Homeಮುಖಪುಟಪೊಲೀಸ್ ಠಾಣೆಗೆ ಮುತ್ತಿಗೆ ಹಾಕಿದ ರೈತರು: ತಪ್ಪೊಪ್ಪಿಕೊಂಡು ಕ್ಷಮೆಯಾಚಿಸಿದ ಜೆಜೆಪಿ ಶಾಸಕ

ಪೊಲೀಸ್ ಠಾಣೆಗೆ ಮುತ್ತಿಗೆ ಹಾಕಿದ ರೈತರು: ತಪ್ಪೊಪ್ಪಿಕೊಂಡು ಕ್ಷಮೆಯಾಚಿಸಿದ ಜೆಜೆಪಿ ಶಾಸಕ

- Advertisement -
- Advertisement -

ಕೇಂದ್ರದ ವಿವಾದಾತ್ಮಕ ಕೃಷಿ ಕಾನೂನುಗಳನ್ನು ವಿರೋಧಿಸಿ ಹರಿಯಾಣದ ತೋಹಾನಾ ನಗರದಲ್ಲಿ ಪ್ರತಿಭಟನೆ ನಡೆಸುತ್ತಿದ್ದ ರೈತರನ್ನು ಅವಾಚ್ಯ ಪದಗಳಿಂದ ನಿಂದಿಸಿದ್ದ ಹರಿಯಾಣ ಜೆಜೆಪಿ ಶಾಸಕ ದೇವೇಂದ್ರ ಸಿಂಗ್‌ ಬಾಬ್ಲಿ ಕೊನೆಗೂ ತಪ್ಪೊಪ್ಪಿಕೊಂಡು ರೈತರ ಬಳಿ ಕ್ಷಮೆ ಯಾಚಿಸಿದ್ದಾರೆ.

ಹರಿಯಾಣದಲ್ಲಿ ಜಜೆಪಿ ಪಕ್ಷವು ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಂಡು ಅಧಿಕಾರದಲ್ಲಿದೆ. ಅದರ ಶಾಸಕ ಜೂನ್ 1 ರಂದು ತೋಹಾನಾದಲ್ಲಿ ಪ್ರತಿಭಟಿಸಿದ ರೈತರ ಕುರಿತು ಹಗುರವಾಗಿ ಮಾತನಾಡಿದ್ದರು. ವಿವಾದ ಭುಗಿಲೆದ್ದ ನಂತರ ಹೋರಾಟನಿರತ ರೈತರೊಂದಿಗೆ ಸಭೆ ನಡೆಸಿ ಕ್ಷಮೆ ಕೋರಿದ್ದಾರೆ.

`ಜೂನ್‌ 1 ರಂದು ನಡೆದ ಘಟನೆಯಲ್ಲಿ ಭಾಗಿಯಾದವರನ್ನು ನಾನು ಕ್ಷಮಿಸುತ್ತೇನೆ ಹಾಗೂ ಒಬ್ಬ ಜನಪ್ರತಿನಿಧಿಯಾಗಿ ಅಂದು ನಾನು ಆ ಪದಗಳನ್ನು ಬಳಸಿದ್ದಾಕ್ಕಾಗಿ ವಿಷಾದಿಸುತ್ತೇನೆ ಮತ್ತು ಕ್ಷಮೆ ಯಾಚಿಸುತ್ತೇನೆ’ ಎಂದು ಶನಿವಾರ ಸಂಜೆ ರೈತ ಮುಖಂಡರೊಂದಿಗಿನ ಸಭೆಯ ನಂತರ ಅವರು ತಿಳಿಸಿದರು.

ರೈತ ಹೋರಾಟಗಾರ ರಾಕೇಶ್‌ ಟಿಕಾಯತ್‌ರವರು ದೇವೇಂದ್ರ ಸಿಂಗ್‌ ಬಾಬ್ಲಿಯವರ ಕ್ಷಮೆಯಾಚನೆಯನ್ನು ಸ್ವೀಕರಿಸಿದ್ದಾರೆ. `ಶಾಸಕರು ಕ್ಷಮೆಯಾಚಿಸಿರುವುದು ಒಳ್ಳೆಯದು… ಈಗ ರೈತ ಸಮಿತಿ ಶಾಸಕರೊಂದಿಗೆ ಮಾತುಕತೆ ನಡೆಸುತ್ತಿದ್ದು ಮುಂದಿನ ನಿರ್ಧಾರಗಳನ್ನು ತೆಗೆದುಕೊಳ್ಳುತ್ತದೆ’ ಎಂದು ರಾಕೇಶ್‌ ಟಿಕಾಯತ್‌ ತಿಳಿಸಿದ್ದಾರೆ.

ಶಾಸಕರ ಕ್ಷಮೆಯಾಚನೆಯ ಹೊರತಾಗಿಯೂ ರೈತರು ಪ್ರತಿಭಟನೆಯನ್ನು ಮುಂದುವರೆಸಿದ್ದಾರೆ. ಮಂಗಳವಾರದ ಘರ್ಷಣೆಯ ನಂತರ ಬಂಧಿಸಲ್ಪಟ್ಟ ಮೂವರು ರೈತರನ್ನು ಬಿಡುಗಡೆ ಮಾಡುವಂತೆ ಒತ್ತಾಯಿಸುತ್ತಿದ್ದಾರೆ.

ಸಂಯುಕ್ತ ಕಿಸಾನ್‌ ಮೋರ್ಚಾ ಬ್ಯಾನರ್‌ ಅಡಿಯಲ್ಲಿ ರಾಕೇಶ್‌ ಟಿಕಾಯತ್‌, ಗುರ್ನಾಮ್‌ ಸಿಂಗ್‌ ಚುದಾನಿ ಹಾಗೂ ಯೋಗೇಂದ್ರ ಯಾದವ್‌ ಅವರ ನೇತೃತ್ವದಲ್ಲಿ ನೂರಾರು ರೈತರು ತೋಹಾನ ಪೊಲೀಸ್‌ ಠಾಣೆಗೆ ಪ್ರತಿಭಟನಾ ಮೆರವಣಿಗೆ ನಡೆಸಿದ ನಂತರ ದೇವೇಂದ್ರ ಬಾಬ್ಲಿ ಅವರು ಕ್ಷಮೆಯಾಚಿಸಿದ್ದಾರೆ.

ಶಾಸಕರ ಹೇಳಿಕೆ ಮತ್ತು ಘರ್ಷಣೆಗೆ ಸಂಬಂಧಿಸಿದಂತೆ ಮೂವರು ರೈತರನ್ನು ಬಂಧಿಸಿರುವುದನ್ನು ವಿರೋಧಿಸಿ ಅವರು ಪ್ರತಿಭಟನೆ ನಡೆಸುತ್ತಿದ್ದರು. ಬಾಬ್ಲಿ ಅವರು ಕ್ಷಮೆಯಾಚಿಸದಿದ್ದರೆ ಸೋಮವಾರ ಹರಿಯಾಣದಾದ್ಯಂತ ಪೊಲೀಸ್‌ ಠಾಣೆಗಳನ್ನು  ಮುತ್ತಿಗೆ ಹಾಕುವುದಾಗಿ ರೈತರು ಎಚ್ಚರಿಸಿದ್ದರು.

ತೋಹಾನದಲ್ಲಿ ನಡೆದ ಘರ್ಷಣೆಗೆ ಸಂಬಂಧಿಸಿದಂತೆ ರೈತರ ವಿರುದ್ಧ ಎರಡು ಎಫ್‌ಐಆರ್‌ಗಳು ದಾಖಲಿಸಲಾಗಿದ್ದು, ಶಾಸಕರ ಮೇಲೆ ದೈಹಿಕ ಹಲ್ಲೆ ಮಾಡಿರುವ ಆರೋಪದಡಿಯಲ್ಲಿ ಪ್ರಕರಣ ದಾಖಲಾಗಿತ್ತು.

ಈ ಘರ್ಷಣೆ ನಡೆದ ಮರುದಿನ ರೈತರು ಶಾಸಕರ ಮನೆಗೆ ಮುತ್ತಿಗೆ ಹಾಕಿದ್ದು, ಈ ಕುರಿತು ಪ್ರಕರಣವನ್ನು ನೋಂದಾಯಿಸಲಾಗಿದೆ. ಈ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಸುಮಾರು 30 ಜನ ಪ್ರತಿಭಟನಾಕಾರರನ್ನು ಸ್ಥಳೀಯ ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದಾರೆ ಎಂದು ಪಿಟಿಐ ತಿಳಿಸಿದೆ.

ಈ ಕುರಿತು ದೂರು ನೀಡಿದ್ದ ದೇವೇಂದ್ರ ಬಾಬ್ಲಿ ಅವರು, `ನನ್ನ ಮೇಲೆ ಕೊಲೆ ಯತ್ನ ನಡೆದಿದೆ. ಪ್ರತಿಭಟನಾಕಾರರು ನಮ್ಮ ವಾಹನದ ಮೇಲೆ ಮೂರು ಬಾರಿ ಹಲ್ಲೆ ನಡೆಸಿದರು ಹಾಗೂ ನನ್ನ ಜೊತೆಯಲ್ಲಿದ್ದವರನ್ನು ಗಾಯಗೊಳಿಸಿದ್ದಾರೆ’ ಎಂದು ಆರೋಪಿಸಿದ್ದರು. ಅಲ್ಲದೆ ತನ್ನ ಮೇಲಿನ ಅವಾಚ್ಯ ಶಬ್ದಗಳನ್ನು ಬಳಸಿದ ಆರೋಪವನ್ನು ಅವರು ನಿರಾಕರಿಸಿದ್ದರು.

ರೈತ ಮುಖಂಡ ಗುರ್ನಾಮ್‌ ಸಿಂಗ್‌ ಚಾದುನಿ ಪ್ರತಿಭಟನಾಕಾರರಿಗೆ ಶಾಂತಿಯುತವಾಗಿ ಹೋರಾಟ ನಡೆಸುವಂತೆ ಮನವಿ ಮಾಡಿದ್ದಾರೆ. `ಈ ಆಂದೋಲನವನ್ನು ಮುರಿಯುವಂತಹ ಯಾವುದೇ ಹೆಜ್ಜೆಯನ್ನು ನಾವು ತೆಗೆದುಕೊಳ್ಳಬೇಕಾಗಿಲ್ಲ. ಒಂದು ಸಣ್ಣ ನಷ್ಟವು ಭಾರಿ ವೆಚ್ಚವನ್ನುಂಟು ಮಾಡುತ್ತದೆ. ಹಾಗಾಗಿ ನಾವು ಶಾಂತಿಯುತ ರೀತಿಯಲ್ಲಿ ಹೋರಾಟ ಮುಂದುವರೆಸಬೇಕಾಗಿದೆ’ ಎಂದು ಅವರು ತಿಳಿಸಿದ್ದಾರೆ.

ಮೋದಿ ನೇತೃತ್ವದ ಒಕ್ಕೂಟ ಸರ್ಕಾರ ಜಾರಿಗೊಳಿಸಿರುವ ಕೃಷಿ ಕಾನೂನುಗಳನ್ನು ವಿರೋಧಿಸಿ ಭಾರಿ ಪ್ರಮಾಣದಲ್ಲಿ ರೈತರು ದೆಹಲಿ ಗಡಿಗಳಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ. ಈ ಹೋರಾಟವನ್ನು ಬೆಂಬಲಿಸಿ ಹರಿಯಾಣ, ಪಂಜಾಬ್‌ ಸೇರಿದಂತೆ ದೇಶದ ವಿವಿಧ ಭಾಗಗಳಲ್ಲಿ ಜನರು ಪ್ರತಿಭಟನೆ ನಡೆಸುತ್ತಿದ್ದಾರೆ.

ಕೃಪೆ: ಅನ್ನದ ಋಣ


ಇದನ್ನೂ ಓದಿ; ರೈತ ಪ್ರತಿಭಟನೆಗೆ ಬೆದರಿದ ಹರಿಯಾಣ ಸಿಎಂ ಖಟ್ಟರ್: ನಿಗಧಿತ ಸಮಯಕ್ಕಿಂತ ಮುಂಚೆಯೇ ಕಾರ್ಯಕ್ರಮ ಮುಕ್ತಾಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು’ ಎಂಬಂತೆ NTA ಯಿಂದ ₹7.5 ಕೋಟಿಯ ಬೃಹತ್ ಸೆಕ್ಯೂರಿಟಿ ಟೆಂಡರ್

ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಾಗಿ, ಅಮಾಯಕ ವಿದ್ಯಾರ್ಥಿಗಳ ಜೀವ-ಭವಿಷ್ಯ ಹಾಳಾದ ಮೇಲೆ, ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು ಎಂಬಂತೆ ಈಗ ಎನ್‌ಟಿಎ (NTA) ₹7.5 ಕೋಟಿ ವೆಚ್ಚದ ಭದ್ರತಾ ಟೆಂಡರ್...

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...