Homeಕರೋನಾ ತಲ್ಲಣಒಬ್ಬ ಅಧಿಕಾರಿಯ 15 ದಿನ ಕೆಲಸ: 7 ಸಾವಿರದಿಂದ 2,600ಕ್ಕೆ ಇಳಿದ ದೈನಂದಿನ ಪಾಸಿಟಿವ್ ಕೇಸ್‌

ಒಬ್ಬ ಅಧಿಕಾರಿಯ 15 ದಿನ ಕೆಲಸ: 7 ಸಾವಿರದಿಂದ 2,600ಕ್ಕೆ ಇಳಿದ ದೈನಂದಿನ ಪಾಸಿಟಿವ್ ಕೇಸ್‌

- Advertisement -
- Advertisement -

ಐಎಎಸ್ ಅಧಿಕಾರಿ ಗಗನ್‌ದೀಪ್ ಸಿಂಗ್ ಬೇಡಿ ಅವರನ್ನು ಗ್ರೇಟರ್ ಚೆನ್ನೈ ಕಾರ್ಪೊರೇಶನ್‌ನ (ಜಿಸಿಸಿ) ಆಯುಕ್ತರಾಗಿ ನೇಮಕವಾಗಿ ಇನ್ನೂ ಒಂದು ತಿಂಗಳೂ ಆಗಿಲ್ಲ. ಆದರೆ ಕೋವಿಡ್ ನಿರ್ವಹಣೆ-ನಿಯಂತ್ರಣದಲ್ಲಿ ಅವರು ಸಾಕಷ್ಟು ಯಶಸ್ಸು ಪಡೆದಿದ್ದಾರೆ ಎಂದು ದಿ ಪ್ರಿಂಟ್ ವರದಿ ಮಾಡಿದೆ.

ಕಳೆದ ತಿಂಗಳು ಪ್ರಧಾನಿ ಮೋದಿಯವರೊಂದಿಗೆ ಕೇಂದ್ರ ಆರೋಗ್ಯ ಸಚಿವಾಲಯವು ಹಂಚಿಕೊಂಡ ಅತ್ಯುತ್ತಮ  ಕೋವಿಡ್ ಉಪಕ್ರಮಗಳಲ್ಲಿ ಈ ಐಎಎಸ್ ಅಧಿಕಾರಿ ತೆಗೆದುಕೊಂಡ ಕ್ರಮಗಳು ಉಲ್ಲೇಖಿತವಾಗಿವೆ. ಟ್ಯಾಕ್ಸಿ ಆಂಬ್ಯುಲೆನ್ಸ್ ಸೇವೆಯನ್ನು ಗಗನದೀಪ್ ಆರಂಭಿಸಿದರು. ವಿಕಲಚೇತನರಿಗೆ ಮನೆಯಲ್ಲಿಯೇ ಲಸಿಕೆ ನೀಡುವ ವ್ಯವಸ್ಥೆ ಮಾಡಿದರು. 2004ರ ಸುನಾಮಿ ಮತ್ತು 2018ರ ರ ಗಾಜಾ ಚಂಡಮಾರುತದ ಸಮಯದಲ್ಲಿ ಅವರು ಮಾಡಿದ ಕೆಲಸದ ಕಾರಣದಿಂದಾಗಿ ಅವರಿಗೆ  ‘ವಿಪತ್ತು ನಿರ್ವಹಣೆಯಲ್ಲಿ ನಿಪುಣ’ ಎಂಬ ಹೆಗ್ಗಳಿಕೆ ಸಲ್ಲಿದೆ.

ಹೊಸದಾಗಿ ಚುನಾಯಿತಗೊಂಡ ತಮಿಳುನಾಡಿನ ಸ್ಟಾಲಿನ್  ಸರ್ಕಾರ, ಮೇ 9 ರಂದು ಗಗನದೀಪ್‍ ಸಿಂಗ್‍ ಅವರನ್ನು ಗ್ರೇಟರ್ ಚೆನ್ನೈ ಕಾರ್ಪೊರೇಶನ್‌ನ ಆಯುಕ್ತರನ್ನಾಗಿ ನೇಮಿಸಿತು.

ನಂತರದ ದಿನಗಳಲ್ಲಿ, ಚೆನ್ನೈನ ಕೋವಿಡ್ ಪರಿಸ್ಥಿತಿಯಲ್ಲಿ ಒಂದು ತಿರುವು ಕಂಡುಬಂದಿದೆ. ಮೇ ಮಧ್ಯದಲ್ಲಿ ಪ್ರತಿದಿನ ಸುಮಾರು 7 ಸಾವಿರ ಪ್ರಕರಣಗಳನ್ನು ದಾಖಲಿಸುತ್ತಿದ್ದ ನಗರವು ತಿಂಗಳ ಅಂತ್ಯದ ವೇಳೆಗೆ 2,600ಕ್ಕಿಂತ ಕ್ಕಿಂತ ಕಡಿಮೆ ಪ್ರಕರಣಗಳನ್ನು ದಾಖಲಿಸಿದೆ.

ದಿ ಪ್ರಿಂಟ್‌ನೊಂದಿಗೆ ಮಾತನಾಡಿದ  ಗಗನದೀಪ್  ಬೇಡಿ, ‘ಕೋವಿಡ್ ನಿರ್ವಹಣೆಗಾಗಿ ತಳಮಟ್ಟದಲ್ಲಿ ಕೆಲಸ ಮಾಡುವ  ಪರಿಷ್ಕೃತ ಮೈಕ್ರೋ-ಪ್ಲ್ಯಾನ್’  ರೂಪಿಸಿದ್ದು ಇದಕ್ಕೆ ಕಾರಣವೆಂದು ಹೇಳಿದ್ದಾರೆ. ಆರೋಗ್ಯ ಕಾರ್ಯಕರ್ತರ ಕಣ್ಗಾವಲು ಮೂಲಕ ಸೋಂಕನ್ನು ಮೊದಲೇ ಗುರುತಿಸಲು ಈ ಯೋಜನೆಯು ಆದ್ಯತೆ ನೀಡುತ್ತದೆ. ಇದು  ಸೋಂಕು ಹರಡುವಿಕೆ ಕಡಿಮೆ ಮಾಡಲು ಸಹಾಯ ಮಾಡಿದೆ ಎಂದು ಬೇಡಿ ಹೇಳಿದ್ದಾರೆ.

1993ರ ಬ್ಯಾಚ್‌ನ ಈ ಐಎಎಸ್ ಅಧಿಕಾರಿಯು ದಿನಕ್ಕೆ 13-14 ಗಂಟೆಗಳ ಕಾಲ ಕೆಲಸ ಮಾಡುತ್ತಾರೆ. ಬೇಡಿ ಅವರೊಂದಿಗೆ  ಸೇವೆ ಸಲ್ಲಿಸಿರುವ ಕಾಮರಾಜ್ ಪೋರ್ಟ್ ಲಿಮಿಟೆಡ್‌ನ ಅಧ್ಯಕ್ಷ ಸುನಿಲ್ ಪಾಲಿವಾಲ್, “ಅವರು ತನ್ನ ಹೃದಯದಿಂದ ಕೆಲಸ ಮಾಡುತ್ತಾರೆ” ಎಂದು ಹೇಳಿದ್ದಾರೆ. “26 ವರ್ಷಗಳ ಸೇವೆಯ ನಂತರವೂ ಅವರ ಉತ್ಸಾಹವು ಯಾವುದೇ ಯುವಕನಿಗಿಂತ ಕಡಿಮೆಯಿಲ್ಲ, ಅಷ್ಟು ಯೌವನ ಅವರಲ್ಲಿದೆ’ ಎಂದು ಶ್ಲಾಘಿಸಿದ್ದಾರೆ.

ಜಿಸಿಸಿಯಲ್ಲಿ ಬೇಡಿ ಅವರ ಅತ್ಯಂತ ಶ್ಲಾಘನೀಯ ಉಪಕ್ರಮವೆಂದರೆ ಅಂಗವಿಕಲರಿಗೆ ಮನೆಯಲ್ಲಿಯೇ ವ್ಯಾಕ್ಸಿನೇಷನ್ ಸೇವೆ ನೀಡುವ ಕ್ರಮ. ಲಸಿಕಾ ಅಭಿಯಾನದ ಬಗ್ಗೆ ಮಾತನಾಡಿದ ಬೇಡಿ, ಜಿಸಿಸಿ ಅಂಗವಿಕಲರಿಗೆ ಮೂರು ರೀತಿಯ ವ್ಯಾಕ್ಸಿನೇಷನ್ ಬೆಂಬಲವನ್ನು ಆಯೋಜಿಸಿದೆ ಎಂದು ಹೇಳಿದರು

ಮತ್ತೊಂದು ಪ್ರಮುಖ ಕ್ರಮವೆಂದರೆ, ಜೊಮಾಟೊ, ಅಮೆಜಾನ್, ಉಬರ್ ಮತ್ತು ಸ್ವಿಗ್ಗಿ ಮುಂತಾದ ಸೇವಾ ಕಂಪನಿಗಳಲ್ಲಿನ ವಿತರಣಾ ಸಿಬ್ಬಂದಿಗೆ (ಡೆಲಿವರಿ ಸ್ಟಾಫ್‍)‘ಆದ್ಯತೆಯ ಕೆಲಸಗಾರರು’ ಎಂದು ಲಸಿಕೆ ಹಾಕುತ್ತಿದ್ದಾರೆ. ಇವರು ದಿನವೂ ಸಾರ್ವಜನಿಕರ ಸಂಪರ್ಕದಲ್ಲಿ ಇರುವ ಕಾರಣ ಈ ಕ್ರಮ ಕೈಗೊಳ್ಳಲಾಗಿದೆ.

ಚೆನ್ನೈನಲ್ಲಿ ಪ್ರಾರಂಭಿಸಲಾದ ಟ್ಯಾಕ್ಸಿ ಆಂಬ್ಯುಲೆನ್ಸ್‌ಗಳು ಆಮ್ಲಜನಕ-ಸುಸಜ್ಜಿತ 108 ಆಂಬುಲೆನ್ಸ್‌ಗಳ ಮೇಲಿನ ಒತ್ತಡವನ್ನು ಕಡಿಮೆ ಮಾಡಿವೆ. ಜಿಸಿಸಿ 250 ಟ್ಯಾಕ್ಸಿ ಆಂಬುಲೆನ್ಸ್‌ಗಳನ್ನು ನಿಯೋಜನೆ ಮಾಡಿದೆ. ಇವು ಸ್ವಲ್ಪ ಅನಾರೋಗ್ಯದ ರೋಗಿಗಳಿಗೆ, ಆಮ್ಲಜನಕದ ಅಗತ್ಯವಿಲ್ಲದವರನ್ನು ಆಸ್ಪತ್ರೆಗೆ ಸೇರಿಸಲು ಸಹಾಯ ಮಾಡುತ್ತವೆ.

ಇದರ ಜೊತೆಗೆ, 2020ರಲ್ಲಿ ನೇಮಕಗೊಂಡ ಸ್ಥಳೀಯ ಸಮುದಾಯಗಳ 12 ಸಾವಿರ ಆರೋಗ್ಯ ಕಾರ್ಯಕರ್ತರ ನೆಟ್‌ವರ್ಕ್ ಬಲಪಡಿಸಿದ್ದು, ಇವರು ಮನೆಮನೆಗೆ ತೆರಳಿ ಟೆಸ್ಟಿಂಗ್‍ ಮತ್ತು ಇತರ ಚಿಕಿತ್ಸೆಗೆ ನೆರವಾಗುತ್ತಿದ್ದಾರೆ.

ಚೈನ್ನೈ ಮಹಾನಗರ ಪಾಲಿಕೆ ಅಡಿ ಒಟ್ಟು 80 ಲಕ್ಷ ಜನಸಂಖ್ಯೆ ಇದ್ದು, 200 ವಾರ್ಡ್‍ಗಳಿವೆ. ಕಾರ್ಪೋರೇಷನ್ ಆರೋಗ್ಯ ಕಾರ್ಯಕರ್ತರು  ಮನೆ-ಮನೆಗೆ  ತೆರಳಿ ಪರೀಕ್ಷೆ ಮತ್ತು ತಪಾಸಣೆ ನಡೆಸುತ್ತಾರೆ. ಅವರು ಕ್ವಾರಂಟೈನ್‌ನಲ್ಲಿರುವವರಿಗೆ ಅಗತ್ಯ ವಸ್ತುಗಳನ್ನು ಪೂರೈಸುತ್ತಿದ್ದಾರೆ.

ಗಗನದೀಪ್‍ ಬೇಡಿ ದೈನಂದಿನ ಪರಿಶೀಲನಾ ಸಭೆಗಳನ್ನು ನಡೆಸುತ್ತಾರೆ. ಮನೆಮನೆ ಪರೀಕ್ಷೆ ಮತ್ತು ಜ್ವರ ಚಿಕಿತ್ಸೆಯ ಶಿಬಿರಗಳನ್ನು ನಡೆಸಲು ವಿಭಾಗ ಮಟ್ಟದಲ್ಲಿ 200 ಸಂಚಾರಿ ತಂಡಗಳನ್ನು ನಿಯೋಜಿಸಿದ್ದಾರೆ. ಇದರ ಜೊತೆಗೆ, ಮಾರುಕಟ್ಟೆಯಲ್ಲಿ ನಿತ್ಯ ವ್ಯಾಪಾರ ಮಾಡುವ ಹೆಚ್ಚಿನ ಅಪಾಯದ ಗುಂಪುಗಳನ್ನು ಪರೀಕ್ಷಿಸಲು 10  ಸಂಚಾರಿ ಪರೀಕ್ಷಾ ಘಟಕಗಳನ್ನು ನಿಯೋಜನೆ ಮಾಡಿದ್ದಾರೆ.

ತಂತ್ರಜ್ಞಾನ ಬಳಕೆಯನ್ನು  ಉತ್ತೇಜಿಸುವ ಗಗನದೀಪ್ ಬೇಡಿ,  ಜಿಸಿಸಿಯಲ್ಲೂ ಸಾಮಾಜಿಕ ಮಾಧ್ಯಮದ ಅನ್ವಯವನ್ನು ಹೆಚ್ಚಿಸಿದ್ದಾರೆ. “ಫೇಸ್‌ಬುಕ್ ಮತ್ತು ಟ್ವಿಟರ್‌ನಲ್ಲಿ ಕೋವಿಡ್ ದೂರುಗಳನ್ನು ಹುಡುಕಲು ಮತ್ತು ಅವುಗಳನ್ನು ಸಂಪರ್ಕ ಮಾಡಲು ಕಂಟ್ರೋಲ್ ರೂಮ್ ತಂಡಕ್ಕೆ ಸೂಚನೆ ನೀಡಿದ್ದೇನೆ. ಅಂತಹ ವಿನಂತಿಗಳನ್ನು ಟ್ಯಾಗ್ ಮಾಡಿದ ನಂತರ ತಕ್ಷಣ ಕ್ರಮ ಕೈಗೊಳ್ಳಲಾಗುತ್ತದೆ” ಎಂದು ಹೇಳಿದರು.

ಒಬ್ಬ ಅಧಿಕಾರಿ ಕೇವಲ 15 ದಿನದಲ್ಲಿ 7 ಸಾವಿರದಷ್ಟು ಇದ್ದ ಪಾಸಿಟಿವ್ ಕೇಸ್‌ಗಳನ್ನು 2,600ಕ್ಕೆ ಇಳಿಸಿದ್ದಾರೆ. ವೈಜ್ಞಾನಿಕ ಮನೋಭಾವದ ಹೊಸ ಡಿಎಂಕೆ ಸರ್ಕಾರ ಅವರಿಗೆ ಬೆಂಬಲವಾಗಿ ನಿಂತಿದೆ.


ಇದನ್ನೂ ಓದಿ: ಲಸಿಕೆ ಕುರಿತು ಕೇಂದ್ರಕ್ಕೆ ಸುಪ್ರೀಂಕೋರ್ಟ್ ಪ್ರಶ್ನೆಗಳು: ಕಟಕಟೆಯಲ್ಲಿ ಮೋದಿ ಸರ್ಕಾರ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...