Homeಮುಖಪುಟಸೋಂಕು ಇಳಿಕೆ: ದೇಶದ ಹಲವು ರಾಜ್ಯಗಳಲ್ಲಿ ಅನ್‌ಲಾಕ್‌ ಪ್ರಾರಂಭ-10 ಪಾಯಿಂಟ್ಸ್‌‌

ಸೋಂಕು ಇಳಿಕೆ: ದೇಶದ ಹಲವು ರಾಜ್ಯಗಳಲ್ಲಿ ಅನ್‌ಲಾಕ್‌ ಪ್ರಾರಂಭ-10 ಪಾಯಿಂಟ್ಸ್‌‌

- Advertisement -
- Advertisement -

ಕಳೆದ ಎರಡು ತಿಂಗಳಿನಿಂದ ಕೊರೊನಾ ಎರಡನೆ ಅಲೆಯ ಉಲ್ಬಣಕ್ಕೆ ಸಿಲುಕಿಕೊಂಡಿದ್ದ ದೇಶದ ಹಲವಾರು ರಾಜ್ಯಗಳಲ್ಲಿ ಸೋಂಕಿನ ಪ್ರಮಾಣ ಇಳಿಕೆಯಾಗಿದೆ. ಇದೀಗ ಈ ರಾಜ್ಯಗಳು ಸೋಂಕಿನ ಕಾರಣಕ್ಕೆ ಹೇರಿದ್ದ ಲಾಕ್‌ಡೌನ್‌ ಅನ್ನು ತೆರವುಗೊಳಿಸಿ ಅನ್‌ಲಾಕ್‌ ಮಾಡುವ ಪ್ರಕ್ರಿಯೆಯನ್ನು ಪ್ರಾರಂಭಿಸಿವೆ.

ಈ ಬಗ್ಗೆ 10 ಪಾಯಿಂಟ್‌ಗಳು ಇಲ್ಲಿದೆ

  1. ದೆಹಲಿಯಲ್ಲಿ, ಮಾಲ್‌ಗಳು, ಮಾರುಕಟ್ಟೆಗಳು, ಮಾರುಕಟ್ಟೆ ಕಾಂಪ್ಲೆಕ್ಸ್‌ಗಳು, ಸ್ವತಂತ್ರವಾಗಿರುವ ಅಂಗಡಿಗಳು ಮತ್ತು ಅಕ್ಕಪಕ್ಕ ಇರುವ ಅಂಗಡಿಗಳು ಬೆಸ-ಸಮ ಆಧಾರದಲ್ಲಿ ಹಾಗೂ ಸಮಯದ ನಿರ್ಬಂಧಗಳೊಂದಿಗೆ ತೆರೆಯಲ್ಪಡುತ್ತವೆ. ಮೇ 10 ರಿಂದ ಸ್ಥಗಿತಗೊಂಡಿದ್ದ ದೆಹಲಿ ಮೆಟ್ರೋ ಕೂಡಾ 50% ದಷ್ಟು ಸಾಮರ್ಥ್ಯದೊಂದಿಗೆ ಸೇವೆಗಳನ್ನು ಪುನರಾರಂಭಿಸಲಿದೆ. ಖಾಸಗಿ ಕಚೇರಿಗಳಿಗೆ 50% ರಷ್ಟು ಸಿಬ್ಬಂದಿಗಳೊಂದಿಗೆ ಕಾರ್ಯನಿರ್ವಹಿಸಲು ಅವಕಾಶ ನೀಡಲಾಗಿದೆ.
  2. ಸೋಂಕಿನ ಪ್ರಮಾಣ ಮತ್ತು ಆಸ್ಪತ್ರೆಯ ಹಾಸಿಗೆಗೆ ಅನುಗುಣವಾಗಿ ನಿರ್ಬಂಧಗಳನ್ನು ತೆರವುಗೊಳಿಸುವ ಐದು ಹಂತದ ಯೋಜನೆಯನ್ನು ಮಹಾರಾಷ್ಟ್ರ ಹಮ್ಮಿಕೊಂಡಿದೆ.
  3. ಮುಂಬೈಯಲ್ಲಿ, ರೆಸ್ಟೋರೆಂಟ್‌ಗಳು, ಅತ್ಯಗತ್ಯವಲ್ಲದ(ನಾನ್‌-ಎಷೆನ್ಸಿಯಲ್) ವಸ್ತುಗಳನ್ನು ಮಾರಾಟ ಮಾಡುವ ಅಂಗಡಿಗಳು ಮತ್ತು ಸಾರ್ವಜನಿಕ ಸ್ಥಳಗಳನ್ನು ಇಂದು ತೆರೆಯಲಾಗುತ್ತದೆ. ಆದರೆ ಮಾಲ್‌ಗಳು, ಚಿತ್ರಮಂದಿರಗಳು ಮತ್ತು ಮಲ್ಟಿಪ್ಲೆಕ್ಸ್‌ಗಳ ಮೇಲಿನ ನಿರ್ಬಂಧ ಹಾಗೆ ಇದೆ. ನಗರದ ಸ್ಥಳೀಯ ರೈಲುಗಳಿಗೆ ಅಗತ್ಯ ಕಾರ್ಮಿಕರನ್ನು ಮಾತ್ರ ಸಾಗಿಸಲು ಅನುಮತಿ ನೀಡಲಾಗಿದೆ. ಬಸ್ಸುಗಳಿಗೆ ತಮ್ಮ ಸೀಟುಗಳ ಪೂರ್ಣ ಸಾಮರ್ಥ್ಯದೊಂದಿಗೆ ಚಲಾಯಿಸಲು ಅನುಮತಿಸಲಾಗಿದೆ. ಬಸ್ಸಿನಲ್ಲಿ ಪ್ರಯಾಣಿಕರು ನಿಂತು ಪ್ರಯಾಣಿಸುವಂತೆ ಇಲ್ಲ.

    ಇದನ್ನೂ ಓದಿ: ರೈತರಿಂದ ಕ್ರಾಂತಿ ದಿವಸ್ ಆಚರಣೆ; ಕೃಷಿ ಕಾನೂನಿನ ಪ್ರತಿ ಸುಡುವ ಮೂಲಕ ದೇಶಾದ್ಯಂತ ಪ್ರತಿಭಟನೆ

  4. ಉತ್ತರ ಪ್ರದೇಶ ಸರ್ಕಾರವು ವಾರಣಸಿ, ಮುಜಫರ್‌‌ನಗರ, ಗೌತಮ್ ಬುದ್ಧ ನಗರ ಮತ್ತು ಗಾಜಿಯಾಬಾದ್‌ ಜಿಲ್ಲೆಗಳಲ್ಲಿ ಸಕ್ರಿಯ ಕೊರೊನಾ ಪ್ರಕರಣಗಳು 600 ಕ್ಕಿಂತ ಕಡಿಮೆಯಿರುವ ಕಂಟೈನ್‌ಮೆಂಟ್ ವಲಯಗಳ ಹೊರಗಿನ ಅಂಗಡಿಗಳು ಮತ್ತು ಮಾರುಕಟ್ಟೆಗಳನ್ನು ಇಂದಿನಿಂದ ವಾರದಲ್ಲಿ ಐದು ದಿನಗಳವರೆಗೆ ತೆರೆಯಲು ಅನುಮತಿ ನೀಡಿದೆ. ಈ ಲಾಕ್‌ಡೌನ್‌ ತೆರವು ಸೋಮವಾರದಿಂದ ಶುಕ್ರವಾರದವರೆಗೆ ಬೆಳಿಗ್ಗೆ 7 ರಿಂದ ಸಂಜೆ 7 ರವರೆಗೆ ಮಾತ್ರವಾಗಿದೆ. ಆದಾಗ್ಯೂ, ರಾತ್ರಿ ಮತ್ತು ವಾರಾಂತ್ಯದ ಕರ್ಫ್ಯೂಗಳು ಮುಂದುವರಿಯಲಿವೆ.
  5. ಹರಿಯಾಣದಲ್ಲಿ ಜೂನ್ 14 ರವರೆಗೆ ಲಾಕ್‌ಡೌನ್ ವಿಸ್ತರಿಸಲಾಗಿದ್ದರೂ, ಹಲವಾರು ನಿರ್ಬಂಧಗಳನ್ನು ಸಡಿಲಿಸಲಾಗಿದೆ. ಹೊಸ ಮಾರ್ಗಸೂಚಿಗಳ ಪ್ರಕಾರ ಮಾಲ್‌ಗಳನ್ನು ಬೆಳಿಗ್ಗೆ 10 ರಿಂದ ರಾತ್ರಿ 8 ರವರೆಗೆ ತೆರೆಯಲು ಅನುಮತಿಸಲಾಗಿದೆ. ಒಂದು ಸಮಯದಲ್ಲಿ ಗರಿಷ್ಠ 21 ಜನರಿಗೆ ಧಾರ್ಮಿಕ ಸ್ಥಳಗಳಲ್ಲಿ ಸೇರಲು ಅನುಮತಿ ನೀಡಲಾಗಿದೆ. ಕಾರ್ಪೊರೇಟ್ ಕಚೇರಿಗಳು 50% ಹಾಜರಾತಿಯೊಂದಿಗೆ ತೆರೆಯಬಹುದು. ರೆಸ್ಟೋರೆಂಟ್‌ಗಳು, ಬಾರ್‌ಗಳು ಮತ್ತು ಕ್ಲಬ್‌ಗಳನ್ನು ಬೆಳಿಗ್ಗೆ 10 ರಿಂದ ರಾತ್ರಿ 8 ರವರೆಗೆ ಕೊರೊನಾ ಮಾರ್ಗಸೂಚಿಗಳೊಂದಿಗೆ 50%  ಆಸನ ಸಾಮರ್ಥ್ಯದೊಂದಿಗೆ ತೆರೆಯಲು ಅನುಮತಿಸಲಾಗಿದೆ.
  6. ಸಿಕ್ಕಿಂನಲ್ಲಿ, ದಿನಸಿ ಮತ್ತು ತರಕಾರಿಗಳನ್ನು ಮಾರಾಟ ಮಾಡುವ ಅಂಗಡಿಗಳು ಮತ್ತು ಹಾರ್ಡ್‌ವೇರ್ ಅಂಗಡಿಗಳು ಇಂದಿನಿಂದ ಬೆಳಿಗ್ಗೆ 7 ರಿಂದ ಮಧ್ಯಾಹ್ನ 2 ರವರೆಗೆ ತೆರೆದಿಡಬಹುದು. ಆದಾಗ್ಯೂ, ರಾಜ್ಯವ್ಯಾಪಿ ಲಾಕ್ಡೌನ್ ಅನ್ನು ಜೂನ್ 14 ರವರೆಗೆ ವಿಸ್ತರಿಸಲಾಗಿದೆ.
  7. ಜಮ್ಮು ಕಾಶ್ಮೀರ ಆಡಳಿತವು ಲಾಕ್‌ಡೌನ್ ಅನ್ನು ಜೂನ್ 15 ರವರೆಗೆ ವಿಸ್ತರಿಸಿದೆ. ಆದಾಗ್ಯೂ, ಸುಮಾರು ಒಂದು ತಿಂಗಳ ಲಾಕ್‌ಡೌನ್ ನಂತರ ಜಮ್ಮು ತನ್ನ ಅನ್‌ಲಾಕ್ ಪ್ರಕ್ರಿಯೆಯನ್ನು ಹಂತಹಂತವಾಗಿ ಭಾನುವಾರದಿಂದ ಪ್ರಾರಂಭಿಸಿದೆ.

    ಇದನ್ನೂ ಓದಿ: ಕೇರಳ ಮೂಲದ ನರ್ಸ್‌ಗಳನ್ನು ಹಿಂದಿಯಲ್ಲಿ ಮಾತನಾಡುವಂತೆ ಒತ್ತಾಯಿಸಿದ ದೆಹಲಿ ಆಸ್ಪತ್ರೆ

  8. ತಮಿಳುನಾಡು ತನ್ನ ಲಾಕ್‌ಡೌನ್ ಅನ್ನು ಇನ್ನೊಂದು ವಾರ ವಿಸ್ತರಿಸಿದೆ. ಕೊಯಮತ್ತೂರು ಸೇರಿದಂತೆ 11 ಹಾಟ್‌ಸ್ಪಾಟ್ ಜಿಲ್ಲೆಗಳನ್ನು ಹೊರತುಪಡಿಸಿ ರಾಜ್ಯದ ಎಲ್ಲಾ ಭಾಗಗಳಲ್ಲಿ, ಸ್ವತಂತ್ರ ದಿನಸಿ ಸರಬರಾಜು ಮಳಿಗೆಗಳನ್ನು ಇಂದು ಬೆಳಿಗ್ಗೆ 6 ರಿಂದ ಸಂಜೆ 5 ರವರೆಗೆ ಕಾರ್ಯನಿರ್ವಹಿಸಲು ಅನುಮತಿಸಲಾಗಿದೆ. ಮನೆಗೆಲಸದ ಸಿಬ್ಬಂದಿಗಳು ಅಪಾರ್ಟ್ಮೆಂಟ್ ಮತ್ತು ಕಚೇರಿ ಕಾಂಪ್ಲೆಕ್ಸ್‌ಗಳಿಗೆ ಕೆಲಸಕ್ಕೆ ತೆರಳಬಹುದಾಗಿದೆಯಾದರೂ ಇದಕ್ಕೆ ಇ-ನೋಂದಣಿ ಅಗತ್ಯವಿದೆ. ಈ ಪಾಸ್‌ ಇರುವ ಇಬ್ಬರು ಪ್ರಯಾಣಿಕರನ್ನು ಹೊಂದಿರುವ ಆಟೊಗಳು ಮತ್ತು ಮೂವರೊಂದಿಗೆ ಕ್ಯಾಬ್‌ಗಳಿಗೆ ಕೂಡಾ ಅನುಮತಿಸಲಾಗಿದೆ.
  9. ಕೊರೊನಾ ಪಾಸಿಟಿವಿಟಿ ಪ್ರಮಾಣವು 5% ಕ್ಕಿಂತ ಕಡಿಮೆಯಾದ ನಂತರ ಮಾತ್ರ ನಿರ್ಬಂಧಗಳನ್ನು ಸರಾಗಗೊಳಿಸುವುದಾಗಿ ಕರ್ನಾಟಕ ಸರ್ಕಾರ ಹೇಳಿದೆ. ರಾಜ್ಯ ಸರ್ಕಾರ ತನ್ನ ಲಾಕ್‌ಡೌನ್ ಅನ್ನು ಇತ್ತೀಚೆಗೆ ಜೂನ್ 14 ರವರೆಗೆ ವಿಸ್ತರಿಸಿದೆ. ಆದರೆ ಯಾವುದೆ ವಿನಾಯಿಯನ್ನು ನೀಡಿಲ್ಲ.
  10. ದೇಶದಲ್ಲಿ ಕಳೆದ ಎರಡು ತಿಂಗಳ ನಂತರ 1 ಲಕ್ಷಕ್ಕಿಂತಲೂ ಕಡಿಮೆ ದೈನಂದಿನ ಕೊರೊನಾ ಪ್ರಕರಣಗಳು ವರದಿಯಾಗಿದೆ. ಹೊಸ ಕೊರೊನಾ ಪ್ರಕರಣಗಳು ಇಳಿಕೆಯಾಗುತ್ತಾ ಇರುವುದರಿಂದ ದೇಶಾದ್ಯಂತ ಲಾಕ್‌ಡೌನ್‌ ತೆರವುಗೊಳಿಸುವ ಭರವಸೆಯನ್ನು ಹುಟ್ಟುಹಾಕಿದೆ. ಇದರಿಂದಾಗಿ ಷೇರುಗಳು ಇಂದು ಬೆಳಿಗ್ಗೆ ಹೆಚ್ಚಿನ ಮಟ್ಟದಲ್ಲಿ ಏರಿದ್ದು, ಇದು ದಾಖಲೆಯ ಗರಿಷ್ಠ ಮಟ್ಟದಲ್ಲಿದೆ ಎಂದು ಎನ್‌ಡಿಟಿವಿ ವರದಿ ಮಾಡಿದೆ.

ಇದನ್ನೂ ಓದಿ: ಪಿಜ್ಜಾ, ಬರ್ಗರ್‌, ಸ್ಮಾರ್ಟ್‌ಫೋನ್‌ ಮನೆ ಬಾಗಿಲಿಗೆ ಬರುವುದಾದರೇ, ಪಡಿತರವೇಕೆ ಬೇಡ? ಕೇಂದ್ರಕ್ಕೆ ಕೇಜ್ರಿವಾಲ್ ಪ್ರಶ್ನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...