Homeಮುಖಪುಟಯೋಗಿ ಆದಿತ್ಯನಾಥ್ ಜನ್ಮದಿನಕ್ಕೆ ಮೋದಿಯೇಕೆ ಶುಭಾಶಯದ ಟ್ವೀಟ್‍ ಮಾಡಲಿಲ್ಲ? ಬಿಜೆಪಿ ನಾಯಕತ್ವಕ್ಕೆ ಯೋಗಿ ಬಗ್ಗೆ ಅಸಮಾಧಾನವೇ?

ಯೋಗಿ ಆದಿತ್ಯನಾಥ್ ಜನ್ಮದಿನಕ್ಕೆ ಮೋದಿಯೇಕೆ ಶುಭಾಶಯದ ಟ್ವೀಟ್‍ ಮಾಡಲಿಲ್ಲ? ಬಿಜೆಪಿ ನಾಯಕತ್ವಕ್ಕೆ ಯೋಗಿ ಬಗ್ಗೆ ಅಸಮಾಧಾನವೇ?

- Advertisement -
- Advertisement -

ತಮ್ಮ ಪಕ್ಷದ ಮತ್ತು ಪ್ರತಿಪಕ್ಷದ ನಾಯಕರಿಗೆ ಶುಭಾಶಯಗಳ ಟ್ವೀಟ್‍ ಮಾಡುವುದನ್ನು ಎಂದೂ ಮರೆಯದ ಪ್ರಧಾನಿ ನರೇಂದ್ರ ಮೋದಿಯವರು, ಉತ್ತರಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥರ ಜನ್ಮದಿನಕ್ಕೆ ಶುಭಾಶಯದ ಟ್ವೀಟ್‍ ಮಾಡದಿರುವುದು ಆಶ್ಚರ್ಯಕ್ಕೆ, ಗೊಂದಲಗಳಿಗೆ ಕಾರಣವಾಗಿದೆ.

ಉತ್ತರಪ್ರದೇಶ ಸರ್ಕಾರದ ವಿರುದ್ಧ ಮೂಡಿರುವ ಜನಾಕ್ರೋಶವೇ ಇದಕ್ಕೆ ಕಾರಣ ಇರಬಹುದೇ? ಬಿಜೆಪಿಯ ರಾಷ್ಟ್ರೀಯ ನಾಯಕತ್ವವು ಉತ್ತರಪ್ರದೇಶದ ಸರ್ಕಾರದ ಬಗ್ಗೆ ಚಿಂತಿತಗೊಂಡಿದೆ. ಮುಂದಿನ ವರ್ಷ ನಡೆಯಲಿರುವ ವಿಧಾನಸಭಾ ಚುನಾವಣೆಯ ಬಗ್ಗೆ ಪಕ್ಷಕ್ಕೆ ಆತಂಕ ಶುರುವಾಗಿದೆ ಎಂದು ಎನ್‍ಡಿಟಿವಿ ವರದಿ ಮಾಡಿದೆ.

ಪ್ರಧಾನಿ ಮೋದಿಯವರಿಗೂ ಅಸಮಾಧಾನವಾಗಿದ್ದು ಆ ಕಾರಣಕ್ಕೇ ಅವರು ಟ್ವೀಟ್‍ ಮಾಡಿ ಶುಭಾಶಯ ಹೇಳಿಲ್ಲ ಎಂಬ ವದಂತಿಗಳು ಹರಡಿವೆ.

ಉತ್ತರಪ್ರದೇಶದಲ್ಲಿ ಬಿಜೆಪಿ ಶಾಸಕರು ಮತ್ತು ಸಂಸದರು  ಯೋಗಿ ಸರ್ಕಾರದ ಕೋವಿಡ್‍ ನಿರ್ವಹಣೆಯ ವಿಫಲತೆಯ ಬಗ್ಗೆ ಸಾರ್ವಜನಿಕವಾಗಿಯೇ ಅಸಮಾಧಾನ ವ್ಯಕ್ತಪಡಿಸುತ್ತಿದ್ದಾರೆ. ಜನಪ್ರತಿನಿಧಿಗಳಿಗೇ ಆರೋಗ್ಯ ಸೌಲಭ್ಯ ಪಡೆಯಲು ಆಗುತ್ತಿಲ್ಲ ಎಂಬ ಟೀಕೆ ಕೇಳಿ ಬರುತ್ತಿವೆ.

ಆದರೆ, ಪ್ರಧಾನಿ ಮೋದಿ ಅವರು ಶನಿವಾರ ಯೋಗಿ ಆದಿತ್ಯನಾಥ್ ಅವರೊಂದಿಗೆ ದೂರವಾಣಿಯಲ್ಲಿ ಮಾತನಾಡಿದ್ದಾರೆ ಮತ್ತು ಜನ್ಮದಿನದ ಶುಭಾಶಯಗಳನ್ನು ತಿಳಿಸಿದ್ದಾರೆ ಎಂದು ಪ್ರಧಾನಿ ಕಚೇರಿಯ ಮೂಲಗಳು ತಿಳಿಸಿವೆ.

ಸಾಂಕ್ರಾಮಿಕ ರೋಗದ ಎರಡನೇ ಅಲೆಯಲ್ಲಿ ಪ್ರಧಾನಿ ಯಾರ ಜನ್ಮದಿನಕ್ಕೂ ಟ್ವೀಟ್ ಮಾಡಿಲ್ಲ ಎಂದಿರುವ ಪಿಎಂಒ ಮೂಲಗಳು, ಪ್ರತಿಪಕ್ಷದವರು ಸೇರಿದಂತೆ ಉನ್ನತ ನಾಯಕರ ಪಟ್ಟಿಯನ್ನು ಸಹ ನೀಡಿದ್ದು, ಇವರ್ಯಾರಿಗೂ ಮೋದಿ ಶುಭಾಶಯ ತಿಳಿಸಿಲ್ಲ ಎಂದು ಹೇಳಿವೆ. ಕಳೆದ ಕೆಲವು ವಾರಗಳಿಂದ ಅವರು ಟ್ವಿಟರ್ ಶುಭಾಶಯಗಳನ್ನು ಕೈ ಬಿಟ್ಟಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಪಿಎಂಒ ನೀಡಿದ ಪಟ್ಟಿಯಲ್ಲಿ ಕೇರಳ, ರಾಜಸ್ಥಾನ, ಹರಿಯಾಣ ಮತ್ತು ಗೋವಾ ಮುಖ್ಯಮಂತ್ರಿಗಳು ಸೇರಿದ್ದಾರೆ. ಯೋಗಿ ಆದಿತ್ಯನಾಥ್ ಸರ್ಕಾರವು ಕೋವಿಡ್ ಸಾಂಕ್ರಾಮಿಕ ರೋಗವನ್ನು ಸರಿಯಾಗಿ ನಿಭಾಯಿಸುತ್ತಿಲ್ಲ ಎಂಬ ಟೀಕೆಗಳ ಬಗ್ಗೆ ಬಿಜೆಪಿಯ ಉನ್ನತ ನಾಯಕರು ಕಳೆದ ವಾರ ಅಸಮಾಧಾನ ವ್ಯಕ್ತಪಡಿಸಿದ್ದರು.

ಮುಂದಿನ ವರ್ಷ ನಡೆಯುವ ನಿರ್ಣಾಯಕ ಚುನಾವಣೆಗೆ ಮುಂಚಿತವಾಗಿ, 2024ರ ಲೋಕಸಭಾ ಚುನಾವಣೆಯ ಮೇಲೆ ಇದರ ಪರಿಣಾಮಗಳನ್ನು ಈಗಲೇ ಪರಿಗಣಿಸಿ ಬದಲಾವಣೆಗಳನ್ನು ತರುವ ಬಗ್ಗೆ ಯೋಚಿಸಬೇಕು ಎಂಬ  ವದಂತಿಗಳು ಹರಡಿವೆ. ಯೋಗಿ ಅಥವಾ ಅವರ ಇಬ್ಬರು ಉಪ ಮುಖ್ಯಮಂತ್ರಿಗಳನ್ನು ಬದಲಿಸುವ ಬಗ್ಗೆ ಪಕ್ಷದ ಆಂತರಿಕ ವಲಯದಲ್ಲಿ ಮಾತುಗಳು ಕೇಳಿ ಬಂದಿವೆ ಎನ್ನಲಾಗಿದೆ.

ಕಳೆದ ವಾರ, ಪಕ್ಷದ  ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್.ಸಂತೋಷ್,  ಕೇಂದ್ರದ ಮಾಜಿ ಸಚಿವ ರಾಧಾ ಮೋಹನ್ ಸಿಂಗ್ ಎರಡು ದಿನಗಳ ಕಾಲ ವಿಶೇಷ ಸಭೆಗಳನ್ನು ನಡೆಸಿ ಯೋಗಿ ಸೇರಿದಂತೆ ಇತರ ಸಚಿವರು ಮತ್ತು ನಾಯಕರ ಜೊತೆಗೆ ಸಮಾಲೋಚನೆ ನಡೆಸಿದ್ದಾರೆ.

ಯೋಗಿ ಆದಿತ್ಯನಾಥ್ ಸಾಂಕ್ರಾಮಿಕ ರೋಗವನ್ನು ಉತ್ತಮವಾಗಿ ನಿಭಾಯಿಸಿದ್ದಾರೆ ಎಂದು ಮಂಗಳವಾರ ಬಿ.ಎಲ್ ಸಂತೋಷ್‍ ಟ್ವೀಟ್‍ ಮಾಡಿದ್ದರು.

ಶುಕ್ರವಾರ ಬಿಜೆಪಿ ಮೂಲಗಳು ಯೋಗಿ ಆದಿತ್ಯನಾಥ್ ಅವರನ್ನು ತೆಗೆದುಹಾಕುವುದನ್ನು ತಳ್ಳಿಹಾಕಿದವು. ಆದರೆ ಕ್ಯಾಬಿನೆಟ್ ವಿಸ್ತರಣೆಯ ಸಾಧ್ಯತೆಯಿದೆ ಎಂದು ಸೂಚಿಸಿದವು. ಪ್ರಧಾನಿ ಮೋದಿಯವರ ಆಪ್ತರಲ್ಲಿ ಒಬ್ಬರು ಎನ್ನಲಾದ ಮಾಜಿ ಅಧಿಕಾರಿ ಎ.ಕೆ. ಶರ್ಮಾ ಅವರಿಗೆ ಯುಪಿ ಸರ್ಕಾರದಲ್ಲಿ ಉಪ ಮುಖ್ಯಮಂತ್ರಿ ಸ್ಥಾನ ಅಥವಾ ಪ್ರಮುಖ ಸ್ಥಾನ ನೀಡಬಹುದು ಎಂದು ಪಕ್ಷದ ಮೂಲಗಳು ತಿಳಿಸಿವೆ.

ಈ ತಿಂಗಳಲ್ಲೇ ವಿಸ್ತರಣೆ ನಡೆಯಬಹುದು ಮತ್ತು ಜಾತಿ, ಪ್ರಾದೇಶಿಕ ಸಮೀಕರಣಗಳನ್ನು ಗಮನದಲ್ಲಿಟ್ಟುಕೊಂಡು ಹೊಸ ಮಂತ್ರಿಗಳನ್ನು ಆಯ್ಕೆ ಮಾಡಲಾಗುತ್ತದೆ. ಬಿ.ಎಲ್ ಸಂತೋಷ್ ಮತ್ತು ರಾಧಾ ಮೋಹನ್ ಸಿಂಗ್  ನಡೆಸಿದ ಸಮಾಲೋಚನೆಗಳ ನಂತರ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಮೂಲಗಳು ತಿಳಿಸಿವೆ.

ಇತ್ತೀಚಿನ ಪಂಚಾಯತ್ ಚುನಾವಣೆಗಳಲ್ಲಿ ಪಕ್ಷದ ಕಳಪೆ ಸಾಧನೆಗೆ ಕಾರಣಗಳನ್ನು ಅವರು ಪರಿಶೀಲಿಸಿದ್ದಾರೆ. ಬಿಜೆಪಿ ತನ್ನ ಭದ್ರಕೋಟೆಗಳಲ್ಲಿ ದೊಡ್ಡ ನಷ್ಟವನ್ನು ಅನುಭವಿಸಿದೆ.

ಎರಡನೇ ಕೋವಿಡ್ ಅಲೆಯ ನಿರ್ವಹಣೆಯಲ್ಲಿ ಯುಪಿ ಸರ್ಕಾರದ ವಿಫಲತೆಯ ಕಾರಣದಿಂದ ಹೆಚ್ಚಿನ ಸಂಖ್ಯೆಯ ಸಾವುಗಳು ಸಂಭವಿಸಿವೆ ಎಂದು ಪ್ರತಿಪಕ್ಷಗಳು ಮತ್ತು ತಜ್ಞರು ಆರೋಪಿಸಿದ್ದಾರೆ.

ಗಂಗಾದಲ್ಲಿ ತೇಲುತ್ತಿರುವ ದೇಹಗಳ ಚಿತ್ರಗಳು ಅಂತರರಾಷ್ಟ್ರೀಯ ಮಾಧ್ಯಮಗಳಲ್ಲಿ ಪ್ರಕಟವಾದ ನಂತರ ಯೋಗಿ ಸರ್ಕಾದದ ಕಾರ್ಯಶೈಲಿಯ ಕುರಿತು ವ್ಯಾಪಕ ಟೀಕೆಗಳು ಕೇಳಿ ಬಂದಿವೆ. ನಂತರ ಯೋಗಿ ಅವರೇ ಕೋವಿಡ್‍ ನಿರ್ವಹಣೆಯ ಮೇಲ್ವಿಚಾರಣೆ ನಡೆಸುತ್ತಿದ್ದು, ಈಗ ಪ್ರಕರಣಗಳ ಸಂಖ್ಯೆಯಲ್ಲಿ ಸಣ್ಣ ಇಳಿಮುಖ ಕಂಡು ಬಂದಿದೆ.

ಶನಿವಾರ ಬೆಳಿಗ್ಗೆ 24 ಗಂಟೆಗಳಲ್ಲಿ 1,013 ಹೊಸ ಪ್ರಕರಣಗಳನ್ನು ರಾಜ್ಯ ವರದಿ ಮಾಡಿದೆ. ಸಕ್ರಿಯ ಪ್ರಕರಣಗಳು ಸುಮಾರು 23 ಸಾವಿರಕ್ಕೆ ಇಳಿದಿವೆ.


ಇದನ್ನೂ ಓದಿ: ಬಂಗಾಳದ ಬಿಜೆಪಿ ನಾಯಕ ಸುವೇಂಧು ಅಧಿಕಾರಿ ವಿರುದ್ಧ ಪರಿಹಾರ ಸಾಮಾಗ್ರಿ ಕಳವು ಆರೋಪ: ಪ್ರಕರಣ ದಾಖಲು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಹಾರಾಷ್ಟ್ರ: ‘ನಿನ್ನ ಮಗಳನ್ನು ನನ್ನ ಬಳಿ ಕಳುಹಿಸು’; ಬಂಧಿತ ಮಹಿಳಾ ಆರೋಪಿಗೆ ಲೈಂಗಿಕ ಕಿರುಕುಳ ನೀಡಿದ್ದ ಪೊಲೀಸ್ ಅಮಾನತು 

ಮಹಾರಾಷ್ಟ್ರ: ಅಕೋಲಾದಲ್ಲಿ ನಡೆದ ಆಘಾತಕಾರಿ ಘಟನೆಯೊಂದರಲ್ಲಿ, ಕಸ್ಟಡಿಯಲ್ಲಿರುವ ಮಹಿಳೆಯೊಬ್ಬರಿಂದ ಲೈಂಗಿಕ ಕಿರುಕುಳಕ್ಕೆ ಬೇಡಿಕೆ ಇಟ್ಟಿದ್ದ ಮತ್ತು ಆಕೆಯ ಮಗಳನ್ನು ತನ್ನ ಬಳಿಗೆ ಕಳುಹಿಸುವಂತೆ ಕೇಳಿದ್ದಕ್ಕಾಗಿ ಸಹಾಯಕ ಪೊಲೀಸ್ ಸಬ್-ಇನ್ಸ್‌ಪೆಕ್ಟರ್ (ಎಎಸ್‌ಐ) ಒಬ್ಬರನ್ನು ಅಮಾನತುಗೊಳಿಸಲಾಗಿದೆ.  80...

ನಾಗ್ಪುರ-ಮುಂಬೈ ಎಕ್ಸ್‌ಪ್ರೆಸ್‌ವೇಯಲ್ಲಿ ಅಪಘಾತ : 8 ಮಹಿಳಾ ಕಾರ್ಮಿಕರು ಸಾವು

ವೇಗವಾಗಿ ಬಂದ ಟ್ರಕ್ ಟೆಂಪೋಗೆ ಡಿಕ್ಕಿ ಹೊಡೆದ ಪರಿಣಾಮ ಎಂಟು ಮಹಿಳಾ ಕಾರ್ಮಿಕರು ಸಾವನ್ನಪ್ಪಿ, ಮೂವರು ಗಾಯಗೊಂಡ ಘಟನೆ ಮಹಾರಾಷ್ಟ್ರದ ಜಲ್ನಾ ಜಿಲ್ಲೆಯ ನಾಗ್ಪುರ-ಮುಂಬೈ ಎಕ್ಸ್‌ಪ್ರೆಸ್‌ವೇಯಲ್ಲಿ ಬುಧವಾರ (ಏ.1) ಸಂಜೆ ನಡೆದಿದೆ. ಎಕ್ಸ್‌ಪ್ರೆಸ್‌ವೇಯ...

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...