್ನು ಮೊದಲೇ ಗುರುತಿಸಲು ಈ ಯೋಜನೆಯು ಆದ್ಯತೆ ನೀಡುತ್ತದೆ. ಇದು  ಸೋಂಕು ಹರಡುವಿಕೆ ಕಡಿಮೆ ಮಾಡಲು ಸಹಾಯ ಮಾಡಿದೆ ಎಂದು ಬೇಡಿ ಹೇಳಿದ್ದಾರೆ.

1993ರ ಬ್ಯಾಚ್‌ನ ಈ ಐಎಎಸ್ ಅಧಿಕಾರಿಯು ದಿನಕ್ಕೆ 13-14 ಗಂಟೆಗಳ ಕಾಲ ಕೆಲಸ ಮಾಡುತ್ತಾರೆ. ಬೇಡಿ ಅವರೊಂದಿಗೆ  ಸೇವೆ ಸಲ್ಲಿಸಿರುವ ಕಾಮರಾಜ್ ಪೋರ್ಟ್ ಲಿಮಿಟೆಡ್‌ನ ಅಧ್ಯಕ್ಷ ಸುನಿಲ್ ಪಾಲಿವಾಲ್, “ಅವರು ತನ್ನ ಹೃದಯದಿಂದ ಕೆಲಸ ಮಾಡುತ್ತಾರೆ” ಎಂದು ಹೇಳಿದ್ದಾರೆ. “26 ವರ್ಷಗಳ ಸೇವೆಯ ನಂತರವೂ ಅವರ ಉತ್ಸಾಹವು ಯಾವುದೇ ಯುವಕನಿಗಿಂತ ಕಡಿಮೆಯಿಲ್ಲ, ಅಷ್ಟು ಯೌವನ ಅವರಲ್ಲಿದೆ’ ಎಂದು ಶ್ಲಾಘಿಸಿದ್ದಾರೆ.

ಜಿಸಿಸಿಯಲ್ಲಿ ಬೇಡಿ ಅವರ ಅತ್ಯಂತ ಶ್ಲಾಘನೀಯ ಉಪಕ್ರಮವೆಂದರೆ ಅಂಗವಿಕಲರಿಗೆ ಮನೆಯಲ್ಲಿಯೇ ವ್ಯಾಕ್ಸಿನೇಷನ್ ಸೇವೆ ನೀಡುವ ಕ್ರಮ. ಲಸಿಕಾ ಅಭಿಯಾನದ ಬಗ್ಗೆ ಮಾತನಾಡಿದ ಬೇಡಿ, ಜಿಸಿಸಿ ಅಂಗವಿಕಲರಿಗೆ ಮೂರು ರೀತಿಯ ವ್ಯಾಕ್ಸಿನೇಷನ್ ಬೆಂಬಲವನ್ನು ಆಯೋಜಿಸಿದೆ ಎಂದು ಹೇಳಿದರು

ಮತ್ತೊಂದು ಪ್ರಮುಖ ಕ್ರಮವೆಂದರೆ, ಜೊಮಾಟೊ, ಅಮೆಜಾನ್, ಉಬರ್ ಮತ್ತು ಸ್ವಿಗ್ಗಿ ಮುಂತಾದ ಸೇವಾ ಕಂಪನಿಗಳಲ್ಲಿನ ವಿತರಣಾ ಸಿಬ್ಬಂದಿಗೆ (ಡೆಲಿವರಿ ಸ್ಟಾಫ್‍)‘ಆದ್ಯತೆಯ ಕೆಲಸಗಾರರು’ ಎಂದು ಲಸಿಕೆ ಹಾಕುತ್ತಿದ್ದಾರೆ. ಇವರು ದಿನವೂ ಸಾರ್ವಜನಿಕರ ಸಂಪರ್ಕದಲ್ಲಿ ಇರುವ ಕಾರಣ ಈ ಕ್ರಮ ಕೈಗೊಳ್ಳಲಾಗಿದೆ.

ಚೆನ್ನೈನಲ್ಲಿ ಪ್ರಾರಂಭಿಸಲಾದ ಟ್ಯಾಕ್ಸಿ ಆಂಬ್ಯುಲೆನ್ಸ್‌ಗಳು ಆಮ್ಲಜನಕ-ಸುಸಜ್ಜಿತ 108 ಆಂಬುಲೆನ್ಸ್‌ಗಳ ಮೇಲಿನ ಒತ್ತಡವನ್ನು ಕಡಿಮೆ ಮಾಡಿವೆ. ಜಿಸಿಸಿ 250 ಟ್ಯಾಕ್ಸಿ ಆಂಬುಲೆನ್ಸ್‌ಗಳನ್ನು ನಿಯೋಜನೆ ಮಾಡಿದೆ. ಇವು ಸ್ವಲ್ಪ ಅನಾರೋಗ್ಯದ ರೋಗಿಗಳಿಗೆ, ಆಮ್ಲಜನಕದ ಅಗತ್ಯವಿಲ್ಲದವರನ್ನು ಆಸ್ಪತ್ರೆಗೆ ಸೇರಿಸಲು ಸಹಾಯ ಮಾಡುತ್ತವೆ.

ಇದರ ಜೊತೆಗೆ, 2020ರಲ್ಲಿ ನೇಮಕಗೊಂಡ ಸ್ಥಳೀಯ ಸಮುದಾಯಗಳ 12 ಸಾವಿರ ಆರೋಗ್ಯ ಕಾರ್ಯಕರ್ತರ ನೆಟ್‌ವರ್ಕ್ ಬಲಪಡಿಸಿದ್ದು, ಇವರು ಮನೆಮನೆಗೆ ತೆರಳಿ ಟೆಸ್ಟಿಂಗ್‍ ಮತ್ತು ಇತರ ಚಿಕಿತ್ಸೆಗೆ ನೆರವಾಗುತ್ತಿದ್ದಾರೆ.

ಚೈನ್ನೈ ಮಹಾನಗರ ಪಾಲಿಕೆ ಅಡಿ ಒಟ್ಟು 80 ಲಕ್ಷ ಜನಸಂಖ್ಯೆ ಇದ್ದು, 200 ವಾರ್ಡ್‍ಗಳಿವೆ. ಕಾರ್ಪೋರೇಷನ್ ಆರೋಗ್ಯ ಕಾರ್ಯಕರ್ತರು  ಮನೆ-ಮನೆಗೆ  ತೆರಳಿ ಪರೀಕ್ಷೆ ಮತ್ತು ತಪಾಸಣೆ ನಡೆಸುತ್ತಾರೆ. ಅವರು ಕ್ವಾರಂಟೈನ್‌ನಲ್ಲಿರುವವರಿಗೆ ಅಗತ್ಯ ವಸ್ತುಗಳನ್ನು ಪೂರೈಸುತ್ತಿದ್ದಾರೆ.

ಗಗನದೀಪ್‍ ಬೇಡಿ ದೈನಂದಿನ ಪರಿಶೀಲನಾ ಸಭೆಗಳನ್ನು ನಡೆಸುತ್ತಾರೆ. ಮನೆಮನೆ ಪರೀಕ್ಷೆ ಮತ್ತು ಜ್ವರ ಚಿಕಿತ್ಸೆಯ ಶಿಬಿರಗಳನ್ನು ನಡೆಸಲು ವಿಭಾಗ ಮಟ್ಟದಲ್ಲಿ 200 ಸಂಚಾರಿ ತಂಡಗಳನ್ನು ನಿಯೋಜಿಸಿದ್ದಾರೆ. ಇದರ ಜೊತೆಗೆ, ಮಾರುಕಟ್ಟೆಯಲ್ಲಿ ನಿತ್ಯ ವ್ಯಾಪಾರ ಮಾಡುವ ಹೆಚ್ಚಿನ ಅಪಾಯದ ಗುಂಪುಗಳನ್ನು ಪರೀಕ್ಷಿಸಲು 10  ಸಂಚಾರಿ ಪರೀಕ್ಷಾ ಘಟಕಗಳನ್ನು ನಿಯೋಜನೆ ಮಾಡಿದ್ದಾರೆ.

ತಂತ್ರಜ್ಞಾನ ಬಳಕೆಯನ್ನು  ಉತ್ತೇಜಿಸುವ ಗಗನದೀಪ್ ಬೇಡಿ,  ಜಿಸಿಸಿಯಲ್ಲೂ ಸಾಮಾಜಿಕ ಮಾಧ್ಯಮದ ಅನ್ವಯವನ್ನು ಹೆಚ್ಚಿಸಿದ್ದಾರೆ. “ಫೇಸ್‌ಬುಕ್ ಮತ್ತು ಟ್ವಿಟರ್‌ನಲ್ಲಿ ಕೋವಿಡ್ ದೂರುಗಳನ್ನು ಹುಡುಕಲು ಮತ್ತು ಅವುಗಳನ್ನು ಸಂಪರ್ಕ ಮಾಡಲು ಕಂಟ್ರೋಲ್ ರೂಮ್ ತಂಡಕ್ಕೆ ಸೂಚನೆ ನೀಡಿದ್ದೇನೆ. ಅಂತಹ ವಿನಂತಿಗಳನ್ನು ಟ್ಯಾಗ್ ಮಾಡಿದ ನಂತರ ತಕ್ಷಣ ಕ್ರಮ ಕೈಗೊಳ್ಳಲಾಗುತ್ತದೆ” ಎಂದು ಹೇಳಿದರು.

ಒಬ್ಬ ಅಧಿಕಾರಿ ಕೇವಲ 15 ದಿನದಲ್ಲಿ 7 ಸಾವಿರದಷ್ಟು ಇದ್ದ ಪಾಸಿಟಿವ್ ಕೇಸ್‌ಗಳನ್ನು 2,600ಕ್ಕೆ ಇಳಿಸಿದ್ದಾರೆ. ವೈಜ್ಞಾನಿಕ ಮನೋಭಾವದ ಹೊಸ ಡಿಎಂಕೆ ಸರ್ಕಾರ ಅವರಿಗೆ ಬೆಂಬಲವಾಗಿ ನಿಂತಿದೆ.


ಇದನ್ನೂ ಓದಿ: ಲಸಿಕೆ ಕುರಿತು ಕೇಂದ್ರಕ್ಕೆ ಸುಪ್ರೀಂಕೋರ್ಟ್ ಪ್ರಶ್ನೆಗಳು: ಕಟಕಟೆಯಲ್ಲಿ ಮೋದಿ ಸರ್ಕಾರ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭೂಮಿ, ಆಕಾಶದ ಬಳಿಕ ಈಗ ಬಾಹ್ಯಾಕಾಶವೇ ಯುದ್ಧಭೂಮಿ: ಕಕ್ಷೆಯಲ್ಲಿ ಶಸ್ತ್ರಾಸ್ತ್ರ ನಿಯೋಜನೆ ಒಪ್ಪಿಕೊಂಡ ಅಮೆರಿಕ

ಭವಿಷ್ಯದಲ್ಲಿ ಬೃಹತ್ ಯುದ್ಧವೇನಾದರೂ ಸಂಭವಿಸಿದರೆ ಅದು ಕೇವಲ ಭೂಮಿ, ಸಮುದ್ರ ಮತ್ತು ವಾಯುಮಾರ್ಗಕ್ಕೆ ಮಾತ್ರ ಸೀಮಿತವಾಗದೆ ಬಾಹ್ಯಾಕಾಶಕ್ಕೂ ವಿಸ್ತರಿಸಲಿದೆ ಎಂಬುದನ್ನು ಸಾಬೀತುಪಡಿಸುವ ರೀತಿಯಲ್ಲಿ ಅಮೆರಿಕ ಹೇಳಿಕೊಂಡಿದೆ. ಭೂಮಿಯ ಕಕ್ಷೆಯಲ್ಲಿ ತಾನು ಮಿಲಿಟರಿ ಶಸ್ತ್ರಾಸ್ತ್ರಗಳನ್ನು...

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...