Homeಮುಖಪುಟಯೋಗಿ ಆದಿತ್ಯನಾಥ್ ಜನ್ಮದಿನಕ್ಕೆ ಮೋದಿಯೇಕೆ ಶುಭಾಶಯದ ಟ್ವೀಟ್‍ ಮಾಡಲಿಲ್ಲ? ಬಿಜೆಪಿ ನಾಯಕತ್ವಕ್ಕೆ ಯೋಗಿ ಬಗ್ಗೆ ಅಸಮಾಧಾನವೇ?

ಯೋಗಿ ಆದಿತ್ಯನಾಥ್ ಜನ್ಮದಿನಕ್ಕೆ ಮೋದಿಯೇಕೆ ಶುಭಾಶಯದ ಟ್ವೀಟ್‍ ಮಾಡಲಿಲ್ಲ? ಬಿಜೆಪಿ ನಾಯಕತ್ವಕ್ಕೆ ಯೋಗಿ ಬಗ್ಗೆ ಅಸಮಾಧಾನವೇ?

- Advertisement -
- Advertisement -

ತಮ್ಮ ಪಕ್ಷದ ಮತ್ತು ಪ್ರತಿಪಕ್ಷದ ನಾಯಕರಿಗೆ ಶುಭಾಶಯಗಳ ಟ್ವೀಟ್‍ ಮಾಡುವುದನ್ನು ಎಂದೂ ಮರೆಯದ ಪ್ರಧಾನಿ ನರೇಂದ್ರ ಮೋದಿಯವರು, ಉತ್ತರಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥರ ಜನ್ಮದಿನಕ್ಕೆ ಶುಭಾಶಯದ ಟ್ವೀಟ್‍ ಮಾಡದಿರುವುದು ಆಶ್ಚರ್ಯಕ್ಕೆ, ಗೊಂದಲಗಳಿಗೆ ಕಾರಣವಾಗಿದೆ.

ಉತ್ತರಪ್ರದೇಶ ಸರ್ಕಾರದ ವಿರುದ್ಧ ಮೂಡಿರುವ ಜನಾಕ್ರೋಶವೇ ಇದಕ್ಕೆ ಕಾರಣ ಇರಬಹುದೇ? ಬಿಜೆಪಿಯ ರಾಷ್ಟ್ರೀಯ ನಾಯಕತ್ವವು ಉತ್ತರಪ್ರದೇಶದ ಸರ್ಕಾರದ ಬಗ್ಗೆ ಚಿಂತಿತಗೊಂಡಿದೆ. ಮುಂದಿನ ವರ್ಷ ನಡೆಯಲಿರುವ ವಿಧಾನಸಭಾ ಚುನಾವಣೆಯ ಬಗ್ಗೆ ಪಕ್ಷಕ್ಕೆ ಆತಂಕ ಶುರುವಾಗಿದೆ ಎಂದು ಎನ್‍ಡಿಟಿವಿ ವರದಿ ಮಾಡಿದೆ.

ಪ್ರಧಾನಿ ಮೋದಿಯವರಿಗೂ ಅಸಮಾಧಾನವಾಗಿದ್ದು ಆ ಕಾರಣಕ್ಕೇ ಅವರು ಟ್ವೀಟ್‍ ಮಾಡಿ ಶುಭಾಶಯ ಹೇಳಿಲ್ಲ ಎಂಬ ವದಂತಿಗಳು ಹರಡಿವೆ.

ಉತ್ತರಪ್ರದೇಶದಲ್ಲಿ ಬಿಜೆಪಿ ಶಾಸಕರು ಮತ್ತು ಸಂಸದರು  ಯೋಗಿ ಸರ್ಕಾರದ ಕೋವಿಡ್‍ ನಿರ್ವಹಣೆಯ ವಿಫಲತೆಯ ಬಗ್ಗೆ ಸಾರ್ವಜನಿಕವಾಗಿಯೇ ಅಸಮಾಧಾನ ವ್ಯಕ್ತಪಡಿಸುತ್ತಿದ್ದಾರೆ. ಜನಪ್ರತಿನಿಧಿಗಳಿಗೇ ಆರೋಗ್ಯ ಸೌಲಭ್ಯ ಪಡೆಯಲು ಆಗುತ್ತಿಲ್ಲ ಎಂಬ ಟೀಕೆ ಕೇಳಿ ಬರುತ್ತಿವೆ.

ಆದರೆ, ಪ್ರಧಾನಿ ಮೋದಿ ಅವರು ಶನಿವಾರ ಯೋಗಿ ಆದಿತ್ಯನಾಥ್ ಅವರೊಂದಿಗೆ ದೂರವಾಣಿಯಲ್ಲಿ ಮಾತನಾಡಿದ್ದಾರೆ ಮತ್ತು ಜನ್ಮದಿನದ ಶುಭಾಶಯಗಳನ್ನು ತಿಳಿಸಿದ್ದಾರೆ ಎಂದು ಪ್ರಧಾನಿ ಕಚೇರಿಯ ಮೂಲಗಳು ತಿಳಿಸಿವೆ.

ಸಾಂಕ್ರಾಮಿಕ ರೋಗದ ಎರಡನೇ ಅಲೆಯಲ್ಲಿ ಪ್ರಧಾನಿ ಯಾರ ಜನ್ಮದಿನಕ್ಕೂ ಟ್ವೀಟ್ ಮಾಡಿಲ್ಲ ಎಂದಿರುವ ಪಿಎಂಒ ಮೂಲಗಳು, ಪ್ರತಿಪಕ್ಷದವರು ಸೇರಿದಂತೆ ಉನ್ನತ ನಾಯಕರ ಪಟ್ಟಿಯನ್ನು ಸಹ ನೀಡಿದ್ದು, ಇವರ್ಯಾರಿಗೂ ಮೋದಿ ಶುಭಾಶಯ ತಿಳಿಸಿಲ್ಲ ಎಂದು ಹೇಳಿವೆ. ಕಳೆದ ಕೆಲವು ವಾರಗಳಿಂದ ಅವರು ಟ್ವಿಟರ್ ಶುಭಾಶಯಗಳನ್ನು ಕೈ ಬಿಟ್ಟಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಪಿಎಂಒ ನೀಡಿದ ಪಟ್ಟಿಯಲ್ಲಿ ಕೇರಳ, ರಾಜಸ್ಥಾನ, ಹರಿಯಾಣ ಮತ್ತು ಗೋವಾ ಮುಖ್ಯಮಂತ್ರಿಗಳು ಸೇರಿದ್ದಾರೆ. ಯೋಗಿ ಆದಿತ್ಯನಾಥ್ ಸರ್ಕಾರವು ಕೋವಿಡ್ ಸಾಂಕ್ರಾಮಿಕ ರೋಗವನ್ನು ಸರಿಯಾಗಿ ನಿಭಾಯಿಸುತ್ತಿಲ್ಲ ಎಂಬ ಟೀಕೆಗಳ ಬಗ್ಗೆ ಬಿಜೆಪಿಯ ಉನ್ನತ ನಾಯಕರು ಕಳೆದ ವಾರ ಅಸಮಾಧಾನ ವ್ಯಕ್ತಪಡಿಸಿದ್ದರು.

ಮುಂದಿನ ವರ್ಷ ನಡೆಯುವ ನಿರ್ಣಾಯಕ ಚುನಾವಣೆಗೆ ಮುಂಚಿತವಾಗಿ, 2024ರ ಲೋಕಸಭಾ ಚುನಾವಣೆಯ ಮೇಲೆ ಇದರ ಪರಿಣಾಮಗಳನ್ನು ಈಗಲೇ ಪರಿಗಣಿಸಿ ಬದಲಾವಣೆಗಳನ್ನು ತರುವ ಬಗ್ಗೆ ಯೋಚಿಸಬೇಕು ಎಂಬ  ವದಂತಿಗಳು ಹರಡಿವೆ. ಯೋಗಿ ಅಥವಾ ಅವರ ಇಬ್ಬರು ಉಪ ಮುಖ್ಯಮಂತ್ರಿಗಳನ್ನು ಬದಲಿಸುವ ಬಗ್ಗೆ ಪಕ್ಷದ ಆಂತರಿಕ ವಲಯದಲ್ಲಿ ಮಾತುಗಳು ಕೇಳಿ ಬಂದಿವೆ ಎನ್ನಲಾಗಿದೆ.

ಕಳೆದ ವಾರ, ಪಕ್ಷದ  ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್.ಸಂತೋಷ್,  ಕೇಂದ್ರದ ಮಾಜಿ ಸಚಿವ ರಾಧಾ ಮೋಹನ್ ಸಿಂಗ್ ಎರಡು ದಿನಗಳ ಕಾಲ ವಿಶೇಷ ಸಭೆಗಳನ್ನು ನಡೆಸಿ ಯೋಗಿ ಸೇರಿದಂತೆ ಇತರ ಸಚಿವರು ಮತ್ತು ನಾಯಕರ ಜೊತೆಗೆ ಸಮಾಲೋಚನೆ ನಡೆಸಿದ್ದಾರೆ.

ಯೋಗಿ ಆದಿತ್ಯನಾಥ್ ಸಾಂಕ್ರಾಮಿಕ ರೋಗವನ್ನು ಉತ್ತಮವಾಗಿ ನಿಭಾಯಿಸಿದ್ದಾರೆ ಎಂದು ಮಂಗಳವಾರ ಬಿ.ಎಲ್ ಸಂತೋಷ್‍ ಟ್ವೀಟ್‍ ಮಾಡಿದ್ದರು.

ಶುಕ್ರವಾರ ಬಿಜೆಪಿ ಮೂಲಗಳು ಯೋಗಿ ಆದಿತ್ಯನಾಥ್ ಅವರನ್ನು ತೆಗೆದುಹಾಕುವುದನ್ನು ತಳ್ಳಿಹಾಕಿದವು. ಆದರೆ ಕ್ಯಾಬಿನೆಟ್ ವಿಸ್ತರಣೆಯ ಸಾಧ್ಯತೆಯಿದೆ ಎಂದು ಸೂಚಿಸಿದವು. ಪ್ರಧಾನಿ ಮೋದಿಯವರ ಆಪ್ತರಲ್ಲಿ ಒಬ್ಬರು ಎನ್ನಲಾದ ಮಾಜಿ ಅಧಿಕಾರಿ ಎ.ಕೆ. ಶರ್ಮಾ ಅವರಿಗೆ ಯುಪಿ ಸರ್ಕಾರದಲ್ಲಿ ಉಪ ಮುಖ್ಯಮಂತ್ರಿ ಸ್ಥಾನ ಅಥವಾ ಪ್ರಮುಖ ಸ್ಥಾನ ನೀಡಬಹುದು ಎಂದು ಪಕ್ಷದ ಮೂಲಗಳು ತಿಳಿಸಿವೆ.

ಈ ತಿಂಗಳಲ್ಲೇ ವಿಸ್ತರಣೆ ನಡೆಯಬಹುದು ಮತ್ತು ಜಾತಿ, ಪ್ರಾದೇಶಿಕ ಸಮೀಕರಣಗಳನ್ನು ಗಮನದಲ್ಲಿಟ್ಟುಕೊಂಡು ಹೊಸ ಮಂತ್ರಿಗಳನ್ನು ಆಯ್ಕೆ ಮಾಡಲಾಗುತ್ತದೆ. ಬಿ.ಎಲ್ ಸಂತೋಷ್ ಮತ್ತು ರಾಧಾ ಮೋಹನ್ ಸಿಂಗ್  ನಡೆಸಿದ ಸಮಾಲೋಚನೆಗಳ ನಂತರ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಮೂಲಗಳು ತಿಳಿಸಿವೆ.

ಇತ್ತೀಚಿನ ಪಂಚಾಯತ್ ಚುನಾವಣೆಗಳಲ್ಲಿ ಪಕ್ಷದ ಕಳಪೆ ಸಾಧನೆಗೆ ಕಾರಣಗಳನ್ನು ಅವರು ಪರಿಶೀಲಿಸಿದ್ದಾರೆ. ಬಿಜೆಪಿ ತನ್ನ ಭದ್ರಕೋಟೆಗಳಲ್ಲಿ ದೊಡ್ಡ ನಷ್ಟವನ್ನು ಅನುಭವಿಸಿದೆ.

ಎರಡನೇ ಕೋವಿಡ್ ಅಲೆಯ ನಿರ್ವಹಣೆಯಲ್ಲಿ ಯುಪಿ ಸರ್ಕಾರದ ವಿಫಲತೆಯ ಕಾರಣದಿಂದ ಹೆಚ್ಚಿನ ಸಂಖ್ಯೆಯ ಸಾವುಗಳು ಸಂಭವಿಸಿವೆ ಎಂದು ಪ್ರತಿಪಕ್ಷಗಳು ಮತ್ತು ತಜ್ಞರು ಆರೋಪಿಸಿದ್ದಾರೆ.

ಗಂಗಾದಲ್ಲಿ ತೇಲುತ್ತಿರುವ ದೇಹಗಳ ಚಿತ್ರಗಳು ಅಂತರರಾಷ್ಟ್ರೀಯ ಮಾಧ್ಯಮಗಳಲ್ಲಿ ಪ್ರಕಟವಾದ ನಂತರ ಯೋಗಿ ಸರ್ಕಾದದ ಕಾರ್ಯಶೈಲಿಯ ಕುರಿತು ವ್ಯಾಪಕ ಟೀಕೆಗಳು ಕೇಳಿ ಬಂದಿವೆ. ನಂತರ ಯೋಗಿ ಅವರೇ ಕೋವಿಡ್‍ ನಿರ್ವಹಣೆಯ ಮೇಲ್ವಿಚಾರಣೆ ನಡೆಸುತ್ತಿದ್ದು, ಈಗ ಪ್ರಕರಣಗಳ ಸಂಖ್ಯೆಯಲ್ಲಿ ಸಣ್ಣ ಇಳಿಮುಖ ಕಂಡು ಬಂದಿದೆ.

ಶನಿವಾರ ಬೆಳಿಗ್ಗೆ 24 ಗಂಟೆಗಳಲ್ಲಿ 1,013 ಹೊಸ ಪ್ರಕರಣಗಳನ್ನು ರಾಜ್ಯ ವರದಿ ಮಾಡಿದೆ. ಸಕ್ರಿಯ ಪ್ರಕರಣಗಳು ಸುಮಾರು 23 ಸಾವಿರಕ್ಕೆ ಇಳಿದಿವೆ.


ಇದನ್ನೂ ಓದಿ: ಬಂಗಾಳದ ಬಿಜೆಪಿ ನಾಯಕ ಸುವೇಂಧು ಅಧಿಕಾರಿ ವಿರುದ್ಧ ಪರಿಹಾರ ಸಾಮಾಗ್ರಿ ಕಳವು ಆರೋಪ: ಪ್ರಕರಣ ದಾಖಲು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ : 33 ವರ್ಷಗಳ ಬಳಿಕ ದೇಶದ್ರೋಹ ಪ್ರಕರಣದಿಂದ ಮುಸ್ಲಿಂ ವ್ಯಕ್ತಿ ಖುಲಾಸೆ

ಪ್ರಾಸಿಕ್ಯೂಷನ್ ಆರೋಪಗಳನ್ನು ಸಾಂದರ್ಭಿಕ ಪುರಾವೆಗಳೊಂದಿಗೆ ಸಾಬೀತುಪಡಿಸಲು ವಿಫಲವಾಗಿದೆ ಮತ್ತು ಆರೋಪಿಯನ್ನು ಕೃತ್ಯಕ್ಕೆ ಲಿಂಕ್ ಮಾಡುವ ಪ್ರಮುಖ ಪುರಾವೆಗಳು ಕಾಣೆಯಾಗಿವೆ ಎಂದು ಅಭಿಪ್ರಾಯಪಟ್ಟ ಲಕ್ನೋದ ವಿಶೇಷ ರಾಷ್ಟ್ರೀಯ ತನಿಖಾ ದಳ (ಎನ್ಐಎ) ನ್ಯಾಯಾಲಯ, ದೇಶದ್ರೋಹ...

‘ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು’ ಎಂಬಂತೆ NTA ಯಿಂದ ₹7.5 ಕೋಟಿಯ ಬೃಹತ್ ಸೆಕ್ಯೂರಿಟಿ ಟೆಂಡರ್

ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಾಗಿ, ಅಮಾಯಕ ವಿದ್ಯಾರ್ಥಿಗಳ ಜೀವ-ಭವಿಷ್ಯ ಹಾಳಾದ ಮೇಲೆ, ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು ಎಂಬಂತೆ ಈಗ ಎನ್‌ಟಿಎ (NTA) ₹7.5 ಕೋಟಿ ವೆಚ್ಚದ ಭದ್ರತಾ ಟೆಂಡರ್...

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...