Homeಮುಖಪುಟಹೊಸ ಪ್ರವಾಸೋದ್ಯಮ ನೀತಿ ವಿರೋಧಿಸಿ ಲಕ್ಷದ್ವೀಪ ನಿವಾಸಿಗಳಿಂದ ಉಪವಾಸ ಸತ್ಯಾಗ್ರಹ

ಹೊಸ ಪ್ರವಾಸೋದ್ಯಮ ನೀತಿ ವಿರೋಧಿಸಿ ಲಕ್ಷದ್ವೀಪ ನಿವಾಸಿಗಳಿಂದ ಉಪವಾಸ ಸತ್ಯಾಗ್ರಹ

- Advertisement -
- Advertisement -

ಲಕ್ಷದ್ವೀಪ ನಿವಾಸಿಗಳು ಸೋಮವಾರ ಅಂದರೆ ಇಂದು ಜೂನ್‌ 7, 2021 ರಂದು 12 ಗಂಟೆಗಳ ನಿರಂತರ ಉಪವಾಸ ಸತ್ಯಾಗ್ರಹಕ್ಕೆ ಮುಂದಾಗಿದ್ದಾರೆ. ಲಕ್ಷದ್ವೀಪದಲ್ಲಿ ಸರ್ಕಾರ ಜಾರಿಗೆ ತರಲು ಹೊರಟಿರುವ 3 ಹೊಸ ಪ್ರವಾಸೋದ್ಯಮ ಯೋಜನೆಗಳನ್ನು ವಿರೋಧಿಸಿ ಲಕ್ಷದ್ವೀಪ ನಿವಾಸಿಗಳು ತೀವ್ರ ಆತಂಕಕ್ಕೆ ಒಳಗಾಗಿದ್ದಾರೆ. ನೂರಾರು ವರ್ಷಗಳಿಂದ ನಡೆದುಕೊಂಡು ಬಂದಿರುವ ಜನ ಜೀವನವನ್ನು ನಾಶಮಾಡುವ ಭೀತಿಯನ್ನು ಹೊಸ ಯೋಜನೆಗಳು ಉಂಟುಮಾಡಿವೆ. ಸುಮಾರು 70,000 ಜನಸಂಖ್ಯೆಯನ್ನು ಹೊಂದಿರುವ ಲಕ್ಷದ್ವೀಪ ಭಿನ್ನವಾದ ಸಂಸ್ಕೃತಿ, ಭಾಷೆ ಮತ್ತು ಸಂಪ್ರದಾಯಗಳನ್ನು ಹೊಂದಿವೆ. ಹಾಗೇ ಲಕ್ಷದ್ವೀಪದ ಕಾಡುಗಳಲ್ಲಿ ಅನೇಕ ಬುಡಕಟ್ಟುಗಳು ನೂರಾರು ವರ್ಷಗಳಿಂದ ನೆಲೆ ಕಂಡುಕೊಂಡಿವೆ.

ಲಕ್ಷದ್ವೀಪ ಉಳಿಸಿ ಸಂಘಟನೆ ಈ ಒಂದು ದಿನ ದ ಉಪವಾಸ ಸತ್ಯಾಗ್ರಹಕ್ಕೆ ಕರೆಕೊಟ್ಟಿದೆ. ಜೂನ್‌ 7ರ ಸೋಮವಾರ ಅಂಗಡಿ ಮುಂಗಟ್ಟುಗಳು ಬೆಳಿಗ್ಗೆ 6 ಗಂಟೆಯಿಂದ ಸಂಜೆ 6 ಗಂಟೆವರೆಗೆ ಮುಚ್ಚಿರಲಿವೆ. ನಗರ, ಹಳ್ಳಿ ಎಲ್ಲಾಕಡೆಯಲ್ಲೂ ಜನ ಲಕ್ಷದ್ವೀಪ ಉಳಿಸಿ ಹೋರಾಟಕ್ಕೆ ಬೆಂಬಲ ಸೂಚಿಸಿ ಉಪವಾಸವನ್ನು ಆಚರಿಸಲಿದ್ದಾರೆ. ಅಗತ್ಯ ಸೇವೆಗಳು ಮತ್ತು ಅಗತ್ಯ ಸೇವೆಗಳು ಮಾತ್ರ ಜನರಿಗೆ ತೆರೆದಿರಲಿವೆ.

ಇನ್ನೊಂದು ಕಡೆ ವಿವಾದಾತ್ಮಕ ಹೊಸ ಯೋಜನೆಗಳನ್ನು ಜಾರಿಗೆ ತಂದಿರುವ ಲಕ್ಷದ್ವೀಪದ ಲೆಫ್ಟಿನೆಂಟ್‌ ಗೌವರ್ನರ್‌ ಪ್ರಫುಲ್‌ ಖೋಡಾ ಪಟೇಲ್‌ ಅವರು ಕೊರೋನಾ ಲಾಕ್‌ಡೌನ್‌ ಜಾರಿಯಿರುವುದರಿಂದ ಬಹಿರಂಗವಾಗಿ ಜನ ಸೇರುವುದನ್ನು ಲಕ್ಷದ್ವೀಪದಲ್ಲಿ ನಿಷೇಧಿಸಲಾಗಿದೆ. ಒಂದು ವೇಳೆ ಕಾನೂನು ಉಲ್ಲಂಘಿಸಿ ಯಾರಾದರೂ ಬೀದಿಗಿಳಿದರೆ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂಬ ಎಚ್ಚರಿಕೆಯನ್ನು ನೀಡಿದ್ದಾರೆ.

ಮೊಟ್ಟ ಮೊದಲ ಬಾರಿಗೆ ಲಕ್ಷದ್ವೀಪದಲ್ಲಿ ಉಪವಾಸ ಸತ್ಯಾಗ್ರಹವನ್ನು ಆಚರಿಸಲಾಗುತ್ತಿದೆ. ನಾವು ಮೊದಲಿನಿಂದಲೂ ಸ್ಥಳೀಯರ ಭಾವನೆಗಳಿಗೆ ಬೆಲೆ ಕೊಡಬೇಕು ಮತ್ತು ಸ್ಥಳೀಯರ ಸಮಸ್ಯೆಗಳನ್ನು ಆಲಿಸಬೇಕೆಂದು ಲೆಫ್ಟಿನೆಂಟ್‌ ಗೌರ್ನರ್‌ ಅವರನ್ನು ಒತ್ತಾಯಿಸುತ್ತಲೇ ಬಂದಿದ್ದೇವೆ. ಆದರೆ ಎಲ್‌ಜೆ ಪ್ರಫುಲ್‌ ಪಟೇಲ್ ತಮ್ಮ ಏಕಪಕ್ಷೀಯ ನಿರ್ಧಾರಗಳನ್ನು ಮುಂದುವರೆಸಿಕೊಂಡು ಹೋಗುತ್ತಿದ್ದಾರೆ. ಇದರಿಂದ ಲಕ್ಷದ್ವೀಪದ ಸ್ಥಳೀಯ ಜನಜೀವನಕ್ಕೆ ತೊಂದರೆಯಾಗಲಿದೆ ಎಂದು ಲಕ್ಷದ್ವೀಪ ಉಳಿಸಿ ಹೋರಾಟ ಸಂಘಟನೆಯ ಮುಖ್ಯಸ್ಥ ಯುಸಿಕೆ ಥಂಗಲ್‌ ಹೇಳುತ್ತಾರೆ.

37 ದ್ವೀಪಗಳನ್ನು ಒಳಗೊಂಡ ಲಕ್ಷದ್ವೀಪ ಒಂದು ದ್ವೀಪ ಸಮೂಹವಾಗಿದ್ದು ಸುಮಾರು 97% ದಟ್ಟವಾದ ಕಾಡಿನಿಂದ ಆವರಿಸಿದೆ. ಹಾಗೇ ಲಕ್ಷದ್ವೀಪದ 95% ಜನಸಂಖ್ಯೆ ಭಾರತ ಸಂವಿಧಾನದ ಅಡಿಯಲ್ಲಿ ಸಂರಕ್ಷಿಸಲಾದ ಬುಡಕಟ್ಟುಗಳಿಗೆ ಸೇರಿವೆ. ಹಾಗೇ ಲಕ್ಷದ್ವೀಪದ 37 ದ್ವೀಪಗಳಲ್ಲಿ ಕೇವಲ 11 ದ್ವೀಪಗಳಲ್ಲಿ ಮಾತ್ರ ಜನವಸತಿ ಇದೆ. ಸದ್ಯ ವಿವಾದಕ್ಕೆ ಕಾರಣವಾಗಿರುವ ಲಕ್ಷದ್ವೀಪ ಡೆವಲಪ್‌ಮೆಂಟ್‌ ಅಥಾರಿಟಿ ರೆಗ್ಯುಲೇಶನ್‌ ದ್ವೀಪವಾಸಿಗಳ ಜನ ಜೀವನವನ್ನು ಮತ್ತು ಸಾಂಪ್ರದಾಯಿಕ ಕಸುಬುಗಳನ್ನು ನಾಶ ಮಾಡಲಿದೆ ಎಂದು ಜನರು ಕಳವಳಗೊಂಡಿದ್ದಾರೆ. ಹೊಸ ಲಕ್ಷದ್ವೀಪ ಡೆವಲಪ್‌ಮೆಂಟ್‌ ಅಥಾರಿಟಿಯು ದ್ವೀಪವನ್ನು ದೇಶದ ಪ್ರಮುಖ ಪ್ರವಾಸಿ ತಾಣವನ್ನಾಗಿ ಮಾಡುವ ಉದ್ಧೇಶವನ್ನು ಹೊಂದಿದೆ. ಬಹುತೇಕ ಕಾಡುಗಳನ್ನು ಕಡಿದು ಮಾಲ್ಡೀವ್ಸ್‌ ಮಾದರಿಯ ಕಡಲು ದಂಡೆಗಳನ್ನು ನಿರ್ಮಿಸುವ ಉದ್ಧೇಶವನ್ನು ಹೊಂದಿದೆ ಎಂದು ಜನರು ಹೇಳುತ್ತಾರೆ.

ಉದ್ಧೇಶಿತ ಲಕ್ಷದ್ವೀಪ ಡೆವಲಪ್‌ಮೆಂಟ್‌ ಅಥಾರಿಟಿ ರೆಗ್ಯುಲೇಶನ್‌ (2021) ಕಾನೂನು ಈಗ ಕೇಂದ್ರ ಗೃಹ ಸಚಿವಾಲಯದ ಅಂಗಳವನ್ನು ತಲುಪಿದ್ದು ಗೃಹ ಸಚಿವಾಲಯದ ಅನುಮತಿಯೆಂದೇ ಬಾಕಿಯಿದೆ. ಲಕ್ಷದ್ವೀಪ ಎಲ್‌ಜೆ ಪ್ರಫುಲ್‌ ಪಟೇಲ್‌ ಇದು ಪ್ರವಾಸೋದ್ಯಮವನ್ನು ಹೆಚ್ಚಿಸುವುದರಿಂದ ದ್ವೀಪವಾಸಿಗಳಿಗೆ ಹೆಚ್ಚಿನ ಉದ್ಯೋಗಾವಕಾಶಗಳು ಕೂಡ ಸಿಗುತ್ತವೆ ಎಂದು ಉದ್ಧೇಶಿತ ಕಾಯ್ದೆಯನ್ನು ಸಮರ್ಥಿಸಿಕೊಳ್ಳುತ್ತಿದ್ದಾರೆ.

ಇದನ್ನೂ ಓದಿ : ಸಾರ್ವಜನಿಕರ ಆಕ್ರೋಶಕ್ಕೆ ಮಣಿದು ಮಲಯಾಳಂ ನಿಷೇಧದ ಆದೇಶ ಹಿಂಪಡೆದ ದೆಹಲಿಯ ಆಸ್ಪತ್ರೆ

ದೇಶದ ಅನೇಕ ನಿವೃತ್ತ ಅಧಿಕಾರಿಗಳು. ಸಂಸದರು ಹಾಗೂ ಚಲನಚಿತ್ರ ಗಣ್ಯರು ಕೂಡ ಕೇಂದ್ರ ಸರ್ಕಾರಕ್ಕೆ ಪತ್ರವನ್ನು ಬರೆದು ಉದ್ದೇಶಿತ ಯೋಜನೆಯಿಂದ ಲಕ್ಷದ್ವೀಪದ ಮೂಲ ಸ್ವರೂಪವೇ ಬದಲಾಗಲಿದೆ. ಬುಡಕಟ್ಟು ಮತ್ತು ಅವರ ನೆಲೆ ಅರಣ್ಯ ನಾಶವಾಗುತ್ತದೆ. ಇದು ಲಕ್ಷದ್ವೀಪದ ಜನಜೀವನವನ್ನು ಸಂಪೂರ್ಣ ನಾಶಮಾಡಲಿದೆ. ಹಾಗಾಗಿ ಉದ್ಧೇಶಿತ ಯೋಜನೆಯನ್ನು ಕೈಬಿಡುವಂತೆ ಮನವಿಯನ್ನು ಮಾಡಿದ್ದಾರೆ.

ದ್ವೀಪವಾಸಿಗಳ ಹೋರಾಟ, ಗಣ್ಯರ ಒತ್ತಡಕ್ಕೆ ಕೇಂದ್ರ ಸರ್ಕಾರ ಮಣಿಯುವ ಯಾವ ಲಕ್ಷಣಗಳು ಕಾಣಿಸುತ್ತಿಲ್ಲ. ದೇಶದ ಅತ್ಯಂತ ಅಪರೂಪದ ಮತ್ತು ಅಪಾರ ವನ್ಯ ಸಂಪತ್ತಿನ  ತಾಣವಾದ ಲಕ್ಷದ್ವೀಪವನ್ನು ಬಲಿಕೊಡಲು ಮುಂದಾಗಿರುವ ಎಲ್‌ಜೆ ಪ್ರಫುಲ್‌ ಪಟೇಲ್‌, ಕೇಂದ್ರ ಸರ್ಕಾರ ದ್ವೀಪವಾಸಿಗಳ ಹಿತಾಸಕ್ತಿಯನ್ನು ರಕ್ಷಿಸಲು ತಕ್ಷಣವೇ ಮುಂದಾಗಬೇಕಿದೆ. ಇಲ್ಲವಾದರೆ ಲಕ್ಷದ್ವೀಪದ ಜನರ ಆಕ್ರೋಶ ಇನ್ನಷ್ಟು ಭುಗಿಲೇಳುವ ಸಾಧ್ಯತೆ ಕೂಡ ಇದೆ.


ಇದನ್ನೂ ಓದಿ: ಹಸುವಿನೊಂದಿಗೆ ಪ್ರತಿಭಟನೆಗೆ ಮಣಿದ ಹರಿಯಾಣ ಪೊಲೀಸರು: ಇಬ್ಬರು ರೈತರ ಬಿಡುಗಡೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...