Homeಕರ್ನಾಟಕಹಸಿವಿನಿಂದ ಮಕ್ಕಳ ಸಾವು: ನಾವು ‘ನಾರ್ಮಲ್’ ಆಗಿರಬಹುದೇ?

ಹಸಿವಿನಿಂದ ಮಕ್ಕಳ ಸಾವು: ನಾವು ‘ನಾರ್ಮಲ್’ ಆಗಿರಬಹುದೇ?

- Advertisement -
| ಮುತ್ತುರಾಜ್ |
ಚಿಕ್ಕಬಳ್ಳಾಪುರ ಜಿಲ್ಲೆಯ ಕಂದಮ್ಮಗಳೆರಡು ತಿನ್ನಲು ಆಹಾರವಿಲ್ಲದೇ ಮಣ್ಣು ತಿಂದ ಪರಿಣಾಮ ಸಾವನ್ನಪ್ಪಿದ ಹೃದಯವಿದ್ರಾವಕ ಘಟನೆ ಜರುಗಿದೆ. ಈ ಮಕ್ಕಳ ಪೋಷಕರಿಬ್ಬರೂ ಸಹ ಕುಡುಕರಾಗಿದ್ದ ಕಾರಣಕ್ಕಾಗಿ ಗಮನಹರಿಸದೇ ಹೋದದ್ದರಿಂದ ಈ ದುರ್ಘಟನೆ ನಡೆದು ಹೋಗಿದೆ ಹೇಳಲಾಗುತ್ತಿದೆ. ಇದರ ಕುರಿತು ಬಹಳಷ್ಟು ಜನರು ಕಂಬನಿ ಮಿಡಿದಿದ್ದು ಘಟನೆಯನ್ನು ತೀವ್ರವಾಗಿ ಖಂಡಿಸಿದ್ದಾರೆ. ಈ ರೀತಿಯ ಘಟನೆಗಳು ನಡೆದಾಗ ಸಹಜವಾಗಿಯೇ ಬಹುತೇಕ ಮಂದಿ ಮರುಗುತ್ತಾರೆ. ಆದರೆ ದುರಂತದ ಸಂಗತಿಯೆಂದರೆ ಈ ರೀತಿಯ ದುರ್ಘಟನೆಗಳು ಪ್ರತಿನಿತ್ಯವೂ ನಡೆಯುತ್ತಲೇ ಇವೆ.
ಕಳೆದ ವರ್ಷ ಜುಲೈನಲ್ಲಿ ದೆಹಲಿಯಲ್ಲಿ ಇದೇ ರೀತಿ ಹಸಿವಿನಿಂದ ಬಳಲಿ ಮೂವರು ಮಕ್ಕಳು ಅಸುನೀಗಿದ್ದರು. ಮರಣೋತ್ತರ ಪರೀಕ್ಷೆ ನಡೆಸಿದ ವೈದ್ಯರು ಕಳೆದ ಹಲವು ದಿನಗಳಿಂದ ಮಕ್ಕಳು ಏನನ್ನು ತಿಂದಿಲ್ಲದ ಕಾರಣಕ್ಕೆ ಸಾವನ್ನಪ್ಪಿದ್ದಾರೆ ಎಂದು ವರದಿ ನೀಡಿದ್ದರು. ವಿಚಾರಣೆಗಾಗಿ ಆ ಮಕ್ಕಳ ತಾಯಿಯನ್ನು ಪೋಲಿಸರು ಪ್ರಶ್ನಿಸಿದರೆ ಆಕೆ ಹೇಳಿದ್ದು ‘ಮೊದಲು ನನಗೆ ಊಟ ಕೊಡಿ’ ಎಂದು.. ಆ ಮಕ್ಕಳ ತಂದೆ ಪಶ್ಚಿಮ ಬಂಗಾಳದಿಂದ ಉದ್ಯೋಗ ಅರಸಿ ದೆಹಲಿಗೆ ಬಂದಿದ್ದು ಯಾವುದೇ ಉದ್ಯೋಗ ಸಿಗದೇ ಕೊನೆಗೆ ರಿಕ್ಷಾಗಾಡಿ ತಳ್ಳಲು ಸೇರಿದ್ದರು. ಅಲ್ಲಿಯೂ ಸ್ಥಳೀಯ ರೌಡಿಗಳು ಆತನ ಗಾಡಿಯನ್ನು ವಶಪಡಿಸಿಕೊಂಡು ಕಿರುಕುಳ ಕೊಟ್ಟ ಕಾರಣದಿಂದ ಆತ ದಿಕ್ಕುತೋಚದೆ ಅಲೆಯುತ್ತಿದ್ದನು.. ಈ ಘಟನೆಗೆ ಯಾರು ಹೊಣೆ?
ಈಗ ಚಿಕ್ಕಬಳ್ಳಾಪುರದ ಕಂದಮ್ಮಗಳ ವಿಚಾರಕ್ಕೆ ಬರುವುದಾದರೆ ಇವರ ಪೋಷಕರು ಉದ್ಯೋಗಕ್ಕಾಗಿ ಆಂಧ್ರಪ್ರದೇಶದ ಅನಂತಪುರ ಜಿಲ್ಲೆಗೆ ವಲಸೆ ಹೋಗಿದ್ದರು. ತಮ್ಮ 5 ಮಕ್ಕಳ ಜೊತೆಗೆ ತನ್ನ ತಂಗಿಯ ಮಗಳನ್ನು ಸಾಕಿಕೊಂಡಿದ್ದ ನಾಗಮಣಿ ಮತ್ತು ಗಿರೀಶ್ ಇಬ್ಬರು ತೀವ್ರ ಮದ್ಯಪಾನ ವ್ಯಸನಿಗಳಾಗಿದ್ದರು. ಇವರು ದಿನ ಕುಡಿದು ಕೆಲಸ ಅರಸಿ ಹೋಗುತ್ತಿದ್ದರಿಂದ ಮಕ್ಕಳ ಊಟದ ಬಗ್ಗೆ ಯೋಚಿಸಿಲ್ಲ. ಇದರಿಂದ ಕಂಗೆಟ್ಟ ಮಕ್ಕಳು ವಿಧಿಯಿಲ್ಲದೇ ಎರಡು ಮೂರು ದಿನ ಮಣ್ಣು ತಿಂದ ಕಾರಣ ಸಾವನಪ್ಪಿವೆ. ಆರು ತಿಂಗಳ ಹಿಂದೆಯು ಸಹ ಇವರ ಸಂತೋಷ್ ಎಂಬ ಮಗುವು ಸಹ ಹಸಿವಿನಿಂದಲೇ ಸಾವನ್ನಪ್ಪಿತ್ತು ಎಂದು ತಿಳಿದು ಬಂದಿದೆ. ಆ ಕುಟುಂಬದ ಇನ್ನುಳಿದ ಮೂರು ಮಕ್ಕಳನ್ನು ಜಿಲ್ಲಾಡಳಿತದ ವತಿಯಿಂದ ಸ್ಥಳೀಯ ಅಂಗನವಾಡಿಗೆ ಸೇರಿಸಲಾಗಿದೆಯಂತೆ.
ಈ ಘಟನೆಯನ್ನು ನೆನೆಸಿಕೊಂಡರೆ ಮೈ ಜುಂ ಎನ್ನುತ್ತದೆ. ಈಗ ಈ ಘಟನೆಗೆ ಯಾರನ್ನು ಹೊಣೆ ಮಾಡೋಣ? ಈ ರೀತಿಯ ಘಟನೆಗಳು ನಮ್ಮನ್ನು ಅಲ್ಲಾಡಿಸುತ್ತವೆ. ಆದರೆ ಭಾರತದಲ್ಲಿ ದಿನವೊಂದಕ್ಕೆ 3000 ಮಕ್ಕಳು ಅಪೌಷ್ಟಿಕತೆಯಿಂದ ಸಾವನಪ್ಪುತ್ತಿದ್ದಾರೆ. ಹಸಿವಿನಿಂದ ಸಾಯುವುದಕ್ಕೂ, ಅಪೌಷ್ಟಿಕತೆಯಿಂದ ಸಾಯುವುದಕ್ಕೂ ಏನಾದರೂ ವ್ಯತ್ಯಾಸವಿದೆಯೇ? ನಮ್ಮ ಕುತಂತ್ರಿ ಸರ್ಕಾರಗಳು ಅಪೌಷ್ಟಿಕತೆಯಿಂದ ಸಾವು ಎಂದು ಹೇಳುತ್ತವೆಯೇ ಹೊರತು ಹಸಿವಿನಿಂದ ಸಾವು ಎನ್ನುವುದಿಲ್ಲ.
ಈ ದೇಶದಲ್ಲಿ 1000ಕ್ಕೆ 34 ಮಕ್ಕಳು ತಾಯಿಯ ಅಪೌಷ್ಠಿಕತೆಯ ಕಾರಣದಿಂದ ಗರ್ಭದಲ್ಲೇ ಅಸುನೀಗುತ್ತಿವೆ. ಈ ಅಪೌಷ್ಠಿಕತೆಯಿಂದ 9ಲಕ್ಷಕ್ಕೂ ಹೆಚ್ಚು ಮಕ್ಕಳು 5 ವರ್ಷ ತುಂಬುವ ಮೊದಲೇ ಮರಣಹೊಂದಿವೆ. ಈಗಲೂ ಭಾರತದಲ್ಲಿ ಸುಮಾರು 19 ಕೋಟಿ ಜನರು ಹಸಿವಿನಿಂದ ಜೀವನ ದೂಡುತ್ತಿದ್ದಾರೆ ಎಂದು ಅಂಕಿಅಂಶಗಳು ಹೇಳುತ್ತಿವೆ. ಇದರ ಬಗ್ಗೆ ಯಾರು ಯೋಚಿಸಬೇಕು? ಇವರ ಕುರಿತು ಆಳುವ ಸರ್ಕಾರಗಳ ಕ್ರಮವೇನು? ಅದೆಷ್ಟೋ ಸಾವಿರ ಟನ್‍ಗಳಷ್ಟು ಆಹಾರ ಗೋದಾಮುಗಳಲ್ಲಿ ಕೊಳೆಯುತ್ತಿದೆ ಎಂದು ವರದಿಗಳು ಹೇಳುತ್ತಿವೆ, ಈ ವಿರೋಧಾಭಾಸಕ್ಕೆ ಏನು ಮಾಡೋಣ?
ಈಗ ನಮ್ಮ ಪಾತ್ರಕ್ಕೆ ಬರೋಣ. ಆಹಾರ ಎಂಬ ಮೂಲಭೂತ ಅಗತ್ಯದ ಹಕ್ಕಿನ ಕುರಿತು ನಾವೆಷ್ಟು ಚರ್ಚಿಸಿದ್ದೇವೆ? ಇದಕ್ಕೆ ಹೊಂದಿಕೊಂಡಿರುವ ಉತ್ತಮ ಶಿಕ್ಷಣ, ಆರೋಗ್ಯ ಮತ್ತು ಉದ್ಯೋಗದ ವಿಚಾರಕ್ಕಾಗಿ ಎಷ್ಟು ಹೋರಾಡಿದ್ದೇವೆ? ಜನರ ನೈಜ ಸಮಸ್ಯೆಗಳನ್ನು ಮರೆಮಾಚಿ ಜಾತಿ, ಧರ್ಮ, ಸೈನ್ಯ ಇತ್ಯಾದಿ ಭಾವನಾತ್ಮಕ ವಿಚಾರಗಳಿಗೆ ಎಳೆಯುವ ಕಪಟ ಸರ್ಕಾರಗಳ ಜಾಲದಲ್ಲಿಯೇ ನಾವಿದ್ದೇವೆಯೇ? ಈ ದೇಶದ 73% ಸಂಪತ್ತನ್ನು ಕೇವಲ 1% ಬಂಡವಾಳಶಾಹಿ ಶ್ರೀಮಂತರು ಲೂಟಿ ಹೊಡೆಯುತ್ತಿರುವಾಗ ನಾವು ದನಿ ಎತ್ತಿದ್ದೇವೆಯೇ? ಓಟು ಹಾಕುವ ಮುನ್ನ ಬಡಜನರ ಪರ ಈ ನೀತಿ ತನ್ನಿ ಎಂದು ರಾಜಕಾರಣಿಗಳಿಗೆ ಒತ್ತಡ ತಂದಿದ್ದೇವೆಯೇ?
ಅದೆಲ್ಲಾ ಹೋಗಲಿ ಕೇರಳದಲ್ಲಿ ಮಧು ಎಂಬಾತ ಹಸಿವು ತಾಳಲಾರದೇ 2 ಕೆ.ಜಿ ಅಕ್ಕಿ ಕದ್ದ ಎಂಬ ಕಾರಣಕ್ಕೆ ಆತನನ್ನು ಹೊಡೆದು ಸಾಯಿಸಿಯೇಬಿಟ್ಟರು. ಊಟ ಡೆಲಿವರಿ ಮಾಡುವ ಹುಡುಗನೊಬ್ಬ ಸ್ವಲ್ಪ ಆಹಾರ ತಿಂದಿದ್ದಕ್ಕೆ ಪ್ರಪಂಚವೇ ಮುಳುಗಿ ಹೋಯಿತು ಎಂಬು ಬೊಬ್ಬಿರದಲ್ಲ? ಆತನನ್ನ ಹೇಗೆ ನಡೆಸಿಕೊಂಡಿತು ನಮ್ಮ ಸಮಾಜ? ಇದೆಲ್ಲವನ್ನು ಎಷ್ಟು ಜನ ಪ್ರಶ್ನಿಸಿದ್ದೇವೆ?
ಇಲ್ಲದಿದ್ದಲ್ಲಿ ಈ ಮಕ್ಕಳ ಸಾವಿಗೆ ಮರುಗಲು ನಮಗೆ ಅರ್ಹತೆ ಇದೆಯೇ? ಎಲ್ಲಿಯವರೆಗೂ ಆಳುವ ವರ್ಗಗಳ ಜನಪರವಾಗಿ ಕೆಲಸ ಮಾಡುವಂತೆ ನಾವು ಒತ್ತಾಯಿಸುವುದಿಲ್ಲವೋ ಅಲ್ಲಿಯವರೆಗೆ ಚಿಕ್ಕಬಳ್ಳಾಪುರದಿಂದ ದೆಹಲಿಯವರೆಗೂ ಈ ಸಾವುಗಳು ನಡೆಯುತ್ತಲೇ ಇರುತ್ತವೆ. ನಾವು ಒಂದಷ್ಟು ಕಂಬನಿ ಸುರಿಸಿ ನಂತರ ನಾರ್ಮಲ್ ಆಗಿ ಇದ್ದುಬಿಡುತ್ತೇವೆ. ಇನ್ನು ಮುಂದೆ ತುಂಬಾ ನಾರ್ಮಲ್ ಆಗಿರುವುದು ಬೇಡ; ಏಕೆಂದರೆ ಈ ದೇಶ ನಾರ್ಮಲ್ ಆಗಿಲ್ಲ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

20 ಬಂಡಾಯ ಸಂಸದರ ಅನರ್ಹತೆಗೆ ಒತ್ತಾಯ: ಶೀಘ್ರ ನಿರ್ಧಾರ ಕೈಗೊಳ್ಳುವಂತೆ ಕೋರಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಟಿಎಂಸಿ ಕಾರ್ಯದರ್ಶಿ ಅಭಿಷೇಕ್ ಬ್ಯಾನರ್ಜಿ

ತಮ್ಮ ಪಕ್ಷದಿಂದ ಪ್ರತ್ಯೇಕಗೊಂಡಿರುವ 20 ಬಂಡಾಯ ಸಂಸದರನ್ನು ಅನರ್ಹಗೊಳಿಸುವಂತೆ ಕೋರಿ ಸಲ್ಲಿಸಲಾದ ಅರ್ಜಿಗಳ ಕುರಿತು ಲೋಕಸಭೆಯ ಸ್ಪೀಕರ್ ಓಂ ಬಿರ್ಲಾ ಅವರು ಶೀಘ್ರ ನಿರ್ಧಾರ ಕೈಗೊಳ್ಳುವಂತೆ ನಿರ್ದೇಶನ ನೀಡಲು ಕೋರಿ ತೃಣಮೂಲ ಕಾಂಗ್ರೆಸ್...

ದೆಹಲಿ, ಬಿಹಾರದಲ್ಲಿ ನೀಟ್ ಪ್ರತಿಭಟನಾಕಾರರ ಮೇಲೆ ಪೆಲೆಟ್, ಅಶ್ರುವಾಯು, ವಿದ್ಯುತ್ ಶಾಕ್ ಲಾಠಿ ಪ್ರಹಾರ ನಡೆದಿರುವುದು ಸತ್ಯ: ಅಮ್ನೆಸ್ಟಿ ವರದಿಯಲ್ಲಿ ಕಳವಳಕಾರಿ ವಿಷಯಗಳು ಬಹಿರಂಗ

ದೆಹಲಿ ಮತ್ತು ಬಿಹಾರದಲ್ಲಿ ವಿದ್ಯಾರ್ಥಿಗಳು ಹಾಗೂ ಯುವಜನರ ನೇತೃತ್ವದಲ್ಲಿ ನಡೆದ ನೀಟ್ (NEET) ಪರೀಕ್ಷಾ ವಿವಾದಕ್ಕೆ ಸಂಬಂಧಿಸಿದ ಪ್ರತಿಭಟನೆಗಳ ಸಂದರ್ಭದಲ್ಲಿ ಭಾರತೀಯ ಪೊಲೀಸರು ಪ್ರತಿಭಟನಾಕಾರರ ವಿರುದ್ಧ ಕಾನೂನುಬಾಹಿರ ಮತ್ತು ಅತಿಯಾದ ಬಲಪ್ರಯೋಗ ಮಾಡಿದ್ದಾರೆ...

ರಾಜ್ಯ ಚುನಾವಣಾ ಆಯೋಗದಿಂದ ಎಸ್‌ಐಆರ್ ಕರಡು ಪಟ್ಟಿ ಪ್ರಕಟ; ದಾವಣಗೆರೆಯಲ್ಲಿ ಅತಿ ಕಡಿಮೆ- ಬೆಂಗಳೂರು ನಗರದಲ್ಲಿ 9.46 ಲಕ್ಷ ಜನರಿಗೆ ನೋಟಿಸ್‌!

ರಾಜ್ಯ ಚುನಾವಣಾ ಆಯೋಗವು ಇಂದು ಎಸ್‌ಐಆರ್ ಕರಡು ಪಟ್ಟಿ ಪ್ರಕಟಿಸಿದ್ದು, 'ಲಾಜಿಕಲ್ ಡಿಸ್ಕ್ರಿಪೆನ್ಸಿ' ಹೆಸರಿನಲ್ಲಿ ದಾವಣಗೆರೆ ಜಿಲ್ಲೆಯಲ್ಲಿ ಅತಿ ಕಡಿಮೆ, ಅಂದರೆ 7,088 ಜನರಿಗೆ ನೋಟಿಸ್‌ ನೀಡಲು ಸಿದ್ಧತೆ ನಡೆಸಲಾಗಿದೆ. ಬೆಂಗಳೂರು ನಗರದಲ್ಲಿ...

ಮಹಾರಾಷ್ಟ್ರದ ಅಮರಾವತಿಯಲ್ಲಿ ದಾರುಣ ದುರಂತ: ಸರ್ಕಾರಿ ಆಸ್ಪತ್ರೆಯ ವೆಂಟಿಲೇಟರ್ ಸ್ಫೋಟಗೊಂಡು ಮೂವರು ನವಜಾತ ಶಿಶುಗಳ ಸಾವು

ಅಮರಾವತಿ: ಮಹಾರಾಷ್ಟ್ರದ ಅಮರಾವತಿ ಜಿಲ್ಲಾ ಸರ್ಕಾರಿ ಮಹಿಳಾ ಆಸ್ಪತ್ರೆಯ ನವಜಾತ ಶಿಶುಗಳ ತೀವ್ರ ನಿಗಾ ಘಟಕದಲ್ಲಿ ಸೋಮವಾರ ಮುಂಜಾನೆ ಭೀಕರ ಅಗ್ನಿ ಅವಘಡ ಸಂಭವಿಸಿದ್ದು ವೆಂಟಿಲೇಟರ್‌ನಲ್ಲಿ ಉಂಟಾದ ಸ್ಫೋಟದಿಂದಾಗಿ ಬೆಂಕಿ ಮತ್ತು ದಟ್ಟ...

‘ಮೋದಿ ಅವರ ‘ದಿಮಾಗಿ ನಕ್ಸಲ್’ ಹೇಳಿಕೆಯು ಮುಂಬರುವ ಯುವ ಭಿನ್ನಾಭಿಪ್ರಾಯದ ಅಲೆಯನ್ನು ‘ರಾಷ್ಟ್ರವಿರೋಧಿ’ ಎಂದು ಬಿಂಬಿಸುವ ಪ್ರಯತ್ನವಾಗಿದೆ’: ಆನಂದ್ ತೇಲ್ತುಂಬ್ಡೆ

ಜೆನ್ ಝೀ ಅಲೆಯ ಹೊಸ ರೀತಿಯ ಪ್ರತಿಭಟನೆಗೆ ಬೆಚ್ಚಿಬಿದ್ದಿರುವ ಪ್ರಧಾನಿ ಮೋದಿಯವರ 'ದಿಮಾಗಿ ನಕ್ಸಲ್' ಹೇಳಿಕೆಯ ಮುಖವಾಡವನ್ನು 'ದಿ ವೈರ್' ಲೇಖನದಲ್ಲಿ ಪ್ರಸಿದ್ಧ ಚಿಂತಕ ಡಾ. ಆನಂದ್ ತೇಲ್ತುಂಬ್ಡೆ ಬಿಚ್ಚಿಟ್ಟಿದ್ದಾರೆ. ಆಡಳಿತದ ವಿಫಲ...

SIR : ಮೂರು ದೇಶಗಳಿಗೆ ಭಾರತದ ರಾಯಭಾರಿಯಾಗಿದ್ದ ನವದೀಪ್ ಸೂರಿಗೆ ಪೌರತ್ವ ಸಾಬೀತುಪಡಿಸುವ ಸವಾಲು!

ಪಂಜಾಬ್‌ನಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯಲ್ಲಿ ಪೌರತ್ವ ಸಾಬೀತುಪಡಿಸುವ ವಿಧಾನದ ಕುರಿತು ಮಾಜಿ ರಾಜತಾಂತ್ರಿಕ ನವದೀಪ್ ಸೂರಿ ಅವರು ಭಾನುವಾರ (ಆ.23) ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ....

ಸೊಹ್ರಾಬುದ್ದೀನ್ ಶೇಖ್ ಎನ್‌ಕೌಂಟರ್ ಪ್ರಕರಣ : 22 ಆರೋಪಿಗಳ ಖುಲಾಸೆ ಪ್ರಶ್ನಿಸಿ ಸುಪ್ರೀಂ ಮೆಟ್ಟಿಲೇರಿದ ಸಹೋದರ

ಸೊಹ್ರಾಬುದ್ದೀನ್ ಶೇಖ್ ಮತ್ತು ಅವರ ಪತ್ನಿ ಕೌಸರ್ ಬಿ ಹಾಗೂ ಆಪ್ತ ತುಳಸಿರಾಮ್ ಪ್ರಜಾಪತಿ ಅವರ 2005ರ ನಕಲಿ ಎನ್‌ಕೌಂಟರ್ ಪ್ರಕರಣದಲ್ಲಿ ಗುಜರಾತ್, ರಾಜಸ್ಥಾನ ಮತ್ತು ಆಂಧ್ರಪ್ರದೇಶದ 21 ಪೊಲೀಸರು ಸೇರಿದಂತೆ ಒಟ್ಟು...

ಉತ್ತರ ಪ್ರದೇಶ| ಚಲಿಸುವ ರೈಲಿನಲ್ಲಿ ಮದರಸಾ ವಿದ್ಯಾರ್ಥಿ ಮೇಲೆ ಹಲ್ಲೆ; ಬಲವಂತವಾಗಿ ಮದ್ಯ ಕುಡಿಸಿದ ದುಷ್ಕರ್ಮಿಗಳು

ಪಶ್ಚಿಮ ಉತ್ತರ ಪ್ರದೇಶದಲ್ಲಿ ಶನಿವಾರ ರಾತ್ರಿ ಚಲಿಸುತ್ತಿದ್ದ ರೈಲಿನಲ್ಲಿ ಮದರಸಾ ವಿದ್ಯಾರ್ಥಿಯೊಬ್ಬನ ಮೇಲೆ ಕುಡಿದ ಮತ್ತಿನಲ್ಲಿದ್ದ ಯುವಕರ ಗುಂಪೊಂದು ಹಲ್ಲೆ ನಡೆಸಿ, ಆತನ ಧಾರ್ಮಿಕ ಗುರುತನ್ನು ನಿಂದಿಸಿ, ಬಲವಂತವಾಗಿ ಮದ್ಯ ಕುಡಿಸಿರುವ ಘಟನೆ...

ಶೈಕ್ಷಣಿಕ ಬೇಡಿಕೆಗಳಿಗಾಗಿ ವಾರ್ಧಾ ಎಂಜಿಎಎಚ್‌ವಿಯಲ್ಲಿ ವಿದ್ಯಾರ್ಥಿಗಳ ಅಹೋರಾತ್ರಿ ಸತ್ಯಾಗ್ರಹ: 47ನೇ ದಿನಕ್ಕೆ ಕಾಲಿಟ್ಟ ಪ್ರತಿಭಟನೆ, 6 ವಿದ್ಯಾರ್ಥಿಗಳ ವಿರುದ್ಧ ಎಫ್‌ಐಆರ್

ವಾರ್ಧಾ (ಮಹಾರಾಷ್ಟ್ರ): ಮಹಾರಾಷ್ಟ್ರದ ವಾರ್ಧಾದಲ್ಲಿರುವ ಪ್ರತಿಷ್ಠಿತ ಮಹಾತ್ಮ ಗಾಂಧಿ ಅಂತರರಾಷ್ಟ್ರೀಯ ಹಿಂದಿ ವಿಶ್ವವಿದ್ಯಾಲಯದಲ್ಲಿ (ಎಂಜಿಎಎಚ್‌ವಿ) ಶೈಕ್ಷಣಿಕ ಹಾಗೂ ವಿದ್ಯಾರ್ಥಿ ಕಲ್ಯಾಣಕ್ಕೆ ಸಂಬಂಧಿಸಿದ ವಿವಿಧ ಮೂಲಭೂತ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ವಿದ್ಯಾರ್ಥಿಗಳು ನಡೆಸುತ್ತಿರುವ ಸತ್ಯಾಗ್ರಹವು...

ಮೀಸಲಾತಿ ವಿರೋಧಿ ಬೇಡಿಕೆಗಳ ವಿರುದ್ಧ ದೇಶದ್ರೋಹ ಪ್ರಕರಣ ದಾಖಲಿಸಿ: ಕೇಂದ್ರ ಸಚಿವ ಅಠಾವಳೆ ಆಗ್ರಹ

ಮೀಸಲಾತಿಯನ್ನು ವಿರೋಧಿಸುವ ಅಥವಾ ಅದನ್ನು ರದ್ದುಗೊಳಿಸಲು ಆಗ್ರಹಿಸುವವರ ವಿರುದ್ಧ ದೇಶದ್ರೋಹದ ಪ್ರಕರಣಗಳನ್ನು ದಾಖಲಿಸಬೇಕೆಂದು ಕೇಂದ್ರ ಸಚಿವ ಹಾಗೂ ರಿಪಬ್ಲಿಕನ್ ಪಾರ್ಟಿ ಆಫ್ ಇಂಡಿಯಾ (ಅಠಾವಳೆ) ಅಧ್ಯಕ್ಷ ರಾಮದಾಸ್ ಅಠಾವಳೆ ಭಾನುವಾರ ಆಗ್ರಹಿಸಿದ್ದಾರೆ. ಮೀಸಲಾತಿ ವಿರೋಧಿಸಿ...