Homeಕರೋನಾ ತಲ್ಲಣಸಮಗ್ರ ಪ್ಯಾಕೇಜ್ ನೀಡದಿದ್ದರೆ ಸಿಎಂ ನಿವಾಸದ ಮುಂದೆ ಖಾಲಿ ಚೀಲ ಹಿಡಿದು ಪ್ರತಿಭಟನೆ: ಜನಾಗ್ರಹ ಆಂದೋಲನ...

ಸಮಗ್ರ ಪ್ಯಾಕೇಜ್ ನೀಡದಿದ್ದರೆ ಸಿಎಂ ನಿವಾಸದ ಮುಂದೆ ಖಾಲಿ ಚೀಲ ಹಿಡಿದು ಪ್ರತಿಭಟನೆ: ಜನಾಗ್ರಹ ಆಂದೋಲನ ಎಚ್ಚರಿಕೆ

- Advertisement -
- Advertisement -

ರಾಜ್ಯ ಸರ್ಕಾರ ಬಡವರಿಗೆ ಮತ್ತು ಕಾರ್ಮಿಕರಿಗೆ ನೀಡಿರುವ ಎರಡು ಆರ್ಥಿಕ ಪರಿಹಾರ ಪ್ಯಾಕೇಜ್‌ಗಳು ಬಡವರನ್ನು ಅಣಕ ಮಾಡುವಂತಿವೆ. ಈ ಕೂಡಲೇ ಮುಖ್ಯಮಂತ್ರಿ ಯಡಿಯೂರಪ್ಪ ಮತ್ತು ಸರ್ಕಾರ ಎಚ್ಚೆತ್ತುಕೊಂಡು ಸಮಗ್ರ ಪರಿಹಾರದ ಪ್ಯಾಕೇಜ್‌ ಒಂದನ್ನು ಘೋಷಿಸಬೇಕು. ಇಲ್ಲವಾದಲ್ಲಿ ಜೂನ್‌ 15 ರಂದು ರಾಜ್ಯಾದ್ಯಂತ ಶಾಸಕರು, ಜಿಲ್ಲಾ ಉಸ್ತುವಾರಿ ಮಂತ್ರಿಗಳು, ಮುಖ್ಯಮಂತ್ರಿಗಳ ನಿವಾಸದ ಮುಂದೆ ಖಾಲಿ ಚೀಲ ಹಿಡಿದು ಪ್ರತಿಭಟನೆಯನ್ನು ನಡೆಸಲಾಗುವುದು ಎಂದು ಜನಾಗ್ರಹ ಆಂದೋಲನ ಸಮಿತಿ ಸರ್ಕಾರಕ್ಕೆ ಕಠಿಣ ಎಚ್ಚರಿಕೆಯನ್ನು ನೀಡಿದೆ.

ಇಂದು ಮಧ್ಯಾಹ್ನ ಆನ್‌ಲೈನ್‌ ಮೂಲಕ ಪತ್ರಿಕಾಗೋಷ್ಠಿಯನ್ನು ನಡೆಸಿ ಸರ್ಕಾರದ ಮುಂದೆ 5 ಅಂಶಗಳ ಆಗ್ರಹ ಪತ್ರವನ್ನು ಮಂಡಿಸಿರುವ ಸಮಿತಿಯು ಮುಖ್ಯಮಂತ್ರಿ ಯಡಿಯೂರಪ್ಪವನವರಿಗೆ ಸಲ್ಲಿಸಲು ಮುಂದಾಗಿದೆ.

ಪತ್ರಿಕಾಗೋಷ್ಠಿಯನ್ನುದ್ಧೇಶಿಸಿ ಮಾತನಾಡಿದ ಕರ್ನಾಟಕ ರಾಜ್ಯ ರೈತ ಸಂಘದ ಗೌರವಾಧ್ಯಕ್ಷರಾದ ಹೆಚ್‌.ಆರ್ ಬಸವರಾಜಪ್ಪ, “ಕರ್ನಾಟಕ ಸರ್ಕಾರ ಕೊರೋನ ವಿರುದ್ಧ ಹೋರಾಡಲು ಕೈಗೊಂಡಿರುವ ಕ್ರಮ ಯಾವುದಕ್ಕೂ ಸಾಲದು. ಜನರ ಕಣ್ಣೊರೆಸುವ ಈ ಪರಿಹಾರ ಪ್ಯಾಕೇಜ್‌ ನಿಂದ ಯಾರಿಗೂ ಅನುಕೂಲವಿಲ್ಲ. ರಾಜ್ಯ ಸರ್ಕಾರ ಸುಮಾರು 20 ಸಾವಿರ ಕೋಟಿ ಮೊತ್ತದ ಸಮಗ್ರ ಪ್ಯಾಕೇಜ್‌ ಘೋಷಿಸುವ ಮೂಲಕ ಕಷ್ಟದಲ್ಲಿರುವ ಜನರ ಜೊತೆ ನಿಲ್ಲಬೇಕು. ರಾಜ್ಯಕ್ಕೆ ಮುಂಗಾರು ಪ್ರವೇಶಿಸಿ ಎಲ್ಲೆಡೆ ಮಳೆಯಾಗುತ್ತಿದೆ. ಬೀಜ ಗೊಬ್ಬರ ಖರೀದಿಸಲು ರೈತರ ಬಳಿ ಈಗ ಹಣ ಇಲ್ಲ. ಪ್ರತಿ ರೈತರಿಗೆ (50 ಲಕ್ಷ ಕುಟುಂಬಗಳಿಗೆ)  10,000 ಆರ್ಥಿಕ ನೆರವು ಮತ್ತು ಬೀಜ ಗೊಬ್ಬರವನ್ನು ಉಚಿತವಾಗಿ ಅಥವಾ ಸಬ್ಸಿಡಿ ದರದಲ್ಲಿ ನೀಡಬೇಕು” ಎಂದು ಒತ್ತಾಯಿಸಿದರು.

ಸರ್ಕಾರ ಈಗ ಘೋಷಿಸಿರುವ ಪ್ಯಾಕೇಜ್‌ ಎಲ್ಲಾ ಬಡವರನ್ನು ತಲುಪಿಲ್ಲ. ಹಾಗಾಗಿ ಹೊಸ ಪ್ಯಾಕೇಜ್‌ ಘೋಷಿಸಬೇಕು.  ರಾಜ್ಯ ಸರ್ಕಾರದ ಬಳಿ ಹಣ ಇಲ್ಲವಾದರೆ ಕೇಂದ್ರದಿಂದ ಬರಬೇಕಾದ ಜಿಎಸ್‌ಟಿ ಬಾಕಿ 30 ಸಾವಿರ ಕೋಟಿ ಹಣ, ಬೆಂಗಳೂರು ಅಭಿವೃದ್ಧಿಗೆ ಮೀಸಲಿಟ್ಟಿರುವ 26 ಸಾವಿರ ಕೋಟಿ ಹಣ ಇದೆ. ಅದೇ ರೀತಿ ದೊಡ್ಡ ದೊಡ್ಡ ಉದ್ಯಮಿಗಳು ಮತ್ತು ಐಷಾರಾಮಿ ಸೇವೆಗಳ ಮೇಲೆ 2% ಕೊರೋನಾ ತೆರಿಗೆಯನ್ನು ವಿಧಿಸಬೇಕು ಎಂದು ಆಗ್ರಹಿಸಿದ್ದಾರೆ.

ಜನಾಗ್ರಹ ಆಂದೋಲನ ಸಮಿತಿಯ ಆಗ್ರಹ ಪತ್ರದಲ್ಲಿ ಹೇಳಲಾದ 5 ಅಂಶಗಳು..

  1. ಸರ್ಕಾರ ವೈದ್ಯಕೀಯ ಸೌಲಭ್ಯವನ್ನು ಬಲಪಡಿಸಬೇಕು. ಗ್ರಾಮೀಣ ಭಾಗದಲ್ಲಿ ಕೊರೋನಾ ಸೋಂಕಿತರಿಗೆ ಉಚಿತ ಚಿಕಿತ್ಸೆ ನೀಡಬೇಕು.
  2. ಸರ್ಕಾರ ರಾಜ್ಯದ ಪ್ರತಿಯೊಬ್ಬ ನಾಗರಿಕನಿಗೂ ಉಚಿತ ವ್ಯಾಕ್ಸೀನ್‌ ನೀಡಬೇಕು.
  3. ಸಮಗ್ರ ಪಡಿತರ, ಎಲ್ಲಾ ಬಡ ಕುಟುಂಬಗಳಿಗೆ (72 ಲಕ್ಷ ಕುಟುಂಬಗಳಿಗೆ) ಅಕ್ಕಿ, ಬೇಳೆ, ಗೋದಿ ಒಳಗೊಂಡ ಸಮಗ್ರ ರೇಷನ್‌ ಕಿಟ್‌ ನೀಡಬೇಕು. ರಾಜ್ಯದ 72 ಲಕ್ಷ ಬಡ ಕುಟುಂಬಗಳಿಗೆ ತಿಂಗಳಿಗೆ 5000 ರೂಪಾಯಿಯಂತೆ (ಮೇ ಮತ್ತು ಜೂನ್‌) 2 ತಿಂಗಳಿಗೆ 10,000 ರೂಪಾಯಿ ಪರಿಹಾರವನ್ನು ನೀಡಬೇಕು.
  4. ಕೊರೋನಾ ಸೋಂಕಿನಿಂದ ತಂದೆ ತಾಯಿ, ಪೋಷಕರನ್ನು ಕಳೆದುಕೊಂಡು ಅನಾಥವಾದ ಮಕ್ಕಳಿಗೆ 5 ಲಕ್ಷ ರೂಪಾಯಿ ಪರಿಹಾರವನ್ನು ನೀಡಬೇಕು.
  5. ಮುಂಗಾರು ಆರಂಭವಾಗಿದೆ, ರೈತರಿಗೆ ಸಾಲ, ಸಬ್ಸಿಡಿ ದರದಲ್ಲಿ ಬೀಜ ಮತ್ತು ಗೊಬ್ಬರವನ್ನು ಸರ್ಕಾರ ನೀಡಲು ಮುಂದಾಗಬೇಕು.

ಸಾಮಾಜಿಕ ಹೋರಾಟಗಾರ ಮತ್ತು ಮಾಜಿ ಐಎಎಸ್‌ ಅಧಿಕಾರಿ ಶಶಿಕಾಂತ್‌ ಸೇಂಥಿಲ್‌ ಮಾತನಾಡಿ “ಈಗ ದೇಶದ ಜನರ ಬಳಿ ಹಣ ಇಲ್ಲ. ಜನರಲ್ಲಿ ಬೇಡಿಕೆ ಇಳಿದಾಗ ದೇಶದ ಆರ್ಥಿಕತೆಯೂ ಕುಸಿಯುತ್ತದೆ. ನಿರುದ್ಯೋಗ ಹೆಚ್ಚಾಗುತ್ತದೆ. ಜನರಿಗೆ  ನೀಡುವ ಪರಿಹಾರದ ಪ್ಯಾಕೇಜ್‌ ಕೇವಲ ಬಡವರಿಗೆ ಸಹಾಯ ಮಾಡಲಿಕ್ಕಾಗಿ ಕೊಡುವುದಲ್ಲ. ದೇಶದ ಆರ್ಥಿಕತೆ ಜೀವಂತವಾಗಿರಬೇಕಾದರೆ ಕರ್ನಾಟಕ ರಾಜ್ಯ ಸರ್ಕಾರ ಈಗ ಘೋಷಿಸಿರುವ ಕಣ್ಣೊರೆಸುವ 1250 ಕೋಟಿ ಮೊತ್ತದ ಚಿಕ್ಕ ಪ್ಯಾಕೇಜ್‌ ಬಿಟ್ಟು ಎಲ್ಲರಿಗೂ ನೆರವಾಗುವಂತಹ ದೊಡ್ಡ ಪ್ಯಾಕೇಜ್ ಘೋಷಿಸಬೇಕು. ರೈತರ ಜೊತೆ ನಿಂತು ಪರಿಹಾರ ಮತ್ತು ಆರ್ಥಿಕ ಸಹಾಯವನ್ನು ಮಾಡಬೇಕು. ಇಲ್ಲವಾದಲ್ಲಿ ಈ ವರ್ಷ ಕರ್ನಾಟಕದಲ್ಲಿ ಅನ್ನಕ್ಕೂ ಕೊರತೆಯಾಗಲಿದೆ ಎಂದು ಆತಂಕ ವ್ಯಕ್ತಪಡಿಸಿದರು.

ಈ ಪತ್ರಿಕಾಗೋಷ್ಠಿಯಲ್ಲಿ ಕರ್ನಾಟಕ ರಾಜ್ಯ ರೈತ ಸಂಘ, ದಲಿತ ಸಂಘರ್ಷ ಸಮಿತಿ, ಕರ್ನಾಟಕ ಜನಶಕ್ತಿ, ಸ್ವರಾಜ್‌ ಇಂಡಿಯಾ, ಎಸ್‌ಡಿಪಿಐ ಸೇರಿದಂತೆ ವಿವಿಧ ಸಂಘಟನೆಗಳ ಮುಖ್ಯಸ್ಥರು ಮತ್ತು ಜನಪರ ಹೋರಾಟಗಾರರು ಭಾಗವಹಿಸಿದ್ದರು. ಸಾಮಾಜಿಕ ಹೋರಾಟಗಾರರಾದ ಮಾಜಿ ಐಎಎಸ್‌ ಅಧಿಕಾರಿ ಸಸಿಕಾಂತ್‌ ಸೆಂಥಿಲ್‌, ಕೆ.ಎಲ್‌. ಅಶೋಕ್‌, ಉಮರ್‌ ಯು.ಹೆಚ್.‌ಮಹಮದ್ದ ಯೂಸುಫ್‌ ಕನ್ನಿ ಮುಂತಾದವರು ಪತ್ರಿಕಾಗೋಷ್ಠೀಯಲ್ಲಿ ಹಾಜರಿದ್ದರು.

ಸ್ವರಾಜ್‌ ಇಂಡಿಯಾದ ಚಾಮರಸ ಮಾಲಿ ಪಾಟೀಲ್‌, ಕರ್ನಾಟಕ ಜನಶಕ್ತಿ ಸಂಘಟನೆಯ ಅಧ್ಯಕ್ಷ ನೂರ್‌ ಶ್ರೀಧರ್‌, ರಾಜ್ಯ ದಲಿತ ಸಂಘರ್ಷ ಸಮಿತಿಯ ಮುಖಂಡ ಮಾವಳ್ಳಿ ಶ್ರೀಧರ್,  ರಾಜ್ಯ ದಲಿತ ಸಂಘರ್ಷ ಸಮಿತಿ(ಅಂಬೇಡ್ಕರ್‌ ವಾದ) ಕಾರ್ಯದರ್ಶಿ ಇಂಧುದರ ಹೊನ್ನಾಪುರ, ಎಸ್‌ಡಿಪಿಐ ಸಂಘಟನೆಯ ರಾಜ್ಯ ಕಾರ್ಯದರ್ಶಿ ಅಫ್ಸರ್‌ ಕೊಡ್ಲಿಪೇಟೆ ಮುಂತಾದವರು ಪತ್ರಿಕಾಘೋಷ್ಠಿಯನ್ನು ಉದ್ಧೇಶಿಸಿ ಮಾತನಾಡಿದರು.


ಇದನ್ನೂ ಓದಿ: ಹೊಟ್ಟೆಗೆ ಅನ್ನ, ಬದುಕಿಗೆ ಭರವಸೆ ನೀಡುವ ಸಮಗ್ರ ಪ್ಯಾಕೇಜ್ ನೀಡಿ: ಜನಾಗ್ರಹ ಆಂದೋಲನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...