Homeಮುಖಪುಟಪೊಲೀಸ್ ಠಾಣೆಗೆ ಮುತ್ತಿಗೆ ಹಾಕಿದ ರೈತರು: ತಪ್ಪೊಪ್ಪಿಕೊಂಡು ಕ್ಷಮೆಯಾಚಿಸಿದ ಜೆಜೆಪಿ ಶಾಸಕ

ಪೊಲೀಸ್ ಠಾಣೆಗೆ ಮುತ್ತಿಗೆ ಹಾಕಿದ ರೈತರು: ತಪ್ಪೊಪ್ಪಿಕೊಂಡು ಕ್ಷಮೆಯಾಚಿಸಿದ ಜೆಜೆಪಿ ಶಾಸಕ

- Advertisement -
- Advertisement -

ಕೇಂದ್ರದ ವಿವಾದಾತ್ಮಕ ಕೃಷಿ ಕಾನೂನುಗಳನ್ನು ವಿರೋಧಿಸಿ ಹರಿಯಾಣದ ತೋಹಾನಾ ನಗರದಲ್ಲಿ ಪ್ರತಿಭಟನೆ ನಡೆಸುತ್ತಿದ್ದ ರೈತರನ್ನು ಅವಾಚ್ಯ ಪದಗಳಿಂದ ನಿಂದಿಸಿದ್ದ ಹರಿಯಾಣ ಜೆಜೆಪಿ ಶಾಸಕ ದೇವೇಂದ್ರ ಸಿಂಗ್‌ ಬಾಬ್ಲಿ ಕೊನೆಗೂ ತಪ್ಪೊಪ್ಪಿಕೊಂಡು ರೈತರ ಬಳಿ ಕ್ಷಮೆ ಯಾಚಿಸಿದ್ದಾರೆ.

ಹರಿಯಾಣದಲ್ಲಿ ಜಜೆಪಿ ಪಕ್ಷವು ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಂಡು ಅಧಿಕಾರದಲ್ಲಿದೆ. ಅದರ ಶಾಸಕ ಜೂನ್ 1 ರಂದು ತೋಹಾನಾದಲ್ಲಿ ಪ್ರತಿಭಟಿಸಿದ ರೈತರ ಕುರಿತು ಹಗುರವಾಗಿ ಮಾತನಾಡಿದ್ದರು. ವಿವಾದ ಭುಗಿಲೆದ್ದ ನಂತರ ಹೋರಾಟನಿರತ ರೈತರೊಂದಿಗೆ ಸಭೆ ನಡೆಸಿ ಕ್ಷಮೆ ಕೋರಿದ್ದಾರೆ.

`ಜೂನ್‌ 1 ರಂದು ನಡೆದ ಘಟನೆಯಲ್ಲಿ ಭಾಗಿಯಾದವರನ್ನು ನಾನು ಕ್ಷಮಿಸುತ್ತೇನೆ ಹಾಗೂ ಒಬ್ಬ ಜನಪ್ರತಿನಿಧಿಯಾಗಿ ಅಂದು ನಾನು ಆ ಪದಗಳನ್ನು ಬಳಸಿದ್ದಾಕ್ಕಾಗಿ ವಿಷಾದಿಸುತ್ತೇನೆ ಮತ್ತು ಕ್ಷಮೆ ಯಾಚಿಸುತ್ತೇನೆ’ ಎಂದು ಶನಿವಾರ ಸಂಜೆ ರೈತ ಮುಖಂಡರೊಂದಿಗಿನ ಸಭೆಯ ನಂತರ ಅವರು ತಿಳಿಸಿದರು.

ರೈತ ಹೋರಾಟಗಾರ ರಾಕೇಶ್‌ ಟಿಕಾಯತ್‌ರವರು ದೇವೇಂದ್ರ ಸಿಂಗ್‌ ಬಾಬ್ಲಿಯವರ ಕ್ಷಮೆಯಾಚನೆಯನ್ನು ಸ್ವೀಕರಿಸಿದ್ದಾರೆ. `ಶಾಸಕರು ಕ್ಷಮೆಯಾಚಿಸಿರುವುದು ಒಳ್ಳೆಯದು… ಈಗ ರೈತ ಸಮಿತಿ ಶಾಸಕರೊಂದಿಗೆ ಮಾತುಕತೆ ನಡೆಸುತ್ತಿದ್ದು ಮುಂದಿನ ನಿರ್ಧಾರಗಳನ್ನು ತೆಗೆದುಕೊಳ್ಳುತ್ತದೆ’ ಎಂದು ರಾಕೇಶ್‌ ಟಿಕಾಯತ್‌ ತಿಳಿಸಿದ್ದಾರೆ.

ಶಾಸಕರ ಕ್ಷಮೆಯಾಚನೆಯ ಹೊರತಾಗಿಯೂ ರೈತರು ಪ್ರತಿಭಟನೆಯನ್ನು ಮುಂದುವರೆಸಿದ್ದಾರೆ. ಮಂಗಳವಾರದ ಘರ್ಷಣೆಯ ನಂತರ ಬಂಧಿಸಲ್ಪಟ್ಟ ಮೂವರು ರೈತರನ್ನು ಬಿಡುಗಡೆ ಮಾಡುವಂತೆ ಒತ್ತಾಯಿಸುತ್ತಿದ್ದಾರೆ.

ಸಂಯುಕ್ತ ಕಿಸಾನ್‌ ಮೋರ್ಚಾ ಬ್ಯಾನರ್‌ ಅಡಿಯಲ್ಲಿ ರಾಕೇಶ್‌ ಟಿಕಾಯತ್‌, ಗುರ್ನಾಮ್‌ ಸಿಂಗ್‌ ಚುದಾನಿ ಹಾಗೂ ಯೋಗೇಂದ್ರ ಯಾದವ್‌ ಅವರ ನೇತೃತ್ವದಲ್ಲಿ ನೂರಾರು ರೈತರು ತೋಹಾನ ಪೊಲೀಸ್‌ ಠಾಣೆಗೆ ಪ್ರತಿಭಟನಾ ಮೆರವಣಿಗೆ ನಡೆಸಿದ ನಂತರ ದೇವೇಂದ್ರ ಬಾಬ್ಲಿ ಅವರು ಕ್ಷಮೆಯಾಚಿಸಿದ್ದಾರೆ.

ಶಾಸಕರ ಹೇಳಿಕೆ ಮತ್ತು ಘರ್ಷಣೆಗೆ ಸಂಬಂಧಿಸಿದಂತೆ ಮೂವರು ರೈತರನ್ನು ಬಂಧಿಸಿರುವುದನ್ನು ವಿರೋಧಿಸಿ ಅವರು ಪ್ರತಿಭಟನೆ ನಡೆಸುತ್ತಿದ್ದರು. ಬಾಬ್ಲಿ ಅವರು ಕ್ಷಮೆಯಾಚಿಸದಿದ್ದರೆ ಸೋಮವಾರ ಹರಿಯಾಣದಾದ್ಯಂತ ಪೊಲೀಸ್‌ ಠಾಣೆಗಳನ್ನು  ಮುತ್ತಿಗೆ ಹಾಕುವುದಾಗಿ ರೈತರು ಎಚ್ಚರಿಸಿದ್ದರು.

ತೋಹಾನದಲ್ಲಿ ನಡೆದ ಘರ್ಷಣೆಗೆ ಸಂಬಂಧಿಸಿದಂತೆ ರೈತರ ವಿರುದ್ಧ ಎರಡು ಎಫ್‌ಐಆರ್‌ಗಳು ದಾಖಲಿಸಲಾಗಿದ್ದು, ಶಾಸಕರ ಮೇಲೆ ದೈಹಿಕ ಹಲ್ಲೆ ಮಾಡಿರುವ ಆರೋಪದಡಿಯಲ್ಲಿ ಪ್ರಕರಣ ದಾಖಲಾಗಿತ್ತು.

ಈ ಘರ್ಷಣೆ ನಡೆದ ಮರುದಿನ ರೈತರು ಶಾಸಕರ ಮನೆಗೆ ಮುತ್ತಿಗೆ ಹಾಕಿದ್ದು, ಈ ಕುರಿತು ಪ್ರಕರಣವನ್ನು ನೋಂದಾಯಿಸಲಾಗಿದೆ. ಈ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಸುಮಾರು 30 ಜನ ಪ್ರತಿಭಟನಾಕಾರರನ್ನು ಸ್ಥಳೀಯ ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದಾರೆ ಎಂದು ಪಿಟಿಐ ತಿಳಿಸಿದೆ.

ಈ ಕುರಿತು ದೂರು ನೀಡಿದ್ದ ದೇವೇಂದ್ರ ಬಾಬ್ಲಿ ಅವರು, `ನನ್ನ ಮೇಲೆ ಕೊಲೆ ಯತ್ನ ನಡೆದಿದೆ. ಪ್ರತಿಭಟನಾಕಾರರು ನಮ್ಮ ವಾಹನದ ಮೇಲೆ ಮೂರು ಬಾರಿ ಹಲ್ಲೆ ನಡೆಸಿದರು ಹಾಗೂ ನನ್ನ ಜೊತೆಯಲ್ಲಿದ್ದವರನ್ನು ಗಾಯಗೊಳಿಸಿದ್ದಾರೆ’ ಎಂದು ಆರೋಪಿಸಿದ್ದರು. ಅಲ್ಲದೆ ತನ್ನ ಮೇಲಿನ ಅವಾಚ್ಯ ಶಬ್ದಗಳನ್ನು ಬಳಸಿದ ಆರೋಪವನ್ನು ಅವರು ನಿರಾಕರಿಸಿದ್ದರು.

ರೈತ ಮುಖಂಡ ಗುರ್ನಾಮ್‌ ಸಿಂಗ್‌ ಚಾದುನಿ ಪ್ರತಿಭಟನಾಕಾರರಿಗೆ ಶಾಂತಿಯುತವಾಗಿ ಹೋರಾಟ ನಡೆಸುವಂತೆ ಮನವಿ ಮಾಡಿದ್ದಾರೆ. `ಈ ಆಂದೋಲನವನ್ನು ಮುರಿಯುವಂತಹ ಯಾವುದೇ ಹೆಜ್ಜೆಯನ್ನು ನಾವು ತೆಗೆದುಕೊಳ್ಳಬೇಕಾಗಿಲ್ಲ. ಒಂದು ಸಣ್ಣ ನಷ್ಟವು ಭಾರಿ ವೆಚ್ಚವನ್ನುಂಟು ಮಾಡುತ್ತದೆ. ಹಾಗಾಗಿ ನಾವು ಶಾಂತಿಯುತ ರೀತಿಯಲ್ಲಿ ಹೋರಾಟ ಮುಂದುವರೆಸಬೇಕಾಗಿದೆ’ ಎಂದು ಅವರು ತಿಳಿಸಿದ್ದಾರೆ.

ಮೋದಿ ನೇತೃತ್ವದ ಒಕ್ಕೂಟ ಸರ್ಕಾರ ಜಾರಿಗೊಳಿಸಿರುವ ಕೃಷಿ ಕಾನೂನುಗಳನ್ನು ವಿರೋಧಿಸಿ ಭಾರಿ ಪ್ರಮಾಣದಲ್ಲಿ ರೈತರು ದೆಹಲಿ ಗಡಿಗಳಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ. ಈ ಹೋರಾಟವನ್ನು ಬೆಂಬಲಿಸಿ ಹರಿಯಾಣ, ಪಂಜಾಬ್‌ ಸೇರಿದಂತೆ ದೇಶದ ವಿವಿಧ ಭಾಗಗಳಲ್ಲಿ ಜನರು ಪ್ರತಿಭಟನೆ ನಡೆಸುತ್ತಿದ್ದಾರೆ.

ಕೃಪೆ: ಅನ್ನದ ಋಣ


ಇದನ್ನೂ ಓದಿ; ರೈತ ಪ್ರತಿಭಟನೆಗೆ ಬೆದರಿದ ಹರಿಯಾಣ ಸಿಎಂ ಖಟ್ಟರ್: ನಿಗಧಿತ ಸಮಯಕ್ಕಿಂತ ಮುಂಚೆಯೇ ಕಾರ್ಯಕ್ರಮ ಮುಕ್ತಾಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...