Homeಮುಖಪುಟಹೊಸ ಪ್ರವಾಸೋದ್ಯಮ ನೀತಿ ವಿರೋಧಿಸಿ ಲಕ್ಷದ್ವೀಪ ನಿವಾಸಿಗಳಿಂದ ಉಪವಾಸ ಸತ್ಯಾಗ್ರಹ

ಹೊಸ ಪ್ರವಾಸೋದ್ಯಮ ನೀತಿ ವಿರೋಧಿಸಿ ಲಕ್ಷದ್ವೀಪ ನಿವಾಸಿಗಳಿಂದ ಉಪವಾಸ ಸತ್ಯಾಗ್ರಹ

- Advertisement -
- Advertisement -

ಲಕ್ಷದ್ವೀಪ ನಿವಾಸಿಗಳು ಸೋಮವಾರ ಅಂದರೆ ಇಂದು ಜೂನ್‌ 7, 2021 ರಂದು 12 ಗಂಟೆಗಳ ನಿರಂತರ ಉಪವಾಸ ಸತ್ಯಾಗ್ರಹಕ್ಕೆ ಮುಂದಾಗಿದ್ದಾರೆ. ಲಕ್ಷದ್ವೀಪದಲ್ಲಿ ಸರ್ಕಾರ ಜಾರಿಗೆ ತರಲು ಹೊರಟಿರುವ 3 ಹೊಸ ಪ್ರವಾಸೋದ್ಯಮ ಯೋಜನೆಗಳನ್ನು ವಿರೋಧಿಸಿ ಲಕ್ಷದ್ವೀಪ ನಿವಾಸಿಗಳು ತೀವ್ರ ಆತಂಕಕ್ಕೆ ಒಳಗಾಗಿದ್ದಾರೆ. ನೂರಾರು ವರ್ಷಗಳಿಂದ ನಡೆದುಕೊಂಡು ಬಂದಿರುವ ಜನ ಜೀವನವನ್ನು ನಾಶಮಾಡುವ ಭೀತಿಯನ್ನು ಹೊಸ ಯೋಜನೆಗಳು ಉಂಟುಮಾಡಿವೆ. ಸುಮಾರು 70,000 ಜನಸಂಖ್ಯೆಯನ್ನು ಹೊಂದಿರುವ ಲಕ್ಷದ್ವೀಪ ಭಿನ್ನವಾದ ಸಂಸ್ಕೃತಿ, ಭಾಷೆ ಮತ್ತು ಸಂಪ್ರದಾಯಗಳನ್ನು ಹೊಂದಿವೆ. ಹಾಗೇ ಲಕ್ಷದ್ವೀಪದ ಕಾಡುಗಳಲ್ಲಿ ಅನೇಕ ಬುಡಕಟ್ಟುಗಳು ನೂರಾರು ವರ್ಷಗಳಿಂದ ನೆಲೆ ಕಂಡುಕೊಂಡಿವೆ.

ಲಕ್ಷದ್ವೀಪ ಉಳಿಸಿ ಸಂಘಟನೆ ಈ ಒಂದು ದಿನ ದ ಉಪವಾಸ ಸತ್ಯಾಗ್ರಹಕ್ಕೆ ಕರೆಕೊಟ್ಟಿದೆ. ಜೂನ್‌ 7ರ ಸೋಮವಾರ ಅಂಗಡಿ ಮುಂಗಟ್ಟುಗಳು ಬೆಳಿಗ್ಗೆ 6 ಗಂಟೆಯಿಂದ ಸಂಜೆ 6 ಗಂಟೆವರೆಗೆ ಮುಚ್ಚಿರಲಿವೆ. ನಗರ, ಹಳ್ಳಿ ಎಲ್ಲಾಕಡೆಯಲ್ಲೂ ಜನ ಲಕ್ಷದ್ವೀಪ ಉಳಿಸಿ ಹೋರಾಟಕ್ಕೆ ಬೆಂಬಲ ಸೂಚಿಸಿ ಉಪವಾಸವನ್ನು ಆಚರಿಸಲಿದ್ದಾರೆ. ಅಗತ್ಯ ಸೇವೆಗಳು ಮತ್ತು ಅಗತ್ಯ ಸೇವೆಗಳು ಮಾತ್ರ ಜನರಿಗೆ ತೆರೆದಿರಲಿವೆ.

ಇನ್ನೊಂದು ಕಡೆ ವಿವಾದಾತ್ಮಕ ಹೊಸ ಯೋಜನೆಗಳನ್ನು ಜಾರಿಗೆ ತಂದಿರುವ ಲಕ್ಷದ್ವೀಪದ ಲೆಫ್ಟಿನೆಂಟ್‌ ಗೌವರ್ನರ್‌ ಪ್ರಫುಲ್‌ ಖೋಡಾ ಪಟೇಲ್‌ ಅವರು ಕೊರೋನಾ ಲಾಕ್‌ಡೌನ್‌ ಜಾರಿಯಿರುವುದರಿಂದ ಬಹಿರಂಗವಾಗಿ ಜನ ಸೇರುವುದನ್ನು ಲಕ್ಷದ್ವೀಪದಲ್ಲಿ ನಿಷೇಧಿಸಲಾಗಿದೆ. ಒಂದು ವೇಳೆ ಕಾನೂನು ಉಲ್ಲಂಘಿಸಿ ಯಾರಾದರೂ ಬೀದಿಗಿಳಿದರೆ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂಬ ಎಚ್ಚರಿಕೆಯನ್ನು ನೀಡಿದ್ದಾರೆ.

ಮೊಟ್ಟ ಮೊದಲ ಬಾರಿಗೆ ಲಕ್ಷದ್ವೀಪದಲ್ಲಿ ಉಪವಾಸ ಸತ್ಯಾಗ್ರಹವನ್ನು ಆಚರಿಸಲಾಗುತ್ತಿದೆ. ನಾವು ಮೊದಲಿನಿಂದಲೂ ಸ್ಥಳೀಯರ ಭಾವನೆಗಳಿಗೆ ಬೆಲೆ ಕೊಡಬೇಕು ಮತ್ತು ಸ್ಥಳೀಯರ ಸಮಸ್ಯೆಗಳನ್ನು ಆಲಿಸಬೇಕೆಂದು ಲೆಫ್ಟಿನೆಂಟ್‌ ಗೌರ್ನರ್‌ ಅವರನ್ನು ಒತ್ತಾಯಿಸುತ್ತಲೇ ಬಂದಿದ್ದೇವೆ. ಆದರೆ ಎಲ್‌ಜೆ ಪ್ರಫುಲ್‌ ಪಟೇಲ್ ತಮ್ಮ ಏಕಪಕ್ಷೀಯ ನಿರ್ಧಾರಗಳನ್ನು ಮುಂದುವರೆಸಿಕೊಂಡು ಹೋಗುತ್ತಿದ್ದಾರೆ. ಇದರಿಂದ ಲಕ್ಷದ್ವೀಪದ ಸ್ಥಳೀಯ ಜನಜೀವನಕ್ಕೆ ತೊಂದರೆಯಾಗಲಿದೆ ಎಂದು ಲಕ್ಷದ್ವೀಪ ಉಳಿಸಿ ಹೋರಾಟ ಸಂಘಟನೆಯ ಮುಖ್ಯಸ್ಥ ಯುಸಿಕೆ ಥಂಗಲ್‌ ಹೇಳುತ್ತಾರೆ.

37 ದ್ವೀಪಗಳನ್ನು ಒಳಗೊಂಡ ಲಕ್ಷದ್ವೀಪ ಒಂದು ದ್ವೀಪ ಸಮೂಹವಾಗಿದ್ದು ಸುಮಾರು 97% ದಟ್ಟವಾದ ಕಾಡಿನಿಂದ ಆವರಿಸಿದೆ. ಹಾಗೇ ಲಕ್ಷದ್ವೀಪದ 95% ಜನಸಂಖ್ಯೆ ಭಾರತ ಸಂವಿಧಾನದ ಅಡಿಯಲ್ಲಿ ಸಂರಕ್ಷಿಸಲಾದ ಬುಡಕಟ್ಟುಗಳಿಗೆ ಸೇರಿವೆ. ಹಾಗೇ ಲಕ್ಷದ್ವೀಪದ 37 ದ್ವೀಪಗಳಲ್ಲಿ ಕೇವಲ 11 ದ್ವೀಪಗಳಲ್ಲಿ ಮಾತ್ರ ಜನವಸತಿ ಇದೆ. ಸದ್ಯ ವಿವಾದಕ್ಕೆ ಕಾರಣವಾಗಿರುವ ಲಕ್ಷದ್ವೀಪ ಡೆವಲಪ್‌ಮೆಂಟ್‌ ಅಥಾರಿಟಿ ರೆಗ್ಯುಲೇಶನ್‌ ದ್ವೀಪವಾಸಿಗಳ ಜನ ಜೀವನವನ್ನು ಮತ್ತು ಸಾಂಪ್ರದಾಯಿಕ ಕಸುಬುಗಳನ್ನು ನಾಶ ಮಾಡಲಿದೆ ಎಂದು ಜನರು ಕಳವಳಗೊಂಡಿದ್ದಾರೆ. ಹೊಸ ಲಕ್ಷದ್ವೀಪ ಡೆವಲಪ್‌ಮೆಂಟ್‌ ಅಥಾರಿಟಿಯು ದ್ವೀಪವನ್ನು ದೇಶದ ಪ್ರಮುಖ ಪ್ರವಾಸಿ ತಾಣವನ್ನಾಗಿ ಮಾಡುವ ಉದ್ಧೇಶವನ್ನು ಹೊಂದಿದೆ. ಬಹುತೇಕ ಕಾಡುಗಳನ್ನು ಕಡಿದು ಮಾಲ್ಡೀವ್ಸ್‌ ಮಾದರಿಯ ಕಡಲು ದಂಡೆಗಳನ್ನು ನಿರ್ಮಿಸುವ ಉದ್ಧೇಶವನ್ನು ಹೊಂದಿದೆ ಎಂದು ಜನರು ಹೇಳುತ್ತಾರೆ.

ಉದ್ಧೇಶಿತ ಲಕ್ಷದ್ವೀಪ ಡೆವಲಪ್‌ಮೆಂಟ್‌ ಅಥಾರಿಟಿ ರೆಗ್ಯುಲೇಶನ್‌ (2021) ಕಾನೂನು ಈಗ ಕೇಂದ್ರ ಗೃಹ ಸಚಿವಾಲಯದ ಅಂಗಳವನ್ನು ತಲುಪಿದ್ದು ಗೃಹ ಸಚಿವಾಲಯದ ಅನುಮತಿಯೆಂದೇ ಬಾಕಿಯಿದೆ. ಲಕ್ಷದ್ವೀಪ ಎಲ್‌ಜೆ ಪ್ರಫುಲ್‌ ಪಟೇಲ್‌ ಇದು ಪ್ರವಾಸೋದ್ಯಮವನ್ನು ಹೆಚ್ಚಿಸುವುದರಿಂದ ದ್ವೀಪವಾಸಿಗಳಿಗೆ ಹೆಚ್ಚಿನ ಉದ್ಯೋಗಾವಕಾಶಗಳು ಕೂಡ ಸಿಗುತ್ತವೆ ಎಂದು ಉದ್ಧೇಶಿತ ಕಾಯ್ದೆಯನ್ನು ಸಮರ್ಥಿಸಿಕೊಳ್ಳುತ್ತಿದ್ದಾರೆ.

ಇದನ್ನೂ ಓದಿ : ಸಾರ್ವಜನಿಕರ ಆಕ್ರೋಶಕ್ಕೆ ಮಣಿದು ಮಲಯಾಳಂ ನಿಷೇಧದ ಆದೇಶ ಹಿಂಪಡೆದ ದೆಹಲಿಯ ಆಸ್ಪತ್ರೆ

ದೇಶದ ಅನೇಕ ನಿವೃತ್ತ ಅಧಿಕಾರಿಗಳು. ಸಂಸದರು ಹಾಗೂ ಚಲನಚಿತ್ರ ಗಣ್ಯರು ಕೂಡ ಕೇಂದ್ರ ಸರ್ಕಾರಕ್ಕೆ ಪತ್ರವನ್ನು ಬರೆದು ಉದ್ದೇಶಿತ ಯೋಜನೆಯಿಂದ ಲಕ್ಷದ್ವೀಪದ ಮೂಲ ಸ್ವರೂಪವೇ ಬದಲಾಗಲಿದೆ. ಬುಡಕಟ್ಟು ಮತ್ತು ಅವರ ನೆಲೆ ಅರಣ್ಯ ನಾಶವಾಗುತ್ತದೆ. ಇದು ಲಕ್ಷದ್ವೀಪದ ಜನಜೀವನವನ್ನು ಸಂಪೂರ್ಣ ನಾಶಮಾಡಲಿದೆ. ಹಾಗಾಗಿ ಉದ್ಧೇಶಿತ ಯೋಜನೆಯನ್ನು ಕೈಬಿಡುವಂತೆ ಮನವಿಯನ್ನು ಮಾಡಿದ್ದಾರೆ.

ದ್ವೀಪವಾಸಿಗಳ ಹೋರಾಟ, ಗಣ್ಯರ ಒತ್ತಡಕ್ಕೆ ಕೇಂದ್ರ ಸರ್ಕಾರ ಮಣಿಯುವ ಯಾವ ಲಕ್ಷಣಗಳು ಕಾಣಿಸುತ್ತಿಲ್ಲ. ದೇಶದ ಅತ್ಯಂತ ಅಪರೂಪದ ಮತ್ತು ಅಪಾರ ವನ್ಯ ಸಂಪತ್ತಿನ  ತಾಣವಾದ ಲಕ್ಷದ್ವೀಪವನ್ನು ಬಲಿಕೊಡಲು ಮುಂದಾಗಿರುವ ಎಲ್‌ಜೆ ಪ್ರಫುಲ್‌ ಪಟೇಲ್‌, ಕೇಂದ್ರ ಸರ್ಕಾರ ದ್ವೀಪವಾಸಿಗಳ ಹಿತಾಸಕ್ತಿಯನ್ನು ರಕ್ಷಿಸಲು ತಕ್ಷಣವೇ ಮುಂದಾಗಬೇಕಿದೆ. ಇಲ್ಲವಾದರೆ ಲಕ್ಷದ್ವೀಪದ ಜನರ ಆಕ್ರೋಶ ಇನ್ನಷ್ಟು ಭುಗಿಲೇಳುವ ಸಾಧ್ಯತೆ ಕೂಡ ಇದೆ.


ಇದನ್ನೂ ಓದಿ: ಹಸುವಿನೊಂದಿಗೆ ಪ್ರತಿಭಟನೆಗೆ ಮಣಿದ ಹರಿಯಾಣ ಪೊಲೀಸರು: ಇಬ್ಬರು ರೈತರ ಬಿಡುಗಡೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...

ಕ್ಷೇತ್ರ ಮರುವಿಂಗಡನೆ : ಗೃಹ ಸಚಿವ ಅಮಿತ್ ಶಾ ಹೇಳಿದ್ದೆಲ್ಲವು ನಿಜವೇ?..ಇಲ್ಲಿದೆ ವಾಸ್ತವಾಂಶ

ದೇಶದ ಗೃಹ ಸಚಿವರು ಸಂಸತ್ತಿನಲ್ಲಿ ಪ್ರಮುಖ ಕಾನೂನಿನ ಬಗ್ಗೆ ವಿವರಿಸುವಾಗ ವಿಷಯ ಸ್ಪಷ್ಟವಾಗಿರಬೇಕು. ಆದರೆ, ಕ್ಷೇತ್ರ ಮರುವಿಂಗಡನೆ ಕುರಿತು ಗೃಹ ಸಚಿವ ಅಮಿತ್ ಶಾ ಮಾತನಾಡಿರುವುದು ಹಾಗಿರಲಿಲ್ಲ. ದಕ್ಷಿಣ ಭಾರತದ ರಾಜ್ಯಗಳು ತಮ್ಮ...