Homeಮುಖಪುಟಜಮ್ಮು ಕಾಶ್ಮೀರದಲ್ಲಿ ಮತ್ತೆ ಅರೆಸೈನಿಕ ಪಡೆಗಳ ಸಂಚಾರ; ಆತಂಕದಲ್ಲಿ ಕಣಿವೆಯ ನಿವಾಸಿಗಳು

ಜಮ್ಮು ಕಾಶ್ಮೀರದಲ್ಲಿ ಮತ್ತೆ ಅರೆಸೈನಿಕ ಪಡೆಗಳ ಸಂಚಾರ; ಆತಂಕದಲ್ಲಿ ಕಣಿವೆಯ ನಿವಾಸಿಗಳು

- Advertisement -
- Advertisement -

ಜಮ್ಮು ಕಾಶ್ಮೀರದಲ್ಲಿ ಹೆಚ್ಚಿನ ಸಂಖ್ಯೆಯ ಅರೆಸೈನಿಕ ಪಡೆಗಳು ಸಂಚಾರ ಮಾಡುತ್ತಿದ್ದು, ನಾಗರಿಕರಲ್ಲಿ ಆತಂಕದ ಕರಿನೆರಳು ಹೆಚ್ಚುತ್ತಿವೆ. 2019 ರ ಆಗಸ್ಟ್‌ ತಿಂಗಳಲ್ಲಿ ರಾಜ್ಯದ ವಿಶೇಷ ಸ್ಥಾನಮಾನ ರದ್ದುಪಡಿಸಿದ ಘಟನೆಯ ರೀತಿಯದ್ದೇ ಏನೊ ಮತ್ತೆ ನಡೆಯಲಿದೆ ಎಂದು ಕಣಿವೆಯ ಜನರು ಸಂಶಯ ಪಡುತ್ತಿದ್ದಾರೆ ಎಂದು ವರದಿಯಾಗಿದೆ. ಹೆಚ್ಚಿನ ಅರೆಸೈನಿಕ ಪಡೆಗಳು ಉತ್ತರ ಕಾಶ್ಮೀರ ಮತ್ತು ಜಮ್ಮು ಪ್ರದೇಶದ ಕೆಲವು ಭಾಗಗಳಲ್ಲಿ ನಿಯೋಜಿಸಲಾಗಿದೆ ಎನ್ನಲಾಗಿದೆ.

ಸೈನ್ಯದ ಬೃಹತ್‌ ಸಂಚಾರವು ರಾಜ್ಯದಲ್ಲಿ ಮತ್ತೆ ಏನೋ ಸಂಭವಿಸಲಿದೆ ಎಂದು ಸ್ಥಳೀಯ ರಾಜಕೀಯ ನಾಯಕರೇ ಅನುಮಾನ ಪಟ್ಟಿದ್ದಾರೆ. 2019 ರಲ್ಲಿ ರಾಜ್ಯಕ್ಕೆ ವಿಶೇಷ ಸ್ಥಾನಮಾನವನ್ನು ರದ್ದುಪಡಿಸಿದ ನಂತರ ಬಂಧನಕ್ಕೊಳಗಾದ ಕೆಲವು ರಾಜಕೀಯ ನಾಯಕರನ್ನು ಮತ್ತೆ ಬಂಧಿಸಬಹುದು ಎಂದು ಆಂತಕ ವ್ಯಕ್ತಪಡಿಸಿದ್ದಾರೆ.

ವಿಶೇಷ ಸ್ಥಾನಮಾನವನ್ನು ರದ್ದುಪಡಿಸುವ ಮೊದಲು ಕೂಡಾ ಜಮ್ಮು ಕಾಶ್ಮೀರದಲ್ಲಿ ಇದೇ ರೀತಿಯಲ್ಲಿ ಸೈನ್ಯವನ್ನು ನಿಯೋಜಿಸಲಾಗಿತ್ತು.

ಇದನ್ನೂ ಓದಿ: ಕೇರಳ ಮೂಲದ ನರ್ಸ್‌ಗಳನ್ನು ಹಿಂದಿಯಲ್ಲಿ ಮಾತನಾಡುವಂತೆ ಒತ್ತಾಯಿಸಿದ ದೆಹಲಿ ಆಸ್ಪತ್ರೆ

ಜಮ್ಮು ಕಾಶ್ಮೀರ ಮಾಜಿ ಮುಖ್ಯಮಂತ್ರಿ ಒಮರ್‌ ಅಬ್ದುಲ್ಲಾ ಅವರ ಸಲಹೆಗಾರ ತನ್ವೀರ್‌ ಸಿದ್ದೀಕಿ ಅವರು ಕಣಿವೆಯಲ್ಲಿ ನಡೆಯುತ್ತಿರುವ ಬೆಳವಣಿಗೆಯ ಬಗ್ಗೆ ಟ್ವೀಟ್‌ ಮಾಡಿದ್ದಾರೆ. ಅವರು ತಮ್ಮ ಟ್ವೀಟ್‌ನಲ್ಲಿ, “ವದಂತಿಗಳು ದಟ್ಟವಾಗಿ ಮತ್ತು ವೇಗವಾಗಿ ಹಬ್ಬುತ್ತಿದೆ, ನಾವು ಎರಡನೆ ಸೆಮಿಸ್ಟರ್‌ಗೆ ಸಿದ್ದವಾಗಬೇಕೆ? ಶಾಸಕರ ಹಾಸ್ಟೆಲ್‌ 2.0 ? ” ಎಂದು ಪ್ರಶ್ನಿಸಿದ್ದಾರೆ.

ಪೀಪಲ್ಸ್‌ ಕಾನ್ಫರೆನ್ಸ್‌ ಅಧ್ಯಕ್ಷ, ರಾಜ್ಯದ ಮಾಜಿ ಸಚಿವರು ಆಗಿರುವ ಸಜ್ಜಾದ್ ಲೋನ್ ಅವರು ಕೂಡಾ ರಾಜ್ಯದಲ್ಲಿ ಹರಡುತ್ತಿರುವ ವದಂತಿಗಳ ಬಗ್ಗೆ ಆತಂಕ ವ್ಯಕ್ತಪಡಿಸಿ ಟ್ವೀಟ್ ಮಾಡಿದ್ದಾರೆ.

ಆದಾಗ್ಯೂ, ಕಣಿವೆಯಲ್ಲಿ ಸೈನ್ಯದ ಸಂಚಾರದಿಂದಾಗಿ ಹರಡುತ್ತಿರುವ ಈ ಎಲ್ಲಾ ವದಂತಿಗಳನ್ನು ಅಧಿಕಾರಿಗಳು ನಿರಾಕರಿಸಿದ್ದಾರೆ. ಜಮ್ಮು ಕಾಶ್ಮೀರಕ್ಕೆ ಆಗಮಿಸುತ್ತಿರುವ ಪಡೆಗಳು ಪಂಚರಾಜ್ಯ ವಿಧಾನಸಭಾ ಚುನಾವಣೆಯ ಕರ್ತವ್ಯಕ್ಕೆ ನಿಯೋಜನೆಗೊಂಡವರಾಗಿದ್ದು, ಇದೀಗ ಕರ್ತವ್ಯ ನಿರ್ವಹಿಸಿ ಹಿಂತಿರುಗುತ್ತಿದ್ದಾರೆ ಎಂದು ಹಿರಿಯ ಪೊಲೀಸ್ ಅಧಿಕಾರಿಯ ಹೇಳಿಕೆಯನ್ನು ಉಲ್ಲೇಖಿಸಿ ಎನ್‌ಡಿಟಿವಿ ವರದಿ ಮಾಡಿದೆ.

ಇದನ್ನೂ ಓದಿ: ಪಿಜ್ಜಾ, ಬರ್ಗರ್‌, ಸ್ಮಾರ್ಟ್‌ಫೋನ್‌ ಮನೆ ಬಾಗಿಲಿಗೆ ಬರುವುದಾದರೇ, ಪಡಿತರವೇಕೆ ಬೇಡ? ಕೇಂದ್ರಕ್ಕೆ ಕೇಜ್ರಿವಾಲ್ ಪ್ರಶ್ನೆ

“ಈ ಪಡೆಗಳು ಇತ್ತೀಚೆಗೆ ಚುನಾವಣೆ ನಡೆದ ರಾಜ್ಯಗಳಿಂದ ಹಿಂತಿರುಗುತ್ತಿವೆ. ಅವರನ್ನು ಮತ್ತೆ ಸೇರಿಸಿಕೊಳ್ಳಲಾಗುತ್ತಿದೆ. ಇದು ಹೊಸ ನಿಯೋಜನೆಯಲ್ಲ” ಎಂದು ಪೊಲೀಸ್ ಇನ್ಸ್‌ಪೆಕ್ಟರ್ ಜನರಲ್ ವಿಜಯ್ ಕುಮಾರ್ ಹೇಳಿದ್ದಾರೆ.

“ಜಮ್ಮು ಕಾಶ್ಮೀರದ ಅರೆಸೈನಿಕ ಪಡೆಗಳ ಸುಮಾರು 200 ತುಕಡಿಗಳು ವಿಧಾನಸಭಾ ಚುನಾವಣೆಗಾಗಿ ರಾಜ್ಯಗಳಿಗೆ ಕಳುಹಿಸಲಾಗಿತ್ತು. ಅದರಲ್ಲಿ ಐವತ್ತು ತುಕಡಿಗಳು ಒಂದು ತಿಂಗಳ ಹಿಂದೆ ಮರಳಿದ್ದವು ಮತ್ತು ಉಳಿದವುಗಳು ಈಗ ಮರಳಿ ಬರುತ್ತಿವೆ” ಎಂದು ಹೇಳಿದ್ದಾರೆ.

2019 ಆಗಸ್ಟ್‌ ತಿಂಗಳು ಜಮ್ಮು ಕಾಶ್ಮೀರದ ವಿಶೇಷ ಸ್ಥಾನಮಾನವನ್ನು ರದ್ದುಗೊಳಿಸುವ ಮೊದಲು ಕೇಂದ್ರ ಅರೆಸೈನಿಕ ಪಡೆಗಳ ಕನಿಷ್ಠ 800 ಹೆಚ್ಚುವರಿ ತುಕಡಿಗಳನ್ನು ನಿಯೋಜಿಸಲಾಗಿತ್ತು. ಆದರೆ ಕಳೆದ ವರ್ಷದ ಆರಂಭದಲ್ಲಿ, ಪೌರತ್ವ (ತಿದ್ದುಪಡಿ) ಕಾಯ್ದೆಯ ವಿರುದ್ಧ ಪ್ರತಿಭಟನೆಗಳು ನಡೆದಾಗ 100 ತುಕಡಿಗಳನ್ನು ಅಲ್ಲಿಂದ ದೇಶದ ಇತರ ಭಾಗಗಳಿಗೆ ಕಳುಹಿಸಲಾಯಿತು.

ಇದನ್ನೂ ಓದಿ: ಸುಸ್ಥಿರ ಅಭಿವೃದ್ಧಿ ಪಟ್ಟಿಯಲ್ಲಿ ಮತ್ತೆರಡು ಸ್ಥಾನ ಕುಸಿದ ಭಾರತ: ಬಾಂಗ್ಲಾ, ನೇಪಾಳ ಶ್ರೀಲಂಕಾ, ಭೂತಾನ್‍ಗಳಿಗಿಂತ ಹಿಂದೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...