Homeಮುಖಪುಟಇಂಧನ ಬೆಲೆ: ಚುನಾವಣೆ ನಂತರದ 35 ದಿನದಲ್ಲಿ 20 ಸಲ ಹೆಚ್ಚಳ! - ಬಳ್ಳಾರಿ, ಶಿರಸಿಗಳಲ್ಲಿ...

ಇಂಧನ ಬೆಲೆ: ಚುನಾವಣೆ ನಂತರದ 35 ದಿನದಲ್ಲಿ 20 ಸಲ ಹೆಚ್ಚಳ! – ಬಳ್ಳಾರಿ, ಶಿರಸಿಗಳಲ್ಲಿ ಸೆಂಚುರಿ ಬಾರಿಸಿದ ಪೆಟ್ರೋಲ್‍

- Advertisement -
- Advertisement -

ಸರ್ಕಾರಿ ತೈಲ ಕಂಪನಿಗಳು ಸೋಮವಾರ ಪೆಟ್ರೋಲ್ ದರವನ್ನು ಲೀಟರ್‌ಗೆ 28 ಪೈಸೆ ಮತ್ತು ಡೀಸೆಲ್ ದರವನ್ನು 27 ಪೈಸೆ ಹೆಚ್ಚಿಸಿವೆ. ಇತ್ತೀಚಿನ ಹೆಚ್ಚಳವು ಇಂಧನ ದರವನ್ನು ಮತ್ತೊಂದು ದಾಖಲೆಗೆ ಕೊಂಡೊಯ್ದಿದೆ. ಅದು ಈಗ ಮೆಟ್ರೋಗಳಲ್ಲದೇ ಎರಡನೇ ಹಂತದ ನಗರಗಳಲ್ಲೂ ಗರಿಷ್ಠ ಮಟ್ಟ ತಲುಪುತ್ತಿದೆ.

ಐದು ವಿಧಾನಸಭಾ ಚುನಾವಣೆಯ ಫಲಿತಾಂಶಗಳು ಘೋಷಣೆಯಾದ ಒಂದೆರಡು ದಿನಗಳ ನಂತರ,  ಅಂದರೆ ಮೇ 2 ರಿಂದ 35 ದಿನಗಳಲ್ಲಿ 20 ದಿನ ಇಂಧನ ದರ ಹೆಚ್ಚಿಸಲಾಗಿದೆ. ಅಂದರೆ ಚುನಾವಣೆ ನಂತರ ಪೆಟ್ರೋಲ್ ಪ್ರತಿ ಲೀಟರ್‌ಗೆ 4,91  ರೂ ಮತ್ತು ಡೀಸೆಲ್  5.49 ರೂ ಏರಿಕೆ ಕಂಡಿವೆ.

ದೆಹಲಿಯಲ್ಲಿ ಸೋಮವಾರ ಪೆಟ್ರೋಲ್‍ ಪ್ರತಿ ಲೀಟರ್‌ಗೆ 95.31 ರೂ. ಮತ್ತು ಡೀಸೆಲ್ ಲೀಟರ್‌ಗೆ. 86.22 ರೂ.ಗಳಿಗೆ ತಲುಪಿದೆ. ದೆಹಲಿಯಲ್ಲಿನ ಇಂಧನ ದರಗಳು ಇಡೀ ದೇಶಕ್ಕೆ ಮಾನದಂಡವಾಗಿದ್ದರೂ, ಎರಡು ಇಂಧನಗಳ ಚಿಲ್ಲರೆ ಬೆಲೆಗಳು ಸ್ಥಳದಿಂದ ಸ್ಥಳಕ್ಕೆ ಭಿನ್ನವಾಗಿರುತ್ತವೆ. ಏಕೆಂದರೆ ರಾಜ್ಯ ತೆರಿಗೆಗಳು ಮತ್ತು ಸ್ಥಳೀಯ ಸುಂಕಗಳಲ್ಲಿ ವ್ಯತ್ಯಾಸವಿದೆ.

ಮೇ 4 ರಿಂದ ಇಂಧನ ದರಗಳಲ್ಲಿ ಕಂಡು ಬಂದ ನಿರಂತರ ಏರಿಕೆಯು ದೇಶದ ವಿವಿಧ ನಗರಗಳಲ್ಲಿ, ವಿಶೇಷವಾಗಿ ಮಹಾರಾಷ್ಟ್ರ, ರಾಜಸ್ಥಾನ, ಆಂಧ್ರಪ್ರದೇಶ ಮತ್ತು ಮಧ್ಯಪ್ರದೇಶಗಳ ನಗರಗಳಲ್ಲಿ ಪೆಟ್ರೋಲ್ ದರ 100 ರೂ. ದಾಟುವಂತೆ ಮಾಡಿದೆ.

ಮುಂಬೈ, ರತ್ನಗಿರಿ, ಪರಭಾನಿ,  ಔರಂಗಾಬಾದ್, ಜೈಸಲ್ಮೇರ್, ಗಂಗಾನಗರ, ಬನ್ಸಾರ್, ಇಂದೋರ್, ಭೋಪಾಲ್, ಗ್ವಾಲಿಯರ್, ಗುಂಟೂರು ಮತ್ತು ಕಾಕಿನಾಡಗಳಲ್ಲಿ ಪೆಟ್ರೋಲ್‍ ಶತಕ ಬಾರಿಸಿದೆ.

ನಿನ್ನೆಯಿಂದ ಕರ್ನಾಟಕದ ಬಳ್ಳಾರಿ ಮತ್ತು ಶಿರಸಿಯಲ್ಲೂ ಪೆಟ್ರೋಲ್‍ ದರ 100 ರೂ. ದಾಟಿದೆ.

ಮಹಾನಗರಗಳಲ್ಲಿ ಮುಂಬೈ ಅತಿ ಹೆಚ್ಚು ಇಂಧನ ದರವನ್ನು ಹೊಂದಿದೆ. ಪೆಟ್ರೋಲ್ 101.53 ರೂ. ಮತ್ತು ಡೀಸೆಲ್  93.58 ರೂ.ಗಳಿಗೆ ಸದ್ಯ ಮಾರಾಟವಾಗುತ್ತಿವೆ.

ಅಂತರರಾಷ್ಟ್ರೀಯ ತೈಲ ದರಗಳು ಮತ್ತು ಅತಿಯಾದ ದೇಶಿ ತೆರಿಗೆಗಳು ಇಂಧನ ದರ ಏರಿಕೆಗೆ ಎರಡು ಪ್ರಮುಖ ಕಾರಣಗಳು.

ಭಾರತೀಯ ತೈಲ ಮಾರಾಟ ಕಂಪನಿಗಳು ಪೆಟ್ರೋಲ್ ಮತ್ತು ಡೀಸೆಲ್‌ನ ಪಂಪ್ ಬೆಲೆಯನ್ನು, ಹಿಂದಿನ ದಿನದ ಅಂತರರಾಷ್ಟ್ರೀಯ ಮಾನದಂಡ ದರಗಳೊಂದಿಗೆ ಜೋಡಿಸುತ್ತಾರೆ. ಬೆಂಚ್‌ ಮಾರ್ಕ್ ಎನಿಸಿದ ಬ್ರೆಂಟ್ ಕಚ್ಚಾ ತೈಲ ಗುರುವಾರ ಶೇ. 0.06 ರಷ್ಟು ಕುಸಿದು ಪ್ರತಿ ಬ್ಯಾರೆಲ್‌ಗೆ 71.31 ಡಾಲರ್‌ಗೆ ತಲುಪಿತ್ತು,  ಶುಕ್ರವಾರ ಶೇ. 0.81 ಏರಿಕೆ ಕಂಡು ಬ್ಯಾರೆಲ್‌ಗೆ 71.89 ಡಾಲರ್‌ಗೆ ತಲುಪಿದೆ. ಆದರೆ, ಸೋಮವಾರದ ಆರಂಭಿಕ ವಹಿವಾಟಿನಲ್ಲಿ ಇದು ಶೇ.0.56 ಕುಸಿದು ಪ್ರತಿ ಬ್ಯಾರೆಲ್‌ಗೆ 71.49 ಡಾಲರಿಗೆ ತಲುಪಿದೆ.

ತೆರಿಗೆಯಿಂದಾಗಿ ಇಂಧನಗಳ ಬೆಲೆ ಕೂಡ ಹೆಚ್ಚಾಗಿದೆ. ದೆಹಲಿಯಲ್ಲಿ, ಜೂನ್ 1 ರ ಅಧಿಕೃತ ಮಾಹಿತಿಯ ಪ್ರಕಾರ, ಪೆಟ್ರೋಲ್‍ ದರದಲ್ಲಿ ಕೇಂದ್ರ ಮತ್ತು ರಾಜ್ಯ ತೆರಿಗೆಗಳ ಪಾಲು ಶೇ. 34.8 ಮತ್ತು ಶೇ. 23.08 ರಷ್ಟಿದೆ. ಡೀಸೆಲ್‍ನಲ್ಲಿ ಕೇಂದ್ರ ತೆರಿಗೆಗಳು ಶೇ. 37.24ಕ್ಕಿಂತ ಹೆಚ್ಚಿದ್ದರೆ, ರಾಜ್ಯ ತೆರಿಗೆಗಳು ಶೇ. 14.64 ರಷ್ಟಿದೆ.

2020ರ ಹೊತ್ತಿಗೆ, ಜಾಗತಿಕ ಕಚ್ಚಾ ಬೆಲೆಗಳು ಕುಸಿಯುತ್ತಿದ್ದಂತೆ, ಕೇಂದ್ರ ಸರ್ಕಾರವು ತನ್ನ ಹಣಕಾಸನ್ನು ಹೆಚ್ಚಿಸಲು ಇಂಧನದ ಮೇಲೆ ಅಬಕಾರಿ ಸುಂಕವನ್ನು ಹೆಚ್ಚಿಸಿತು. ಸಾಂಕ್ರಾಮಿಕ ರೋಗದ ಕಾರಣದಿಂದಾಗಿ ಆದಾಯವು ಕಡಿಮೆಯಾಗಿದೆ ಎಂದು ಕೇಂದ್ರ ನೆಪ ಹೇಳಿತ್ತು.

ಕಳೆದ ಒಂದು ತಿಂಗಳಲ್ಲಿ ಅಂತರರಾಷ್ಟ್ರೀಯ ತೈಲ ಬೆಲೆಗಳು  ಏರಿಳಿಕೆ ಕಂಡಿವೆ. ಆದರೆ ಭಾರತದಲ್ಲಿ ಮಾತ್ರ ಕೇವಲ ಮೇಲ್ಮುಖವಾಗಿ ಸಾಗಿವೆ. ಉದಾಹರಣೆಗೆ, ಮೇ 20 ರಂದು ಬ್ರೆಂಟ್ ಕಚ್ಚಾ ದರ 65.11 ಡಾಲರ್‌ಗೆ ಕುಸಿದಿತ್ತು. 34 ದಿನಗಳಲ್ಲಿ ಇದು ಅತ್ಯಂತ ಕಡಿಮೆ ದರವಾಗಿತ್ತು. ಆದರೆ ಭಾರತದಲ್ಲಿ ಮರುದಿನ ಪೆಟ್ರೋಲ್ ಮತ್ತು ಡೀಸೆಲ್ ದರಗಳನ್ನು ಕ್ರಮವಾಗಿ 19 ಪೈಸೆ ಮತ್ತು  29 ಪೈಸೆ ಏರಿಕೆ ಮಾಡಲಾಗಿತು.

ಚುನಾವಣೆಯ ಕಾರಣದಿಂದ ಫೆಬ್ರವರಿ 26ರಿಂದ 66 ದಿನಗಳ ಕಾಲ ದರ ಏರಿಕೆ ಮಾಡದೇ ಇದ್ದುದರಿಂದ ತೈಲ ಮಾರಾಟ ಕಂಪನಿಗಳಿಗೆ ಆದಾಯ ನಷ್ಟವಾಗಿತ್ತು. ಹೀಗಾಗಿ ಚುನಾವಣೆಗಳ ನಂತರ ಅವು ಆ ನಷ್ಟ ತುಂಬಿಕೊಳ್ಳಲು ದರ ಏರಿಕೆ ಮಾಡುತ್ತಿವೆ ಎಂದು ಸರ್ಕಾರಿ  ತೈಲ ಕಂಪನಿಗಳ ಅಧಿಕಾರಿಗಳು ಸಮರ್ಥಿಸುತ್ತಾರೆ.


ಇದನ್ನೂ ಓದಿ: ಹೊಸ ಪ್ರವಾಸೋದ್ಯಮ ನೀತಿ ವಿರೋಧಿಸಿ ಲಕ್ಷದ್ವೀಪ ನಿವಾಸಿಗಳಿಂದ ಉಪವಾಸ ಸತ್ಯಾಗ್ರಹ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...