Homeಮುಖಪುಟಹಸುವಿನೊಂದಿಗೆ ಪ್ರತಿಭಟನೆಗೆ ಮಣಿದ ಹರಿಯಾಣ ಪೊಲೀಸರು: ಇಬ್ಬರು ರೈತರ ಬಿಡುಗಡೆ

ಹಸುವಿನೊಂದಿಗೆ ಪ್ರತಿಭಟನೆಗೆ ಮಣಿದ ಹರಿಯಾಣ ಪೊಲೀಸರು: ಇಬ್ಬರು ರೈತರ ಬಿಡುಗಡೆ

ರೈತರೊಬ್ಬರು ಹಸುವೊಂದನ್ನು ಠಾಣೆಗೆ ಕರೆತಂದು, ಇದು ರೈತರ ಬಂಧನವನ್ನು ನೋಡಿದ `41ನೇ ಸಾಕ್ಷಿ' ಎಂದು ಹೇಳಿದ್ದಾರೆ.

- Advertisement -
- Advertisement -

ಹರಿಯಾಣದ ಜೆಜೆಪಿ ಶಾಸಕರ ಮನೆ ಮುತ್ತಿಗೆ ಹಾಕಿದ್ದಕ್ಕಾಗಿ ಬಂಧಿಸಲಾಗಿದ್ದ ಇಬ್ಬರು ರೈತರನ್ನು ಬಿಡುಗಡೆ ಮಾಡುವಂತೆ ಒತ್ತಾಯಿಸಿ ಫತೇಬಾದ್‌ನ ತೋಹಾನ ಪೊಲೀಸ್‌ ಠಾಣೆಯಲ್ಲಿ ಹಸುವನ್ನು ಸೇರಿಸಿಕೊಂಡು ರೈತರು ರಾತ್ರಿಯಿಡೀ ಧರಣಿ ನಡೆಸಿದ್ದಾರೆ. ಕೊನೆಗೆ ಪೊಲೀಸರು ರೈತರನ್ನು ಬಿಡುಗಡೆ ಮಾಡಿದ್ದಾರೆ.

ರೈತರನ್ನು ಬಿಡುಗಡೆಗೊಳಿಸುವಂತೆ ಒತ್ತಾಯಿಸಿ ರೈತ ಹೋರಾಟಗಾರ ರಾಕೇಶ್‌ ಟಿಕಾಯತ್‌ ನೇತೃತ್ವದಲ್ಲಿ ಪೊಲೀಸ್‌ ಠಾಣಾ ಆವರಣದಲ್ಲಿ ಪ್ರತಿಭಟನೆ ನಡೆಯುತ್ತಿದ್ದು, ರೈತರೊಬ್ಬರು ಹಸುವೊಂದನ್ನು ಠಾಣೆಗೆ ಕರೆತಂದು, ಇದು ರೈತರ ಬಂಧನವನ್ನು ನೋಡಿದ `41ನೇ ಸಾಕ್ಷಿ’ ಎಂದು ಹೇಳಿದ್ದಾರೆ.

ಪ್ರತಿಭಟನೆ ಭುಗಿಲೆದ್ದ ನಂತರ ಬಂಧನಕ್ಕೊಳಗಾಗಿದ್ದ ಇಬ್ಬರು ರೈತರನ್ನು ಭಾನುವಾರ ತಡರಾತ್ರಿ ಜಾಮೀನಿನ ಮೇಲೆ ಬಿಡುಗಡೆ ಮಾಡಲಾಗಿದೆ. ರೈತರು ಬಿಡುಗಡೆಯಾಗಿದ್ದರಿಂದ, ಸಂಯುಕ್ತ ಕಿಸಾನ್‌ ಮೋರ್ಚಾ ಕರೆ ನೀಡಿದ್ದ ತೋಹಾನದಲ್ಲಿ ಪೊಲೀಸ್‌ ಠಾಣೆಗಳನ್ನು ಮುತ್ತಿಗೆ ಹಾಕುವ ಯೋಜನೆಯನ್ನು ರದ್ದುಗೊಳಿಸಿದೆ. ಆದರೆ ಪ್ರತಿಭಟನೆ ಮುಂದುವರೆದಿದೆ.

Photo Courtesy: ANI

ಹಸುವಿಗೆ ಆಹಾರ ಮತ್ತು ನೀರು ನೀಡುವ ಜವಾಬ್ದಾರಿ ಪೊಲೀಸ್‌ ಅಧಿಕಾರಿಗಳ ಮೇಲಿದೆ ಎಂದು ರೈತರು ಆಗ್ರಹಿಸಿದ್ದಾರೆ. ಹಸುವನ್ನು ಪೊಲೀಸ್‌ ಠಾಣೆಯ ಆವರಣದಲ್ಲಿ ಕಂಬಕ್ಕೆ ಕಟ್ಟಿಹಾಕಲಾಗಿದ್ದು, ಅದರ ಮುಂದೆ ಹುಲ್ಲು ಮತ್ತು ನೀರು ಇಡಲಾಗಿದೆ.

`ಆಡಳಿತಾರೂಢ ಸರ್ಕಾರ ತನ್ನನ್ನು ಹಸು ಆರಾಧಕರು ಅಥವಾ ಹಸು ಪ್ರಿಯರ ಸರ್ಕಾರವೆಂದು ಪರಿಗಣಿಸುತ್ತದೆ. ನಾವು ಆ ಪವಿತ್ರ ಪ್ರಾಣಿಯನ್ನು ಪ್ರತಿಭಟನೆಯ ಸಂಕೇತವಾಗಿ ತಂದಿದ್ದೇವೆ. ಏಕೆಂದರೆ ಅದನ್ನು ಶುದ್ಧ ಮತ್ತು ಧರ್ಮನಿಷ್ಠವೆಂದು ಪರಿಗಣಿಸಲಾಗಿದೆ. ಅದರ ಉಪಸ್ಥಿತಿಯಲ್ಲಿ ಸರ್ಕಾರ ನಮ್ಮ ಸಮಸ್ಯೆಗಳನ್ನು ಅರ್ಥಮಾಡಿಕೊಂಡು ಪರಿಹಾರ ನೀಡಲು ಅದು ಸಹಾಯ ಮಾಡುತ್ತದೆ’ ಎಂದು ಪ್ರತಿಭಟನಾಕಾರ ರೈತರೊಬ್ಬರು ತಿಳಿಸಿದ್ದಾರೆ.

ರೈತ ಹೋರಾಟಗಾರ ರಾಕೇಶ್‌ ಟಿಕಾಯತ್‌ ನೇತೃತ್ವದಲ್ಲಿ ಪೊಲೀಸ್‌ ಠಾಣೆಯಲ್ಲಿ ಧರಣಿ ನಡೆದಿದ್ದು, ರೈತ ಮುಖಂಡರು ಮತ್ತು ಜಿಲ್ಲಾಡಳಿತದ ನಡುವೆ ಭಾನುವಾರ ನಡೆದ ಸಭೆಯಲ್ಲಿ ಒಮ್ಮತ ಮೂಡಿಬರದಿದ್ದರಿಂದ ಪ್ರತಿಭಟನೆ ಮುಂದುವರೆಸುವ ನಿರ್ಧಾರವನ್ನು ಸಂಯುಕ್ತ ಕಿಸಾನ್ ಮೋರ್ಚಾ ಕೈಗೊಂಡಿತ್ತು.

ಆಡಳಿತಾರೂಢ ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಂಡಿರುವ ಜೆಜೆಪಿಯ ಹರಿಯಾಣದ ಶಾಸಕ ದೇವೇಂದ್ರ ಸಿಂಗ್‌ ಬಾಬ್ಲಿ ಅವರ ನಿವಾಸವನ್ನು ಮುತ್ತಿಗೆ ಹಾಕಿದ್ದ ಕಾರಣಕ್ಕಾಗಿ ರೈತ ಮುಖಂಡರಾದ ವಿಕಾಸ್‌ ಸಿಸಾರ್‌ ಮತ್ತು ರವಿ ಆಜಾದ್ ಅವರನ್ನು ಬಂಧಿಸಲಾಗಿತ್ತು. ‌ರೈತ ಹೋರಾಟ ಆರಂಭವಾದಾಗಿನಿಂದಲೂ ಬಿಜೆಪಿ-ಜೆಜೆಪಿ ಶಾಸಕರ ಸಾರ್ವಜನಿಕ ಕಾರ್ಯಕ್ರಮಗಳನ್ನು ವಿರೋಧಿಸುತ್ತಲೇ ಬಂದಿರುವ ಹರಿಯಾಣದ ರೈತ ಸಂಘಟನೆಗಳು, ಪಕ್ಷಗಳ ಜನಪ್ರತಿನಿಧಿಗಳು ಕಂಡಲ್ಲೆಲ್ಲಾ ಪ್ರತಿಭಟನೆ ನಡೆಸುತ್ತಲೇ ಇದ್ದಾರೆ.

ಕೇಂದ್ರದ ವಿವಾದಾತ್ಮಕ ಕೃಷಿ ಕಾನೂನುಗಳ ವಿರುದ್ಧ ಪ್ರತಿಭಟನೆ ನಡೆಸುತ್ತಿದ್ದ ರೈತರ ವಿರುದ್ಧ ಬಾಬ್ಲಿ ಅವರು ಅವಾಚ್ಯ ಶಬ್ದಗಳ ಮೂಲಕ ನಿಂದನೆ ಮಾಡಿದ್ದರು ಎಂಬ ಆರೋಪದ ಅವರ ವಿರುದ್ಧ ಪ್ರಕರಣ ದಾಖಲಿಸುವಂತೆ ರೈತರು ಆಗ್ರಹಿಸಿದ್ದರು. ಈ ಕುರಿತು ಪ್ರತಿಭಟನಾ ನಿರತ ರೈತರ ಹತ್ತಿರ ಕ್ಷಮೆ ಕೋರಿದ್ದ ಬಾಬ್ಲಿ ಅವರು ಜನಪ್ರತಿನಿಧಿಯಾಗಿ ಅವಾಚ್ಯ ಪದಗಳನ್ನು ಬಳಸಿದ್ದಕ್ಕಾಗಿ ವಿಷಾಧಿಸುತ್ತೇನೆ ಎಂದಿದ್ದರು.


ಇದನ್ನೂ ಓದಿ: ರೈತ ಹೋರಾಟದಿಂದ ನಾವು ಸ್ಥಳೀಯ ಚುನಾವಣೆಯಲ್ಲಿ ಕೆಟ್ಟದಾಗಿ ಸೋತಿದ್ದೇವೆ: ಪಂಜಾಬ್ ಬಿಜೆಪಿ ಮುಖಂಡ ಅನಿಲ್ ಜೋಶಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...