Homeಕರೋನಾ ತಲ್ಲಣಒಬ್ಬ ಅಧಿಕಾರಿಯ 15 ದಿನ ಕೆಲಸ: 7 ಸಾವಿರದಿಂದ 2,600ಕ್ಕೆ ಇಳಿದ ದೈನಂದಿನ ಪಾಸಿಟಿವ್ ಕೇಸ್‌

ಒಬ್ಬ ಅಧಿಕಾರಿಯ 15 ದಿನ ಕೆಲಸ: 7 ಸಾವಿರದಿಂದ 2,600ಕ್ಕೆ ಇಳಿದ ದೈನಂದಿನ ಪಾಸಿಟಿವ್ ಕೇಸ್‌

- Advertisement -
- Advertisement -

ಐಎಎಸ್ ಅಧಿಕಾರಿ ಗಗನ್‌ದೀಪ್ ಸಿಂಗ್ ಬೇಡಿ ಅವರನ್ನು ಗ್ರೇಟರ್ ಚೆನ್ನೈ ಕಾರ್ಪೊರೇಶನ್‌ನ (ಜಿಸಿಸಿ) ಆಯುಕ್ತರಾಗಿ ನೇಮಕವಾಗಿ ಇನ್ನೂ ಒಂದು ತಿಂಗಳೂ ಆಗಿಲ್ಲ. ಆದರೆ ಕೋವಿಡ್ ನಿರ್ವಹಣೆ-ನಿಯಂತ್ರಣದಲ್ಲಿ ಅವರು ಸಾಕಷ್ಟು ಯಶಸ್ಸು ಪಡೆದಿದ್ದಾರೆ ಎಂದು ದಿ ಪ್ರಿಂಟ್ ವರದಿ ಮಾಡಿದೆ.

ಕಳೆದ ತಿಂಗಳು ಪ್ರಧಾನಿ ಮೋದಿಯವರೊಂದಿಗೆ ಕೇಂದ್ರ ಆರೋಗ್ಯ ಸಚಿವಾಲಯವು ಹಂಚಿಕೊಂಡ ಅತ್ಯುತ್ತಮ  ಕೋವಿಡ್ ಉಪಕ್ರಮಗಳಲ್ಲಿ ಈ ಐಎಎಸ್ ಅಧಿಕಾರಿ ತೆಗೆದುಕೊಂಡ ಕ್ರಮಗಳು ಉಲ್ಲೇಖಿತವಾಗಿವೆ. ಟ್ಯಾಕ್ಸಿ ಆಂಬ್ಯುಲೆನ್ಸ್ ಸೇವೆಯನ್ನು ಗಗನದೀಪ್ ಆರಂಭಿಸಿದರು. ವಿಕಲಚೇತನರಿಗೆ ಮನೆಯಲ್ಲಿಯೇ ಲಸಿಕೆ ನೀಡುವ ವ್ಯವಸ್ಥೆ ಮಾಡಿದರು. 2004ರ ಸುನಾಮಿ ಮತ್ತು 2018ರ ರ ಗಾಜಾ ಚಂಡಮಾರುತದ ಸಮಯದಲ್ಲಿ ಅವರು ಮಾಡಿದ ಕೆಲಸದ ಕಾರಣದಿಂದಾಗಿ ಅವರಿಗೆ  ‘ವಿಪತ್ತು ನಿರ್ವಹಣೆಯಲ್ಲಿ ನಿಪುಣ’ ಎಂಬ ಹೆಗ್ಗಳಿಕೆ ಸಲ್ಲಿದೆ.

ಹೊಸದಾಗಿ ಚುನಾಯಿತಗೊಂಡ ತಮಿಳುನಾಡಿನ ಸ್ಟಾಲಿನ್  ಸರ್ಕಾರ, ಮೇ 9 ರಂದು ಗಗನದೀಪ್‍ ಸಿಂಗ್‍ ಅವರನ್ನು ಗ್ರೇಟರ್ ಚೆನ್ನೈ ಕಾರ್ಪೊರೇಶನ್‌ನ ಆಯುಕ್ತರನ್ನಾಗಿ ನೇಮಿಸಿತು.

ನಂತರದ ದಿನಗಳಲ್ಲಿ, ಚೆನ್ನೈನ ಕೋವಿಡ್ ಪರಿಸ್ಥಿತಿಯಲ್ಲಿ ಒಂದು ತಿರುವು ಕಂಡುಬಂದಿದೆ. ಮೇ ಮಧ್ಯದಲ್ಲಿ ಪ್ರತಿದಿನ ಸುಮಾರು 7 ಸಾವಿರ ಪ್ರಕರಣಗಳನ್ನು ದಾಖಲಿಸುತ್ತಿದ್ದ ನಗರವು ತಿಂಗಳ ಅಂತ್ಯದ ವೇಳೆಗೆ 2,600ಕ್ಕಿಂತ ಕ್ಕಿಂತ ಕಡಿಮೆ ಪ್ರಕರಣಗಳನ್ನು ದಾಖಲಿಸಿದೆ.

ದಿ ಪ್ರಿಂಟ್‌ನೊಂದಿಗೆ ಮಾತನಾಡಿದ  ಗಗನದೀಪ್  ಬೇಡಿ, ‘ಕೋವಿಡ್ ನಿರ್ವಹಣೆಗಾಗಿ ತಳಮಟ್ಟದಲ್ಲಿ ಕೆಲಸ ಮಾಡುವ  ಪರಿಷ್ಕೃತ ಮೈಕ್ರೋ-ಪ್ಲ್ಯಾನ್’  ರೂಪಿಸಿದ್ದು ಇದಕ್ಕೆ ಕಾರಣವೆಂದು ಹೇಳಿದ್ದಾರೆ. ಆರೋಗ್ಯ ಕಾರ್ಯಕರ್ತರ ಕಣ್ಗಾವಲು ಮೂಲಕ ಸೋಂಕನ್ನು ಮೊದಲೇ ಗುರುತಿಸಲು ಈ ಯೋಜನೆಯು ಆದ್ಯತೆ ನೀಡುತ್ತದೆ. ಇದು  ಸೋಂಕು ಹರಡುವಿಕೆ ಕಡಿಮೆ ಮಾಡಲು ಸಹಾಯ ಮಾಡಿದೆ ಎಂದು ಬೇಡಿ ಹೇಳಿದ್ದಾರೆ.

1993ರ ಬ್ಯಾಚ್‌ನ ಈ ಐಎಎಸ್ ಅಧಿಕಾರಿಯು ದಿನಕ್ಕೆ 13-14 ಗಂಟೆಗಳ ಕಾಲ ಕೆಲಸ ಮಾಡುತ್ತಾರೆ. ಬೇಡಿ ಅವರೊಂದಿಗೆ  ಸೇವೆ ಸಲ್ಲಿಸಿರುವ ಕಾಮರಾಜ್ ಪೋರ್ಟ್ ಲಿಮಿಟೆಡ್‌ನ ಅಧ್ಯಕ್ಷ ಸುನಿಲ್ ಪಾಲಿವಾಲ್, “ಅವರು ತನ್ನ ಹೃದಯದಿಂದ ಕೆಲಸ ಮಾಡುತ್ತಾರೆ” ಎಂದು ಹೇಳಿದ್ದಾರೆ. “26 ವರ್ಷಗಳ ಸೇವೆಯ ನಂತರವೂ ಅವರ ಉತ್ಸಾಹವು ಯಾವುದೇ ಯುವಕನಿಗಿಂತ ಕಡಿಮೆಯಿಲ್ಲ, ಅಷ್ಟು ಯೌವನ ಅವರಲ್ಲಿದೆ’ ಎಂದು ಶ್ಲಾಘಿಸಿದ್ದಾರೆ.

ಜಿಸಿಸಿಯಲ್ಲಿ ಬೇಡಿ ಅವರ ಅತ್ಯಂತ ಶ್ಲಾಘನೀಯ ಉಪಕ್ರಮವೆಂದರೆ ಅಂಗವಿಕಲರಿಗೆ ಮನೆಯಲ್ಲಿಯೇ ವ್ಯಾಕ್ಸಿನೇಷನ್ ಸೇವೆ ನೀಡುವ ಕ್ರಮ. ಲಸಿಕಾ ಅಭಿಯಾನದ ಬಗ್ಗೆ ಮಾತನಾಡಿದ ಬೇಡಿ, ಜಿಸಿಸಿ ಅಂಗವಿಕಲರಿಗೆ ಮೂರು ರೀತಿಯ ವ್ಯಾಕ್ಸಿನೇಷನ್ ಬೆಂಬಲವನ್ನು ಆಯೋಜಿಸಿದೆ ಎಂದು ಹೇಳಿದರು

ಮತ್ತೊಂದು ಪ್ರಮುಖ ಕ್ರಮವೆಂದರೆ, ಜೊಮಾಟೊ, ಅಮೆಜಾನ್, ಉಬರ್ ಮತ್ತು ಸ್ವಿಗ್ಗಿ ಮುಂತಾದ ಸೇವಾ ಕಂಪನಿಗಳಲ್ಲಿನ ವಿತರಣಾ ಸಿಬ್ಬಂದಿಗೆ (ಡೆಲಿವರಿ ಸ್ಟಾಫ್‍)‘ಆದ್ಯತೆಯ ಕೆಲಸಗಾರರು’ ಎಂದು ಲಸಿಕೆ ಹಾಕುತ್ತಿದ್ದಾರೆ. ಇವರು ದಿನವೂ ಸಾರ್ವಜನಿಕರ ಸಂಪರ್ಕದಲ್ಲಿ ಇರುವ ಕಾರಣ ಈ ಕ್ರಮ ಕೈಗೊಳ್ಳಲಾಗಿದೆ.

ಚೆನ್ನೈನಲ್ಲಿ ಪ್ರಾರಂಭಿಸಲಾದ ಟ್ಯಾಕ್ಸಿ ಆಂಬ್ಯುಲೆನ್ಸ್‌ಗಳು ಆಮ್ಲಜನಕ-ಸುಸಜ್ಜಿತ 108 ಆಂಬುಲೆನ್ಸ್‌ಗಳ ಮೇಲಿನ ಒತ್ತಡವನ್ನು ಕಡಿಮೆ ಮಾಡಿವೆ. ಜಿಸಿಸಿ 250 ಟ್ಯಾಕ್ಸಿ ಆಂಬುಲೆನ್ಸ್‌ಗಳನ್ನು ನಿಯೋಜನೆ ಮಾಡಿದೆ. ಇವು ಸ್ವಲ್ಪ ಅನಾರೋಗ್ಯದ ರೋಗಿಗಳಿಗೆ, ಆಮ್ಲಜನಕದ ಅಗತ್ಯವಿಲ್ಲದವರನ್ನು ಆಸ್ಪತ್ರೆಗೆ ಸೇರಿಸಲು ಸಹಾಯ ಮಾಡುತ್ತವೆ.

ಇದರ ಜೊತೆಗೆ, 2020ರಲ್ಲಿ ನೇಮಕಗೊಂಡ ಸ್ಥಳೀಯ ಸಮುದಾಯಗಳ 12 ಸಾವಿರ ಆರೋಗ್ಯ ಕಾರ್ಯಕರ್ತರ ನೆಟ್‌ವರ್ಕ್ ಬಲಪಡಿಸಿದ್ದು, ಇವರು ಮನೆಮನೆಗೆ ತೆರಳಿ ಟೆಸ್ಟಿಂಗ್‍ ಮತ್ತು ಇತರ ಚಿಕಿತ್ಸೆಗೆ ನೆರವಾಗುತ್ತಿದ್ದಾರೆ.

ಚೈನ್ನೈ ಮಹಾನಗರ ಪಾಲಿಕೆ ಅಡಿ ಒಟ್ಟು 80 ಲಕ್ಷ ಜನಸಂಖ್ಯೆ ಇದ್ದು, 200 ವಾರ್ಡ್‍ಗಳಿವೆ. ಕಾರ್ಪೋರೇಷನ್ ಆರೋಗ್ಯ ಕಾರ್ಯಕರ್ತರು  ಮನೆ-ಮನೆಗೆ  ತೆರಳಿ ಪರೀಕ್ಷೆ ಮತ್ತು ತಪಾಸಣೆ ನಡೆಸುತ್ತಾರೆ. ಅವರು ಕ್ವಾರಂಟೈನ್‌ನಲ್ಲಿರುವವರಿಗೆ ಅಗತ್ಯ ವಸ್ತುಗಳನ್ನು ಪೂರೈಸುತ್ತಿದ್ದಾರೆ.

ಗಗನದೀಪ್‍ ಬೇಡಿ ದೈನಂದಿನ ಪರಿಶೀಲನಾ ಸಭೆಗಳನ್ನು ನಡೆಸುತ್ತಾರೆ. ಮನೆಮನೆ ಪರೀಕ್ಷೆ ಮತ್ತು ಜ್ವರ ಚಿಕಿತ್ಸೆಯ ಶಿಬಿರಗಳನ್ನು ನಡೆಸಲು ವಿಭಾಗ ಮಟ್ಟದಲ್ಲಿ 200 ಸಂಚಾರಿ ತಂಡಗಳನ್ನು ನಿಯೋಜಿಸಿದ್ದಾರೆ. ಇದರ ಜೊತೆಗೆ, ಮಾರುಕಟ್ಟೆಯಲ್ಲಿ ನಿತ್ಯ ವ್ಯಾಪಾರ ಮಾಡುವ ಹೆಚ್ಚಿನ ಅಪಾಯದ ಗುಂಪುಗಳನ್ನು ಪರೀಕ್ಷಿಸಲು 10  ಸಂಚಾರಿ ಪರೀಕ್ಷಾ ಘಟಕಗಳನ್ನು ನಿಯೋಜನೆ ಮಾಡಿದ್ದಾರೆ.

ತಂತ್ರಜ್ಞಾನ ಬಳಕೆಯನ್ನು  ಉತ್ತೇಜಿಸುವ ಗಗನದೀಪ್ ಬೇಡಿ,  ಜಿಸಿಸಿಯಲ್ಲೂ ಸಾಮಾಜಿಕ ಮಾಧ್ಯಮದ ಅನ್ವಯವನ್ನು ಹೆಚ್ಚಿಸಿದ್ದಾರೆ. “ಫೇಸ್‌ಬುಕ್ ಮತ್ತು ಟ್ವಿಟರ್‌ನಲ್ಲಿ ಕೋವಿಡ್ ದೂರುಗಳನ್ನು ಹುಡುಕಲು ಮತ್ತು ಅವುಗಳನ್ನು ಸಂಪರ್ಕ ಮಾಡಲು ಕಂಟ್ರೋಲ್ ರೂಮ್ ತಂಡಕ್ಕೆ ಸೂಚನೆ ನೀಡಿದ್ದೇನೆ. ಅಂತಹ ವಿನಂತಿಗಳನ್ನು ಟ್ಯಾಗ್ ಮಾಡಿದ ನಂತರ ತಕ್ಷಣ ಕ್ರಮ ಕೈಗೊಳ್ಳಲಾಗುತ್ತದೆ” ಎಂದು ಹೇಳಿದರು.

ಒಬ್ಬ ಅಧಿಕಾರಿ ಕೇವಲ 15 ದಿನದಲ್ಲಿ 7 ಸಾವಿರದಷ್ಟು ಇದ್ದ ಪಾಸಿಟಿವ್ ಕೇಸ್‌ಗಳನ್ನು 2,600ಕ್ಕೆ ಇಳಿಸಿದ್ದಾರೆ. ವೈಜ್ಞಾನಿಕ ಮನೋಭಾವದ ಹೊಸ ಡಿಎಂಕೆ ಸರ್ಕಾರ ಅವರಿಗೆ ಬೆಂಬಲವಾಗಿ ನಿಂತಿದೆ.


ಇದನ್ನೂ ಓದಿ: ಲಸಿಕೆ ಕುರಿತು ಕೇಂದ್ರಕ್ಕೆ ಸುಪ್ರೀಂಕೋರ್ಟ್ ಪ್ರಶ್ನೆಗಳು: ಕಟಕಟೆಯಲ್ಲಿ ಮೋದಿ ಸರ್ಕಾರ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...