Homeಮುಖಪುಟಇಂಧನ ಬೆಲೆ: ಚುನಾವಣೆ ನಂತರದ 35 ದಿನದಲ್ಲಿ 20 ಸಲ ಹೆಚ್ಚಳ! - ಬಳ್ಳಾರಿ, ಶಿರಸಿಗಳಲ್ಲಿ...

ಇಂಧನ ಬೆಲೆ: ಚುನಾವಣೆ ನಂತರದ 35 ದಿನದಲ್ಲಿ 20 ಸಲ ಹೆಚ್ಚಳ! – ಬಳ್ಳಾರಿ, ಶಿರಸಿಗಳಲ್ಲಿ ಸೆಂಚುರಿ ಬಾರಿಸಿದ ಪೆಟ್ರೋಲ್‍

- Advertisement -
- Advertisement -

ಸರ್ಕಾರಿ ತೈಲ ಕಂಪನಿಗಳು ಸೋಮವಾರ ಪೆಟ್ರೋಲ್ ದರವನ್ನು ಲೀಟರ್‌ಗೆ 28 ಪೈಸೆ ಮತ್ತು ಡೀಸೆಲ್ ದರವನ್ನು 27 ಪೈಸೆ ಹೆಚ್ಚಿಸಿವೆ. ಇತ್ತೀಚಿನ ಹೆಚ್ಚಳವು ಇಂಧನ ದರವನ್ನು ಮತ್ತೊಂದು ದಾಖಲೆಗೆ ಕೊಂಡೊಯ್ದಿದೆ. ಅದು ಈಗ ಮೆಟ್ರೋಗಳಲ್ಲದೇ ಎರಡನೇ ಹಂತದ ನಗರಗಳಲ್ಲೂ ಗರಿಷ್ಠ ಮಟ್ಟ ತಲುಪುತ್ತಿದೆ.

ಐದು ವಿಧಾನಸಭಾ ಚುನಾವಣೆಯ ಫಲಿತಾಂಶಗಳು ಘೋಷಣೆಯಾದ ಒಂದೆರಡು ದಿನಗಳ ನಂತರ,  ಅಂದರೆ ಮೇ 2 ರಿಂದ 35 ದಿನಗಳಲ್ಲಿ 20 ದಿನ ಇಂಧನ ದರ ಹೆಚ್ಚಿಸಲಾಗಿದೆ. ಅಂದರೆ ಚುನಾವಣೆ ನಂತರ ಪೆಟ್ರೋಲ್ ಪ್ರತಿ ಲೀಟರ್‌ಗೆ 4,91  ರೂ ಮತ್ತು ಡೀಸೆಲ್  5.49 ರೂ ಏರಿಕೆ ಕಂಡಿವೆ.

ದೆಹಲಿಯಲ್ಲಿ ಸೋಮವಾರ ಪೆಟ್ರೋಲ್‍ ಪ್ರತಿ ಲೀಟರ್‌ಗೆ 95.31 ರೂ. ಮತ್ತು ಡೀಸೆಲ್ ಲೀಟರ್‌ಗೆ. 86.22 ರೂ.ಗಳಿಗೆ ತಲುಪಿದೆ. ದೆಹಲಿಯಲ್ಲಿನ ಇಂಧನ ದರಗಳು ಇಡೀ ದೇಶಕ್ಕೆ ಮಾನದಂಡವಾಗಿದ್ದರೂ, ಎರಡು ಇಂಧನಗಳ ಚಿಲ್ಲರೆ ಬೆಲೆಗಳು ಸ್ಥಳದಿಂದ ಸ್ಥಳಕ್ಕೆ ಭಿನ್ನವಾಗಿರುತ್ತವೆ. ಏಕೆಂದರೆ ರಾಜ್ಯ ತೆರಿಗೆಗಳು ಮತ್ತು ಸ್ಥಳೀಯ ಸುಂಕಗಳಲ್ಲಿ ವ್ಯತ್ಯಾಸವಿದೆ.

ಮೇ 4 ರಿಂದ ಇಂಧನ ದರಗಳಲ್ಲಿ ಕಂಡು ಬಂದ ನಿರಂತರ ಏರಿಕೆಯು ದೇಶದ ವಿವಿಧ ನಗರಗಳಲ್ಲಿ, ವಿಶೇಷವಾಗಿ ಮಹಾರಾಷ್ಟ್ರ, ರಾಜಸ್ಥಾನ, ಆಂಧ್ರಪ್ರದೇಶ ಮತ್ತು ಮಧ್ಯಪ್ರದೇಶಗಳ ನಗರಗಳಲ್ಲಿ ಪೆಟ್ರೋಲ್ ದರ 100 ರೂ. ದಾಟುವಂತೆ ಮಾಡಿದೆ.

ಮುಂಬೈ, ರತ್ನಗಿರಿ, ಪರಭಾನಿ,  ಔರಂಗಾಬಾದ್, ಜೈಸಲ್ಮೇರ್, ಗಂಗಾನಗರ, ಬನ್ಸಾರ್, ಇಂದೋರ್, ಭೋಪಾಲ್, ಗ್ವಾಲಿಯರ್, ಗುಂಟೂರು ಮತ್ತು ಕಾಕಿನಾಡಗಳಲ್ಲಿ ಪೆಟ್ರೋಲ್‍ ಶತಕ ಬಾರಿಸಿದೆ.

ನಿನ್ನೆಯಿಂದ ಕರ್ನಾಟಕದ ಬಳ್ಳಾರಿ ಮತ್ತು ಶಿರಸಿಯಲ್ಲೂ ಪೆಟ್ರೋಲ್‍ ದರ 100 ರೂ. ದಾಟಿದೆ.

ಮಹಾನಗರಗಳಲ್ಲಿ ಮುಂಬೈ ಅತಿ ಹೆಚ್ಚು ಇಂಧನ ದರವನ್ನು ಹೊಂದಿದೆ. ಪೆಟ್ರೋಲ್ 101.53 ರೂ. ಮತ್ತು ಡೀಸೆಲ್  93.58 ರೂ.ಗಳಿಗೆ ಸದ್ಯ ಮಾರಾಟವಾಗುತ್ತಿವೆ.

ಅಂತರರಾಷ್ಟ್ರೀಯ ತೈಲ ದರಗಳು ಮತ್ತು ಅತಿಯಾದ ದೇಶಿ ತೆರಿಗೆಗಳು ಇಂಧನ ದರ ಏರಿಕೆಗೆ ಎರಡು ಪ್ರಮುಖ ಕಾರಣಗಳು.

ಭಾರತೀಯ ತೈಲ ಮಾರಾಟ ಕಂಪನಿಗಳು ಪೆಟ್ರೋಲ್ ಮತ್ತು ಡೀಸೆಲ್‌ನ ಪಂಪ್ ಬೆಲೆಯನ್ನು, ಹಿಂದಿನ ದಿನದ ಅಂತರರಾಷ್ಟ್ರೀಯ ಮಾನದಂಡ ದರಗಳೊಂದಿಗೆ ಜೋಡಿಸುತ್ತಾರೆ. ಬೆಂಚ್‌ ಮಾರ್ಕ್ ಎನಿಸಿದ ಬ್ರೆಂಟ್ ಕಚ್ಚಾ ತೈಲ ಗುರುವಾರ ಶೇ. 0.06 ರಷ್ಟು ಕುಸಿದು ಪ್ರತಿ ಬ್ಯಾರೆಲ್‌ಗೆ 71.31 ಡಾಲರ್‌ಗೆ ತಲುಪಿತ್ತು,  ಶುಕ್ರವಾರ ಶೇ. 0.81 ಏರಿಕೆ ಕಂಡು ಬ್ಯಾರೆಲ್‌ಗೆ 71.89 ಡಾಲರ್‌ಗೆ ತಲುಪಿದೆ. ಆದರೆ, ಸೋಮವಾರದ ಆರಂಭಿಕ ವಹಿವಾಟಿನಲ್ಲಿ ಇದು ಶೇ.0.56 ಕುಸಿದು ಪ್ರತಿ ಬ್ಯಾರೆಲ್‌ಗೆ 71.49 ಡಾಲರಿಗೆ ತಲುಪಿದೆ.

ತೆರಿಗೆಯಿಂದಾಗಿ ಇಂಧನಗಳ ಬೆಲೆ ಕೂಡ ಹೆಚ್ಚಾಗಿದೆ. ದೆಹಲಿಯಲ್ಲಿ, ಜೂನ್ 1 ರ ಅಧಿಕೃತ ಮಾಹಿತಿಯ ಪ್ರಕಾರ, ಪೆಟ್ರೋಲ್‍ ದರದಲ್ಲಿ ಕೇಂದ್ರ ಮತ್ತು ರಾಜ್ಯ ತೆರಿಗೆಗಳ ಪಾಲು ಶೇ. 34.8 ಮತ್ತು ಶೇ. 23.08 ರಷ್ಟಿದೆ. ಡೀಸೆಲ್‍ನಲ್ಲಿ ಕೇಂದ್ರ ತೆರಿಗೆಗಳು ಶೇ. 37.24ಕ್ಕಿಂತ ಹೆಚ್ಚಿದ್ದರೆ, ರಾಜ್ಯ ತೆರಿಗೆಗಳು ಶೇ. 14.64 ರಷ್ಟಿದೆ.

2020ರ ಹೊತ್ತಿಗೆ, ಜಾಗತಿಕ ಕಚ್ಚಾ ಬೆಲೆಗಳು ಕುಸಿಯುತ್ತಿದ್ದಂತೆ, ಕೇಂದ್ರ ಸರ್ಕಾರವು ತನ್ನ ಹಣಕಾಸನ್ನು ಹೆಚ್ಚಿಸಲು ಇಂಧನದ ಮೇಲೆ ಅಬಕಾರಿ ಸುಂಕವನ್ನು ಹೆಚ್ಚಿಸಿತು. ಸಾಂಕ್ರಾಮಿಕ ರೋಗದ ಕಾರಣದಿಂದಾಗಿ ಆದಾಯವು ಕಡಿಮೆಯಾಗಿದೆ ಎಂದು ಕೇಂದ್ರ ನೆಪ ಹೇಳಿತ್ತು.

ಕಳೆದ ಒಂದು ತಿಂಗಳಲ್ಲಿ ಅಂತರರಾಷ್ಟ್ರೀಯ ತೈಲ ಬೆಲೆಗಳು  ಏರಿಳಿಕೆ ಕಂಡಿವೆ. ಆದರೆ ಭಾರತದಲ್ಲಿ ಮಾತ್ರ ಕೇವಲ ಮೇಲ್ಮುಖವಾಗಿ ಸಾಗಿವೆ. ಉದಾಹರಣೆಗೆ, ಮೇ 20 ರಂದು ಬ್ರೆಂಟ್ ಕಚ್ಚಾ ದರ 65.11 ಡಾಲರ್‌ಗೆ ಕುಸಿದಿತ್ತು. 34 ದಿನಗಳಲ್ಲಿ ಇದು ಅತ್ಯಂತ ಕಡಿಮೆ ದರವಾಗಿತ್ತು. ಆದರೆ ಭಾರತದಲ್ಲಿ ಮರುದಿನ ಪೆಟ್ರೋಲ್ ಮತ್ತು ಡೀಸೆಲ್ ದರಗಳನ್ನು ಕ್ರಮವಾಗಿ 19 ಪೈಸೆ ಮತ್ತು  29 ಪೈಸೆ ಏರಿಕೆ ಮಾಡಲಾಗಿತು.

ಚುನಾವಣೆಯ ಕಾರಣದಿಂದ ಫೆಬ್ರವರಿ 26ರಿಂದ 66 ದಿನಗಳ ಕಾಲ ದರ ಏರಿಕೆ ಮಾಡದೇ ಇದ್ದುದರಿಂದ ತೈಲ ಮಾರಾಟ ಕಂಪನಿಗಳಿಗೆ ಆದಾಯ ನಷ್ಟವಾಗಿತ್ತು. ಹೀಗಾಗಿ ಚುನಾವಣೆಗಳ ನಂತರ ಅವು ಆ ನಷ್ಟ ತುಂಬಿಕೊಳ್ಳಲು ದರ ಏರಿಕೆ ಮಾಡುತ್ತಿವೆ ಎಂದು ಸರ್ಕಾರಿ  ತೈಲ ಕಂಪನಿಗಳ ಅಧಿಕಾರಿಗಳು ಸಮರ್ಥಿಸುತ್ತಾರೆ.


ಇದನ್ನೂ ಓದಿ: ಹೊಸ ಪ್ರವಾಸೋದ್ಯಮ ನೀತಿ ವಿರೋಧಿಸಿ ಲಕ್ಷದ್ವೀಪ ನಿವಾಸಿಗಳಿಂದ ಉಪವಾಸ ಸತ್ಯಾಗ್ರಹ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...