Homeಮುಖಪುಟಉತ್ತರಪ್ರದೇಶ ಬಿಜೆಪಿಯಲ್ಲಿ ಭಿನ್ನಮತ: ಯೋಗಿ ಬದಲಾವಣೆಯೇ? ಸಂಪುಟ ವಿಸ್ತರಣೆಯೇ?

ಉತ್ತರಪ್ರದೇಶ ಬಿಜೆಪಿಯಲ್ಲಿ ಭಿನ್ನಮತ: ಯೋಗಿ ಬದಲಾವಣೆಯೇ? ಸಂಪುಟ ವಿಸ್ತರಣೆಯೇ?

- Advertisement -
- Advertisement -

ಬಿಜೆಪಿಯ ಹಿರಿಯ ಮುಖಂಡ, ಉತ್ತರಪ್ರದೇಶ ಬಿಜೆಪಿ ಉಸ್ತುವಾರಿ ರಾಧಾ ಮೋಹನ್ ಸಿಂಗ್ ಅವರು ಯುಪಿ ರಾಜ್ಯಪಾಲೆ ಆನಂದಿಬೆನ್ ಪಟೇಲ್ ಅವರನ್ನು ಭಾನುವಾರ ಲಖನೌದಲ್ಲಿ ಭೇಟಿಯಾಗಿ 30 ನಿಮಿಷಗಳ ಕಾಲ ಮಾತುಕತೆ ನಡೆಸಿದ್ದು, ಈಗ ಉತ್ತರಪ್ರದೇಶದ ರಾಜಕೀಯದಲ್ಲಿ ಕುತೂಹಲಕ್ಕೆ ಕಾರಣವಾಗಿದೆ.

ಇತ್ತೀಚೆಗೆ ಯೋಗಿ ಆದಿತ್ಯನಾಥರ ಜನ್ಮದಿನಕ್ಕೆ ಮೋದಿಯವರು ಟ್ವೀಟ್‍ ಮಾಡಿ ಶುಭಾಶಯ ಕೋರಲಿಲ್ಲ ಮತ್ತು ಉತ್ತರಪ್ರದೇಶದ ಸರ್ಕಾರಿ ಜಾಹಿರಾತುಗಳಲ್ಲಿ  ಕಳೆದ ವಾರದಿಂದ ಮೋದಿಯವರ ಭಾವಚಿತ್ರ ಮಾಯವಾಗಿದೆ. ಈ ಎರಡೂ ಅಂಶಗಳನ್ನು ಹಿನ್ನೆಲೆಯಾಗಿ ಇಟ್ಟುಕೊಂಡು ನೋಡಿದಾಗ, ಕೇಂದ್ರ ನಾಯಕರು ಮತ್ತು ಯೋಗಿ ಆದಿತ್ಯನಾಥ್‍ ಅವರ ನಡುವೆ ಅಧಿಕಾರದ ಮುಸುಕಿನ ಗುದ್ದಾಟ ಆರಂಭವಾದಂತಿದೆ.

ಕಳೆದ ವಾರವಷ್ಟೇ ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್‍ ಸಂತೋಷ್‍ ಮತ್ತು ಬಿಜೆಪಿ ಉಸ್ತುವಾರಿ ರಾಧಾ ಮೋಹನ್‍ ಸಿಂಗ್‍ ಲಕ್ನೋಗೆ ವಿಶೇಷ ಭೇಟಿ ನೀಡಿದ್ದರು. ಅವರು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್, ಅವರ ಮಂತ್ರಿಗಳು ಮತ್ತು ಪಕ್ಷದ ಮುಖಂಡರೊಂದಿಗೆ ಪರಿಶೀಲನಾ ಸಭೆಗಳನ್ನು ನಡೆಸಿದ್ದರು. ಅವರಿಬ್ಬರೂ ದೆಹಲಿ ತಲುಪಿ ಹಿರಿಯ ನಾಯಕರೊಂದಿಗೆ ಮಾತನಾಡಿದ ನಂತರ, ಭಾನುವಾರ ದಿಢೀರನೆ ರಾಧಾ ಮೋಹನ್‍ ಸಿಂಗ್‍ ಮರಳಿ ಲಕ್ನೋಗೆ ಬಂದು ರಾಜ್ಯಪಾಲರ ಜೊತೆ ಮಾತುಕತೆ ನಡೆಸಿದ್ದು ಹಲವು ಊಹಾಪೋಹಗಳಿಗೆ ಕಾರಣವಾಗಿದೆ.

ರಾಜ್ಯಪಾಲರ ಭೇಟಿಯ ನಂತರ ಮಾಧ್ಯಮಗಳು ಕೇಳಿದ ಯಾವ ಪ್ರಶ್ನೆಗಳಿಗೂ ರಾಧಾ ಮೋಹನ್‍ ಸಿಂಗ್‍ ಸ್ಪಷ್ಟವಾಗಿ ಉತ್ತರಿಸಿಲ್ಲ. ಯೋಗಿ ಆದಿತ್ಯನಾಥ್ ಕ್ಯಾಬಿನೆಟ್ ವಿಸ್ತರಣೆಯ ಬಗ್ಗೆ ರಾಜ್ಯಪಾಲರಿಗೆ ಮಾಹಿತಿ ನೀಡಿದ್ದೀರಾ ಎಂದು ಕೇಳಿದಾಗ ಸಿಂಗ್ ಅವರು, ಸಚಿವ ಸಂಪುಟವನ್ನು ವಿಸ್ತರಿಸುವುದು ಮುಖ್ಯಮಂತ್ರಿಯವರ ವಿವೇಚನೆಗೆ ಬಿಟ್ಟಿದ್ದು ಎಂದು ಹೇಳಿದರು.

ರಾಜ್ಯಪಾಲರ ಜೊತೆಗಿನ ಭೇಟಿಯನ್ನು ಸೌಜನ್ಯದ ಭೇಟಿ ಎಂದು ಹೇಳಿದ ಸಿಂಗ್, ನಾನು ರಾಜ್ಯದ ಉಸ್ತುವಾರಿ ವಹಿಸಿಕೊಂಡಾಗಿನಿಂದ, ರಾಜ್ಯಪಾಲರನ್ನು ಭೇಟಿ ಮಾಡಿರಲಿಲ್ಲ ಎಂದು ಹೇಳಿದರು.

ಹಲವಾರು ಬಿಜೆಪಿ ಶಾಸಕರು ಮತ್ತು ಸಂಸದರು ಯೋಗಿ ಅವರ ಕೋವಿಡ್‍ ನಿರ್ವಹಣೆಯ ಬಗ್ಗೆ ಸಾರ್ವಜನಿಕವಾಗಿಯೇ ಅಸಮಾಧಾನ ವ್ಯಕ್ತಪಡಿಸಿದ್ದನ್ನು ಇಲ್ಲಿ ಗಮನಿಸಬಹುದು.

ಭಾನುವಾರದ ಭೇಟಿಯ ನಂತರ ಯೋಗಿಯವರೇ ಮುಂದುವರೆಯುತ್ತಾರೆ ಎಂದು ಬಿಜೆಪಿ ಸ್ಪಷ್ಟಪಡಿಸಿದರೆ, ಸದ್ಯಕ್ಕೆ ಈ ಸಂದರ್ಭದಲ್ಲಿ ರಾಜ್ಯಪಾಲರ ಜೊತೆ ಮಾತುಕತೆ ನಡೆಸಿದ್ದು ಪಕ್ಷದಲ್ಲಿ ಗೊಂದಲ, ಊಹಾಪೋಹಗಳಿಗೆ ಕಾರಣವಾಗಿದೆ.

ಮುಖ್ಯಮಂತ್ರಿಯವರ ಬಗ್ಗೆ ಕೇಳಿದಾಗ, ‘ಯೋಗಿ ಆದಿತ್ಯನಾಥ್ ಉತ್ತಮ ಕೆಲಸ  ಮಾಡುತ್ತಿದ್ದಾರೆ ಎಂದಿರುವ ಸಿಂಗ್‍,  “ಪ್ರತಿಯೊಬ್ಬರೂ ಯೋಗಿಯವರ ನಾಯಕತ್ವವನ್ನು ನಂಬುತ್ತಾರೆ, ಅವರು ಇತ್ತೀಚೆಗೆ ಕೊರೋನಾ ನಿರ್ವಹಣೆಯನ್ನು ಚೆನ್ನಾಗಿ ಮಾಡಿದ್ದಾರೆಂದು ಎಲ್ಲರಿಗೂ ತಿಳಿದಿದೆ” ಎಂದು ಅವರು ಹೇಳಿದ್ದಾರೆ.

2022ರ ಚುನಾವಣೆಯ ತಯಾರಿ?

ಬಿಜೆಪಿಯ ರಾಷ್ಟ್ರೀಯ ನಾಯಕತ್ವವು ಉತ್ತರಪ್ರದೇಶದ ಸರ್ಕಾರದ ಬಗ್ಗೆ ಚಿಂತಿತಗೊಂಡಿದೆ. ಮುಂದಿನ ವರ್ಷ ನಡೆಯಲಿರುವ ವಿಧಾನಸಭಾ ಚುನಾವಣೆಯ ಬಗ್ಗೆ ಪಕ್ಷಕ್ಕೆ ಆತಂಕ ಶುರುವಾಗಿದೆ ಎಂದು ಕಳೆದ ವಾರ ಎನ್‍ಡಿಟಿವಿ ವರದಿ ಮಾಡಿತ್ತು.

ಉತ್ತರಪ್ರದೇಶದಲ್ಲಿ ಬಿಜೆಪಿ ಶಾಸಕರು ಮತ್ತು ಸಂಸದರು ಯೋಗಿ ಸರ್ಕಾರದ ಕೋವಿಡ್‍ ನಿರ್ವಹಣೆಯ ವಿಫಲತೆಯ ಬಗ್ಗೆ ಸಾರ್ವಜನಿಕವಾಗಿಯೇ ಅಸಮಾಧಾನ ವ್ಯಕ್ತಪಡಿಸುತ್ತಿದ್ದಾರೆ. ಜನಪ್ರತಿನಿಧಿಗಳಿಗೇ ಆರೋಗ್ಯ ಸೌಲಭ್ಯ ಪಡೆಯಲು ಆಗುತ್ತಿಲ್ಲ ಎಂಬ ಟೀಕೆ ಕೇಳಿ ಬರುತ್ತಿವೆ.

ಮುಂದಿನ ವರ್ಷ ನಡೆಯುವ ನಿರ್ಣಾಯಕ ಚುನಾವಣೆಗೆ ಮುಂಚಿತವಾಗಿ, 2024 ರ ಲೋಕಸಭಾ ಚುನಾವಣೆಯ ಮೇಲೆ ಇದರ ಪರಿಣಾಮಗಳನ್ನು ಈಗಲೇ ಪರಿಗಣಿಸಿ ಬದಲಾವಣೆಗಳನ್ನು ತರುವ ಬಗ್ಗೆ ಯೋಚಿಸಬೇಕು ಎಂಬ ವದಂತಿಗಳು ಹರಡಿವೆ. ಯೋಗಿ ಅಥವಾ ಅವರ ಇಬ್ಬರು ಉಪ ಮುಖ್ಯಮಂತ್ರಿಗಳನ್ನು ಬದಲಿಸುವ ಬಗ್ಗೆ ಪಕ್ಷದ ಆಂತರಿಕ ವಲಯದಲ್ಲಿ ಮಾತುಗಳು ಕೇಳಿ ಬಂದಿವೆ ಎನ್ನಲಾಗಿದೆ.

ಸದ್ಯ ಯೋಗಿ ಮತ್ತು ನರೇಂದ್ರ ಮೋದಿಯವರ ನಡುವೆ ಮುಸುಕಿನ ಗುದ್ದಾಟ ಶುರುವಾಗಿದ್ದು, ಪ್ರಧಾನಿ ನರೇಂದ್ರ ಮೋದಿಯವರ ಆಪ್ತ ಎನ್ನಲಾದ ಮಾಜಿ ಅಧಿಕಾರಿ ಎ.ಕೆ. ಶರ್ಮಾ ಅವರಿಗೆ ರಾಜ್ಯ ಸರ್ಕಾರದಲ್ಲಿ ಪ್ರಮುಖ ಪಾತ್ರ ನೀಡಬಹುದು ಎಂದು ಮೂಲಗಳು ತಿಳಿಸಿವೆ. ಆ ಮೂಲಕ ಯೋಗಿಯವರ ಆಡಳಿತವನ್ನು ನಿಯಂತ್ರಿಸುವ ಕೆಲಸಕ್ಕೆ ಬಿಜೆಪಿ ಮುಂದಾಗಬಹುದು ಎನ್ನಲಾಗಿದೆ.


ಇದನ್ನೂ ಓದಿ: ಹೊಸ ಪ್ರವಾಸೋದ್ಯಮ ನೀತಿ ವಿರೋಧಿಸಿ ಲಕ್ಷದ್ವೀಪ ನಿವಾಸಿಗಳಿಂದ ಉಪವಾಸ ಸತ್ಯಾಗ್ರಹ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...