Homeಮುಖಪುಟಪೊಲೀಸ್ ಠಾಣೆಗೆ ಮುತ್ತಿಗೆ ಹಾಕಿದ ರೈತರು: ತಪ್ಪೊಪ್ಪಿಕೊಂಡು ಕ್ಷಮೆಯಾಚಿಸಿದ ಜೆಜೆಪಿ ಶಾಸಕ

ಪೊಲೀಸ್ ಠಾಣೆಗೆ ಮುತ್ತಿಗೆ ಹಾಕಿದ ರೈತರು: ತಪ್ಪೊಪ್ಪಿಕೊಂಡು ಕ್ಷಮೆಯಾಚಿಸಿದ ಜೆಜೆಪಿ ಶಾಸಕ

- Advertisement -
- Advertisement -

ಕೇಂದ್ರದ ವಿವಾದಾತ್ಮಕ ಕೃಷಿ ಕಾನೂನುಗಳನ್ನು ವಿರೋಧಿಸಿ ಹರಿಯಾಣದ ತೋಹಾನಾ ನಗರದಲ್ಲಿ ಪ್ರತಿಭಟನೆ ನಡೆಸುತ್ತಿದ್ದ ರೈತರನ್ನು ಅವಾಚ್ಯ ಪದಗಳಿಂದ ನಿಂದಿಸಿದ್ದ ಹರಿಯಾಣ ಜೆಜೆಪಿ ಶಾಸಕ ದೇವೇಂದ್ರ ಸಿಂಗ್‌ ಬಾಬ್ಲಿ ಕೊನೆಗೂ ತಪ್ಪೊಪ್ಪಿಕೊಂಡು ರೈತರ ಬಳಿ ಕ್ಷಮೆ ಯಾಚಿಸಿದ್ದಾರೆ.

ಹರಿಯಾಣದಲ್ಲಿ ಜಜೆಪಿ ಪಕ್ಷವು ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಂಡು ಅಧಿಕಾರದಲ್ಲಿದೆ. ಅದರ ಶಾಸಕ ಜೂನ್ 1 ರಂದು ತೋಹಾನಾದಲ್ಲಿ ಪ್ರತಿಭಟಿಸಿದ ರೈತರ ಕುರಿತು ಹಗುರವಾಗಿ ಮಾತನಾಡಿದ್ದರು. ವಿವಾದ ಭುಗಿಲೆದ್ದ ನಂತರ ಹೋರಾಟನಿರತ ರೈತರೊಂದಿಗೆ ಸಭೆ ನಡೆಸಿ ಕ್ಷಮೆ ಕೋರಿದ್ದಾರೆ.

`ಜೂನ್‌ 1 ರಂದು ನಡೆದ ಘಟನೆಯಲ್ಲಿ ಭಾಗಿಯಾದವರನ್ನು ನಾನು ಕ್ಷಮಿಸುತ್ತೇನೆ ಹಾಗೂ ಒಬ್ಬ ಜನಪ್ರತಿನಿಧಿಯಾಗಿ ಅಂದು ನಾನು ಆ ಪದಗಳನ್ನು ಬಳಸಿದ್ದಾಕ್ಕಾಗಿ ವಿಷಾದಿಸುತ್ತೇನೆ ಮತ್ತು ಕ್ಷಮೆ ಯಾಚಿಸುತ್ತೇನೆ’ ಎಂದು ಶನಿವಾರ ಸಂಜೆ ರೈತ ಮುಖಂಡರೊಂದಿಗಿನ ಸಭೆಯ ನಂತರ ಅವರು ತಿಳಿಸಿದರು.

ರೈತ ಹೋರಾಟಗಾರ ರಾಕೇಶ್‌ ಟಿಕಾಯತ್‌ರವರು ದೇವೇಂದ್ರ ಸಿಂಗ್‌ ಬಾಬ್ಲಿಯವರ ಕ್ಷಮೆಯಾಚನೆಯನ್ನು ಸ್ವೀಕರಿಸಿದ್ದಾರೆ. `ಶಾಸಕರು ಕ್ಷಮೆಯಾಚಿಸಿರುವುದು ಒಳ್ಳೆಯದು… ಈಗ ರೈತ ಸಮಿತಿ ಶಾಸಕರೊಂದಿಗೆ ಮಾತುಕತೆ ನಡೆಸುತ್ತಿದ್ದು ಮುಂದಿನ ನಿರ್ಧಾರಗಳನ್ನು ತೆಗೆದುಕೊಳ್ಳುತ್ತದೆ’ ಎಂದು ರಾಕೇಶ್‌ ಟಿಕಾಯತ್‌ ತಿಳಿಸಿದ್ದಾರೆ.

ಶಾಸಕರ ಕ್ಷಮೆಯಾಚನೆಯ ಹೊರತಾಗಿಯೂ ರೈತರು ಪ್ರತಿಭಟನೆಯನ್ನು ಮುಂದುವರೆಸಿದ್ದಾರೆ. ಮಂಗಳವಾರದ ಘರ್ಷಣೆಯ ನಂತರ ಬಂಧಿಸಲ್ಪಟ್ಟ ಮೂವರು ರೈತರನ್ನು ಬಿಡುಗಡೆ ಮಾಡುವಂತೆ ಒತ್ತಾಯಿಸುತ್ತಿದ್ದಾರೆ.

ಸಂಯುಕ್ತ ಕಿಸಾನ್‌ ಮೋರ್ಚಾ ಬ್ಯಾನರ್‌ ಅಡಿಯಲ್ಲಿ ರಾಕೇಶ್‌ ಟಿಕಾಯತ್‌, ಗುರ್ನಾಮ್‌ ಸಿಂಗ್‌ ಚುದಾನಿ ಹಾಗೂ ಯೋಗೇಂದ್ರ ಯಾದವ್‌ ಅವರ ನೇತೃತ್ವದಲ್ಲಿ ನೂರಾರು ರೈತರು ತೋಹಾನ ಪೊಲೀಸ್‌ ಠಾಣೆಗೆ ಪ್ರತಿಭಟನಾ ಮೆರವಣಿಗೆ ನಡೆಸಿದ ನಂತರ ದೇವೇಂದ್ರ ಬಾಬ್ಲಿ ಅವರು ಕ್ಷಮೆಯಾಚಿಸಿದ್ದಾರೆ.

ಶಾಸಕರ ಹೇಳಿಕೆ ಮತ್ತು ಘರ್ಷಣೆಗೆ ಸಂಬಂಧಿಸಿದಂತೆ ಮೂವರು ರೈತರನ್ನು ಬಂಧಿಸಿರುವುದನ್ನು ವಿರೋಧಿಸಿ ಅವರು ಪ್ರತಿಭಟನೆ ನಡೆಸುತ್ತಿದ್ದರು. ಬಾಬ್ಲಿ ಅವರು ಕ್ಷಮೆಯಾಚಿಸದಿದ್ದರೆ ಸೋಮವಾರ ಹರಿಯಾಣದಾದ್ಯಂತ ಪೊಲೀಸ್‌ ಠಾಣೆಗಳನ್ನು  ಮುತ್ತಿಗೆ ಹಾಕುವುದಾಗಿ ರೈತರು ಎಚ್ಚರಿಸಿದ್ದರು.

ತೋಹಾನದಲ್ಲಿ ನಡೆದ ಘರ್ಷಣೆಗೆ ಸಂಬಂಧಿಸಿದಂತೆ ರೈತರ ವಿರುದ್ಧ ಎರಡು ಎಫ್‌ಐಆರ್‌ಗಳು ದಾಖಲಿಸಲಾಗಿದ್ದು, ಶಾಸಕರ ಮೇಲೆ ದೈಹಿಕ ಹಲ್ಲೆ ಮಾಡಿರುವ ಆರೋಪದಡಿಯಲ್ಲಿ ಪ್ರಕರಣ ದಾಖಲಾಗಿತ್ತು.

ಈ ಘರ್ಷಣೆ ನಡೆದ ಮರುದಿನ ರೈತರು ಶಾಸಕರ ಮನೆಗೆ ಮುತ್ತಿಗೆ ಹಾಕಿದ್ದು, ಈ ಕುರಿತು ಪ್ರಕರಣವನ್ನು ನೋಂದಾಯಿಸಲಾಗಿದೆ. ಈ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಸುಮಾರು 30 ಜನ ಪ್ರತಿಭಟನಾಕಾರರನ್ನು ಸ್ಥಳೀಯ ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದಾರೆ ಎಂದು ಪಿಟಿಐ ತಿಳಿಸಿದೆ.

ಈ ಕುರಿತು ದೂರು ನೀಡಿದ್ದ ದೇವೇಂದ್ರ ಬಾಬ್ಲಿ ಅವರು, `ನನ್ನ ಮೇಲೆ ಕೊಲೆ ಯತ್ನ ನಡೆದಿದೆ. ಪ್ರತಿಭಟನಾಕಾರರು ನಮ್ಮ ವಾಹನದ ಮೇಲೆ ಮೂರು ಬಾರಿ ಹಲ್ಲೆ ನಡೆಸಿದರು ಹಾಗೂ ನನ್ನ ಜೊತೆಯಲ್ಲಿದ್ದವರನ್ನು ಗಾಯಗೊಳಿಸಿದ್ದಾರೆ’ ಎಂದು ಆರೋಪಿಸಿದ್ದರು. ಅಲ್ಲದೆ ತನ್ನ ಮೇಲಿನ ಅವಾಚ್ಯ ಶಬ್ದಗಳನ್ನು ಬಳಸಿದ ಆರೋಪವನ್ನು ಅವರು ನಿರಾಕರಿಸಿದ್ದರು.

ರೈತ ಮುಖಂಡ ಗುರ್ನಾಮ್‌ ಸಿಂಗ್‌ ಚಾದುನಿ ಪ್ರತಿಭಟನಾಕಾರರಿಗೆ ಶಾಂತಿಯುತವಾಗಿ ಹೋರಾಟ ನಡೆಸುವಂತೆ ಮನವಿ ಮಾಡಿದ್ದಾರೆ. `ಈ ಆಂದೋಲನವನ್ನು ಮುರಿಯುವಂತಹ ಯಾವುದೇ ಹೆಜ್ಜೆಯನ್ನು ನಾವು ತೆಗೆದುಕೊಳ್ಳಬೇಕಾಗಿಲ್ಲ. ಒಂದು ಸಣ್ಣ ನಷ್ಟವು ಭಾರಿ ವೆಚ್ಚವನ್ನುಂಟು ಮಾಡುತ್ತದೆ. ಹಾಗಾಗಿ ನಾವು ಶಾಂತಿಯುತ ರೀತಿಯಲ್ಲಿ ಹೋರಾಟ ಮುಂದುವರೆಸಬೇಕಾಗಿದೆ’ ಎಂದು ಅವರು ತಿಳಿಸಿದ್ದಾರೆ.

ಮೋದಿ ನೇತೃತ್ವದ ಒಕ್ಕೂಟ ಸರ್ಕಾರ ಜಾರಿಗೊಳಿಸಿರುವ ಕೃಷಿ ಕಾನೂನುಗಳನ್ನು ವಿರೋಧಿಸಿ ಭಾರಿ ಪ್ರಮಾಣದಲ್ಲಿ ರೈತರು ದೆಹಲಿ ಗಡಿಗಳಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ. ಈ ಹೋರಾಟವನ್ನು ಬೆಂಬಲಿಸಿ ಹರಿಯಾಣ, ಪಂಜಾಬ್‌ ಸೇರಿದಂತೆ ದೇಶದ ವಿವಿಧ ಭಾಗಗಳಲ್ಲಿ ಜನರು ಪ್ರತಿಭಟನೆ ನಡೆಸುತ್ತಿದ್ದಾರೆ.

ಕೃಪೆ: ಅನ್ನದ ಋಣ


ಇದನ್ನೂ ಓದಿ; ರೈತ ಪ್ರತಿಭಟನೆಗೆ ಬೆದರಿದ ಹರಿಯಾಣ ಸಿಎಂ ಖಟ್ಟರ್: ನಿಗಧಿತ ಸಮಯಕ್ಕಿಂತ ಮುಂಚೆಯೇ ಕಾರ್ಯಕ್ರಮ ಮುಕ್ತಾಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...