Homeಕರೋನಾ ತಲ್ಲಣಬೆಂಗಳೂರಿನಲ್ಲಿ ಕೊರೋನಾ ಲಾಕ್‌ಡೌನ್‌ ಹೊಡತಕ್ಕೆ ಬಾಗಿಲು ಮುಚ್ಚಿದ 8000 PGಗಳು

ಬೆಂಗಳೂರಿನಲ್ಲಿ ಕೊರೋನಾ ಲಾಕ್‌ಡೌನ್‌ ಹೊಡತಕ್ಕೆ ಬಾಗಿಲು ಮುಚ್ಚಿದ 8000 PGಗಳು

ಬೆಂಗಳೂರಿನಲ್ಲಿ ದೊಡ್ಡ ಪ್ರಮಾಣದಲ್ಲಿ PGಗಳು ಮುಚ್ಚಿರುವುದರಿಂದ ಸರಿ ಸುಮಾರು 30,000 ಜನರು ಉದ್ಯೋಗವನ್ನು ಕಳೆದುಕೊಂಡಿದ್ದಾರೆ.

- Advertisement -
- Advertisement -

ಕೊರೋನಾ ಮತ್ತು ಲಾಕ್‌ಡೌನ್‌ ಸಮಾಜದ ಎಲ್ಲಾ ವರ್ಗಗಳಿಗೂ ವ್ಯಾಪಕ ಹೊಡೆತವನ್ನು ನೀಡಿದೆ. ಅದರಲ್ಲೂ ಹೊಟೆಲ್‌, ಸಾರಿಗೆ ಮತ್ತು PGಗಳ ಕಥೆ ಹೇಳತೀರದು. ಕೊರೋನಾ ಸಾಂಕ್ರಾಮಿಕದ ಹೊಡೆತಕ್ಕೆ ಎಲ್ಲಾ ಸಣ್ಣ ಪುಟ್ಟ ವ್ಯವಹಾರ ವಹಿವಾಟುಗಳು ಮುಚ್ಚಿಹೋಗಿವೆ. ಇದರಲ್ಲಿ ಮುಖ್ಯವಾಗಿ ಪೇಯಿಂಗ್‌ ಗೆಸ್ಟ್‌ಗಳಿಗೆ ಲಾಕ್‌ ಡೌನ್‌ ತೀವ್ರ  ನಷ್ಟವನ್ನುಂಟು ಮಾಡಿದೆ.

ಹೆಚ್ಚಾಗಿ PGಯಲ್ಲಿ ವಿದ್ಯಾರ್ಥಿಗಳು ಮತ್ತು ಐಟಿ ಉದ್ಯೋಗಿಗಳು ನೆಲೆಸುತ್ತಾರೆ. ಆದರೆ 2021 ರ ಕೊರೋನಾ ಮೊದಲ ಅಲೆಯಿಂದಲೂ ಆನ್‌ಲೈನ್‌ ಕ್ಲಾಸ್‌ಗಳು ಮತ್ತು ವರ್ಕ್‌ ಫ್ರಮ್‌ ಹೋಮ್‌ ನಡೆಯುತ್ತಿರುವುದರಿಂದ ಬೆಂಗಳೂರಿನ ಹೆಚ್ಚಿನ ಪಿ.ಜಿಗಳು ಮುಚ್ಚಿಹೋಗಿವೆ. ಕಳೆದ 1 ವರ್ಷದ ಅವಧಿಯಲ್ಲಿ ಬೆಂಗಳೂರು ನಗರ ಒಂದರಲ್ಲೇ 8000 ಕ್ಕೂ ಹೆಚ್ಚು ಪೇಯಿಂಗ್‌ ಗೆಸ್ಟ್‌ಗಳು ಬಂದ್‌ ಆಗಿವೆ.

ಬೆಂಗಳೂರು PG ಅಸೋಸಿಯೇಷನ್‌ ಹೇಳುವ ಪ್ರಕಾರ ನಗರದಲ್ಲಿರುವ 12000 PGಗಳಲ್ಲಿ ಕೇವಲ 4000 PGಗಳು ಮಾತ್ರ ಸದ್ಯಕ್ಕೆ ಕಾರ್ಯ ನಿರ್ವಹಿಸುತ್ತಿವೆ. ಉಳಿದ 8 ಸಾವಿರ PGಗಳು ಅತಿಥಿಗಳಿಲ್ಲದೇ ನಿಂತು ಹೋಗಿವೆ. ಉಳಿದ 4 ಸಾವಿರ PG ಗಳು ಸಹ ಮುಚ್ಚಿಹೋಗುವ ಹಂತಕ್ಕೆ ಬಂದಿವೆ. 2021 ರ ಜನವರಿ ತಿಂಗಳಿನಲ್ಲಿ ನಗರದ PG ಇಂಡಸ್ಟ್ರಿ ಚೇತರಿಕೆಯನ್ನು ಕಾಣುವ ಲಕ್ಷಣವನ್ನು ತೋರಿಸಿತ್ತು. ಆದರೆ ಕೊರೋನಾ ಎರಡನೇ ಅಲೆಯ ಪರಿಣಾಮವಾಗಿ PGಗಳು ಸದ್ಯಕ್ಕೆ ಚೇತರಿಕೆಯನ್ನು ಕಾಣಲು ಸಾಧ್ಯವಿಲ್ಲ ಎಂದು ಬೆಂಗಳೂರು PG ಅಸೋಸಿಯೇಷನ್‌ ಅಧ್ಯಕ್ಷ ಅಶೋಕ್‌ ಕುಮಾರ್‌ ಪಣಂಬುರ್‌ ತಿಳಿಸಿದ್ದಾರೆ.

ಬೆಂಗಳೂರಿನಲ್ಲಿ ದೊಡ್ಡ ಪ್ರಮಾಣದಲ್ಲಿ PGಗಳು ಮುಚ್ಚಿರುವುದರಿಂದ ಸರಿ ಸುಮಾರು 30,000 ಜನರು ಉದ್ಯೋಗವನ್ನು ಕಳೆದುಕೊಂಡಿದ್ದಾರೆ.

ಎಲೆಕ್ಟ್ರಾನಿಕ್‌ ಸಿಟಿ, ಮಾರತಳ್ಳಿ, ವೈಟ್‌ಫೀಲ್ಡ್‌ ಭಾಗಗಳಲ್ಲಿರು ಐಟಿ ಕಂಪನಿಗಳು ಕೊರೋನಾ ಮೊದಲನೇ ಅಲೆಯ ಪ್ರಾರಂಭದಲ್ಲಿ ದೀರ್ಘಾವಧಿಯ ವರ್ಕ್‌ ಫ್ರಮ್‌ ಹೋಮ್‌ ನೀತಿಯನ್ನು ಜಾರಿಗೊಳಿಸಿದವು. ಅದರ ಪರಿಣಾಮ ಸಾವಿರಾರು ಐಟಿ ಉದ್ಯೋಗಿಗಳು ಏಕಾ ಏಕಿ PGಗಳನ್ನು ಖಾಲಿ ಮಾಡಿ ಹೊರಟರು. ಕೆಲವರು ತಮ್ಮ ವಸ್ತುಗಳನ್ನು ಬಿಟ್ಟು ಕೋಣೆಗಳಿಗೆ ಬೀಗ ಹಾಕಿ ಹೊರಟರು. ಇದರಿಂದ PGಗಳನ್ನು ಹೋಮ್‌ ಕ್ವಾರಂಟೈನ್‌ ಸೆಂಟರ್‌ಗಳಾಗಿ ಮಾರ್ಪಡಿಸಲು ಸಾಧ್ಯವಾಗಿಲ್ಲ ಎಂದು PG ಮಾಲೀಕರೊಬ್ಬರು ತಿಳಿಸಿದರು.

ಇದನ್ನೂ ಓದಿ : ಸಮಗ್ರ ಪ್ಯಾಕೇಜ್ ನೀಡದಿದ್ದರೆ ಸಿಎಂ ನಿವಾಸದ ಮುಂದೆ ಖಾಲಿ ಚೀಲ ಹಿಡಿದು ಪ್ರತಿಭಟನೆ: ಜನಾಗ್ರಹ ಆಂದೋಲನ ಎಚ್ಚರಿಕೆ

ಕೆಲವೇ ಕೆಲವರಿಗಾಗಿ PGಯನ್ನು ನಡೆಸಲು ಸಾಧ್ಯವಿಲ್ಲ. ನಮ್ಮ ಉದ್ಯೋಗಿಗಳಿಗೆ ವೇತನ ನೀಡಲು ನಮ್ಮಿಂದ ಸಾಧ್ಯವಾಗುತ್ತಿಲ್ಲ. ಸರ್ಕಾರದ ಅನೇಕ ಇಲಾಖೆಗಳ ಜೊತೆ ನಾವು ನಮ್ಮ ಮನವಿಯನ್ನು ಸಲ್ಲಿಸಿದ್ದೇವೆ. ಇದುವರೆಗೆ ಯಾವುದೇ ಪ್ರಯೋಜನವಾಗಿಲ್ಲ. ಸರ್ಕಾರ  PG ವಲಯವನ್ನು ಅಧಿಕೃತ ಉದ್ದಿಮೆಯಾಗಿ ಪರಿಗಣಿಸಿ ಸಹಾಯ ಮಾಡಬೇಕು ಎಂದು ಬೆಂಗಳೂರು PG ಅಸೋಸಿಯೇಶನ್ಸ್‌ ಅಧ್ಯಕ್ಷ ಅಶೋಕ್‌ ಕುಮಾರ್‌ ಪಣಂಬೂರ್‌ ತಿಳಿಸಿದ್ದಾರೆ.


ಇದನ್ನೂ ಓದಿ: ‘ಟ್ವಿಟರ್‌ ವಿರುದ್ದ ಹೋರಾಡುವ ಬದಲು ವ್ಯಾಕ್ಸಿನೇಷನ್‌ ಕಡೆ ಗಮನಹರಿಸಿ’ – ಒಕ್ಕೂಟ ಸರ್ಕಾರಕ್ಕೆ ಮಹಾರಾಷ್ಟ್ರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...