Homeಕರೋನಾ ತಲ್ಲಣಬೆಂಗಳೂರಿನಲ್ಲಿ ಕೊರೋನಾ ಲಾಕ್‌ಡೌನ್‌ ಹೊಡತಕ್ಕೆ ಬಾಗಿಲು ಮುಚ್ಚಿದ 8000 PGಗಳು

ಬೆಂಗಳೂರಿನಲ್ಲಿ ಕೊರೋನಾ ಲಾಕ್‌ಡೌನ್‌ ಹೊಡತಕ್ಕೆ ಬಾಗಿಲು ಮುಚ್ಚಿದ 8000 PGಗಳು

ಬೆಂಗಳೂರಿನಲ್ಲಿ ದೊಡ್ಡ ಪ್ರಮಾಣದಲ್ಲಿ PGಗಳು ಮುಚ್ಚಿರುವುದರಿಂದ ಸರಿ ಸುಮಾರು 30,000 ಜನರು ಉದ್ಯೋಗವನ್ನು ಕಳೆದುಕೊಂಡಿದ್ದಾರೆ.

- Advertisement -
- Advertisement -

ಕೊರೋನಾ ಮತ್ತು ಲಾಕ್‌ಡೌನ್‌ ಸಮಾಜದ ಎಲ್ಲಾ ವರ್ಗಗಳಿಗೂ ವ್ಯಾಪಕ ಹೊಡೆತವನ್ನು ನೀಡಿದೆ. ಅದರಲ್ಲೂ ಹೊಟೆಲ್‌, ಸಾರಿಗೆ ಮತ್ತು PGಗಳ ಕಥೆ ಹೇಳತೀರದು. ಕೊರೋನಾ ಸಾಂಕ್ರಾಮಿಕದ ಹೊಡೆತಕ್ಕೆ ಎಲ್ಲಾ ಸಣ್ಣ ಪುಟ್ಟ ವ್ಯವಹಾರ ವಹಿವಾಟುಗಳು ಮುಚ್ಚಿಹೋಗಿವೆ. ಇದರಲ್ಲಿ ಮುಖ್ಯವಾಗಿ ಪೇಯಿಂಗ್‌ ಗೆಸ್ಟ್‌ಗಳಿಗೆ ಲಾಕ್‌ ಡೌನ್‌ ತೀವ್ರ  ನಷ್ಟವನ್ನುಂಟು ಮಾಡಿದೆ.

ಹೆಚ್ಚಾಗಿ PGಯಲ್ಲಿ ವಿದ್ಯಾರ್ಥಿಗಳು ಮತ್ತು ಐಟಿ ಉದ್ಯೋಗಿಗಳು ನೆಲೆಸುತ್ತಾರೆ. ಆದರೆ 2021 ರ ಕೊರೋನಾ ಮೊದಲ ಅಲೆಯಿಂದಲೂ ಆನ್‌ಲೈನ್‌ ಕ್ಲಾಸ್‌ಗಳು ಮತ್ತು ವರ್ಕ್‌ ಫ್ರಮ್‌ ಹೋಮ್‌ ನಡೆಯುತ್ತಿರುವುದರಿಂದ ಬೆಂಗಳೂರಿನ ಹೆಚ್ಚಿನ ಪಿ.ಜಿಗಳು ಮುಚ್ಚಿಹೋಗಿವೆ. ಕಳೆದ 1 ವರ್ಷದ ಅವಧಿಯಲ್ಲಿ ಬೆಂಗಳೂರು ನಗರ ಒಂದರಲ್ಲೇ 8000 ಕ್ಕೂ ಹೆಚ್ಚು ಪೇಯಿಂಗ್‌ ಗೆಸ್ಟ್‌ಗಳು ಬಂದ್‌ ಆಗಿವೆ.

ಬೆಂಗಳೂರು PG ಅಸೋಸಿಯೇಷನ್‌ ಹೇಳುವ ಪ್ರಕಾರ ನಗರದಲ್ಲಿರುವ 12000 PGಗಳಲ್ಲಿ ಕೇವಲ 4000 PGಗಳು ಮಾತ್ರ ಸದ್ಯಕ್ಕೆ ಕಾರ್ಯ ನಿರ್ವಹಿಸುತ್ತಿವೆ. ಉಳಿದ 8 ಸಾವಿರ PGಗಳು ಅತಿಥಿಗಳಿಲ್ಲದೇ ನಿಂತು ಹೋಗಿವೆ. ಉಳಿದ 4 ಸಾವಿರ PG ಗಳು ಸಹ ಮುಚ್ಚಿಹೋಗುವ ಹಂತಕ್ಕೆ ಬಂದಿವೆ. 2021 ರ ಜನವರಿ ತಿಂಗಳಿನಲ್ಲಿ ನಗರದ PG ಇಂಡಸ್ಟ್ರಿ ಚೇತರಿಕೆಯನ್ನು ಕಾಣುವ ಲಕ್ಷಣವನ್ನು ತೋರಿಸಿತ್ತು. ಆದರೆ ಕೊರೋನಾ ಎರಡನೇ ಅಲೆಯ ಪರಿಣಾಮವಾಗಿ PGಗಳು ಸದ್ಯಕ್ಕೆ ಚೇತರಿಕೆಯನ್ನು ಕಾಣಲು ಸಾಧ್ಯವಿಲ್ಲ ಎಂದು ಬೆಂಗಳೂರು PG ಅಸೋಸಿಯೇಷನ್‌ ಅಧ್ಯಕ್ಷ ಅಶೋಕ್‌ ಕುಮಾರ್‌ ಪಣಂಬುರ್‌ ತಿಳಿಸಿದ್ದಾರೆ.

ಬೆಂಗಳೂರಿನಲ್ಲಿ ದೊಡ್ಡ ಪ್ರಮಾಣದಲ್ಲಿ PGಗಳು ಮುಚ್ಚಿರುವುದರಿಂದ ಸರಿ ಸುಮಾರು 30,000 ಜನರು ಉದ್ಯೋಗವನ್ನು ಕಳೆದುಕೊಂಡಿದ್ದಾರೆ.

ಎಲೆಕ್ಟ್ರಾನಿಕ್‌ ಸಿಟಿ, ಮಾರತಳ್ಳಿ, ವೈಟ್‌ಫೀಲ್ಡ್‌ ಭಾಗಗಳಲ್ಲಿರು ಐಟಿ ಕಂಪನಿಗಳು ಕೊರೋನಾ ಮೊದಲನೇ ಅಲೆಯ ಪ್ರಾರಂಭದಲ್ಲಿ ದೀರ್ಘಾವಧಿಯ ವರ್ಕ್‌ ಫ್ರಮ್‌ ಹೋಮ್‌ ನೀತಿಯನ್ನು ಜಾರಿಗೊಳಿಸಿದವು. ಅದರ ಪರಿಣಾಮ ಸಾವಿರಾರು ಐಟಿ ಉದ್ಯೋಗಿಗಳು ಏಕಾ ಏಕಿ PGಗಳನ್ನು ಖಾಲಿ ಮಾಡಿ ಹೊರಟರು. ಕೆಲವರು ತಮ್ಮ ವಸ್ತುಗಳನ್ನು ಬಿಟ್ಟು ಕೋಣೆಗಳಿಗೆ ಬೀಗ ಹಾಕಿ ಹೊರಟರು. ಇದರಿಂದ PGಗಳನ್ನು ಹೋಮ್‌ ಕ್ವಾರಂಟೈನ್‌ ಸೆಂಟರ್‌ಗಳಾಗಿ ಮಾರ್ಪಡಿಸಲು ಸಾಧ್ಯವಾಗಿಲ್ಲ ಎಂದು PG ಮಾಲೀಕರೊಬ್ಬರು ತಿಳಿಸಿದರು.

ಇದನ್ನೂ ಓದಿ : ಸಮಗ್ರ ಪ್ಯಾಕೇಜ್ ನೀಡದಿದ್ದರೆ ಸಿಎಂ ನಿವಾಸದ ಮುಂದೆ ಖಾಲಿ ಚೀಲ ಹಿಡಿದು ಪ್ರತಿಭಟನೆ: ಜನಾಗ್ರಹ ಆಂದೋಲನ ಎಚ್ಚರಿಕೆ

ಕೆಲವೇ ಕೆಲವರಿಗಾಗಿ PGಯನ್ನು ನಡೆಸಲು ಸಾಧ್ಯವಿಲ್ಲ. ನಮ್ಮ ಉದ್ಯೋಗಿಗಳಿಗೆ ವೇತನ ನೀಡಲು ನಮ್ಮಿಂದ ಸಾಧ್ಯವಾಗುತ್ತಿಲ್ಲ. ಸರ್ಕಾರದ ಅನೇಕ ಇಲಾಖೆಗಳ ಜೊತೆ ನಾವು ನಮ್ಮ ಮನವಿಯನ್ನು ಸಲ್ಲಿಸಿದ್ದೇವೆ. ಇದುವರೆಗೆ ಯಾವುದೇ ಪ್ರಯೋಜನವಾಗಿಲ್ಲ. ಸರ್ಕಾರ  PG ವಲಯವನ್ನು ಅಧಿಕೃತ ಉದ್ದಿಮೆಯಾಗಿ ಪರಿಗಣಿಸಿ ಸಹಾಯ ಮಾಡಬೇಕು ಎಂದು ಬೆಂಗಳೂರು PG ಅಸೋಸಿಯೇಶನ್ಸ್‌ ಅಧ್ಯಕ್ಷ ಅಶೋಕ್‌ ಕುಮಾರ್‌ ಪಣಂಬೂರ್‌ ತಿಳಿಸಿದ್ದಾರೆ.


ಇದನ್ನೂ ಓದಿ: ‘ಟ್ವಿಟರ್‌ ವಿರುದ್ದ ಹೋರಾಡುವ ಬದಲು ವ್ಯಾಕ್ಸಿನೇಷನ್‌ ಕಡೆ ಗಮನಹರಿಸಿ’ – ಒಕ್ಕೂಟ ಸರ್ಕಾರಕ್ಕೆ ಮಹಾರಾಷ್ಟ್ರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...