Homeಕರೋನಾ ತಲ್ಲಣಕೊರೋನಾ ನಿಯಂತ್ರಣಕ್ಕೆ ಸರ್ಕಾರದ ಮೇಲೆ ಒತ್ತಡ ತನ್ನಿ: 187 ಜನ ಗಣ್ಯರಿಂದ ವಿರೋಧ ಪಕ್ಷಗಳಿಗೆ ಪತ್ರ

ಕೊರೋನಾ ನಿಯಂತ್ರಣಕ್ಕೆ ಸರ್ಕಾರದ ಮೇಲೆ ಒತ್ತಡ ತನ್ನಿ: 187 ಜನ ಗಣ್ಯರಿಂದ ವಿರೋಧ ಪಕ್ಷಗಳಿಗೆ ಪತ್ರ

- Advertisement -
- Advertisement -

ಕೇಂದ್ರ ಸರ್ಕಾರದ ಕೊರೋನಾ ನಿಯಂತ್ರಣ ಕ್ರಮಗಳ ಬಗ್ಗೆ ಅಸಮಧಾನಗೊಂಡಿರುವ ಪ್ರಪಂಚದ 180 ಜನ  ಗಣ್ಯರು ಕೇಂದ್ರ ಸರ್ಕಾರಕ್ಕೆ ಸೂಕ್ತ ಕ್ರಮ ಕೈಗೊಳ್ಳುವಂತೆ ಒತ್ತಡ ಹೇರಿ ಎಂದು ಆಗ್ರಹಿಸಿ ವಿರೋಧ ಪಕ್ಷಗಳಿಗೆ ಬಹಿರಂಗ ಪತ್ರ ಬರೆದಿದ್ದಾರೆ.

187 ಜನ ಗಣ್ಯರಲ್ಲಿ ಉನ್ನತ ವಿಶ್ವ ವಿದ್ಯಾಲಯಗಳ ಪ್ರೊಫೆಸರ್‌ಗಳು, ಸಾಮಾಜಿಕ ಹೋರಾಟಗಾರರು, ಹಿರಿಯ ಪತ್ರಕರ್ತರು, ಸಾಹಿತಿಗಳು, ಶ್ರೇಷ್ಠ ನ್ಯಾಯವಾದಿಗಳು, ಚಲನಚಿತ್ರ ನಿರ್ದೇಶಕರು ಸೇರಿದ್ದಾರೆ.

ಗಣ್ಯರ ಪತ್ರದ ಸಾರಾಂಶ ಇಲ್ಲಿದೆ

“ದೇಶದ ಬಗ್ಗೆ ಕಾಳಜಿಯಿರುವ ನಾಗರಿಕರಾದ ನಾವು ಕೇಂದ್ರ ಸರ್ಕಾರ ಕೊರೋನಾ ನಿಯಂತ್ರಣಕ್ಕೆ ತೆಗೆದುಕೊಂಡಿರುವ ಕ್ರಮಗಳು ಸಮರ್ಪಕವಾಗಿಲ್ಲ. ಕೇಂದ್ರ ಸರ್ಕಾರ ವಿರೋಧಪಕ್ಷಗಳನ್ನು ದೇಶದ ಇತರ ಗಣ್ಯರನ್ನು ಮತ್ತು ತಜ್ಞರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳದೇ ಏಕಪಕ್ಷೀಯವಾಗಿ ವರ್ತಿಸುತ್ತಿದೆ. ವಿರೋಧ ಪಕ್ಷಗಳ ಮೌಲ್ಯಯುತ ಸಲಹೆ ಸೂಚನೆಗಳನ್ನು ಪರಿಗಣಿಸದೇ ಎಡವುತ್ತಿದೆ. ಇದರ ವಿರುದ್ಧ ದೇಶದ ಪ್ರಗತಿಪರ ವಿರೋಧ ಪಕ್ಷಗಳು ಎದ್ದು ನಿಂತು ಸರ್ಕಾರವನ್ನು ಒತ್ತಾಯಿಸಬೇಕು ಎಂದು ಆಗ್ರಹಿಸಿದ್ದಾರೆ.

ವಿರೋಧಪಕ್ಷಗಳು ರಾಜಕೀಯವನ್ನು ಮರೆತು ದೇಶದ ಜನರ ಹಿತಾಸಕ್ತಿಗಾಗಿ ಕೇಂದ್ರ ಸರ್ಕಾರದ ಜೊತೆ ಕೈಜೋಡಿಸಲು ಮುಂದೆ ಬಂದಿವೆ.  ಆದರೆ ಕೇಂದ್ರ ಸರ್ಕಾರ ವಿರೋಧ ಪಕ್ಷಗಳ ಸಹಕಾರವನ್ನು ಉಪೇಕ್ಷಿಸಿದೆ. ಕೊರೋನಾ ವಿರುದ್ಧದ ಹೋರಾಟದಲ್ಲಿ ಆಡಳಿತದ ಅನುಭವ ಹೊಂದಿರುವ ವಿರೋಧ ಪಕ್ಷಗಳ ನಾಯಕರನ್ನು, ರಾಜ್ಯ ಸರ್ಕಾರಗಳನ್ನು, ತಜ್ಞರನ್ನು ಒಳಗೊಂಡ ಒಂದು ರಾಷ್ಟ್ರೀಯ ಟಾಸ್ಕ್‌ ಫೋರ್ಸ್‌ ಅನ್ನು ಕೂಡ ರಚನೆ ಮಾಡಿಲ್ಲ.  ಸಲಹೆ ಸೂಚನೆಗಳನ್ನು ತಿರಸ್ಕರಿಸುವ ಮೂಲಕ ತಜ್ಞರ, ಆಡಳಿತದ ಅನುಭವಿಗಳ ಜ್ಞಾನಕ್ಕೆ ಅವಮಾನ ಮಾಡುತ್ತಿದೆ. ಮತ್ತೊಂದೆಡೆ ದೇಶದಲ್ಲಿ ಲಕ್ಷಾಂತರ ಜನರು ಸಕಾಲದಲ್ಲಿಆರೋಗ್ಯ ಸೇವೆಗಳು ಮತ್ತು ಚಿಕಿತ್ಸೆಗಳು ಸಿಗದೆ ಪರದಾಡುತ್ತಿದ್ದಾರೆ. ಮನುಕುಲಕ್ಕೆ, ಭಾರತಕ್ಕೆ ಪಿಡುಗಾಗಿರುವ ಕೊರೋನಾ ಸಾಂಕ್ರಾಮಿಕದ ವಿರುದ್ಧ ದೇಶ ಒಂದಾಗಿ ಹೋರಾಡಬೇಕಾದ ಸಂದರ್ಭದಲ್ಲಿ ಕೇಂದ್ರ ಸರ್ಕಾರ ತನ್ನ ರಾಜಕೀಯ ದ್ವೇಷವನ್ನು ಮರೆತಿಲ್ಲದಿರುವುದು ದೇಶದಲ್ಲಿ ಇನ್ನಷ್ಟು ಆರೋಗ್ಯ ಬಿಕ್ಕಟ್ಟನ್ನು ಸೃಷ್ಟಿಸಿದೆ. ಇಂತಹ ಸಂದರ್ಭದಲ್ಲಿ ವಿರೋಧ ಪಕ್ಷಗಳು ಏನು ಮಾಡಬೇಕು?

  1. ಜನರು ಕೊರೋನಾ ವಿರುದ್ಧ ಹೋರಾಡುತ್ತಿರುವ ಸಂದರ್ಭದಲ್ಲಿ ವಿರೋಧ ಪಕ್ಷಗಳು ಜನರ ಜೊತೆ ನಿಂತು ಅಗತ್ಯ ಸಹಕಾರವನ್ನು ನೀಡುವ ಮೂಲಕ ಕೇಂದ್ರ ಸರ್ಕಾರದ ಗೈರು ಹಾಜರಾತಿಯನ್ನು ತುಂಬಬೇಕು. ನಾಗರಿಕರ ಕೊರೋನಾ ವಿರುದ್ಧದ ಹೋರಾಟದ ಪ್ರಯತ್ನಗಳಿಗೆ ಸಹಕಾರ ಮತ್ತು ಆರ್ಥಿಕ ಸಹಾಯಗಳನ್ನು ನೀಡಬೇಕು. ಅಧಿಕಾರಿಗಳು ಮತ್ತು ಆಡಳಿತ ವ್ಯವಸ್ಥೆ ಸೂಕ್ತ ಕ್ರಮ ಕೈಗೊಳ್ಳುವಂತೆ ವಿರೋಧ ಪಕ್ಷಗಳು ನೋಡಿಕೊಳ್ಳಬೇಕು.
  2. ವಿರೋಧ ಪಕ್ಷಗಳು ತಮ್ಮ ಪ್ರಭಾವದಿಂದ ಕೇಂದ್ರ ಸರ್ಕಾರ ಮತ್ತು ರಾಜ್ಯ ಸರ್ಕಾರಗಳ ಮೇಲೆ ಒತ್ತಡ ಹೇರಿ ಕೊರೋನಾ ಮೂರನೇ ಅಲೆಯ ವಿರುದ್ಧ ಸರ್ಕಾರಗಳು ಸೂಕ್ತ ಸಿದ್ಧತೆ ಮಾಡಿಕೊಳ್ಳುವಂತೆ ಪ್ರಯತ್ನ ಮಾಡಬೇಕು. ಮಕ್ಕಳಿಗೆ ವಿಶೇಷ ಆಕ್ಸಿಜನ್‌ ಮಾಸ್ಕ್‌ಗಳ ಅಗತ್ಯತೆ ಇದೆ. ಸದ್ಯ ದೇಶದ ಆಸ್ಪತ್ರೆಗಳಲ್ಲಿ ಆಕ್ಸಿಜನ್‌ ಮಾಸ್ಕ್‌ ಗಳ ಸಂಗ್ರಹಣೆ ಇಲ್ಲ. ನಾಗರಿಕ ಸಮುದಾಯ ಮತ್ತು ಅನೇಕ ಸಂಘಟನೆಗಳು ಆಕ್ಸಿಜನ್‌ ಮಾಸ್ಕ್‌ ಪೂರೈಕೆಯ ಪ್ರಯತ್ನ ಮಾಡುತ್ತಿದ್ದು ವಿರೋಧಪಕ್ಷಗಳು ಅವರ ಜೊತೆ ನಿಲ್ಲಬೇಕು.
  3.  ಕೊರೋನಾ ಸಾಂಕ್ರಾಮಿಕ ದೇಶವನ್ನು ತೀವ್ರವಾಗಿ ಕಾಡುತ್ತಿರುವ ಈ ಸಂದರ್ಭದಲ್ಲಿ ಎಲ್ಲರಿಗೂ ಉಚಿತ ವ್ಯಾಕ್ಸೀನ್‌ ನೀಡುವುದು ಅತ್ಯಂತ ಅಗತ್ಯವಾಗಿದೆ. ಕೇಂದ್ರ ಸರ್ಕಾರ ಮತ್ತು ರಾಜ್ಯ ಸರ್ಕಾರಗಳು ವ್ಯಾಕ್ಸೀನ್‌ ಪೂರೈಕೆ ವಿಫಲವಾಗಿರುವ ಹೊತ್ತಿನಲ್ಲಿ ಪ್ರಗತಿಪರ ವಿರೋಧಪಕ್ಷಗಳೆಲ್ಲ ಒಂದಾಗಿ ಯುನಿವರ್ಸಲ್‌ ಫ್ರೀ ವ್ಯಾಕ್ಸಿನೇಶನ್‌ ನೀತಿಯನ್ನು ಜಾರಿಗೆ ತರುವಂತೆ ಕೇಂದ್ರ ಸರ್ಕಾರದ ಮೇಲೆ ತೀವ್ರ ಒತ್ತಡವನ್ನು ಹೇರಬೇಕು.
  4. ದೇಶದ ಆರೋಗ್ಯ ವ್ಯವಸ್ಥೆಯನ್ನು ಮೇಲೆತ್ತುವ ಮತ್ತು ಸುಧಾರಣೆಯನ್ನು ಮಾಡುವ ಪ್ರಯತ್ನದಲ್ಲಿ ವಿರೋಧ ಪಕ್ಷಗಳು ತಮ್ಮ ಬಲವಾದ ಪ್ರತಿಪಾದನೆಯನ್ನು ಮಾಡಬೇಕು. ದೇಶದ ಆರೋಗ್ಯ ವ್ಯವಸ್ಥೆಯ ಅವ್ಯವಸ್ಥೆ ಈಗಾಗಲೇ ಅನೇಕ ದುರಂತಗಳಿಗೆ ದಾರಿ ಮಾಡಿಕೊಟ್ಟಿದೆ. ಮುಂದಿನ ದಿನಗಳಲ್ಲಿ ಮತ್ತೊಮ್ಮೆ ಇಂತಹ ದುರ್ಘಟನೆ, ದುರಂತಗಳು ಆಗದಂತೆ ತಡೆಯುವ ಶಕ್ತಿ ದೇಶದ ವಿರೋಧಪಕ್ಷಗಳಿಗೆ ಮಾತ್ರ ಇದೆ. ಎಲ್ಲಾ ವಿರೋಧ ಪಕ್ಷಗಳು ಒಟ್ಟಾಗಿ ದೇಶದ ಆರೋಗ್ಯ ವ್ಯವಸ್ಥೆಯ ಸುಧಾರಣೆಯ ಕುರಿತು ಕೇಂದ್ರ ಸರ್ಕಾರದ ಗಮನ ಸೆಳೆದು ಕ್ಷಿಪ್ರ ಗತಿಯಲ್ಲಿ ಸರ್ಕಾರಗಳು ಕಾರ್ಯೋನ್ಮುಖರಾಗುವಂತೆ  ಆಗ್ರಹಿಸಬೇಕು.
  5. ಖಾಸಗಿ ಆಸ್ಪತ್ರೆಗಳು ಜನರ ಸುಲಿಗೆಯಲ್ಲಿ ತೊಡಗಿವೆ. ಖಾಸಗಿ ಆಸ್ಪತ್ರೆಗಳು ವಿಧಿಸುವ ಲಸಿಕೆ, ಔಷಧ ಮತ್ತು ಚಿಕಿತ್ಸೆಗಳ ಬೆಲೆಯನ್ನು ದೇಶದ ಬಹುಪಾಲು ಜನರಿಂದ ಭರಿಸಲು ಸಾಧ್ಯವಾಗುತ್ತಿಲ್ಲ. ವಿರೋಧ ಪಕ್ಷಗಳು ಈ ಸಾಂಕ್ರಾಮಿಕದ ಸಂದರ್ಭದಲ್ಲಿ ಖಾಸಗಿ ಆಸ್ಪತ್ರೆಗಳಲ್ಲಿ ಕೂಡ ಜನರಿಗೆ ಅತ್ಯಂತ ಕಡಿಮೆ ಬೆಲೆಯಲ್ಲಿ ಆರೋಗ್ಯ ಚಿಕಿತ್ಸೆಗಳು ಲಭಿಸುವಂತೆ ಒಂದು ನೀತಿಯನ್ನು ಜಾರಿ ಮಾಡುವಂತೆ ಕೇಂದ್ರ ಸರ್ಕಾರವನ್ನು ಒತ್ತಾಯಿಸಬೇಕು.
  6. ದೇಶದಲ್ಲಿ ಮುಕ್ಕಾಲು ಪಾಲು ಜನರು ಕೊರೋನಾ ಸಾಂಕ್ರಾಮಿಕ ಮತ್ತು ಲಾಕ್‌ಡೌನ್‌ ಕಾರಣದಿಂದ ಕೆಲಸ ಕಳೆದುಕೊಂಡಿದ್ದಾರೆ. ಜನರನ್ನು ಹಸಿವು ಮತ್ತು ಬಡತನ ವ್ಯಾಪಕವಾಗಿ ಕಾಡುತ್ತಿದೆ. ಇದು ದೇಶದ ಮುಂದಿನ ಭವಿಷ್ಯವಾದ ಮಕ್ಕಳ ಶಿಕ್ಷಣ ಮತ್ತು ಆರೋಗ್ಯದ ಮೇಲೆ ತೀವ್ರ ಪರಿಣಾಮಗಳನ್ನು ಬೀರಲಿದೆ. ಹಾಗೇ ದೇಶದ ಭವಿಷ್ಯವನ್ನು ಮಂಕಾಗಿಸಲಿದೆ. ಈ ಸಂದರ್ಭದಲ್ಲಿ ಕೇಂದ್ರ ಸರ್ಕಾರ ದೇಶದಲ್ಲಿ ಕೊರೋನಾ ಸಾಂಕ್ರಾಮಿಕದ ಕಾರಣದಿಂದ ಹಸಿವು ಮತ್ತು ಬಡತನಕ್ಕೆ ತುತ್ತಾಗಿ ಸಾಯದಂತೆ ನೋಡಿಕೊಳ್ಳುವ ಹೊಣೆಗಾರಿಕೆಯನ್ನು ಹೊಂದಿದೆ. ಆದರೆ ಕೇಂದ್ರ ಸರ್ಕಾರದಿಂದ ಜನರಿಗೆ ಈ ನಿಟ್ಟಿನಲ್ಲಿ ಯಾವ ಭರವಸೆಗಳು ಮತ್ತು ಸಹಕಾರಗಳು ಲಭಿಸಿಲ್ಲ. ಹೀಗಿರುವಾಗ ದೇಶದ ವಿರೋಧ ಪಕ್ಷಗಳೆಲ್ಲ ಒಂದಾಗಿ ಜನರ ನಿರುದ್ಯೋಗ ಹಸಿವು ಬಡತನವನ್ನು ನೀಗಿಸಲು ಒಂದು ಸಮಗ್ರ ಯೋಜನೆಯನ್ನು ರೂಪಿಸುವಂತೆ ಕೇಂದ್ರ ಸರ್ಕಾರದ ಮೇಲೆ ತೀವ್ರ ಒತ್ತಡವನ್ನು ಹೇರಬೇಕು.
  7. ಕೇಂದ್ರ ಸರ್ಕಾರದ ಸತತ ನಿರ್ಲಕ್ಷ ಮತ್ತು ತಿರಸ್ಕಾರಗಳ ನಡುವೆಯೂ ದೇಶದ ಜನರ ಹಿತದ ದೃಷ್ಟಿಯಿಂದ ವಿರೋಧ ಪಕ್ಷಗಳು ಒಟ್ಟಾಗಿ ಸರ್ಕಾರದ ಜೊತೆ ಮಾತುಕತೆ ಮತ್ತು ಚರ್ಚೆಯನ್ನು ನಡೆಸುವ ಪ್ರಯತ್ನವನ್ನು ಮುಂದುವರಿಸಬೇಕು.

ನಾವೆಲ್ಲರೂ  ದೇಶದ ಜನರೆಲ್ಲರಿಗೂ ಸೂಕ್ತ ಆರೋಗ್ಯ ಮತ್ತು  ಒದಗಿಸುವ ಭಾರತದ ಬೃಹತ್‌ ಹೋರಾಟಕ್ಕೆ  ಭಾರತ ಸರ್ಕಾರ ನಾಯಕತ್ವವನ್ನು ವಹಿಸಲಿ ಎಂದು ಬಯಸುತ್ತೇವೆ . ಕೊರೋನಾ ಸಾಂಕ್ರಾಮಿಕದ ಭಾರತದ ಹೋರಾಟಕ್ಕೆ ಆಡಳಿತ, ವಿರೋಧ ಪಕ್ಷಗಳು, ತಜ್ಞರು, ಅಧಿಕಾರಿಗಳು ಎಲ್ಲರನ್ನು ಒಳಗೊಂಡ ಒಂದು ರಾಷ್ಟ್ರೀಯ ಟಾಸ್ಕ್‌ಫೋರ್ಸ್‌ ಅತ್ಯಂತ ಅವಶ್ಯಕವಾಗಿದೆ. ಕಳೆದ ಕೆಲವು ವರ್ಷಗಳ ಅನುಭವದಿಂದ ಕೇಂದ್ರ ಸರ್ಕಾರ ಅಂತಹ ಯಾವ ಒಮ್ಮತದ ಕ್ರಮಗಳನ್ನು ಕೈಗೊಳ್ಳುವುದಿಲ್ಲ ಎಂಬುದು ವೇದ್ಯವಾಗಿದೆ. ದೇಶದ ಸ್ವಾತಂತ್ರ್ಯದ ಹೋರಾಟದಲ್ಲಿ ಎಲ್ಲರೂ ಒಂದಾದಂತೆ ಕೊರೋನಾ ವಿರುದ್ಧವೂ ಎಲ್ಲರು ಒಗ್ಗಾಟ್ಟಾಗಿ ಹೋರಾಡಬೇಕಾದ ಸಂದರ್ಭ ಬಂದಿದೆ. ಸರ್ಕಾರದ ವೈಫಲ್ಯ ಅದನ್ನು ಮುಚ್ಚಲು ಅಂಕಿ ಅಂಶಗಳ ತಿರುಚುವಿಕೆ, ಸುಳ್ಳುಗಳ ಹರಡುವಿಕೆಗಳ ವಿರುದ್ಧ ಸಂಸತ್ತು ಮತ್ತು ಮಾಧ್ಯಮಗಳಲ್ಲಿ ಮಾತ್ರವಲ್ಲದೇ ಪತ್ರಿಕೆ, ಡಿಜಿಟಲ್‌ ಮತ್ತು ಸಾಮಾಜಿಕ ಮಾಧ್ಯಮಗಳ ಮೂಲಕ ವಿರೋಧ ಪಕ್ಷಗಳು ಒಟ್ಟಾಗಿ ಆಂದೋಲನವನ್ನು ರೂಪಿಸಬೇಕು. ಕೇಂದ್ರ ಸರ್ಕಾರ ಅಗತ್ಯ ಕ್ರಮಗಳನ್ನು ಕೈಗೊಳ್ಳುವವರೆಗೂ ಜನರ ಪರವಾದ ತಮ್ಮ ಹೋರಾಟ, ಬೇಡಿಕೆ ಮತ್ತು ಆಗ್ರಹಗಳನ್ನು ನಿಲ್ಲಿಸಬಾರದು.

ಭಾರತ ಕಳೆದ 70 ವರ್ಷದಲ್ಲಿ ಪೊಲೀಯೋ ಸೇರಿದಂತೆ ವಿವಿಧ ವೈರಸ್‌ಗಳಿಗೆ ಬೃಹತ್‌ ಪ್ರಮಾಣದ ಲಸಿಕಾ ಕಾರ್ಯಕ್ರಮಗಳನ್ನು ಕೈಗೊಂಡಿದೆ. ಅದರಲ್ಲಿ ಯಶಸ್ವಿಯೂ ಆಗಿದೆ. ಸಾಂಕ್ರಾಮಿಕವನ್ನು ಎದುರಿಸಿದ ದೇಶದ ಹಿಂದಿನ ಎಲ್ಲ ಅನುಭವಗಳನ್ನು ಒಟ್ಟುಗೂಡಿಸಿ ಕೊರೋನಾ ವಿರುದ್ಧ ಒಂದು ಸಮಗ್ರ ಆರೋಗ್ಯ ಮತ್ತು ಲಸಿಕಾ ಯೋಜನೆಗಳನ್ನು ರೂಪಿಸುವಲ್ಲಿ ದೇಶದ ವಿರೋಧ ಪಕ್ಷಗಳು ಜನರ ಜೊತೆ ಮತ್ತು ಸರ್ಕಾರದ ಜೊತೆ ಭಾಗಿಯಾಗಬೇಕೆಂದು ದೇಶದ ಜವಾಬ್ಧಾರಿಯುತ ನಾಗರಿಕರಾದ ನಾವು ನಮ್ಮ ಸಹ ದೇಶವಾಸಿಗಳೆಲ್ಲರ ಪರವಾಗಿ ಪ್ರಾರ್ಥಿಸುತ್ತೇವೆ.

ಇಂತಿ ತಮ್ಮ ವಿಶ್ವಾಸಿಗಳಾದ

  1. ಅರುಣ್ ರೊಯ್‌, ಮಾಜಿ ಸದಸ್ಯರು ರಾಷ್ಟ್ರೀಯ ಸಲಹಾ ಮಂಡಳಿ
  2. ಕೌಶಿಕ್‌ ಬಸು, ಮುಖ್ಯ ಹಣಕಾಸು ತಜ್ಞರು, ವಿಶ್ವ ಬ್ಯಾಂಕ್‌
  3. ಫ್ರೊ. ರೋಮಿಲಾ ಥಾಪರ್‌, ಇತಿಹಾಸ ತಜ್ಞೆ ಮತ್ತು ಹಿರಿಯ ಪ್ರಾಧ್ಯಾಪಕರು ಜೆಎನ್‌ಯು
  4. ಹರ್ಷ ಮಂದರ್‌, ನಿವೃತ್ತ ಐಎಎಸ್‌ ಅಧಿಕಾರಿ
  5. ಫ್ರೊ. ಬಾರ್ಬರಾ ಹ್ಯಾರಿಸ್‌, ಆಕ್ಸ್ಫರ್ಡ್‌ ವಿಶ್ವವಿದ್ಯಾಲಯ
  6. ಗಣೇಶ್‌ ದೇವಿ, ಹಿರಿಯ ಸಾಹಿತಿ
  7. ಅಹಿಸ್‌ ರಾಯ್‌,  ಅಧ್ಯಕ್ಷರು ಭಾರತ ಪತ್ರಕರ್ತರ ಸಂಘ (ಯುರೋಪ್)‌
  8. ಸುಮಿತ್‌ ಸರ್ಕಾರ್‌, ಇತಿಹಾಸಕಾರರು
  9. ನಿಶಾ ಅಗರ್ವಾಲ್‌, ಒಕ್ಸ್‌ ಫಾಮ್‌ ಇಂಡಿಯಾ ಸಂಸ್ಥೆಯ ಮಾಜಿ ನಿರ್ದೇಶಕರು
  10. ಫ್ರೋ. ಇರ್ಫಾನ್ ಹಬೀಬ್‌‌, ನ್ಯಾಯಶಾಸ್ತ್ರಜ್ಞರು

ಇವರನ್ನು ಒಳಗೊಂಡು ದೇಶದ ಪ್ರತಿಷ್ಠಿತ ಗಣ್ಯರು, ಉದ್ಯಮಿಗಳು, ಅಂತರಾಷ್ಟ್ರೀಯ ಮಟ್ಟದ ಆರ್ಥಿಕ ತಜ್ಞರು, ವಿವಿಧ ಕಂಪನಿಗಳ ಮುಖ್ಯಸ್ಥರು ಸೇರಿ 187 ಜನರು ದೇಶದ ಜನರ ಪರವಾಗಿ ವಿರೋಧ ಪಕ್ಷಗಳಿಗೆ ಬರೆದ ಬಹಿರಂಗ ಪತ್ರಕ್ಕೆ ಸಹಿ ಹಾಕಿದ್ದಾರೆ.


ಇದನ್ನೂ ಓದಿ: ಬ್ಲ್ಯಾಕ್ ಫಂಗಸ್: ವಾಸ್ತವವೇನು? ವೈದ್ಯರೇನು ಹೇಳುತ್ತಿದ್ದಾರೆ?: ಡಾ. ವಾಸು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತಕ್ಷಣವೇ ‘SIR ಹೆಲ್ಪ್‌ ಡೆಸ್ಕ್‌’ ಸ್ಥಾಪಿಸುವಂತೆ ಅಧಿಕಾರಿಗಳಿಗೆ ಸಿಎಂ ಸೂಚನೆ

ರಾಜ್ಯದಲ್ಲಿ ಭಾರತೀಯ ಚುನಾವಣಾ ಆಯೋಗದಿಂದ ನಡೆಯುತ್ತಿರುವ ಎಸ್‌ಐಆರ್ (Special Electoral Roll Purification) ಪ್ರಕ್ರಿಯೆ ಸಂದರ್ಭದಲ್ಲಿ ರಾಜ್ಯದ ಯಾವುದೇ ಪ್ರಜೆಯೂ ತನ್ನ ಅತ್ಯಮೂಲ್ಯವಾದ ಮತದಾನದ ಹಕ್ಕನ್ನು ಕಳೆದುಕೊಳ್ಳಬಾರದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ವಿಷಾಹಾರಕ್ಕೆ ಜಾಗತಿಕವಾಗಿ ವರ್ಷಕ್ಕೆ 15 ಲಕ್ಷ ಜನರು ಬಲಿ: ಮಕ್ಕಳಿಗೆ ಹೆಚ್ಚಿನ ಅಪಾಯ: ಭಾರತದ ಸ್ಥಿತಿಯೂ ಆತಂಕಕಾರಿ! 

ನಾವು ದಿನನಿತ್ಯ ಸೇವಿಸುವ ಆಹಾರವೇ ನಮ್ಮ ಜೀವಕ್ಕೆ ಕಂಟಕವಾಗುತ್ತಿದೆಯೇ? ಹೌದು ಎನ್ನುತ್ತದೆ ವಿಶ್ವ ಆರೋಗ್ಯ ಸಂಸ್ಥೆಯ (WHO) ಇತ್ತೀಚಿನ ಆಘಾತಕಾರಿ ವರದಿ. ಜಾಗತಿಕವಾಗಿ ಅಸುರಕ್ಷಿತ ಮತ್ತು ಕಲುಷಿತ ಆಹಾರದ ಸೇವನೆಯಿಂದಾಗಿ ಪ್ರತಿ ವರ್ಷ...

ಡಿಕೆಶಿ ಸಂಪುಟದಲ್ಲಿ ಅಲ್ಪಸಂಖ್ಯಾತರಿಗೆ ಸಿಗುತ್ತಾ ಸೂಕ್ತ ಪ್ರಾತಿನಿಧ್ಯ?

ಮಹತ್ವದ ರಾಜಕೀಯ ಬೆಳವಣಿಗೆಯಲ್ಲಿ ರಾಜ್ಯದ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿ, ಡಿ.ಕೆ ಶಿವಕುಮಾರ್ ಹೊಸ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಾಗಿದೆ. ಈ ಮೂಲಕ ಕಳೆದ ಒಂದು ವರ್ಷದಿಂದ ನಡೆಯುತ್ತಿದ್ದ ಸಿಎಂ ಬದಲಾವಣೆಯ...

‘ಕರ್ನಾಟಕದಲ್ಲಿ SIR’ ಮತ ಉಳಿಸಿಕೊಳ್ಳುವಂತೆ ಕಾರ್ಯಕರ್ತರಿಗೆ CM ಡಿ.ಕೆ ಶಿವಕುಮಾರ್ ಕರೆ!

ಕರ್ನಾಟಕ ರಾಜಕಾರಣದಲ್ಲಿ ಹೊಸ ಯುಗ ಆರಂಭವಾಗಿದೆ. ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಪ್ರಮಾಣವಚನ ಸ್ವೀಕರಿಸಿದ್ದಾರೆ. ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಕೆಲಸ ಮಾಡದಿರುವ ಸಚಿವ ಮತ್ತು ಶಾಸಕರನ್ನು ಸುಮ್ಮನೆ ಬಿಡುವುದಿಲ್ಲ ಎಂದು...

ವೋಟರ್ ಐಡಿ, ಆಧಾರ್ ಇದ್ದರೂ ನೆಮ್ಮದಿ ಇಲ್ಲ, ಪಶ್ಚಿಮ ಬಂಗಾಳದಲ್ಲಿ ಶುರುವಾಯ್ತು ‘ಹೋಲ್ಡಿಂಗ್ ಸೆಂಟರ್’ಗಳ ಭಯ

ಪಶ್ಚಿಮ ಬಂಗಾಳದಲ್ಲಿ "ಯಾರು ಈಗಾಗಲೇ ಮತದಾರರ ಪಟ್ಟಿಯಿಂದ ಹೊರಗುಳಿದಿದ್ದಾರೋ ಮತ್ತು ಟ್ರಿಬ್ಯೂನಲ್‌ನ (ನ್ಯಾಯಮಂಡಳಿ) ಅನುಮೋದನೆಗಾಗಿ ಕಾಯುತ್ತಿದ್ದಾರೋ, ಅಂತಹವರಲ್ಲಿ ಹೊಸ ಪೊಲೀಸ್ ವ್ಯವಸ್ಥೆ ಮತ್ತು ಬಂಧನ ಕೇಂದ್ರಗಳು (ಡಿಟೆಂಷನ್ ಸೆಂಟರ್) ತಮ್ಮನ್ನು ವಿದೇಶಿಯರಂತೆ ನಡೆಸಿಕೊಳ್ಳಲ್ಪಡಬಹುದು...

ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹ : ಮೊದಲ ಬೀದಿ ಹೋರಾಟಕ್ಕೆ ಸಜ್ಜಾದ ಕಾಕ್ರೋಚ್ ಜನತಾ ಪಾರ್ಟಿ

ಸಾಮಾಜಿಕ ಜಾಲತಾಣಗಳಲ್ಲಿ ಹೊಸ ಅಲೆಯನ್ನು ಸೃಷ್ಟಿಸಿರುವ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ತನ್ನ ಮೊದಲ ಬೀದಿ ಹೋರಾಟಕ್ಕೆ ಸಜ್ಜಾಗಿದೆ. ಜೂನ್ 6, 2026ರಂದು ನವದೆಹಲಿಯ ಜಂತರ್ ಮಂತರ್‌ನಲ್ಲಿ ಸಿಜೆಪಿ ಪ್ರತಿಭಟನೆ ಆಯೋಜಿಸಿದ್ದು, ಇದರ...

ದೆಹಲಿ: ‘ಮಾಳವೀಯ ನಗರ’ ಅಗ್ನಿ ದುರಂತಕ್ಕೆ 21 ಜನರು ಬಲಿ: ವ್ಯವಸ್ಥೆಯ ವೈಫಲ್ಯದ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿರುವ ನಾಗರೀಕರು 

ದೆಹಲಿಯ ಅತ್ಯಂತ ಜನನಿಬಿಡ ಮತ್ತು ವಾಣಿಜ್ಯ ಪ್ರದೇಶವಾದ ಮಾಳವೀಯ ನಗರದಲ್ಲಿ 2026 ಜೂನ್ 3, ಬುಧವಾರ ನಸುಕಿನ ಜಾವ ಸಂಭವಿಸಿದ ಭೀಕರ ಅಗ್ನಿ ದುರಂತವು ಇಡೀ ದೇಶವನ್ನು ಬೆಚ್ಚಿಬೀಳಿಸಿದೆ. 'ಫ್ಲೋರಿಶ್ ಸ್ಟೇ ಬಿ...

“ವಿಷ ಕಾರದೆ ಮಾತನಾಡಿ”: ಕಲ್ಲಡ್ಕ ಪ್ರಭಾಕರ ಭಟ್‌ಗೆ ಹೈಕೋರ್ಟ್ ತಾಕೀತು

ಹೆಚ್ಚು ಮಕ್ಕಳನ್ನು ಹೆರುವ ಮುಸ್ಲಿಂ ಮಹಿಳೆಯರನ್ನು ಲೇವಡಿ ಮಾಡುವ ಮೂಲಕ ಕೋಮು ದ್ವೇಷ ಹರಡಿದ್ದಾರೆ ಎಂಬ ಆರೋಪ ಎದುರಿಸುತ್ತಿರುವ ಹಿಂದುತ್ವ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ಕಲ್ಲಡ್ಕ ಅವರಿಗೆ ತಮ್ಮ ಮುಂದಿನ ಭಾಷಣಗಳಲ್ಲಿ...

ಪತ್ರಕರ್ತ- ಚಿತ್ರ ನಿರ್ಮಾಪಕ ಸೇರಿದಂತೆ ಹಲವು ಕ್ಷೇತ್ರಗಳ ಪ್ರಮುಖರನ್ನು ವಕ್ತಾರರನ್ನಾಗಿ ನೇಮಿಸಿದ ಸಿಜೆಪಿ

ಆನ್‌ಲೈನ್ ಸೆನ್ಸೇಷನ್ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ)ಯು ಶಿಕ್ಷಣ ವ್ಯವಸ್ಥೆಯಲ್ಲಿನ ವೈಫಲ್ಯಗಳ ವಿರುದ್ಧ ಪ್ರಸ್ತಾಪಿಸಿದ ಪ್ರತಿಭಟನೆಗೆ ಮುಂಚಿತವಾಗಿ ತನ್ನ ವ್ಯಾಪ್ತಿಯನ್ನು ವಿಸ್ತರಿಸುವ ಸಲುವಾಗಿ ಮೂವರು ವಕ್ತಾರರ ಹೆಸರನ್ನು ಘೋಷಿಸಿದೆ. ಎಕ್ಸ್‌ನಲ್ಲಿನ ಪೋಸ್ಟ್‌ ಮಾಡಿರುವ ಅಭಿಜೀತ್...

CBSE ಪರೀಕ್ಷೆಯಲ್ಲಿ OSM ವಿವಾದ | ಸಂಸದೀಯ ಸಮಿತಿಯ ಮುಂದೆ ಹಾಜರಾದ ವಿದ್ಯಾರ್ಥಿ ಸಾರ್ಥಕ್ ಸಿದ್ಧಾಂತ್

ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಶನ್ (ಸಿಬಿಎಸ್‌ಸಿ) ಆನ್-ಸ್ಕ್ರೀನ್ ಮಾರ್ಕಿಂಗ್ (ಒಎಸ್‌ಎಂ) ಮೌಲ್ಯಮಾಪನ ವ್ಯವಸ್ಥೆಯಲ್ಲಿನ ಗಂಭೀರ ಲೋಪಗಳ ಕುರಿತು ವಿವಾದ ಭುಗಿಲೆದ್ದಿರುವ ನಡುವೆ, 17 ವರ್ಷದ ವಿದ್ಯಾರ್ಥಿ ಸಾರ್ಥಕ್ ಸಿದ್ಧಾಂತ್ ನವದೆಹಲಿಯ ಸಂಸತ್ ಭವನದಲ್ಲಿ...