Homeಕರೋನಾ ತಲ್ಲಣಬೆಂಗಳೂರಿನಲ್ಲಿ ಕೊರೋನಾ ಲಾಕ್‌ಡೌನ್‌ ಹೊಡತಕ್ಕೆ ಬಾಗಿಲು ಮುಚ್ಚಿದ 8000 PGಗಳು

ಬೆಂಗಳೂರಿನಲ್ಲಿ ಕೊರೋನಾ ಲಾಕ್‌ಡೌನ್‌ ಹೊಡತಕ್ಕೆ ಬಾಗಿಲು ಮುಚ್ಚಿದ 8000 PGಗಳು

ಬೆಂಗಳೂರಿನಲ್ಲಿ ದೊಡ್ಡ ಪ್ರಮಾಣದಲ್ಲಿ PGಗಳು ಮುಚ್ಚಿರುವುದರಿಂದ ಸರಿ ಸುಮಾರು 30,000 ಜನರು ಉದ್ಯೋಗವನ್ನು ಕಳೆದುಕೊಂಡಿದ್ದಾರೆ.

- Advertisement -
- Advertisement -

ಕೊರೋನಾ ಮತ್ತು ಲಾಕ್‌ಡೌನ್‌ ಸಮಾಜದ ಎಲ್ಲಾ ವರ್ಗಗಳಿಗೂ ವ್ಯಾಪಕ ಹೊಡೆತವನ್ನು ನೀಡಿದೆ. ಅದರಲ್ಲೂ ಹೊಟೆಲ್‌, ಸಾರಿಗೆ ಮತ್ತು PGಗಳ ಕಥೆ ಹೇಳತೀರದು. ಕೊರೋನಾ ಸಾಂಕ್ರಾಮಿಕದ ಹೊಡೆತಕ್ಕೆ ಎಲ್ಲಾ ಸಣ್ಣ ಪುಟ್ಟ ವ್ಯವಹಾರ ವಹಿವಾಟುಗಳು ಮುಚ್ಚಿಹೋಗಿವೆ. ಇದರಲ್ಲಿ ಮುಖ್ಯವಾಗಿ ಪೇಯಿಂಗ್‌ ಗೆಸ್ಟ್‌ಗಳಿಗೆ ಲಾಕ್‌ ಡೌನ್‌ ತೀವ್ರ  ನಷ್ಟವನ್ನುಂಟು ಮಾಡಿದೆ.

ಹೆಚ್ಚಾಗಿ PGಯಲ್ಲಿ ವಿದ್ಯಾರ್ಥಿಗಳು ಮತ್ತು ಐಟಿ ಉದ್ಯೋಗಿಗಳು ನೆಲೆಸುತ್ತಾರೆ. ಆದರೆ 2021 ರ ಕೊರೋನಾ ಮೊದಲ ಅಲೆಯಿಂದಲೂ ಆನ್‌ಲೈನ್‌ ಕ್ಲಾಸ್‌ಗಳು ಮತ್ತು ವರ್ಕ್‌ ಫ್ರಮ್‌ ಹೋಮ್‌ ನಡೆಯುತ್ತಿರುವುದರಿಂದ ಬೆಂಗಳೂರಿನ ಹೆಚ್ಚಿನ ಪಿ.ಜಿಗಳು ಮುಚ್ಚಿಹೋಗಿವೆ. ಕಳೆದ 1 ವರ್ಷದ ಅವಧಿಯಲ್ಲಿ ಬೆಂಗಳೂರು ನಗರ ಒಂದರಲ್ಲೇ 8000 ಕ್ಕೂ ಹೆಚ್ಚು ಪೇಯಿಂಗ್‌ ಗೆಸ್ಟ್‌ಗಳು ಬಂದ್‌ ಆಗಿವೆ.

ಬೆಂಗಳೂರು PG ಅಸೋಸಿಯೇಷನ್‌ ಹೇಳುವ ಪ್ರಕಾರ ನಗರದಲ್ಲಿರುವ 12000 PGಗಳಲ್ಲಿ ಕೇವಲ 4000 PGಗಳು ಮಾತ್ರ ಸದ್ಯಕ್ಕೆ ಕಾರ್ಯ ನಿರ್ವಹಿಸುತ್ತಿವೆ. ಉಳಿದ 8 ಸಾವಿರ PGಗಳು ಅತಿಥಿಗಳಿಲ್ಲದೇ ನಿಂತು ಹೋಗಿವೆ. ಉಳಿದ 4 ಸಾವಿರ PG ಗಳು ಸಹ ಮುಚ್ಚಿಹೋಗುವ ಹಂತಕ್ಕೆ ಬಂದಿವೆ. 2021 ರ ಜನವರಿ ತಿಂಗಳಿನಲ್ಲಿ ನಗರದ PG ಇಂಡಸ್ಟ್ರಿ ಚೇತರಿಕೆಯನ್ನು ಕಾಣುವ ಲಕ್ಷಣವನ್ನು ತೋರಿಸಿತ್ತು. ಆದರೆ ಕೊರೋನಾ ಎರಡನೇ ಅಲೆಯ ಪರಿಣಾಮವಾಗಿ PGಗಳು ಸದ್ಯಕ್ಕೆ ಚೇತರಿಕೆಯನ್ನು ಕಾಣಲು ಸಾಧ್ಯವಿಲ್ಲ ಎಂದು ಬೆಂಗಳೂರು PG ಅಸೋಸಿಯೇಷನ್‌ ಅಧ್ಯಕ್ಷ ಅಶೋಕ್‌ ಕುಮಾರ್‌ ಪಣಂಬುರ್‌ ತಿಳಿಸಿದ್ದಾರೆ.

ಬೆಂಗಳೂರಿನಲ್ಲಿ ದೊಡ್ಡ ಪ್ರಮಾಣದಲ್ಲಿ PGಗಳು ಮುಚ್ಚಿರುವುದರಿಂದ ಸರಿ ಸುಮಾರು 30,000 ಜನರು ಉದ್ಯೋಗವನ್ನು ಕಳೆದುಕೊಂಡಿದ್ದಾರೆ.

ಎಲೆಕ್ಟ್ರಾನಿಕ್‌ ಸಿಟಿ, ಮಾರತಳ್ಳಿ, ವೈಟ್‌ಫೀಲ್ಡ್‌ ಭಾಗಗಳಲ್ಲಿರು ಐಟಿ ಕಂಪನಿಗಳು ಕೊರೋನಾ ಮೊದಲನೇ ಅಲೆಯ ಪ್ರಾರಂಭದಲ್ಲಿ ದೀರ್ಘಾವಧಿಯ ವರ್ಕ್‌ ಫ್ರಮ್‌ ಹೋಮ್‌ ನೀತಿಯನ್ನು ಜಾರಿಗೊಳಿಸಿದವು. ಅದರ ಪರಿಣಾಮ ಸಾವಿರಾರು ಐಟಿ ಉದ್ಯೋಗಿಗಳು ಏಕಾ ಏಕಿ PGಗಳನ್ನು ಖಾಲಿ ಮಾಡಿ ಹೊರಟರು. ಕೆಲವರು ತಮ್ಮ ವಸ್ತುಗಳನ್ನು ಬಿಟ್ಟು ಕೋಣೆಗಳಿಗೆ ಬೀಗ ಹಾಕಿ ಹೊರಟರು. ಇದರಿಂದ PGಗಳನ್ನು ಹೋಮ್‌ ಕ್ವಾರಂಟೈನ್‌ ಸೆಂಟರ್‌ಗಳಾಗಿ ಮಾರ್ಪಡಿಸಲು ಸಾಧ್ಯವಾಗಿಲ್ಲ ಎಂದು PG ಮಾಲೀಕರೊಬ್ಬರು ತಿಳಿಸಿದರು.

ಇದನ್ನೂ ಓದಿ : ಸಮಗ್ರ ಪ್ಯಾಕೇಜ್ ನೀಡದಿದ್ದರೆ ಸಿಎಂ ನಿವಾಸದ ಮುಂದೆ ಖಾಲಿ ಚೀಲ ಹಿಡಿದು ಪ್ರತಿಭಟನೆ: ಜನಾಗ್ರಹ ಆಂದೋಲನ ಎಚ್ಚರಿಕೆ

ಕೆಲವೇ ಕೆಲವರಿಗಾಗಿ PGಯನ್ನು ನಡೆಸಲು ಸಾಧ್ಯವಿಲ್ಲ. ನಮ್ಮ ಉದ್ಯೋಗಿಗಳಿಗೆ ವೇತನ ನೀಡಲು ನಮ್ಮಿಂದ ಸಾಧ್ಯವಾಗುತ್ತಿಲ್ಲ. ಸರ್ಕಾರದ ಅನೇಕ ಇಲಾಖೆಗಳ ಜೊತೆ ನಾವು ನಮ್ಮ ಮನವಿಯನ್ನು ಸಲ್ಲಿಸಿದ್ದೇವೆ. ಇದುವರೆಗೆ ಯಾವುದೇ ಪ್ರಯೋಜನವಾಗಿಲ್ಲ. ಸರ್ಕಾರ  PG ವಲಯವನ್ನು ಅಧಿಕೃತ ಉದ್ದಿಮೆಯಾಗಿ ಪರಿಗಣಿಸಿ ಸಹಾಯ ಮಾಡಬೇಕು ಎಂದು ಬೆಂಗಳೂರು PG ಅಸೋಸಿಯೇಶನ್ಸ್‌ ಅಧ್ಯಕ್ಷ ಅಶೋಕ್‌ ಕುಮಾರ್‌ ಪಣಂಬೂರ್‌ ತಿಳಿಸಿದ್ದಾರೆ.


ಇದನ್ನೂ ಓದಿ: ‘ಟ್ವಿಟರ್‌ ವಿರುದ್ದ ಹೋರಾಡುವ ಬದಲು ವ್ಯಾಕ್ಸಿನೇಷನ್‌ ಕಡೆ ಗಮನಹರಿಸಿ’ – ಒಕ್ಕೂಟ ಸರ್ಕಾರಕ್ಕೆ ಮಹಾರಾಷ್ಟ್ರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...