Homeಕರೋನಾ ತಲ್ಲಣಸಮಗ್ರ ಪ್ಯಾಕೇಜ್ ನೀಡದಿದ್ದರೆ ಸಿಎಂ ನಿವಾಸದ ಮುಂದೆ ಖಾಲಿ ಚೀಲ ಹಿಡಿದು ಪ್ರತಿಭಟನೆ: ಜನಾಗ್ರಹ ಆಂದೋಲನ...

ಸಮಗ್ರ ಪ್ಯಾಕೇಜ್ ನೀಡದಿದ್ದರೆ ಸಿಎಂ ನಿವಾಸದ ಮುಂದೆ ಖಾಲಿ ಚೀಲ ಹಿಡಿದು ಪ್ರತಿಭಟನೆ: ಜನಾಗ್ರಹ ಆಂದೋಲನ ಎಚ್ಚರಿಕೆ

- Advertisement -
- Advertisement -

ರಾಜ್ಯ ಸರ್ಕಾರ ಬಡವರಿಗೆ ಮತ್ತು ಕಾರ್ಮಿಕರಿಗೆ ನೀಡಿರುವ ಎರಡು ಆರ್ಥಿಕ ಪರಿಹಾರ ಪ್ಯಾಕೇಜ್‌ಗಳು ಬಡವರನ್ನು ಅಣಕ ಮಾಡುವಂತಿವೆ. ಈ ಕೂಡಲೇ ಮುಖ್ಯಮಂತ್ರಿ ಯಡಿಯೂರಪ್ಪ ಮತ್ತು ಸರ್ಕಾರ ಎಚ್ಚೆತ್ತುಕೊಂಡು ಸಮಗ್ರ ಪರಿಹಾರದ ಪ್ಯಾಕೇಜ್‌ ಒಂದನ್ನು ಘೋಷಿಸಬೇಕು. ಇಲ್ಲವಾದಲ್ಲಿ ಜೂನ್‌ 15 ರಂದು ರಾಜ್ಯಾದ್ಯಂತ ಶಾಸಕರು, ಜಿಲ್ಲಾ ಉಸ್ತುವಾರಿ ಮಂತ್ರಿಗಳು, ಮುಖ್ಯಮಂತ್ರಿಗಳ ನಿವಾಸದ ಮುಂದೆ ಖಾಲಿ ಚೀಲ ಹಿಡಿದು ಪ್ರತಿಭಟನೆಯನ್ನು ನಡೆಸಲಾಗುವುದು ಎಂದು ಜನಾಗ್ರಹ ಆಂದೋಲನ ಸಮಿತಿ ಸರ್ಕಾರಕ್ಕೆ ಕಠಿಣ ಎಚ್ಚರಿಕೆಯನ್ನು ನೀಡಿದೆ.

ಇಂದು ಮಧ್ಯಾಹ್ನ ಆನ್‌ಲೈನ್‌ ಮೂಲಕ ಪತ್ರಿಕಾಗೋಷ್ಠಿಯನ್ನು ನಡೆಸಿ ಸರ್ಕಾರದ ಮುಂದೆ 5 ಅಂಶಗಳ ಆಗ್ರಹ ಪತ್ರವನ್ನು ಮಂಡಿಸಿರುವ ಸಮಿತಿಯು ಮುಖ್ಯಮಂತ್ರಿ ಯಡಿಯೂರಪ್ಪವನವರಿಗೆ ಸಲ್ಲಿಸಲು ಮುಂದಾಗಿದೆ.

ಪತ್ರಿಕಾಗೋಷ್ಠಿಯನ್ನುದ್ಧೇಶಿಸಿ ಮಾತನಾಡಿದ ಕರ್ನಾಟಕ ರಾಜ್ಯ ರೈತ ಸಂಘದ ಗೌರವಾಧ್ಯಕ್ಷರಾದ ಹೆಚ್‌.ಆರ್ ಬಸವರಾಜಪ್ಪ, “ಕರ್ನಾಟಕ ಸರ್ಕಾರ ಕೊರೋನ ವಿರುದ್ಧ ಹೋರಾಡಲು ಕೈಗೊಂಡಿರುವ ಕ್ರಮ ಯಾವುದಕ್ಕೂ ಸಾಲದು. ಜನರ ಕಣ್ಣೊರೆಸುವ ಈ ಪರಿಹಾರ ಪ್ಯಾಕೇಜ್‌ ನಿಂದ ಯಾರಿಗೂ ಅನುಕೂಲವಿಲ್ಲ. ರಾಜ್ಯ ಸರ್ಕಾರ ಸುಮಾರು 20 ಸಾವಿರ ಕೋಟಿ ಮೊತ್ತದ ಸಮಗ್ರ ಪ್ಯಾಕೇಜ್‌ ಘೋಷಿಸುವ ಮೂಲಕ ಕಷ್ಟದಲ್ಲಿರುವ ಜನರ ಜೊತೆ ನಿಲ್ಲಬೇಕು. ರಾಜ್ಯಕ್ಕೆ ಮುಂಗಾರು ಪ್ರವೇಶಿಸಿ ಎಲ್ಲೆಡೆ ಮಳೆಯಾಗುತ್ತಿದೆ. ಬೀಜ ಗೊಬ್ಬರ ಖರೀದಿಸಲು ರೈತರ ಬಳಿ ಈಗ ಹಣ ಇಲ್ಲ. ಪ್ರತಿ ರೈತರಿಗೆ (50 ಲಕ್ಷ ಕುಟುಂಬಗಳಿಗೆ)  10,000 ಆರ್ಥಿಕ ನೆರವು ಮತ್ತು ಬೀಜ ಗೊಬ್ಬರವನ್ನು ಉಚಿತವಾಗಿ ಅಥವಾ ಸಬ್ಸಿಡಿ ದರದಲ್ಲಿ ನೀಡಬೇಕು” ಎಂದು ಒತ್ತಾಯಿಸಿದರು.

ಸರ್ಕಾರ ಈಗ ಘೋಷಿಸಿರುವ ಪ್ಯಾಕೇಜ್‌ ಎಲ್ಲಾ ಬಡವರನ್ನು ತಲುಪಿಲ್ಲ. ಹಾಗಾಗಿ ಹೊಸ ಪ್ಯಾಕೇಜ್‌ ಘೋಷಿಸಬೇಕು.  ರಾಜ್ಯ ಸರ್ಕಾರದ ಬಳಿ ಹಣ ಇಲ್ಲವಾದರೆ ಕೇಂದ್ರದಿಂದ ಬರಬೇಕಾದ ಜಿಎಸ್‌ಟಿ ಬಾಕಿ 30 ಸಾವಿರ ಕೋಟಿ ಹಣ, ಬೆಂಗಳೂರು ಅಭಿವೃದ್ಧಿಗೆ ಮೀಸಲಿಟ್ಟಿರುವ 26 ಸಾವಿರ ಕೋಟಿ ಹಣ ಇದೆ. ಅದೇ ರೀತಿ ದೊಡ್ಡ ದೊಡ್ಡ ಉದ್ಯಮಿಗಳು ಮತ್ತು ಐಷಾರಾಮಿ ಸೇವೆಗಳ ಮೇಲೆ 2% ಕೊರೋನಾ ತೆರಿಗೆಯನ್ನು ವಿಧಿಸಬೇಕು ಎಂದು ಆಗ್ರಹಿಸಿದ್ದಾರೆ.

ಜನಾಗ್ರಹ ಆಂದೋಲನ ಸಮಿತಿಯ ಆಗ್ರಹ ಪತ್ರದಲ್ಲಿ ಹೇಳಲಾದ 5 ಅಂಶಗಳು..

  1. ಸರ್ಕಾರ ವೈದ್ಯಕೀಯ ಸೌಲಭ್ಯವನ್ನು ಬಲಪಡಿಸಬೇಕು. ಗ್ರಾಮೀಣ ಭಾಗದಲ್ಲಿ ಕೊರೋನಾ ಸೋಂಕಿತರಿಗೆ ಉಚಿತ ಚಿಕಿತ್ಸೆ ನೀಡಬೇಕು.
  2. ಸರ್ಕಾರ ರಾಜ್ಯದ ಪ್ರತಿಯೊಬ್ಬ ನಾಗರಿಕನಿಗೂ ಉಚಿತ ವ್ಯಾಕ್ಸೀನ್‌ ನೀಡಬೇಕು.
  3. ಸಮಗ್ರ ಪಡಿತರ, ಎಲ್ಲಾ ಬಡ ಕುಟುಂಬಗಳಿಗೆ (72 ಲಕ್ಷ ಕುಟುಂಬಗಳಿಗೆ) ಅಕ್ಕಿ, ಬೇಳೆ, ಗೋದಿ ಒಳಗೊಂಡ ಸಮಗ್ರ ರೇಷನ್‌ ಕಿಟ್‌ ನೀಡಬೇಕು. ರಾಜ್ಯದ 72 ಲಕ್ಷ ಬಡ ಕುಟುಂಬಗಳಿಗೆ ತಿಂಗಳಿಗೆ 5000 ರೂಪಾಯಿಯಂತೆ (ಮೇ ಮತ್ತು ಜೂನ್‌) 2 ತಿಂಗಳಿಗೆ 10,000 ರೂಪಾಯಿ ಪರಿಹಾರವನ್ನು ನೀಡಬೇಕು.
  4. ಕೊರೋನಾ ಸೋಂಕಿನಿಂದ ತಂದೆ ತಾಯಿ, ಪೋಷಕರನ್ನು ಕಳೆದುಕೊಂಡು ಅನಾಥವಾದ ಮಕ್ಕಳಿಗೆ 5 ಲಕ್ಷ ರೂಪಾಯಿ ಪರಿಹಾರವನ್ನು ನೀಡಬೇಕು.
  5. ಮುಂಗಾರು ಆರಂಭವಾಗಿದೆ, ರೈತರಿಗೆ ಸಾಲ, ಸಬ್ಸಿಡಿ ದರದಲ್ಲಿ ಬೀಜ ಮತ್ತು ಗೊಬ್ಬರವನ್ನು ಸರ್ಕಾರ ನೀಡಲು ಮುಂದಾಗಬೇಕು.

ಸಾಮಾಜಿಕ ಹೋರಾಟಗಾರ ಮತ್ತು ಮಾಜಿ ಐಎಎಸ್‌ ಅಧಿಕಾರಿ ಶಶಿಕಾಂತ್‌ ಸೇಂಥಿಲ್‌ ಮಾತನಾಡಿ “ಈಗ ದೇಶದ ಜನರ ಬಳಿ ಹಣ ಇಲ್ಲ. ಜನರಲ್ಲಿ ಬೇಡಿಕೆ ಇಳಿದಾಗ ದೇಶದ ಆರ್ಥಿಕತೆಯೂ ಕುಸಿಯುತ್ತದೆ. ನಿರುದ್ಯೋಗ ಹೆಚ್ಚಾಗುತ್ತದೆ. ಜನರಿಗೆ  ನೀಡುವ ಪರಿಹಾರದ ಪ್ಯಾಕೇಜ್‌ ಕೇವಲ ಬಡವರಿಗೆ ಸಹಾಯ ಮಾಡಲಿಕ್ಕಾಗಿ ಕೊಡುವುದಲ್ಲ. ದೇಶದ ಆರ್ಥಿಕತೆ ಜೀವಂತವಾಗಿರಬೇಕಾದರೆ ಕರ್ನಾಟಕ ರಾಜ್ಯ ಸರ್ಕಾರ ಈಗ ಘೋಷಿಸಿರುವ ಕಣ್ಣೊರೆಸುವ 1250 ಕೋಟಿ ಮೊತ್ತದ ಚಿಕ್ಕ ಪ್ಯಾಕೇಜ್‌ ಬಿಟ್ಟು ಎಲ್ಲರಿಗೂ ನೆರವಾಗುವಂತಹ ದೊಡ್ಡ ಪ್ಯಾಕೇಜ್ ಘೋಷಿಸಬೇಕು. ರೈತರ ಜೊತೆ ನಿಂತು ಪರಿಹಾರ ಮತ್ತು ಆರ್ಥಿಕ ಸಹಾಯವನ್ನು ಮಾಡಬೇಕು. ಇಲ್ಲವಾದಲ್ಲಿ ಈ ವರ್ಷ ಕರ್ನಾಟಕದಲ್ಲಿ ಅನ್ನಕ್ಕೂ ಕೊರತೆಯಾಗಲಿದೆ ಎಂದು ಆತಂಕ ವ್ಯಕ್ತಪಡಿಸಿದರು.

ಈ ಪತ್ರಿಕಾಗೋಷ್ಠಿಯಲ್ಲಿ ಕರ್ನಾಟಕ ರಾಜ್ಯ ರೈತ ಸಂಘ, ದಲಿತ ಸಂಘರ್ಷ ಸಮಿತಿ, ಕರ್ನಾಟಕ ಜನಶಕ್ತಿ, ಸ್ವರಾಜ್‌ ಇಂಡಿಯಾ, ಎಸ್‌ಡಿಪಿಐ ಸೇರಿದಂತೆ ವಿವಿಧ ಸಂಘಟನೆಗಳ ಮುಖ್ಯಸ್ಥರು ಮತ್ತು ಜನಪರ ಹೋರಾಟಗಾರರು ಭಾಗವಹಿಸಿದ್ದರು. ಸಾಮಾಜಿಕ ಹೋರಾಟಗಾರರಾದ ಮಾಜಿ ಐಎಎಸ್‌ ಅಧಿಕಾರಿ ಸಸಿಕಾಂತ್‌ ಸೆಂಥಿಲ್‌, ಕೆ.ಎಲ್‌. ಅಶೋಕ್‌, ಉಮರ್‌ ಯು.ಹೆಚ್.‌ಮಹಮದ್ದ ಯೂಸುಫ್‌ ಕನ್ನಿ ಮುಂತಾದವರು ಪತ್ರಿಕಾಗೋಷ್ಠೀಯಲ್ಲಿ ಹಾಜರಿದ್ದರು.

ಸ್ವರಾಜ್‌ ಇಂಡಿಯಾದ ಚಾಮರಸ ಮಾಲಿ ಪಾಟೀಲ್‌, ಕರ್ನಾಟಕ ಜನಶಕ್ತಿ ಸಂಘಟನೆಯ ಅಧ್ಯಕ್ಷ ನೂರ್‌ ಶ್ರೀಧರ್‌, ರಾಜ್ಯ ದಲಿತ ಸಂಘರ್ಷ ಸಮಿತಿಯ ಮುಖಂಡ ಮಾವಳ್ಳಿ ಶ್ರೀಧರ್,  ರಾಜ್ಯ ದಲಿತ ಸಂಘರ್ಷ ಸಮಿತಿ(ಅಂಬೇಡ್ಕರ್‌ ವಾದ) ಕಾರ್ಯದರ್ಶಿ ಇಂಧುದರ ಹೊನ್ನಾಪುರ, ಎಸ್‌ಡಿಪಿಐ ಸಂಘಟನೆಯ ರಾಜ್ಯ ಕಾರ್ಯದರ್ಶಿ ಅಫ್ಸರ್‌ ಕೊಡ್ಲಿಪೇಟೆ ಮುಂತಾದವರು ಪತ್ರಿಕಾಘೋಷ್ಠಿಯನ್ನು ಉದ್ಧೇಶಿಸಿ ಮಾತನಾಡಿದರು.


ಇದನ್ನೂ ಓದಿ: ಹೊಟ್ಟೆಗೆ ಅನ್ನ, ಬದುಕಿಗೆ ಭರವಸೆ ನೀಡುವ ಸಮಗ್ರ ಪ್ಯಾಕೇಜ್ ನೀಡಿ: ಜನಾಗ್ರಹ ಆಂದೋಲನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...